Author: kannadanewsnow09

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್‌ ಬಿರುಸಿನ ಸಿದ್ಧತೆಗಳನ್ನು ಆರಂಭಿದ್ದು, ಅದಕ್ಕಾಗಿ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಸರಣಿ ಸಭೆಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಅದರ ಮುಂದುವರಿದ ಭಾಗವಾಗಿ ಅವರು ಇಂದು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಎಲ್ಲಾ ತಾಲೂಕುಗಳ ಮುಖಂಡರ ಪ್ರತ್ಯೇಕ ಸಭೆಗಳನ್ನು ನಡೆಸಿ ಮಹತ್ವದ ಸಮಾಲೋಚನೆ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು ಸಮಾಲೋಚನಾ ಸಭೆಗಳನ್ನು ನಡೆಸುತ್ತಿದ್ದು; ಪಕ್ಷವನ್ನು ಜಿಲ್ಲಾ, ತಾಲೂಕು ಹಾಗೂ ಅದಕ್ಕಿಂತ ತಳಮಟ್ಟದಲ್ಲಿ ಸಂಘಟನೆ ಮಾಡುವ ನಿಟ್ಟಿನಲ್ಲಿ ಯುವ ಜನತಾದಳ ಮುಖಂಡರಿಗೆ ಗುರಿ ನಿಗದಿ ಮಾಡುತ್ತಿದ್ದಾರೆ. ಸದ್ಯ ಜೆಡಿಎಸ್‌ ಪಕ್ಷವು ಎನ್‌ʼಡಿಎ ಒಕ್ಕೂಟವನ್ನು ಸೇರಿದ್ದು, ಮುಂಬರುವ ದಿನಗಳಲ್ಲಿ ಬಿಜೆಪಿ ಜತೆ ಸೇರಿ ರಾಜ್ಯದಲ್ಲಿ ಕೆಲಸ ಮಾಡಬೇಕಿದೆ. ಅದರಲ್ಲೂ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಕೂಟವು ರಾಜ್ಯದ ಎಲ್ಲಾ 28 ಲೋಕಸಭೆ ಕ್ಷತ್ರಗಳನ್ನು ಗೆಲ್ಲುವ ದಿಸೆಯಲ್ಲಿ ನಿಖಿಲ್‌ ಅವರು ಮುಖಂಡರ ಜತೆ ಗಂಭೀರ ಚರ್ಚೆ ನಡೆಸುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸ್ಥಾನ ಹಂಚಿಕೆ ಕುರಿತ…

Read More

ಮೈಸೂರು : “ನಮ್ಮ ರೈತರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣಗೊಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಾಗ್ದಾನ ನೀಡಿದರು. ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆಗಳಿಗೆ ಕಾವೇರಿ ನೀರು ತುಂಬಿಸುವ ಮುತ್ತಿನಮುಳುಸೋಗೆ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು; “ಮೇಕೆದಾಟು ಬಗ್ಗೆ ಕಾಂಗ್ರೆಸ್ ಸರ್ಕಾರ ಚಿಂತನೆ ಮಾಡುತ್ತಿಲ್ಲ ಎಂದು ಮಾಜಿ ಪ್ರಧಾನಿಗಳಾದ ದೇವೇಗೌಡರು ಹೇಳಿದ್ದಾರೆ. ದೇವೇಗೌಡರೇ ನೀವು ಮತ್ತು ಪ್ರಧಾನಿ ಮೋದಿ ಅವರು ಆತ್ಮೀಯರಿದ್ದೀರಿ, ಅವರ ಬಳಿ ಮಾತನಾಡಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ.” ಕಾವೇರಿ ನದಿ ನಮ್ಮ ತಾಯಿ, ಈ ತಾಯಿಯ ಕೃಪೆಯಿಂದ ನಾವೆಲ್ಲಾ ಬದುಕಿದ್ದೇವೆ. ಆದರೂ ಈ ರಾಜ್ಯದಿಂದ ಆಯ್ಕೆಯಾಗಿ ಹೋಗಿರುವ 26 ಜನ ಬಿಜೆಪಿ ಎಂಪಿಗಳು ರಾಜ್ಯದ ಪರವಾಗಿ ಮಾತನಾಡುತ್ತಿಲ್ಲ. ಪ್ರತಾಪ್ ಸಿಂಹ ಅವರು ಪ್ರಧಾನಿಗಳಿಗೆ ಹೇಳಿ ಅನುಮತಿ ಕೊಡಿಸಬಹುದಲ್ಲವೇ? ಆದರೂ ಯಾರೂ ದನಿ ಎತ್ತುತ್ತಿಲ್ಲ. ಕಾಂಗ್ರೆಸ್ ಪಕ್ಷ ಏನೂ ಕೆಲಸ ಮಾಡುತ್ತಿಲ್ಲ ಎಂದು ದೇವೇಗೌಡರು ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಮೇಕೆದಾಟು…

Read More

ಕಲಬುರಗಿ : ಆಡಳಿತದಲ್ಲಿ ಪಾರದರ್ಶಕತೆ ತರಲು ಇ-ಆಫೀಸ್ ಅನುಷ್ಟಾನಗೊಳಿಸಿದೆ. ಫೆಬ್ರವರಿ 1 ರಿಂದ ಜಿಲ್ಲೆಯ ಎಲ್ಲಾ ತಹಶೀಲ್ದಾರ ಕಚೇರಿಯಲ್ಲಿ ಇ-ಕಚೇರಿ ಮೂಲಕವೇ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ ಸ್ವೀಕೃತಿ ಸಂಖ್ಯೆ ನೀಡಬೇಕು. ಯಾವುದೇ ಕಾರಣಕ್ಕೂ ಭೌತಿಕ ಕಡತ ಪ್ರಕ್ರಿಯೆ ಇರಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಅಲ್ಲದೆ ಫೆ.1 ರಿಂದ ಆವಕ ಸಿಬ್ಬಂದಿಗೆ ಸ್ಟ್ಯಾಂಪ್, ಸೀಲು ಸಹ ನೀಡಬಾರದು ಎಂದರು. ಜಿಲ್ಲೆಯ ಶಹಾಬಾದ, ಯಡ್ರಾಮಿ, ಕಾಳಗಿ ತಹಶೀಲ್ದಾರ ಕಚೇರಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಇ-ಕಚೇರಿ ಅನುಷ್ಟಾನ ಮಾಡದಿರುವುದಕ್ಕೆ ಸಿಡಿಮಿಡಿಗೊಂಡ ಅವರು, ಪಾರದರ್ಶಕ, ಸಮಯ ಉಳಿತಾಯ, ಅಕೌಂಟೇಬಿಲಿಟಿ ಇರಲೆಂದೇ ನೂತನ ಸಾಫ್ಟವೇರ್ ಅಭಿವೃದ್ಧಿಪಡಿಸಿದೆ. ಹೊಸ ವ್ಯವಸ್ಥೆಗೆ ಹೊಂದಿಕೊಂಡು ಕಡ್ಡಾಯವಾಗಿ ಅನುಷ್ಠನಾಗೊಳಿಸಬೇಕು ಎಂದು ತಹಶೀಲ್ದಾರ, ಕಂದಾಯ ಸಿಬ್ಬಂದಿಗಳಿಗೆ ತಾಕೀತು ಮಾಡಿದರು. ಯಡ್ರಾಮಿ ತಹಶೀಲ್ದಾರ ಕಚೇರಿಯಲ್ಲಿ ಕಳೆದ‌ 6 ತಿಂಗಳಲ್ಲಿ ಕೇವಲ 42 ಕಡತ…

Read More

ಗದಗ: ಜಿಲ್ಲೆಯಲ್ಲಿ ಇಂದು ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಈ ಅಪಘಾತದಲ್ಲಿ ಲಾರಿ, ಸರ್ಕಾರಿ ಬಸ್ ನಜ್ಜುಗುಜ್ಜಾಗಿರೋದಾಗಿ ತಿಳಿದು ಬಂದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿಯಲ್ಲಿ ಇಂದು ಸಾರಿಗೆ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಸಾವನ್ನಪ್ಪಿರೋದಾಗಿ ಶಂಕೆ ವ್ಯಕ್ತವಾಗಿದೆ. ಇನ್ನೂ ಈ ಭೀಕರ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದಂತ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. https://kannadanewsnow.com/kannada/bjp-jds-lack-leadership-and-self-confidence-dk-shivakumar/ https://kannadanewsnow.com/kannada/breaking-young-rajat-patidar-replaces-virat-kohli-for-first-2-tests-against-england/

Read More

ಪಿರಿಯಾಪಟ್ಟಣ : “ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ನಾಯಕತ್ವ ಹಾಗೂ ಆತ್ಮವಿಶ್ವಾಸದ ಕೊರತೆ ಇದೆ. ಹೀಗಾಗಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಈಗ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಸೆಳೆಯಲು ಬೆನ್ನು ಬಿದ್ದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮೈಸೂರು ಪಿರಿಯಾಪಟ್ಟಣ ಬೈಲುಕುಪ್ಪೆ ಹೆಲಿಪ್ಯಾಡ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು. ಬಿಜೆಪಿ ನಾಯಕರು ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ವಾಪಸ್ ಕರೆತರುವ ಪ್ರಯತ್ನ ಮಾಡುತ್ತಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ ಉತ್ತರಿಸಿದ ಅವರು, “ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಜಗದೀಶ್ ಶೆಟ್ಟರ್ ಅವರನ್ನು ತಮ್ಮ ಪಕ್ಷಕ್ಕೆ ವಾಪಸ್ ಕರೆದೊಯ್ಯಲು ಬಿಜೆಪಿಯ ಅನೇಕ ನಾಯಕರು ಶೆಟ್ಟರ್ ಅವರಿಗೆ ದುಂಬಾಲು ಬೀಳುತ್ತಿದ್ದಾರೆ. ಅವರ ಪಕ್ಷ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾ? ಅವರ ಬಳಿ ಅಭ್ಯರ್ಥಿಗಳಿಲ್ಲವೇ? ಅವರ ಪಕ್ಷ ಸಮರ್ಥವಾಗಿದ್ದರೆ ಚುನಾವಣೆ ಎದುರಿಸಲಿ ಎಂದರು. ನಾವು ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದೆವು. ಆದರೆ ಕುಮಾರಸ್ವಾಮಿ ಅವರು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಗೂಂಡಾ ಕಾಯ್ದೆಯನ್ನು ಮಿಸ್ ಯೂಸ್ ಮಾಡಿಕೊಳ್ಳದೇ, ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳೋದಕ್ಕೆ ಮಹತ್ವದ ಸೂಚನೆ ಹೊರಡಿಸಿದೆ. ಈ ಸಂಬಂಧ ಗೂಂಡಾ ಕಾಯ್ದೆಯಡಿ ಪ್ರಕರಣಗಳನ್ನು ನಿರ್ವಹಿಸುವ ಬಗ್ಗೆ ಮಹತ್ವದ ಸೂಚನೆಯನ್ನು ಪೊಲೀಸ್ ಇಲಾಖೆಗೆ ತಿಳಿಸಿದೆ. ಈ ಕುರಿತಂತೆ ಒಳಾಡಳಿತ ಇಲಾಖೆಯ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಅವರು ಹೊರಡಿಸಿರುವಂತ ಸುತ್ತೋಲೆಯಲ್ಲಿ  ಕರ್ನಾಟಕ ಅಕ್ರಮ ಭಟ್ಟಿ ಸಾರಾಯಿ ವ್ಯವಹಾರ, ಔಷಧಾಪರಾಧ, ಜೂಜುಕೋರ, ಗೂಂಡಾ ಅನೈತಿಕ ವ್ಯವಹಾರಗಳ ಅಪರಾಧ ಕೊಳಚೆ ಪ್ರದೇಶಗಳನ್ನು ಅಕ್ರಮವಾಗಿ ಆಕ್ರಮಿಸಿಕೊಳ್ಳುವ ವಿಡಿಯೋ ಅಥವಾ ಆಡಿಯೋ ಪ್ರೈರೇಟ್ ಚಟುವಟಿಕೆಗಳ ತಡೆ ಅಧಿನಿಯಮ 1985ರ ಕಾಯ್ದೆಯ ಕಲಂ 3 ಉಪ ಕಲಂ (1) & (2) ರಡಿ ಜಿಲ್ಲಾಧಿಕಾರಿ/ ಪೊಲೀಸ್‌ ಆಯುಕ್ತರಿಗೆ ಬಂಧನ ಆದೇಶ ಹೊರಡಿಸಲು ಅವಕಾಶವಿರುತ್ತದೆ ಎಂದಿದೆ. ಇಂತಹ ಪ್ರಕರಣಗಳ ಸೂಕ್ತತೆಯನ್ನು ಸದರಿ ಕಾಯ್ದೆಯ ಕಲಂ-9 ರಡಿ ರಚಿತವಾದ ಮಾನ್ಯ ಉಚ್ಚ ನ್ಯಾಯಾಲಯದ ಮೂವರು ನ್ಯಾಯಾಧೀಶರುಗಳನ್ನೊಳಗೊಂಡ ಸಲಹಾ ಮಂಡಳಿಯು ಪರಿಶೀಲಿಸುತ್ತದೆ. ಇತ್ತೀಚೆಗೆ ಬಹಳಷ್ಟು ಪ್ರಕರಣಗಳಲ್ಲಿ ತಾಂತ್ರಿಕ…

Read More

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೆರಳುತ್ತಿದ್ದಂತ ಕಾರು ಅಪಘಾತಗೊಂಡಿದೆ. ಕೊಲ್ಕತ್ತಾದಲ್ಲಿ ಅವರ ಕಾರು ಅಪಘಾತಗೊಂಡ ಪರಿಣಾಮ, ಅವರ ತಲೆಗೆ ಪೆಟ್ಟಾಗಿರೋದಾಗಿ ತಿಳಿದು ಬಂದಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೆರಳುತ್ತಿದ್ದಂತ ಕಾರು ಕೊಲ್ಕತ್ತಾದಲ್ಲಿ ಅಪಘಾತಗೊಂಡಿದೆ. ಈ ಅಪಘಾತದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರ ತಲೆಗೆ ಸಣ್ಣ ಪುಟ್ಟ ಗಾಯವಾಗಿರೋದಾಗಿ ಮೂಲಗಳಿಂದ ತಿಳಇದು ಬಂದಿದೆ. ಇಂದು ಇಂಡಿಯಾ ಮೈತ್ರಿಕೂಟದಿಂದ ಹೊರ ನಡೆದಿದ್ದಂತ ಅವರು, ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸೋದಾಗಿ ಘೋಷಣೆ ಮಾಡಿದ್ದರು. ಈ ಬೆನ್ನಲ್ಲೇ ಅವರ ಕಾರು ಅಪಘಾತಗೊಂಡಿದ್ದು, ಸಣ್ಣಪುಟ್ಟ ಗಾಯ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಆಗೋರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/breaking-big-shock-to-india-alliance-aap-announces-no-alliance-with-congress-in-punjab/ https://kannadanewsnow.com/kannada/breaking-young-rajat-patidar-replaces-virat-kohli-for-first-2-tests-against-england/

Read More

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಜ್ಞಾನವಾಪಿ ಮಸೀದಿಯ ಬಗ್ಗೆ ಭಾರತೀಯ ಪುರಾತತ್ವ ಸಮೀಕ್ಷೆಯ ವರದಿಯನ್ನು ಬಹಿರಂಗಪಡಿಸೋದಕ್ಕೆ ಕೋರ್ಟ್ ಸಮ್ಮತಿ ನೀಡಿದೆ. ಜ್ಞಾನವಾಪಿ ಮಸೀದಿ ಸಂಕೀರ್ಣದ ಬಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (Archaeological Survey of India – ASI) ವರದಿಯನ್ನು ಎರಡೂ ಪಕ್ಷಗಳಿಗೆ ನೀಡುವಂತೆ ವಾರಣಾಸಿ ನ್ಯಾಯಾಲಯ ಬುಧವಾರ ಕೇಳಿದೆ. ಹಿಂದೂ ಕಡೆಯವರನ್ನು ಪ್ರತಿನಿಧಿಸುವ ವಕೀಲ ವಿಷ್ಣು ಶಂಕರ್ ಜೈನ್, “ಇಂದು, ನ್ಯಾಯಾಲಯವು ಎರಡೂ ಕಡೆಯ ವಾದಗಳನ್ನು ಆಲಿಸಿತು ಮತ್ತು ಎಎಸ್ಐ ವರದಿಯ ಹಾರ್ಡ್ ಕಾಪಿಯನ್ನು ಎರಡೂ ಕಡೆಯವರಿಗೆ ನೀಡಲಾಗುವುದು ಎಂದು ಒಮ್ಮತಕ್ಕೆ ಬರಲಾಯಿತು… ಇಮೇಲ್ ಮೂಲಕ ವರದಿ ನೀಡಲು ಎಎಸ್ಐ ಆಕ್ಷೇಪ ವ್ಯಕ್ತಪಡಿಸಿತು. ಆದ್ದರಿಂದ, ವರದಿಯ ಹಾರ್ಡ್ ಕಾಪಿ ಪಡೆಯಲು ಎರಡೂ ಕಡೆಯವರು ಒಪ್ಪಿಕೊಂಡರು. https://twitter.com/ANI/status/1750092480996122684 ವರದಿಯನ್ನು ನಾಳೆ (ಗುರುವಾರ) ನೀಡುವ ಸಾಧ್ಯತೆಯಿದೆ ಎಂದು ಎಎಸ್ಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯಾಹ್ನ 12 ಗಂಟೆಯ ನಂತರ ಪ್ರಾರ್ಥನಾ ಪತ್ರ ಸಲ್ಲಿಸುವಂತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಪ್ರತಿಯನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳಬಾರದು ಎಂಬ ಯಾವುದೇ…

Read More

ವಾರಣಾಸಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಬಳಿಕ, ವಾರಣಾಸಿ ಜಿಲ್ಲಾ ನ್ಯಾಯಾಲಯವು ಎಎಸ್ಐ ಸರ್ವೆಗೆ ಆದೇಶಿಸಿತ್ತು. ಭಾರತೀಯ ಪುರಾತತ್ವ ಇಲಾಖೆಯಿಂದ ನಡೆಸಲಾಗಿರುವಂತ ಸಮೀಕ್ಷೆಯವ ವರದಿಯನ್ನು ಈಗ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ. ಜ್ಞಾನವಾಪಿ ಮಸೀದಿಯ ಬಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ವರದಿಯನ್ನು ಸಾರ್ವಜನಿಕಗೊಳಿಸಲಾಗುವುದು ಮತ್ತು ಅದರ ಪ್ರವೇಶವನ್ನು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯವರಿಗೆ ಒದಗಿಸಲಾಗುವುದು. ಈ ಕುರಿತು ಮಾತನಾಡಿದ ಹಿಂದೂ ಕಡೆಯ ವಕೀಲ ಹರಿಶಂಕರ್ ಜೈನ್, “ಎಎಸ್ಐ ಸಮೀಕ್ಷೆಯ ಪ್ರತಿಯನ್ನು ಪಡೆಯಲು ನಾವು ತುಂಬಾ ಅದೃಷ್ಟಶಾಲಿಗಳು” ಎಂದು ಹೇಳಿದರು. “ಎಎಸ್ಐ ಸಮೀಕ್ಷೆಯಲ್ಲಿ ಏನಿದೆ ಎಂದು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು” ಎಂದು ಜೈನ್ ಹೇಳಿದರು. ನ್ಯಾಯಾಲಯದ ನಿರ್ದೇಶನದಂತೆ ಎರಡೂ ಪಕ್ಷಗಳಿಗೆ ವರದಿಯ ಹಾರ್ಡ್ ಕಾಪಿ ನೀಡಲಾಗುವುದು ಎಂದು ಜೈನ್ ಗಮನಿಸಿದರು. https://kannadanewsnow.com/kannada/breaking-big-shock-to-india-alliance-aap-announces-no-alliance-with-congress-in-punjab/ https://kannadanewsnow.com/kannada/breaking-young-rajat-patidar-replaces-virat-kohli-for-first-2-tests-against-england/

Read More

ಬೆಂಗಳೂರು: ನಗರದಲ್ಲಿನ ಪ್ರೀ ಸ್ಕೂಲ್ ಒಂದರಲ್ಲಿ ನಡೆದಂತ ನಿರ್ಲಕ್ಷ್ಯ ಘಟನೆಯಿಂದಾಗಿ 4 ವರ್ಷದ ಪುಟ್ಟ ಕಂದಮ್ಮ ಜೀವನ್ಮರಣ ಹೋರಾಟ ನಡೆಸುತ್ತಿರುವಂತೆ ಆಗಿದೆ. ಈಗ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಬೆಂಗಳೂರಿನ ಹೆಣ್ಣೂರಿನ ಚೆಲ್ಲಕೆರೆಯಲ್ಲಿನ ಡೆಲ್ಲಿ ಪ್ರೀ ಸ್ಕೂಲ್ ನಲ್ಲಿ 4 ವರ್ಷದ ಜಿನಾ ಓದುತ್ತಿದ್ದಳು. ಜನವರಿ.22ರಂದು 3ನೇ ಮಹಡಿಯಿಂದ ಬಿದ್ದಿದ್ದಂತ ಜಿನಾಗೆ ತಲೆಗೆ ತೀವ್ರವಾಗಿ ಪೆಟ್ಟಾಗಿ ಗಾಯ ಕೂಡ ಆಗಿತ್ತು. ಕೂಡಲೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇದೀಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ 4 ವರ್ಷದ ಜಿನಾ ಸ್ಥಿತಿ ಚಿಂತಾಜನಕವಾಗಿರೋದಾಗಿ ತಿಳಿದು ಬಂದಿದೆ. ಜಿನಾ ಇಷ್ಟು ತೀವ್ರವಾಗಿ ಗಾಯಗೊಂಡರೂ ಹೆಣ್ಣೂರು ಠಾಣೆಯ ಪೊಲೀಸರು ಮಾತ್ರ ಎಫ್ಐಆರ್ ದಾಖಲಿಸಿ, ಪ್ರೀ ಸ್ಕೂಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋ ಬದಲಾಗಿ, ಎನ್ ಸಿಆರ್ ಹಾಕಿ ಕಳುಹಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ. https://kannadanewsnow.com/kannada/good-news-for-farmers-in-the-state-first-instalment-of-drought-relief-to-be-released-within-a-week-cm-siddaramaiah/ https://kannadanewsnow.com/kannada/breaking-big-shock-to-india-alliance-aap-announces-no-alliance-with-congress-in-punjab/

Read More