Author: kannadanewsnow09

ಬೆಂಗಳೂರು: ಇಂದು ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಪ್ರತಿಲೀಟರ್ ಗೆ ಹೆಚ್ಚಾಗಲಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆಯಲ್ಲಿ ಆದೇಶ ಹೊರಡಿಸಿದ್ದು, ಅದರಲ್ಲಿ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆ ಮಾಡಲಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ‌ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಲಿದೆ ಎಂಬುದಾಗಿ ತಿಳಿಸಿದೆ. ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕರ್ನಾಟಕದಲ್ಲಿ ಹೆಚ್ಚಳ ಮಾಡಿದ ಪರಿಣಾಮವಾಗಿ ಪೆಟ್ರೋಲ್ ದರ ರೂ.3 ಹಾಗೂ ಡಿಸೇಲ್ ದರ ರೂ.3.50 ಪೈಸೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಮೂಲಕ ವಾಹನ ಸವಾರರಿಗೆ ಬಿಗ್ ಶಾಕ್ ಅನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ನೀಡಿದೆ. https://kannadanewsnow.com/kannada/state-govt-issues-guidelines-for-transfer-of-health-department-employees/ https://kannadanewsnow.com/kannada/man-attempts-suicide-by-jumping-on-namma-metro-rail-tracks-in-bengaluru/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ದರಗಳನ್ನು ರೀಟೆಲ್ ದರಗಳನ್ನು ಹೆಚ್ಚಳ ಮಾಡಲಾಗಿದೆ. ಹೀಗಾಗಿ ವಾಹನ ಸವಾರರಿಗೆ ಶಾಕ್ ಎನ್ನುವಂತೆ ಪೆಟ್ರೋಲ್, ಡೀಸೆಲ್ ದರ ಕೂಡ ಹೆಚ್ಚಳ ಆಗುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆಗೆ ಮುನ್ನಾ ಕೇಂದ್ರ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಲಾಗಿತ್ತು. ಈಗ ರಾಜ್ಯ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ಮಾಡಿದೆ. ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆಯಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ‌ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡಿಸೇಲ್ ದರ 3.50 ರೂಪಾಯಿ ಹೆಚ್ಚವಾಗುವ ಸಾಧ್ಯತೆ ಇದೆ.…

Read More

ಡೆಹ್ರಾಡೂನ್ : ಸುಮಾರು 23 ಪ್ರಯಾಣಿಕರನ್ನು ಹೊತ್ತ ಟೆಂಪೋ ಟ್ರಾವೆಲರ್ ಕಮರಿಗೆ ಬಿದ್ದ ಘಟನೆ ರುದ್ರಪ್ರಯಾಗದ ಹೃಷಿಕೇಶ್-ಬದರೀನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ. ಈ ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್) ತಂಡಗಳು ಸ್ಥಳದಲ್ಲೇ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಕಮರಿಗೆ ಬಿದ್ದ ವಾಹನವು ನೋಯ್ಡಾದಿಂದ ಬರುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. https://twitter.com/republic/status/1801909679213183366 12 ಮಂದಿ ಸಾವು, 7 ಮಂದಿಯನ್ನು ಏರ್ ಲಿಫ್ಟ್ ಮಾಡಿ ಏಮ್ಸ್ ರಿಷಿಕೇಶ್ ಆಸ್ಪತ್ರೆಗೆ ದಾಖಲು ಕಮರಿಗೆ ಬಿದ್ದ ವಾಹನದಲ್ಲಿ ಪ್ರಯಾಣಿಸುತ್ತಿದ್ದ 12 ಜನರು ಸಾವನ್ನಪ್ಪಿದ್ದಾರೆ ಮತ್ತು 7 ಗಂಭೀರ ರೋಗಿಗಳನ್ನು ಏಮ್ಸ್ ರಿಷಿಕೇಶಕ್ಕೆ ಸಾಗಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಗಾಯಗೊಂಡ 7 ಪ್ರಯಾಣಿಕರನ್ನು ರುದ್ರಪ್ರಯಾಗದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜ್ಯ ನೋಡಲ್ (ಆರೋಗ್ಯ) ವಿಪತ್ತುಗಳ ಸಹಾಯಕ ನಿರ್ದೇಶಕ ಡಾ.ಬಿಮ್ಲೇಶ್ ಜೋಶಿ ತಿಳಿಸಿದ್ದಾರೆ. https://twitter.com/ANI/status/1801907338913190305 https://kannadanewsnow.com/kannada/valmiki-development-corporation-scam-bjp-to-hold-state-wide-protest-on-june-28/ https://kannadanewsnow.com/kannada/ban-on-consumption-of-these-foods-in-india-heres-the-list-of-banned-foods-of-fssai-banned-foods/

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ, ಅಕ್ರಮ ಸಂಬಂಧ ಈಗಾಗಲೇ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರು. ಈ ಪ್ರಕರಣದ ಆಳ, ಅಗಲ, ವಿಸ್ತಾರ ಇನ್ನೂ ಜಾಸ್ತಿ ಇದೆ. ಸಿಬಿಐ ತನಿಖೆಗೆ ನೀಡಬೇಕು ಎಂಬುದಾಗಿ ಆಗ್ರಹಿಸಿ, ಕರ್ನಾಟಕ ಬಿಜೆಪಿ ಜೂನ್.28ರಂದು ರಾಜ್ಯಾಧ್ಯಂತ ಪ್ರತಿಭಟನೆ ನಿರ್ಧರಿಸಿದೆ. ಇಂದು ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಎಸ್‍ಟಿ ಮೋರ್ಚಾ ಪ್ರಮುಖರ ಸಭೆ ನಡೆಯಿತು. ಇಂದಿನ ಬಿಜೆಪಿ ಎಸ್ ಟಿ ಮೋರ್ಚಾ ಸಭೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ, ಅವ್ಯವಹಾರ ಸಂಬಂಧ ಬಿಸಿ ಬಿಸಿ ಚರ್ಚೆಯಾಯಿತು ಎಂಬುದಾಗಿ ತಿಳಿದು ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿನ ಸಭೆಯಲ್ಲಿ, ಜೂನ್.28ರಂದು ರಾಜ್ಯಾಧ್ಯಂತ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಸಂಬಂಧ ಪ್ರತಿಭಟನೆ ನಡೆಸೋದಕ್ಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಮಾಜಿ ಸಚಿವರಾದ ಬಿ.ಶ್ರೀರಾಮುಲು, ಜನಾರ್ದನ ರೆಡ್ಡಿ, ಎಸ್‍ಟಿ…

Read More

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA) ಯುಜಿಸಿ ನೆಟ್ 2024 ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ನೋಂದಾಯಿತ ಅಭ್ಯರ್ಥಿಗಳು ಯುಜಿಸಿ ನೆಟ್ 2024 ಪರೀಕ್ಷೆಯ ಪ್ರವೇಶ ಪತ್ರವನ್ನು ( UGC NET 2024 exam admit card ) ಅಧಿಕೃತ ವೆಬ್ಸೈಟ್ – ugcnet.nta.ac.in ರಿಂದ ಡೌನ್ಲೋಡ್ ಮಾಡಲು ಸಾಧ್ಯವಾಗುತ್ತದೆ. ಯುಜಿಸಿ ನೆಟ್ ಜೂನ್ 2024 ಹಾಲ್ ಟಿಕೆಟ್ ಡೌನ್ಲೋಡ್ ಮಾಡಲು ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆಗಳು ಮತ್ತು ಹುಟ್ಟಿದ ದಿನಾಂಕದ ಮೂಲಕ ವೆಬ್ಸೈಟ್ಗೆ ಲಾಗ್ ಇನ್ ಆಗಬೇಕು. ಯುಜಿಸಿ ನೆಟ್ 2024ರ ಪರೀಕ್ಷೆಯನ್ನು ಜೂನ್ 18 ರಂದು ಎರಡು ಪಾಳಿಗಳಲ್ಲಿ ನಡೆಸಲಾಗುವುದು. 42 ವಿಷಯಗಳಿಗೆ ಯುಜಿಸಿ ನೆಟ್ ಪರೀಕ್ಷೆಯನ್ನು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12:30 ರವರೆಗೆ ಮತ್ತು 41 ವಿಷಯಗಳಿಗೆ ಎರಡನೇ ಪಾಳಿಯಲ್ಲಿ ಮಧ್ಯಾಹ್ನ 3:30 ರಿಂದ ಸಂಜೆ 6:30 ರವರೆಗೆ ಪರೀಕ್ಷೆ ನಡೆಯಲಿದೆ. ಎರಡೂ ಪತ್ರಿಕೆಗಳ ಒಟ್ಟು ಅವಧಿ ಮೂರು ಗಂಟೆಗಳು.…

Read More

ನವದೆಹಲಿ: ಎಸ್ಬಿಐನ ಪಾವತಿ ಗೇಟ್ವೇ ಎಸ್ಬಿಐಪೇ ಅನ್ನು ಇಮಿಗ್ರೇಟ್ ಪೋರ್ಟಲ್ನೊಂದಿಗೆ ಸಂಯೋಜಿಸಲು ವಿದೇಶಾಂಗ ಸಚಿವಾಲಯ (Ministry of External Affairs – MEA)  ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India – SBI) ತಿಳುವಳಿಕಾ ಒಡಂಬಡಿಕೆಗೆ ಸಹಿ ಹಾಕಿವೆ. ಈ ಏಕೀಕರಣವು ಭಾರತೀಯ ವಲಸೆ ಕಾರ್ಮಿಕರು, ನೇಮಕಾತಿ ಏಜೆಂಟರು ಮತ್ತು ಪೋರ್ಟಲ್ನ ಇತರ ಬಳಕೆದಾರರಿಗೆ ಹೆಚ್ಚುವರಿ ಡಿಜಿಟಲ್ ಪಾವತಿ ಸೇವೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಅಧಿಕಾರಿಗಳು ಶನಿವಾರ ಪ್ರಕಟಿಸಿದ್ದಾರೆ. ಈ ಒಪ್ಪಂದವು “ಭಾರತೀಯ ವಲಸೆ ಕಾರ್ಮಿಕರ ಸುರಕ್ಷಿತ ಮತ್ತು ಕಾನೂನುಬದ್ಧ ವಲಸೆಯ ವ್ಯಾಪ್ತಿಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಹೆಚ್ಚಿಸುವ” ಗುರಿಯನ್ನು ಹೊಂದಿದೆ ಎಂದು ಎಂಇಎ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. 2014 ರಲ್ಲಿ ಪ್ರಾರಂಭವಾದ ಇಮಿಗ್ರೇಟ್ ಪೋರ್ಟಲ್ ವಲಸೆ ತಪಾಸಣೆ ಅಗತ್ಯವಿರುವ ದೇಶಗಳಿಗೆ ಹೋಗುವ ಭಾರತೀಯ ಕಾರ್ಮಿಕರಿಗೆ ವಲಸೆ ಪ್ರಕ್ರಿಯೆಯನ್ನು ಆನ್ ಲೈನ್ ಮತ್ತು ಪಾರದರ್ಶಕವಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಪೋರ್ಟಲ್ ವಿದೇಶಿ…

Read More

ಬೆಂಗಳೂರು: ಜೂನ್.17ರಂದು ಕೆ ಎಸ್ ಆರ್ ಟಿಸಿಯ ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲಾತಿಗಳ ಪರಿಶೀಲನೆ, ದೇಹದಾರ್ಢ್ಯತೆ ಪರಿಶೀಲನೆ ನಡೆಸೋದಕ್ಕೆ ನಿಗದಿ ಪಡಿಸಲಾಗಿತ್ತು. ಆದ್ರೇ ಇದನ್ನು ಜೂನ್.18ಕ್ಕೆ ಮುಂದೂಡಿಕೆ ಮಾಡಲಾಗಿದೆ. ಇಂದು ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರು ಹಾಗೂ ಆಯ್ಕೆ ಸಮಿತಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 14-02-2020ರಂದು ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇರನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು ಎಂದಿದ್ದಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ದಿನಾಂಕ 17-06-2024ರಂದು ನಿಗಧಿಪಡಿಸಲಾಗಿದ್ದ ಮೂಲ ದಾಖಲಾತಿ, ದೇಹದಾರ್ಢ್ಯತೆ ಪರಿಶೀಲನೆಯನ್ನು ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ದಿನಾಂಕ 18-06-2024ಕ್ಕೆ ಮುಂದೂಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/renukaswamy-murder-case-state-govt-appoints-p-prasanna-kumar-as-spp/ https://kannadanewsnow.com/kannada/kota-srinivas-poojary-resigns-as-mlc/

Read More

ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ವಾದಿಸೋದಕ್ಕೆ ರಾಜ್ಯ ಸರ್ಕಾರದಿಂದ ಎಸ್ ಪಿಪಿಯಾಗಿ ಪಿ.ಪ್ರಸನ್ನ ಕುಮಾರ್ ನೇಮಕ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಇಂದು ಆದೇಶ ಹೊರಡಿಸಲಾಗಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸರ್ಕಾರದ ಪರವಾಗಿ ವಾದಿಸೋದಕ್ಕೆ ಎಸ್ ಪಿಪಿಯಾಗಿ ಪಿ.ಪ್ರಸನ್ನ ಕುಮಾರ್ ನೇಮಕ ಮಾಡಲಾಗಿದೆ ಅಂತ ತಿಳಿಸಿದೆ. ಇನ್ನೂ ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಸಿದ ನಂತ್ರ, ಕೋರ್ಟ್ ಗೆ ಹಾಜರುವಡಿಸಿ ಇಂದಿನವರೆಗೆ ಪಡೆಯಲಾಗಿತ್ತು. ಈ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸೋದಕ್ಕೆ ಪೊಲೀಸರು ಸಿದ್ಧತೆ ಕೈಗೊಂಡಿದ್ದಾರೆ. https://kannadanewsnow.com/kannada/sahitya-akademi-awards-2024-gaurav-devendra-kumar-to-get-youth-and-childrens-awards/ https://kannadanewsnow.com/kannada/ban-on-consumption-of-these-foods-in-india-heres-the-list-of-banned-foods-of-fssai-banned-foods/

Read More

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿ ತನ್ನ ಪ್ರತಿಷ್ಠಿತ ಯುವ ಮತ್ತು ಮಕ್ಕಳ ಸಾಹಿತ್ಯ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿ ಕೆ.ಶ್ರೀನಿವಾಸರಾವ್ ಮಾತನಾಡಿ, ಈ ಬಾರಿ ಯುವ ಪ್ರಶಸ್ತಿಗಳನ್ನು ಸಂಸ್ಕೃತ ಹೊರತುಪಡಿಸಿ ಎಲ್ಲಾ ಭಾರತೀಯ ಭಾಷೆಗಳಲ್ಲಿ ಘೋಷಿಸಲಾಗಿದೆ. ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರವನ್ನು 24 ಭಾಷೆಗಳ ಸಾಹಿತ್ಯಕ್ಕಾಗಿ ನೀಡಲಾಗುತ್ತದೆ. ಈ ಪ್ರಶಸ್ತಿಯಡಿ, 35 ವರ್ಷದವರೆಗಿನ ಬರಹಗಾರರ ಕೃತಿಗಳನ್ನು ಆಹ್ವಾನಿಸಲಾಗುತ್ತದೆ. ಅರ್ಜಿ ಸಲ್ಲಿಸುವ ಲೇಖಕರಿಗೆ ಪ್ರಶಸ್ತಿಗಳನ್ನು ನೀಡುವ ವರ್ಷದ ಜನವರಿ 1 ಕ್ಕೆ ಅನ್ವಯವಾಗುವಂತೆ 35 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿಯನ್ನು 2011ರಲ್ಲಿ ಸ್ಥಾಪಿಸಲಾಯಿತು. ಪ್ರಶಸ್ತಿ ಪುರಸ್ಕೃತರು 50,000 ರೂ.ಗಳ ನಗದು ಬಹುಮಾನ, ತಾಮ್ರದ ಫಲಕ ಮತ್ತು ಪ್ರಶಸ್ತಿ ಪತ್ರವನ್ನು ಪಡೆಯುತ್ತಾರೆ. ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪುರಸ್ಕಾರ 2024 ಬಿಪೊನ್ನಾ ಬಿಸ್ಮೊಯಿ ಖೇಲ್ ಕಾದಂಬರಿಗಾಗಿ ರಂಜು ಹಜಾರಿಕಾ ಅವರಿಗೆ ಈ ವರ್ಷದ ಬಾಲ ಸಾಹಿತ್ಯ ಪುರಸ್ಕಾರ, ದೀಪನ್ವಿತಾ ರಾಯ್ ಅವರ ಬಂಗಾಳಿ ಕಾದಂಬರಿ ಮಹಿದಾದುರ್…

Read More

ಬೆಂಗಳೂರು: ಜೂನ್.17ರಂದು ಪೋಕ್ಸೋ ಪ್ರಕರಣ ಸಂಬಂಧ ಸಿಐಡಿ ನೀಡಿರುವ ನೋಟಿಸ್ ಹಿನ್ನಲೆಯಲ್ಲಿ ವಿಚಾರಣೆಗೆ ಪೊಲೀಸರ ಮುಂದೆ ಹಾಜರಾಗುವುದಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಪೋಕ್ಸೋ ಕೇಸ್ ಸಂಬಂಧ ಸೋಮವಾರ ವಿಚಾರಣೆ ಹೋಗುತ್ತೇನೆ. ನಿಗದಿತ ಕಾರ್ಯಕ್ರಮದ ನಿಮಿತ್ತ ದೆಹಲಿಗೆ ಹೋಗಿದ್ದೆ. ಹೀಗಾಗಿ ಈ ಹಿಂದೆ ವಿಚಾರಣೆಗೆ ಹಾಜರಾಗಿರಲಿಲ್ಲ ಎಂದರು. ಜೂನ್.17ರ ಸೋಮವಾರದಂದು ವಿಚಾರಣೆಗೆ ಬರುವುದಾಗಿ ನಾನು ಮೊದಲೇ ತಿಳಿಸಿದ್ದೆ. ಹೈಕೋರ್ಟ್ ಸಹ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅಲ್ಲದೇ ಬಂಧಿಸದಂತೆ ತಡೆಯಾಜ್ಞೆ ‌ನೀಡಿದೆ. ಈ ಹಿನ್ನಲೆಯಲ್ಲಿ ನಾನು ಜೂನ್.17ರ ಸೋಮವಾರದಂದು ಸೋಮವಾರ ನಾನು ವಿಚಾರಣೆಗೆ ಹೋಗುತ್ತಿದ್ದೇನೆ ಎಂದರು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದಂತ ಅವರು, ಅನಾವಶ್ಯಕವಾಗಿ ಗೊಂದಲ ಉಂಟು ಮಾಡುವ ಕೆಲಸ ಮಾಡಿದ್ರು. ನಾನು ಯಾರ ಮೇಲೆ ದೂರುವುದಿಲ್ಲ. ಕಾಲವೇ ಎಲ್ಲ ತೀರ್ಮಾನ ಮಾಡಲಿದೆ, ವಾಸ್ತವ ಏನು ಅಂತ ಜನರಿಗೆ ಗೊತ್ತಿದೆ. ಯಾರು ಕುತಂತ್ರ ಮಾಡ್ತಿದ್ದಾರೋ ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂಬುದಾಗಿ…

Read More