Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಜೂನ್ 4 ರಂದು ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಶಸ್ತಿಯನ್ನು ಗೆದ್ದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದ ವಾರಗಳ ನಂತರ, ಕರ್ನಾಟಕ ಸರ್ಕಾರವು ದೊಡ್ಡ ಜನಸಂದಣಿಯನ್ನು ನಿರ್ವಹಿಸಲು ಮತ್ತು ಸಾಮೂಹಿಕ ಸಭೆಗಳಲ್ಲಿ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವಿವರವಾದ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು (SOPs) ಬಿಡುಗಡೆ ಮಾಡಿದೆ. ಸಾರ್ವಜನಿಕ ಕಾರ್ಯಕ್ರಮಗಳು ಹೆಚ್ಚುತ್ತಿರುವ ಕಾರಣ ಪ್ರತಿಕ್ರಿಯೆಯಾಗಿ SOP ಗಳನ್ನು ರೂಪಿಸಲಾಗಿದೆ. ಅವುಗಳಲ್ಲಿ ಕೆಲವು ಕಾಲ್ತುಳಿತ ಅಥವಾ ಕಳಪೆ ಸಮನ್ವಯದಿಂದಾಗಿ ದುರಂತವಾಗಿ ಮಾರ್ಪಟ್ಟಿವೆ. ಸುರಕ್ಷತೆ ಮತ್ತು ಯೋಜನೆ ಅತ್ಯಂತ ಆದ್ಯತೆ ಜೀವಗಳನ್ನು ರಕ್ಷಿಸುವುದು. ಆಸ್ತಿಗೆ ಹಾನಿಯಾಗದಂತೆ ತಡೆಯುವುದು ಮತ್ತು ಯಾವುದೇ ಅನಗತ್ಯ ಘರ್ಷಣೆಯನ್ನು ತಪ್ಪಿಸುವುದು SOPಯ ಮುಖ್ಯ ಗುರಿಯಾಗಿದೆ. ಸರ್ಕಾರವು ಮುಂಚಿತವಾಗಿ ಯೋಜಿಸುವ ಮತ್ತು ಒಳಗೊಂಡಿರುವ ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವನ್ನು ಎತ್ತಿ ತೋರಿಸಿದೆ. ಸಾಮಾಜಿಕ ಮಾಧ್ಯಮ ಪ್ರಭಾವ ಮತ್ತು ಕ್ಷಿಪ್ರ ಕ್ರೋಢೀಕರಣ ಇಂದಿನ ಸಭೆಗಳು ಹೆಚ್ಚಾಗಿ ಸ್ವಯಂಪ್ರೇರಿತವಾಗಿರುತ್ತವೆ ಮತ್ತು ಸಾಮಾಜಿಕ ಮಾಧ್ಯಮದಿಂದ ನಡೆಸಲ್ಪಡುತ್ತವೆ ಎಂದು SOPಗಳು ಉಲ್ಲೇಖಿಸುತ್ತವೆ. ಇದಕ್ಕೆ…
ಕೋಲಾರ: ಜಿಲ್ಲೆಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಘಟನೆ ಕೋಲಾರದ ಬಾವನಹಳ್ಳಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಬಾವನಹಳ್ಳಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಕಾರಿನಲ್ಲಿದ್ದ ಮತ್ತೊಬ್ಬರಿಗೆ ಗಾಯವಾಗಿದೆ. ಅವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತ ಗರ್ಭಿಣಿ ಮಹಿಳೆಯನ್ನು ಬಾವನಹಳ್ಳಿ ಬಳಿಯ ಕೊರಚನೂರು ಗ್ರಾಮದ ಅರ್ಚನಾ ಎಂಬುದಾಗಿ ತಿಳಿದು ಬಂದಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/393-permanent-asha-kiran-vision-centers-are-ready-for-eye-health-services-in-the-state-minister-dinesh-gundurao/ https://kannadanewsnow.com/kannada/in-karnataka-82-tigers-have-died-in-five-and-a-half-years/
ಬೆಂಗಳೂರು: ದೃಷ್ಟಿದೋಷ ನಿವಾರಣೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ‘ಆಶಾಕಿರಣ’ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ರಾಜ್ಯದ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳಲ್ಲಿ ನೂತನವಾಗಿ 393 ಆಶಾಕಿರಣ ದೃಷ್ಟಿ ಕೇಂದ್ರಗಳನ್ನ ತೆರೆಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ನೂತನ ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಇದೇ ತಿಂಗಳ 3 ರಂದು ಬುಧವಾರ ಕೇಂದ್ರಗಳಿಗೆ ಚಾಲನೆ ನೀಡಲಿದ್ದಾರೆ ಎಂದರು. ಈ ಮೊದಲು ಆಶಾಲಿರಣ ಯೋಜನೆಯಡಿ ಆಶಾ ಕಾರ್ಯಕರ್ತೆಯರು ಅಭಿಯಾನದ ಮೂಲಕ ಮನೆ ಮನೆಗೆ ತೆರಳಿ ಕಣ್ಣಿನ ತಪಾಸಣೆ ನಡೆಸಿ ಚಿಕಿತ್ಸೆಗೆ ಅನುವಾಗುತ್ತಿದ್ದರು. ನಿಗದಿತ ಸಮಯದಲ್ಲಿ ಅಭಿಯಾನದ ರೀತಿಯಲ್ಲಿ ತಪಾಸಣಾ ಕಾರ್ಯ ನಡೆಯುತ್ತಿತ್ತು. ಇದೀಗ ಸರ್ಕಾರಿ ಆಸ್ಪತ್ರೆಗಳಲ್ಲಿ ಶಾಶ್ವತ ದೃಷ್ಟಿ ಕೇಂದ್ರಗಳನ್ನೇ ಪ್ರಾರಂಭಿಸಲಾಗುತ್ತಿದ್ದು, ನಿರಂತರವಾಗಿ ಕಣ್ಣಿನ ಆರೋಗ್ಯ ಸೇವೆ ಈ ಕೇಂದ್ರಗಳಲ್ಲಿ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಎಲ್ಲ ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು…
ದಕ್ಷಿಣ ಕನ್ನಡ: ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ನಡೆಸಲು ಆದ್ಯತೆ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಎ, ಬಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಗೆ ಆಯಾ ದೇವಸ್ಥಾನಗಳಲ್ಲಿ ಅನುದಾನ ಲಭ್ಯವಿರುತ್ತದೆ. ಆದರೆ ಸಿ ಗ್ರೇಡ್ ದೇವಸ್ಥಾನಗಳಲ್ಲಿ ಅನುದಾನ ಇಲ್ಲದೇ ಇರುವುದರಿಂದ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಯನ್ನು ಶ್ರೀಮಂತ ದೇವಸ್ಥಾನಗಳ ವತಿಯಿಂದ ನಡೆಸಲು ಆದ್ಯತೆ ನೀಡಲಾಗುವುದು ಎಂದರು. ಕುಕ್ಕೆ ದೇವಸ್ಥಾನದ ವತಿಯಿಂದ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು, ಅಭಿವೃದ್ಧಿಯೂ ನಡೆಯುತ್ತಿದೆ ಎಂದರು. ಮೂರು ವರ್ಷದವರೆಗೆ ಪ್ರಾಧಿಕಾರ ಇಲ್ಲ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಕೆಲಸ ಮಾಡಲಾಗುವುದು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಾಧಿಕಾರ ಆಗಬೇಕೆಂಬ ಬೇಡಿಕೆ ಇದೆ. ಈಗ ಸಮಿತಿ ಇರುವುದರಿಂದ ಮುಂದಿನ ಮೂರು ವರ್ಷದವರೆಗೆ ಪ್ರಾಧಿಕಾರ ಮಾಡುವುದಿಲ್ಲ, ಆ ಬಳಿಕ ಯೋಚನೆ ಮಾಡೋಣ ಎಂದರು. ಜಿಲ್ಲೆಯ…
ದಕ್ಷಿಣ ಕನ್ನಡ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿ ಮೇಲ್ಮಹಡಿ ಸಭಾಂಗಣದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ಕುಕ್ಕೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ 30ನೇ ಮಾಸ್ಟರ್ ಪ್ಲಾನ್ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಸುಮಾರು ರೂ.26 ಕೋಟಿ ವೆಚ್ಚದ ಸುತ್ತು ಪೌಳಿ ನಿರ್ಮಾಣ ಕೆಲಸ, ರಥ ಬೀದಿಯ ಬಲಭಾಗದಲ್ಲಿ ಸುಮಾರು 5000 ಜನ ಏಕಕಾಲದಲ್ಲಿ ಕುಳಿತುಕೊಳ್ಳುವ ಭೋಜನ ಶಾಲೆ, ಅಂದಾಜು 80 ರಿಂದ 100 ಕೋಟಿ ವೆಚ್ಚದಲ್ಲಿ ಇಂಜಾಡಿ ಬಳಿ ಯಾತ್ರಿಕರಿಗೆ 820 ಕೊಠಡಿಗಳ ವಸತಿ ಯೋಜನೆ, ರಥಬೀದಿಯ ಇಕ್ಕೆಲದಲ್ಲಿ ಪಾರಂಪರಿಕ ಕಟ್ಟಡ ನಿರ್ಮಾಣ, ಆಧುನಿಕ ಶೌಚಾಲಯ, ಡಾರ್ಮೆಟರಿ ನಿರ್ಮಾಣ, ಈ ಹಿಂದಿನ ವಸತಿ ಗೃಹಗಳಿಗೆ ಕಾಯಕಲ್ಪ, ನೌಕರರಿಗೆ ನೂತನ ವಸತಿ ಗೃಹ ನಿರ್ಮಾಣ, ಕಸ ವಿಲೇವಾರಿ ಘಟಕ, ವ್ಯಾಪಾರ ಮಳಿಗೆ ನಿರ್ಮಾಣ, ಅರಂಪಾಡಿ-ಎಡೋಳಿ ಮೂಲಕ ಸುಬ್ರಹ್ಮಣ್ಯಕ್ಕೆ ಬೈಪಾಸ್ ರಸ್ತೆ ನಿರ್ಮಾಣ ಮೊದಲಾದ ವಿಷಯಗಳ ಕುರಿತು ಚರ್ಚೆ ನಡೆಯಿತು. ಲೋಕೋಪಯೋಗಿ ಅಭಿಯಂತರ ಪ್ರಮೋದ್…
ದಕ್ಷಿಣ ಕನ್ನಡ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೋಮವಾರ ಭೇಟಿ ನೀಡಿದರು. ಶ್ರೀ ದೇವಳಕ್ಕೆ ಆಗಮಿಸಿದ ಅವರನ್ನು ದೇವಳದ ಆನೆ ಯಶಸ್ವಿ ತನ್ನ ಸೊಂಡಿಲಿನಿಂದ ಆಶೀರ್ವದಿಸಿತು. ಬಳಿಕ ಸಚಿವರನ್ನು ಮಂಗಳವಾದಯ ಮತ್ತು ಪೂರ್ಣಕುಂಭದೊಂದಿಗೆ ಶ್ರೀ ದೇವಳಕ್ಕೆ ಕರೆದೊಯ್ಯಲಾಯಿತು. ನಂತರ ಶ್ರೀ ದೇವರ ದರುಶನ ಮಾಡಿದ ಸಚಿವರಿಗೆ ಅರ್ಚಕ ವೇದಮೂರ್ತಿ ಸತ್ಯನಾರಾಯಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ತದನಂತರ ಹೊಸಳಿಗಮ್ಮನ ದರುಶನ ಮಾಡಿ ಪ್ರಸಾದ ಸ್ವೀಕರಿಸಿದರು. ಆಶ್ಲೆಷ ಬಲಿ ಪೂಜಾ ಮಂದಿರ ನಿರ್ಮಾಣದ ಆದೇಶ ಪತ್ರ ಹಸ್ತಾಂತರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಳಿಯ ಆದಿ ಸುಬ್ರಹ್ಮಣ್ಯ ರಸ್ತೆಯ ತುಳಸಿತೋಟ ಎಂಬಲ್ಲಿ ದಾನಿಗಳಾದ ಮಾಜಿ ಸಚಿವ ಮಾಲೂರು ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಅವರ ವತಿಯಿಂದ ನಿರ್ಮಾಣವಾಗಲಿರುವ ಆಶ್ಲೇಷ ಬಲಿ ಪೂಜಾ ಮಂದಿರದ ನಿರ್ಮಾಣ ಕಾಮಗಾರಿಗೆ ದಾನಿಗಳಿಗೆ ಸಚಿವ ರಾಮಲಿಂಗ ರೆಡ್ಡಿ ಆದೇಶ ಪತ್ರ ಹಸ್ತಾಂತರಿಸಿದರು ಹಾಗೂ ದಾನಿಗಳನ್ನು ಗೌರವಿಸಿದರು. ಆಶ್ಲೇಷ ಮಂದಿರಕ್ಕೆ ಶಂಕುಸ್ಥಾಪನೆ ಸಮಾರಂಭ…
ಬೆಂಗಳೂರು: ಶಾಸಕ ಇಕ್ಬಾಲ್ ಹುಸೇನ್ ಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮೂರು ತಿಂಗಳಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆಂಬ ಹೇಳಿಕೆಯ ಹಿನ್ನಲೆಯಲ್ಲಿ ಶೋಕಾಸ್ ನೋಟಿಸ್ ನೀಡಿದ್ದಾರೆ. ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಅವರು ಡಿಕೆ ಶಿವಕುಮಾರ್ ಅವರು ಮೂರು ತಿಂಗಳಲ್ಲಿ ಮುಖ್ಯಮಂತ್ರಿಯಾಗುತ್ತಾರೆ ಎಂಬುದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಏಳಿಸಿತ್ತು. ಈ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಶೋಕಾಸ್ ನೋಟಿಸ್ ಅನ್ನು ಶಾಸಕ ಇಕ್ಬಾಲ್ ಗೆ ನೀಡಿದ್ದಾರೆ. ನೋಟಿಸ್ ನಲ್ಲಿ ಇಕ್ಬಾಲ್ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರವಾಗಿದೆ. ಅಶಿಸ್ತಿನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಒಂದು ವಾರದಲ್ಲಿ ಸಮಜಾಯಿಸಿ ನೀಡುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ. https://kannadanewsnow.com/kannada/valmiki-development-corporation-scam-high-court-orders-to-cancel-sit-and-hand-over-to-cbi/ https://kannadanewsnow.com/kannada/breaking-karnataka-second-puc-exam-3-result-declared-20-22-students-pass-ii-puc-exam-result-2025/
ಬೆಂಗಳೂರು: ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವಂತ 187 ಕೋಟಿ ರೂಪಾಯಿ ಅವ್ಯವಹಾರದ ಬಗ್ಗೆ ಕರ್ನಾಟಕ ಹೈಕೋರ್ಟ್ ಎಸ್ಐಟಿ ತನಿಖೆ ರದ್ದುಗೊಳಿಸಿ, ಸಿಬಿಐ ತನಿಖೆಗೆ ಮಹತ್ವದ ಆದೇಶ ಹೊರಡಿಸಿದೆ. ಇಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಕೋರಿದ್ದಂತ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದಂತ ನ್ಯಾಯಪೀಠವು ವಿಚಾರಣೆ ನಡೆಸಿತು. ಎಸ್ಐಟಿ ತನಿಖೆ ರದ್ದುಗೊಳಿಸಿ, ಸಿಬಿಐ ತನಿಖೆಗೆ ವಹಿಸಬೇಕೆಂದು ರಾಜ್ಯ ಬಿಜೆಪಿ ನಾಯಕರು ಸಲ್ಲಿಸಿದ್ದಂತ ಅರ್ಜಿಯನ್ನು ಮಾನ್ಯ ಮಾಡಿತು. ಅಂತಿಮವಾಗಿ ವಾಲ್ಮೀಕಿ ನಿಗಮದ ಹಗರಣ ಸಂಬಂಧ 187 ಕೋಟಿ ರೂಪಾಯಿ ಅವ್ಯವಹಾರದ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಕೋರಿದಂತೆ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶಿತು. ಹೀಗಾಗಿ ವಾಲ್ಮೀಕಿ ನಿಗಮದ ಹಗರಣವನ್ನು ಇನ್ಮುಂದೆ ಸಿಬಿಐ ತನಿಖೆ ನಡೆಸಲಿದೆ. ಅಂದಹಾಗೇ ಸಿಬಿಐ ತನಿಖೆಗೆ ಕೋರಿ ರಾಜ್ಯ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ, ರಮೇಶ್ ಜಾರಕಿಹೊಳಿ ಸೇರಿದಂತೆ ಇತರೆ ನಾಯಕರು ಹೈಕೋರ್ಟ್ ಗೆ…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದಂತ ಅಕ್ರಮ ಹಣ ವ್ಯವಹಾರ ವರ್ಗಾವಣೆ ಸಂಬಂಧದ ಹಗರಣವನ್ನು ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ವಹಿಸಿತ್ತು. ಇಂತಹ ಹಗರಣವನ್ನು ಸಿಬಿಐನಿಂದ ಸಮಗ್ರ ತನಿಖೆಗೆ ಹೈಕೋರ್ಟ್ ಆದೇಶಿಸಿದೆ. ವಾಲ್ಮೀಕಿ ನಿಗಮದ ಹಗರಣವನ್ನು ಸಿಬಿಐನಿಂದ ಸಮಗ್ರ ತನಿಖೆಗೆ ಕೋರಿ ಅರವಿಂದ ಲಿಂಬಾವಳಿ, ಯತ್ನಾಳ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿರುವಂತ ಹೈಕೋರ್ಟ್ ಈಗ ಸಿಬಿಐ ತನಿಖೆಗೆ ಆದೇಶಿಸಿದೆ. ಅಂದಹಾಗೇ ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ಈವರೆಗೆ ಸಿಬಿಐ ಬ್ಯಾಂಕ್ ವ್ಯವಹಾರದ ಬಗ್ಗೆ ಮಾತ್ರವೇ ತನಿಖೆ ನಡೆಸುತ್ತಿತ್ತು. ಈಗ ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಇನ್ಮುಂದೆ ಇಡೀ ಹಗರಣದ ಸಂಪೂರ್ಣ ತನಿಖೆಯನ್ನು ನಡೆಸಲಿದೆ. https://kannadanewsnow.com/kannada/the-conversation-with-the-legislators-is-limited-to-party-organization-not-for-a-change-in-leadership-dks-clarification/ https://kannadanewsnow.com/kannada/in-karnataka-82-tigers-have-died-in-five-and-a-half-years/
ಬೆಂಗಳೂರು: “ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ರಣದೀಪ್ ಸಿಂಗ್ ಸುರ್ಜೆವಾಲ ಅವರು ಕಾಂಗ್ರೆಸ್ ಶಾಸಕರ ಜೊತೆ ಮಾಡುತ್ತಿರುವ ಸಭೆ ಬಗ್ಗೆ ಕೇಳಿದಾಗ, “ಈ ಸಭೆ ಬಗ್ಗೆ ಯಾರಿಗೂ ಆತಂಕ ಬೇಡ. ರಾಷ್ಟ್ರಾದ್ಯಂತ ನಾವು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದು, ಸಂಘಟನೆ ಹಿನ್ನೆಲೆಯಲ್ಲಿ ಈ ಸಭೆ ಮಾಡಲಾಗುತ್ತಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಸಂಘಟನೆ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಶಕ್ತಿ ತುಂಬಲು ಹೇಳಿದ್ದಾರೆ. ಖರ್ಗೆ ಅವರು, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು…













