Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: 2025ನೇ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದು, ಆಸಕ್ತರಿಗೆ ತಮಗೆ ಸೂಕ್ತ ಎನಿಸುವ ಛಾಯ್ಸ್ ದಾಖಲಿಸಿ, ಶುಲ್ಕ ಪಾವತಿಸಲು ಜುಲೈ 17 ಕೊನೆ ದಿನವಾಗಿದೆ. ಛಾಯ್ಸ್-1 ಮತ್ತು 2 ಆಯ್ಕೆ ಮಾಡಿದ ಅಭ್ಯರ್ಥಿಗಳು ಮಾತ್ರ ಶುಲ್ಕ ಪಾವತಿಸಬೇಕು. ಛಾಯ್ಸ್- 1 ಆಯ್ಕೆ ಮಾಡಿದವರು ಜು.16 ಮತ್ತು 17 ರಂದು ಮೂಲ ದಾಖಲೆಗಳ ಸಮೇತ ಕೆಇಎ ಕಚೆರಿಗೆ ಬಂದು ಸಲ್ಲಿಸಿ, ಪ್ರವೇಶ ಪತ್ರಗಳನ್ನು ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಅಭ್ಯರ್ಥಿಗಳು ಜು.18ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದೂ ಅವರು ವಿವರಿಸಿದ್ದಾರೆ. ಎನ್ ಆರ್ ಐ ವಾರ್ಡ್ ಕ್ಯಾಟಗರಿಯಡಿ ಸೀಟು ಪಡೆದವರ ಶುಲ್ಕವನ್ನು ಪ್ರಾಯೋಜಿಸಿದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದಲೇ ಕೆಇಎ ಖಾತೆಗೆ ಹಣ ಸಂದಾಯ‌ ಮಾಡಬೇಕು. ಒಂದು ವೇಳೆ ಸದ್ಯಕ್ಕೆ ಆ ರೀತಿ ಹಣ ವರ್ಗಾವಣೆ ಮಾಡಿಸಲು ಸಾಧ್ಯವಾಗದಿದ್ದರೆ ಕೆಇಎಗೆ ಡಿ.ಡಿ ಸಲ್ಲಿಸಿ, ಪ್ರವೇಶ…

Read More

ಉಕ್ರೇನ್: ಉಕ್ರೇನಿಯನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದು ಈ ವಾರದ ಕೊನೆಯಲ್ಲಿ ನಡೆಯಲಿರುವ ಪ್ರಮುಖ ಸರ್ಕಾರಿ ಪುನರ್ರಚನೆಗೆ ನಾಂದಿ ಹಾಡಿದೆ. ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಉಕ್ರೇನ್‌ನ ನಾಯಕತ್ವ ತಂಡದಲ್ಲಿ ವ್ಯಾಪಕವಾದ ಕೂಲಂಕಷ ಪರೀಕ್ಷೆಯನ್ನು ಪ್ರಸ್ತಾಪಿಸಿದ ಒಂದು ದಿನದ ನಂತರ ಈ ಘೋಷಣೆ ಹೊರಬಿದ್ದಿದ್ದು, ಶ್ಮಿಹಾಲ್ ಅವರ ನಂತರ ಪ್ರಧಾನಿಯಾಗಿ ಮೊದಲ ಉಪ ಪ್ರಧಾನ ಮಂತ್ರಿ ಮತ್ತು ಆರ್ಥಿಕ ಸಚಿವೆ ಯೂಲಿಯಾ ಸ್ವೈರಿಡೆಂಕೊ ಅವರನ್ನು ನಾಮನಿರ್ದೇಶನ ಮಾಡಿದ್ದಾರೆ. ಮಾರ್ಚ್ 2020 ರಿಂದ ಈ ಹುದ್ದೆಯನ್ನು ಅಲಂಕರಿಸಿರುವ ಶ್ಮಿಹಾಲ್, 1991 ರಲ್ಲಿ ದೇಶದ ಸ್ವಾತಂತ್ರ್ಯದ ನಂತರ ಉಕ್ರೇನ್‌ನಲ್ಲಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಸರ್ಕಾರದ ಮುಖ್ಯಸ್ಥರಾಗಿದ್ದಾರೆ. ಅವರು ಈಗ ರಕ್ಷಣಾ ಸಚಿವ ರುಸ್ಟೆಮ್ ಉಮೆರೋವ್ ಅವರನ್ನು ಬದಲಿಸುವ ನಿರೀಕ್ಷೆಯಿದೆ. ಅಧ್ಯಕ್ಷ ಝೆಲೆನ್ಸ್ಕಿ ಅವರನ್ನು “ಬಹಳ ಮುಖ್ಯವಾದ ಕೆಲಸ” ಕ್ಕೆ ಸರಿಯಾದ ಅರ್ಹತೆಗಳನ್ನು ಹೊಂದಿದ್ದಾರೆ ಎಂದು ಬಣ್ಣಿಸಿದ್ದಾರೆ. ಶ್ಮಿಹಾಲ್ ಅವರ “ಅಗಾಧ ಅನುಭವ” ವನ್ನು ಝೆಲೆನ್ಸ್ಕಿ…

Read More

ವಿಜಯಪುರ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಮಲಗಿದ್ದಲ್ಲೇ ಹೃದಯಾಘಾತದಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ವಿಜಯಪುರ ತಾಲ್ಲೂಕಿನ ಶಿವಣಗಿ ಗ್ರಾಮದಲ್ಲಿ ಹೃದಯಾಘಾತಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಲಿಯಾಗಿದ್ದಾನೆ. ಹೃದಯಾಘಾತದಿಂದ ಸಿದ್ಧಾರ್ಥ ಬಡಿಗೇರ(18) ಸಾವನ್ನಪ್ಪಿದ್ದಾನೆ. ಮನೆಯಲ್ಲಿ ಮಲಗಿದ್ದಾಗಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಿದ್ಧಾರ್ಥಗೆ ಹೃದಯಾಘಾತ ಉಂಟಾಗಿದೆ. ಹೀಗಾಗಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾನೆ. https://kannadanewsnow.com/kannada/extend-the-media-sanjeevini-scheme-to-all-journalists-kuwj-president-shivananda-tagadurs-plea-to-the-cm/ https://kannadanewsnow.com/kannada/special-digi-locker-technology-for-registration-of-healthcare-providers-in-the-state-cm-siddaramaiah-inaugurates/

Read More

ಮಂಡ್ಯ : ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಗಬೋರನದೊಡ್ಡಿ ಗ್ರಾಮದ ತೆಂಗಿನ ಕಾಯಿ ವ್ಯಾಪಾರಿಯಾದ ರಾಜಣ್ಣ (ಲಿಂಗರಾಜು) ಅವರು ಸೋಮವಾರದಂದು ವೇಳೆಯಲ್ಲಿ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಸ್ಥಳೀಯ ಶ್ರೀ ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾದಂತೆ ಆಗಿದೆ. https://kannadanewsnow.com/kannada/reliance-logo-brand-cannot-be-used-for-online-products-delhi-high-court-order/ https://kannadanewsnow.com/kannada/the-government-has-ordered-the-implementation-of-uniform-rates-in-all-multiplexes-and-cinema-halls-in-the-state/

Read More

ದೆಹಲಿ : ದೆಹಲಿ ಹೈ ಕೋರ್ಟ್ ನಿಂದ ಮಂಗಳವಾರದಂದು ರಿಲಯನ್ಸ್ ಪರವಾಗಿ ಮಹತ್ವದ ಆದೇಶವೊಂದು ಬಂದಿದೆ. ಇದರಿಂದಾಗಿ ಭಾರತದಲ್ಲಿ ಪ್ರಬಲವಾಗಿ ಬೆಳವಣಿಗೆ ಕಾಣುತ್ತಿರುವ ಎಫ್ಎಂಸಿಜಿ ಹಾಗೂ ಇ-ಕಾಮರ್ಸ್ ವಲಯಗಳಿಗೆ ಬ್ರ್ಯಾಂಡ್ ರಕ್ಷಣೆ ದೊರೆತಂತಾಗಿದೆ. ಆನ್ ಲೈನ್ ರೀಟೇಲ್ ಅಂತ ಬಂದರೆ ಅಲ್ಲಿ “ಲೋಗೋ”ಗಳು ಹಾಗೂ ಬ್ರ್ಯಾಂಡ್ ಹೆಸರೇ ಮೂಲಭೂತವಾಗಿ ಗ್ರಾಹಕರು ತಮಗೆ ಬೇಕಾದ ಉತ್ಪನ್ನಗಳನ್ನು ಗುರುತಿಸುವ ಸುಳುಹುಗಳಾಗಿರುತ್ತವೆ. ಇಲ್ಲದಿದ್ದರೆ ಇದರಿಂದ ಗೊಂದಲ ಆಗುವ ಸಾಧ್ಯತೆ ಬಹಳ ಹೆಚ್ಚಿರುತ್ತದೆ ಎಂದು ಹೇಳಲಾಗಿದೆ. ರಿಲಯನ್ಸ್ ಮತ್ತು ಜಿಯೋ ಟ್ರೇಡ್ ಮಾರ್ಕ್ ಗಳನ್ನು ಉಲ್ಲಂಘನೆ ಮಾಡಿರುವಂಥ ಉತ್ಪನ್ನಗಳನ್ನು ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಎಲ್ಲ ಪ್ರಮುಖ ಆನ್ ಲೈನ್ ಮಾರ್ಕೆಟ್ ಪ್ಲೇಸ್ ಗಳು “ಡೀಲಿಸ್ಟ್” ಮಾಡಬೇಕು, ಅಂದರೆ ಆ ಉತ್ಪನ್ನಗಳನ್ನು ಮಾರಾಟ ಮಾಡುವುದರಿಂದ ತೆಗೆಯಬೇಕು ಎಂದು ಆದೇಶಿಸಲಾಗಿದೆ. ನ್ಯಾಯಮೂರ್ತಿಗಳಾದ ಸೌರಭ್ ಬ್ಯಾನರ್ಜಿ ಅವರು ಈ ಸಂಬಂಧವಾಗಿ ಮಧ್ಯಂತರ ಆದೇಶವನ್ನು ಹೊರಡಿಸಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಟ್ರೇಡ್ ಮಾರ್ಕ್ಸ್ ತಪ್ಪಾಗಿ ಬಳಸಿಕೊಂಡು ಗ್ರಾಹಕ ಉತ್ಪನ್ನಗಳನ್ನು ಉತ್ಪಾದಿಸುವುದು, ಮಾರಾಟ…

Read More

ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯಲ್ಲಿನ ಕಠಿಣ ಷರತ್ತಗಳನ್ನು ಸರಳೀಕರಣ ಮಾಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ. ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ಈ ಯೋಜನೆಯನ್ನು ಸೀಮಿತ ಮಾಡಿರುವುದರಿಂದ ಬಹಳ ಜನ ಪತ್ರಕರ್ತರು ಯೋಜನೆಯಿಂದ ವಂಚಿತರಾಗುತ್ತಾರೆ. ಆದುದರಿಂದ ವಾರ್ತಾ ಇಲಾಖೆಯಲ್ಲಿ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಮತ್ತು ಸುದ್ದಿಮಾಧ್ಯಮಗಳಲ್ಲಿ ಕೆಲಸ ಮಾಡುವ ಎಲ್ಲಾ ಪತ್ರಕರ್ತರಿಗೂ ಯೋಜನೆಯನ್ನು ವಿಸ್ತಾರ ಮಾಡಬೇಕು ಎಂದು ಕೆಯುಡಬ್ಲೂೃಜೆ ಆಗ್ರಹಿಸಿದೆ. ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿಯೇ ಜಾರಿಗೆ ನೀಡಿರುವುದು ಸ್ವಾಗತಾರ್ಹವಾಗಿದ್ದು, ಅದಕ್ಕಾಗಿ ಅಭಿನಂದಿಸುವುದಾಗಿ ತಿಳಿಸಿರುವ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಯೋಜನೆ ಎಲ್ಲಾ ಪತ್ರಕರ್ತರಿಗೂ ಸಿಗುವಂತೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ವಿನಂತಿಸಿದ್ದಾರೆ. ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ಯೋಜನೆಯನ್ನು ಜಾರಿಗೆ ತರಬೇಕು ಎನ್ನುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ಹಕ್ಕೊತ್ತಾಯಕ್ಕೆ ಸ್ಪಂಧಿಸಿದ್ದ…

Read More

ಬೆಂಗಳೂರು: ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಹೀಗಾಗಿ ರಾಜ್ಯದ ಎಲ್ಲಾ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಗಳಲ್ಲಿ ಇನ್ಮುಂದೆ ಟಿಕೆಟ್ ದರ ಏಕರೂಪವಾಗಿ ಇರಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ರಾಜ್ಯದಲ್ಲಿರುವ ಎಲ್ಲಾ ಮಲ್ಟಿಫ್ಲೆಕ್ಸ್ ಗಳು ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಆದೇಶಿಸಿದೆ. ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಲಾಗಿದೆ. ರೂ.200 ಮೀರದಂತೆ ಆದೇಶ ಹೊರಡಿಸಿದೆ. ಎಲ್ಲಾ ಭಾಷೆಯ ಸಿನಿಮಾಗಳಿಗೂ ಏಕರೂಪದ ದರವನ್ನು ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿನ ಎಲ್ಲಾ ಭಾಷೆಯ ಸಿನಿಮಾಗಳಿಗೂ ಏಕರೂಪದ ದರವನ್ನು ಜಾರಿಗೊಳಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. https://kannadanewsnow.com/kannada/special-digi-locker-technology-for-registration-of-healthcare-providers-in-the-state-cm-siddaramaiah-inaugurates/ https://kannadanewsnow.com/kannada/dheeraj-kumar-death-news-veteran-bollywood-actor-and-filmmaker-dies-at-79-in-mumbai/

Read More

ಬೆಂಗಳೂರು: ಆಧಾರ್ ಆಧಾರಿತ ಡಿಜಿಲಾಕರ್ ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣಪತ್ರಗಳನ್ನು ನೀಡಲು ಅನುಕೂಲವಾಗುವ ಹೊಸ ತಂತ್ರಜ್ಞಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ದೊಡ್ಡ ವಿದ್ಯಾರ್ಥಿ ಸಮುದಾಯದ ಸಮ್ಮುಖದಲ್ಲಿ ಈ ತಂತ್ರಜ್ಞಾನವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು. ಈ ತಂತ್ರಜ್ಞಾನವನ್ನು ದೇಶದಲ್ಲಿಯೇ ಮೊದಲ ಬಾರಿಗೆ ಇಲ್ಲಿ ಆರಂಭಿಸಲಾಗಿದೆ. ಈ ವ್ಯವಸ್ಥೆಯನ್ನು ಯುಐಡಿಎಐ, ಸಿ-ಇಜಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ (ಆರ್‌ಜಿಯುಎಚ್‌ಎಸ್) ಮತ್ತು ಕರ್ನಾಟಕ ರಾಜ್ಯ ನರ್ಸಿಂಗ್ ಪರೀಕ್ಷಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗಿದೆ. ಈ ತಂತ್ರಜ್ಞಾನದೊಂದಿಗೆ, ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಇ-ಕೆವೈಸಿ ಮೂಲಕ ಆಧಾರ್ ಸರ್ವರ್‌ನಿಂದ ದಾದಿಯರ ವೈಯಕ್ತಿಕ ಡೇಟಾ, ವಿಳಾಸ, ಫೋಟೋ ಮತ್ತು ಇತರ ವಿವರಗಳನ್ನು ನೇರವಾಗಿ ಪಡೆಯಬಹುದು. ಈ ಹಿಂದೆ ವಿವಿಧ ಜಿಲ್ಲೆಗಳ ನರ್ಸಿಂಗ್ ಅಭ್ಯರ್ಥಿಗಳು ನೋಂದಣಿಗಾಗಿ ಬೆಂಗಳೂರಿನಲ್ಲಿರುವ ಕೌನ್ಸಿಲ್‌ನ ಕೇಂದ್ರ ಕಚೇರಿಗೆ ಆಗಮಿಸಬೇಕಾಗಿತ್ತು. ಹೊಸ ಡಿಜಿಲಾಕರ್-ರಿಕ್ವೆಸ್ಟರ್ ತಂತ್ರಜ್ಞಾನವು ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ಗೆ ಆಧಾರ್ ಕಾರ್ಡ್‌ಗಳು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂಕಪಟ್ಟಿಗಳು ಮತ್ತು…

Read More

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಮತ್ತು ಕಾಡಿನಂಚಿನ ರೈತರ ಬೆಳೆ ರಕ್ಷಿಸುವ ನಿಟ್ಟಿನಲ್ಲಿ ಆನೆ ಪಥ (ಕಾರಿಡಾರ್), ಆವಾಸಸ್ಥಾನ ರಕ್ಷಣೆಗೆ ಆಧುನಿಕ ತಂತ್ರಜ್ಞಾನ ಬಳಸಲು ತೀರ್ಮಾನಿಸಲಾಗಿದ್ದು, ಐಐಎಸ್.ಸಿ.ಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಐ.ಐ.ಎಸ್.ಸಿ.ಯ ಪ್ರೊ. ರಮನ್ ಸುಕುಮಾರ್ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ. ರೇ ಸಹಿ ಹಾಕಿ ಒಡಂಬಡಿಕೆ ವಿನಿಮಯ ಮಾಡಿಕೊಂಡ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಮಾತನಾಡಿದ ಅವರು, ಹಾಸನ, ಕೊಡಗು ಭಾಗದಲ್ಲಿ ಹೆಚ್ಚಾಗಿ ಆನೆ-ಮಾನವ ಸಂಘರ್ಷವಿದ್ದು, ಜೀವಹಾನಿ, ಬೆಳೆ ಹಾನಿ ಸಂಭವಿಸುತ್ತಿದೆ ಇದರ ನಿಯಂತ್ರಣಕ್ಕೆ ಎಲ್ಲ ಸಾಧ್ಯ ಕ್ರಮಗಳನ್ನು ಇಲಾಖೆ ಕೈಗೊಳ್ಳುತ್ತಿದೆ ಎಂದರು. ಪ್ರಸ್ತುತ ಮಾನವ-ಆನೆ ಸಂಘರ್ಷ ಇತರ ಪ್ರದೇಶಕ್ಕೂ ವಿಸ್ತರಿಸುತ್ತಿದ್ದು, ಪರಿಸರ ಸಂಶೋಧನೆ ಮತ್ತು ಕ್ಷೇತ್ರ ಅನುಷ್ಠಾನವನ್ನು ಸಮನ್ವಯಗೊಳಿಸುವ ಮೂಲಕ, ಆನೆಪಥ, ಆವಾಸಸ್ಥಾನಗಳ ಸಂರಕ್ಷಣೆಗೆ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಏಷ್ಯನ್ ಆನೆಗಳ ಭೂಪ್ರದೇಶ ನಿರ್ವಹಣೆ”ಗಾಗಿ ಐದು…

Read More

ನವದೆಹಲಿ: ವಿಶ್ವದ ಅತಿದೊಡ್ಡ ರೈಲು ಜಾಲಗಳಲ್ಲಿ ಒಂದಾದ ಭಾರತೀಯ ರೈಲ್ವೆ ಪ್ರತಿದಿನ ಲಕ್ಷಾಂತರ ಪ್ರಯಾಣಿಕರನ್ನು ಹೊತ್ತೊಯ್ಯುತ್ತದೆ. ಸೇವೆಗಳನ್ನು ಸುಧಾರಿಸಲು, ರೈಲ್ವೆ ಆಗಾಗ್ಗೆ ತನ್ನ ನಿಯಮಗಳನ್ನು ನವೀಕರಿಸುತ್ತದೆ. ಜುಲೈ 1 ರಂದು ಇತ್ತೀಚಿನ ಬದಲಾವಣೆಗಳ ನಂತರ, ಜುಲೈ 15, 2025 ರಿಂದ ಮತ್ತೊಂದು ಹೊಸ ನಿಯಮ ಜಾರಿಗೆ ಬಂದಿದೆ. ಇದು ತತ್ಕಾಲ್ ಟಿಕೆಟ್ ಬುಕಿಂಗ್ ಅನ್ನು ಹೆಚ್ಚು ಪಾರದರ್ಶಕ ಮತ್ತು ಪ್ರಯಾಣಿಕರ ಸ್ನೇಹಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದೆ. ತತ್ಕಾಲ್ ಬುಕಿಂಗ್‌ಗೆ ಆಧಾರ್ OTP ಪರಿಶೀಲನೆ ಈಗ ಕಡ್ಡಾಯ ಹೊಸ ನಿಯಮದ ಪ್ರಕಾರ, IRCTC ವೆಬ್‌ಸೈಟ್ ಅಥವಾ ಅಪ್ಲಿಕೇಶನ್ ಮೂಲಕ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡುವ ಪ್ರಯಾಣಿಕರು ಈಗ ಆಧಾರ್ OTP ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಇದರರ್ಥ ಪ್ರಯಾಣಿಕರು ತಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಗೆ ಕಳುಹಿಸಲಾದ OTP ಬಳಸಿಕೊಂಡು ತಮ್ಮ ಗುರುತನ್ನು ಪರಿಶೀಲಿಸಬೇಕು. ಈ ಬದಲಾವಣೆಯು ಟಿಕೆಟ್ ಬುಕಿಂಗ್ ಪ್ರಕ್ರಿಯೆಗೆ ಪಾರದರ್ಶಕತೆಯನ್ನು ತರುತ್ತದೆ ಮತ್ತು ಸಾಮಾನ್ಯ ಪ್ರಯಾಣಿಕರು ತತ್ಕಾಲ್ ಟಿಕೆಟ್‌ಗಳನ್ನು…

Read More