Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ನೀಡಿರುವಂತ ಪ್ರಾಸಿಕ್ಯೂಷನ್ ಅನುಮತಿ ಆರ್ಟಿಕಲ್ 17ಎ ನಿಯಮ ಗಾಳಿಗೆ ತೂರಿದಂತೆ ಆಗಿದೆ. ಅವರು ಕಾನೂನಿನ ಕಗ್ಗೊಲೆ ಮಾಡಿದ್ದಾರೆ. ಬಿಜೆಪಿಯ ಕೈಗೊಂಬೆಯಂತೆ ವರ್ತಿಸಿದ್ದಾರೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಇಂದು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಮುಖ್ಯಮಂತ್ರಿಗಳ ವಿರುದ್ಧದ ಪ್ರಸಿಕ್ಯೂಷನ್ ಪ್ರಕರಣದಿಂದಾಗಿ ರಾಜ್ಯಪಾಲರ ನಡೆ ಹಾಗೂ ಅವರ ಕಾರ್ಯಗಳ ಮೇಲೆ ಬೆಳಕು ಚೆಲ್ಲಿದಂತಾಗಿದೆ. ರಾಜ್ಯಪಾಲರ ಕಾರ್ಯಭಾರಗಳ ಮೇಲೆ ಅನೇಕ ಬಾರಿ ಚರ್ಚೆಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಆರ್ಟಿಕಲ್ 163 ರ ಪ್ರಕಾರ ಹೀಗೆ ಹೇಳಿದ್ದಾರೆ. ರಾಜ್ಯಪಾಲರು ಮಂತ್ರಿಗಳ ಕೌನ್ಸಿಲ್ ಮೂಲಕ ಸಲಹೆಗಳನ್ನು ಪಡೆಯಬೇಕು ಎಂದರು. ವಿ.ಜಿ.ಖೇರ್ ಅವರು ಬಾಂಬೆಯ ಮೊದಲ ರಾಜ್ಯಪಾಲರು. ರಾಜ್ಯಪಾಲರು ತಮಗೆ ಇರುವ ಅಲ್ಪಶಕ್ತಿಯಲ್ಲಿ ಹೆಚ್ಚು ಕೆಲಸ ಮಾಡಬಹುದು. ಜೊತೆಗೆ ದುರಾಡಳಿತ ಮಾಡಬೇಕು ಎಂದು ಸಂವಿಧಾನವನ್ನು ತಿರುಚಿ ಕೆಲಸ ಮಾಡಲು ತೊಡಗಿದರೆ ಅದನ್ನು ಕೂಡ ಮಾಡಬಹುದು ಎಂದು ಹೀಗೆ ಹೇಳಿದ್ದರು. ಇದೇ ರೀತಿಯ ಘಟನೆ ಕರ್ನಾಟಕದಲ್ಲಿ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮಂತ್ರಿಗಳು ನನ್ನ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆಲ್ಲ ಜಗ್ಗುವ ಜಾಯಮಾನ ನನ್ನದಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಯಾವುದೋ ಹಳೆಯ ಪ್ರಕರಣವನ್ನು ಕೆದಕಿ, ಸುಪ್ರೀಂ ಕೋರ್ಟ್ ನಲ್ಲಿರುವ ಪ್ರಕರಣ ಇಟ್ಟುಕೊಂಡು ರಾಜ್ಯಪಾಲರನ್ನು ಅಪಮಾನಿಸುವ, ನನ್ನನ್ನು ಬ್ಲಾಕ್ ಮೇಲ್ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದಕ್ಕೆಲ್ಲಾ ಕೇರ್ ಮಾಡುವ ಪೈಕಿ ನಾನಲ್ಲ, ಈ ಸರ್ಕಾರಕ್ಕೂ ಅದು ಗೊತ್ತಿದೆ ಎಂದು ಕಿಡಿಕಾರಿದರು. ರಾಜ್ಯಪಾಲರಿಗೆ ಸರ್ಕಾರದಿಂದ ಧಮ್ಕಿ ರಾಜ್ಯಪಾಲರು ಮೂಡಾ ಹಗರಣ ವಿಚಾರಣೆಗೆ ಅನುಮತಿ ನೀಡಿದಾಕ್ಷಣ ಇಡೀ ಸಚಿವರು, ಶಾಸಕರನ್ನು ಇಟ್ಟುಕೊಂಡು ರಾಜ್ಯಪಾಲರಿಗೆ ಧಮ್ಕಿ ಹಾಕುವ, ಜನರನ್ನು ಎತ್ತಿ ಕಟ್ಟುವ ಕೆಲಸವನ್ನು ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ನಾನು ಹೀಗೆಲ್ಲಾ ಮಾಡಿಲ್ಲ, ನನ್ನ ವಿರುದ್ಧ ಆರೋಪ ಕೇಳಿಬಂದಾಗ ಒಬ್ಬನೇ ಎದುರಿಸುತ್ತೇನೆ ಎಂದು ಹೇಳಿದ್ದೆ. ವಿಧಾನಸಭೆ ಕಲಾಪದಲ್ಲಿಯೂ ಹೇಳಿದ್ದೇನೆ. ಬೇಕಾದರೆ ಕಡತ ತೆಗೆದು ನೋಡಬಹುದು ಎಂದು ಹೇಳಿದರು ಕೇಂದ್ರ…
ನವದೆಹಲಿ: ನಟರಾದ ಜೂನಿಯರ್ ಎನ್ಟಿಆರ್ ( Actors Jr NTR ) ಮತ್ತು ಹೃತಿಕ್ ರೋಷನ್ ಬಹುನಿರೀಕ್ಷಿತ ವಾರ್ 2 ನಲ್ಲಿ ಒಟ್ಟಿಗೆ ದೊಡ್ಡ ಪರದೆಯನ್ನು ಬೆಳಗಿಸಲು ಸಜ್ಜಾಗಿದ್ದಾರೆ. ಆದಾಗ್ಯೂ, ಚಿತ್ರದ ನಿರ್ಮಾಣವು ಸ್ಥಗಿತಗೊಂಡಿದೆ. ಇತ್ತೀಚಿನ ವರದಿಗಳ ಪ್ರಕಾರ, ಸೆಟ್ನಲ್ಲಿ ತೀವ್ರವಾದ ಆಕ್ಷನ್ ದೃಶ್ಯಕ್ಕಾಗಿ ತಯಾರಿ ನಡೆಸುತ್ತಿರುವಾಗ ಜೂನಿಯರ್ ಎನ್ಟಿಆರ್ ಗಾಯಗೊಂಡರು, ಇದರಿಂದಾಗಿ ನಟ ಚೇತರಿಸಿಕೊಳ್ಳಲು ಎರಡು ತಿಂಗಳ ವಿರಾಮ ತೆಗೆದುಕೊಳ್ಳಬೇಕಾಯಿತು. ಈ ಅನಿರೀಕ್ಷಿತ ಘಟನೆಯು ಶೂಟಿಂಗ್ ವೇಳಾಪಟ್ಟಿಯಲ್ಲಿ ವಿಳಂಬಕ್ಕೆ ಕಾರಣವಾಗಿದೆ, ವಿಶೇಷವಾಗಿ ಅವರ ಬಹುನಿರೀಕ್ಷಿತ ಪ್ರವೇಶ ದೃಶ್ಯಕ್ಕಾಗಿ, ಇದನ್ನು ಈಗ ಅಕ್ಟೋಬರ್ ನಲ್ಲಿ ಚಿತ್ರೀಕರಿಸಲಾಗುವುದು. ‘ವಾರ್ 2’ ಚಿತ್ರೀಕರಣದ ವೇಳೆ ಜ್ಯೂನಿಯರ್ ಎನ್ಟಿಆರ್ ಗೆ ಗಾಯ ಡ್ಯಾನಿಕ್ ಭಾಸ್ಕರ್ ಅವರ ಪ್ರಕಾರ, ಆಕ್ಷನ್ ಸನ್ನಿವೇಶದ ಸಮಯದಲ್ಲಿ ಜೂನಿಯರ್ ಎನ್ಟಿಆರ್ ಅವರ ಕೈಗಳಿಗೆ ಗಾಯವಾಗಿದೆ. ಇದರಿಂದಾಗಿ ವೈದ್ಯರು ವಿಶ್ರಾಂತಿ ಪಡೆಯಲು ಮತ್ತು ಚೇತರಿಸಿಕೊಳ್ಳಲು ಸಲಹೆ ನೀಡಿದರು. ಗಾಯವು ಮುಂಬೈ ಶೂಟಿಂಗ್ ವೇಳಾಪಟ್ಟಿಯನ್ನು ಹಿಂದಕ್ಕೆ ತಳ್ಳಿದೆ. ಒಳ್ಳೆಯ ಸುದ್ದಿಯೆಂದರೆ, ನಟನ ಅಭಿಮಾನಿಗಳು ಅವರನ್ನು…
ನವದೆಹಲಿ: ಆನ್ ಲೈನ್ ವಂಚಕರು ಈಗ ಮತ್ತೊಂದು ದಾರಿಯನ್ನು ಹಿಡಿದಿದ್ದಾರೆ. ಬ್ಯಾಂಕ್ ಗ್ರಾಹಕರನ್ನು ವಂಚಿಸುವಂತ ಮಗದೊಂದು ದಾರಿಯೇ ಸಿಬಿಐ ಸಮನ್ಸ್, ವಾರೆಂಟ್ ಅನ್ನುವಂತ ಸಂದೇಶವಾಗಿದೆ. ಒಂದು ವೇಳೆ ನೀವು ಆ ಸಮನ್ಸ್, ವಾರೆಂಟ್ ಗೆ ಬೆಚ್ಚಿ ಬಿದ್ದು, ಅಲ್ಲಿನ ಲಿಂಕ್ ಓಪನ್ ಮಾಡಿದ್ದೇ ಆದ್ರೇ ನಿಮ್ಮ ಖಾತೆಯೇ ಖಾಲಿಯಾಗಿಬಿಡುತ್ತದೆ. ಹಾಗಾದ್ರೇ ಅಂತದ ಸ್ಕ್ಯಾಮ್ ಏನು ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತು ಸ್ವತಹ ಸಿಬಿಐ ಫೇಕ್ ನೋಟಿಸ್, ವಾರೆಂಟ್ ಬಗ್ಗೆ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ( Central Bureau of Investigation- CBI) ಸಾರ್ವಜನಿಕರಿಗೆ ಎಚ್ಚರಿಕೆಯ ಮಾಹಿತಿಯೊಂದನ್ನು ಎಕ್ಸ್ ನಲ್ಲಿ ವೀಡಿಯೋ ಸಹಿತ ಮಾಹಿತಿಯನ್ನು ಹಂಚಿಕೊಂಡಿದೆ. ಅದರಲ್ಲಿ ಹಿರಿಯ ಸಿಬಿಐ ಅಧಿಕಾರಿಗಳ ಹೆಸರು ಮತ್ತು ಹುದ್ದೆಗಳನ್ನು ದುರುಪಯೋಗಪಡಿಸಿಕೊಳ್ಳುವ ಹಗರಣಗಳ ಬಗ್ಗೆ ದಯವಿಟ್ಟು ಜಾಗರೂಕರಾಗಿರಿ. ಸಿಬಿಐ ನಿರ್ದೇಶಕರು ಸೇರಿದಂತೆ ಸಿಬಿಐ ಅಧಿಕಾರಿಗಳ ಸಹಿಯನ್ನು ಹೊಂದಿರುವ ನಕಲಿ ದಾಖಲೆಗಳು ಮತ್ತು ನಕಲಿ ವಾರಂಟ್ಗಳು / ಸಮನ್ಸ್ಗಳನ್ನು ವಂಚನೆ ( CBI fake…
ಕೇರಳ: ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ರೋಗಲಕ್ಷಣಗಳಿಂದಾಗಿ ಹಿರಿಯ ನಟ ಮೋಹನ್ ಲಾಲ್ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕೃತ ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ವೈರಲ್ ಉಸಿರಾಟದ ಸೋಂಕು ಇದೆ ಎಂದು ಶಂಕಿಸಲಾಗಿದೆ. ಹೆಚ್ಚುವರಿಯಾಗಿ, 64 ವರ್ಷದ ನಟನಿಗೆ ಐದು ದಿನಗಳವರೆಗೆ ಸಾರ್ವಜನಿಕ ಸಂವಹನಗಳನ್ನು ತಪ್ಪಿಸಲು ಮತ್ತು ಸೂಚಿಸಿದ ಔಷಧಿ ನಿಯಮವನ್ನು ಅನುಸರಿಸಲು ಸೂಚಿಸಲಾಗಿದೆ. ಆಸ್ಪತ್ರೆಯ ಅಧಿಕೃತ ಹೇಳಿಕೆಯನ್ನು ಉದ್ಯಮ ಟ್ರ್ಯಾಕರ್ ಶ್ರೀಧರ್ ಪಿಳ್ಳೈ ಹಂಚಿಕೊಂಡಿದ್ದಾರೆ. https://twitter.com/sri50/status/1825065861109194871 ‘ಎಲ್ 2: ಎಂಪುರಾನ್’ ಚಿತ್ರೀಕರಣ ಮತ್ತು ತಮ್ಮ ಚೊಚ್ಚಲ ನಿರ್ದೇಶನದ ‘ಬರೋಜ್’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಮುಗಿಸಿದ ನಂತರ, ಮೋಹನ್ ಲಾಲ್ ಗುಜರಾತ್ ನಿಂದ ಕೊಚ್ಚಿಗೆ ಮರಳಿದರು, ಅಲ್ಲಿ ಅವರ ಸ್ಥಿತಿ ಹದಗೆಟ್ಟಿತು. ಅದೃಷ್ಟವಶಾತ್, ಇತ್ತೀಚಿನ ವೈದ್ಯಕೀಯ ವರದಿಗಳು ಅವರು ಈಗ ವೀಕ್ಷಣೆಯಲ್ಲಿ ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತೋರಿಸುತ್ತವೆ. ಈ ವರ್ಷದ ಒಂಬತ್ತು ದಿನಗಳ ನವರಾತ್ರಿ ಹಬ್ಬದ ಆರಂಭದಲ್ಲಿ ಅಕ್ಟೋಬರ್ 2 ರಂದು ‘ಬರೋಜ್’ ಚಿತ್ರ…
ಬೆಂಗಳೂರು: ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದಂತ ಪಿಸಿಆರ್ ಆಧರಿಸಿ, ವಿಕ್ರಾಂತ್ ರೋಣಾ, ಡೆಡ್ಲಿ ಸೋಮ ಸಿನಿಮಾ ನಿರ್ಮಾಪಕ ಜಾಕ್ ಮಂಜು ವಿರುದ್ಧ ಎಫ್ಐಆರ್ ದಾಖಲಾಗಿದೆ. ಸ್ಯಾಂಡಲ್ ವುಡ್ ನಿರ್ಮಾಪಕ ಶಿವಶಂಕರ್ ಎಂಬುವರು ಕೋರ್ಟ್ ಗೆ ನಿರ್ಮಾಪಕ ಜಾಕ್ ಮಂಜು ಮೋಸ ಮಾಡಿದ್ದಾರೆ ಎಂಬುದಾಗಿ ಪಿಸಿಆರ್ ದಾಖಲಿಸಿದ್ದರು. ಈ ಅರ್ಜಿಯ ಆಧಾರದ ಮೇಲೆ ಕೋರ್ಟ್ ನಿರ್ಮಾಪಕ ಜಾಕ್ ಮಂಜು ಸೇರಿದಂತೆ ಸಿದ್ದೇಶ್, ಮುರುಳಿ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಿತ್ತು. ಹೀಗಾಗಿ ಕೋರ್ಟ್ ಸೂಚನೆಯ ಹಿನ್ನಲೆಯಲ್ಲಿ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮಾಯಾನಗರಿ ಚಿತ್ರದ ಸಂಬಂಧ ನಿರ್ಮಾಪಕ ಶಿವಶಂಕರ್ ಕೋರ್ಟ್ ಗೆ ಪಿಸಿಆರ್ ದಾಖಲಿಸಿದ್ದರು. ಈ ಚಿತ್ರಕ್ಕೆ ಹೂಡಿಕೆ ಮಾಡಿದ್ದಂತ ಹಣವನ್ನು ನೀಡಿರಲಿಲ್ಲ. ಸಿದ್ದೇಶ್ ಎಂಬುವರು ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆಗಿದ್ದರೇ, ಮುರುಳಿ ಎಂಬುವರು ಶಾಲಿನಿ ಆರ್ಟ್ಸ್ ಮೇಲ್ವಿಚಾರಕ ಆಗಿದ್ದರು. ಇವರಿಬ್ಬರು ಶಿವಶಂಕರ್ ಭೇಟಿ ಮಾಡಿ, ಹಣ ಹೂಡುವುದಕ್ಕೆ ಕೋರಿದ್ದರು. ಜಾಕ್ ಮಂಜು ಕೂಡ ಶಿವಶಂಕರ್ ಅವರಿಗೆ ಪರಿಚಯ ಮಾಡಲಾಗಿತ್ತು. ಮಾಯಾನಗರಿ ಚಿತ್ರಕ್ಕೆ ಹೂಡಿಕೆ…
ಭುವನೇಶ್ವರ: ಕೇಂದ್ರ ಸಚಿವ ಜುವಾಲ್ ಓರಮ್ ಅವರ ಪತ್ನಿ ಜಿಂಗಿಯಾ ಓರಮ್ ಡೆಂಗ್ಯೂ ಜ್ವರದಿಂದ ಭುವನೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರು ಶನಿವಾರ ರಾತ್ರಿ 10.50ರ ಸುಮಾರಿಗೆ ನಿಧನರಾದರು. 58 ವರ್ಷದ ಜಿಂಗಿಯಾ ಓರಮ್ ಅವರು ಪತಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುವಾಲ್ ಓರಮ್ ಕೂಡ ಡೆಂಗ್ಯೂನಿಂದ ಬಳಲುತ್ತಿದ್ದು, ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. https://twitter.com/MohanMOdisha/status/1824980524349415729 ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಜಿಂಗಿಯಾ ಓರಮ್ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಶನಿವಾರ ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದರು. ಒಡಿಶಾ ಕಾನೂನು ಸಚಿವ ಪೃಥ್ವಿರಾಜ್ ಹರಿಚಂದನ್, ಆರೋಗ್ಯ ಸಚಿವ ಮುಖೇಶ್ ಮಹಾಲಿಂಗ್, ಸ್ಪೀಕರ್ ಸುರಮಾ ಪಾಧಿ ಮತ್ತು ಹಲವಾರು ಬಿಜೆಪಿ ಮುಖಂಡರು ಅಂತಿಮ ನಮನ ಸಲ್ಲಿಸಿದರು. ಮಾಝಿ ಸಂತಾಪ ಸೂಚಿಸಿ, “ಜಿಂಗಿಯಾ ಅವರು ಧರ್ಮನಿಷ್ಠ, ಮೃದು ಮಾತನಾಡುವ ವ್ಯಕ್ತಿಯಾಗಿದ್ದು, ಸಾಮಾಜಿಕ ಮತ್ತು ದತ್ತಿ…
ಬುಲಂದ್ಶಹರ್: ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸೇಲಂಪುರ ಪೊಲೀಸ್ ಠಾಣೆಯ ಬಳಿ ಈ ಘಟನೆ ನಡೆದಿದ್ದು, ಪ್ರಯಾಣಿಕರಿಂದ ತುಂಬಿದ ಬಸ್ ಮ್ಯಾಕ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಸುದ್ದಿ ತಿಳಿದ ಕೂಡಲೇ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ), ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಮತ್ತು ಇತರ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ತಲುಪಿದರು. ಗಾಯಗೊಂಡವರನ್ನು ಪ್ರಾದೇಶಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರನ್ನು ಮೀರತ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮ್ಯಾಕ್ಸ್ ವಾಹನದಲ್ಲಿದ್ದವರು ಗಾಜಿಯಾಬಾದ್ ಕಂಪನಿಯ ಉದ್ಯೋಗಿಗಳಾಗಿದ್ದು, ರಕ್ಷಾ ಬಂಧನ ಹಬ್ಬವನ್ನು ಆಚರಿಸಲು ಅಲಿಗಢಕ್ಕೆ ಮರಳುತ್ತಿದ್ದರು ಎಂದು ವರದಿಗಳು ಸೂಚಿಸುತ್ತವೆ. ದುರದೃಷ್ಟವಶಾತ್, ಅವರ ವಾಹನವು ರಸ್ತೆ ಸಾರಿಗೆ ಬಸ್ಗೆ ಡಿಕ್ಕಿ ಹೊಡೆದಿದ್ದರಿಂದ ಅವರ ಪ್ರಯಾಣವನ್ನು ಮೊಟಕುಗೊಳಿಸಲಾಯಿತು, ಇದರ ಪರಿಣಾಮವಾಗಿ ಹತ್ತು ಸಾವುನೋವುಗಳು ದೃಢಪಟ್ಟವು. ಸೇಲಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್ ಮತ್ತೊಂದು ವಾಹನವನ್ನು…
ನವದೆಹಲಿ: ಕೆಲ ದಿನಗಳ ಹಿಂದೆ ಸುಪ್ರೀಂ ಕೋರ್ಟ್ ನಿಂದ ಎಸ್ಸಿ, ಎಸ್ಟಿ ಮೀಸಲಾತಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಾಗಿತ್ತು. ಆದರೇ ಈ ತೀರ್ಪು ವಿರೋಧಿಸಿ ಆಗಸ್ಟ್.21ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಈ ಕುರಿತಂತೆ ವಿವಿಧ ದಲಿತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು, ಪತ್ರದ ಮೂಲಕ ಆಗಸ್ಟ್.21ರಂದು ಭಾರತ್ ಬಂದ್ ನಡೆಸಲಾಗುವುದು ಎಂಬುದಾಗಿ ಅಧಿಕೃತ ಮಾಹಿತಿಯನ್ನು ತಿಳಿಸಿವೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವಂತ ತೀರ್ಪು ವಿರೋಧಿಸಿ ಆಗಸ್ಟ್.21ರಂದು ಬೆಳಿಗ್ಗೆ 5 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಭಾರತ್ ಬಂದ್ ನಡೆಸಲಾಗುತ್ತಿದೆ. ಇದರಲ್ಲಿ ವಿವಿಧ ಸಂಘಟನೆಗಳು ಭಾಗಿಯಾಗಲಿದ್ದಾವೆ ಎಂಬುದಾಗಿ ಸರ್ವ ಆದಿವಾಸಿ ಸಮಾಜದ ವಿಭಾಗೀಯ ಅಧ್ಯಕ್ಷ ಪ್ರಕಾಶ್ ಠಾಕೋರ್ ತಿಳಿಸಿದ್ದಾರೆ. https://kannadanewsnow.com/kannada/congress-workers-attempt-to-gherao-bsys-house-in-shikaripura-several-detained/ https://kannadanewsnow.com/kannada/breaking-fir-registered-against-accused-for-raping-woman-in-bengaluru-police-launch-massive-search/ https://kannadanewsnow.com/kannada/another-good-news-for-women-govt-to-provide-interest-free-loans-up-to-rs-5-lakh/
ಶಿವಮೊಗ್ಗ : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ರಾಜ್ಯಪಾಲರ ನಡೆಯನ್ನು ಖಂಡಿಸಿ, ಇಂದು ಶಿಕಾರಿಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರವಾಗಿ ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆಗೂ ಯತ್ನಿಸಿದರು. ಇಂತಹ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದಂತ ಖಾಸಗಿ ದೂರಿನ ಸಂಬಂಧ ಅರ್ಜಿಯನ್ನು ಪರಿಶೀಲಿಸಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ನೀಡಿದ್ದರು. ಇದು ಸಂವಿಧಾನ ಬಾಹಿರವಾದಂತ ನಡೆಯಾಗಿದೆ. ಕಾನೂನು ವಿರೋಧಿ ನಿರ್ಧಾರವಾಗಿದೆ ಎಂಬುದಾಗಿ ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ರಾಜ್ಯ ರಾಜಕಾರಣದಲ್ಲೇ ಸಂಚಲ ಸೃಷ್ಠಿಸಿದ್ದಂತ ರಾಜ್ಯಪಾಲರ ನಡೆಯನ್ನು ಖಂಡಿಸಿ, ಇಂದು ಶಿಕಾರಿಪುರದಲ್ಲಿ ಬೀದಿಗಿಳಿದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅಲ್ಲದೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೂ ಮುತ್ತಿಗೆ ಹಾಕಲು ಯತ್ನಿಸಿದರು. ಇಂತಹ ಕಾಂಗ್ರೆಸ್ ಕಾರ್ಯಕರ್ತರ…