Author: kannadanewsnow09

ಬೆಂಗಳೂರು : ಉದ್ಯಾನ ನಗರಿ ಬೆಂಗಳೂರಿನ ವಿಜಯನಗರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಚಂದ್ರಾ ಬಡಾವಣೆಯಲ್ಲಿ ಇದೇ ಜನವರಿ 26 ರ ಗಣರಾಜ್ಯೋತ್ಸವ ದಿನದಿಂದ ಅತೀ ಎತ್ತರದ ರಾಷ್ಟ್ರಧ್ವಜ ಸ್ಥಂಭದಲ್ಲಿ ತ್ರಿವರ್ಣ ಧ್ವಜ ಹಾರಾಡಲಿದೆ. ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಅಂದು ಬೆಳಿಗ್ಗೆ 8-30 ಗಂಟೆಗೆ ಚಂದ್ರಾ ಬಡಾವಣೆಯ ಉದ್ಯಾನದಲ್ಲಿ ಈ ಬಾನೆತ್ತರದ ರಾಷ್ಟ್ರಧ್ವಜ ಸ್ಥಂಭವನ್ನು ಲೋಕಾರ್ಪಣೆ ಮಾಡಿ, ಪ್ರಪ್ರಥಮ ಬಾರಿಗೆ ರಾಷ್ಟ್ರದ ತ್ರಿವರ್ಣ ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ. ಸಂವಿಧಾನದ ಆಶಯಗಳಾದ ದೇಶ ಪ್ರೇಮ, ದೇಶ ಭಕ್ತಿ, ಸೋದರತೆ ಮತ್ತು ಸಾಮರಸ್ಯವನ್ನು ಉಳಿಸಿ ಬೆಳೆಸಲು ಪ್ರೇರಣೆ ಮತ್ತು ಸ್ಫೂರ್ತಿ ನೀಡುವ ಈ ಸಮಾರಂಭದಲ್ಲಿ ವಿಜಯನಗರ ಶಾಸಕ ಎಂ ಕೃಷ್ಣಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ ಅವರೂ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭದ ಪ್ರಾರಂಭಕ್ಕೆ ಮುನ್ನ, ಬೆಳಿಗ್ಗೆ 7-30 ಗಂಟೆಗೆ, ವಿವಿಧ ಕಲಾ ತಂಡಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ವಾದ್ಯಗೋಷ್ಠಿ-ಸಹಿತವಾಗಿ ಶಾಲಾ-ಕಾಲೇಜು…

Read More

ಬೆಂಗಳೂರು: ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹೆಚ್ಚು ರಾಜಸ್ವ ತರುವ ಅಬಕಾರಿ ಇಲಾಖೆಯಲ್ಲಿ ( Excise department ) ಕೇಳಿದ್ದಷ್ಟೂ ಹಣ ಕೊಟ್ಟರೆ ಬೇಕಾದ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. ಜತೆಗೆ, ಬೇಡಿಕೆ ಇರುವ ಸ್ಥಳಗಳ ನಿಯುಕ್ತಿಗಾಗಿ ಇನ್ನಷ್ಟು ಕುದುರಿಸಿ ಹಣ ಪಡೆದು ವರ್ಗಾಯಿಸಲಾಗುತ್ತಿದೆ. ಹಣ ನೀಡದಿರುವರಿಗೆ ಡಿಸ್ಟಿಲರಿ, ಬ್ರಿವರಿ ವೈನರಿ ಹಾಗೂ ಮೈಕ್ರೋಬ್ರಿವರಿಯಲ್ಲಿರುವ ಹುದ್ದೆ ತೋರಿಸಲಾಗುತ್ತಿದೆ. ಲೋಕಸಭೆ ಚುನಾವಣೆಗೆ ( Lok Sabha Election ) ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವೃಂದದ ಅಧಿಕಾರಿಗಳನ್ನು ತರಾತುರಿ ವರ್ಗಾವಣೆಗೆ ಅಬಕಾರಿ ಸಚಿವರು ಕೈ ಹಾಕಿದ್ದಾರೆ. ಪ್ರತಿ ವರ್ಷ ಮೇ ಅಥವಾ ಜೂನ್‌ನಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ನಡೆಯತ್ತದೆ. ಆದರೆ,ಅಬಕಾರಿ ಇಲಾಖೆಯಲ್ಲಿ ವರ್ಷಕ್ಕೆ ಎರಡೆರಡು ಬಾರಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗಳು ನಡೆದಿರುವುದುಂಟು.ಆಡಳಿತಾತ್ಮಕವಾಗಿ ಅಗತ್ಯವಿರುವ ಖಾಲಿ ಸ್ಥಾನಗಳಿಗೆ ವರ್ಗಾವಣೆ ಮಾಡಬಾರದು ಎಂದು ಸರ್ಕಾರದ ನಿಯಮವಿದೆ. ಆದರೂ ಈ ನಿಯಮವನ್ನು ಉಲ್ಲಂಸಿ ಇಲಾಖೆಯಲ್ಲಿ ಗ್ರೂಪ್ ‘ಬಿ’ ಮತ್ತು ‘ಸಿ’ವೃಂದದ ಅಧಿಕಾರಿಗಳನ್ನು ಖಾಲಿ ಸ್ಥಾನಕ್ಕೆ ವರ್ಗಾಯಿಸಲಾಗುತ್ತಿದೆ. ಹಿರಿತನ ಆಧಾರದಲ್ಲಿ ಮುಂಬಡ್ತಿ ಪಡೆದಿರುವ…

Read More

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಿವೃತ್ತ ಕೆ.ಎ.ಎಸ್. ಅಧಿಕಾರಿ ಆರ್. ರುದ್ರಯ್ಯ ಅವರ ಪಕ್ಷವನ್ನು ಸೇರ್ಪಡೆಯಾದರು.  ಈ ವೇಳೆ ಮಾತನಾಡಿದಂತ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಾಶ್ಮೀರದಿಂದ ಕನ್ಯಾಕುಮಾರಿ ತನಕ ದೇಶಾದ್ಯಂತ ಇವತ್ತು ನರೇಂದ್ರ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ ಇದೆ ಎಂದು  ತಿಳಿಸಿದರು. ಎಸ್‍ಸಿ, ಎಸ್‍ಟಿ ಸೇರಿದಂತೆ ಕಾಂಗ್ರೆಸ್ ಮತಬ್ಯಾಂಕಿನಂತಿದ್ದ ಎಲ್ಲ ಸಮುದಾಯಗಳು ಭ್ರಮನಿರಸನಗೊಂಡಿವೆ. ದಲಿತರ ಅಭಿವೃದ್ಧಿಗಾಗಿ ಕೊಟ್ಟಿದ್ದ ಸುಮಾರು 11,300 ಕೋಟಿ ಹಣವನ್ನು ಗ್ಯಾರಂಟಿ ಸ್ಕೀಮಿಗೆ ಕೊಟ್ಟರಲ್ಲವೇ? ಆ ಮೂಲಕ ದಲಿತರನ್ನು ವಂಚಿತರನ್ನಾಗಿ ಮಾಡಿದ್ದೀರಲ್ಲವೇ ಎಂದು ಕೇಳಿದರು. ರುದ್ರಯ್ಯ ದಕ್ಷ ಅಧಿಕಾರಿಯಾಗಿ ಸೇವೆ ಮಾಡಿದವರು. ಜನಪ್ರೀತಿ ಪಡೆದವರು ಎಂದು ತಿಳಿಸಿದರು. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಬಿಜೆಪಿ ಮಾಡಿದ ಸಾಧನೆ, ಅಭಿವೃದ್ಧಿ ಕಾರ್ಯವನ್ನು ಜನರಿಗೆ ತಿಳಿಸಬೇಕು. ಆಗ ಮಾತ್ರ ನಾವು ಗೆಲ್ಲಲು ಸಾಧ್ಯ ಎಂದು ತಿಳಿಸಿದರು. ಡಾ.ಅಂಬೇಡ್ಕರರನ್ನು ಕಾಂಗ್ರೆಸ್ ಸೋಲಿಸಿದ್ದು, ಅವರ…

Read More

ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿ ತನಕ ದೇಶಾದ್ಯಂತ ಇವತ್ತು ನರೇಂದ್ರ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ ಇದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಿವೃತ್ತ ಕೆ.ಎ.ಎಸ್. ಅಧಿಕಾರಿ ಆರ್. ರುದ್ರಯ್ಯ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಡೀ ದೇಶ ಇವತ್ತು ಅತ್ಯಂತ ಭರವಸೆಯಿಂದ ನರೇಂದ್ರ ಮೋದಿಜೀ ಅವರ ನಾಯಕತ್ವದ ಬಿಜೆಪಿ ಕಡೆ ನೋಡುತ್ತಿದೆ. ಈ ಬಾರಿ ದಕ್ಷಿಣ ಭಾರತದಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ 25 ಲೋಕಸಭಾ ಸೀಟು ಬಂದಿತ್ತು. ಅದನ್ನು ಮೀರಿ ಅದಕ್ಕಿಂತ ಹೆಚ್ಚು ಸೀಟುಗಳನ್ನು ಪಕ್ಷ ಗೆಲ್ಲಲಿದೆ ಎಂದರು. ತೆಲಂಗಾಣ, ಆಂಧ್ರ, ತಮಿಳುನಾಡಿನಲ್ಲೂ ಅತಿ ಹೆಚ್ಚು ಸೀಟು ಸಿಗಲಿದ್ದು, ಅಚ್ಚರಿಯ ಫಲಿತಾಂಶ ಲಭಿಸಲಿದೆ ಎಂದು ತಿಳಿಸಿದರು. ಇದರ ಪ್ರಭಾವ ಕರ್ನಾಟಕದಲ್ಲೂ ಆಗಿದೆ. ಎಸ್‍ಸಿ, ಎಸ್‍ಟಿ ಸೇರಿದಂತೆ ಕಾಂಗ್ರೆಸ್ ಮತಬ್ಯಾಂಕಿನಂತಿದ್ದ ಎಲ್ಲ ಸಮುದಾಯಗಳು ಭ್ರಮನಿರಸನಗೊಂಡಿವೆ.…

Read More

ಮೈಸೂರು: ರಾಜ್ಯದ ರೈತರು ಬರ ಪರಿಹಾರ ಯಾವಾಗ ಸರ್ಕಾರ ಬಿಡುಗಡೆ ಮಾಡಲಿದೆ ಎಂಬುದಾಗಿ ಕಾಯುತ್ತಿದ್ದಾರೆ. ಇಂತಹ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ವಾರದೊಳಗೆ ರೈತರಿಗೆ ಮೊದಲ ಕಂತು ಬಿಡುಗಡೆ ಮಾಡೋದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಅವರು ಇಂದು ಪಿರಿಯಾಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಗದೀಶ್ ಶೆಟ್ಟರ್ ಅವರು ಪುನ: ಬಿಎಪಿಗೆ ಹಿಂತಿರುಗುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅವರೇ ನಾನು ಪುನ: ಬಿಜೆಪಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ. ಪದೇ ಪದೇ ಉದ್ದೇಶಪೂರ್ವಕವಾಗಿ ಬಿಜೆಪಿ ಈ ಮಾತನ್ನು ಹರಿಯಬಿಡುತ್ತಿದೆ. ಯಾವುದ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ ಎಂದರು. ಪರಿಹಾರ: ಪ್ರಧಾನಿಗಳ ಗಮನಕ್ಕೆ ತರಲಾಗಿದೆ ಕೇಂದ್ರಕ್ಕೆ ಭೇಟಿ ನೀಡಿ ಅಮಿತ್ ಷಾ ಅವರನ್ನು ಭೇಟಿ ನೀಡಿದಾಗ ಡಿಸೆಂಬರ್ 23 ರಂದು ಸಭೆ ಕರೆದು ¥ಪರಿಹಾರ ಹಣವನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಆದರೆ ಇಂದಿನವರೆಗೂ ಬಿಡುಗಡೆಯಾಗಲ್ಲ. ಸಭೆ ಕರೆದು ಕಾರಣಾಂತರದಿಂದ ಮುಂದೂಡಿದರು. ಇತ್ತೀಚೆಗೆ ಪ್ರಧಾನಿಗಳು ರಾಜ್ಯಕ್ಕೆ ಭೇಟಿ ನೀಡಿದಾಗ ಈ ವಿಷಯವನ್ನು…

Read More

ಮೈಸೂರು : ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಿರಿಯಾಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಗೆ ತಡೆಯೊಡ್ಡಿರುವ ಅಸ್ಸಾಂ ಸರ್ಕಾರದ ನಡೆಯ ಬಗ್ಗೆ ಪ್ರಧಾನಿಗಳು ಹಾಗೂ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರೂ ಪ್ರತಿಕ್ರಿಯೆ ನೀಡಿಲ್ಲ ಎಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಪ್ರತಿ ನಾಗರಿಕನಿಗೂ ಪಾದಯಾತ್ರೆ ಕೈಗೊಳ್ಳಲು ಅಥವಾ ಯಾವುದೇ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸ್ವಾತಂತ್ರ್ಯವನ್ನು ಸಂವಿಧಾನ ಕೊಟ್ಟಿದೆ. ರಾಹುಲ್ ಗಾಂಧಿಯವರು ದೇಶದ ಜನರ ಸಮಸ್ಯೆಗಳನ್ನು ಅರಿಯಲು ಹಾಗೂ ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು. ಪ್ರಚೋದನೆ ನೀಡುವುದು ಸಂವಿಧಾನಬಾಹಿರ ನೆಹರೂ ಕುಟುಂಬಕ್ಕೆ ಬೆದರಿಕೆಯಿದ್ದು, ಭಾರತ ಸರ್ಕಾರ ಹಾಗೂ ಅಸ್ಸಾಂ ರಾಜ್ಯ ಸರ್ಕಾರಗಳು ರಾಹುಲ್ ಗಾಂಧಿಯವರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕಾಗಿರುವುದು ಅವರ ಕರ್ತವ್ಯ. ಇದು ಅವರ ಕರ್ತವ್ಯಲೋಪ ಎಸೆಗಿದಂತಾಗುತ್ತದೆ…

Read More

ಬೆಂಗಳೂರು: ಮಕ್ಕಳನ್ನು ಶಾಲೆಗೆ ಕರೆದೊಯ್ಯುವ ಹದಿನಾರು ಚಾಲಕರು ಮಂಗಳವಾರ ಬೆಳಿಗ್ಗೆ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುತ್ತಿರುವುದು ಕಂಡುಬಂದಿದೆ. ಈ ಮೂಲಕ ಬೆಂಗಳೂರಿನ ಶಾಲಾ ಮಕ್ಕಳ ವಾಹನಗಳು ಎಷ್ಟು ಸೇಫ್ ಅನ್ನೋದನ್ನ ಎತ್ತಿ ತೋರಿಸಿ, ಪೋಷಕರ ಶಾಕ್ ಗೆ ಕಾರಣವಾಗಿದೆ. ಈ 16 ಪುರುಷರು ಹೆಚ್ಚಾಗಿ ಮಿನಿ ಬಸ್ಸುಗಳು ಅಥವಾ ಟೆಂಪೊ ಟ್ರಾವೆಲರ್ ಗಳನ್ನು ಚಾಲನೆ ಮಾಡುತ್ತಿದ್ದರು. ಮಕ್ಕಳನ್ನು ಹೊಂದಿರುವ 3,414 ವಾಹನಗಳನ್ನು ತಪಾಸಣೆ ಮಾಡುವಾಗ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಡಿದು ವಾಹನ ಚಲಾಯಿಸುವವರು ತಮ್ಮ ಉಲ್ಲಂಘನೆಗೆ ಅನೇಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ. “ನಾನು ನನ್ನ ಆಪ್ತ ಸ್ನೇಹಿತನ ನಾಮಕರಣ ಸಮಾರಂಭದ ಆಚರಣೆಗೆ ಹೋಗಿದ್ದೆ ಮತ್ತು ಅಲ್ಲಿ ನಾವು ತಡರಾತ್ರಿಯವರೆಗೆ ಪಾರ್ಟಿ ಮಾಡಿದ್ದೇವೆ, ಆಗ ನಾನು ವಿಸ್ಕಿ ಸೇವಿಸಿದ್ದೆ. ಶಾಲಾ ಸಮಯದ ನಂತರ, ನಾನು ಜೀವನೋಪಾಯಕ್ಕಾಗಿ ಆಟೋರಿಕ್ಷಾವನ್ನು ಓಡಿಸುತ್ತೇನೆ ಮತ್ತು ರಾತ್ರಿಯಲ್ಲಿ ದಣಿದಿದ್ದೇನೆ. ಆದ್ದರಿಂದ, ಮಲಗುವ ಮೊದಲು, ನಾನು ಕೆಲವು ಪೆಗ್ಗಳನ್ನು ಹಾಕಿದ್ದೇನೆ. ಆದ್ದರಿಂದ ನನಗೆ ಉತ್ತಮ ನಿದ್ರೆ ಸಿಗುತ್ತದೆ” ಎಂದು…

Read More

ಕಲಬುರಗಿ : ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆಗೆ ಡಿ.ಸಿ. ಕಚೇರಿ ಆಗಮಿಸಿದಾಗ ಮಿನಿ ವಿಧಾನಸೌಧದಲ್ಲಿರುವ ಸಬ್ ರಿಜಿಸ್ಟರ್ ಕಚೇರಿಗೆ ಭೇಟಿ ನೀಡಿದರು. ಕಚೇರಿ ಹೊರಗಡೆ ಜನಜಂಗುಳಿ ಕಂಡ‌ ಸಚಿವರು, ಸಾರ್ವಜನಿಕರನ್ನು ನೊಂದಣಿಗೆ ಸಮಯ ನೀಡಿಲ್ವಾ ಎಂದು ಪ್ರಶ್ನಿಸಿದರು. ಎಲ್ಲರು ಒಂದೆ ಸಮಯಕ್ಕೆ ಬಂದಿರುವುದನ್ನು ಗಮನಿಸಿದ ಸಚಿವರು, ಇಲ್ಲಿ ಟೋಕನ್ ಸಿಸ್ಟಮ್ ಪಾಲಿಸುತ್ತಿಲ್ವಾ ಎಂದು ಸಬ್ ರಿಜಿಸ್ಟಾರ್ ಪಿ.ಶ್ರಿಕಾಂತ ಅವರನ್ನು ಪ್ರಶ್ನಿಸಿದರು. ಪಿ.ಶ್ರೀಕಾಂತ ಉತ್ತರಿಸಿ ಸಾರ್ವಜನಿಕರಿಗೆ ಪೋರ್ಟಲ್ ನಲ್ಲಿ ಸಮಯ ನೀಡಿದ್ದಂತೆ ಮೊದಲು ಬಂದವರಿಗೆ ಅದ್ಯತೆ ನೀಡಲಾಗುತ್ತಿದೆ ಎಂದರು. ಕಾವೇರಿ ತಂತ್ರಾಂಶದಲ್ಲಿ ಸಾರ್ವಜನಿಕರ ಆಸ್ತಿ ನೊಂದಣಿಗೆ ಸ್ವಯಂ ಸಮಯ ದಿನಾಂಕ ನಿಗದಿಪಡಿಸಲು ಅವಕಾಶ ನೀಡಲಾಗಿದೆ. ಅದರಂತೆ ಸಮಯ ನಿಗದಿ ಮಾಡಿಕೊಂಡು ನಿಗದಿತ ಸಮಯಕ್ಕೆ ಬರುವವರನ್ನು ಮೊದಲು ಆದ್ಯತೆ ನೀಡಬೇಕುಮ ಉದಾಹರಣೆಗೆ 10 ಗಂಟೆಗೆ ನೊಂದಣಿ ಸಮಯ‌ ನೀಡಿದಾಗ ವ್ಯಕ್ತಿ 11 ಗಂಟೆಗೆ ಬಂದಲ್ಲಿ ಅಂತಹವರನ್ನು ಕೂಡಿಸಿ 11 ಗಂಟೆ‌ಗೆ ಸರಿಯಾದ ಸಮಯಕ್ಕೆ ಬಂದವರನ್ನು ಮೊದಲು…

Read More

ಅಸ್ಸಾಂ: ಹಿಂಸಾಚಾರ, ಪ್ರಚೋದನೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ಕನ್ಹಯ್ಯ ಕುಮಾರ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ತಿಳಿಸಿದ್ದಾರೆ. “ಕಾಂಗ್ರೆಸ್ ಸದಸ್ಯರು ಇಂದು ಹಿಂಸಾಚಾರ, ಪ್ರಚೋದನೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಕೃತ್ಯಗಳಿಗೆ ಸಂಬಂಧಿಸಿದಂತೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ಕನ್ಹಯ್ಯ ಕುಮಾರ್ ಮತ್ತು ಇತರ ವ್ಯಕ್ತಿಗಳ ವಿರುದ್ಧ ಸೆಕ್ಷನ್ 120 (ಬಿ) 143/147/188/283/353/332/333/427 ಐಪಿಸಿ ಆರ್ / ಡಬ್ಲ್ಯೂ ಸೆಕ್ಷನ್ 3 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ” ಎಂದು ಬಿಸ್ವಾ ಪೋಸ್ಟ್ ಮಾಡಿದ್ದಾರೆ. https://twitter.com/himantabiswa/status/1749830077565837692 https://twitter.com/gpsinghips/status/1749712301023019103 https://kannadanewsnow.com/kannada/karnataka-state-mines-and-geology-department-ranked-3rd-in-the-country-minister-ss-mallikarjun/ https://kannadanewsnow.com/kannada/oscars-2024-nominations-full-list/

Read More

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2024 ರ ಆವೃತ್ತಿಯಲ್ಲಿ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ. ಹೈದರಾಬಾದ್ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಸಮಾರಂಭದಲ್ಲಿ ಭಾರತದ ಮಾಜಿ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಫಾರೂಕ್ ಎಂಜಿನಿಯರ್ ಅವರು ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ಮನ್ ಶುಬ್ಮನ್ ಗಿಲ್ ಪುರುಷರ ವಿಭಾಗದಲ್ಲಿ ಅತ್ಯುತ್ತಮ ಅಂತರರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ನಂತರ ಐಸಿಸಿ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನವನ್ನು ಪಡೆದ ನಾಲ್ಕನೇ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಗಿಲ್ ಪಾತ್ರರಾಗಿದ್ದಾರೆ. ಐಸಿಸಿ ರ್ಯಾಂಕಿಂಗ್ನಲ್ಲಿ ಪಾಕಿಸ್ತಾನದ ಬಾಬರ್ ಅಜಮ್ ಅವರನ್ನು ಹಿಂದಿಕ್ಕಿ ಗಿಲ್ ಅಗ್ರಸ್ಥಾನಕ್ಕೇರಿದ್ದಾರೆ. ವಿಶ್ವದ ಮಾಜಿ ನಂ.1 ಬ್ಯಾಟ್ಸ್ಮನ್ ಏಕದಿನ ಪಂದ್ಯಗಳಲ್ಲಿ ವೇಗವಾಗಿ 2000 ರನ್ ಗಡಿ ದಾಟಿದರು. 2019 ರ ನಂತರ ಮೊದಲ ಬಾರಿಗೆ ಬಿಸಿಸಿಐ ಪ್ರಶಸ್ತಿಗಳನ್ನು ನೀಡಲಾಯಿತು. ಸೂಪರ್ಸ್ಟಾರ್ ಗಿಲ್ 2022-23ನೇ…

Read More