Author: kannadanewsnow09

ಬೆಂಗಳೂರು: ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ. ತಿದ್ದಿಕೊಳ್ಳುತ್ತೇನೆ. ಆದರೆ ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಆಗಿ ನುಡಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ 2024ನೇ ಸಾಲಿನ ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ, ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು. ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಬೇರೆ ಹೆಸರಲ್ಲಿ ಅವರು ಘೋಷಿಸಿದ್ದಾರೆ. ಆದರೂ ಮಹಾರಾಷ್ಟ್ರ ಚುನಾವಣೆ ವೇಳೆ ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯೇ ಆಗಿಲ್ಲ ಎಂದು ಸುಳ್ಳು ಜಾಹಿರಾತು ನೀಡಿದರು ಎಂದು ಸಿಎಂ ವ್ಯಂಗ್ಯವಾಡಿದರು. ಇವತ್ತು “ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರಿದ್ರಿ ಅಂತ ಕೇಳಿಲ್ಲ. ಆದರೆ ನೀವು ಜನರ ಧ್ವನಿಯಾಗಿ ಕೆಲಸ ಮಡಬೇಕು. ಸಾಧ್ಯವಾದರೆ ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ ಎಂದರು. ಮನಸಾಕ್ಷಿಗೆ…

Read More

ಬಳ್ಳಾರಿ : ವಿಜಯನಗರ ಜಿಲ್ಲೆಯ ಚಿಕ್ಕಜೋಗಿಹಳ್ಳಿಯ ಜವಾಹರ್ ನೆಹರು ನವೋದಯ ಶಾಲೆಯ 2025-26 ನೇ ಸಾಲಿನ ಪ್ರವೇಶ ಪರೀಕ್ಷೆಯ ದಿನಾಂಕ ನಿಗಧಿಯಾಗಿದ್ದು, ಜ.18 ರಂದು ಬೆಳ್ಳಿಗೆ 11 ಗಂಟೆಗೆ ಜಿಲ್ಲೆಯ ಆಯಾ ತಾಲೂಕಿನಲ್ಲಿ ನಿಗದಿಪಡಿಸಿದ ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಚಿಕ್ಕಜೋಗಿಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ. ವಿದ್ಯಾರ್ಥಿಗಳು ವೆಬ್‌ಸೈಟ್ https://cbseitms.rcil.gov.in/nvs/AdminCard ನಲ್ಲಿ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ಪರೀಕ್ಷೆ ಹಾಜರಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/cm-siddaramaiah-presents-bengaluru-press-club-special-award-to-minister-lakshmi-hebbalkar/ https://kannadanewsnow.com/kannada/shocking-police-job-recruitment-exam-munnabhai-mbbs-is-a-candidate-who-copied-like-a-movie/

Read More

ಬೆಂಗಳೂರು: ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ 2024ನೇ ಸಾಲಿನ ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ ಪ್ರದಾನ ಮಾಡಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ನೀಡುವ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿ ಯನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಪ್ರದಾನ‌ ಮಾಡಿದರು. ಇದೇ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ 2024ನೇ ಸಾಲಿನ ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್‌, ಎಂ.ಬಿ.ಪಾಟೀಲ್,ಕೆ.ಎಚ್.ಮುನಿಯಪ್ಪ, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಷಾ ಖಾನಂ, ಪ್ರೆಸ್‌ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್‌,‌ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಪದಾಧಿಕಾರಿಗಳು, ಪ್ರಶಸ್ತಿ ಪುರಸ್ಕೃತರು ಉಪಸ್ಥಿತರಿದ್ದರು.…

Read More

ಬೆಂಗಳೂರು: ಪ್ರತಿ ವರ್ಷ ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನಿಂದ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಸಚಿವ ಎಂ.ಬಿ ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರದಾನ ಮಾಡಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ನೀಡುವ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿ ಯನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಪ್ರದಾನ‌ ಮಾಡಿದರು. ಇದೇ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ 2024ನೇ ಸಾಲಿನ ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಕೆ.ಎಚ್.ಮುನಿಯಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಪ್ರಭಾಕರ್ , ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ ಮತ್ತಿತರರು ಇದ್ದರು. https://kannadanewsnow.com/kannada/cow-slaughter-case-minister-jamir-promises-to-get-three-cows-himself/ https://kannadanewsnow.com/kannada/shocking-police-job-recruitment-exam-munnabhai-mbbs-is-a-candidate-who-copied-like-a-movie/

Read More

ಬೆಂಗಳೂರು: ಪ್ರಾಣಿಗಳಿಗೆ ಈ ಥರ ಮಾಡಿದವನು ಮನುಷ್ಯನೇ ಅಲ್ಲ. ಏನೇ ದ್ವೇಷವಿದ್ದರೂ, ಗಲಾಟೆ ಇದ್ದರೂ ಹೀಗೆ ಮಾಡಬಾರದು. ನಾನೇ ಮೂರು ಹಸುಗಳನ್ನು ಕೊಡಿಸುವುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಭರವಸೆಯನ್ನು ನೀಡಿದರು. ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ಘಟನೆ ವಿಷಯ ತಿಳಿದಾಗ ನಾನು ಮುಖ್ಯಮಂತ್ರಿಗಳು ಬಳ್ಳಾರಿಯಲ್ಲಿ ಇದ್ದೆವು. ಕೂಡಲೇ ಸಿಎಂ ಕಮೀಷನರ್ ಗೆ ಕರೆ ಮಾಡಿ, ಈ ಕೆಲಸ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಸೂಚಿಸಿದ್ದಾರೆ ಎಂದರು. ನಾನು ಕೂಡ ಪೋಲಿಸರಿಗೆ ಇಂತಹ ಕೆಲಸ ಮಾಡಿದಂತ ದುಷ್ಕರ್ಮಿಗಳನ್ನು ಬಂಧಿಸೋದಕ್ಕೆ ಹೇಳಿದ್ದೇನೆ. ಯಾರೇ ಆದರೂ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು. ನಾನೇ ಮೂರು ಹೊಸ ಹಸುಗಳನ್ನು ಕೊಡಿಸುತ್ತೇನೆ. ಅವರ ಕುಟುಂಬದ ಜೊತೆಗೆ ನಾನಿದ್ದೇನೆ. ಯಾವುದೇ ಭಯಬೇಡ. ಆತಂಕ ಬೇಡ ಎಂಬುದಾಗಿ ಹಸುವಿನ ಮಾಲೀಕರಿಗೆ ಸಚಿವ ಜಮೀರ್ ಅಹ್ಮದ್ ಧೈರ್ಯ ತುಂಬಿ ಭರವಸೆ ನೀಡಿದರು. https://kannadanewsnow.com/kannada/union-minister-hdk-demands-strict-action-against-miscreants-who-harvested-cow-dung/ https://kannadanewsnow.com/kannada/shocking-police-job-recruitment-exam-munnabhai-mbbs-is-a-candidate-who-copied-like-a-movie/

Read More

ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕುಯ್ದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಇದು ಅತ್ಯಂತ ಹೇಯ, ವಿಕೃತಿ ಎಂದಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು; ನಾನು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕೂಡಲೇ ಆ ದುಷ್ಟರನ್ನು ಪತ್ತೆ ಹಚ್ಚಿ ಕಠಿಣವಾಗಿ ಶಿಕ್ಷಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು. ಹಸುಗಳ ಕೆಚ್ಚಲು ಕೊಯ್ದ ಘಟನೆ ಬಗ್ಗೆ ಬೆಳಗ್ಗೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ದೃಶ್ಯ ಸಮೇತ ವರದಿಗಳು ಬಂದಾಗ ನನಗೆ ತೀವ್ರ ಆಘಾತ ಉಂಟಾಯಿತು. ಇದು ರಾಕ್ಷಸೀ ಕೃತ್ಯ. ಕಾಂಗ್ರೆಸ್ ಆಡಳಿತ ಇವತ್ತು ಎಲ್ಲಿಗೆ ಬಂದಿದೆ? ಎಂಬುದಕ್ಕೆ ಇದುವೇ ಸಾಕ್ಷಿ. ಇಲ್ಲಿಯವರೆಗೆ ಮನುಷ್ಯರನ್ನು ಕೊಲ್ಲುವುದನ್ನು ನೋಡಿದ್ದೇವೆ. ಹಸುವನ್ನು ನಾವು ಕಾಮಧೇನು, ಮಹಾಲಕ್ಷ್ಮೀ ಎಂದು ಪೂಜಿಸುತ್ತಿದ್ದೇವೆ. ಅಂಥ ಕಾಮಧೇನುವಿನ ಕೆಚ್ಚಲು ಕೊಯ್ಯುವ ಹೇಯ ಕೃತ್ಯ ಮಾಡಿರುವ ಕೆಟ್ಟ ಮನಸ್ಥಿತಿಗೆ ಏನನ್ನಬೇಕು? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಗೃಹ ಸಚಿವ ಪರಮೇಶ್ವರ್ ಅವರು ಈ ನಿಟ್ಟಿನಲ್ಲಿ ಕಠಿಣ…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗುಡುಗಿದರು. ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಹೇಳಿದರು. ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್ ನಂಬಿದೆ. ಅದಕ್ಕೆ ಕಾರಣ ಇಷ್ಟೇ… ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ ನಿಂತಿದ್ದಾರೆ. ಹೀಗಾಗಿ ಅವರನ್ನು ಮುಗಿಸುವುದು ಸಾಧ್ಯವಿಲ್ಲದ ಮಾತು ಅವರು ಹೇಳಿದರು. ಜೆಡಿಎಸ್ ಕುಟುಂಬ ಆಧಾರಿತ ಪಕ್ಷ ಎಂದು ಕಾಂಗ್ರೆಸ್ ಹೇಳುತ್ತದೆ. ಯಾರಾದರೂ ಒಮ್ಮೆ ಕಾಂಗ್ರೆಸ್ ಪಕ್ಷದ ಕಚೇರಿಗೆ ಹೋಗಿ ಅಲ್ಲಿ ಗೋಡೆಗಳ ಮೇಲೆ…

Read More

ಮಂಡ್ಯ: ಜಿಲ್ಲೆಯ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಯಾದ “ಮೈಶುಗರ್‌” ಖಾಸಗೀಕರಣ ಮಾಡಲಾಗುತ್ತಿದೆ ಎಂದು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅಪಪ್ರಚಾರ ಮಾಡುತ್ತಿವೆ ಎಂದು ವಿಧಾನ ಪರಿಷತ್‌ ಶಾಸಕರಾದ ದಿನೇಶ ಗೂಳಿಗೌಡ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಅಪ ಪ್ರಚಾರಕ್ಕೆ ಸಾರ್ವಜನಿಕರಾಗಲೀ, ರೈತರಾಗಲೀ ಅಪ ಪ್ರಚಾರಕ್ಕೆ ಕಿವಿಗೊಡಬಾರದು. ಯಾವುದೇ ಕಾರಣಕ್ಕೂ ಇದನ್ನು ಖಾಸಗೀಕರಣ ಮಾಡುವುದಿಲ್ಲ. ನಮ್ಮ ಸರ್ಕಾರ ರೈತರ ಹಿತ ಕಾಯಲು ಬದ್ಧವಿದೆ ಎಂದು ಹೇಳಿದ್ದಾರೆ. ಈ ಕಾರ್ಖಾನೆ ಸಂಪೂರ್ಣವಾಗಿ ನಷ್ಟದಲ್ಲಿದ್ದಿದ್ದಲ್ಲದೆ, ಮುಚ್ಚಿ ಹೋಗುವ ಹಂತದಲ್ಲಿತ್ತು. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ, ಶಾಸಕರಾದ ರವಿಕುಮಾರ್ ಗಣಿಗ ಹಾಗೂ ನಾನುಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಬಳಿ ಈ ಕಾರ್ಖಾನೆಯ ಪುನಶ್ಚೇತನಕ್ಕಾಗಿ ಮನವಿ ಮಾಡಿದ್ದೆವು. ಕಳೆದ ವರ್ಷ ಕಾರ್ಖಾನೆಗೆ 50 ಕೋಟಿ ರೂಪಾಯಿಯನ್ನು ಕಾರ್ಖಾನೆಯ ಕಾರ್ಯಗಳಿಗೆ ಬಿಡುಗಡೆ ಮಾಡಿಸಲು ಯಶಸ್ವಿಯಾಗಿದ್ದೆವು. ಪರಿಣಾಮ ಕಾರ್ಖಾನೆ ಕಳೆದ ಹಂಗಾಮಿನಲ್ಲಿ 2 ಲಕ್ಷ…

Read More

ಕನಕಪುರ: “ಭೂ ವ್ಯಾಜ್ಯಗಳಿಂದಾಗಿ ಜನ ಪೊಲೀಸ್ ಠಾಣೆಗೆ ಹೋಗಬಾರದು, ಬಡವರು ಲಂಚ ನೀಡುವುದನ್ನು ತಪ್ಪಿಸಬೇಕು ಎಂಬ ಉದ್ದೇಶದಿಂದ ನಮ್ಮ ಸರ್ಕಾರ ಮರು ಭೂ ಮಾಪನ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಮಾಡಿದ್ದು, ಮುಂದೆ ಇಡೀ ತಾಲೂಕಿಗೆ ಕಾರ್ಯಕ್ರಮ ವಿಸ್ತರಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರದ ಉಯ್ಯಂಬಳ್ಳಿ ಹೋಬಳಿಯ ದೊಡ್ಡಆಲಹಳ್ಳಿಯಲ್ಲಿ ಭಾನುವಾರ ನಡೆದ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಹಾಗೂ ಮರು ಭೂ ಮಾಪನ ಯೋಜನೆಯಡಿ ರೈತರಿಗೆ ಜಮೀನಿನ ಆರ್ ಟಿಸಿ ದಾಖಲೆ ನೀಡುವ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. “ನೂರಾರು ವರ್ಷಗಳ ಹಿಂದೆ ಬ್ರಿಟೀಷರು ಈ ಭಾಗದಲ್ಲಿ ಭೂ ಮಾಪನ ಮಾಡಿದ್ದರು. ಆನಂತರ ಮಾಡಿರಲಿಲ್ಲ. ಈಗ ಹೊಸ ಮಾದರಿಯಲ್ಲಿ ಭೂ ಮಾಪನ ಮಾಡಲಾಗುತ್ತಿದೆ. ನಮ್ಮ ಸರ್ಕಾರ ಈ ಕಾರ್ಯಕ್ರಮ ರೂಪಿಸಿದೆ. ಇದು ಮುಂದಿನ ತಲೆಮಾರಿಗೂ ಬಹಳ ಉಪಯೋಗವಾಗಲಿದೆ” ಎಂದು ತಿಳಿಸಿದರು. “ಡಿ.ಕೆ. ಸುರೇಶ್ ಹಾಗೂ ಕೃಷ್ಣ ಭೈರೇಗೌಡರು ಚರ್ಚಿಸಿ ನನ್ನ ಗ್ರಾಮದಿಂದಲೇ ಈ ಯೋಜನೆ ಆರಂಭಿಸಿದ್ದಾರೆ. ಇದು…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಿರುಮಲೇಶ್ ಹಾಗೂ ಉಪಾಧ್ಯಕ್ಷರಾಗಿ ಬಾಳೆಗುಂಡಿ ರಾಮಚಂದ್ರಪ್ಪ ಅವರು ಆಯ್ಕೆಯಾಗಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಉಳ್ಳೂರು ಗ್ರಾಮದಲ್ಲಿರುವಂತ ಪ್ರಾಥಮಕಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಿತು. ಇಂದಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಉಳ್ಳೂರು ಗ್ರಾಮ ಪಂಚಾಯ್ತಿ ಹಾಲಿ ಉಪಾಧ್ಯಕ್ಷ ತಿರುಮಲೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನೂ ಉಪಾಧ್ಯಕ್ಷರಾಗಿ ಬಾಳೆಗುಂಡಿ ರಾಮಚಂದ್ರ ಆಯ್ಕೆಯಾಗಿದ್ದಾರೆ. ಅಂದಹಾಗೇ ಉಳ್ಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ಕೃಷ್ಣಮೂರ್ತಿ ಕೂಡ ಇದ್ದರು. ಆದರೇ ಕೊನೆಯ ಕ್ಷಣದಲ್ಲಿ ಸೈಲೆಂಟ್ ಆಗಿದ್ದೇ ಹಲವು ಅನುಮಾನಗಳಿಗೂ ಕಾರಣವಾಗಿದೆ. ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ವೆಂಕಪ್ಪಗೌಡರ ಮಗ ಕೃಷ್ಣಮೂರ್ತಿ ಅವರು, ಭೀಮನಕೋಣೆಯಲ್ಲಿನ ಪಿ.ಎಲ್.ಡಿ ಬ್ಯಾಂಕ್ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದು, ಅಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆಯಂತೆ. ಹೀಗಾಗಿಯೇ ಇಂದಿನ ಚುನಾವಣೆಯ ಕಣದಿಂದ…

Read More