Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ಡಾ.ನಾ ಡಿಸೋಜ ಅವರ ಸ್ಮರಣಾರ್ಥ ಜತೆಗಿರುವನು ಚಂದಿರ ಎಂಬ ನಾಟಕವನ್ನು ಆಯೋಜಿಸಲಾಗಿದೆ. ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸ್ಪಂದನ (ರಿ)ಯ ಎಂ.ವಿ ಪ್ರತಿಭಾ ಅವರು ಮಾತನಾಡಿದರು. ಸಾಗರದ ಸ್ಪಂದನ (ರಿ)ಯ 21ನೇ ವಾರ್ಷಿಕೋತ್ಸವದ ಅಂಗವಾಗಿ ಡಾ.ನಾ ಡಿಸೋಜ ಸ್ಮರಣಾರ್ಥ ಜತೆಗಿರುವನ ಚಂದಿರ ಎಂಬ ನಾಟಕವನ್ನು ಆಯೋಜಿಸಲಾಗಿದೆ ಎಂದರು. ಈ ನಾಟಕದ ಪ್ರಸ್ತುತಿ ಮೈಸೂರಿನ ಸಂಕಲ್ಪ ಅವರದ್ದಾಗಿದೆ. ಜಯಂತ ಕಾಯ್ಕಿಣಿ ಅವರ ರೂಪಾಂತರ ಇದಾಗಿದೆ. ಹುಲುಗಪ್ಪ ಕಟ್ಟೀಮನಿ ವಿನ್ಯಾಸ, ನಿರ್ದೇಶಕ ಒಳಗೊಂಡಿದೆ ಎಂದು ತಿಳಿಸಿದರು. ದಿನಾಂಕ 22-02-2025ರ ಶನಿವಾರ ಸಂಜೆ 6.30ಕ್ಕೆ ಸಾಗರದ ಕಾಗೋಡು ತಿಮ್ಮಪ್ಪ ರಂಗಮಂದಿರದಲ್ಲಿ ಜತೆಗಿರುವನು ಚಂದಿರ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು. ಮಲೆನಾಡಿನ ಮುಳುಗಡೆ ಸಂದರ್ಭದಲ್ಲಿ ನಡೆದ ಸ್ಥಳಾಂತರದ ಕತೆಯನ್ನು ನಾಟಕ ನೆನಪಿಸುತ್ತದೆ. ಕುಟುಂಬದ ಕತೆಯೊಂದರ ಮೂಲಕವೇ ದೇಶದ ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಸ್ಥಿತ್ಯಂತರಗಳಿಗೆ ಕನ್ನಡಿ ಹಿಡಿಯುವುದು ಈ ನಾಟಕದ ವಿಶೇಷ ಎಂಬುದಾಗಿ ತಿಳಿಸಿದರು. ವರದಿ: ವಸಂತ ಬಿ…
ಬೆಂಗಳೂರು: ಮಕ್ಕಳ ಹೆಸರು ಬದಲಾವಣೆ ಕುರಿತಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ. ಅದೇ ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ನಮೂದಿಸಿದ ಹೆಸರನ್ನು ಮತ್ತೆ ಬದಲಾವಣೆ ಮಾಡುವುದಕ್ಕೆ ಅವಕಾಶ ಕಲ್ಪಿಸುವ ರೀತಿಯಲ್ಲಿ ಜನನ ಮರಣ ಪ್ರಮಾಣ ನೋಂದಣಿ ಕಾಯಿದೆ 1969ಕ್ಕೆ ತಿದ್ದುಪಡಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತಂತೆ ಹೈಕೋರ್ಟ್ ಗೆ ಸಲ್ಲಿಕೆ ಮಾಡಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಅವರು ನಡೆಸಿದರು. ತಮ್ಮ ಮಗನ ಹೆಸರನ್ನು ಬದಲಾವಣೆಗೆ ಅವಕಾಶ ಕಲ್ಪಿಸಲು ಜನನ – ಮರಣ ನೋಂದಣಾಧಿಕಾರಿಗಳಿಗೆ ನಿರ್ದೇಶನ ನೀಡಲು ಕೋರಿ ಮಗುವಿನ ಪರವಾಗಿ ಅವರ ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದರು. ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ಹೆಸರನ್ನು ನೋಂದಾಯಿಸಿದ ಬಳಿಕ ಅದನ್ನು ಪೋಷಕರು ಬದಲಾಯಿಸುವ ನಿರ್ಧಾರ ತೆಗೆದುಕೊಳ್ಳುವುದು ಮತ್ತು ಹಲವು ಹೆಸರುಗಳನ್ನು ಇಡುವುದು ನಮ್ಮ ದೇಶದಲ್ಲಿ ಸಾಮಾನ್ಯವಾಗಿದೆ. ಆದರೆ, ದಾಖಲೆಗಳು ಒಂದೇ ಹೆಸರನ್ನು ನಮೂದಿಸಿವುದಕ್ಕೆ ಅವಕಾಶವಿರುವುದರಿಂದ ಇದು…
ಮೈಸೂರು: ಜಿಲ್ಲೆಯ ಹುಣಸೂರು ಪಟ್ಟಣದ ಪ್ರತಿಷ್ಠಿತ ಸಂತ ಜೋಸೆಫರ ಪ್ರಥಮ ದರ್ಜೆ ಕಾಲೇಜು ಇವರು ವಿದ್ಯಾರ್ಥಿಗಳಿಗೆ ಉದ್ಯೋಗ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು Techno Tut Solutions LLP Mysore ಇವರ ಸಹಯೋಗದೊಂದಿಗೆ Full Stack Java, Learning and Development Skill ಎಂಬ ವಿಷಯಾಧಾರಿತ 10 ದಿನಗಳ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾದಂತಹ ಕೀರ್ತನಾ Technical trainer, ಪ್ರೀತಿ ಕಂಡಮ್ Soft Skills Trainer ಇವರುಗಳು ನಡೆಸಿಕೊಟ್ಟರು. ಈ ವೇಳೆ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಆರೋಕ್ಯ ಮೇರಿರವರು ಪದವಿ ಶಿಕ್ಷಣ ಮುಗಿದ ನಂತರ ಎಷ್ಟೋ ವಿದ್ಯಾರ್ಥಿಗಳು ಉದ್ಯೋಗವನ್ನು ಹುಡುಕುತ್ತಾ ಹೊರಗೆ ಹೋಗುತ್ತಿದ್ದಾರೆ. ಆದ್ದರಿಂದ ಪದವಿ ಹಂತದಲ್ಲಿ ಮಕ್ಕಳಿಗೆ ಉದ್ಯೋಗ ತರಬೇತಿ ಕಾರ್ಯಕ್ರಮವನ್ನು ನೀಡಿದರೆ ಮಕ್ಕಳಿಗೆ ಅದು ನೆರವಾಗುತ್ತದೆ ಎಂದರು. ಎಲ್ಲಾ ಮಕ್ಕಳಿಗೂ ಉದ್ಯೋಗದ ಬಗ್ಗೆ ಮಾಹಿತಿಯನ್ನು ಹಾಗೂ ತರಬೇತಿಯನ್ನು ನೀಡುವುದು ಕಾಲೇಜಿನ ಕರ್ತವ್ಯವೆಂದು ನನ್ನ ಭಾವನೆ ಎಂದು ತಿಳಿಸಿದರು. ವಿಜ್ಞಾನ ವಿಭಾಗದ ಮುಖ್ಯಸ್ಥರಾದಂತಹ ಕುಮಾರಿ ತೇಜಾ ಎಚ್ ಆರ್…
ಬೆಂಗಳೂರು: ಸೆಲೆಬ್ರೆಟಿ ಕ್ರಿಕೆಟ್ ಲೀಗ್ ಪಂದ್ಯಾವಳಿ ನಡೆಯುತ್ತಿದೆ. ಬೆಂಗಳೂರಲ್ಲಿ ಉದ್ಘಾಟನೆಗೊಂಡಿರುವಂತ ಪಂದ್ಯಾವಳಿಗಳು, ಈಗ ಮೈಸೂರಿಗೂ ಶಿಫ್ಟ್ ಆಗಲಿವೆ. ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ಸೆಮಿ ಫೈನಲ್ ಹಾಗೂ ಫೈನಲ್ ಪಂದ್ಯಾವಳಿಯನ್ನು ನಡೆಸಲಾಗುತ್ತಿದೆ. ಈ ಬಗ್ಗೆ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ನಾನು ಈ ವಿಷಯವನ್ನು ಘೋಷಣೆ ಮಾಡೋದಕ್ಕೆ ಹರ್ಷಿಸುತ್ತಿದ್ದೇನೆ. ಸಿಸಿಎಲ್ 2025 ಪಂದ್ಯಾವಳಿಗಳು ಮೈಸೂರಿಗೂ ಕಾಲಿಡುತ್ತಿವೆ. ಎರಡು ಸೆಮಿ ಫೈನಲ್ ಹಾಗೂ ಒಂದು ಫೈನಲ್ ಪಂದ್ಯಾವಳಿಯನ್ನು ಮೈಸೂರಿನಲ್ಲಿ ನಡೆಸಲಾಗುತ್ತಿದೆ ಎಂದಿದ್ದಾರೆ. ಇನ್ನೂ ಮಾರ್ಚ್.1ರಂದು ಸೆಮಿ ಫೈನಲ್ ಹಾಗೂ ಮಾರ್ಚ್.2ರಂದು ಫೈನಲ್ ಸಿಸಿಎಲ್ 2025ರ ಪಂದ್ಯಾವಳಿಗಳು ಮೈಸೂರಿನಲ್ಲಿ ನಡೆಯಲಿದ್ದಾವೆ ಎಂಬುದಾಗಿ ತಿಳಿಸಿದ್ದಾರೆ. https://twitter.com/KicchaSudeep/status/1891854620231946550 ಅಂದಹಾಗೇ ಸೆಲೆಬ್ರಿಟಿ ಕ್ರಿಕೆಟ್ ಲೀಗ್ 2025 ಫೆಬ್ರವರಿ.8ರಿಂದ ಪ್ರಾರಂಭವಾಗಿದೆ. ಬಾಲಿವುಡ್ ಮತ್ತು ಪ್ರಾದೇಶಿಕ ಚಲನಚಿತ್ರ ತಾರೆಯರನ್ನು ಒಳಗೊಂಡ ರೋಮಾಂಚಕ ಪಂದ್ಯಗಳು ನಡೆಯುತ್ತಿವೆ. ಇದೀಗ ಮೈಸೂರು ನಗರದಲ್ಲಿ ಅತ್ಯಾಕರ್ಷಕ ಪಂದ್ಯಗಳನ್ನು ಅಭಿಮಾನಿಗಳು ವೀಕ್ಷಿಸುವಂತ ಅವಕಾಶ ಸಿಕ್ಕಂತೆ ಆಗಿದೆ. https://kannadanewsnow.com/kannada/farmer-fulfills-woman-labourers-wish-to-travel-by-air/ https://kannadanewsnow.com/kannada/maha-kumbh-mela-extended-in-prayagraj-heres-the-district-magistrates-clarification/
ಉತ್ತರ ಪ್ರದೇಶ: ಪ್ರಯಾಗ್ರಾಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ರವೀಂದ್ರ ಮಂದಾರ್ ಅವರು ಭಾರಿ ಜನಸಂದಣಿಯಿಂದಾಗಿ ಮಹಾ ಕುಂಭ ಮೇಳವನ್ನು ವಿಸ್ತರಿಸುವಂತೆ ಸೂಚಿಸುವ ಸಾಮಾಜಿಕ ಮಾಧ್ಯಮ ವದಂತಿಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಈ ಹೇಳಿಕೆಗಳನ್ನು ತಳ್ಳಿಹಾಕಿದ ಅವರು, ಕಾರ್ಯಕ್ರಮದ ವೇಳಾಪಟ್ಟಿಯು ಧಾರ್ಮಿಕ ಮುಹೂರ್ತಗಳನ್ನು (ಶುಭ ಸಮಯ) ಆಧರಿಸಿದೆ ಮತ್ತು ಬದಲಾಗದೆ ಉಳಿದಿದೆ ಎಂದು ಸ್ಪಷ್ಟಪಡಿಸಿದರು. ಫೆಬ್ರವರಿ 26 ರಂದು ಯೋಜಿಸಿದಂತೆ ಮಹಾ ಕುಂಭ ಮುಕ್ತಾಯಗೊಳ್ಳಲಿದೆ ಎಂದು ಮಂದಾರ್ ದೃಢಪಡಿಸಿದರು. ಉತ್ತರ ಪ್ರದೇಶ ಸರ್ಕಾರ ಅಥವಾ ಜಿಲ್ಲಾಡಳಿತವು ವಿಸ್ತರಣೆಯನ್ನು ಪ್ರಸ್ತಾಪಿಸಿಲ್ಲ ಎಂದು ಪುನರುಚ್ಚರಿಸಿದರು. “ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನಗಳ ಪ್ರಕಾರ, ಆಡಳಿತವು ಭಕ್ತರಿಗೆ ಸುಗಮ ಪ್ರಯಾಣ ಮತ್ತು ಇತರ ವ್ಯವಸ್ಥೆಗಳನ್ನು ಖಚಿತಪಡಿಸುತ್ತಿದೆ. ಮೇಳವನ್ನು ವಿಸ್ತರಿಸುವ ಯಾವುದೇ ಯೋಜನೆ ಇಲ್ಲ ಮತ್ತು ಯಾತ್ರಾರ್ಥಿಗಳು ತಪ್ಪು ಮಾಹಿತಿಗೆ ಒಳಗಾಗಬಾರದು ಎಂದು ಅವರು ಹೇಳಿದರು. https://kannadanewsnow.com/kannada/farmer-fulfills-woman-labourers-wish-to-travel-by-air/ https://kannadanewsnow.com/kannada/senior-advocate-dies-of-heart-attack-while-arguing-in-telangana-high-court/
ಹೈದರಾಬಾದ್: ತೆಲಂಗಾಣ ಹೈಕೋರ್ಟ್ನಲ್ಲಿ ಮಂಗಳವಾರ ದುರಂತ ಘಟನೆ ನಡೆದಿದ್ದು, ನ್ಯಾಯಾಲಯದಲ್ಲಿ ಪ್ರಕರಣವೊಂದನ್ನು ವಾದಿಸುತ್ತಿದ್ದಾಗ ಹಿರಿಯ ವಕೀಲರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಮಾರಣಾಂತಿಕ ಹೃದಯಾಘಾತದಿಂದ ಮೃತ ವ್ಯಕ್ತಿಯನ್ನು ವೇಣುಗೋಪಾಲ್ ರಾವ್ ಎಂದು ಗುರುತಿಸಲಾಗಿದೆ. ಹಿರಿಯ ವಕೀಲ ರಾವ್ ಅವರು ಕೋರ್ಟ್ ಹಾಲ್ 21 ರಲ್ಲಿ ನ್ಯಾಯಾಧೀಶರ ಮುಂದೆ ವಾದಗಳನ್ನು ಮಂಡಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ನಂತರ, ಸಹ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿ ರಾವ್ ಅವರ ಸಹಾಯಕ್ಕೆ ಧಾವಿಸಿದರು ಮತ್ತು ಅವರನ್ನು ಉಸ್ಮಾನಿಯಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಲ್ಲಿಗೆ ಬರುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದರು. ಸಾವಿಗೆ ಹೃದಯಾಘಾತವೇ ಕಾರಣ ಎಂದು ಅವರು ನಂತರ ಹೇಳಿದ್ದಾರೆ. ರಾವ್ ಅವರ ಹಠಾತ್ ನಿಧನವು ಹೈದರಾಬಾದ್ನಲ್ಲಿ ಕಾನೂನು ಭ್ರಾತೃತ್ವವನ್ನು ಶೋಕದಲ್ಲಿ ಮುಳುಗಿಸಿತು. ಹಿರಿಯ ವಕೀಲ ವೇಣುಗೋಪಾಲ್ ರಾವ್ ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. https://kannadanewsnow.com/kannada/farmer-fulfills-woman-labourers-wish-to-travel-by-air/ https://kannadanewsnow.com/kannada/cm-siddaramaiah-announces-implementation-of-caste-census-report-in-karnataka/
ಬೆಂಗಳೂರು: ರಾಜ್ಯದಲ್ಲಿ ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಇಂದು ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜಾತಿ ಗಣತಿ ಅನುಷ್ಠಾನಕ್ಕೆ ಸಭೆಯಲ್ಲಿ ಒಕ್ಕೊರಲಿನಿಂದ ಒತ್ತಾಯ ಬಂದ ಸಂದರ್ಭದಲ್ಲಿ ಅದಕ್ಕೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು. ಸರ್ಕಾರ ಜಾತಿ ಗಣತಿ ಪರವಾಗಿದೆ . ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ. ಮುಂದಿನ ದಿನಗಳಲ್ಲಿ ಅದನ್ನು ಖಂಡಿತವಾಗಿಯೂ ಜಾರಿ ಮಾಡಲಾಗುತ್ತದೆ ಅದರ ಬಗ್ಗೆ ಅನುಮಾನ ಬೇಡ ಎಂದು ತಿಳಿಸಿದರು. ತಮಿಳು ನಾಡು ಮಾದರಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಭೆ ಆಗ್ರಹಿಸಿದಾಗ 1992 ರ ಇಂದಿರಾ ಸಹಾನಿ ಕೇಸನ್ನು ಉಲ್ಲೇಖಿಸಿ ಮೀಸಲಾತಿ ಶೇಕಡ 50ರಷ್ಟು ಮೀರಬಾರದು ಎನ್ನುವ ಅಂಶವನ್ನು ಸಭೆಗೆ ತಿಳಿಸುತ್ತಾ, ಕಳೆದ ಸರ್ಕಾರದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಎಂದು ( EWS)…
ನಮಸ್ಕಾರ ಸ್ನೇಹಿತರೆ ಈ ದಿನ ನಾವು ತುಂಬಾ ಮುಖ್ಯ ವಿಷಯದ ಬಗ್ಗೆ ನಿಮಗೆ ತಿಳಿಸುತ್ತಿದ್ದೇವೆ ಮನುಷ್ಯನ ಜೀವನದಲ್ಲಿ ಒಂದಲ್ಲಾ ಒಂದು ಸಮಸ್ಯೆಗಳು ಪ್ರತಿನಿತ್ಯ ಎದುರಾಗುತ್ತಲೇ ಇರುತ್ತವೆ ಒಂದು ಸಮಸ್ಯೆಗೆ ಪರಿಹಾರವನ್ನು ಪಡೆದುಕೊಳ್ಳುತ್ತಿದ್ದಂತೆ ಮತ್ತೊಂದು ಸಮಸ್ಯೆ ಹುಟ್ಟಿಕೊಳ್ಳುವುದು ಮನುಷ್ಯನ ಜೀವನದಲ್ಲಿ ಸಾಮಾನ್ಯವಾಗಿರುತ್ತದೆ ಆದರೆ ಸ್ನೇಹಿತರೇ ಸಮಸ್ಯೆಗಳು ಬರುತ್ತಿವೆ ಎಂದು ಹೆದರಿ ನಡೆದಷ್ಟು ಸಮಸ್ಯೆಗಳು ಹೆಚ್ಚಾಗುತ್ತ ಹೋಗುತ್ತವೆ ಸಮಸ್ಯೆಗಳನ್ನು ಎದುರಿಸಿ ನಡೆದರೆ ಖಂಡಿತವಾಗಿಯೂ ಉತ್ತಮ ಜೀವನವನ್ನು ಪಡೆದುಕೊಳ್ಳಬಹುದು ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ,…
ದಾವಣಗೆರೆ: ವಿಮಾನದಲ್ಲಿ ಸಂಚರಿಸಬೇಕು ಎಂಬುದು ಹಲವರ ಬಯಕೆ. ಹೀಗೆ ಕೂಲಿ ಕಾರ್ಮಿಕರಾಗಿದ್ದಂತ ಆ ಮಹಿಳೆಯರಲ್ಲೂ ಆಸೆ ಬಂದಿತ್ತು. ಇಂತಹ ಮಹಿಳಾ ಕೂಲಿ ಕಾರ್ಮಿಕರ ಆಸೆಯನ್ನು ರೈತನೊಬ್ಬ ಈಡೇರಿಸಿದ್ದಾನೆ. ಹೌದು. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಶಿರಗನಹಳ್ಳಿ ರೈತನೊಬ್ಬ, ಮಹಿಳಾ ಕೂಲಿ ಕಾರ್ಮಿಕರ ವಿಮಾನದ ಆಸೆಯನ್ನು ಈಡೇರಿಸಿದ್ದಾರೆ. ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಂತ ಮಹಿಳಾ ಕೂಲಿ ಕಾರ್ಮಿಕರಿಗೆ ವಿಮಾನ ಪ್ರಯಾಣ ಮಾಡಿಸಿದ್ದಾರೆ. ಶಿರಗನಹಳ್ಳಿಯ ರೈತ ವಿಶ್ವನಾಥ್ ಎಂಬುವರೇ ಹತ್ತು ಜನ ಮಹಿಳಾ ಕೂಲಿ ಕಾರ್ಮಿಕರಿಗೆ ವಿಮಾನ ಮಾಡಿಸಿ, ಆಸೆ ಪೂರೈಸಿದಂತವರಾಗಿದ್ದಾರೆ. ಅವರ ತೋಟದಲ್ಲಿ ಕೂಲಿ ಕೆಲಸಕ್ಕೆ ಇದ್ದಂತ ಮಹಿಳೆಯರು ಒಮ್ಮೆಯಾದರೂ ವಿಮಾನದಲ್ಲಿ ಪ್ರಯಾಣಿಸಬೇಕು ಎನ್ನುವಂತ ಆಸೆ ವ್ಯಕ್ತ ಪಡಿಸಿದ್ದಾರೆ. ಈ ಆಸೆಯನ್ನು ಕಾರ್ಯರೂಪಕ್ಕೆ ತಂದು, ಶಿವಮೊಗ್ಗ ಏರ್ ಪೋರ್ಟ್ ನಿಂದ ಗೋವಾದವರೆಗೆ ವಿಮಾನ ಪ್ರಯಾಣ ಮಾಡಿಸಿದ್ದಾರೆ. ಆ ಮೂಲಕ ವಿಮಾನಯಾನ ಭಾಗ್ಯವನ್ನು ರೈತ ಕಲ್ಪಿಸಿದ್ದಾನೆ. ರೈತ ವಿಶ್ವನಾಥ್ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. https://kannadanewsnow.com/kannada/no-escoms-are-in-curring-losses-in-the-state-minister-kj-george/ https://kannadanewsnow.com/kannada/good-news-for-farmers-in-the-state-7-hour-power-supply-to-agriculture-minister-k-j-george/
ದಾವಣಗೆರೆ : ರಾಜ್ಯದಲ್ಲಿರುವ ಯಾವುದೇ ಎಸ್ಕಾಂಗಳು ನಷ್ಟದಲ್ಲಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಭೆಯಲ್ಲಿ ಮಾತನಾಡಿದ ಅವರು, ಎಸ್ಕಾಂಗಳು ನಷ್ಟದಲ್ಲಿವೆ ಎಂಬುದು ಕೇವಲ ಆರೋಪವಷ್ಟೆ. ಸರ್ಕಾರದಿಂದ ಸಾಕಷ್ಟು ಹಣ ಬರಬೇಕಾಗಿದೆ. ಸ್ಥಳೀಯ ಸಂಸ್ಥೆಗಳು ಸೇರಿದಂತೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ದಿ ಇಲಾಖೆಯಿಂದ ನಮಗೆ ಬರಬೇಕಾದ ಹಣ ಬಾಕಿ ಇದೆ ಎಂದು ಹೇಳಿದರು. ಗ್ರಾಮ ಪಂಚಾಯಿತಿಗಳು ಸ್ವಂತವಾಗಿ ವಿದ್ಯುತ್ ಉತ್ಪಾದನೆ ಮಾಡಿಕೊಂಡು ಸ್ವಾವಲಂಭನೆ ಸಾಧಿಸಲು ದಾವಣಗೆರೆ ಜಿಲ್ಲೆಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಉದ್ದೇಶಿಸಲಾಗಿದೆ. ಪ್ರಾಯೋಗಿಕವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಂಚಾಯಿತಿಗಳಿಗೆ ಕುಡಿಯುವ ನೀರು ಪೂರೈಕೆ, ಬೀದಿದೀಪಗಳಿಗೆ ಅಗತ್ಯವಿರುವ ವಿದ್ಯುತ್ನ ಉತ್ಪಾದನೆ ಮಾಡಿಕೊಂಡು ಸ್ವಾವಲಂಬಿಯಾಗಬೇಕು. ಇದಕ್ಕಾಗಿ 400 ಎಕರೆ ಜಾಗವನ್ನು ಗುರುತಿಸಿ, ಸೋಲಾರ್ ಪ್ಯಾನಲ್ ಅಳವಡಿಸಲಾಗುತ್ತದೆ. ಹೆಚ್ಚುವರಿ ವಿದ್ಯುತ್ತನ್ನು ಗ್ರಿಡ್ಗೆ ನೀಡಿದರೆ ಹೆಚ್ಚುವರಿ ಅಗತ್ಯ ಇರುವಾಗ ಅಷ್ಟೆ ವಿದ್ಯುತ್ಅನ್ನು ವಾಪಸ್ ನೀಡಲಾಗುತ್ತದೆ. ಇದರಿಂದ ಪಂಚಾಯಿತಿಗಳ ಮೇಲಿನ ಹೊರೆ ಕಡಿಮೆಯಾಗಲಿದೆ ಎಂದರು. https://kannadanewsnow.com/kannada/court-allows-darshan-to-travel-to-mysuru-till-feb-20/ https://kannadanewsnow.com/kannada/good-news-for-the-people-of-the-state-puneeth-rajkumar-hridaya-jyothi-yojana-extended-to-all-taluks-2/













