Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಪ್ರಮುಖ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು. ಗ್ರ್ಯಾಂಡ್ ಓಲ್ಡ್ ಪಕ್ಷಕ್ಕೆ ಸೇರುವ ಕೆಲವೇ ಗಂಟೆಗಳ ಮೊದಲು, ಒಲಿಂಪಿಯನ್ ಕುಸ್ತಿಪಟು ರೈಲ್ವೆಗೆ ರಾಜೀನಾಮೆ ನೀಡಿದರು. ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಸಂದೇಶದಲ್ಲಿ, ಫೋಗಟ್ ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ತನ್ನ ಜೀವನದ ಸ್ಮರಣೀಯ ಮತ್ತು ಹೆಮ್ಮೆಯ ಸಮಯ ಎಂದು ಹೇಳಿದರು. ಕಾಂಗ್ರೆಸ್ ಸೇರುವ ಮೊದಲು ವಿನೇಶ್ ಫೋಗಟ್ ಭಾರತೀಯ ರೈಲ್ವೆಗೆ ರಾಜೀನಾಮೆ ನೀಡಿದರು. ಮೈಕ್ರೋಬ್ಲಾಗಿಂಗ್ ಸೈಟ್ನಲ್ಲಿ ಹಿಂದಿಯಲ್ಲಿ ಪೋಸ್ಟ್ನಲ್ಲಿ, ಫೋಗಟ್ ಅವರು ತಮ್ಮ ರಾಜೀನಾಮೆಯನ್ನು ‘ಸಮರ್ಥ ಅಧಿಕಾರಿಗಳಿಗೆ’ ಸಲ್ಲಿಸಿದ್ದಾರೆ ಎಂದು ಹೇಳಿದರು. ಮುಂಬರುವ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಅವರು ಸ್ಪರ್ಧಿಸಬಹುದು ಎಂಬ ಊಹಾಪೋಹಗಳ ಮಧ್ಯೆ, ಫೋಗಟ್ ಮತ್ತು ಪುನಿಯಾ ಗುರುವಾರ ಕಾಂಗ್ರೆಸ್ ನಾಯಕರು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು. https://kannadanewsnow.com/kannada/breaking-instagram-star-younis-zaroora-taken-into-police-custody-in-bengaluru/ https://kannadanewsnow.com/kannada/good-news-good-news-for-motorists-petrol-diesel-prices-to-be-reduced-soon-report/
ಹಾಸನ : ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಅವರು ಭರವಸೆಯಿಂದ ನುಡಿದರು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದ ಬಳಿಕ, ಹೆಬ್ಬಹಳ್ಳಿಯ 4 ನೇ ವಿತರಣಾ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಇದು ಎರಡು ಹಂತದ ಯೋಜನೆ. ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳ ಯೋಜನೆಯ ಅನುಕೂಲ ತಲುಪಲಿದೆ. 7 ಜಿಲ್ಲೆಗಳ ಜನತೆಯ ಮನಗೆ ಕುಡಿಯುವ ನೀರು ತಲುಪುತ್ತದೆ. ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆಎಂದು ಸ್ಪಷ್ಟ ಭರವಸೆ ನೀಡಿದರು. ಹೀಗಿದ್ದರೂ ಕೆಲವರು, ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಕೆಲವರು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ.…
ಬೆಂಗಳೂರು: ವಖ್ಫ್ ಆಸ್ತಿ ದೇವರ ಆಸ್ತಿ. ಇದರ ಸಂರಕ್ಷಣೆ ಎಲ್ಲರ ಕರ್ತವ್ಯ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ವಿಕಾಸ ಸೌಧ ಸಮ್ಮೇಳನ ಸಭಾಂಗಣ ದಲ್ಲಿ ಜಿಲ್ಲಾ ವಖ್ಫ್ ಅಧ್ಯಕ್ಷರು ಹಾಗೂ ಅಧಿಕಾರಿಗಳ ಸಭೆ ನಡೆಸಿದ ಅವರು, ವಖ್ಫ್ ಆಸ್ತಿ ಸಂರಕ್ಷಣೆ ಕೇವಲ ಸಚಿವ ಅಥವಾ ರಾಜ್ಯಾಧ್ಯಕ್ಷರ ಜವಾಬ್ದಾರಿ ಮಾತ್ರವಲ್ಲ. ಜಿಲ್ಲಾಧ್ಯಕ್ಷರು ಹಾಗೂ ಅಧಿಕಾರಿಗಳ ಹೊಣೆಗಾರಿಕೆಯೂ ಹೌದು ಎಂದು ಹೇಳಿದರು. ವಖ್ಫ್ ಆಸ್ತಿ ಸರ್ಕಾರ ಕೊಟ್ಟಿದ್ದು, ಅದು ಸರ್ಕಾರಕ್ಕೆ ಸೇರಿದ್ದು ಎಂಬ ಭಾವನೆ ಇದೆ. ಒಂದೇ ಒಂದು ಇಂಚು ವಖ್ಫ್ ಬೋರ್ಡ್ ಸರ್ಕಾರ ದಿಂದ ಪಡೆದಿಲ್ಲ. ವಖ್ಫ್ ಆಸ್ತಿ ಸಮುದಾಯದ ಒಳಿತಿಗಾಗಿ ದಾನಿಗಳು ಕೊಟ್ಟಿರುವ ದಾನ ಆಗಿದೆ. ಕಬಾರಸ್ಥಾನ ಹೊರತು ಪಡಿಸಿದರೆ ಸರ್ಕಾರದಿಂದ ನಮಗೆ ಬೇರೆ ಯಾವುದೇ ಜಾಗ ಕೊಟ್ಟಿಲ್ಲ ಎಂದು ತಿಳಿಸಿದರು ವಖ್ಫ್ ಬೋರ್ಡ್ ವತಿಯಿಂದ 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ನಿರ್ಮಾಣ ಕ್ಕೆ ಯೋಜನೆ ರೂಪಿಸಲಾಗಿದೆ. ಅದೇ ರೀತಿ ತಾಲೂಕು ಮತ್ತು…
ಬೆಂಗಳೂರು: ಎತ್ತಿನಹೊಳೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತದ ಪಂಪ್ ಹೌಸ್ ನೀರೆತ್ತುವ ಕಾರ್ಯಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಚಾಲನೆ ನೀಡಿದರು. ಇಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದೊಡ್ಡನಗರದಲ್ಲಿರುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತದ ವಿತರಣಾ ತೊಟ್ಟಿ 3ರ (DC-3) ಪಂಪ್ ಹೌಸ್ ನಲ್ಲಿ ನೀರೆತ್ತುವ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಪರಮೇಶ್ವರ್, ಎಂ. ಬಿ ಪಾಟೀಲ್, ಕೆ.ಎನ್ ರಾಜಣ್ಣ, ಶಾಸಕರಾದ ಶರತ್ ಬಚ್ಚೇಗೌಡ, ಶಿವಲಿಂಗೇಗೌಡ, ಮತ್ತಿತರ ಮುಖಂಡರು ಉಪಸ್ಥಿತರಿದ್ದರು. https://kannadanewsnow.com/kannada/javelin-star-neeraj-chopra-qualifies-for-diamond-league-season-finale-in-brussels/ https://kannadanewsnow.com/kannada/breaking-instagram-star-younis-zaroora-taken-into-police-custody-in-bengaluru/
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಜಾವೆಲಿನ್ನಲ್ಲಿ ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಮುಂಬರುವ ಡೈಮಂಡ್ ಲೀಗ್ ಋತುವಿನ ಫೈನಲ್ನಲ್ಲಿ ಸ್ಥಾನ ಪಡೆದಿದ್ದಾರೆ. ಬ್ರಸೆಲ್ಸ್ನಲ್ಲಿ ಸೆಪ್ಟೆಂಬರ್ 13-14ರವರೆಗೆ ನಡೆಯಲಿರುವ ಸೀಸನ್ ಫಿನಾಲೆ ಎರಡು ದಿನಗಳ ಕಾಲ ನಡೆಯಲಿದೆ. ದೋಹಾ ಮತ್ತು ಲೌಸಾನ್ ನಲ್ಲಿ ನಡೆದ ಏಕದಿನ ಕೂಟಗಳಲ್ಲಿ ಚೋಪ್ರಾ ಎರಡು ಎರಡನೇ ಸ್ಥಾನಗಳಿಂದ ೧೪ ಅಂಕಗಳನ್ನು ಗಳಿಸಿದರು. ಆದಾಗ್ಯೂ, ಅವರು ಗುರುವಾರ ಜ್ಯೂರಿಚ್ನಲ್ಲಿ ನಡೆದ ಅಂತಿಮ ಸರಣಿ ಸಭೆಯಿಂದ ಹೊರಗುಳಿದರು. 26ರ ಹರೆಯದ ಸೈನಾ ಪ್ರಸ್ತುತ ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ಚ್ ಅವರಿಗಿಂತ ಎರಡು ಅಂಕ ಹಿಂದಿದ್ದಾರೆ. ಗ್ರೆನಡಾದ ಆಂಡರ್ಸನ್ ಪೀಟರ್ಸ್ ಮತ್ತು ಜರ್ಮನಿಯ ಜೂಲಿಯನ್ ವೆಬರ್ ಕ್ರಮವಾಗಿ 29 ಮತ್ತು 21 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಜ್ಯೂರಿಚ್ ಪಂದ್ಯಾವಳಿಯಲ್ಲಿ ಪೀಟರ್ಸ್ ವೆಬರ್ ಅವರನ್ನು ಅಲ್ಪ ಅಂತರದಿಂದ ಸೋಲಿಸಿದ್ದರು. 2021ರ ಟೋಕಿಯೊ ಒಲಿಂಪಿಕ್ಸ್ನಲ್ಲಿ ಚಿನ್ನ ಮತ್ತು ಕಳೆದ ತಿಂಗಳು ಪ್ಯಾರಿಸ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಚೋಪ್ರಾ, ಈ ಋತುವಿನಾದ್ಯಂತ ಫಿಟ್ನೆಸ್…
ಬೆಂಗಳೂರು: ಜ್ಞಾನಭಾರತಿಯ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಆರು ಸಿಂಡಿಕೇಟ್ ಸದಸ್ಯರನ್ನು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿತ್ತು. ಅದರಲ್ಲಿ ರಮೇಶ್ ಬಾಬು ಎಂಬುವರ ಹೆಸರು ಕೂಡ ಇತ್ತು. ಅದು ನಾನಲ್ಲ. ಅವರು ರಾಮನಗರ ನಿವಾಸಿಯಾಗಿರುತ್ತಾರೆ. ನಾನು ಯಾವುದೇ ವಿವಿ ಸಿಂಡಿಕೇಟ್ ಸದಸ್ಯನಾಗಿ ನಾಮನಿರ್ದೇಶನ ಹೊಂದಿರುವುದಿಲ್ಲ. ಅಂದಹ ಆಪೇಕ್ಷೆಯನ್ನು ಪಟ್ಟಿರುವುದಿಲ್ಲ ಎಂಬುದಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ನಿಯಮಾನುಸಾರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಸಿಂಡಿಕೇಟ್ ಸದಸ್ಯರನ್ನು ನಾಮನಿರ್ದೇಶನ ಮಾಡಿ 27-08-2024 ರಂದು ಅಧಿಸೂಚನೆ ಹೊರಡಿಸಿರುತ್ತದೆ. ಸದರಿ ಅಧಿಸೂಚನೆಯ ಮೂಲಕ ಬೆಂಗಳೂರು ವಿಶ್ವ ವಿದ್ಯಾಲಯಕ್ಕೆ (ಜ್ಞಾನಭಾರತಿ) ಆರು ಸಿಂಡಿಕೇಟ್ ಸದಸ್ಯರನ್ನು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮದ ಅಡಿಯಲ್ಲಿ ಪ್ರದರ್ಥವಾದ ಅಧಿಕಾರವನ್ನು ಚಲಾಯಿಸಿ ಮೂರು ವರ್ಷದ ಅವಧಿಗೆ ನಾಮನಿರ್ದೇಶನ ಮಾಡಿದ್ದು, ಅದರಲ್ಲಿ ರಾಮನಗರದ ನಿವಾಸಿಯಾದ ರಮೇಶ್…
ನವದೆಹಲಿ: ಒಲಂಪಿಕ್ಸ್ ನಲ್ಲಿ ಪದಕ ವಂಚಿತ ವಿನೇಶ್ ಪೋಗಟ್ ಅವರು, ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಕಾರಣದಿಂದ ಕಾಂಗ್ರೆಸ್ ಪಕ್ಷ ಸೇರುವ ಮುನ್ನವೇ ತಾವು ಕರ್ತವ್ಯ ನಿರ್ವಹಿಸುತ್ತಿದ್ದಂತ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ನನ್ನ ಜೀವನದಲ್ಲಿ ಸ್ಮರಣೀಯ ಮತ್ತು ಹೆಮ್ಮೆಯ ಅವಧಿಯಾಗಿದೆ ಎಂದಿದ್ದಾರೆ. ನನ್ನ ಜೀವನದ ಈ ಹಂತದಲ್ಲಿ, ನಾನು ರೈಲ್ವೆ ಸೇವೆಯಿಂದ ಹಿಂದೆ ಸರಿಯಲು ಮತ್ತು ನನ್ನ ರಾಜೀನಾಮೆ ಪತ್ರವನ್ನು ಭಾರತೀಯ ರೈಲ್ವೆಯ ಸಕ್ಷಮ ಅಧಿಕಾರಿಗಳಿಗೆ ಸಲ್ಲಿಸಲು ನಿರ್ಧರಿಸಿದ್ದೇನೆ ಎಂದಿದ್ದಾರೆ. ರಾಷ್ಟ್ರದ ಸೇವೆಯಲ್ಲಿ ರೈಲ್ವೆ ನನಗೆ ನೀಡಿದ ಈ ಅವಕಾಶಕ್ಕಾಗಿ ನಾನು ಯಾವಾಗಲೂ ಭಾರತೀಯ ರೈಲ್ವೆ ಕುಟುಂಬಕ್ಕೆ ಕೃತಜ್ಞನಾಗಿರುತ್ತೇನೆ ಎಂದು ತಿಳಿಸಿದ್ದಾರೆ. https://twitter.com/Phogat_Vinesh/status/1831965621631750353 https://kannadanewsnow.com/kannada/time-magazine-has-released-a-list-of-the-worlds-100-most-influential-people-including-actor-anil-kapoor/ https://kannadanewsnow.com/kannada/breaking-instagram-star-younis-zaroora-taken-into-police-custody-in-bengaluru/
ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ನಿರೀಕ್ಷೆಗೂ ಮೀರಿ ಬಹುಮತ ನೀಡಿದ ಪರಿಣಾಮ ಸಂಸದರಾದ ಕುಮಾರಸ್ವಾಮಿ ಅವರು ಪಾಸ್ ಪೋರ್ಟ್ ಸೇವಾ ಕೇಂದ್ರವನ್ನು ಮಂಡ್ಯಗೆ ಸ್ಥಳಾಂತರ ಮಾಡುವ ಮೂಲಕ ಕ್ಷೇತ್ರದ ಜನತೆಗೆ ನೀಡಿದ ಬಹುದೊಡ್ಡ ಬಹುಮಾನ ಎಂದು ಶಾಸಕ ಕೆ.ಎಂ.ಉದಯ್ ಲೇವಡಿ ಮಾಡಿದರು. ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಿಂದ ಕೊಲ್ಲಿ ವೃತ್ತದವರೆಗೆ ಹಳೇ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮರು ಡಾಂಬರೀಕರಣ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ನಿರೀಕ್ಷೆಗೂ ಮೀರಿ ಬಹುಮತ ನೀಡಿದ ಪರಿಣಾಮ ಮಾನ್ಯ ಸಂಸದರಾದ ಕುಮಾರಸ್ವಾಮಿ ಅವರು ಪಾಸ್ ಪೋರ್ಟ್ ಸೇವಾ ಕೇಂದ್ರವನ್ನು ಮಂಡ್ಯಗೆ ಸ್ಥಳಾಂತರ ಮಾಡುವ ಮೂಲಕ ಕ್ಷೇತ್ರದ ಜನತೆಗೆ ಬಹುದೊಡ್ಡ ಬಹುಮಾನ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಕೇಂದ್ರದಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ತೆರೆಯಲು ತುಂಬಾ ಕಷ್ಟದ ಕೆಲಸ ಆದರೆ, ಈಗಿರುವ ಪಾಸ್ ಪೋರ್ಟ್ ಸೇವಾ ಕೇಂದ್ರದಿಂದ ತಾಲೂಕಿನ…
ಶಿವಮೊಗ್ಗ: ಈ ದೇಶದಲ್ಲಿ ತಲೆಬಾಗುವುದು ಎಂದರೇ ಅದು ಶಿಕ್ಷಕರಿಗೆ ಮಾತ್ರ. ದೇಶದ ಬದಲಾಗಣೆಗೆ ಶಿಕ್ಷಕರ ಪಾತ್ರ ಹೆಚ್ಚು ಎಂಬುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಇಂದು ಸಾಗರ ನಗರದ ನೆಹರೂ ಮೈದಾನದಲ್ಲಿ ನಡೆದಂತ ಶಿಕ್ಷಕರ ದಿನಾಚರಣೆಯಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ನೀವು ಕೇವಲ ಶಿಕ್ಷಕರಲ್ಲ. ಈ ನಾಡಿನ ಶಿಲ್ಪಿಗಳು. ಶಿಕ್ಷಣದ ಕ್ರಾಂತಿ ನಮ್ಮ ತಾಲ್ಲೂಕಿನಲ್ಲಿ ನಿಮ್ಮಿಂದ ನಡೆಯುತ್ತಿದೆ ಎಂದರು. ಸಾಗರ ತಾಲ್ಲೂಕಿನಲ್ಲಿ ಗಣನೀಯ ಸಾಧನೆ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿದೆ. 24 ಸರ್ಕಾರಿ ಶಾಲೆಗಳಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ತಂದುಕೊಟ್ಟಿದ್ದೀರಿ. ಈ ಸಾಧನೆಗೆ ಕಾರಣೀಭೂತರಾದಂತ 24 ಶಾಲೆಯ ಶಿಕ್ಷಕರಿಗೂ ಶಾಸಕರಾಗಿ ತಾನು ಸನ್ಮಾನ ಮಾಡಲಿದ್ದೇನೆ. ಅಂದು ಎಲ್ಲಾ ಶಾಲೆಯ ಶಿಕ್ಷಕರು ಬರಬೇಕು ಎಂದು ಮನವಿ ಮಾಡಿದರು. ಈ ದೇಶದಲ್ಲಿ ತಲೆಬಾಗುವುದು ಶಿಕ್ಷಕರಿಗೆ ಮಾತ್ರ. ದೇಶದ ಬದಲಾವಣೆ ಆಗುತ್ತಿದೆ ಅಂದ್ರೆ ಅದು ಶಿಕ್ಷಕರಿಂದಲೇ ಆಗಿದೆ. ದೇಶದಲ್ಲಿ ಶಿಕ್ಷಕರ ಪಾತ್ರ ಹೆಚ್ಚು ಎಂಬುದಾಗಿ ಶಿಕ್ಷಕರನ್ನು ಕೊಂಡಾಡಿದರು. ಸಾಗರ…
ಬೆಂಗಳೂರು: ಚಾಮುಂಡಿ ಪ್ರಾಧಿಕಾರದ ಸಭೆ ನಡೆಸಿರುವುದು ನ್ಯಾಯಾಂಗ ನಿಂದನೆಯಲ್ಲ. ಸಭೆ ನಡೆದ ಸಂದರ್ಭದಲ್ಲಿ ಯಾವುದೇ ತಡೆಯಾಜ್ಞೆ ಇರಲಿಲ್ಲವೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ಮಾಧ್ಯಮ ಪ್ರತಿನಿಧಿಗಳಿಗೆ ಇಂದಿಲ್ಲಿ ತಿಳಿಸಿದರು. ಸಚಿವ ಸಂಪುಟದ ನಿರ್ಣಯಗಳನ್ನು ವಿವರಿಸಿದ ಸಚಿವರು ಪ್ರಮೋದಾ ದೇವಿ ಒಡೆಯರ್ ರವರು ತಡೆಯಾಜ್ಞೆ ಇದ್ದರೂ ಪ್ರಾಧಿಕಾರದ ಸಭೆ ನಡೆಸುವ ಮೂಲಕ ನ್ಯಾಯಾಂಗ ನಿಂದನೆ ಮಾಡಿರುವ ಆರೋಪ ಸರಿಯಲ್ಲ. ಇಂದು ಈ ರಿಟ್ ಅರ್ಜಿ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಾಗ ಸಭೆ ನಡೆದ ದಿನಾಂಕದಂದು ಯಾವುದೇ ತಡೆಯಾಜ್ಞೆ ಇರಲಿಲ್ಲವೆಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆಂದು ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎನ್. ದೇವದಾಸ ರವರು ಪತ್ರ ಮುಖೇನ ತಿಳಿಸಿರುವುದನ್ನು ತಾವು ಸಚಿವ ಸಂಪುಟದ ಸಭೆಯ ಗಮನಕ್ಕೆ ತಂದಿರುವುದಾಗಿ ಸಚಿವರು ವಿವರಿಸಿದರು. ಚಾಮುಂಡಿ ಪ್ರಾಧಿಕಾರದ ಕಾನೂನು ಅಸ್ತಿತ್ವದಲ್ಲಿದ್ದು, ಈ ಕಾನೂನಿನ ಕಲಂಗಳನ್ನು ಜಾರಿಗೆ ತರಲು ಅಥವಾ ಅನುಷ್ಠಾನಗೊಳಿಸಲು ಯಾವುದೇ ನ್ಯಾಯಾಂಗದ ಅಡ್ಡಿಗಳಿಲ್ಲವೆಂದು…