Author: kannadanewsnow09

ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿಯವರು ಜ.22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದಾರೆ. ರಾಮ ಮಂದಿರ ಕೂಡ ಉದ್ಘಾಟನೆ ಮಾಡಲಾಗಿದೆ. ಹಾಗಾದ್ರೇ ಅಯೋಧ್ಯೆಯಲ್ಲಿ ಇತ್ತೀಚೆಗೆ ನಿರ್ಮಿಸಲಾದ ಶ್ರೀರಾಮ ಮಂದಿರದ ಆಸಕ್ತಿದಾಯಕ ವಿವರಗಳನ್ನು ಮುಂದೆ ಓದಿ. ಅಯೋಧ್ಯೆ ರಾಮಮಂದಿರವು ಯಾವುದೇ ತೆರಿಗೆದಾರರ ಹಣ ಒಳಗೊಂಡಿಲ್ಲ. ಇದು ಸುಮಾರು 5000 ಕೋಟಿ ರೂ.ಗಳ ಸಾರ್ವಜನಿಕ ದೇಣಿಗೆಗಳ ಮೂಲಕ ಮತ್ತು ಎಣಿಕೆಯ ಮೂಲಕ ಸಂಪೂರ್ಣವಾಗಿ ಹಣಕಾಸು ಒದಗಿಸುತ್ತದೆ. ರಾಮ ಮಂದಿರ ನಿರ್ಮಾಣದ ಪ್ರಮುಖ ಲಕ್ಷಣಗಳು ಮುಖ್ಯ ವಾಸ್ತುಶಿಲ್ಪಿಗಳು – ಚಂದ್ರಕಾಂತ್ ಸೋಂಪುರ, ನಿಖಿಲ್ ಸೋಂಪುರ ಮತ್ತು ಆಶಿಶ್ ಸೋಂಪುರ. ವಿನ್ಯಾಸ ಸಲಹೆಗಾರರು – ಐಐಟಿ ಗುವಾಹಟಿ, ಐಐಟಿ ಚೆನ್ನೈ, ಐಐಟಿ ಬಾಂಬೆ, ಎನ್ಐಟಿ ಸೂರತ್, ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್ಸ್ಟಿಟ್ಯೂಟ್ ರೂರ್ಕಿ, ನ್ಯಾಷನಲ್ ಜಿಯೋ ರಿಸರ್ಚ್ ಇನ್ಸ್ಟಿಟ್ಯೂಟ್ ಹೈದರಾಬಾದ್ ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್. ನಿರ್ಮಾಣ ಕಂಪನಿ – ಲಾರ್ಸೆನ್ ಮತ್ತು ಟೌಬ್ರೊ (ಎಲ್ &ಟಿ) ಯೋಜನೆ. ಮ್ಯಾನೇಜ್ಮೆಂಟ್…

Read More

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯು ಇದೇ 27ರಂದು ಅರಮನೆ ಮೈದಾನದಲ್ಲಿ (ಗೇಟ್ ನಂಬರ್ 4) ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದರು. ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಸಭೆ ಇರಲಿದೆ ಎಂದರು. ಕಲಬುರ್ಗಿ ಜಿಲ್ಲೆಯ ಗ್ರಾಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರರ ಪುತ್ಥಳಿಗೆ ಕಿಡಿಗೇಡಿಗಳು ಅವಮಾನ ಮಾಡಿದ್ದಾರೆ. ಬಿಜೆಪಿ ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಹೋಗಿದೆ ಎಂಬುದಕ್ಕೆ ಇದು ಉದಾಹರಣೆ. ಯಾವುದೇ ರೀತಿಯ ರಕ್ಷಣೆ ಕೊಡುವ ಕೆಲಸವನ್ನು ಈ ಸರಕಾರ ಮಾಡಿಲ್ಲ ಎಂದು ಟೀಕಿಸಿದರು. ಅಂಬೇಡ್ಕರರ ಪುತ್ಥಳಿಗೆ ಅವಮಾನ ಮಾಡಿದರೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಅರ್ಚಕರಿಗೆ ತಸ್ತೀಕ್ ಹಣವನ್ನು ಪಾವತಿ ಮಾಡಲಾಗುತ್ತಿದೆ. ಆದ್ರೇ ರಾಜ್ಯ ಸರ್ಕಾರ ನಿಗದಿ ಪಡಿಸಿದ್ದಂತ ತಸ್ತೀಕ್ ಹಣ ಪಾವತಿಸೋದು ಬಿಟ್ಟು, ಹೆಚ್ಚುವರಿಯಾಗಿ ಬರೋಬ್ಬರಿ 4.74 ಲಕ್ಷವನ್ನು ಚಿಕ್ಕಮಗಳೂರಲ್ಲಿ ಪಾವತಿಸಲಾಗಿದೆ. ಹೀಗಾಗಿ ತಹಶೀಲ್ದಾರ್ ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೋಟಿಸ್ ನೀಡಿದ್ದಾರೆ. ಈ ಕುರಿತಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿರುವಂತ ಅವರು, ಚಿಕ್ಕಮಗಳೂರು ಜಿಲ್ಲೆ, ಚಿಕ್ಕಮಗಳೂರು ತಾಲೂಕು, ಹಿರೇಮಗಳೂರು ಕೋದಂಡರಾಮಸ್ವಾಮಿ ದೇವಾಲಯದ ಅರ್ಚಕರಿಗೆ ಹೆಚ್ಚುವರಿಯಾಗಿ ಪಾವತಿಸಿರುವ ತಸ್ತಿಕ್ ಮೊತ್ತವನ್ನು ದೇವಾಲಯದ ಖಾತೆಗೆ ಹಿಂದಿರುಗಿಸುವ ಸಂಬಂಧ ತಹಶೀಲ್ದಾ‌ ಚಿಕ್ಕಮಗಳೂರು ಇವರು ಅರ್ಚಕರಿಗೆ ನೀಡಿರುವ ನೋಟೀಸಿಗೆ ಸಂಬಂಧ ಪಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯಲಾಗಿದೆ ಎಂದಿದ್ದಾರೆ. ಇದರಂತೆ ಸದರಿ ದೇವಾಲಯಕ್ಕೆ 2013-14 ರಿಂದ 2016-17ರವರೆಗೆ ವಾರ್ಷಿಕ ರೂ. 24,000/-(ಇಪ್ಪತ್ತಾರು ಸಾವಿರಗಳನ್ನು ಆಸೀಕ್ ಮೊತ್ತವಾಗಿ ಅರ್ಚಕರಿಗೆ ಪಾವತಿಸಬೇಕಿದ್ದು ತಪ್ಪಾಗಿ ವಾರ್ಷಿಕ ಪಾವತಿಸಿದ್ದು ಹೆಚ್ಚುವರಿಯಾಗಿ ವಾರ್ಷಿಕವಾಗಿ ರೂ.55,000/-ಗಳನ್ನು ಪಾವತಿಸಲಾಗಿದ್ದು, ಹಾಗೂ 2017-18ನೇ ಸಾಲಿನ 2021-22ನೇ ಸಾಲಿನವರೆಗೆ ವಾರ್ಷಿಕ ರೂ 48,000/-ಗಳ ತಸ್ತೀಕ್ ಮೊತ್ರ ಅರ್ಚಕರಿಗೆ…

Read More

ಹುಬ್ಬಳ್ಳಿ: ಜಿಲ್ಲೆಯಲ್ಲಿ ಇಂದು ಪೊಲೀಸರ ಮುಂದೆಯೇ ಎರಡು ಕುಟುಂಬಗಳು ಮಾರಾಮಾರಿ ಮಾಡಿಕೊಂಡಿರೋ ಘಟನೆ ಶಿವಶಂಕರ ಕಾಲೋನಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ 6 ಜನರು ಗಾಯಗೊಂಡಿದ್ದಾರೆ. ಹುಬ್ಬಳ್ಳಿಯ ಶಿವಶಂಕರ ಕಾಲೋನಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಅಂಚಟಗೇರಿ ಹಾಗೂ ಕೌದಿ ಕುಟುಂಬಸ್ಥರು ಹೊಡೆದಾಡಿಕೊಂಡಿದ್ದಾರೆ. ಇಟ್ಟಿಗೆ, ಕೋಲು ಹಿಡಿದು ನಡು ರಸ್ತೆಯಲ್ಲೇ ಬಡಿದಾಡಿಕೊಂಡಿದ್ದಾರೆ. ಹೊಯ್ಸಳ ಪೊಲೀಸರು ಸ್ಥಳದಲ್ಲೇ ಇದ್ದರೂ ಕೌದಿ ಮತ್ತು ಅಂಚಟಗೇರಿ ಕುಟುಂಬಸ್ಥರು ಗಲಾಟೆ ಮಾಡಿಕೊಂಡು ಬಡಿದಾಡಿಕೊಂಡಿದ್ದಾರೆ. ಈ ಘಟನೆಯಲ್ಲಿ ಆರು ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/breaking-7-1-magnitude-earthquake-hits-kyrgyzstan-china-border-several-injured-earthquake/ https://kannadanewsnow.com/kannada/breaking-sensex-plunges-over-1300-points-investors-lose-rs-5-9-lakh-crore-loss-of-wealth/

Read More

ಬೆಂಗಳೂರು: ಜನವರಿ.19ರಂದು ನಡೆಯಬೇಕಿದ್ದಂತ ರಾಜ್ಯ ಬಿಜೆಪು ಕಾರ್ಯಕಾರಿಣಿ ಸಭೆಯನ್ನು, ಜನವರಿ.27ಕ್ಕೆ ಮರು ನಿಗದಿ ಮಾಡಲಾಗಿದೆ. ಅಂದು ಕೇಂದ್ರ ಸಚಿವರು ಸೇರಿದಂತೆ ವಿವಿಧ ಬಿಜೆಪಿ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜನವರಿ.19ಕ್ಕೆ ನಿಗದಿಯಾಗಿದ್ದಂತ ಕರ್ನಾಟಕ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ವಿವಿಧ ಕಾರಣಗಳಿಂದ ಮುಂದೂಡಿಕೆ ಮಾಡಲಾಗಿತ್ತು. ಈ ಸಭೆಯನ್ನು ಜನವರಿ.27ಕ್ಕೆ ಮರು ನಿಗದಿ ಮಾಡಲಾಗಿದೆ. ಜನವರಿ.27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಅಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಸೇರಿದಂತೆ ವಿವಿಧ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. https://kannadanewsnow.com/kannada/breaking-7-1-magnitude-earthquake-hits-kyrgyzstan-china-border-several-injured-earthquake/ https://kannadanewsnow.com/kannada/breaking-sensex-plunges-over-1300-points-investors-lose-rs-5-9-lakh-crore-loss-of-wealth/

Read More

ಹುಬ್ಬಳ್ಳಿ: ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಸ್ಪರ್ಧಿಗಳಾಗಿ ಬೇರೆಯವರು ಕಣಕ್ಕೆ ಇಳಿಯಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ದೊಡ್ಡಗೌಡರ ಕುಟುಂಬದ ಹೊರತಾಗಿ ಮತ್ತೊಬ್ಬರು ನಿಲ್ಲಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ನಾನೇ ಸ್ಪರ್ಧೆ ಮಾಡೋದಾಗಿ ಸಂಸದ ಪ್ರಜ್ಪಲ್ ರೇವಣ್ಣ ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧೆ ಮಾಡುತ್ತೇನೆ. ಬೇರೆ ಯಾರೂ ಸ್ಪರ್ಧೆ ಮಾಡೋದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದರು. ದೊಡ್ಡವರು ಹೇಳಿದ್ದಾರೆ. ಹೀಗಾಗಿ ಹಾಸನ ಲೋಕಸಭಾ ಕ್ಷೇತ್ರದಿಂದ ಈ ಬಾರಿಯೂ ನಾನೇ ಚುನಾವಣೆಗೆ ಸ್ಪರ್ಧಿಸುತ್ತೇನೆ. ಟಿಕೆಟ್ ವಿಚಾರವಾಗಿ ಕುಮಾರಣ್ಣನೇ ಉತ್ತರ ಕೊಡ್ತಾರೆ ಎಂದರು. https://kannadanewsnow.com/kannada/breaking-7-1-magnitude-earthquake-hits-kyrgyzstan-china-border-several-injured-earthquake/ https://kannadanewsnow.com/kannada/breaking-sensex-plunges-over-1300-points-investors-lose-rs-5-9-lakh-crore-loss-of-wealth/

Read More

ಬೆಂಗಳೂರು : “ಬಿಜೆಪಿ ಗೂಂಡಾಗಳು ಕೈಯಲ್ಲಿ ಮಂತ್ರಾಕ್ಷತೆ ಹಿಡಿದಿದ್ದರೆ, ಬಗಲಲ್ಲಿ ದೊಣ್ಣೆ ಸಿಕ್ಕಿಸಿಕೊಂಡಿದ್ದಾರೆ ಹಿಡಿದಿದ್ದಾರೆ. ಈ ಗೂಂಡಾಗಳ ಗೊಡ್ಡು ಬೆದರಿಕೆಗೆ ಯಾವುದೇ ಕಾಂಗ್ರೆಸಿಗ ಹೆದರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಈ ಯಾತ್ರೆಯನ್ನು ತಡೆಯಲಾಗಿದೆ. ಇಂದು ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆಮೂಲಕ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬದುಕಿದೆಯೋ ಸತ್ತಿದೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಅಸ್ಸಾಂ ಸರ್ಕಾರದ ಈ ನಡೆಯನ್ನು ನಾವೆಲ್ಲರೂ ಖಂಡಿಸುತ್ತೇವೆ ಎಂದರು. ರಾಹುಲ್ ಗಾಂಧಿ ಅವರು ದೇಶದ ಮನಸ್ಸುಗಳನ್ನು ಒಗ್ಗೂಡಿಸಲು, ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ, ಅವರಿಗೆ ನ್ಯಾಯ ಒದಗಿಸಲು ಮಣಿಪುರದಿಂದ ಮುಂಬೈವರೆಗೂ ಎರಡನೇ ಹಂತದ ಭಾರತ ಜೋಡೋ ನ್ಯಾಯ ಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಯಾತ್ರೆಯಿಂದ ಬಿಜೆಪಿ ನಾಯಕರಲ್ಲಿ…

Read More

ಉತ್ತರ ಪ್ರದೇಶ: ರಾಮ ಮಂದಿರಕ್ಕೆ ಕೊಡುಗೆ ನೀಡುವ ಮೂಲಕ ತೆರಿಗೆದಾರರು ಆದಾಯ ತೆರಿಗೆಯನ್ನು ಉಳಿಸಬಹುದು. ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವೆಬ್ಸೈಟ್ ಪ್ರಕಾರ, “ಕೇಂದ್ರ ಸರ್ಕಾರವು 2020-2021 ರ ಹಣಕಾಸು ವರ್ಷದಿಂದ “ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ” (ಪ್ಯಾನ್: AAZTS6197B) ಅನ್ನು ಐತಿಹಾಸಿಕ ಪ್ರಾಮುಖ್ಯತೆಯ ಸ್ಥಳ ಮತ್ತು ಪ್ರಸಿದ್ಧ ಸಾರ್ವಜನಿಕ ಪೂಜಾ ಸ್ಥಳವೆಂದು ಅಧಿಸೂಚನೆ ಹೊರಡಿಸಿದೆ. ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ಮಂದಿರದ ನವೀಕರಣ / ದುರಸ್ತಿಯ ಉದ್ದೇಶಕ್ಕಾಗಿ ಸ್ವಯಂಪ್ರೇರಿತ ಕೊಡುಗೆಯ 50% ಆದಾಯ ತೆರಿಗೆ ಕಾಯ್ದೆ, 1961 ರ ಸೆಕ್ಷನ್ 80 ಜಿ ಅಡಿಯಲ್ಲಿ ಉಲ್ಲೇಖಿಸಲಾದ ಇತರ ಷರತ್ತುಗಳಿಗೆ ಒಳಪಟ್ಟು ಸೆಕ್ಷನ್ 80 ಜಿ (2) (ಬಿ) ಅಡಿಯಲ್ಲಿ ಕಡಿತಕ್ಕೆ ಅರ್ಹವಾಗಿದೆ. 2000 ರೂ.ಗಿಂತ ಹೆಚ್ಚಿನ ನಗದು ದೇಣಿಗೆಗೆ ತೆರಿಗೆ ವಿನಾಯಿತಿ ನೀಡಲು ಅನುಮತಿಸಲಾಗುವುದಿಲ್ಲ. ಸೆಕ್ಷನ್ 80 ಸಿ ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 80 ಜಿ ನಿರ್ದಿಷ್ಟ ಪರಿಹಾರ ನಿಧಿಗಳು ಮತ್ತು ದತ್ತಿ…

Read More

ಬೆಂಗಳೂರು: ಇಂದು ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದಂತ ವಾಹನ ಸವಾರರಿಗೆ ಟ್ರಾಫಿಕ್ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿ ಬರೋಬ್ಬರಿ 525 ಸವಾರರ ವಿರುದ್ಧ ಕೇಸ್ ಹಾಕಿದ್ದಾರೆ. ಅಲ್ಲದೇ 2.64 ಲಕ್ಷ ದಂಡವನ್ನು ವಸೂಲಿ ಮಾಡಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಗರದಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಹಾಗೂ ಏಕಮುಖ ರಸ್ತೆಯಲ್ಲಿ ವಾಹನ ಚಲಾಯಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯನ್ನುಂಟು ಮಾಡುತ್ತಿರುವವರ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ಇಂದು ನಡೆಸಲಾಯಿತು ಎಂದಿದೆ. ಇಂದು ಸಂಜೆ 6 ಗಂಟೆಯಿಂದ 7.30ರವರೆಗೆ ಹಮ್ಮಿಕೊಳ್ಳಲಾಗಿದ್ದಂತ ಏಕಮುಖ ರಸ್ತೆಯ ಚಾಲನೆಯ ವಿರುದ್ಧದ ವಿಶೇಷ ಕಾರ್ಯಾಚರಣೆಯಲ್ಲಿ ವಾಹನಗಳ ಮಾದರಿ ಆಧಾರದ ಮೇಲೆ 525 ಕೇಸ್ ದಾಖಲಿಸಲಾಗಿದೆ. 2,64,000 ದಂಡವನ್ನು ಸಂಗ್ರಹಿಸಲಾಗಿದೆ ಅಂತ ತಿಳಿಸಿದೆ. ಅಂದಹಾಗೇ ಸ್ಕೂಟರ್ ವಾಹನ ಸವಾರರ ವಿರುದ್ಧ ಬರೋಬ್ಬರಿ 227 ಕೇಸ್ ದಾಖಲಿಸಿ 1,13,500 ದಂಡ ಸಂಗ್ರಹಿಸಿದ್ರೇ, ಮೋಟರ್ ಸೈಕಲ್ 196, ಎಲ್…

Read More

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ರಾಮ ಮಂದಿರ ಉದ್ಘಾಟನೆಗಾಗಿ ಹಾಕಿದ್ದಂತ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಅವರನ್ನು ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗಿಡ್ಡಬ್ಬನಹಳ್ಳಿಯಲ್ಲಿ ಇಂದು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಸಲುವಾಗಿ ಹಾಕಲಾಗಿದ್ದಂತ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಬ್ಯಾನರ್ ಹರಿದಂತ ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಕೇಸರಿ ಭಾವುಟಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗೆ ಪ್ರತಿಭಟನೆ ನಡೆಸುತ್ತಿರುವಂತ ಗ್ರಾಮಸ್ಥರನ್ನು ಮನವೊಲೀಸೋದಕ್ಕೆ ಸೂಲಿಬೆಲೆ ಠಾಣೆಯ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. https://kannadanewsnow.com/kannada/the-disproportionate-assets-case-against-jayalalithaa-case-court-orders-attachment-of-disproportionate-assets-recovery-of-penalty/ https://kannadanewsnow.com/kannada/trying-to-incite-indian-muslims-pakistan-condemns-ram-temple-construction-says-india/

Read More