Author: kannadanewsnow09

ಬೆಂಗಳೂರು: ನಗರದಲ್ಲಿ ಅಂತರ್ಜಲ ವೃದ್ಧಿಗಾಗಿ ಮಹತ್ವದ ಕ್ರಮವಹಿಸಲಾಗಿದೆ. ಬಿಬಿಎಂಪಿ ಶಾಲೆಗಳಲ್ಲಿ ಇಂಗುಗುಂಡಿ ನಿರ್ಮಾಣ ಮಾಡಲಾಗುತ್ತದೆ ಅಂತ ಬಿಬಿಎಂಪಿ ಶಿಕ್ಷಣ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ. ಬಿಬಿಎಂಪಿಯ ಶಾಲೆಗಳ ಆವರಣದಲ್ಲಿ ಲಭ್ಯವಿರುವ ಜಾಗಕ್ಕೆ ಅನುಗುಣವಾಗಿ ಇಂಗುಗುಂಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇಷ್ಟೇ ನೀರು ಇಂಗಲಿದೆ ಎಂಬುದನ್ನು ಮಾಪನ ಮಾಡುವ ಸಾಧನಗಳನ್ನು ಅಳವಡಿಸುತ್ತಿಲ್ಲ. ಮಳೆ ನೀರನ್ನು ಇಂಗಿಸಿ, ಅಂತರ್ಜಲ ಮಟ್ಟವನ್ನು ವೃದ್ಧಿಸಲು ಶಾಲೆಗಳ ಆವರಣದಲ್ಲಿ ಸಣ್ಣ ಪ್ರಯತ್ನ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಶಿಕ್ಷಣ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್‌ ತಿಳಿಸಿದ್ದಾರೆ. https://twitter.com/KarnatakaVarthe/status/1914284999064600676 https://kannadanewsnow.com/kannada/today-is-a-rare-day-when-3-planets-come-together-look-at-the-sky-at-9-09-pm-and-say-your-wishes-will-be-fulfilled/ https://kannadanewsnow.com/kannada/complaint-to-lokayukta-to-probe-smart-meter-scam-dr-cn-ashwathnarayan/

Read More

ಇಂದು, ಸೋಮವಾರ, ಏಪ್ರಿಲ್ 21, 2025, ಮೂರು ಗ್ರಹಗಳು ಜೋಡಣೆಗೆ ಬರಲಿವೆ. ಇಂದು ಪವಾಡದ ದಿನವೆಂದು ಪರಿಗಣಿಸಲಾಗಿದೆ. ಈ ದಿನ ರಾತ್ರಿ ಆಕಾಶವನ್ನು ನೋಡಿ ನಾವು ಏನೇ ಪ್ರಾರ್ಥಿಸಿದರೂ ಅದು ತಕ್ಷಣವೇ ನೆರವೇರುತ್ತದೆ ಎಂದು ಜ್ಯೋತಿಷ್ಯ ನಂಬುತ್ತದೆ. ಇಂದಿನ ಅಪರೂಪದ ದಿನದಂದು ಸರಳ ರೇಖೆಯಲ್ಲಿ ಬರುವ ಮೂರು ಗ್ರಹಗಳು ಯಾವುವು? ಇಂದು ರಾತ್ರಿ ಬಯಲಿನಲ್ಲಿ ನಿಂತು ನಾವು ಮಾಡಬೇಕಾದ ಪರಿಹಾರವೇನು? ಈ ಪೋಸ್ಟ್‌ನಲ್ಲಿ ನಿಮಗಾಗಿ ಕೆಲವು ಆಧ್ಯಾತ್ಮಿಕ ಮಾಹಿತಿಯನ್ನು ಒದಗಿಸಲಾಗಿದೆ. ಇಂದು, ಚಂದ್ರ, ಶುಕ್ರ ಮತ್ತು ಗುರು ಎಂಬ ಮೂರು ಗ್ರಹಗಳು ಒಂದೇ ಸಾಲಿನಲ್ಲಿರುತ್ತವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ…

Read More

ಬೆಂಗಳೂರು : ಪಿಂಚಣಿ ಪಡೆಯಲು ಅವಶ್ಯವಿರುವ ‘ಜೀವನ ಪ್ರಮಾಣ ಪತ್ರ’ ಪರಿಶೀಲನೆ ಮತ್ತು ಪ್ರಮಾಣೀಕರಿಸುವ ತಂತ್ರಾಂಶವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬಿಡುಗಡೆ ಮಾಡಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಿಗಮದ ಹಣಕಾಸು ವಿಭಾಗದ ನಿರ್ದೇಶಕರಾದ ಕೆ ಎನ್ ಗಂಗಾಧರ್ ಜೀವನ ಪ್ರಮಾಣ ಪತ್ರ ಪ್ರಮಾಣೀಕರಣ ತಂತ್ರಾಂಶವನ್ನು ಅನಾವರಣಗೊಳಿಸಿದರು. ತಂತ್ರಾಂಶ ಚಾಲನೆಗೊಳಿಸಿ ಮಾತನಾಡಿದ ಗಂಗಾಧರ್, ಪಿಂಚಣಿದಾರರಿಗೆ ಅನುಕೂಲ ಕಲ್ಪಿಸಲು ನಿಗಮದ ಮಾಹಿತಿ ತಂತ್ರಜ್ಞಾನ ವಿಭಾಗ “ಎನ್ಐಸಿಯ ಜೀವನ್ ಪ್ರಮಾಣ್ ಅಪ್ಲಿಕೇಷನ್ ಜತೆಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್” (ಡಿಎಲ್‌ಸಿ) ಪ್ರಮಾಣೀಕರಣ ತಂತ್ರಾಂಶ ಅಭಿವೃದ್ಧಿಗೊಳಿಸಿದ್ದು ಪಿಂಚಣಿದಾರರಿಗೆ ತಾವಿದ್ದ ಸ್ಥಳದಿಂದಲೇ ಲೈಫ್ ಸರ್ಟಿಫಿಕೇಟ್ ವೆರಿಫಿಕೇಷನ್ ಮಾಡಬಹುದಾಗಿದೆ. ಪಿಂಚಣಿದಾರರಿಗೆ ಈ ತಂತ್ರಾಂಶದ ಬಗ್ಗೆ ಸಂಬಂಧಿಸಿದ ವಿಭಾಗಗಳಲ್ಲಿ ಜಾಗೃತಿ ಮೂಡಿಸಲಾಗುವುದು,” ಎಂದು ತಿಳಿಸಿದರು. ಕೆಇಬಿ ಪೆನ್ಷನರ್ಸ್ ಅಸೋಸಿಯೇಷನ್ ಅಧ್ಯಕ್ಷ ಕುಮಾರಸ್ವಾಮಿ ಬಿ.ಪಿ, ಮಾತನಾಡಿ, “ರಾಜ್ಯದೆಲ್ಲೆಡೆ 40 ಸಾವಿರ ಪಿಂಚಣಿದಾರರಿದ್ದಾರೆ. ವರ್ಷದಲ್ಲಿ ಎರಡು ಬಾರಿ ಖುದ್ದು ಕಚೇರಿಗೆ ತೆರಳಿ…

Read More

ಬೆಂಗಳೂರು: ಸಿಇಟಿ ಪರೀಕ್ಷೆ ಬರೆಯಲು ತೆರಳಿದಂತ ಅಭ್ಯರ್ಥಿಗೆ ಜನಿವಾರ ತೆಗೆಸಿದಂತ ವಿವಾದಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರಕ್ಕೆ‌‌ ಪತ್ರ ಬರೆದು, ಪರೀಕ್ಷಾ ಮಾರ್ಗ ಸೂಚಿಯ ವಸ್ತ್ರಸಂಹಿತೆ ನೀತಿಯಲ್ಲಿ ಅವಶ್ಯಕ ಬದಲಾವಣೆ‌ ಮಾಡುವಂತೆ ಮನವಿ ಮಾಡಿದ್ದಾರೆ. ಈ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರಿಗೆ ಪತ್ರ ಬರೆದಿರುವಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, CET ಪರೀಕ್ಷೆಯ ತಪಾಸಕರು, ವಿಧ್ಯಾರ್ಥಿಯ ಜನಿವಾರ ತೆಗೆಸಿರುವ ಪ್ರಕರಣವು ತೀವ್ರ ಆಘಾತ ಉಂಟು ಮಾಡಿದೆ. ಈ ಘಟನೆ ಆ ವಿದ್ಯಾರ್ಥಿಯ ಮನಸ್ಸನ್ನು ಎಷ್ಟು ಘಾಸಿಗೊಳಿಸಿರಬಹುದು ಎಂಬುದನ್ನು ಊಹಿಸಲಾಧ್ಯ. ಇದನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ. ಈ ಪ್ರಕರಣದಲ್ಲಿ ಬಿಜೆಪಿಗರು ವಿನಾಕಾರಣ‌ ರಾಜಕಾರಣ‌ಮಾಡುತ್ತಾ ಸಿದ್ದರಾಮಯ್ಯ ಸರ್ಕಾರದ ಕುರಿತು ಹಿಂದೂ ವಿರೋಧಿ ಎಂದು ಅಪಪ್ರಚಾರ ಮಾಡುತ್ತಿರುವುದು ಮತ್ತಷ್ಟು ಕಳವಳಕಾರಿ ಎಂದು ಹೇಳಿದ್ದಾರೆ. ಜನಿವಾರ ತೆಗೆಸುವುದು, ಮಾಂಗಲ್ಯ ತೆಗೆಸುವುದು( ಕಳೆದ ಬಾರಿಯ ಕೆ ಎ‌ ಎಸ್ ಪರೀಕ್ಷೆಯಲ್ಲಿ ನಡೆದ ಘಟನೆ)…

Read More

ಬೆಂಗಳೂರು: ಬೇಸಿಗೆಯ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರು ಸರಬರಾಜು ವ್ಯವಸ್ಥೆಯಲ್ಲಿ ಕಿಂಚಿತ್ತು ಲೋಪವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಸಚಿವರು ಇಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ವಿಡಿಯೊ ಸಭೆ ನಡೆಸಿ ಕುಡಿಯುವ ನೀರು ಸರಬರಾಜು ಸಂಬಂಧದಲ್ಲಿ ಹಲವು ಸೂಚನೆಗಳನ್ನು ನೀಡಿದರು. ಕಳೆದ ವರ್ಷದ ಸಮಸ್ಯೆಗಳನ್ನು ಅವಲೋಕನ ಮಾಡಿ ಕಳೆದ ವರ್ಷ ಜಿಲ್ಲೆಗಳಲ್ಲಿ ಉದ್ಭವಿಸಿದ್ದ ಸಮಸ್ಯೆಗಳನ್ನು ಅವಲೋಕನ ಮಾಡಿ ಮುಂಜಾಗರೂಕತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ ಸಚಿವರು ಕೊಳವೆ ಬಾವಿಗಳ ದುರಸ್ತಿ, ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆಯುವುದು, ವಾಹನಗಳ ಮೂಲಕ ನೀರು ಸರಬರಾಜು ಸೇವೆಗೆ ಆದ್ಯತೆ ನೀಡಬೇಕು, ಜಿಲ್ಲಾಧಿಕಾರಿಗಳು ಹಾಗೂ ಇತರ ಇಲಾಖೆಗಳ ಅಧಿಕಾರಿಗಳ ಜೊತೆ ಸಮನ್ವಯ ಸಭೆಗಳನ್ನು ನಡೆಸಬೇಕು, ತಾಲ್ಲೂಕು ಪಂಚಾಯತಿಗಳ ನಿರ್ವಹಣಾಧಿಕಾರಿಗಳು, ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಂಜನಿಯರುಗಳು…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸುವ ವಿಚಾರವಾಗಿ ಮಾನ್ಯ ಉಚ್ಛ ನ್ಯಾಯಾಲಯ, ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರು ರವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಆದರೂ ಕೂಡ ಇತ್ತೀಚಿನ ದಿನಗಳಲ್ಲಿ ಉಲ್ಲಂಘನೆಗಳು ಹೆಚ್ಚಾಗುತ್ತಿದ್ದು, ಅದನ್ನು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು. ನಗರದಲ್ಲಿ ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಹೊಸದಾಗಿ ಸುತ್ತೋಲೆ ಹೊರಡಿಸಲಾಗುತ್ತಿದೆ. ಅದರಲ್ಲಿ, ವಾರ್ಡ್ ವ್ಯಾಪ್ತಿಯಲ್ಲಿ ಬರುವ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ ಗೆ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸುವ ಅಧಿಕಾರವನ್ನು ನೀಡಿ ಎಫ್.ಐ.ಆರ್ ದಾಖಲಿಸಿ, ತೆರವುಗೊಳಿಸುವ ವೇಳೆ ವ್ಯಯವಾಗುವ ವೆಚ್ಚವನ್ನು ವಸೂಲಿ ಮಾಡುವುದರ ಜೊತೆಗೆ ದುಪ್ಪಟ್ಟು ದಂಡ…

Read More

ಬೆಂಗಳೂರು: ಬಿಡದಿಯ ಬಳಿಯಲ್ಲಿ ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಈ ದಾಳಿಯಲ್ಲಿ ಗಾಯಗೊಂಡು ರಿಕ್ಕಿ ರೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ಪ್ರಕರಣವನ್ನು ರದ್ದುಗೊಳಿಸುವಂತೆ ಮುತ್ತಪ್ಪ ರೈ ಪತ್ನಿ ಅನುರಾಧಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಆಸ್ತಿಯ ವಿಚಾರವಾಗಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಆಸ್ಪತ್ರೆಗೆ ದಾಖಲಾಗಿರುವಂತ ರಿಕ್ಕಿ ರೈ, ಅಲ್ಲಿಂದಲೇ ಹೇಳಿಕೆ ನೀಡಿ, ಈ ಘಟನೆಗೆ ನನ್ನ ಚಿಕ್ಕಮ್ಮನೇ ಕಾರಣ ಎಂಬುದಾಗಿ ಆರೋಪಿಸಿದ್ದರು. ಅವರ ಹೇಳಿಕೆ ಆಧರಿಸಿ, ಮುತ್ತಪ್ಪ ರೈ ಪತ್ನಿ ಅನುರಾಧ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಮಧ್ಯಂತ ತಡೆ ನೀಡುವಂತೆ, ಪ್ರಕರಣ ರದ್ದು ಮಾಡುವಂತೆ ಮುತ್ತಪ್ಪ ರೈ ಪತ್ನಿ ಅನುರಾಧ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದಂತ ಹೈಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ. https://kannadanewsnow.com/kannada/gold-price-touches-rs-1-lakh-mark-for-jewellery-lovers/ https://kannadanewsnow.com/kannada/complaint-to-lokayukta-to-probe-smart-meter-scam-dr-cn-ashwathnarayan/

Read More

ನವದೆಹಲಿ: ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ 10 ಗ್ರಾಂಗೆ 1 ಲಕ್ಷ ರೂಪಾಯಿ ಮಾನಸಿಕ ಗಡಿಯನ್ನು ತಲುಪಿದ್ದು, ಬೆಲೆಬಾಳುವ ಹಳದಿ ಲೋಹದ ಬೆಲೆ ಭಾರತದಲ್ಲಿ ಏರಿಕೆಯಾಗುತ್ತಲೇ ಇದೆ. ಅಖಿಲ ಭಾರತ ಸರಾಫಾ ಅಸೋಸಿಯೇಷನ್ ​​ಪ್ರಕಾರ, 99.9 ಪ್ರತಿಶತ ಶುದ್ಧತೆಯ ಹಳದಿ ಲೋಹವು 1,650 ರೂಪಾಯಿಗಳಷ್ಟು ಏರಿಕೆಯಾಗಿ 10 ಗ್ರಾಂಗೆ 99,800 ರೂಪಾಯಿಗಳನ್ನು ತಲುಪಿದೆ. ಶುಕ್ರವಾರ ಇದರ ಮೌಲ್ಯ 20 ರೂಪಾಯಿಗಳಷ್ಟು ಇಳಿಕೆಯಾಗಿ 98,150 ರೂಪಾಯಿಗಳಿಗೆ ತಲುಪಿತ್ತು. ಅದೇ ರೀತಿ, 99.5 ಪ್ರತಿಶತ ಶುದ್ಧತೆಯ ಚಿನ್ನವು ಸ್ಥಳೀಯ ಮಾರುಕಟ್ಟೆಗಳಲ್ಲಿ 10 ಗ್ರಾಂಗೆ 1,600 ರೂಪಾಯಿಗಳಷ್ಟು ಏರಿಕೆಯಾಗಿ 99,300 ರೂಪಾಯಿಗಳ ಹೊಸ ಗರಿಷ್ಠ ಮಟ್ಟವನ್ನು ತಲುಪಿತ್ತು. ಹಿಂದಿನ ಮಾರುಕಟ್ಟೆ ಮುಕ್ತಾಯದಲ್ಲಿ ಇದು ಸ್ವಲ್ಪ ಕುಸಿದು 10 ಗ್ರಾಂಗೆ 97,700 ರೂಪಾಯಿಗಳಿಗೆ ತಲುಪಿತ್ತು. ಬೆಳ್ಳಿ ಬೆಲೆಯೂ ಸಹ ಏರಿಕೆ ಬೆಳ್ಳಿ ಬೆಲೆಯೂ ಸಹ 500 ರೂಪಾಯಿಗಳಷ್ಟು ಏರಿಕೆಯಾಗಿ ಪ್ರತಿ ಕೆಜಿಗೆ 98,500 ರೂಪಾಯಿಗಳಿಗೆ ತಲುಪಿದೆ. ಶುಕ್ರವಾರ ಬಿಳಿ ಲೋಹವು ಪ್ರತಿ ಕೆಜಿಗೆ 98,000 ರೂ.ಗೆ ಸ್ಥಿರವಾಗಿ ವಹಿವಾಟು…

Read More

ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬಹಳ ಆಳವಾದ ಅನುಭವ ಹೊಂದಿರುವ ರಾಜ್ಯ ಸರ್ಕಾರದ ಪ್ರತಿಷ್ಠಿತ ಸಂಸ್ಥೆ  ಪೋರ್ಟಲ್ ಮೂಲಕ ರಾಜ್ಯ ಹಾಗೂ ದೇಶಕ್ಕೆ ಹೊಸ ಮುನ್ನುಡಿ ಬರೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಕಿಯೋನಿಕ್ಸ್ ಸಮಸ್ಯೆ ರೂಪಿಸಿರುವ ಇ-ಕಾಮರ್ಸ್ ಪೋರ್ಟಲ್ ಅನ್ನು ಲೋಕಾರ್ಪಣೆಗೊಳಿಸಿ ಮಾತನಾಡುತ್ತಿದ್ದರು. ತಂತ್ರಜ್ಞಾನದ ಮೂಲಕವೇ ಈಗ ಅಭಿವೃದ್ಧಿ ಸಾಧ್ಯ, ತಂತ್ರಜ್ಞಾನದಿಂದಲೇ ಸಂಪತ್ತು, ಏಳ್ಗೆ ಎಂದು ಹೇಳಿದ ಉಪ ಮುಖ್ಯಮಂತ್ರಿಗಳು ಗ್ರಾಮೀಣ ಪ್ರದೇಶದ ಯುವಕರನ್ನು ತಂತ್ರಜ್ಞಾನ ಕ್ಷೇತ್ರಕ್ಕೆ ಹೆಚ್ಚು ಸಂಖ್ಯೆಯಲ್ಲಿ ತರುವ ಮೂಲಕ ಗ್ರಾಮೀಣ ಯುವಕರಲ್ಲಿ ತಂತ್ರಜ್ಞಾನದ ವೃತ್ತಿ ಕೌಶಲ್ಯದ ಅರಿವು ಮೂಡಿಸಬೇಕಾದ ಅವಶ್ಯಕತೆಯಿದೆ ಎಂದು ಹೇಳಿದರು. ಕಿಯೊನಿಕ್ಸ್‌ ಎದುರಿಸುತ್ತಿದ್ದ ಸಮಸ್ಯೆಗಳಿಗೆಹೊಸ ಇ-ಕಾಮರ್ಸ್‌ ಪೋರ್ಟಲ್‌ ಮೂಲಕ ಪರಿಹಾರ: ಪ್ರಿಯಾಂಕ್‌ ಖರ್ಗೆ ಸರ್ಕಾರದ ವಿವಿಧ ಇಲಾಖೆಗಳು ತಮಗೆ ಅವಶ್ಯವಾಗುವ ಸಾಮಗ್ರಿಗಳನ್ನು ಜಾಗತಿಕ ಸ್ಪರ್ಧಾತ್ಮಕ ದರಗಳಲ್ಲಿ ಹೊಂದಲು ಅನುಕೂಲವಾಗುವಂತೆ ಕಿಯೋನಿಕ್ಸ್‌ ಹೊಸ ಇ-ಕಾಮರ್ಸ್‌ ಪೋರ್ಟಲ್‌ನ್ನು ಸಿದ್ಧಪಡಿಸಲಾಗಿದೆ, ಕಳೆದ ಎರಡು ವರ್ಷಗಳಿಂದ ಕಿಯೊನಿಕ್ಸ್‌ ಸಂಸ್ಥೆ ಎದುರಿಸುತ್ತಿದ್ದ ಹಲವಾರು ಸಮಸೈೆಗಳಿಗೆ ಈ ಪೋರ್ಟಲ್‌ ಪರಿಹಾರ…

Read More

ನವದೆಹಲಿ: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎನ್ನುವಂತೆ ಚಿನ್ನದ ಬೆಲೆ ಗಗನಕ್ಕೇರಿದೆ. ಹೊಸ ದಾಖಲೆ ಎನ್ನುವಂತೆ ಇದೇ ಮೊದಲ ಬಾರಿದೆ ಚಿನ್ನದ ಬೆಲೆಯು 1 ಲಕ್ಷ ರೂಪಾಯಿಗೆ ತಲುಪಿದೆ. ದಿನೇ ದಿನೇ ಚಿನ್ನದ ಬೆಲೆ ಏರುಗತಿಯಲ್ಲಿ ಸಾಗುತ್ತಿದೆ. ಆಭರಣ ಖರೀದಿ ಮಾಡೋರಿಗೆ ಬಿಗ್ ಶಾಕ್ ಎನ್ನುವಂತೆ ಇದೀಗ ಚಿನ್ನದ ಬೆಲೆ ಮತ್ತಷ್ಟು ಏರಿಕೆಯಾಗಿದೆ. ಇಂದು 10 ಗ್ರಾಂ ಚಿನ್ನದ ಬೆಲೆಯು ಬರೋಬ್ಬರಿ ರೂ.99,800 ತಲುಪಿದೆ. ಚಿನ್ನದ ಬೆಲೆಯು ಮಾರುಕಟ್ಟೆಯಲ್ಲಿ 10 ಗ್ರಾಂಗೆ ರೂ.99,800 ತಲುಪಿದ್ದು ಇದೇ ಮೊದಲಾಗಿದೆ. ಈ ಹಿಂದೆ ಇದಕ್ಕಿಂತ ಕಡಿಮೆ ಧಾರಣೆಯನ್ನು ಚಿನ್ನ ಹೊಂದಿತ್ತು. ಇಂದು ಇದೇ ಮೊದಲ ಬಾರಿಗೆ ಎನ್ನುವಂತೆ ಲಕ್ಷ ರೂಪಾಯಿಗೆ ಚಿನ್ನದ ಬೆಲೆ ತಲುಪಿದೆ. ಗುಡ್ ರಿಟರ್ನ್ಸ್ ವೆಬ್ಸೈಟ್ ಪ್ರಕಾರ, 24 ಕ್ಯಾರೆಟ್ ಚಿನ್ನದ ಬೆಲೆ ಸೋಮವಾರದ ಆರಂಭಿಕ ವಹಿವಾಟಿನಲ್ಲಿ 10 ರೂಪಾಯಿ ಇಳಿಕೆಯಾಗಿದ್ದು, 10 ಗ್ರಾಂ ಅಮೂಲ್ಯ ಲೋಹದ ವಹಿವಾಟು 97,570 ರೂ. ಬೆಳ್ಳಿ ಬೆಲೆ 100 ರೂಪಾಯಿ ಇಳಿಕೆಯಾಗಿದ್ದು, 1 ಕೆಜಿ…

Read More