Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ವಿಧಾನಸಭೆ: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ. ಅವರ ಗೌರವಧನವನ್ನು ರೂ.1,000 ಹೆಚ್ಚಳ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಹೇಳಿದರು. ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದರು. ಪ್ರಸ್ತುತ 5601 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, 450 ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ 172 ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಸಚಿವರ ಮಾಹಿತಿ ನೀಡಿದರು. ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ…

Read More

ಬೆಂಗಳೂರು : “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಳ ಮೀಸಲಾತಿ ವಿಚಾರದಲ್ಲಿ ಎಲ್ಲಾ ಸಮುದಾಯದವರಿಗೂ ಸಮಾನತೆ ನೀಡಿ, ತೃಪ್ತಿಯಾಗುವಂತೆ ನಮ್ಮ ಸರ್ಕಾರ ತೀರ್ಮಾನ ಮಾಡಿದೆ. ಇದು ದೇವರಾಜ ಅರಸು ಅವರಿಗೆ ನಮ್ಮ ಸರ್ಕಾರ ಸಲ್ಲಿಸುತ್ತಿರುವ ನಮನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಇಬ್ಬರೂ ನಾಯಕರ ಭಾವಚಿತ್ರಕ್ಕೆ ಬುಧವಾರ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. “ನ್ಯಾಯಮೂರ್ತಿ ಸದಾಶಿವ ಆಯೋಗ ರಚನೆಯಾಗಿ 25 ವರ್ಷವಾಗಿದೆ. ನಮ್ಮ ಸರ್ಕಾರ ಸುದೀರ್ಘ ಚರ್ಚೆ ಮಾಡಿ ಪರಿಶಿಷ್ಟ ಸಮುದಾಯದವರ ಒಳಮಿಸಲಾತಿ ವಿಚಾರಕ್ಕೆ ಒಂದು ಸ್ವರೂಪ ನೀಡಿದೆ. ಪರಿಶಿಷ್ಟ ಜಾತಿಯ ಎಡಗೈ ಹಾಗೂ ಬಲಗೈನವರು ಸಮಾಧಾನವಾಗಿ ಇದನ್ನು ಒಪ್ಪಿಕೊಂಡಿದ್ದಾರೆ. ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸವನ್ನು ಮಾಡಿದ್ದೇವೆ. ಸಚಿವ ಸಂಪುಟ ಸಭೆಯಲ್ಲಿ ನಿನ್ನೆ ಕೈಗೊಂಡ ತೀರ್ಮಾನ ಐತಿಹಾಸಿಕವಾದದ್ದು. ಈ ಬಗ್ಗೆ ಮುಖ್ಯಮಂತ್ರಿಗಳು ಸದನದಲ್ಲಿ ಘೋಷಣೆ ಮಾಡಲಿದ್ದಾರೆ. ನಾನು 1989…

Read More

ಧಾರವಾಡ: ಸಿಎಂ ಸಿದ್ಧರಾಮಯ್ಯ ಅವರ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಅವರ ಫಾರ್ಮ್ ಹೌಸಿನಲ್ಲಿ ದರೋಡೆಗೆ ಯತ್ನಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ 15 ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಧಾರವಾಡ ತಾಲ್ಲೂಕಿನ ದಡ್ಡಿಕಮಲಾಪುರ ಗ್ರಾಮದ ಬಳಿಯಲ್ಲಿ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಸೇರಿದಂತ ಮಮತಾ ಎಂಬ ಹೆಸರಿನಡಿ ಫಾರ್ಮ್ ಹೌಸ್ ಇದೆ. ಕಳೆದ ಆಗಸ್ಟ್.13ರಂದು ಸುಮಾರು 8ರಿಂದ 10 ಜನರ ಗುಂಪು ಫಾರ್ಮ್ ಪೌಸ್ ಗೆ ನುಗ್ಗಿ ಅಲ್ಲಿ ಮಲಗಿದ್ದಂತ ಕಣ್ಣಪ್ಪ ಜಡ್ಲಿ, ಹನುಮಂತ ಧನದಾವರ್, ಅಶೋಕ ಪೋತಲಿ, ಲಕ್ಷ್ಮಣ ಚಂದರಗಿ ಎಂಬುವರಿಗೆ ಚಾಕು ತೋರಿಸಿ ಹೆದರಿಸಿ, ಕೈಕಾಲು ಕಟ್ಟಿ ಹಾಕಿ ಅವರ ಬಳಿಯಲ್ಲಿನ ಮೊಬೈಲ್ ಪೋನ್, ಇತರೆ ವಸ್ತುಗಳನ್ನು ದರೋಡೆ ಮಾಡಿದ್ದರು. ಈ ವಿಷಯ ತಿಳಿದು ಅದೇ ದಿನ ಎಸ್ಪಿ ಗುಂಜನ್ ಆರ್ಯ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ದರೋಡೆಕೋರರ ಬಂಧನಕ್ಕೆ 8 ತಂಡವನ್ನು ರಚಿಸಿದ್ದರು. ಈ ತಂಡವು ತನಿಖೆ ನಡೆಸಿ 15 ಜನ ಆರೋಪಿಗಳನ್ನು…

Read More

ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸರ್ಕಾರದ ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳಲ್ಲಿ ಪಿಎಂ, ಸಿಎಂ, ಸಚಿವರನ್ನು ಪದಚ್ಯುತಿಗೊಳಿಸುವಂತ ಮಸೂದೆ ಸೇರಿಯೂ ಸೇರಿದೆ. ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ, 2025, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ, 2025, ಜಮ್ಮು ಮತ್ತು ಕಾಶ್ಮೀರ ಪುನರ್ವಿಂಗಡಣೆ (ತಿದ್ದುಪಡಿ) ಮಸೂದೆ, 2025 ಅನ್ನು ಮಂಡಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದಂತ ಪಿಎಂ, ಸಿಎಂ, ಸಚಿವರ ವಿರುದ್ಧದ ಪದಚ್ಯುತಿಗೊಳಿಸುವಂತ ಮಸೂದೆಗೆ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಲೋಕಸಭೆಯಲ್ಲಿ ಗದ್ದಲ, ಕೋಲಾಹಲ ಕೂಡ ಉಂಟಾಯಿತು. ಹೀಗಾಗಿ ಲೋಕಸಭೆಯ ಸದನವನ್ನು ಸ್ಪೀಕರ್ ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ. https://twitter.com/ANI/status/1958085031559151815 https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/ https://kannadanewsnow.com/kannada/consideration-to-provide-special-concession-for-the-education-of-orphaned-children-minister-lakshmi-hebbalkar/

Read More

ವಿಧಾನಸಭೆ: ಅನಾಥಾಶ್ರಮಗಳಲ್ಲಿ ಇರುವ ಮಕ್ಕಳಿಗೆ ಪದವಿ ಪೂರ್ವ ಶಿಕ್ಷಣದವರೆಗೂ ದಾಖಲಾತಿ ಬಗ್ಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಉನ್ನತ ಶಿಕ್ಷಣಕ್ಕೆ ದಾಖಲಾಗುವ ಸಂದರ್ಭದಲ್ಲಿ ಸಾಮಾನ್ಯವರ್ಗದ ಇತರ ಮಕ್ಕಳಂತೆ ಈ ಮಕ್ಕಳನ್ನು ದಾಖಲಾತಿ ಮಾಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಇಂಥ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ 108 ಸರ್ಕಾರಿ, 54 ಅನುದಾನಿತ ಮತ್ತು 550 ಖಾಸಗಿ ಒಟ್ಟು 712 ಮಕ್ಕಳ ಪಾಲನಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, 712 ಸಂಸ್ಥೆಗಳಲ್ಲಿ ಒಟ್ಟು ಮಕ್ಕಳ ಸಾಮರ್ಥ್ಯ 38,975 ಇದ್ದು, ಈ ಪೈಕಿ 17048 (7874 ಹೆಣ್ಣು, 9175 ಗಂಡು) ಮಕ್ಕಳು ದಾಖಲಾಗಿರುತ್ತಾರೆ ಎಂದು ಮಾಹಿತಿ ನೀಡಿದರು. ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನಾಥ, ನಿರ್ಗತಿಕ ಹಾಗೂ ಒಪ್ಪಿಸಲ್ಪಟ್ಟ ಮಕ್ಕಳು, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ದಾಖಲಾಗುತ್ತಿದ್ದು, ಕೆಲವು ಮಕ್ಕಳಿಗೆ ಸಂಬಂಧಿಸಿದಂತೆ ತಮ್ಮ ಕೌಟುಂಬಿಕ ಹಿನ್ನೆಲೆ…

Read More

ಶಿವಮೊಗ್ಗ: ಇತ್ತೀಚೆಗೆ ಪ್ರತಿಷ್ಠಿತ ಮ್ಯಾಗಜಿನ್ ಔಟ್ ಲುಕ್- ಐಕೇರ್ ಸಂಸ್ಥೆ ಬಿಡುಗಡೆ ಮಾಡಿರುವ ದೇಶದ ಸಾರ್ವಜನಿಕ ವಿಶ್ವವಿದ್ಯಾಲಯದ ರ್ಯಾಂಕಿಂಗ್ ನಲ್ಲಿ ಕುವೆಂಪು ವಿವಿ 30ನೇ ಶ್ರೇಣಿ ಪಡೆದು ಮಹತ್ವದ ಸಾಧನೆ ಮಾಡಿದೆ. ಕಳೆದ ತಿಂಗಳು ನ್ಯಾಕ್ ನಿಂದ ‘ಎ’ ಶ್ರೇಣಿ ಪಡೆದು ಹೆಮ್ಮೆ ಮೂಡಿಸಿದ್ದ ವಿವಿ, ಮತ್ತೆ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವ ಸಾಧನೆ ಮಾಡಿದೆ. ಐದು ಮಾನದಂಡಗಳಲ್ಲಿ ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು 1000 ಅಂಕಗಳಿಗೆ ಮೌಲ್ಯಮಾಪನ ಮಾಡಿರುವ ರ್ಯಾಂಕಿಂಗ್ ಶೈಕ್ಷಣಿಕ ಮತ್ತು ಸಂಶೋಧನಾ ಚಡುವಟಿಕೆಗಳಿಗೆ 400 ಅಂಕಗಳು, ಕೈಗಾರಿಕಾ ವಿನಿಮಯಕ್ಕೆ 200 ಅಂಕಗಳು, ಮೂಲಭೂತ ಸೌಕರ್ಯಗಳಿಗೆ 150 ಅಂಕಗಳು, ಆಡಳಿತ ಮತ್ತು ವಿಸ್ತರಣೆಗೆ 150 ಅಂಕಗಳು ಹಾಗೂ ವೈವಿಧ್ಯತೆ ಚಟುವಟಿಕೆಗಳಿಗೆ 100 ಅಂಕಗಳನ್ನು ನಿಗದಿಗೊಳಿಸಲಾಗಿದೆ. ಕುವೆಂಪು ವಿವಿ ಒಟ್ಟು 862.25 ಅಂಕಗಳೊಂದಿಗೆ 30ನೇ ಸ್ಥಾನ ಪಡೆದಿದೆ. ಉಳಿದಂತೆ ಕರ್ನಾಟಕದ ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯ 6ನೇ ಸ್ಥಾನ ಪಡೆದಿದ್ದರೆ, ಮೈಸೂರು ವಿವಿ 08ನೇ ಸ್ಥಾನ ಮತ್ತು ಬೆಂಗಳೂರು ವಿವಿ 24ನೇ ಸ್ಥಾನ ಮತ್ತು ಮಂಗಳೂರು…

Read More

ಶಿವಮೊಗ್ಗ: ಶಾಸಕ ಗೋಪಾಲಕೃಷ್ಣ ಬೇಳೂರು ಅವರು ತಮ್ಮ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ, ಡಿಸಿಎಂ ಅವರ ಅನುದಾನದಡಿ ಈಗಾಗಲೇ 100 ಕೋಟಿ ಅನುದಾನವನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದರು. ಈಗ ಮುಂದುವರೆದು ಸಾಗರ, ಹೊಸನಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿವೃದ್ಧಿ ಪರ್ವಕ್ಕೆ ನಾಂದಿ ಹಾಡಿದ್ದಾರೆ. ಸುಮಾರು 1 ಕೋಟಿಯನ್ನು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಮಂಜೂರಾತಿಯನ್ನು ಪಡೆದಿದ್ದಾರೆ. ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯಿಂದ 2025-26ನೇ ಸಾಲಿನ ಉಳಿಕೆ ಅನುದಾನದಡಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ಕ್ರಿಯಾ ಯೋಜನೆಗೆ ಅನುಮತಿಯನ್ನು ಸರ್ಕಾರದಿಂದ ನೀಡಲಾಗಿದೆ. 1 ಕೋಟಿ ಅನುದಾನದಡಿ ಯಾವೆಲ್ಲ ಕಾಮಗಾರಿ ಕೈಗೊಳ್ಳಲಾಗುತ್ತದೆ ಗೊತ್ತಾ? ಇಲ್ಲಿದೆ ಪಟ್ಟಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಶಿಫಾರಸ್ಸಿನಂತೆ, ರಾಜ್ಯ ಸರ್ಕಾರವು 2025-26ನೇ ಸಾಲಿನ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಉಳಿಕೆ ಅನುದಾನದಡಿಯಲ್ಲಿ ಈ ಕೆಳಕಂಡ ಅಭಿವೃದ್ಧಿ ಕಾಮಗಾರಿಗಳನ್ನು 1 ಕೋಟಿ ಅನುದಾನದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. 5 ಲಕ್ಷ ಅನುದಾನದಡಿ ಸಾಗರ ತಾಲ್ಲೂಕಿನ…

Read More

ಮೈಸೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರೆಸಲಾಗುವುದಾಗಿ ಮೈಸೂರಿನ ನೈರುತ್ಯ ರೈಲ್ವೆ ವಿಭಾಗವು ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಕೆಳಗಿನ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದಿದೆ. ರೈಲು ಸಂಖ್ಯೆ 16227/16228 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್ ಅರಸಾಳು ನಿಲ್ದಾಣದಲ್ಲಿ 1 ನಿಮಿಷ ನಿಲ್ಲುತ್ತದೆ. ರೈಲು ಸಂಖ್ಯೆ 16206/16205 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಲಾ 1 ನಿಮಿಷ ನಿಲ್ಲುತ್ತದೆ. ಈ ನಿಲುಗಡೆಗಳು 24 ಆಗಸ್ಟ್ 2025ರಿಂದ 23 ಫೆಬ್ರವರಿ 2026ರವರೆಗೆ ಆರು ತಿಂಗಳ ಕಾಲ, ಈಗಿರುವ ಸಮಯಗಳಲ್ಲೇ ಜಾರಿಯಲ್ಲಿ ಇರುತ್ತವೆ. ಈ ನಿಲುಗಡೆಯ ಮುಂದುವರಿಕೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಉತ್ತಮ ಸಂಪರ್ಕ ಹಾಗೂ ಅನುಕೂಲ ಕಲ್ಪಿಸುತ್ತದೆ.

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ಅನ್ನು ರಾಜ್ಯ ಸರ್ಕಾರ ನೀಡಿದೆ. ಅದೇ ಕರಾರಸಾ ನಿಗಮದ ನೌಕರರು ಅಪಘಾತ ಹೊರತುಪಡಿಸಿ ಇತರೇ ಕಾರಣಗಳಿಂದ ನೌಕರರು ಮರಣ ಹೊಂದಿದಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡುತ್ತಿದ್ದ ಪರಿಹಾರ ಮೊತ್ತವನ್ನು ರೂ.10 ಲಕ್ಷಗಳಿಂದ ರೂ. 20 ಲಕ್ಷಗಳಿಗೆ ಹೆಚ್ಚಳ ಮಾಡಿದೆ. ಕೆ ಎಸ್ ಆರ್ ಟಿ ಸಿ ನೌಕರರು ಸೇವೆಯಲ್ಲಿರುವಾಗ ಸಿಬ್ಬಂದಿಗಳು ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ರೂ.1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ವಿತರಿಸುವ ಯೋಜನೆ ಈಗಾಗಲೇ ಜಾರಿಯಲ್ಲಿರುತ್ತದೆ. * ಇದೇ ಮೊದಲ ಬಾರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ರವರು ಅಪಘಾತ ಹೊರತುಪಡಿಸಿ ಇತರೆ ಕೆಳಕಂಡ ಪ್ರಕರಣಗಳಲ್ಲಿ ರೂ.6 ಲಕ್ಷ ಪರಿಹಾರ ಮೊತ್ತ‌ ನೀಡುತ್ತಿದ್ದಾರೆ. * ನಿಗಮದ ನೌಕರರು ಅಪಘಾತ ಹೊರತುಪಡಿಸಿ ಇತರೇ ಕಾರಣಗಳಿಂದ ಅಂದರೆ ಹೃದಯಾಘಾತ, ಕ್ಯಾನ್ಸರ್, ಕಿಡ್ನಿ ಹಾಗೂ ಇತರೇ ಕಾರಣಗಳಿಂದ ನೌಕರರು ಮರಣ ಹೊಂದಿದಲ್ಲಿ ನೌಕರರ…

Read More

ಮಹಾರಾಷ್ಟ್ರ: ಇಲ್ಲಿನ ಮುಂಬೈನಲ್ಲಿ ಭಾರೀ ಮಳೆಯಿಂದಾಗಿ ಬಹುದೊಡ್ಡ ಅವಾಂತರವೇ ಉಂಟಾಗಿದೆ. ಮಳೆಯಿಂದಾಗಿ ವಿದ್ಯುತ್ ಸಮಸ್ಯೆ ಉಂಟಾದ ಪರಿಣಾಮ, ತಾಂತ್ರಿಕ ಕಾರಣದಿಂದ ಮೋನೋ ರೈಲು ಕೆಟ್ಟು ನಿಂತಿದೆ. ಹೀಗಾಗಿ ಅದರಲ್ಲಿನ ಪ್ರಯಾಣಿಕರನ್ನು ಕೆಳಗಿಳಿಸಲು, ಹೊರ ಕರೆ ತರಲು ಹರಸಾಹಸವನ್ನೇ ಪಡುವಂತೆ ಆಗಿದೆ. https://twitter.com/ANI/status/1957822154365427785 ಮಂಗಳವಾರ ಮುಂಬೈನಲ್ಲಿ ಭಾರೀ ಮಳೆಯ ನಡುವೆ ಹಳಿಯಿಂದ ಹಳಿ ತಪ್ಪಿದ ಮಾನೋ ರೈಲು ಗಾಳಿಯಲ್ಲಿ ನೇತಾಡುತ್ತಿತ್ತು. ಮುಂಬೈ ಅಗ್ನಿಶಾಮಕ ದಳ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. https://twitter.com/ANI/status/1957815327867175108 ಬಾಗಿಲುಗಳು ಮುಚ್ಚಿರುವುದರಿಂದ ಮತ್ತು ವಿದ್ಯುತ್ ವ್ಯತ್ಯಯದಿಂದಾಗಿ ಎಸಿ ಕೆಲಸ ಮಾಡುವುದನ್ನು ನಿಲ್ಲಿಸಿರುವುದರಿಂದ ಅನೇಕ ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದಾರೆ, ಉಸಿರುಗಟ್ಟಿಸುತ್ತಿದ್ದಾರೆ. https://twitter.com/ANI/status/1957812000743903706

Read More