Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಸಾಗರ ತಾಲ್ಲೂಕಿನ ಸಾರ್ವಜನಿಕರ ಸಮಸ್ಯೆ ಬಗ್ಗೆ ದೇಶಿ ಸೇವಾ ಬ್ರಿಗೆಡ್ ಸಂಘಟನೆ ಮೂಲಕ ಉಪ ವಿಭಾಗಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಸಮಸ್ಯೆ ಪರಿಹಾರವಾಗಿಲ್ಲ. ಹೀಗಾಗಿ ದೇಶಿ ಸೇವಾ ಬ್ರಿಗೇಡ್ ಮೂಲಕ ಪ್ರತಿಭಟನೆಯ ಹೋರಾಟಕ್ಕೆ ಇಳಿಯುವುದಾಗಿ ಅಧ್ಯಕ್ಷ ಶ್ರೀಧರ್ ಮೂರ್ತಿ ಎಚ್ಚರಿಸಿದ್ದಾರೆ. ಇಂದು ಸಾಗರ ನಗರದ ಅಣಲೆಕೊಪ್ಪದಲ್ಲಿರುವಂತ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಾರ್ವಜನಿಕರ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ದೇಶಿ ಸೇವಾ ಬ್ರಿಗೇಡ್ ಸಂಘಟನೆಯನ್ನು ಹುಟ್ಟು ಹಾಕಲಾಗಿದೆ. ಈ ಸಂಘಟನೆಯ ಮೂಲಕ ಸರ್ಕಾರಿ ಕಚೇರಿಯಲ್ಲಿನ ಲಂಚಾವತಾರ, ಜನರ ಸಮಸ್ಯೆಗಳ ಬಗ್ಗೆ ಧ್ವನಿಯಾಗುವ ಕೆಲಸ ಮಾಡಲಾಗುತ್ತದೆ. ಆ ನಿಟ್ಟಿನಲ್ಲಿ ನಾವು ಸ್ವಯಂ ಸೇವಕರಂತೆ ಕೆಲಸ ಮಾಡುವುದಾಗಿ ಹೇಳಿದರು. ಸಾಗರದ ಎಸಿ ಅವರ ಮೂಲಕ ಈಗಾಗಲೇ ಬಹಳಷ್ಟು ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಮಾಡಲಾಗಿತ್ತು. ಆದರೇ ಈವರೆಗೆ ಅನೇಕ ಸಮಸ್ಯೆ ಪರಿಹರಿಸುವಂತ ಕೆಲಸವನ್ನು ಸಾಗರದ ಉಪವಿಭಾಗಾಧಿಕಾರಿಗಳು ಮಾಡಿಲ್ಲ. ಸಾಗರದ ಆಡಳಿತ ವ್ಯವಸ್ಥೆ ಅಸಾಯಕವಾಗಿದೆ. ಹೀಗಾಗಿ ಇದಕ್ಕೆ ಚುರುಕು ಮುಟ್ಟಿಸುವ ಕೆಲಸವನ್ನು…
ಬೆಂಗಳೂರು: ಎಲ್ಲಾ ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಂಫರ್ ಗಿಫ್ಟ್ ನೀಡಿದ್ದಾರೆ. ಶಾಸಕರಿಗೆ ತಲಾ 10 ಕೋಟಿ ಅನುದಾವನವನ್ನು ಘೋಷಣೆ ಮಾಡಿದ್ದಾರೆ. ಕಳೆದ ಬೆಳಗಾವಿಯಲ್ಲಿ ನಡೆದಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಶಾಸಕರಿಗೆ ಅನುದಾನ ಬಿಡುಗಡೆಯ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತ ಪಡಿಸಿದ್ದರು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಿಎಲ್ ಪಿ ಸಭೆಯಲ್ಲಿ ಶಾಸಕರಿಗೆ ಅನುದಾನವನ್ನು ನೀಡುವ ಘೋಷಣೆ ಮಾಡಿದ್ದಾರೆ. ಎಲ್ಲಾ ಪಕ್ಷದ ಶಾಸಕರಿಗೂ ತಲಾ 10 ಕೋಟಿ ಅನುದಾನವನ್ನು ನೀಡಿದ್ದೇವೆ. ಬಿಜೆಪಿ, ಜೆಡಿಎಸ್ ಶಾಸಕರಿಗೂ 10 ಕೋಟಿ ಅನುದಾನ ಕೊಡ್ತಿರೋದಾಗಿ ಘೋಷಿಸಿದರು. https://kannadanewsnow.com/kannada/tushar-girinath-asks-people-to-file-fir-against-those-who-put-up-unauthorised-advertisements-in-bengaluru/ https://kannadanewsnow.com/kannada/breaking-big-shock-for-investors-sensex-plunges-over-1100-points-plunges-over-rs-14-lakh-crore-loss/
ಧಾರವಾಡ : 2025-26ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜನವರಿ 25, 2025 ರೊಳಗಾಗಿ ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447201 ಗೆ ಅಥವಾ ಇಲಾಖೆಯ ವೆಬಸೈಟ್ http://kea.kar.nic.in ಮತ್ತು http://kreis.kar.nic.in ಭೇಟಿ ನೀಡಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/state-minor-irrigation-department-recruitment-message-is-false-department/ https://kannadanewsnow.com/kannada/tushar-girinath-asks-people-to-file-fir-against-those-who-put-up-unauthorised-advertisements-in-bengaluru/
ನವದೆಹಲಿ: ಪಾಟ್ನಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕಳೆದ ವಾರವಷ್ಟೇ ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ವಿನೋದ್ ಚಂದ್ರನ್ ಅವರ ಪದೋನ್ನತಿಗೆ ಶಿಫಾರಸು ಮಾಡಿತ್ತು. “ಭಾರತದ ಸಂವಿಧಾನವು ನೀಡಿರುವ ಅಧಿಕಾರಗಳನ್ನು ಚಲಾಯಿಸಿ, ರಾಷ್ಟ್ರಪತಿಗಳು, ಭಾರತದ ಮುಖ್ಯ ನ್ಯಾಯಮೂರ್ತಿಯೊಂದಿಗೆ ಸಮಾಲೋಚಿಸಿದ ನಂತರ, ಪಾಟ್ನಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಕೃಷ್ಣನ್ ವಿನೋದ್ ಚಂದ್ರನ್ ಅವರನ್ನು ಭಾರತದ ಸುಪ್ರೀಂ ಕೋರ್ಟ್ನ ನ್ಯಾಯಾಧೀಶರಾಗಿ ನೇಮಕ ಮಾಡಲು ಸಂತೋಷಪಡುತ್ತಾರೆ” ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ. https://twitter.com/arjunrammeghwal/status/1878803707149877546 ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರನ್ನು 08 ನವೆಂಬರ್ 2011 ರಂದು ಕೇರಳ ಹೈಕೋರ್ಟ್ನ ನ್ಯಾಯಾಧೀಶರಾಗಿ ನೇಮಿಸಲಾಯಿತು ಮತ್ತು 2023 ರ ಮಾರ್ಚ್ 29 ರಂದು ಪಾಟ್ನಾದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದರು ಮತ್ತು ಅಂದಿನಿಂದ ಆ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಹೆಸರನ್ನು…
ಬೆಂಗಳೂರು: ನಗರದಲ್ಲಿನ ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆಯಲ್ಲಿ ಬಹುದೊಡ್ಡ ಕರ್ಮಕಾಂಡವೇ ಬೆಳಕಿಗೆ ಬಂದಿದೆ. ಆ ಇಂಚಿಂಚೂ ವರದಿಯನ್ನು ಕರ್ನಾಟಕ ಲೋಕಾಯುಕ್ತದಿಂದ ಬಿಡುಗಡೆ ಮಾಡಲಾಗಿದೆ. ಆ ಸಂಪೂರ್ಣ ವರದಿ ಮುಂದಿದೆ ಓದಿ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿನ ವಿವಿಧ ಕಚೇರಿಗಳಲ್ಲಿ ಕೈಗೊಂಡ ಶೋಧನಾ ಕಾರ್ಯಾಚರಣೆಯನ್ನು ಮಾಡಲಾಗಿದೆ ಎಂದಿದೆ. ಈ ಕೆಳಕಂಡಂತಿದೆ ಬಿಬಿಎಂಪಿ ಕಚೇರಿಯಲ್ಲಿನ ಕರ್ಮಕಾಂಡದ ಮಾಹಿತಿ ಸಾರ್ವಜನಿಕರಿಂದ ಸ್ವೀಕೃತವಾದ ಹಲವು ದೂರುಗಳ ಆಧಾರದ ಮೇಲೆ ಹಾಗೂ ಬಾತ್ಮೀದಾರರಿಂದ ಬಂದ ಮಾಹಿತಿಗಳ ಮೇರೆಗೆ ಬಿ.ಬಿ.ಎಂ.ಪಿ ಗೆ ಸೇರಿದ ಕಾರ್ಯಪಾಲಕ ಅಭಿಯಂತರರ ಕಛೇರಿ, ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿ, ಸಹಾಯಕ ಕಂದಾಯಾಧಿಕರಿಗಳ ಕಛೇರಿ ಮತ್ತು ಇತರೆ ಕಛೇರಿಗಳಲ್ಲಿ ಕೈಗೊಂಡ ಶೋಧನೆಯಿಂದ ಈ ಕೆಳಕಂಡ ನ್ಯನ್ಯತೆಗಳು ಕಂಡುಬಂದಿರುತ್ತವೆ. ಅಧಿಕಾರಿಗಳು ಕಛೇರಿಗೆ ಕರ್ತವ್ಯಕ್ಕೆ ಹಾಜರಾದಾಗ ಪ್ರತಿ ನಿತ್ಯ ಹಾಜರಾತಿ ಪುಸ್ತಕಕ್ಕೆ ಸಹಿ ಮಾಡಬೇಕಾಗಿದ್ದು, ಸಹಿಯನ್ನು ಮಾಡದೇ ಹಾಜರಾತಿ ಪುಸ್ತಕವನ್ನು ನಿರ್ವಹಣೆ ಮಾಡದೇ ಇರುವುದು…
ಲಡಾಖ್ : ರಿಲಯನ್ಸ್ ಜಿಯೋ ತನ್ನ 5 ಜಿ ಸೇವೆಯನ್ನು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಗ್ಲೇಸಿಯರ್ನಲ್ಲಿ ಪ್ರಾರಂಭಿಸಿದೆ. ಭಾರತೀಯ ಸೇನೆಯ ‘ಫೈರ್ ಅಂಡ್ ಫ್ಯೂರಿ ಕಾರ್ಪ್ಸ್’ ಟ್ವೀಟ್ ಮೂಲಕ ಈ ಮಾಹಿತಿಯನ್ನು ನೀಡಿದೆ. ಸಿಯಾಚಿನ್ ಹಿಮನದಿಯಲ್ಲಿ ಸೇವೆಯನ್ನು ಪ್ರಾರಂಭಿಸಿದ ದೇಶದ ಮೊದಲ ಆಪರೇಟರ್ ಎಂಬ ಹೆಗ್ಗಳಿಕೆಗೆ ಜಿಯೋ ಇದೀಗ ಪಾತ್ರವಾಗಿದೆ. ಸೇನೆಯ ಪ್ರಕಾರ, ಜಿಯೋ ಟೆಲಿಕಾಂ ಮತ್ತು ಭಾರತೀಯ ಸೇನೆಯು ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಗ್ಲೇಸಿಯರ್ನಲ್ಲಿ ಮೊದಲ 5 ಜಿ ಮೊಬೈಲ್ ಟವರ್ ಅನ್ನು ಯಶಸ್ವಿಯಾಗಿ ಸ್ಥಾಪಿಸಿದೆ. ಹಿಮಾಲಯದ ಕಾರಕೋರಂ ಶ್ರೇಣಿಯಲ್ಲಿ 16,000 ಅಡಿ ಎತ್ತರದಲ್ಲಿ ಈ 5ಜಿ ಸಂಪರ್ಕ ಸಾಧ್ಯವಾಗಿದೆ. ಜನವರಿ 15 ರಂದು ಸೇನಾ ದಿನಾಚರಣೆಯ ಮೊದಲು ಸಿಯಾಚಿನ್ ಗ್ಲೇಸಿಯರ್ನಲ್ಲಿ 4 ಜಿ ಮತ್ತು 5 ಜಿ ಸೇವೆಗಳನ್ನು ಪ್ರಾರಂಭಿಸುವ ಮೂಲಕ ಜಿಯೋ ಅಭೂತಪೂರ್ವ ಮೈಲಿಗಲ್ಲನ್ನು ಸಾಧಿಸಿದೆ. ‘ಸವಾಲಿನ ಪರಿಸ್ಥಿತಿಗಳನ್ನು ಧೈರ್ಯದಿಂದ ಎದುರಿಸಿದ ನಮ್ಮ ಧೈರ್ಯಶಾಲಿ ಸೈನಿಕರಿಗೆ ಈ ಸಾಧನೆಯನ್ನು ಅರ್ಪಿಸಲಾಗಿದೆ’ ಎಂದು…
ಬೆಂಗಳೂರು: ಆ ಮೂಕಪ್ರಾಣಿಗಳ (ಹಸುಗಳ) ಕೆಚ್ಚಲು ಕೊಯ್ಯುವ ಘನಂದಾರಿ ಕೆಲಸ ಯಾರು ಮಾಡಿದ್ದಾರೆ ಎಂಬುದನ್ನು ಮೊದಲು ಬಯಲಿಗೆ ತರಬೇಕು. ಇವತ್ತು ಯಾರೋ ಒಬ್ಬನನ್ನು ಅರೆಸ್ಟ್ ಮಾಡಿದ್ದಾಗಿ ಹೇಳುತ್ತಿದ್ದಾರೆ. ಇದು ಕೇಸನ್ನು ಮುಚ್ಚಿ ಹಾಕುವ ಕೆಲಸದಂತೆ ಅನಿಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಡೆದ ಘಟನೆಗಳನ್ನು ಪ್ರಸ್ತಾಪ ಮಾಡಿದರೆ ಅದರಲ್ಲಿ ರಾಜಕೀಯ ಏನಿದೆ ಎಂದು ಮುಖ್ಯಮಂತ್ರಿಗಳನ್ನು ಕೇಳಿದರು. ಜಮೀರ್ ಅಹ್ಮದ್ ಅವರೇ ನೀವು 3 ಹಸುಗಳನ್ನು ಕೊಡಿಸದಿದ್ದರೂ ಪರವಾಗಿಲ್ಲ. ನೀವು 100 ಹಸುಗಳನ್ನು ಕೊಟ್ಟರೂ ಪಾಪ ತೊಳೆದುಕೊಳ್ಳಲು ಸಾಧ್ಯವಿಲ್ಲ ಎಂದು ಟೀಕಿಸಿದರು. ಇದಕ್ಕೆ ಪ್ರೇರಣೆ ಯಾರು? ಓಲೈಕೆ ರಾಜಕಾರಣದಿಂದ ಈ ರಾಜ್ಯದಲ್ಲಿ ಏನಾಗುತ್ತಿದೆ? ಇವುಗಳನ್ನು ನಾವು ಗಮನಿಸಬೇಕಿದೆ. ಇದೊಂದು ಕೆಟ್ಟ ಪರಂಪರೆಗೆ ಕಾಂಗ್ರೆಸ್ ಸರಕಾರ ನಾಂದಿ ಹಾಕಿದೆ. ಇಲ್ಲಿ ಸಂಪೂರ್ಣವಾಗಿ ಕಾನೂನು- ಸುವ್ಯವಸ್ಥೆ ಕೆಟ್ಟು ಹೋಗಿದೆ. ತಮ್ಮ ತಮ್ಮ ಅಧಿಕಾರಕ್ಕಾಗಿ ಕಾದಾಟದಲ್ಲಿ ಈ…
ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಭಾರತೀಯ ಜನತಾ ಪಕ್ಷದ ನಾಯಕರು ಬಾಯಿ ಬಿಟ್ಟರೆ ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ. ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ್ಯ ಎನ್ನುವುದನ್ನು ಇವರೇ ಹೇಳಬೇಕು. ಕೇಂದ್ರ ಸರ್ಕಾರ ಸೇಡು ತೀರಿಸಿಕೊಳ್ಳುವವರಂತೆ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಿದ್ದ ರಾಜ್ಯದ ಬಿಜೆಪಿ ನಾಯಕರು ಮತ್ತು ಸಂಸದರು ಅನ್ಯಾಯಕೋರ ಕೇಂದ್ರ ಸರ್ಕಾರವನ್ನು ಸಮರ್ಥಿಸುತ್ತಿರುವುದು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ ಮತ್ತು ಅವಮಾನವಾಗಿದೆ ಎಂದಿದ್ದಾರೆ. ಕೇಂದ್ರ ಸರ್ಕಾರ ಇತ್ತೀಚೆಗೆ ರಾಜ್ಯಗಳಿಗೆ ತೆರಿಗೆ ಮತ್ತು ಸುಂಕದ ಪಾಲಿನ ರೂಪದಲ್ಲಿ ಒಟ್ಟು 1,73,030 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕ ರಾಜ್ಯಕ್ಕೆ ನೀಡಿರುವ ಪಾಲು ಕೇವಲ 6,310 ಕೋಟಿ ರೂಪಾಯಿ. ದೇಶದ ಒಟ್ಟು…
ನವದೆಹಲಿ: ಪ್ರತಿಯೊಂದು ರಾಷ್ಟ್ರವು ತನ್ನ ಅಸ್ತಿತ್ವ, ಸಾರ್ವಭೌಮತ್ವ ಮತ್ತು ಶಾಂತಿಗೆ ತನ್ನ ಸಶಸ್ತ್ರ ಪಡೆಗಳ ಶೌರ್ಯ ಮತ್ತು ತ್ಯಾಗಕ್ಕೆ ಋಣಿಯಾಗಿದೆ. ಹಿರಿಯ ಯೋಧರು ಧೈರ್ಯ, ನಿಸ್ವಾರ್ಥತೆ ಮತ್ತು ದೇಶಭಕ್ತಿಯ ಸಂಕೇತವಾಗಿದ್ದಾರೆ, ಅವರು ಮೌನ ಕಾವಲುಗಾರರಾಗಿ ರಾಷ್ಟ್ರ ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟವರು. ವಿದೇಶಿ ಆಕ್ರಮಣದ ವಿರುದ್ಧ ಶೌರ್ಯ ಮತ್ತು ಪ್ರತಿರೋಧದ ಶ್ರೀಮಂತ ಇತಿಹಾಸವನ್ನು ಹೊಂದಿರುವ ದೇಶವಾದ ಭಾರತದಲ್ಲಿ, ಹಿರಿಯ ಯೋಧರನ್ನು ಗೌರವಿಸುವುದು ಕರ್ತವ್ಯವಾಗಿದೆ ಮತ್ತು ಶಾಶ್ವತ ಸೇವಾ ಮನೋಭಾವಕ್ಕೆ ಸಲ್ಲಿಸುವ ಗೌರವವಾಗಿದೆ. ಸಮವಸ್ತ್ರದಲ್ಲಿ ಈ ಶಾಶ್ವತ ಸೇವಾ ಮನೋಭಾವವನ್ನು ಪ್ರದರ್ಶಿಸಿದ ಹಿರಿಯ ಯೋಧರು ರಾಷ್ಟ್ರಕ್ಕೆ ಸ್ಫೂರ್ತಿ ಮತ್ತು ಹೆಮ್ಮೆ. ಭಾರತೀಯ ಹಿರಿಯ ಯೋಧರ ದಿನವನ್ನು (ವೆಟರನ್ಸ್ ಡೇ) ಪ್ರತಿವರ್ಷ ಜನವರಿ 14 ರಂದು ಆಚರಿಸಲಾಗುತ್ತದೆ, ಇದು ದೇಶದ ಗಡಿಗಳನ್ನು ರಕ್ಷಿಸಲು ಮತ್ತು ಅದರ ಸಮಗ್ರತೆಯನ್ನು ಎತ್ತಿಹಿಡಿಯಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಹಿರಿಯ ಯೋಧರರಿಗೆ ರಾಷ್ಟ್ರವು ಸಲ್ಲಿಸುವ ಕೃತಜ್ಞತೆಗೆ ಸಾಕ್ಷಿಯಾಗಿದೆ. ಭಾರತದ ಇತಿಹಾಸದಲ್ಲಿ ಹಿರಿಯ ಯೋಧರ ಪಾತ್ರ: ಭಾರತದ ಮಿಲಿಟರಿ ಇತಿಹಾಸವು ಪ್ರಾಚೀನ ಸಾಮ್ರಾಜ್ಯಗಳಾದ…
ಪ್ರಾಚೀನ ಕಾಲದಿಂದಲೂ ರತ್ನಗಳನ್ನು ಉಪಯೋಗಿಸುವುದು ಶೃಂಗಾರಕ್ಕಾಗಿ, ಅಲಂಕಾರಕ್ಕಾಗಿ ಮತ್ತು ಐಶ್ವರ್ಯವನ್ನು ಪ್ರದರ್ಶನ ಮಾಡುವುದಕ್ಕಾಗಿ ಎಂಬಲ್ಲಿ ಎರಡು ಮಾತಿಲ್ಲ. ರತ್ನಗಳ ವಿಭಿನ್ನ ಪ್ರಭಾವವು ದೇಹ ವಿಜ್ಞಾನದ ಜೊತೆಗೆ ಆಯುರ್ವೇದದ ವಿಷಯವೂ ಆಗಿದೆ. ವೈದ್ಯಕೀಯ ಗ್ರಂಥಗಳಲ್ಲಿ ರತ್ನಗಳ ಭಸ್ಮ, ರತ್ನಗಳ ಪುಡಿ ಮತ್ತು ರಸಾಯನ ಕ್ರಿಯೆಗಳ ಪ್ರಯೋಗವನ್ನು ಅಸಾಧ್ಯ ರೋಗಗಳ ನಿವಾರಣೆಗಾಗಿ ಸಾವಿರಾರು ವರ್ಷಗಳಿಂದ ಮಾಡಲಾಗುತ್ತಿದೆ. ಭಾವ ಪ್ರಕಾಶ , ರಸ ರತ್ನ ಸಮುಚ್ಛಯ ಮುಂತಾದ ಆಯುರ್ವೇದ ಗ್ರಂಥಗಳಲ್ಲಿ ಅನೇಕ ಪ್ರಯೋಗಗಳು ದೊರೆಯುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ,…












