Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ತ್ರಿಭಾಷಾ ಸೂತ್ರವನ್ನು ದ್ವಿಭಾಷಾ ನೀತಿಯೊಂದಿಗೆ ಬದಲಾಯಿಸುವ ಪ್ರಸ್ತಾಪವು ರಾಜ್ಯಾದ್ಯಂತ ಹಿಂದಿ ಶಿಕ್ಷಕರಲ್ಲಿ ಆತಂಕವನ್ನು ಉಂಟುಮಾಡಿದೆ. ಒಂದು ವೇಳೆ ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಜಾರಿಯಾಗಿದ್ದೇ ಆದಲ್ಲಿ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ 25,000 ಹಿಂದಿ ಶಿಕ್ಷಕರು ಕೆಲಸ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಲಿದೆ ಎಂಬುದಾಗಿ ಹೇಳಲಾಗುತ್ತಿದೆ. ರಾಜ್ಯ ಶಿಕ್ಷಣ ನೀತಿ (SEP) ಸಮಿತಿಯು ಮಂಡಿಸಿರುವ ಈ ಸಲಹೆಯು ದೊಡ್ಡ ಪ್ರಮಾಣದ ಉದ್ಯೋಗ ಅಭದ್ರತೆಯ ಭಯವನ್ನು ಹುಟ್ಟುಹಾಕಿದೆ. ಪ್ರಸ್ತುತ, ಕರ್ನಾಟಕದ ಶಾಲೆಗಳಲ್ಲಿ 6 ನೇ ತರಗತಿಯಿಂದ ಹಿಂದಿಯನ್ನು ಮೂರನೇ ಭಾಷೆಯಾಗಿ ಕಲಿಸಲಾಗುತ್ತದೆ. ಸರ್ಕಾರಿ ಶಾಲೆಗಳಲ್ಲಿ ಸುಮಾರು 6,500 ಹಿಂದಿ ಶಿಕ್ಷಕರು, ಅನುದಾನಿತ ಶಾಲೆಗಳಲ್ಲಿ 8,400 ಮತ್ತು ಖಾಸಗಿ ಶಾಲೆಗಳಲ್ಲಿ 10,600 ಹಿಂದಿ ಶಿಕ್ಷಕರು ಇದ್ದಾರೆ. ಇದಲ್ಲದೆ, ಸುಮಾರು 1,200 ಹಿಂದಿ ಉಪನ್ಯಾಸಕರು ಮತ್ತು ಸಾವಿರಾರು ಅತಿಥಿ ಶಿಕ್ಷಕರು ಉದ್ಯೋಗದಲ್ಲಿದ್ದಾರೆ. ಇದಲ್ಲದೆ, ಹಿಂದಿಯಲ್ಲಿ ಪರಿಣತಿ ಹೊಂದಿರುವ ಸುಮಾರು 6,800 ಬಿ.ಎಡ್ ಪದವೀಧರರು ಉದ್ಯೋಗಾವಕಾಶಗಳಿಗಾಗಿ ಕಾಯುತ್ತಿದ್ದಾರೆ. ರಾಜ್ಯವು ದ್ವಿಭಾಷಾ ನೀತಿಯನ್ನು ಜಾರಿಗೆ ತಂದರೆ, ಸುಮಾರು 40,000 ಹಿಂದಿ…

Read More

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ ಎನ್ನುವಂತೆ ತಹಶೀಲು ಯೋಜನೆಯನ್ನು ಎಲ್ಲಾ ಮಾದರಿಯ ಪಡಿತರ ಚೀಟಿದಾರರಿಗೆ ತಲುಪಿಸಲು ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಿದವಿರಗೆ ಈ ಎಲ್ಲಾ ಸೌಲಭ್ಯಗಳು ಲಭ್ಯವಾಗಲಿದ್ದಾವೆ. ಈ ಬಗ್ಗೆ ಆಹಾರ ಇಲಾಖೆಯಿಂದ ಮಾಹಿತಿ ನೀಡಿದ್ದು,  ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಭಾಷಿಸಿ, ಡಿಜಿಟಲ್ ಇಂಡಿಯಾ ಜೆನೆಸಿಸ್ ಇಂಡಿಯಾ ಆಫ್ರಿಕ್ ಗೊಬಲ್ ಮತ್ತು ಮಸ್ಕಿಯ ಮೂಲ ಉದ್ದೇಶ ಎಲ್ಲಾ ಕ್ಷೇತ್ರದಲ್ಲಿ ಡಿಜಿಟಲ್ ತಂತ್ರಜ್ಞಾನ ಒದಗಿಸುವುದಾಗಿರುತ್ತದೆ ಅದರಂತೆ ಭಾರತ ಸರ್ಕಾರಿ (ಯು ಆರ್ ಸಿ) ಕದ್ರಮ್ ಕೆಆರ್-24 005020) ಕವಲು ಯೋಜನೆಯಲ್ಲಿ ಸೂಚಿಸಿರುವಂತೆ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಎಲ್ಲಾ ಮಾದರಿಯ ಪಡಿತರ ಚೀಟಿದಾರರಿಗೆ ಕೂ ಆರ್ ಕೋಡ್ ತಂತ್ರಾಂಶವಿರುವ ಡಿಜಿಟಲ್ ಏಕರೂಪದ ಗುರುತಿನ ಕಾರ್ಡ್ ನೀಡಿ ರ್ಥಿಕ ಕ್ಷೇತ್ರದಲ್ಲಿ ಜೀವನ ಮಟ್ಟ ಸುಧಾರಿಸಲು ನೆರವಾಗುವ ಉದ್ದೇಶ ಈ ಯೋಜನೆಯದಾಗಿರುತ್ತದೆ. ಜೊತೆಗೆ ಅತಿವೃಷ್ಟಿ ಅನಾವತಿ, ತುರ್ತು ಪರಿಸ್ಥಿತಿ ಸಮಯದಲ್ಲಿ ಮೂಲ ಭೂತ ಸೌಕರ್ಯಗಳನ್ನು ಹಾಗು…

Read More

ತುಮಕೂರು: ಅಪ್ರಾಪ್ತರಿಗೆ ಬೈಕ್ ಚಾಲನೆ ಮಾಡೋದಕ್ಕೆ ಕೊಡುವಂತ ಪೋಷಕರು ಎಚ್ಚರಿಕೆ ವಹಿಸೋದು ಒಳಿತು. ಇಲ್ಲವಾದಲ್ಲಿ ದಂಡ ಕಟ್ಟಿಟ್ಟ ಬುದ್ಧಿಯಾಗಿದೆ. ಹೌದು.. ಹೀಗೆ ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಪೊಲೀಸರಿಂದ ಅಪ್ರಾಪ್ತ ಬಾಲಕ ಬೈಕ್ ಚಾಲನೆ ಸಂದರ್ಭದಲ್ಲಿ ಬೈಕ್ ಜಪ್ತಿ ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿ ತಿಪಟೂರು ಸಿಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ತಿಪಟೂರು ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ಕೋರ್ಟ್ ನ್ಯಾಯಮೂರ್ತಿಗಳು ನಿಂಗರಾಜು ಎನ್ನುವಂತ ಅಪ್ರಾಪ್ತ ಬಾಲಕನ ಪೋಷಕರಿಗೆ 25,000 ದಂಡವನ್ನು ವಿಧಿಸಿದೆ. ಈ ಮೂಲಕ ಅಪ್ರಾಪ್ತನಿಗೆ ಬೈಕ್ ಚಾಲನೆಗೆ ನೀಡಿದಂತ ತಂದೆಗೆ ದಂಡದ ಶಾಕ್ ನೀಡಿದೆ. ಸೋ ಪೋಷಕರಾದಂತ ನೀವು ಎಚ್ಚರಿಕೆ ವಹಿಸಿ. ಅಪ್ರಾಪ್ತರಿಗೆ ಯಾವುದೇ ವಾಹನ ಚಾಲನೆ ನೀಡಲು ಕೊಡಬೇಡಿ ಎಂಬುದು ನಮ್ಮ ಮನವಿ ಕೂಡ ಆಗಿದೆ. https://twitter.com/SPTumkur/status/1959888683601178817

Read More

ಶಿವಮೊಗ್ಗ: ಕಳೆದ ಎರಡು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇಂದು ಕೂಡ ಎಡಬಿಡದೆ ಮಳೆಯಾಗುತ್ತಿದೆ. ಈ ಕಾರಣದಿಂದ ನಾಳೆ ಸಾಗರ, ಹೊಸನಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇತ್ತ ಸೊರಬ ತಾಲ್ಲೂಕಿನ ಶಾಲೆಗಳಿಗೆ ಮಳೆಯ ಕಾರಣ ರಜೆಯ ನಿರ್ಧಾರವನ್ನು ಆಯಾ ಶಾಲಾ-ಕಾಲೇಜು ಮುಖ್ಯಸ್ಥರಿಗೆ ನೀಡಿರುವುದಾಗಿ ತಹಶೀಲ್ದಾರ್ ಮಂಜುಳಾ ಹೆಗಡಾಳ್ ತಿಳಿಸಿದ್ದಾರೆ. ಈ ಕುರಿತಂತೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು, ಸೊರಬ ತಾಲ್ಲೂಕಿನ ಕೆಲ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದರೇ, ಮತ್ತೆ ಕೆಲವೆಡೆ ಕಡಿಮೆ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಸೊರಬ ತಾಲ್ಲೂಕಿನಾಧ್ಯಂತ ಶಾಲಾ-ಕಾಲೇಜುಗಳಿಗೆ ರಜೆಯ ನಿರ್ಧಾರವನ್ನು ಕೈಗೊಳ್ಳುತ್ತಿಲ್ಲ ಎಂಬುದಾಗಿ ತಿಳಿಸಿದರು. ನಾಳೆ ಎಲ್ಲೆಲ್ಲಿ ಭಾರೀ ಮಳೆಯಾಗುತ್ತಿದೆಯೋ ಆ ಭಾಗದ ಶಾಲೆಯ ಮುಖ್ಯೋಪಾಧ್ಯಾಯರು, ಕಾಲೇಜು ಪ್ರಾಂಶುಪಾಲರು ರಜೆಯನ್ನು ನೀಡುವಂತ ತೀರ್ಮಾನ ಕೈಗೊಳ್ಳಲು ಸೂಚಿಸಲಾಗಿದೆ. ಅದರಂತೆ ವ್ಯಾಪಕವಾಗಿ ಮಳೆಯಾಗುತ್ತಿರುವಂತ ಸೊರಬ ತಾಲ್ಲೂಕಿನ ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ಆಯಾ ಶಾಲಾ-ಕಾಲೇಜುಗಳ ಮುಖ್ಯಸ್ಥರು ರಜೆಯ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂಬುದಾಗಿ ಹೇಳಿದರು. ವರದಿ; ವಸಂತ ಬಿ ಈಶ್ವರಗೆರೆ..,…

Read More

ಚಿಕ್ಕಬಳ್ಳಾಪುರ: ಕೆನರಾ ಬ್ಯಾಂಕ್‌ ಒಟ್ಟು 60 ಸಾವಿರ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡಲಿದೆ ಎಂದು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ರಾಜು ಬುಧವಾರ (ಆಗಸ್ಟ್ 27) ಘೋಷಿಸಿದರು. ತಾಲ್ಲೂಕಿನ ಮುದ್ದೇನಹಳ್ಳಿಯಲ್ಲಿರುವ ಸತ್ಯ ಸಾಯಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್‌ಗೆ ‘ಸಿಎಸ್‌ಆರ್ ಸರ್ಕಲ್ ಆಫ್ ಹಾನರ್’ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬ್ಯಾಂಕ್‌ನ ಪರವಾಗಿ ಅವರು ಮಾತನಾಡಿದರು. ಕೆನರಾ ಬ್ಯಾಂಕ್‌ಗೆ ಒಟ್ಟು 10 ಸಾವಿರ ಶಾಖೆಗಳಿವೆ. ಎಲ್ಲ ಶಾಖೆಗಳೂ 5 ರಿಂದ 10 ನೇ ತರಗತಿ ಓದುತ್ತಿರುವ ಸರ್ಕಾರಿ ಶಾಲೆಯ 6 ವಿದ್ಯಾರ್ಥಿನಿಯರನ್ನು ಗುರುತಿಸಿ ವಿದ್ಯಾರ್ಥಿ ವೇತನ ನೀಡಲಿವೆ. ಈ ವಿದ್ಯಾರ್ಥಿನಿಯರಿಗೆ ಹಣಕಾಸಿನ ನೆರವು ಒದಗಿಸುವ ಜೊತೆಗೆ ಅವರನ್ನು ಆರ್ಥಿಕ ಸಾಕ್ಷರರನ್ನಾಗಿಯೂ ಮಾಡುತ್ತಿದ್ದೇವೆ ಎಂದು ವಿವರಿಸಿದರು. ನಮ್ಮ 177 ಪ್ರಾದೇಶಿಕ ಕಚೇರಿಗಳು ತಲಾ ಒಂದು ಹಿಂದುಳಿದ ಹಳ್ಳಿಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗಾಗಿ ತಲಾ 10 ಲಕ್ಷ ರೂಪಾಯಿ ಖರ್ಚು ಮಾಡುತ್ತಿವೆ. ನಮ್ಮ ಬ್ಯಾಂಕ್‌ ನಿರ್ವಹಿಸುತ್ತಿರುವ 105…

Read More

ಉತ್ತರ ಕನ್ನಡ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ನಾಳೆ ಉತ್ತರ ಕನ್ನಡ ಜಿಲ್ಲೆಯ 10 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದು, ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 10 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ. ನಾಳೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೋಯಿಡಾ, ಯಲ್ಲಾಪುರ, ದಾಂಡೇಲಿ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಆದೇಶಿಸಿದ್ದಾರೆ. https://kannadanewsnow.com/kannada/note-these-documents-are-mandatory-for-adding-or-correcting-names-in-the-ration-card/ https://kannadanewsnow.com/kannada/chitradurga-the-accused-was-arrested-within-24-hours-of-the-case-being-registered-by-the-chalakkere-police/

Read More

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಠಾಣೆಯ ಪೊಲೀಸರು ಕೇಸ್ ದಾಖಲಾದಂತ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ಲದೇ ಬಂಧಿತ ಕಳ್ಳನಿಂದ ಸುಮಾರು 96,96,800 ಮೌಲ್ಯದ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,  ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಚಳ್ಳಕೆರೆಯ ಉಡುಪಿ ಗಾರ್ಡನ್ ಹೊಟೇಲ್‌ನಲ್ಲಿ ಹಣವನ್ನು ಕಾರಿನಲ್ಲಿ ಇಟ್ಟು ಊಟ ಮಾಡಲು ಹೋಗಿದ್ದು ಕೆಎ-51-ಸಿ-3434 ನ ಕಾರಿನ ಚಾಲಕ ರಮೇಶ್, ಊಟ ಮಾಡಿ ಹೊರಗಡೆ ಹೋಗಿ ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಕಾರಿನಲ್ಲಿದ್ದ 97,00,000 /- ಹಣವನ್ನು ಕಳ್ಳತನದಲ್ಲಿ ತೆಗೆದುಕೊಂಡು ಹೋಗಿರುವ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣಿಯ ಮೊ.ನಂ.396/2025 ಕಲಂ.303(2) ಬಿ ಎನ್ ಎಸ್ ರೀತ್ಯ ಪ್ರಕರಣ ದಾಖಲಾಗಿರುತ್ತದೆ. ಸದರಿ ಪ್ರಕರಣಗಳ ಆರೋಪಿತರ ಪತ್ತೆಗಾಗಿ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್‌ ಬಂಡಾರು ಎಪಿಎಸ್, ಪೊಲೀಸ್ ಅಧೀಕ್ಷಕರು ಚಿತ್ರದುರ್ಗ ಜಿಲ್ಲೆ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ಶಿವಕುಮಾರ್ ಇವರುಗಳ ಮಾರ್ಗದರ್ಶನದಲ್ಲಿ, ಟಿ.ಜ ರಾಜಣ್ಣ ಡಿ.ವೈ.ಎಸ್.ಪಿ ಚಳ್ಳಕೆರ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಇಂದು ಕೂಡ ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಇಂದು ಸಾಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆ ಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿದೆ. ಹೀಗಾಗಿ ದಿನಾಂಕ 28.08.2025 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಶಾಲೆ ಹಾಗೂ ಡಿಪ್ಲೋಮೋ ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ ಎಂದಿದ್ದಾರೆ. ಇನ್ನೂ ನಾಳೆಯ ಶಾಲಾ-ಕಾಲೇಜುಗಳ ರಜಾ ಅವಧಿಯ ತರಗತಿ ಪಾಠ ಪ್ರವಚನಗಳ್ನುಮುಂದಿನ ರಜಾ ದಿವಸಗಳಲ್ಲಿ ಸರಿದೂಗಿಸಲು ಆದೇಶದಲ್ಲಿ ಸಾಗರ ತಹಶೀಲ್ದಾರ್ ರಶ್ಮೀ ಹಾಲೇಶ್ ತಿಳಿಸಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ.., ಸಂಪಾದಕರು

Read More

ಬೆಂಗಳೂರು: ಕರ್ನಾಟಕ ಮಹರ್ಷಿ ವಾರ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಸುಮಾರು 5 ಕೋಟಿ ಮೌಲ್ಯದ ಹಲವರ ಆಸ್ತಿ-ಪಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಮೂಲಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರದಲ್ಲಿ ಭಾಗಿಯಾದವರಿಗೆ ಇಡಿ ಬಿಗ್ ಶಾಕ್ ನೀಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಇಡಿಯು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ (KMVSTDCL) ಪ್ರಕರಣದಲ್ಲಿ, PMLA, 2002 ರ ನಿಬಂಧನೆಗಳ ಅಡಿಯಲ್ಲಿ ಬೆಂಗಳೂರಿನ ED, ಸ್ಥಿರ ಆಸ್ತಿಗಳು ಮತ್ತು ಬ್ಯಾಂಕ್ ಬ್ಯಾಲೆನ್ಸ್ ರೂಪದಲ್ಲಿ 5 ಕೋಟಿ ರೂ. (ಅಂದಾಜು) ವರೆಗಿನ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ತಿಳಿಸಿದೆ. ಅಂದಹಾಗೇ ಜಾರಿ ನಿರ್ದೇಶನಾಲಯದಿಂದ ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಗೋಲಪಲ್ಲಿ ಕಿಶೋರ ರೆಡ್ಡಿ, ನೆಕ್ಕುಂಟಿ ನಾಗರಾಜ್, ಎಟಕೇರಿ ಸತ್ಯನಾರಾಯಣ, ಚಂದ್ರಮೋಹನ್ ಅವರುಗಳಿಗೆ ಸೇರಿದಂತ 4.45 ಕೋಟಿ ಮೌಲ್ಯದ ಭೂಮಿ, ಫ್ಲಾಟ್ ಹಾಗೂ ಫೈನಾನ್ಸ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಇದ್ದಂತ…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, “ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯ 31.12.2024 ರ ನಂತರವೂ ಸಾಲ ನೀಡುವ ಅವಧಿಯನ್ನು ಪುನರ್ರಚನೆ ಮತ್ತು ವಿಸ್ತರಿಸಲು” ಅನುಮೋದನೆ ನೀಡಿದೆ. ಸಾಲ ನೀಡುವ ಅವಧಿಯನ್ನು ಈಗ ಮಾರ್ಚ್ 31, 2030 ರವರೆಗೆ ವಿಸ್ತರಿಸಲಾಗಿದೆ. ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, “ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (PM SWANidhi) ಯೋಜನೆಯ 31.12.2024 ರ ನಂತರವೂ ಸಾಲ ನೀಡುವ ಅವಧಿಯನ್ನು ಪುನರ್ರಚಿಸಲು ಮತ್ತು ವಿಸ್ತರಿಸಲು” ಅನುಮೋದನೆ ನೀಡಿದೆ. ಸಾಲ ನೀಡುವ ಅವಧಿಯನ್ನು ಈಗ ಮಾರ್ಚ್ 31, 2030 ರವರೆಗೆ ವಿಸ್ತರಿಸಲಾಗಿದೆ. ಈ ಯೋಜನೆಯ ಒಟ್ಟು ವೆಚ್ಚ *7,332 ಕೋಟಿ. ಪುನರ್ರಚಿಸಲಾದ ಯೋಜನೆಯು 50 ಲಕ್ಷ ಹೊಸ ಫಲಾನುಭವಿಗಳನ್ನು ಒಳಗೊಂಡಂತೆ 1.15 ಕೋಟಿ ಫಲಾನುಭವಿಗಳಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ.…

Read More