Author: kannadanewsnow09

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಶಾಸಕ ಸುನೀಲ್ ಕುಮಾರ್ ಕಾರ್ಕಳ ಲೆಟರ್ ಬಾಂಬ್ ಸಿಡಿಸಿದ್ದಾರೆ. ಅದರಲ್ಲಿ ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾಯಿಸುವಂತೆ ಸಿಎಂ ಪತ್ರ ಬರೆದಿದ್ದಾರೆ ಎಂಬುದಾಗಿ ಸಿದ್ಧರಾಮಯ್ಯ ಬರೆದ ಪತ್ರವನ್ನು ಬಿಡುಗಡೆ ಮಾಡಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಿಎಂ ಸಿದ್ಧರಾಮಯ್ಯ ಅವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. https://twitter.com/karkalasunil/status/2022187749173080277 ಇದು ಅಬಕಾರಿ ಹಾಗೂ ಆರೋಗ್ಯ ಇಲಾಖೆಯ ವೃಂದ ನಿಯಮಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸಿದ್ದರಾಮಯ್ಯನವರೂ “ಇಂದ್ರೀಯ” ವಶವಾಗಿ ಆಡಳಿತದ ಹದ ಕಳೆದುಕೊಂಡಿದ್ದಾರೆ ಎಂಬುದಕ್ಕೆ ಇದು ನಿದರ್ಶನವಾಗಿದೆ ಎಂದು ಗುಡುಗಿದ್ದಾರೆ. https://twitter.com/karkalasunil/status/2022187751458955584 ಅಬಕಾರಿ ಇಲಾಖೆಯಲ್ಲಿ ನಡೆದಿರುವ 6000 ಕೋಟಿ ರೂ.ಗೂ ಅಧಿಕ ಮೊತ್ತದ ಅವ್ಯವಹಾರ ಹಾಗೂ…

Read More

ಬೆಂಗಳೂರು : “ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಿಜ್ಞಾನ ಸಂಸ್ಥೆಯ ಜೆಜೆ ಟಾಟಾ ಸಭಾಂಗಣದಲ್ಲಿ ನಜೆದ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. “ನೀವೆಲ್ಲರೂ ಬೆಂಗಳೂರಿನಲ್ಲಿದ್ದೀರಿ. ಇಲ್ಲಿ 1.50 ಕೋಟಿ ಜನಸಂಖ್ಯೆ ಇದ್ದು, ವಿಶ್ವದಾದ್ಯಂತ ಕೈಗಾರಿಕೋದ್ಯಮಿಗಳು ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಇಡೀ ವಿಶ್ವ ಭಾರತವನ್ನು ಬೆಂಗಳೂರು ಮೂಲಕ ನೋಡುತ್ತಿದೆ. ಇಲ್ಲಿರುವ ಹವಾಮಾನ ಹಾಗೂ ಸಂಸ್ಕೃತಿ ಎಲ್ಲರ ಆಕರ್ಷಣೆಯಾಗಿದೆ. ಎಲ್ಲರೂ ಬೆಂಗಳೂರಿಗೆ ಬರಲು ಇಚ್ಛಿಸುತ್ತಿದ್ದಾರೆ. ಹೀಗಾಗಿ ಎಲ್ಲರಿಗೂ ನೀರು ಪೂರೈಸುವ ಜವಾಬ್ದಾರಿ ನಮ್ಮ ಮೇಲಿದೆ. ಹೀಗಾಗಿ ನಾವು ಸಮತೋಲಿದ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿದ್ದು, ಇತ್ತೀಚೆಗೆ ಸುಪ್ರೀಂ ಕೋರ್ಟ್ ಈ ಯೋಜನೆ ಪರವಾಗಿ ತೀರ್ಪು ನೀಡಿದೆ. ಆಮೂಲಕ ನಾವು…

Read More

ಬೆಂಗಳೂರು: ದೇಶದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಭ್ರಷ್ಟಾಚಾರ ತಡೆ ಕಾಯ್ದೆ-1988ಕ್ಕೆ ಸಮಗ್ರ ತಿದ್ದುಪಡಿ ತರಬೇಕೆಂದು ಹೋರಾಟ ನಡೆಸುತ್ತಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್’, ವಿವಿಧ ರಾಜ್ಯಗಳಲ್ಲಿನ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿಯನ್ನು ಸಲ್ಲಿಸಿದೆ. ಫೆಬ್ರವರಿ 9 ರಂದು ಪ್ರಧಾನಿ, ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಕಾನೂನು ಸಚಿವರಿಗೆ ಸುಮಾರು 700 ಪುಟಗಳ ದಾಖಲೆಗಲ್ಲನ್ನೊಳಗೊಂಡ ವರದಿಯನ್ನು ಸಲ್ಲಿಸಿ, ದೇಶದಲ್ಲಿನ ವ್ಯವಸ್ಥಿತ ಭ್ರಷ್ಟಾಚಾರದ ವಿರುದ್ಧ ‘ಶೂನ್ಯ ಸಹಿಷ್ಣುತೆ’ಯನ್ನು ಜಾರಿಗೊಳಿಸಲು ಜೀವಾವಧಿ ಶಿಕ್ಷೆ ಮತ್ತು ಬಂಡವಾಳ ಶಿಕ್ಷೆ ಸೇರಿದಂತೆ ಕಠಿಣ ಕಾಯ್ದೆ ಜಾರಿಗೊಳಿಸಬೇಕೆಂದು ಮನವಿ ಮಾಡಿದೆ. ವೈಟ್ ಕಾಲರ್ ಪ್ರಭಾವಿಗಳ ಅಕ್ರಮಗಳನ್ನು ಬಯಲು ಮಾಡುವಲ್ಲಿ ಯಶಸ್ವಿಯಾಗಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್ (CRF)’, ಹಲವಾರು ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ದಾವೆ ಮೂಲಕ ಹೋರಾಟದಲ್ಲಿ ನಿರತವಾಗಿದೆ. ಸಾರ್ವಜನಿಕ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಸಮಗ್ರತೆಯನ್ನು ಪ್ರತಿಪಾದಿಸುತ್ತಾ, ಜನರ ಹಕ್ಕುಗಳಿಗಾಗಿ ಹೋರಾಡುತ್ತಿರುವ CRF, ದೇಶದಲ್ಲಿನ ಭ್ರಷ್ಟಾಚಾರ ನಿಯಂತ್ರಣ ಸಂಬಂಧ ಕೇಂದ್ರ…

Read More

ಬೆಂಗಳೂರು: 2025-26 ನೇ ಸಾಲಿನ ಪಿ.ಯು.ಸಿ ಪರೀಕ್ಷೆ-1 ರ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ. ಆ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಬಗ್ಗೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದಿದೆ. 2025-26 ನೇ ಸಾಲಿನ ಪಿ.ಯು.ಸಿ ಪರೀಕ್ಷೆ-1 ದಿನಾಂಕ 28.02.2026 ರಿಂದ 17.03.2026 ರವರೆಗೆ ನಡೆಯಲಿದ್ದು, ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಳಕಂಡಂತೆ ಸೌಲಭ್ಯಗಳನ್ನು ಕಲ್ಪಿಸಿರುತ್ತದೆ. ಪಿ.ಯು.ಸಿ ಪರೀಕ್ಷೆ-1 ರ ವಿದ್ಯಾರ್ಥಿಗಳಿಗೆ ದಿನಾಂಕ 28.02.2026 ರಿಂದ 17.03.2026 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ…

Read More

ಬೆಂಗಳೂರು: ರಾಜ್ಯ ಸರ್ಕಾರವು ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದೆ. ಆಯಾ ತಾಲ್ಲೂಕು ವ್ಯಾಪ್ತಿಯ ಅಧಿಕಾರಿಗಳನ್ನೇ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನಾಗಿ ನಿಯೋಜಿಸಿದೆ. ಹಾಗಾದ್ರೇ ಹೀಗೆ ನೇಮಕಗೊಂಡ ಗ್ರಾಮ ಪಂಚಾಯ್ತಿಗಳ ಆಡಳಿತಾಧಿಕಾರಿಯ ಅಧಿಕಾರ ಮತ್ತು ಕರ್ತವ್ಯಗಳು ಏನು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಮುಂದಿದೆ ಓದಿ.. ರಾಜ್ಯದ ಬಹುತೇಕ ಗ್ರಾಮ ಪಂಚಾಯತಿಗಳ ವರ್ಷಗಳ ಅವಧಿಯು 4 ನೇ ಜೂನ್ 2020 ರಿಂದ ಪ್ರಾರಂಭವಾಗಿ ವಿವಿಧ ದಿನಾಂಕಗಳಂದು ಪೂರ್ಣಗೊಳ್ಳುತ್ತದೆ. ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳು ನಡೆಯದಿರುವ ಕಾರಣ, 5 ವರ್ಷದ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 8(1)(ಬಿ)(ii) ಅನ್ನು ಪ್ರಕರಣ 321 ಓದಿಕೊಂಡಂತೆ ಸದರಿ ಅಧಿನಿಯಮದ ಪ್ರಕರಣ 41 ಮತ್ತು 42 ರಂತೆ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಆದುದರಿಂದ ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿಯ ಅಧಿಕಾರ ಮತ್ತು…

Read More

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಬಡ್ತಿ ಸೇರಿದಂತೆ ಇತರೆ ಸೌಲಭ್ಯಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ( Computer Literacy Test-CLT) ತೇರ್ಗಡೆ ಕಡ್ಡಾಯವಾಗಿದೆ. ಈ ಪರೀಕ್ಷೆ ಉತ್ತೀರ್ಣಕ್ಕೆ ದಿನಾಂಕ 31-12-2025ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ದಿನಾಂಕ 31-12-2026ರವರೆಗೆ ಅವಧಿಯನ್ನು ವಿಸ್ತರಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14) 8ನೇ ಪುಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪಕರಣದ ಮೂಲಕ ಪುದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪುಕರಣದ (2)ನೇ ಉಪ ಪಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ…

Read More

ಬೆಂಗಳೂರು: ಜಾಲಹಳ್ಳಿ ವಿಭಾಗದ 66/11 ಕೆವಿಎ ಗೋಕುಲ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 14.02.2026 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗೋಕುಲ ಎಂ ಯು ಎಸ್ ಎಸ್, ಡಿ.ಬಿ ಸಂದ್ರಾ 4ನೇ ಬ್ಲಾಕ್, ಜೆ.ಬಿ.ಕಾವಲ್ ಅರಣ್ಯ, ಗಂಗಮ್ಮ ವೃತ್ತ, ಡಿ.ಬಿ.ಸಂದ್ರ 2ನೇ ಬ್ಲಾಕ್, ಕಮ್ಮಗೊಂಡನಹಳ್ಳಿ, ಬಿಇಎಲ್ ಉತ್ತರ ಕಾಲೋನಿ ಮತ್ತು ಬಿಇಎಲ್ ಸೌತ್ ಕಾಲೋನಿ, ಬಾಹುಬಲಿ ನಗರ, ಡಿ.ಬಿ.ಸಂದ್ರ 4ನೇ ಬ್ಲಾಕ್, ಪಟೇಲ್ ಪಿಳ್ಳೇಗೌಡ ಲೇಔಟ್, ಬ್ಲೂಮ್ ಫೀಲ್ಡ್ ಗರ‍್ಡನ್, ರಾಮಚಂದ್ರಾಪುರ, ಜಾಲಹಳ್ಳಿ ಗ್ರಾಮ, ಶಾರದಾಂಬನಗರ, ಬಾಹುಬಲಿನಗರ, ಊಒಖಿ ಇಂಡಸ್ಟ್ರಿಯಲ್ ಎಸ್ಟೇಟ್, ಪ್ರೆಸ್ಟೀಜ್ ವೆಲ್ಲಿಂಗ್ಟನ್ ಮತ್ತು ಪ್ರೆಸ್ಟೀಜ್ ಕೆನ್ಸಿಂಗ್ಟನ್ ಅಪರ‍್ಟ್‌ಮೆಂಟ್, ಮುತ್ಯಾಲನಗರ, ಚಾಮುಂಡೇಶ್ವರಿ ಲೇಔಟ್, ನಂಜಪ್ಪ ಲೇಔಟ್, ಸಿ.ರಾಮಯ್ಯ ಲೇಔಟ್, ಗೋಕುಲ ಎಕ್ಸ್‌ಟಿಎನ್, HMR ಲೇಔಟ್ MRTDC, ಪ್ರೆಸ್ಟೀಜ್ ಅಪರ‍್ಟ್ಮೆಂಟ್ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ದಿನಾಂಕ 14.02.2026(ಶನಿವಾರ) ಬೆಳಿಗ್ಗೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಆದರೇ ಕೆಲವೆಡೆ ಹೊರ ರಾಜ್ಯದವರು ಆಧಾರ್ ಕಾರ್ಡ್ ತೋರಿಸಿ ಈ ಯೋಜನೆಯನ್ನು ದುರ್ಬಳಕೆ ಮಾಡಿಕೊಂಡಿದ್ದು ವರದಿಯಾಗಿತ್ತು. ಈ ಹಿನ್ನಲೆಯಲ್ಲಿ ಶಕ್ತಿ ಯೋಜನೆ ದುರ್ಬಕೆ ತಡೆಗೆ ಮಹತ್ವದ ಕ್ರಮ ವಹಿಸಿದೆ. ಮಹಿಳೆಯರು ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಸ್ಮಾರ್ಟ್ ಕಾರ್ಡ್ ವಿತರಣೆಗೆ ನಿರ್ಧರಿಸಲಾಗಿದೆ. ಗುರುವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಹಿತಿ ನೀಡಿದ್ದು, ಕ್ತಿ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಮಹಿಳೆಯರ ಉಚಿತ ಪ್ರಯಾಣಕ್ಕೆ ವಿತರಣೆಗೆ ನಿರ್ಧರಿಸಲಾಗಿದೆ. 4 ಸಾರಿಗೆ ನಿಗಮಗಳಿಂದ ಮಹಿಳೆಯರಿಗೆ ವಿತರಣೆ ಮಾಡಲಿದೆ. ಸ್ಮಾರ್ಟ್ ಕಾರ್ಡ್ ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ ಆಡಿಸಲು ಅನುಮತಿಸಲು ಒಪ್ಪಿಗೆ ನೀಡಿದೆ. ಆರ್ ಸಿಬಿ…

Read More

ಶಿವಮೊಗ್ಗ : ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ, ಗ್ರಾಮ ಸೇವಕರು ಮನೆ ಬಾಗಿಲಿಗೆ ಬಂದು ಮೃತ ವ್ಯಕ್ತಿಗಳ ಹೆಸರಿನಲ್ಲಿರುವ ಜಮೀನುಗಳನ್ನು ಅವರ ವಾರಸುದಾರರ ಹೆಸರಿಗೆ ಪೌತಿ ಖಾತೆ ಮಾಡಿಕೊಡುವ ಅಭಿಯಾನ ಕೈಗೊಂಡಿದ್ದು ವಾರಸುದಾರರು ಇದಕ್ಕೆ ಸಹಕರಿಸಬೇಕೆಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡರು ಮನವಿ ಮಾಡಿದರು. ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇ-ಪೌತಿ ಖಾತೆ ಮಾಡಿಸುವ ಸಂಬಂಧ ವಿಎಓ ಗಳು ವಾರಸುದಾರರನ್ನು ಗುರುತು ಮಾಡಿ ವಿವರಗಳನ್ನು ಪಡೆದು ಕ್ರಮ ಕೈಗೊಳ್ಳಬೇಕು. ಓಟಿಪಿ ಸಮಸ್ಯೆ, ಕೋರ್ಟ್ ವ್ಯಾಜ್ಯ, ಹೆಣ್ಣು ಮಕ್ಕಳಿಗೆ ಆಸ್ತಿ ಕೊಡಬೇಕಾಗುತ್ತದೆಂದು ವಾರಸುದಾರರು ಮಾಹಿತಿ ನೀಡುತ್ತಿಲ್ಲ, ಎರಡು, ಮೂರು ತಲೆಮಾರಗಳ ಪ್ರಕರಣಗಳು ಕಷ್ಟ ಎಂಬ ಸಾಮಾನ್ಯ ಕಾರಣ ನೀಡದೇ ಪ್ರತಿ ಪ್ರಕರಣದಲ್ಲಿ ನಿಖರವಾದ ಕಾರಣ ತಿಳಿದು, ವಾರಸುದಾರರ ಮನವೊಲಿಸಿ ಕ್ರಮ ವಹಿಸಬೇಕು. ಹಾಗೂ 2021 ರ ಸುತ್ತೋಲೆ ಪ್ರಕಾರ ಅಭಿಯಾನ ಮಾದರಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಸೂಚಿಸಿದರು.…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಆದರೇ ಕೆಲವೆಡೆ ಹೊರ ರಾಜ್ಯದವರು ಆಧಾರ್ ಕಾರ್ಡ್ ತೋರಿಸಿ ಈ ಯೋಜನೆಯನ್ನು ದುರ್ಬಳಕೆ ಮಾಡಿಕೊಂಡಿದ್ದು ವರದಿಯಾಗಿತ್ತು. ಈ ಹಿನ್ನಲೆಯಲ್ಲಿ ಶಕ್ತಿ ಯೋಜನೆ ದುರ್ಬಕೆ ತಡೆಗೆ ಮಹತ್ವದ ಕ್ರಮ ವಹಿಸಿದೆ. ಮಹಿಳೆಯರು ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಸ್ಮಾರ್ಟ್ ಕಾರ್ಡ್ ವಿತರಣೆಗೆ ನಿರ್ಧರಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಹಿತಿ ನೀಡಿದ್ದು, ಕ್ತಿ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಮಹಿಳೆಯರ ಉಚಿತ ಪ್ರಯಾಣಕ್ಕೆ ವಿತರಣೆಗೆ ನಿರ್ಧರಿಸಲಾಗಿದೆ. 4 ಸಾರಿಗೆ ನಿಗಮಗಳಿಂದ ಮಹಿಳೆಯರಿಗೆ ವಿತರಣೆ ಮಾಡಲಿದೆ. ಸ್ಮಾರ್ಟ್ ಕಾರ್ಡ್ ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ ಆಡಿಸಲು ಅನುಮತಿಸಲು ಒಪ್ಪಿಗೆ ನೀಡಿದೆ. ಆರ್ ಸಿಬಿ ಪಂದ್ಯಗಳನ್ನ ವೀಕ್ಷಿಸಲು…

Read More