Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಿಬಿಎಂಪಿ ಚುನಾವಣೆ ಯಾವಾಗ ಎನ್ನುವುದೇ ಅನೇಕರ ಕುತೂಹಲವಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಗ್ ಅಪ್ ಡೇಟ್ ಒಂದನ್ನು ಕೊಟ್ಟಿದ್ದಾರೆ. ಅದೇನು ಅಂತ ಮುಂದೆ ಓದಿ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪಕ್ಷದ ಬೆಂಗಳೂರು ನಗರದ ಬ್ಲಾಕ್ ನಾಯಕರ ಜತೆ ಪಾಲಿಕೆ ಚುನಾವಣೆ ಸಿದ್ಧತೆ ಬಗ್ಗೆ ಸಭೆ ಮಾಡಿದ್ದೇವೆ. ಖಾಲಿ ಇರುವ ಪದಾಧಿಕಾರಿಗಳ ಹುದ್ದೆ ತುಂಬಲು, ನಿಷ್ಕ್ರಿಯರಾಗಿರುವ ಪದಾಧಿಕಾರಿಗಳ ಜಾಗಕ್ಕೆ ಬೇರೆಯವರನ್ನು ನೇಮಿಸುವಂತೆ ಸೂಚನೆ ನೀಡಿದ್ದು ಒಂದು ತಿಂಗಳ ಕಾಲಾವಕಾಶ ನೀಡಿದ್ದೇವೆ. ಪಾಲಿಕೆ ಚುನಾವಣೆ ಶೀಘ್ರವೇ ಪ್ರಕಟವಾಗಲಿದ್ದು, ಅಷ್ಟರ ಹೊತ್ತಿಗೆ ಪಕ್ಷವನ್ನು ಸಜ್ಜುಗೊಳಿಸಬೇಕು. ಬೆಂಗಳೂರು ನಗರದಲ್ಲಿ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ನಾವು ಸೋತಿರಬಹುದು, ಆದರೆ ಪಾಲಿಕೆ ಚುನಾವಣೆಯಲ್ಲಿ ನಾವು ಚೇತರಿಸಿಕೊಳ್ಳುವ ವಿಶ್ವಾಸ ನನಗಿದೆ ಎಂದರು. ಯಡಿಯೂರಪ್ಪ ಅವರ ಪ್ರಕರಣದಲ್ಲಿ ದ್ವೇಷ ರಾಜಕಾರಣ ನಡೆಯುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಇದು ಕಾನೂನಿನ ಪ್ರಕ್ರಿಯೆ. ಬಿಜೆಪಿ ನಾಯಕರು ನಮ್ಮ ಹೆಸರು ಯಾಕೆ ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿದಿಲ್ಲ.…
ಮಂಡ್ಯ: ಜಿಲ್ಲೆಯ ಜನರಿಗೆ ಕಾವೇರಿ ನೀರು ಬೇಕಿದೆ. ಅನ್ಯಾಯ ಆಗಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜೊತೆ ಚರ್ಚಿಸಿ ಸರಿಪಡಿಸುವ ಕೆಲಸ ಮಾಡ್ತೇನೆ ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಇಂದು ಮಂಡ್ಯ ಜಿಲ್ಲೆಗೆ ಕೇಂದ್ರ ಸಚಿವರಾದ ಬಳಿಕ ಆಗಮಿಸಿದಂತ ಅವರನ್ನು, ಅದ್ಧೂರಿಯಾಗಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು. ಈ ಬಳಿಕ ಮದ್ದೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಬಹುಮತದಿಂದ ಗೆಲ್ಲಿಸಿದ್ದಿರಿ. ಮಂಡ್ಯ ಜಿಲ್ಲೆಗು, ನನಗೂ, ದೇವೇಗೌಡ್ರುಗು ಅನುಬಂಧ ಇದೆ. ಕಳೆದ ಚುನಾವಣೆಯಲ್ಲಿ ನಾನು ನಿಲ್ಲಲು ಒತ್ತಡ ಹಾಕಿದ್ರಿ. ನರೇಂದ್ರ ಮೋದಿ ನಾಯಕತ್ವದಲ್ಲಿ ಕೇಂದ್ರದಲ್ಲಿ ಎರಡೂ ಇಲಾಖೆ ಕೊಟ್ಟಿದ್ದಾರೆ. ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವ ಸ್ಥಾನ ಕೊಟ್ಟಿದ್ದಾರೆ. ರೈತರ ಸಮಸ್ಯೆಗಳನ್ನು ಬಗೆಹರಿಸುವ ಆಸೆ ನನ್ನದು ಎಂದರು. ಯುವಕರಿಗೆ ಉದ್ಯೋಗಗಳನ್ನು ಕೊಡಿಸುವ ಜವಾಬ್ದಾರಿ ಇದೆ. ನನ್ನ ಇಲಾಖೆ ಮಂತ್ರಿ ಅಲ್ಲ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾಡ್ತೇನೆ. ಜಿಲ್ಲೆಯ ಅಭಿವೃದ್ಧಿ ಕಂಡಿಲ್ಲ. 50 ವರ್ಷದಿಂದ ಹಾಗೇ…
ಬೆಂಗಳೂರು: ಗ್ಯಾರಂಟಿಗಳನ್ನು ಈಡೇರಿಸಲು ಆಗದೆ ಸಂದಿಗ್ಧ ಪರಿಸ್ಥಿತಿಯಲ್ಲಿರುವ ರಾಜ್ಯದ ಕಾಂಗ್ರೆಸ್ ಸರಕಾರವು, ಇವತ್ತು ಪೆಟ್ರೋಲ್ ದರವನ್ನು ಪ್ರತಿ ಲೀಟರ್ಗೆ 3 ರೂ., ಡೀಸೆಲ್ ದರವನ್ನು 3.50 ರೂ. ಏರಿಸಿದೆ. ಈ ಮೂಲಕ ರಾಜ್ಯದ ಜನರ ಮೇಲೆ ಬರೆ ಹಾಕಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬರಗಾಲದಂಥ ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ಜನರ ಮೇಲೆ ಹೊರೆ ಹಾಕಿರುವುದು ಅಕ್ಷಮ್ಯ ಅಪರಾಧ. ಮುಖ್ಯಮಂತ್ರಿಗಳು ತಮ್ಮ ಭಂಡತನವನ್ನು ಬಿಟ್ಟು ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಇಲ್ಲವಾದಲ್ಲಿ ಮುಂದಿನ ಸೋಮವಾರ ಬಿಜೆಪಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ, ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು. ಒಂದೆಡೆ ಸೋಲಿನ ಹತಾಶೆ ಇದ್ದರೆ, ಇನ್ನೊಂದೆಡೆ ರಾಜ್ಯದ ಹಣಕಾಸು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಭಂಡ ಸರಕಾರ ಮತ್ತು ಮುಖ್ಯಮಂತ್ರಿಗಳು ಇದನ್ನು ಒಪ್ಪಿಕೊಳ್ಳುವುದಿಲ್ಲ. ಆರ್ಥಿಕ…
ಬೆಳಗಾವಿ : ಪ್ರಸಕ್ತ ಮಾನ್ಸೂನ್ ಋತುವಿನಲ್ಲಿ ರಾಜ್ಯಕ್ಕೆ ಉತ್ತಮ ಮಳೆಯಾಗಲಿದೆ. ಹಲವೆಡೆ ಪ್ರವಾಹ ಸ್ಥಿತಿ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಅಧಿಕಾರಿಗಳು ಪ್ರವಾಹ ಪೀಡಿತ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಾಕೀತು ಮಾಡಿದರು. ಬೆಳಗಾವಿಯ ಸುವರ್ಣಸೌಧ ಭವನದಲ್ಲಿ ಶನಿವಾರ ಬೆಳಗಾವಿ ವಿಭಾಗದ ಜಿಲ್ಲೆಗಳ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಹಾಗೂ ಮಳೆ, ಪ್ರವಾಹ ವಿಷಯದ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನಾ ಸಭೆ ನಡೆಸಿದರು. ಮೊದಲಿಗೆ ಕಳೆದ ಒಂದು ವರ್ಷದಲ್ಲಿ ಬೆಳಗಾವಿ ವಿಭಾಗದಲ್ಲಿ ಸಾಕಷ್ಟು ಪ್ರಗತಿ ಕೆಲಸಗಳಾಗಿರುವುದನ್ನು ತಿಳಿಸಿ ಅಧಿಕಾರಿಗಳಿಗೆ ಅಭಿನಂದಿಸಿದರು. ಆದರೂ, ಕೆಲವು ಅಧಿಕಾರಿಗಳು ನಿರೀಕ್ಷಿತ ಮಟ್ಟದಲ್ಲಿ ಕೆಲಸ ನಿರ್ವಹಿಸದಿರುವುದರಿಂದ ಮುಂದಿನ ದಿನಗಳಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಲು ಸೂಚಿಸಿದರು. ಮಳೆಗಾಲ ನಿರ್ವಹಣೆ ಬಗ್ಗೆ ಗಮನ ಸೆಳೆದ ಅವರು, “ಈ ವರ್ಷದ ಮಳೆಗಾಲದಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ. ಹೀಗಾಗಿ ಹಲವಾರು ಪ್ರದೇಶಗಳು ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆಗಳಿವೆ. ಜನ ಪ್ರವಾಹಕ್ಕೆ ತುತ್ತಾಗಿ ಅವಘಡಗಳು ಸಂಭವಿಸಿದ…
ಬೆಳಗಾವಿ: ರಾಜ್ಯದಲ್ಲಿ ಕಂದಾಯ ಸರ್ಕಾರಿ ಭೂಮಿ ಒತ್ತುವರಿ ತಗೆಡೆ ಕ್ರಮ ವಹಿಸಲಾಗಿದೆ. ಇದಕ್ಕಾಗಿ ಬೀಟ್ ಆ್ಯಪ್ ಎಂಬುದನ್ನು ತರಲಾಗಿದೆ. ಇದರ ಮೂಲಕ ಸರ್ಕಾರಿ ಜಮೀನು ರಕ್ಷಣೆ ಮಾಡುವಂತ ಕೆಲಸವಾಗುತ್ತಿದೆ. ಬೀಟ್ ಆ್ಯಪ್ ಮೂಲಕ ಸರ್ಕಾರಿ ಭೂಮಿ ಒತ್ತುವರಿ ತಡೆಯಬೇಕು ಎಂಬುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಖಡಕ್ ಸೂಚನೆ ನೀಡಿದರು. ಇಂದು ಬೆಳಗಾವಿಯ ಸುವರ್ಣಸೌಧ ಭವನದಲ್ಲಿ ಶನಿವಾರ ಬೆಳಗಾವಿ ವಿಭಾಗದ ಜಿಲ್ಲೆಗಳ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಹಾಗೂ ಮಳೆ, ಪ್ರವಾಹ ವಿಷಯದ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನಾ ಸಭೆ ನಡೆಸಿದರು. ಈ ಬಳಿಕ ಮಾತನಾಡಿದಂತ ಅವರು, ಸರ್ಕಾರಿ ಒತ್ತುವರಿ ತೆರವುಗೊಳಿಸಲು ಈಗಾಗಲೇ ಅಧಿಕಾರಿಗಳಿಗೆ ಬೀಟ್ ಆ್ಯಪ್ ನೀಡಗಿದೆ. ಇದರ ಸಹಾಯದಿಂದ ಸರ್ಕಾರಿ ಆಸ್ತಿಯನ್ನು ಉಳಿಸುವ ಕೆಲಸ ಆಗಬೇಕು ಎಂದು ತಿಳಿಸಿದರು. ಈ ಬಗ್ಗೆ ಗಮನ ಸೆಳೆದ ಅವರು, “ಎಲ್ಲಾ ಜಿಲ್ಲೆಯಲ್ಲೂ ಸರ್ಕಾರಿ ಭೂ ಒತ್ತುವರಿ ದೊಡ್ಡ ಸಮಸ್ಯೆಯಾಗಿದೆ. ಮುಖ್ಯಂತ್ರಿಗಳಿಗೆ ಉತ್ತರ ನೀಡುವುದು ಕಷ್ಟವಾಗಿದೆ. ಹೀಗಾಗಿ ಮೊದಲು ನಮ್ಮ ದಾಖಲೆಯಲ್ಲಿರುವ ಸರ್ಕಾರಿ…
ಬೆಂಗಳೂರು: ನಗರದಲ್ಲಿ ಬಿಬಿಎಂಪಿಯಿಂದ ಅನಧಿಕೃತ ಫ್ಲೆಕ್ಸ್ ಗಳ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಲಾಗಿದೆ. ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಇದುವರೆಗೆ ಪೊಲೀಸ್ ಠಾಣೆಯಲ್ಲಿ 76 ದೂರುಗಳನ್ನು ನೀಡಿದ್ದು, 48 ಎಫ್ಐಆರ್ ದಾಖಲಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಅನಧಿಕೃತ ಜಾಹೀರಾತುಗಳು ಇರದಂತೆ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಅದರಂತೆ ಮುಖ್ಯ ಆಯುಕ್ತರು ಸೂಚನೆ ನೀಡಿರುತ್ತಾರೆ. ಅದರಂತೆ ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ರವರು ಎಲ್ಲಾ 8 ವಲಯಗಳ ಅಧಿಕಾರಿಗಳ ಜೊತೆ ಪ್ರತಿನಿತ್ಯ ಪರಿಶೀಲನಾ ಸಭೆ ನಡೆಸುತ್ತಿದ್ದು, ಯಾವುದೇ ಅನಧಿಕೃತ ಜಾಹೀರಾತುಗಳು ಇರದಂತೆ ಸೂಚನೆ ನೀಡುವ ಜೊತೆಗೆ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ಸ್ ಹಾಕುವವರ ಮೇಲೆ ಎಫ್.ಐ.ಆರ್ ದಾಖಲಿಸಲು ಸೂಚನೆ ನೀಡಿದ್ದಾರೆ. ನಗರದಾದ್ಯಂತ ದಿನಾಂಕ: 01-06-2024 ರಿಂದ ನಿನ್ನೆಯವರೆಗೆ 3843 ಫ್ಲೆಕ್ಸ್, ಬ್ಯಾನರ್, ಎಲ್.ಇ.ಡಿ ಹಾಗೂ ಹೋರ್ಡಿಂಗ್ಸ್ ಗಳನ್ನು ತೆರವುಗೊಳಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ 76 ದೂರುಗಳನ್ನು…
ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ ₹3 ಮತ್ತು ₹3.5 ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಜನಸಾಮಾನ್ಯರ ಮೇಲೆ ಭೀಕರ ಬರೆ ಎಳೆದಿದೆ. ಇದು ಸರ್ಕಾರದ ಬೊಕ್ಕಸ ಖಾಲಿಯಾಗಿರುವುದನ್ನು ಸೂಚಿಸುತ್ತದೆ. ಅಸಮರ್ಪಕವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಸಂಕಷ್ಟಕ್ಕೆ ಸಿಲುಕಿರುವ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಭಾರವನ್ನು ಹೊರಿಸುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ ಜಗದೀಶ್ ವಿ. ಸದಂ ಕಿಡಿಕಾರಿದ್ದಾರೆ. ದಿಢೀರ್ ಪೆಟ್ರೋಲ್, ಡೀಸೆಲ್ ದರ ಏರಿಕೆ ವಿಚಾರವಾಗಿ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್, ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಜನಪ್ರಿಯ ಯೋಜನೆಗಳನ್ನು ನಕಲು ಮಾಡಿದ ಸಿದ್ದರಾಮಯ್ಯನವರು ಅಧ್ಯಯನ ರಹಿತವಾಗಿ ತರಾತುರಿಯಲ್ಲಿ ಅನುಷ್ಠಾನಗೊಳಿಸಿದ್ದರಿಂದ, ನಿರಂತರವಾಗಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಯುವಲ್ಲಿ ವಿಫಲಗೊಂಡಿರುವುದರಿಂದ ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಹಾಗಾಗಿ ಮದ್ಯ ಮತ್ತು ಪೆಟ್ರೋಲ್, ಡೀಸೆಲ್ ದರವನ್ನು ಭಾರಿ ಪ್ರಮಾಣದಲ್ಲಿ ಏರಿಕೆ…
ನಮ್ಮಲ್ಲಿ ಪ್ರತಿಯೊಬ್ಬರೂ ಕೂಡ ಹಣವನ್ನು ಸಂಪಾದನೆ ಮಾಡಬೇಕು ನಮ್ಮ ಆಸೆಗಳನ್ನು ಈಡೇರಿಸಿಕೊಳ್ಳಬೇಕು ಎಂಬ ಕನಸನ್ನು ಇಟ್ಟು ಕೊಂಡಿರುತ್ತಾರೆ. ಆದರೆ ಕೆಲವೊಂದಷ್ಟು ಜನರಿಗೆ ಇದು ಸಾಧ್ಯವಾಗುವುದಿಲ್ಲ ಎಷ್ಟೇ ಕಷ್ಟಪಟ್ಟು ಸಂಪಾದನೆ ಮಾಡಿದರು ಒಂದಲ ಒಂದು ರೀತಿಯಾಗಿ ಹಣ ಖರ್ಚಾಗುತ್ತಿರುತ್ತದೆ ಹಾಗೂ ಇನ್ನೂ ಕೆಲವೊಂದಷ್ಟು ಜನರು ಎಷ್ಟೇ ಪ್ರಯತ್ನ ಪಟ್ಟರು ಅತಿ ಹೆಚ್ಚಿನ ಹಣವನ್ನು ಸಂಪಾದನೆ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಇಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರು ಈ ಒಂದು ಪರಿಹಾರವನ್ನು ಮಾಡಿಕೊಳ್ಳುವು ದರಿಂದ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ಅದೇನೆಂದು ನೋಡುವುದಾದರೆ 2 ರಿಂದ 4 ಲವಂಗವನ್ನು ಮಲ್ಲಿಗೆ ಎಣ್ಣೆಯಲ್ಲಿ ಹಾಕಿ ಆಂಜನೇಯನ ಮುಂದೆ ದೀಪವನ್ನು ಹಚ್ಚುವುದರಿಂದ ಅಲ್ಲಿ ನಿಮ್ಮ ಕೋರಿಕೆಗಳನ್ನು ಹೇಳಿಕೊಳ್ಳುವುದರ ಮೂಲಕ ದೀಪ ಹಚ್ಚಬೇಕು ಈ ರೀತಿ ಮಾಡುವುದರಿಂದ ನೀವು ಅಂತಹ ಒಂದು ಸಂಕಷ್ಟದಿಂದ ಪಾರಾಗಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆ ಬಿಜೆಪಿಗೆ ಕನ್ನಡಿಗರು ಮತ ಹಾಕಿದ್ದಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿ ಸೇಡು ತೀರಿಸಿಕೊಂಡಿದೆ ಅಂತ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಕಾಂಗ್ರೆಸ್ ಸೇಡು: ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಂತ ಕಿಡಿಕಾರಿದ್ದಾರೆ. ಅವೈಜ್ಞಾನಿಕ ಗ್ಯಾರೆಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ ಎಂದು ಗುಡುಗಿದ್ದಾರೆ. ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ಧರಾಮಯ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ ಅಂತ ವಾಗ್ಧಾಳಿ ನಡೆಸಿದ್ದಾರೆ. https://kannadanewsnow.com/kannada/petrol-price-hiked-by-rs-3-diesel-by-rs-3-5-per-litre-across-the-state/ https://kannadanewsnow.com/kannada/state-govt-hikes-taxes-on-petrol-diesel-rates-to-go-up-soon/
ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಲಾಗಿದೆ. ಇದರಿಂದ ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರೀ ಏರಿಕೆಯಾಗಲಿದೆ. ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಂತೆ ಆಗಲಿದೆ. ಇದನ್ನು ಖಂಡಿಸಿ ರಾಜ್ಯಾಧ್ಯಂತ ಜೂನ್.17ರಂದು ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ರೀಟೆಲ್ ಸೇಲ್ಸ್ ಟ್ಯಾಕ್ಸ್ ದರವನ್ನು ಹೆಚ್ಚಳ ಮಾಡಿ ಆದೇಶಿಸಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9% ಹೆಚ್ಚಳ)ಯಾಗಿದೆ. ಅಂತೆಯೇ ಡಿಸೇಲ್ ಈ ಹಿಂದೆ- 14.34% ಇದ್ದದ್ದು, ಈಗ 18.44%ಗೆ ಏರಿಕೆ ಅಂದರೆ 4.1% ರಷ್ಟು ಏರಿಕೆ ಕಂಡಂತೆ ಆಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಿಡಿದೆದ್ದಿದೆ. ಜೂನ್.17ರಂದು ರಾಜ್ಯಾಧ್ಯಂತ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಪ್ರತಿಭಟನೆ ನಡೆಸೋದಕ್ಕೆ ನಿರ್ಧಾರ ಕೈಗೊಂಡಿರೋದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ…