Author: kannadanewsnow09

ಬೆಂಗಳೂರು: ನಗರದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ವಿದ್ಯುತ್ ಪವರ್ ಕಟ್ ಸಮಸ್ಯೆಯಿಂದಾಗಿ ಹಸಿರು ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಪ್ರಯಾಣಿಕರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು. ಆ ಬಳಿಕ 10 ನಿಮಿಷಗಳಲ್ಲಿ ತಾಂತ್ರಿಕ ಸಮಸ್ಯೆ ಸರಿಪಡಿಸಿದ ಕಾರಣ, ಈಗ ರೈಲು ಸಂಚಾರ ಪುನಾರಾರಂಭಗೊಂಡಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು,  ಹಸಿರು ಮಾರ್ಗದ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಶ್ರೀರಾಂಪುರ ನಿಲ್ದಾಣಗಳ ನಡುವೆ ರೈಲುಗಳು ಸಂಜೆ 4.11 ರಿಂದ 4.23 ಗಂಟೆಯವರೆಗೆ ವಿದ್ಯುತ್ ವೈಫಲ್ಯದಿಂದಾಗಿ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಅವಧಿಯಲ್ಲಿ ಶಾರ್ಟ್ ಲೂಪ್ ಸೇವೆಗಳನ್ನು ನಡೆಸಲಾಯಿತು ಎಂದು ತಿಳಿಸಿದೆ. ನಾಗಸಂದ್ರ ಮತ್ತು ರಾಜಾಜಿನಗರ ನಡುವೆ ನ್ಯಾಷನಲ್ ಕಾಲೇಜು ಮತ್ತು ಸಿಲ್ಕ್ ಇನ್ಸ್ಟಿಟ್ಯೂಟ್ ಮೆಟ್ರೋ ನಿಲ್ದಾಣಗಳ ನಡುವೆ 4.23 ಗಂಟೆಯಿಂದ ಸಂಪೂರ್ಣ ಹಸಿರು ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ನಡೆಯುತ್ತಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತಿರುವುದಾಗಿ ಬಿ.ಎಂ.ಆರ್.ಸಿ.ಎಲ್ ಹೇಳಿದೆ. https://kannadanewsnow.com/kannada/jammu-and-kashmir-assembly-elections-2019-congress-hits-back-at-bjp-over-alliance-with-nc/ https://kannadanewsnow.com/kannada/india-gifts-four-bhishma-cubes-to-ukraine-bhishm-cubes/

Read More

ಬೆಂಗಳೂರು: ನಗರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನಲೆಯಲ್ಲಿ ಹಸಿರು ಮಾರ್ಗದ ನಮ್ಮ ಮೆಟ್ರೋ ರೈಲಿನಲ್ಲಿ ಸಂಚಾರ ವ್ಯತ್ಯಯ ಉಂಟಾಗಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಸುಮಾರು 10 ನಿಮಿಷಗಳ ಕಾಲ ನಿಂತಲ್ಲೇ ಮೆಟ್ರೋ ರೈಲು ನಿಲ್ಲುವಂತೆ ಆಗಿತ್ತು. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ನಮ್ಮ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ ತಾಂತ್ರಿಕ ಕಾರಣದಿಂದ ರೈಲು ದಿಢೀರ್ ಆಫ್ ಆಗಿ ನಿಲ್ಲುವಂತೆ ಆಗಿತ್ತು. ಸುಮಾರು 10 ನಿಮಿಷಗಳ ಕಾಲ ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ನಿಂತಿತ್ತು ಎಂಬುದಾಗಿ ತಿಳಿದು ಬಂದಿದೆ. ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ ಈಗ ಸಂಚಾರ ವ್ಯತ್ಯಯ ಉಂಟಾಗಿದೆ. ಮೆಜೆಸ್ಟಿಂಕ್ ನಿಂದ ಪೀಣ್ಯ ಕಡೆಗೆ ನಮ್ಮ ಮೆಟ್ರೋ ರೈಲು ತೆರಳುತ್ತಿತ್ತು. ಈ ವೇಳೆಯಲ್ಲಿ ಮಹಾಲಕ್ಷ್ಮೀ ಲೇಔಟ್ ನಿಲ್ದಾಣದಲ್ಲಿ ದಿಢೀರ್ ಆಫ್ ಆಗಿದ್ದರಿಂದ ಸಂಚಾರ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/good-news-for-medical-students-state-govt-orders-25-hike-in-scholarships/ https://kannadanewsnow.com/kannada/jammu-and-kashmir-assembly-elections-2019-congress-hits-back-at-bjp-over-alliance-with-nc/ https://kannadanewsnow.com/kannada/india-gifts-four-bhishma-cubes-to-ukraine-bhishm-cubes/

Read More

ಬೆಂಗಳೂರು: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ರೂಪಿಸಿದೆ. ಇಂತಹ ವಿಧೇಯಕಗಳ ಸಾಧಕ-ಬಾಧಕಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಹತ್ತಾರು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದರು ಎಂದರು. ರಾಜಭವನ ಎಂದರೆ ಬಿಜೆಪಿ ಕಚೇರಿ ಎನ್ನುವುದು ಹಳಸಿದ ಮಾತು.‌ ವಿಧೇಯಕವನ್ನು ಮರಳಿ ಕಳುಹಿಸಿದರೆ ಅದಕ್ಕೆ ಸರ್ಕಾರ ಸ್ಪಷ್ಟೀಕರಣ ಕೊಟ್ಟು ಗೊಂದಲ ನಿವಾರಿಸಬೇಕು. ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುವುದು ಸರ್ಕಾರದ ಕರ್ತವ್ಯ. ಈ ಕರ್ತವ್ಯ ಮಾಡದೇ ಇದ್ದಲ್ಲಿ ಅದು ಸರ್ಕಾರದ ನಿರ್ಲಕ್ಷ್ಯವೇ ಹೊರತು ರಾಜ್ಯಪಾಲರ ತಪ್ಪಲ್ಲ. ಸರ್ಕಾರ ತಪ್ಪು ಮಾಡಿ ಅದನ್ನು ರಾಜ್ಯಪಾಲರ ಮೇಲೆ ಹೇರುವುದು ಸರಿಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು…

Read More

ಹುಬ್ಬಳ್ಳಿ: ಮುಡಾ ಹಗರಣ ಮರೆಮಾಚಲು ಮುಖ್ಯಮಂತ್ರಿ ದೆಹಲಿಯಲ್ಲಿ ಶಾಸಕರ‌ ಪೇರೇಡ್ ಮಾಡಲು ತಯಾರಿ ಮಾಡುತಿದ್ದು ದೆಹಲಿಯಲ್ಲಿ ಏನೇ ಪೇರೇಡ್ ಮಾಡಲಿ ಬಿಡಲಿ ಅವರಿಗೆ ಬಿಟ್ಟಿದ್ದು ಈಗಾಗಲೇ ಕಾನೂನು ಹೋರಾಟ ಆರಂಭ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದ ಚಂಡು ಕಾನೂನು ಅಂಗಳಕ್ಕೆ ಹೋಗಿದ್ದು ಕಾನೂನಿನ ಮೂಲಕವೇ ಇದು ಇತ್ಯರ್ಥ ಆಗಬೇಕು ಏನೇಲ್ಲಾ ಬೆಳವಣಿಗೆ ಆಗುತ್ತವೆ ನೋಡಬೇಕು ಹೈಕೋರ್ಟ್ ನಲ್ಲಿ ಏನು ತೀರ್ಮಾನ ಆಗುತ್ತದೆ ನೋಡಿಕೊಂಡು ಅದರ ಮೇಲೆ ಮುಂದಿನ ಹೋರಾಟ ನಡೆಸಲಾಗುವುದು. ಮುಖ್ಯಮಂತ್ರಿಗಳು ತಮ್ಮ ಸ್ಥಾನ ಉಳಿಸಿಕೊಳ್ಳಲು ರಾಜಕೀಯ ತಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಜಿಂದಾಲ್ ಗೆ ಕಡಿಮೆ ದರಕ್ಕೆ ಜಮೀನು ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಾಯಕರು ಅಧಿಕಾರ ಇದ್ದಾಗ ಒಂದು ವಿರೋಧ ಪಕ್ಷದಲ್ಲಿ ಇದ್ದಾಗ ಒಂದು ರೀತಿ ನಡೆದುಕೊಳ್ಳುವ ಮೂಲಕ ಎರಡು ನಾಲಿಗೆ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದು…

Read More

ಬೆಂಗಳೂರು: ಜವಾಹರಲಾಲ್‌ ನೆಹರು ತಾರಾಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಕನ್ನಡದಲ್ಲಿ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ ಪಾಲ್ಗೊಂಡು, ಗೆಲ್ಲುವಂತ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನವಾಗಿ 40,000 ಸಿಗಲಿದೆ. – ಸ್ಪರ್ಧೆಯಲ್ಲಿ ಬ್ಲಾಕ್‌ ಹಂತ, ಜಿಲ್ಲಾ ಮಟ್ಟ, ವಿಭಾಗೀಯ ಮಟ್ಟ, ರಾಜ್ಯ ಮಟ್ಟ ಮತ್ತು ಅಂತಿಮ ಹಂತ ಎಂಬ 5 ಹಂತಗಳು ಇರಲಿವೆ. – ಪ್ರಥಮ ಬಹುಮಾನ ಪಡೆದ ತಂಡಕ್ಕೆ 40 ಸಾವಿರ ರೂ., ಹಾಗೂ ಪ್ರಶಂಸಾ ಪತ್ರ ವಿತರಿಸಲಾಗುತ್ತದೆ. – ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 30 ಸಾವಿರ ರೂ. ಮತ್ತು ತೃತೀಯ ಸ್ಥಾನ ಪಡೆದ ತಂಡಕ್ಕೆ 10 ಸಾವಿರ ರೂ. ಬಹುಮಾನವಿದೆ. ಪ್ರತಿ ಪ್ರೌಢಶಾಲೆಗಳಿಂದ ಇಬ್ಬರು ವಿದ್ಯಾರ್ಥಿಗಳುಳ್ಳ ಒಂದು ತಂಡಕ್ಕೆ ಇದರಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಒಂದು ತಂಡದಲ್ಲಿ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿ ಇರತಕ್ಕದ್ದು. ಬಾಲಕಿಯರ ಶಾಲೆಯಾಗಿದ್ದಲ್ಲಿ ಇಬ್ಬರು ಬಾಲಕಿಯರು ಮತ್ತು…

Read More

ಪುಣೆ: ಪ್ರತಿಕೂಲ ಹವಾಮಾನದಿಂದಾಗಿ ಪುಣೆ ಜಿಲ್ಲೆಯ ಪೌಡ್ ಗ್ರಾಮದ ಬಳಿ ಖಾಸಗಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ ಖಾಸಗಿ ವಿಮಾನಯಾನ ಕಂಪನಿಗೆ ಸೇರಿದೆ. ವಿಮಾನವು ಮುಂಬೈನಿಂದ ಹೈದರಾಬಾದ್ಗೆ ಹೋಗುತ್ತಿತ್ತು, ಹೆಲಿಕಾಪ್ಟರ್ನಲ್ಲಿ 4 ಜನರು ಪ್ರಯಾಣಿಸುತ್ತಿದ್ದರು. ಈ ಬಗ್ಗೆ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಲಾಗುತ್ತಿದೆ ಎಂದು ಪುಣೆ ಗ್ರಾಮೀಣ ಪೊಲೀಸ್ ಎಸ್ಪಿ ಪಂಕಜ್ ದೇಶ್ಮುಖ್ ತಿಳಿಸಿದ್ದಾರೆ. https://twitter.com/ANI/status/1827280692754997747 ಹೆಲಿಕಾಪ್ಟರ್ ನಲ್ಲಿದ್ದ ನಾಲ್ವರಲ್ಲಿ ಕ್ಯಾಪ್ಟನ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಮೂವರ ಸ್ಥಿತಿ ಸ್ಥಿರವಾಗಿದೆ ಎಂದು ಪುಣೆ ಗ್ರಾಮೀಣ ಪೊಲೀಸ್ ಎಸ್ಪಿ ಪಂಕಜ್ ದೇಶ್ಮುಖ್ ತಿಳಿಸಿದ್ದಾರೆ. https://twitter.com/ANI/status/1827285418292752793 https://kannadanewsnow.com/kannada/jammu-and-kashmir-assembly-elections-2019-congress-hits-back-at-bjp-over-alliance-with-nc/ https://kannadanewsnow.com/kannada/india-gifts-four-bhishma-cubes-to-ukraine-bhishm-cubes/

Read More

ಬೆಂಗಳೂರು: ನಿಗದಿಯಂತೆ ಕೆಪಿಎಸ್ಸಿಯ ಕೆಎಎಸ್ ಪರೀಕ್ಷೆಗಳು ನಡೆಯಲಿದ್ದಾವೆ. ಆದರೇ ಕೃಷ್ಣ ಜನ್ಮಾಷ್ಟಮಿಯಂದು ನಿಗದಿ ಪಡಿಸಲಾಗಿರುವಂತ ಪರೀಕ್ಷೆಯ ದಿನಾಂಕವನ್ನು ಮಾತ್ರವೇ ಬದಲಾವಣೆ ಮಾಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. ಅವರು ಇಂದು ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಪಿಎಸ್ ಸಿ ಪರೀಕ್ಷೆ ಬಗ್ಗೆ ಗೊಂದಲವಿರುವ ಬಗ್ಗೆ ಮಾತನಾಡುತ್ತಾ, ಪರೀಕ್ಷೆ ಬಗ್ಗೆ ಗೊಂದಲವಿಲ್ಲ. ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗುವುದಿಲ್ಲ. ಕೃಷ್ಣಜನ್ಮಾಷ್ಟಮಿಯಂದು ಇರುವ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ ಎಂದರು. ಸರ್ಕಾರ ಬಸ್ ದರಗಳನ್ನು ಹೆಚ್ಚಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಬಸ್ ದರದಂತೆಯೇ ನೀರಿನ ದರವನ್ನು ಏರಿಸಲಾಗುವುದು ಎಂದಿದ್ದರು. ಆದರೆ ಯಾವುದೇ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ. ನೀರಿನ ದರವನ್ನೂ ಬಹಳ ವರ್ಷಗಳಿಂದ ಏರಿಸಿಲ್ಲ. ಜಲಮಂಡಳಿಯಲ್ಲಿ ಕಷ್ಟ ಪರಿಸ್ಥಿತಿಯಿದ್ದು, ದರಗಳನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಅಂದಹಾಗೇ ಆಗಸ್ಟ್.27ರಿಂದ ಕೆಪಿಎಸ್ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದಾವೆ. ಆಗಸ್ಟ್.27ರ ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ. ಇನ್ನೂ ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ಪತ್ರಿಕೆ-2ರ…

Read More

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ಉಪಮುಖ್ಯಮಂತ್ರಿಗಳು, ಗೃಹ ಸಚಿವರು ಸೇರಿದಂತೆ ಕೆಲ ಸಚಿವರೊಂದಿಗೆ ನವದೆಹಲಿಗೆ ತೆರಳಾಗಿತ್ತು. ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರಿಗೆ ವಿವರಿಸಲಾಗಿದೆ. ವಿಪಕ್ಷಗಳು ಮುಡಾ ಪ್ರಕರಣಕ್ಕೆ ಪಾದಯಾತ್ರೆ ಮಾಡಿದ್ದು, ಅದನ್ನು ರಾಜಕೀಯವಾಗಿ ಎದುರಿಸುವ ಬಗ್ಗೆ ಚರ್ಚಿಸಲಾಗಿದೆ. ನಮ್ಮ ಸರ್ಕಾರ ರಾಜ್ಯಪಾಲರು ಕೊಟ್ಟಿರುವ ಅನುಮತಿ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ ಎಂದು ತಿಳಿಸಿ, ರಾಜ್ಯಪಾಲರ ನಿರ್ಣಯವನ್ನು ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆ ಆಗಸ್ಟ್ 29 ಕ್ಕೆ ಮುಂದೂಡಿದೆ. ಸಚಿವ ಸಂಪುಟದಲ್ಲಿಯೂ ಅವರ ನಿರ್ಣಯವನ್ನು ಸ್ಪಷ್ಟವಾಗಿ ಖಂಡಿಸಿರುವ ಬಗ್ಗೆಯೂ ವರಿಷ್ಠರಿಗೆ ವಿವರಿಸಲಾಗಿದೆ ಎಂದರು. ಎಲ್ಲಾ ಸಾಧ್ಯತೆಗಳಿಗೂ ಅವಕಾಶವಿದೆ ರಾಜ್ಯಪಾಲರ ನಡೆಯ ವಿರುದ್ಧ ಮಾನ್ಯ ರಾಷ್ಟ್ರಪತಿಗಳಿಗೆ ದೂರು ನೀಡುವ ಬಗ್ಗೆ ನವದೆಹಲಿಯಲ್ಲಿ…

Read More

ಹೈದರಾಬಾದ್: ತೆಲುಗಿನ ಖ್ಯಾತ ನಟ ನಾಗಾರ್ಜುನ್ ಅವರು ಅವರು ಕೆಲೆ ಒತ್ತುವರಿ ಮಾಡಿಕೊಂಡು ಕಟ್ಟಿದ್ದಾರೆ ಎಂಬುದಾಗಿ ಅವರ ಹೈದರಾಬಾದ್ ನಲ್ಲಿನ ಎನ್-ಕನ್ವೆಷನ್ಷನ್ ಸೆಂಟರ್ ಅನ್ನು ಧ್ವಂಸಗೊಳಿಸಲಾಗುತ್ತಿತ್ತು. ಇದನ್ನು ಪ್ರಶ್ನಿಸಿ ತೆಲಂಗಾಣ ಹೈಕೋರ್ಟ್ ಮೊರೆಯನ್ನು ಹೋಗಿದ್ದರು. ಈಗ ಧ್ವಂಸಗೊಳಿಸದಂತೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದ್ದು, ನಟ ನಾಗಾರ್ಜುನ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತೆ ಆಗಿದೆ. ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿ ರಕ್ಷಣೆ (ಹೈಡ್ರಾ) ಅಧಿಕಾರಿಗಳು ಶನಿವಾರ ನಟ ಅಕ್ಕಿನೇನಿ ನಾಗಾರ್ಜುನ ಒಡೆತನದ ಮಾಧಪುರದ ಎನ್ ಕನ್ವೆನ್ಷನ್ ಸೆಂಟರ್ ಅನ್ನು ನೆಲಸಮಗೊಳಿಸಿದ್ದಾರೆ. ತಮ್ಮಿಡಿ ಕುಂಟ ಸರೋವರದ ಫುಲ್ ಟ್ಯಾಂಕ್ ಲೆವೆಲ್ (ಎಫ್ಟಿಎಲ್) ಪ್ರದೇಶದಲ್ಲಿ ಈ ಸೌಲಭ್ಯವನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿತ್ತು. ನಗರದ ಮಾಧಾಪುರ ಪ್ರದೇಶದ ಫುಲ್ ಟ್ಯಾಂಕ್ ಲೆವೆಲ್ (ಎಫ್ಟಿಎಲ್) ಪ್ರದೇಶದಲ್ಲಿ ಅಕ್ರಮವಾಗಿ ಅತಿಕ್ರಮಣ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತೆಲುಗು ನಟ ನಾಗಾರ್ಜುನ ಅಕ್ಕಿನೇನಿ ಒಡೆತನದ ಕನ್ವೆನ್ಷನ್ ಹಾಲ್ ಅನ್ನು ನೆಲಸಮಗೊಳಿಸಲು ಹೈದರಾಬಾದ್ ವಿಪತ್ತು ಪರಿಹಾರ ಮತ್ತು ಆಸ್ತಿ ಸಂರಕ್ಷಣಾ ಸಂಸ್ಥೆ (ಹೈಡ್ರಾ)…

Read More

ಬೆಂಗಳೂರು: ಇತ್ತೀಚಿಗಷ್ಟೇ ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರಲ್ಲಿ ನೀರಿನ ದರ ಹೆಚ್ಚಳ ಮಾಡುವುದಾಗಿ ಹೇಳಿದ್ದರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಬಸ್ ದರ ಏರಿಕೆ ಮಾಡುವುದಾಗಿಯೂ ಪ್ರಾಸಂಗಿಕವಾಗಿ ತಿಳಿಸಿದ್ದರು. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರಲ್ಲಿ ನೀರಿನ ದರ, ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವಂತ ಸುಳಿವು ನೀಡಿದ್ದಾರೆ. ಅವರು ಇಂದು ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸರ್ಕಾರ ಬಸ್ ದರಗಳನ್ನು ಹೆಚ್ಚಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಬಸ್ ದರದಂತೆಯೇ ನೀರಿನ ದರವನ್ನು ಏರಿಸಲಾಗುವುದು ಎಂದಿದ್ದರು. ಆದರೆ ಯಾವುದೇ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ. ನೀರಿನ ದರವನ್ನೂ ಬಹಳ ವರ್ಷಗಳಿಂದ ಏರಿಸಿಲ್ಲ. ಜಲಮಂಡಳಿಯಲ್ಲಿ ಕಷ್ಟ ಪರಿಸ್ಥಿತಿಯಿದ್ದು, ದರಗಳನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಕೆಪಿಎಸ್ ಸಿ ಪರೀಕ್ಷೆ ಬಗ್ಗೆ ಗೊಂದಲವಿರುವ ಬಗ್ಗೆ ಮಾತನಾಡುತ್ತಾ, ಪರೀಕ್ಷೆ ಬಗ್ಗೆ ಗೊಂದಲವಿಲ್ಲ. ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗುವುದಿಲ್ಲ. ಕೃಷ್ಣಜನ್ಮಾಷ್ಟಮಿಯಂದು ಇರುವ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ ಎಂದರು. https://kannadanewsnow.com/kannada/jammu-and-kashmir-assembly-elections-2019-congress-hits-back-at-bjp-over-alliance-with-nc/…

Read More