Author: kannadanewsnow09

ಬೆಂಗಳೂರು: ನಾನು ಕೇಂದ್ರ ಸಚಿವನಾದ ಮೇಲೆ ಕೆಲವರಿಗೆ ನಿದ್ದೆ ಬರುತ್ತಿಲ್ಲ, ಊಟ ಸೇರುತ್ತಿಲ್ಲ. ನಾನು ಯಾರ ಮೇಲೂ ದ್ವೇಷ ಸಾಧಿಸಲ್ಲ. ಆ ಜಾಯಮಾನ ನನ್ನದಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಕೇಂದ್ರ ಸಚಿವರಾದ ಮೇಲೆ ರಾಜ್ಯಕ್ಕೆ ಮೊದಲ ಭೇಟಿ ಕೊಟ್ಟ ವೇಳೆ ಜಾತ್ಯತೀತ ಜನತಾದಳ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ನಾನು ಕೇಂದ್ರ ಸರಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವನಾಗಿರಬಹುದು. ರಾಜ್ಯದ ಹಿತವನ್ನು ಎಂದಿಗೂ ಮರೆಯಲಾರೆ. ಬನ್ನಿ, ಯಾವುದೇ ಇಲಾಖೆಯ ಏನೇ ಕೆಲಸಗಳು ಇದ್ದರೂ ಮಾಡಿಕೊಡುತ್ತೇನೆ. ನನಗೆ ಸ್ವಲ್ಪ ಸಮಯ ಬೇಕು ಎಂದು ಹೇಳಿದರು. ರಾಜಕೀಯದಲ್ಲಿ ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ. ನೆರೆಯ ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಹಿಂದಿನ ಚುನಾವಣೆಯಲ್ಲಿ ಎಷ್ಟು ಸ್ಥಾನಗಳನ್ನು ಗೆದ್ದಿದ್ದರು? ಕಡೆಗೆ ಅನೇಕ ಶಾಸಕರು ಅವರನ್ನು ಬಿಟ್ಟು ಹೋದರು. ಅವರನ್ನು ಜೈಲಿಗೂ ಕಳಿಸಿದರು. ಈಗ ಮತ್ತೆ ಎಷ್ಟು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದರು ಎನ್ನುವುದನ್ನು ಗಮನಿಸಬೇಕು. ಕರ್ನಾಟಕದಲ್ಲಿಯೂ…

Read More

ಹಾವೇರಿ: ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೋರ್ಟ್ ಜಾಮೀನು ನೀಡಿರುವುದು ನ್ಯಾಯಸಮ್ಮತವಾಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಆ ತರಹದ ವಿಚಾರದಲ್ಲಿ ಭಾಗಿಯಾಗಿಲ್ಲ. ಅವರ ವಿರುದ್ದ ಷಡ್ಯಂತ್ರ ಮಾಡಿದ್ದು ಅಧಿಕಾರಿಗಳು ಕರೆದಾಗ ಹೋಗಿ ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ. ಯಡಿಯೂರಪ್ಪನವರಿಗೆ ಸನ್ನಡತೆಯಿದೆ. ಕೋರ್ಟ್ ಇದನ್ನು ಒಪ್ಪಿಕೊಂಡು ಸದ್ಯ ರಿಲೀಪ್ ಕೊಟ್ಟಿದ್ದು ನ್ಯಾಯಸಮ್ಮತವಾಗಿದೆ ನಾವು ಸ್ವಾಗತ ಮಾಡುತ್ತೇವೆ. ಮುಂದೆಯು ಕಾನೂನು ಹೋರಾಟದಲ್ಲಿ ಯಡಿಯೂರಪ್ಪ ನವರು ವಿಜಯಶಾಲಿಯಾಗುವ ವಿಶ್ವಾಸವಿದೆ ಎಂದು ಹೇಳಿದರು. ಇದಕ್ಕೂ ಮೊದಲು ಮಾತನಾಡಿದ ಅವರು, ಯಡಿಯೂರಪ್ಪ ಅವರ ವಿರುದ್ದದ ಪ್ರಕರಣ ನೋಡಿದರೆ ಇದೊಂದು ರಾಜಕೀಯ ಪಿತೂರಿ, ಖಂಡಿತವಾಗಿಯೂ ಷಂಡ್ಯಂತ್ರ. ಅದು ಸಂಪೂರ್ಣ ಕೇಸ್ ಪಾಲೋ ಮಾಡಿದರೆ, ಅದರ ಹಿನ್ನಲೆ ನೋಡಿದರೆ ಷಂಡ್ಯಂತ್ರ ಇದೆ. ಮೂರು ತಿಂಗಳ ಬಿಟ್ಟು, ಈಗ ಒಂದೇ ದಿನಕ್ಕೆ ಸಮಯ ಕೊಟ್ಟು, ವಾರೆಂಟ್ ನೀಡುವುದು ಬಹಳಷ್ಟು ಲ್ಯಾಪ್ಸ ಇದೆ. ಅವರ ವಿರುದ್ದ ಈ ಹಿಂದೆ…

Read More

ನವದೆಹಲಿ: ಲೇಖಕಿ ಅರುಂಧತಿ ರಾಯ್ ಮತ್ತು ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಶೇಖ್ ಶೌಕತ್ ಹುಸೇನ್ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಶುಕ್ರವಾರ ಅನುಮೋದನೆ ನೀಡಿದ್ದಾರೆ. 2010ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ ನಿವಾಸ್ ಅಧಿಕಾರಿಗಳು ಶುಕ್ರವಾರ ದೃಢಪಡಿಸಿದ್ದಾರೆ. ನವದೆಹಲಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನಿರ್ದೇಶನದ ಮೇರೆಗೆ ರಾಯ್ ಮತ್ತು ಹುಸೇನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪ್ರಸ್ತುತ, ಈ ಬೆಳವಣಿಗೆಗೆ ಸಂಬಂಧಿಸಿದಂತೆ ರಾಯ್ ಅಥವಾ ಹುಸೇನ್ ಅವರಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. https://twitter.com/ANI/status/1801611262196904130 ಕಾಶ್ಮೀರದ ಸಾಮಾಜಿಕ ಕಾರ್ಯಕರ್ತ ಸುಶೀಲ್ ಪಂಡಿತ್ ಅವರು 2010ರ ಅಕ್ಟೋಬರ್ 28ರಂದು ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ಅರುಂಧತಿ ರಾಯ್ ಮತ್ತು ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯದ ಅಂತರರಾಷ್ಟ್ರೀಯ ಕಾನೂನಿನ ಮಾಜಿ ಪ್ರಾಧ್ಯಾಪಕ ಡಾ.ಶೇಖ್ ಶೌಕತ್ ಹುಸೇನ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ…

Read More

ಚಿತ್ರದುರ್ಗ: ನಿನ್ನೆಯಷ್ಟೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ8ನೇ ಆರೋಪಿಯಾಗಿದ್ದಂತವರೊಬ್ಬರು ಡಿವೈಎಸ್ಪಿ ಕಚೇರಿಗೆ ತೆರಳಿ ಶರಣಾಗಿದ್ದರು. ಈ ಬೆನ್ನಲ್ಲೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹೀಗೆ ಬಂಧಿಸಲ್ಪಟ್ಟ ಪುತ್ರನ ಸುದ್ದಿ ಕೇಳಿ ಅವರ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿ ತಲೆ ಮರೆಸಿಕೊಂಡಿದ್ದಂತ ಮತ್ತಿಬ್ಬರನ್ನು ಚಿತ್ರದುರ್ಗದ ಡಿವೈಎಸ್ಪಿ, ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಎಡೆಮುರಿಕಟ್ಟಿ ಬಂದಿಸಿದ್ದಾರೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ.6 ಆರೋಪಿಯಾಗಿದ್ದಂತ ಜಗ್ಗ ಆಲಿಯಾಸ್ ಜಗದೀಶ್ ಹಾಗೂ ಎ.7 ಆರೋಪಿಯಾಗಿದ್ದಂತ ಅನು ಆಲಿಯಾಸ್ ಅನುಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ಚಿತ್ರದುರ್ಗ ನಗರದಿಂದ ಬಂಧಿಸಿ, ಆ ನಂತ್ರ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಈ ಬೆನ್ನಲ್ಲೇ ಪುತ್ರ ಹಾಗೂ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವಂತ ಅನುಕುಮಾರ್ ಬಂಧನದ ಸುದ್ದಿ ಕೇಳಿದಂತ ಅವರ ತಂದೆ ಚಂದ್ರಣ್ಣ(60) ಹೃದಯಾಘಾತದಿಂದ ನಿಧನರಾಗಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/farmers-is-your-crop-infested-with-military-worms-just-take-this-control-measure/

Read More

ಬೆಂಗಳೂರು: ಖಾಸಗಿ ಅನುದಾನರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಇಂಜಿನಿಯರಿಂಗ್‌, ಆರ್ಕಿಟೆಕ್ಚರ್‌ ಕಾಲೇಜುಗಳಲ್ಲಿ ‍ವೃತ್ತಿಪರ ಕೋರ್ಸುಗಳ ಶುಲ್ಕವನ್ನು ಶೇಕಡ 10% ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶಪಾಟೀಲ್‌ ಅವರು ಖಾಸಗಿ ಅನುದಾನಿತ, ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಇಂದು ನಡೆದ ಒಮ್ಮತಾಭಿಪ್ರಾಯ ಕುರಿತು ಚರ್ಚೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು. ಖಾಸಗಿ ಶಿಕ್ಷಣ  ಸಂಸ್ಥೆಗಳ ಒಕ್ಕೂಟವು ಶೇಕಡ 15% ರಷ್ಟು ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು. ಸುಧೀರ್ಘವಾಗಿ ನಡೆದ ಮಾತುಕತೆಯಲ್ಲಿ ಅಂತಿಮವಾಗಿ ಕಳೆದ ವರ್ಷ ನಿಗದಿಪಡಿಸಿದ್ದ ಶುಲ್ಕಕ್ಕೆ ಶೇಕಡ 10ರಷ್ಟು ಹೆಚ್ಚಳ ಮಾಡುವ ನಿರ್ಧಾರಕ್ಕೆ ಒಮ್ಮತ ಬರಲಾಯಿತು. ಈ ಸಂಬಂದಪಟ್ಟಂತೆ ಸರ್ಕಾರದ ಅಧಿಕೃತ ಆದೇಶ ಶೀಘ್ರ ಹೊರಬೀಳಲಿದೆ. ಈ ಸಭೆಯಲ್ಲಿ ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿಗಳು ‍ಶ್ರೀಕರ್‌, ತಾಂತ್ರಿಕ ಶಿಕ್ಷಣ  ಇಲಾಖೆಯ ಆಯುಕ್ತರಾದ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಆರಂಭದಲ್ಲಿ 13 ಆರೋಪಿಗಳನ್ನು ಬಂಧಿಸಲಾಗಿತ್ತು. ಈಗ ಬಂಧಿತ ಆರೋಪಿಗಳ ಸಂಖ್ಯೆ ಏರಿಕೆಯಾಗಿದೆ. ಬರೋಬ್ಬರಿ 19 ಆರೋಪಿಗಳನ್ನು ಪೊಲೀಸರು ಎಡೆಮುರಿಕಟ್ಟಿ ಬಂಧಿಸಿದ್ದಾರೆ. ಹಾಗಾದ್ರೇ ಆ ಬಗ್ಗೆ ಮುಂದೆ ಓದಿ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕಿಡ್ನ್ಯಾಪ್ ಮಾಡಿಕೊಂಡು ಬಂದು, ನಟ ದರ್ಶನ್ ಅಂಡ್ ಗ್ಯಾಂಗ್ ತೀವ್ರವಾಗಿ ಹಲ್ಲೆ ನಡೆಸಿ, ಮರ್ಮಾಂಗಕ್ಕೆ ಒದ್ದು ಹತ್ಯೆಗೈದಿತ್ತು. ಆ ಬಳಿಕ ಶವವನ್ನು ಮೋರಿಗೆ ಎಸೆದಿತ್ತು. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇಂದು ಚಿತ್ರದುರ್ಗದಲ್ಲಿ ಇಬ್ಬರು, ಬೆಂಗಳೂರಲ್ಲಿ ಮತ್ತಿಬ್ಬರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ 19ಕ್ಕೆ ಏರಿಕೆಯಾದಂತೆ ಆಗಿದೆ. ಯಾರು ಯಾರು ಆ 19 ಆರೋಪಿಗಳು.? A1 ಪವಿತ್ರ : ಬಂಧಿತ A2 ದರ್ಶನ್ : ಬಂಧಿತ A3 ಪವನ್ :…

Read More

ಪ್ರತಿನಿತ್ಯ ತಿರುಪತಿ ಬಾಲಾಜಿಯನ್ನು ಪೂಜಿಸುವವರ ಮನೆಯಲ್ಲಿ ಕ್ಷಾಮ ಇರುವುದಿಲ್ಲ. ಇದು ವಾಸ್ತವಿಕ ಸತ್ಯ. ಶನಿವಾರದಂದು ಪಚ್ಚ ಕರ್ಪೂರವನ್ನು ಪೆರುಮಾಳ್‌ನನ್ನು ತಿರುಪತಿ ತಿಮ್ಮಪ್ಪನ ಆರಾಧಿಸಿ ಈ ಪರಿಹಾರವನ್ನು ಮಾಡಿದವರಿಗೆ ಐಶ್ವರ್ಯ ಪ್ರಾಪ್ತಿಯಾಗುತ್ತದೆ ಎಂದು ನಂಬಲಾಗಿದೆ. ಪೆರುಮಾಳ್ ವೆಂಕಟೇಶ್ವರ ಪಚ್ಚ ಕರ್ಪೂರದ ಒಡೆಯ. ಪೆರುಮಾಳ್ ವೆಂಕಟೇಶ್ವರ ಸ್ವಾಮಿ ಇರುವಲ್ಲಿ ಮಹಾಲಕ್ಷ್ಮಿಯು ತಾನಾಗಿಯೇ ಬಂದು ವಾಸಮಾಡಲು ಪ್ರಾರಂಭಿಸುತ್ತಾಳೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಿಮ್ಮ ಮನೆಯ ಹಸಿವನ್ನು ನಿವಾರಿಸುವ ಆ ಪರಿಹಾರ ಯಾವುದು? ಈ ಆಧ್ಯಾತ್ಮಿಕ ಪೋಸ್ಟ್ ಮೂಲಕ ತಿಳಿದುಕೊಳ್ಳೋಣ. ಹಸಿವಿಗೆ ಪಚ್ಚ ಕರ್ಪೂರದ ಪರಿಹಾರ ಶನಿವಾರ ಮುಂಜಾನೆ ಸೂರ್ಯೋದಯಕ್ಕೆ ಮುನ್ನ ಮನೆಯಲ್ಲಿರುವ ಮಹಿಳೆಯರು ಬಾಗಿಲಿಗೆ ರಂಗೋಲಿ ಹಾಕಿ ಶುಭ್ರ ಸ್ನಾನ ಮಾಡಬೇಕು. ಬೆಳಿಗ್ಗೆ 6 ಗಂಟೆಗೆ ಪೂಜಾ ಕೋಣೆಯಲ್ಲಿ ದೀಪವನ್ನು ಬೆಳಗಿಸಿ. ಸಣ್ಣ ಬಟ್ಟಲಿನಲ್ಲಿ ಅಗತ್ಯ ಪ್ರಮಾಣದ ಪಚ್ಚ ಕರ್ಪೂರವನ್ನು ರುಬ್ಬಿಕೊಳ್ಳಿ. ಸ್ವಲ್ಪ ಏಲಕ್ಕಿ ಪುಡಿ…

Read More

ಬೆಂಗಳೂರು: ಜೂನ್.17ರಂದು ವಿವಿಧ ಕಾಮಗಾರಿ ಹಿನ್ನಲೆಯಲ್ಲಿ ಕೆಂಗೇರಿ ಮತ್ತು ಚಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆ ಭಾಗಶಹ ರದ್ದುಗೊಳಿಸಲಾಗುತ್ತಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬಿಎಂಆರ್ ಸಿಎಲ್, ನೇರಳೆ ಮಾರ್ಗದಲ್ಲಿರುವ ಚಲ್ಲಘಟ್ಟ ಮೆಟ್ರೋ ನಿಲ್ದಾಣದಲ್ಲಿ ದಿನಾಂಕ 17ನೇ ಜೂನ್ 2024 (ಸೋಮವಾರ) ರಂದು ನಿರ್ವಹಣೆ ಕೆಲಸಕ್ಕಾಗಿ, ಕೆಂಗೇರಿ ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 05:00 ರಿಂದ ಮಧ್ಯಾಹ್ನ 01:00 ಗಂಟೆಯ ವರೆಗೆ ಲಭ್ಯವಿರುವುದಿಲ್ಲ ಎಂದು ತಿಳಿಸಿದೆ. ಇನ್ನೂ ರೈಲು ಸೇವೆಗಳು ಮಧ್ಯಾಹ್ನ 01:00 ಗಂಟೆಯ ನಂತರ ವೇಳಾಪಟ್ಟಿಯ ಪ್ರಕಾರ ಚಲ್ಲಘಟ್ಟ ಮತ್ತು ವೈಟ್‌ಫೀಲ್ಡ್ ನಡುವಿನ ಸಂಪೂರ್ಣ ನೇರಳೆ ಮಾರ್ಗದಲ್ಲಿ ಲಭ್ಯವಿರುತ್ತವೆ. ಆದಾಗ್ಯೂ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಎಂದಿನಂತೆ ವೇಳಾಪಟ್ಟಿಯ ಪ್ರಕಾರ ಚಲಿಸುತ್ತವೆ ಎಂಬುದಾಗಿ ಮಾಹಿತಿ ನೀಡಿದೆ. https://kannadanewsnow.com/kannada/420-cases-registered-against-union-minister-v-somannas-son/ https://kannadanewsnow.com/kannada/farmers-is-your-crop-infested-with-military-worms-just-take-this-control-measure/

Read More

ನವದೆಹಲಿ: ಆರ್ಬಿಐ ಹೊರಡಿಸಿದ ಕೆಲವು ನಿರ್ದೇಶನಗಳನ್ನು ಪಾಲಿಸದ ಕಾರಣ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank of India -RBI) ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಕ್ಕೆ ( Central Bank of India ) 1.45 ಕೋಟಿ ರೂ.ಗಳ ವಿತ್ತೀಯ ದಂಡವನ್ನು ವಿಧಿಸಿದೆ ಎಂದು ಕೇಂದ್ರ ಬ್ಯಾಂಕ್ ಜೂನ್ 14 ರಂದು ತಿಳಿಸಿದೆ. ಮಾರ್ಚ್ 31, 2022 ರವರೆಗೆ ಬ್ಯಾಂಕಿನ ಆರ್ಥಿಕ ಸ್ಥಿತಿಗೆ ಸಂಬಂಧಿಸಿದಂತೆ ಬ್ಯಾಂಕಿನ ಮೇಲ್ವಿಚಾರಣೆ ಮೌಲ್ಯಮಾಪನಕ್ಕಾಗಿ ಶಾಸನಬದ್ಧ ತಪಾಸಣೆಯನ್ನು ಆರ್ಬಿಐ ನಡೆಸಿತು. ಆರ್ಬಿಐ ನಿರ್ದೇಶನಗಳು ಮತ್ತು ಸಂಬಂಧಿತ ಪತ್ರವ್ಯವಹಾರಗಳನ್ನು ಅನುಸರಿಸದಿರುವ ಮೇಲ್ವಿಚಾರಣೆಯ ಸಂಶೋಧನೆಗಳ ಆಧಾರದ ಮೇಲೆ, ನಿರ್ದೇಶನಗಳನ್ನು ಅನುಸರಿಸಲು ವಿಫಲವಾದ ಕಾರಣ ಅದರ ಮೇಲೆ ಏಕೆ ದಂಡ ವಿಧಿಸಬಾರದು ಎಂಬುದಕ್ಕೆ ಕಾರಣವನ್ನು ತೋರಿಸುವಂತೆ ಬ್ಯಾಂಕ್ಗೆ ನೋಟಿಸ್ ನೀಡಲಾಗಿದೆ. ನೋಟಿಸ್ಗೆ ಬ್ಯಾಂಕಿನ ಉತ್ತರವನ್ನು ಪರಿಗಣಿಸಿದ ನಂತರ, ಬ್ಯಾಂಕಿನ ವಿರುದ್ಧ ಈ ಕೆಳಗಿನ ಆರೋಪಗಳನ್ನು ಉಳಿಸಿಕೊಳ್ಳಲಾಗಿದೆ ಎಂದು ಆರ್ಬಿಐ ಕಂಡುಕೊಂಡಿದೆ, ಇದು ವಿತ್ತೀಯ ದಂಡವನ್ನು ವಿಧಿಸುವ ಅಗತ್ಯವಿದೆ ಎಂದು ಆರ್ಬಿಐ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಲೋಕಸಭಾ ಚುನಾವಣಾ ನೀತಿ ಸಂಹಿತೆ ತೆರವಿನ ಕೆಲ ದಿನಗಳ ನಂತ್ರ, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ಐವರು ಐಎಎಸ್ ಅಧಿಕಾರಿ ಹಾಗೂ ಓರ್ವ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಇಂದು ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಟಿ.ಕೆ., ಐಎಎಸ್ (ಕೆಎನ್: 1995) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ ಆದೇಶಿಸಿದೆ. ಇನ್ನೂ  ಹರ್ಷ ಗುಪ್ತಾ, ಐಎಎಸ್ (ಕೆಎನ್: 1997) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ವಿಪುಲ್ ಬನ್ಸಾಲ್, ಐಎಎಸ್ (ಕೆಎನ್: 2005) ಅವರನ್ನು 29.06.2024 ರಂದು…

Read More