Author: kannadanewsnow09

ಶಿವಮೊಗ್ಗ: ಮೊಗವೀರ ಸಮುದಾಯದ ಎಂಜಿನಿಯರಿಂಗ್, ವೈದ್ಯಕೀಯ ವಿದ್ಯಾರ್ಥಿಗಳಿಗೆ ಇನ್ಮುಂದೆ ಪ್ರತಿ ವರ್ಷ 25,000 ಸಹಾಯ ಧನ ನೀಡಲಾಗುವುದು ಅಂತ ದಕ್ಷಿಣ ಕನ್ನಡ ಜಿಲ್ಲೆಯ ಮೋಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಮೊಗವೀರ ಮಹಾಜನ ಸಂಘದ ವಾರ್ಷಿಕ ಮಹಾ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಮೊಗವೀರ ಸಮುದಾಯದ ವಿದ್ಯಾರ್ಥಿಗಳ ಸಾಧನೆ ಕಂಡು ಸಂತಸವಾಗಿದೆ. ಇದೇ ಸಂದರ್ಭದಲ್ಲಿ ಇನ್ಮುಂದೆ ಮೊಗವೀರ ಸಮುದಾಯದ ಎಂಜಿನಿಯರಿಂಗ್, ಮೆಡಿಕಲ್ ವ್ಯಾಸಂಗಕ್ಕೆ ಸೇರುವಂತ ಓರ್ವ ಉತ್ತಮ ಅಂಕ ಪಡೆದಂತ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ರೂ.25,000 ಸಹಾಯ ದಿನ ನೀಡಲಾಗುವುದು ಎಂಬುದಾಗಿ ಘೋಷಿಸಿದರು. ಮೊಗವೀರ ಸಮಾಜದ ವಿದ್ಯಾರ್ಥಿಗಳು ಮತ್ತಷ್ಟು ಸಾಧನೆ ಮಾಡಬೇಕು. ಸಮುದಾಯದಕ್ಕೆ ಕೀರ್ತಿ ತರುವಂತ ಕೆಲಸ ಮಾಡಬೇಕು. ಈ ಕೆಲಸ ಮುಂದೆ ಆಗಲಿ. ಸಾಗರ ತಾಲೂಕು ಮೊಗವೀರ ಮಹಾಸಭ ಮತ್ತಷ್ಟು ಜನಪರ ಕೆಲಸ ಮಾಡುವಂತೆ ಆಗಲಿ ಎಂದರು. ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಂತ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ…

Read More

ಬೆಂಗಳೂರು : ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ವಿವರಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಕೇಂದ್ರದ ಮೋದಿ ಸರ್ಕಾರ ಹೇಗೆ ಸೃಷ್ಟಿಸಿತು, ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಸೃಷ್ಟಿ ಆಗಿರುವ ಪರಿಸ್ಥಿತಿಯನ್ನು ವಿವರಿಸಿದರು. 2015 ರ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅರ್ಧಕ್ಕರ್ಧ ಕಡಿಮೆ ಆದಾಗಲೂ ಅವರ ಲಾಭವನ್ನು ದೇಶದ ಜನರಿಗೆ ನೀಡದೆ ಮೋದಿ ಸರ್ಕಾರ ಇಂಧನ ಬೆಲೆಯನ್ನು ನಿರಂತರವಾಗಿ ಏರಿಸುತ್ತಾ ಹೋಗಿದ್ದರ ಅಂಕಿ ಅಂಶಗಳನ್ನು ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಹೆಚ್ಚಳದಿಂದ ಸಂಗ್ರಹವಾಗುವ ಅಂದಾಜು ಮೂರು ಸಾವಿರ ಕೋಟಿ ರೂಪಾಯಿಗಳು ರಾಜ್ಯದ ಜಾನೆಗೆ ಸಂದಾಯವಾಗುತ್ತದೆ, ಆ ಹಣ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗವಾಗುತ್ತದೆ ಅದು…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ. ಅದರ ಜೊತೆಗೆ ತೈಲ ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎರಡು ನಾಲಿಗೆ ಇದೆ. ಬಿಜೆಪಿ ಸರ್ಕಾರ ಪೆಟ್ರೋಲ್‌ ದರ ಏರಿಸಿದ್ದಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನೆ ಮಾಡಿದ್ದರು. ಈಗ ಮೂರು ರೂಪಾಯಿ ಹೆಚ್ಚು ಮಾಡಿದ ಕಾಂಗ್ರೆಸ್‌ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಈಗ ಸಿದ್ದರಾಮಯ್ಯ ಎಂದರೆ ನುಂಗಣ್ಣ ಎಂದು ವ್ಯಂಗ್ಯವಾಡಿದರು. ತೈಲ ಬೆಲೆ ಏರಿಯಾದರೆ ಸಿಮೆಂಟ್‌, ತರಕಾರಿ ಎಲ್ಲ ಬೆಲೆಯೂ ಏರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈಗ ಯಾವ ಬೆಲೆಗಳು ಹೆಚ್ಚಲಿದೆ ಎಂದು ತಿಳಿಸಲಿ. ಗ್ಯಾರಂಟಿ ಯೋಜನೆಗಳೆಂದು ಹೇಳಿ ಎಲ್ಲರಿಗೂ ಒಂದು ಲಕ್ಷ, ಎರಡು ಸಾವಿರ ಕೋಡುತ್ತೇವೆ ಎಂದರು. ರಾಹುಲ್‌ ಗಾಂಧಿ ಇನ್ನೂ ಮುಂದೆ ಹೋಗಿ ಟಕಾಟಕ್‌…

Read More

ಬೆಂಗಳೂರು: ರಾಜ್ಯದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ 1,419 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಯನ್ನು ಪ್ರಾರಂಭಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ. ರಾಜ್ಯ ಸರ್ಕಾರ 2024-25ನೇ ಸಾಲಿನಿಂದ ರಾಜ್ಯಾದ್ಯಂತ 75ಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಇರುವ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆಗೆ 1ನೇ ತರಗತಿಯಿಂದ ಆಂಗ್ಲ ಮಾಧ್ಯಮದಲ್ಲಿ (ದ್ವಿ ಭಾಷಾ ಮಾಧ್ಯಮ) ತರಗತಿಗಳನ್ನು ಪ್ರಾರಂಭಿಸಲು ಒಪ್ಪಿಗೆ ನೀಡಿ ಆದೇಶಿಸಿದೆ. ಆಯ್ಕೆಯಾಗಿರುವ ಶಾಲೆಗಳ ಪೈಕಿ ಕಲಬುರಗಿ ಪ್ರಾದೇಶಿಕ ವಿಭಾಗದ 872, ಬೆಂಗಳೂರು ವಿಭಾಗದ 297, ಮೈಸೂರು ವಿಭಾಗದ 140 ಮತ್ತು ಧಾರವಾಡ ವಿಭಾಗದ 110 ಶಾಲೆಗಳು ಸೇರಿವೆ. https://twitter.com/KarnatakaVarthe/status/1802649197105074676 https://kannadanewsnow.com/kannada/bjp-has-crossed-the-100-mark-in-petrol-minister-zameer-ahmed/ https://kannadanewsnow.com/kannada/breaking-security-forces-operate-in-jharkhand-four-naxals-killed-two-arrested/

Read More

ಬೆಂಗಳೂರು : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪೆಟ್ರೋಲ್ ಪ್ರತಿ ಲೀಟರ್ ಗೆ 32.98 ರೂ., ಡೀಸೆಲ್ ಪ್ರತಿ ಲೀಟರ್ ಗೆ 31.83 ರೂ. ಅಬಕಾರಿ ಸುಂಕ ಸಂಗ್ರಹ ಮಾಡುತ್ತಿದೆ. ಇದರ ಬಗ್ಗೆ ಬಿಜೆಪಿ ನಾಯಕರು ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರೆಶ್ನೆ ಮಾಡಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ಅಬಕಾರಿ ಸುಂಕ ಪೆಟ್ರೋಲ್ ಗೆ 9.48 ರೂ., ಡೀಸೆಲ್ ಗೆ 3.56 ರೂ. ವಿಧಿಸಲಾಗಿತ್ತು. ಹಾಗಾಗಿಯೇ ಆಗ ಪೆಟ್ರೋಲ್ 68.31 ರೂ., ಡಿಸೇಲ್ 48.63 ರೂ. ಗೆ ದೊರೆಯುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಪೆಟ್ರೋಲ್ 106 ರೂ ರೂ. ವರೆಗೆ ಹೋಗಿತ್ತು. ಯುಪಿ ಎ ಸರ್ಕಾರದ ಅವಧಿಯಲಿ ಕಚ್ಚಾ…

Read More

ಶಿವಮೊಗ್ಗ: ಮಾಜಿ ಎಂಎಲ್ ಸಿ, ಬಿಜೆಪಿ ಮುಖಂಡ ಭಾನು ಪ್ರಕಾಶ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಶಿವಮೊಗ್ಗದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ ಹೃದಯಾಘಾತ ಉಂಟಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಿಸೋ ಮುನ್ನ ಮಾಜಿ ಎಂಎಲ್ಸಿ ಭಾನುಪ್ರಕಾಶ್ ನಿಧನರಾದರು. ಅವರ ನಿಧನಕ್ಕೆ ಸುದ್ದಿ ಸಹ್ಯಾದ್ರಿ ಸಂಪಾದಕ ರಾಘವೇಂದ್ರ ತಾಳಗುಪ್ಪ ಸಂತಾಪ ಸೂಚಿಸಿದ್ದಾರೆ. ಮತ್ತೊಂದೆ ಈ ಬಗ್ಗೆ ಮಾತನಾಡಿದಂತ ಚಾರ್ವಕ ಸಂಪಾದಕ ರಾಘವೇಂದ್ರ ಅವರು ಇವರು ಶಿವಮೊಗ್ಗ ಜಿಲ್ಲೆಯಲ್ಲಿ ಧರ್ಮ ಧರ್ಮದ ನಡುವೆ ಕೋಮು ದ್ವೇಷವನ್ನು ಬಿತ್ಯಿದವರು. ಹಲವು ಕೋಮು ಗಲಭೆಗೆ ಕಾರಣಾದವರು. ಇದರಿಂದ ಅಮಾಯಕ್ಲರನ್ನು ಜೈಲಿಗೆ ಹೋಗುವಂತೆ ಮಾಡಿದವರು ಅಂತ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಸಮೀಪದ ಮತ್ತೂರು ಗ್ರಾಮದಲ್ಲಿ ಸಂಸದ ಗ್ರಾಮ ಮಾಡಿಕೊಂಡವರು. ಕರ್ನಾಟಕದಲ್ಲಿ ಹುಟ್ಟಿ, ಕನ್ನಡವನ್ನೇ ಒಪ್ದವರು ಆಗಿದ್ದರು. ದುಡಿಯುವ ಜನರಿಗೆ ಅರ್ಥವಾಗದ ಸಂಸ್ಕೃತವನ್ನು ತಮ್ಮ ಗ್ರಾಮಕ್ಕೆ ಇಟ್ಟುಕೊಂಡವರು ಅಂತ ತಿಳಿಸಿದ್ದಾರೆ. ಇವರು ಇಂದು ನಿಧನರಾಗಿದ್ದಾರೆ‌.…

Read More

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ದರ ಏರಿಕೆಯ ಬಗ್ಗೆಯೇ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಮತ ಚಲಾಯಿಸದೇ ಇದ್ದಕ್ಕೆ ಇಂಧನ ಮೇಲಿನ ತೆರಿಗೆ ಹೆಚ್ಚಳ ಮಾಡಲಾಗಿದೆ ಹಾಗೇ, ಹೀಗೆ ಅಂತ ಚರ್ಚೆಯಾಗುತ್ತಿದೆ. ಹಾಗಾದ್ರೇ ನಿಜಕ್ಕೂ ಪೆಟ್ರೋಲ್, ಡೀಸೆಲ್ ದರ ಕರ್ನಾಟಕದಲ್ಲಿ ಹೆಚ್ಚೋ ಅಥವಾ ಇತರೆ ರಾಜ್ಯಗಳಲ್ಲೋ ಎನ್ನುವ ಡೀಟೆಲ್ಸ್ ಮುಂದೆ ಓದಿ. ಸಿಎಂ ಸಿದ್ಧರಾಮಯ್ಯ ಅವರು, ಈ ವಿಚಾರವನ್ನು ಸಮರ್ಥಿಸಿಕೊಂಡು ಮಾತನಾಡಿ, ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. 11.4.2021ರಂದು ಪೆಟ್ರೋಲ್ ಮೇಲೆ 35% ತೆರಿಗೆ ಹಾಗೂ ಡೀಸೆಲ್ ಮೇಲೆ 24% ತೆರಿಗೆ ಹಾಕುತ್ತಿದ್ದರು. ನಂತರ ಕೇಂದ್ರದಲ್ಲಿ ಇಳಿಕೆ ಮಾಡಿದ್ದರಿಂದ ಇವರೂ 35 ರಿಂದ 25.92 ಕ್ಕೆ ನಂತರ ಇಳಿಸಿದರು. ಡೀಸಲ್ ಮೇಲೆ 14.34ಕ್ಕೆ ಇಳಿಸಿದರು. ಶೇ7 ರೂಪಾಯಿಯಷ್ಟು ಕಡಿಮೆ ಮಾಡಿದರು. ಏಕೆಂದರೆ ಕೇರಳ ಆಗಲಿ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ತಮಿಳುನಾಡು ಕಡಿಮೆ ಮಾಡಲಿಲ್ಲ ಎಂಬುದಾಗಿ ಹೇಳಿದ್ದರು. ಈಗ…

Read More

ಉಡುಪಿ: ರಾಜ್ಯದ ಖ್ಯಾತ ವೈದ್ಯ ಎ.ರಾಜಾ ಅವರು ವಯೋ ಸಹಯ ಖಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಈ ಮೂಲಕ ಖ್ಯಾತ ನರರೋಗ ತಜ್ಞ ವೈದ್ಯ ಡಾ.ಎ ರಾಜಾ ಇನ್ನಿಲ್ಲವಾಗಿದ್ದಾರೆ. ಡಾ.ಎ ರಾಜಾ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಉಡುಪಿಯ ಮಣಿಪಾಲದ ಪ್ರಖ್ಯಾತ ನರರೋಗ ತಜ್ಞರಾಗಿದ್ದ ಡಾಕ್ಟರ್ ಎ ರಾಜಾ (73) ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ. ಸುಮಾರು 30 ವರ್ಷ ಕೆಎಂಸಿ ಆಸ್ಪತ್ರೆ ಮಣಿಪಾಲ ಹಾಗೂ 15 ವರ್ಷ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದ ಅವರು, ಸಾವಿರಾರು ರೋಗಿಗಳಿಗೆ ಉಪಚಾರ ಮಾಡಿದ್ದಾರೆ. ಅಗಲಿದ ಆ ದಿವ್ಯ ಆತ್ಮಕ್ಕೆ ಶಾಂತಿ ಸಿಗಲಿ, ಮೃತರ ಕುಟುಂಬ ವರ್ಗ ಮತ್ತು ಅಭಿಮಾನಿ ಬಳಗಕ್ಕೆ ಅವರ ಸಾವಿನ ನೋವಿನ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/terror-attack-in-jammu-and-kashmir-union-minister-amit-shah-chairs-high-level-meeting/ https://kannadanewsnow.com/kannada/no-need-to-teach-about-riots-demolition-in-schools-says-ncert-chief-after-textbook-revisions/

Read More

ಮೈಸೂರು: ಇಂದು ಭಾನುವಾರದ ರಜೆಯ ಹಿನ್ನಲೆಯಲ್ಲಿ ಗ್ರಾಮದ ಕೆರೆಯೊಂದಕ್ಕೆ ಈಜಲು ತೆರಳಿದ್ದಂತ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ, ಸಾಹುಕಾರಹುಂಡಿ ಗ್ರಾಮದಲ್ಲಿ ನಡೆದಿದೆ. ಮೈಸೂರು ತಾಲೂಕಿನ ಸಾಹುಕಾರಹುಂಡಿ ಗ್ರಾಮದಲ್ಲಿನ ಕೆರೆಗೆ ಈಜಲು ವರುಣ್(16) ಹಾಗೂ ಜಸ್ವಂತ್(14) ತೆರಳಿದ್ದರು. ಇಂದು ಹೀಗೆ ತೆರಳಿದ್ದಂತ ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮೈಸೂರು ತಾಲೂಕಿನ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಮ ದಾಖಲಾಗಿದೆ. https://kannadanewsnow.com/kannada/tumakurus-chinnahalli-contaminated-water-case-one-person-tests-positive-for-cholera/ https://kannadanewsnow.com/kannada/terror-attack-in-jammu-and-kashmir-union-minister-amit-shah-chairs-high-level-meeting/

Read More

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಸಾವನ್ನಪ್ಪಿ, ಹಲವರು ಅಸ್ವಸ್ಥಗೊಂಡ ಘಟನೆ ನಡೆದಿತ್ತು. ಈಗ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಯೊಬ್ಬರಿಗೆ ಕಾಲರಾ ದೃಢಪಟ್ಟಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರಿನ ಸೇವನೆ ಮತ್ತು ಸೇವಿಸಿರುವ ಆಹಾರದಿಂದಾಗಿ ಒಟ್ಟು 98 ಜನರು ಅಸ್ವಸ್ತರಾಗಿದ್ದು, ಅದರಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ 39 ಜನರು ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ. ಸಚಿವ ಪ್ರಿಯಾಂಕ್ ಖರ್ಗೆ ಸೂಚನೆಯ ಮೇರೆಗೆ ಚಿನ್ನೇನಹಳ್ಳಿ ಗ್ರಾಮದ ಶಾಲೆಯಲ್ಲಿಯೇ 6 ಹಾಸಿಗೆಗಳ ತುರ್ತು ಚಿಕಿತ್ಸಾ ಕೇಂದ್ರವನ್ನು ತೆರೆಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯವಾದ ಎಲ್ಲಾ ಚಿಕಿತ್ಸೆಗಳನ್ನು ನೀಡಲು ವೈದ್ಯಕೀಯ ಸಿಬ್ಬಂದಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಚಿನ್ನೇನಹಳ್ಳಿ ಗ್ರಾಮದಲ್ಲಿ ಇರುವ ಕೊಳವೆ ಬಾವಿಗಳು ಮತ್ತು ನೀರಿನ ಜಲಸಂಗ್ರಹಗಳಿಂದ ಸರಬರಾಜು ಮಾಡುತ್ತಿದ್ದ ನೀರನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ 2 ಟ್ಯಾಂಕರ್ಗಳ ಮೂಲಕ ಗ್ರಾಮಕ್ಕೆ ನೀರು ಸರಬರಾಜು ಮಾಡಲಾಗುತ್ತಿದೆ. ಗ್ರಾಮದಲ್ಲಿರುವ ಎಲ್ಲಾ ನೀರಿನ ಮೂಲಗಳ ಮಾದರಿಗಳನ್ನು ಸಂಗ್ರಹಿಸಿ,…

Read More