Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ “Golden Book of World Records” ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಸವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023 ರಿಂದ ಜುಲೈ 25, 2025 ರ ಅವಧಿಯಲ್ಲಿ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ. ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರಿಗೆ, ಅಕ್ಕ – ತಂಗಿಯರಿಗೆ ಸಲ್ಲಬೇಕು. ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ, ಜೊತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 01 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆಯು…

Read More

ಮಂಡ್ಯ: ಆತ್ಮಹತ್ಯೆ ಮಾಡಿಕೊಳ್ಳಲು ಕಾವೇರಿ ನದಿಗೆ ಮಾಜಿ ಸೈನಿಕನೊಬ್ಬ ಹಾರಿದ್ದಾನೆ. ನಂತ್ರ ಮನಸ್ಸು ಬದಲಿಸಿ ಮರದ ಕೊಂಬೆ ಹಿಡಿದುಕೊಂಡು ಜೋತಾಡಿ ನೆರವಿಗಾಗಿ ಮೊರೆಯಿಟ್ಟ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಗ್ರಾಮದ ಬಳಿಯ ಕಾವೇರಿ ನದಿಗೆ ಆತ್ಮಹತ್ಯೆ ಮಾಡಿಕೊಳ್ಳೋದಕ್ಕೆ ಮಾಜಿ ಸೈನಿಕ ಭೃಂಗೇಶ್ ಹಾರಿದ್ದಾನೆ. ಆದರೇ ಕಾವೇರಿ ನದಿಗೆ ಹಾರಿದ ಬಳಿಕ ಮನಸ್ಸು ಬದಲಾಗಿ ಬದುಕೋದಕ್ಕೆ ನಿರ್ಧರಿಸಿದ್ದಾನೆ. ಬದುಕೋದಕ್ಕೆ ನಿರ್ಧರಿಸಿದಂತ ಮಾಜಿ ಸೈನಿಕ ಭೃಂಗೇಶ್ ಸಮೀಪದಲ್ಲೇ ಇದ್ದಂತ ಮರದ ಕೊಂಬೆ ಹಿಡಿದುಕೊಂಡು ರಕ್ಷಣೆಗಾಗಿ ಮೊರೆಯಿಟ್ಟಿದ್ದಾನೆ. ಈ ಮೊರೆಯನ್ನು ಕೇಳಿದಂತ ಅಂಬಿಗನೊಬ್ಬ ಮಾಜಿ ಸೈನಿಕ ಭೃಂಗೇಶ್ ರಕ್ಷಿಸಿದ್ದಾರೆ. ಅಂದಹಾಗೇ ಸಾಲದ ಬಾಧೆಯಿಂದ ಮಾಜಿ ಸೈನಿಕ ಭೃಂಗೇಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಾವೇರಿ ನದಿ ದಡಕ್ಕೆ ತೆರಳಿ ನೀರಿಗೆ ಜಿಗಿದಿದ್ದಾರೆ. ನದಿಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದರಿಂದ ಕೊಚ್ಚಿ ಹೋಗಿದ್ದಾರೆ. ನಂತ್ರ ಮನಸ್ಸು ಬದಲಿಸಿ ಮರದ ಕೊಂಬೆಯನ್ನು ಹಿಡಿದುಕೊಂಡು ರಕ್ಷಣೆಗಾಗಿ ಮೊರೆಯಿಟ್ಟಾಗ ಅಂಬಿಗನ ಸಹಾಯದಿಂದ ಬದುಕಿ ಬಂದಿದ್ದಾರೆ. https://kannadanewsnow.com/kannada/bengaluru-cylinder-explosion-case-two-more-die-today-without-treatment-death-toll-rises-to-3/ https://kannadanewsnow.com/kannada/tomorrow-there-will-be-a-power-outage-in-the-areas-of-ballari-district/

Read More

ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದಂತ ಘಟನೆ ಆಗಸ್ಟ್.15ರಂದು ನಡೆದಿತ್ತು. ಈ ಘಟನೆಯಲ್ಲಿ ಗಾಯಗೊಂಡಿದ್ದಂತ ಇಬ್ಬರು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಆಗಸ್ಟ್.15ರಂದು ಬೆಂಗಳೂರಿನ ಚನ್ನಯ್ಯನಪಾಳ್ಯದಲ್ಲಿ ಸಿಲಿಂಡರ್ ಸ್ಪೋಟ ಘಟನೆ ನಡೆದಿತ್ತು. ಅಂದೇ ತೀವ್ರವಾಗಿ ಗಾಯಗೊಂಡಿದ್ದಂತ ಬಾಲಕ ಮುಬಾರಕ್ ಸ್ಥಳದಲ್ಲೇ ಸಾವನ್ನಪ್ಪಿದ್ದನು. ಗಂಭೀರವಾಗಿ ಗಾಯಗೊಂಡಿದ್ದಂತ ತಾಯಿ, ಪುತ್ರಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ತಾಯಿ, ಪುತ್ರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಸುಟ್ಟಗಾಯಗಳ ಚಿಕಿತ್ಸಾ ವಿಭಾಗದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ತಾಯಿ ಕಸ್ತೂರಿ(28) ಹಾಗೂ ಪುತ್ರಿ ಕಯಾಲ್(8) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಸಿಲಿಂಡರ್ ಸ್ಪೋಟ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾದಂತೆ ಆಗಿದೆ. https://kannadanewsnow.com/kannada/tomorrow-there-will-be-a-power-outage-in-the-areas-of-ballari-district/ https://kannadanewsnow.com/kannada/good-news-for-the-people-of-the-state-tele-ecg-system-in-taluk-hospitals-and-community-health-centers/

Read More

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 33/11 ಕೆವಿ ರ‍್ರಗುಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಆ.19 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-01 ಡಿ.ಎನ್.ಹಳ್ಳಿ ಎನ್‌ಜೆವೈ ಮಾರ್ಗದ ಡಿ.ಎನ್.ಹಳ್ಳಿ, ಜಿ.ಎನ್.ಹಳ್ಳಿ, ತಂಬ್ರಳ್ಳಿ, ಜಾಲಿಚಿಂತೆ ಗ್ರಾಮಗಳು. ಎಫ್-02 ಜಿ.ಎನ್.ಹಳ್ಳಿ ಐಪಿ ಮಾರ್ಗದ ಜಿ.ಎನ್.ಹಳ್ಳಿ, ತಂಬ್ರಳ್ಳಿ, ಕೃಷಿ ಪ್ರದೇಶಗಳು. ಎಫ್-03 ಹಳೆ ರ‍್ರಗುಡಿ, ಹೊಸ ರ‍್ರಗುಡಿ, ಸಿಂಧುವಾಳ, ಬೆಣಕಲ್ಲು ಹಾಗೂ ಕೃಷಿ ಪ್ರದೇಶಗಳು. ಎಫ್-05 ಸಿಂಧುವಾಳ ಸೋಲಾರ್ ಮಾರ್ಗದ ಹಳೆ ರ‍್ರಗುಡಿ, ಹೊಸ ರ‍್ರಗುಡಿ, ಸಿಂಧುವಾಳ, ಬೆಣಕಲ್ಲು, ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಗ್ರಾಮಗಳು ಮತ್ತು ಎಫ್-06 ಜಾಲಿಹಾಳ್ ಐಪಿ ಮಾರ್ಗದ ಎಂ.ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಹಾಗೂ ಕೃಷಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ…

Read More

ಬೆಂಗಳೂರು: ಹಠಾತ್ ಹೃದಯಾಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ ಕಲ್ಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಇಂದು ಪರಿಷತ್ ಸದಸ್ಯ ಧನಂಜಯ್ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆಯಿಂದಾಗಿ ಜನರಿಗೆ ಸ್ಥಳೀಯ ಮಟ್ಟದಲ್ಲಿ ತಪಾಸಣೆಗೆ ಅನುಕೂಲವಾಗಲಿದೆ ಎಂದರು. ಟೆಲಿ ಇ.ಸಿ.ಜಿ ಮೂಲಕ ತಜ್ಞವೈದ್ಯರಿಂದ ಅಗತ್ಯ ಮಾರ್ಗದರ್ಶನ ದೊರೆಯಲಿದೆ. ಹಠಾತ್ ಹೃದಯಘಾತಗಳನ್ನ ಪ್ರಿವೆಂಟ್ ಮಾಡಲು ಅವಕಾಶವಿದ್ದು,  ಆರಂಭದಲ್ಲೇ ಪತ್ತೆ ಹಚ್ಚುವತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಟೆಲಿ ಇಸಿಜಿ ಸಹಕಾರಿಯಾಗಲಿದೆ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ರಾಜ್ಯದ 86 ಸರ್ಕಾರಿ ಆಸ್ಪತ್ರೆಗಳಲ್ಲಿ ಹಠಾತ್ ಹೃದಯಾಘಾತಗಳನ್ನು ತಡೆಯಲು ಹಬ್ ಮತ್ರು ಸ್ಪೋಕ್ ಮಾದರಿಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಹೃದಯ ಜ್ಯೋತಿ ಯೋಜನೆ ಇಂದು ಸಾವಿರಾರು ಜನರ ಜೀವ ಉಳಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದು ಭಾರೀ ಮಳೆಯ ಕಾರಣದಿಂದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ನಾಳೆ ಕೂಡ ವರುಣನ ಆರ್ಭಟ ಮುಂದುವರೆಯುವ ಕಾರಣ ರಾಜ್ಯದ ಕೆಲ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ 11 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಾಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮುಂಡಗೋಡು ಹೊರತುಪಡಿಸಿ ಜಿಲ್ಲೆಯ 11 ತಾಲ್ಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ನಾಳೆ ರಜೆಯನ್ನು ಘೋಷಿಸಲಾಗಿದೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದು, ನಾಳೆ ಕಾರವಾರ, ಅಂಕೋಲಾ, ಕುಮಟಾ, ಶಿರಸಿ, ಹೊನ್ನಾವರ, ಯಲ್ಲಾಪುರ, ಜೋಯಿಡಾ, ಹಳಿಯಾಳ, ಸಿದ್ದಾಪುರ, ಭಟ್ಕಳ, ದಾಂಡೇಲಿ ತಾಲ್ಲೂಕಿನ ಶಾಲಾ-ಕಾಲೇಜಿಗೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ. ನಾಳೆ ಬೆಳಗಾವಿ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ರಜೆ ಬೆಳಗಾವಿ ಜಿಲ್ಲೆಯ 7 ತಾಲ್ಲೂಕಿನ ಅಂಗನವಾಡಿ,…

Read More

ಬೆಂಗಳೂರು: ಕರ್ನಾಟಕ ಸರ್ಕಾರ ಕೊಡಮಾಡುವ ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆಯಾಗಿರುವ ತೋಂಬತ್ತೈದು ವರ್ಷದ ಹಿರಿಯ ಪತ್ರಕರ್ತ ಕಲ್ಲೇಶಿವೋತ್ತಮರಾವ್ ಅವರಿಗೆ ಅಭಿನಂದನೆಗಳು. ಸುವರ್ಣ ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರಸಂಘ (ಕೆಯುಡಬ್ಲ್ಯೂಜೆ) ಅವರ ಮನೆಗೆ ತೆರಳಿ ಮನೆಯಂಗಳದಲ್ಲಿ ಅವರನ್ನು ಗೌರವಿಸಿದ್ದು ಅಭಿಮಾನದ ಸಂಗತಿಯಾಗಿತ್ತು. ಮನೆಯಂಗಳದಲ್ಲಿ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ನಮನ ಕಾರ್ಯಕ್ರಮವನ್ನು ಕಲ್ಲೇ ಅವರ ಮನೆಯಿಂದಲೇ ಪ್ರಾರಂಭಿಸಲಾಗಿತ್ತು. ಅಷ್ಟೂ ಪತ್ರಕರ್ತರ ಅನುಭವವನ್ನು ಅಮೃತಬೀಜ ಕೃತಿ ಮೂಲಕ ಕೆಯುಡಬ್ಲ್ಯೂಜೆ ದಾಖಲೀಕರಣ ಮಾಡಿದ್ದು ಈ ಕೃತಿಯನ್ನು ಬಹುರೂಪಿ ಸಂಸ್ಥೆ ಹೊರತಂದಿದೆ. ಹಿರಿಯ ಪತ್ರಕರ್ತರಾದ ಕಲ್ಲೇ ಶಿವೋತ್ತಮರಾವ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಅಭಿನಂದಿಸಿದ್ದಾರೆ. https://kannadanewsnow.com/kannada/a-passenger-died-on-the-spot-when-a-ksrtc-bus-collided-with-a-bike-near-the-maddur-bus-station/ https://kannadanewsnow.com/kannada/lalbagh-flower-show-opens-viewed-by-580000-people-so-far/

Read More

ಮಂಡ್ಯ : ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಮೃತ ಪಟ್ಟು ಮತ್ತೋಬ್ಬ ಗಾಯಗೊಂಡಿರುವ ಘಟನೆ ಮದ್ದೂರು ಪಟ್ಟಣದ ಬಸ್ ನಿಲ್ದಾಣದ ಬಳಿ ನಡೆದಿದೆ. ಚನ್ನಪಟ್ಟಣದ ಜೀವನ್ ಪುರ್ ನಗರದ ಮೆಹರಾನ್ ಖಾನ್ (20) ಮೃತ ಪಟ್ಟ ಯುವಕನಾಗಿದ್ದಾನೆ. ಚನ್ನಪಟ್ಟಣದಿಂದ ಮೆಹರಾನ್ ಖಾನ್ ಮತ್ತು ಆತನ ಸ್ನೇಹಿತ ಮಹಮದ್ ಖಾಸಿಂ ಇಬ್ಬರು ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ನಲ್ಲಿ ( KA-02-EU-9389 ) ಟಿ.ನರಸೀಪುರದ ಕುರಿ ಸಂತೆಗೆ ಹೋಗುತ್ತಿದ್ದ ವೇಳೆ ಮದ್ದೂರು ಸರ್ಕಾರಿ ಬಸ್ ನಿಲ್ದಾಣದ ಬಳಿ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ (KA-09-F-5060) ಸಾರಿಗೆ ಬಸ್ (ಮೈಸೂರು ಡಿಪೋ) ಮದ್ದೂರು ಬಸ್ ನಿಲ್ದಾಣಕ್ಕೆ ಹೋಗುವ ವೇಳೆ ತಿರುವುನಲ್ಲಿ ಬಂದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೆಹರಾನ್ ಖಾನ್ ಸ್ಥಳದಲ್ಲೆ ಸಾವಿಗೀಡಾಗಿದ್ದಾನೆ. ಪ್ರಯಾಣಿಕರು ಹಾಗೂ ಸಾರ್ವಜನಿಕರು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಅಷ್ಟರಲ್ಲಿ ಮಹರಾನ್ ಖಾನ್ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ಮದ್ದೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ…

Read More

ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದ್ದನು. ಇಂದು ಗಾಯಗೊಂಡಿದ್ದಂತ ಮತ್ತೋರ್ವ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿ ನಿಗೂಢ ಸ್ಪೋಟ ಘಟನೆ ನಡೆದಿತ್ತು. ಆ ಬಳಿಕ ಪರಿಶೀಲಿಸಿದಾಗ ಸಿಲಿಂಡರ್ ಸ್ಪೋಟಗೊಂಡಿರುವುದಾಗಿ ತಿಳಿದು ಬಂದಿತ್ತು. ಈ ಘಟನೆಯಲ್ಲಿ ಬಾಲಕನೊಬ್ಬ ಸಾವನ್ನಪ್ಪಿದ್ದನು. ಇನ್ನೂ ಈ ದುರಂತದಲ್ಲಿ ಗಾಯಗೊಂಡಿದ್ದಂತ 8 ವರ್ಷದ ಬಾಲಕಿ ಖಯಾಲಾಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಬಾಲಕಿ ಖಯಾಲಾ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಹೀಗಾಗಿ ಸಿಲಿಂಡರ್ ಸ್ಪೋಟ ಘಟನೆಯಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. https://kannadanewsnow.com/kannada/benefit-from-the-e-pathi-account-movement-maddur-tahsildar-parashuram-sattigeri/ https://kannadanewsnow.com/kannada/lalbagh-flower-show-opens-viewed-by-580000-people-so-far/

Read More

ಪೂರ್ವಜರ ಆರಾಧನೆಯನ್ನು ಅತ್ಯಂತ ವಿಶೇಷವಾದ ಆರಾಧನೆ ಎಂದು ಪರಿಗಣಿಸಲಾಗಿದೆ. ಕುಲದೇವತೆಯ ಕೃಪೆಯಿಂದಲೇ ನಮ್ಮ ಜೀವನದಲ್ಲಿ ಪ್ರತಿಯೊಂದು ಶುಭ ಕಾರ್ಯಗಳು ನಡೆಯುತ್ತವೆ ಎಂಬುದು ಹಲವರ ಅನುಭವಕ್ಕೆ ಬಂದಿರುವ ಸತ್ಯ. ಆದುದರಿಂದಲೇ ಇಂದಿನ ಕಾಲದಲ್ಲಿ ಕುಲದೇವತಾ ಆರಾಧನೆಯು ಬಹಳ ವಿಶೇಷವಾಗಿದೆ. ಅಂತಹ ಕುಲದೇವತೆಗೆ ನಾವು ಮಾಡುವ ಪ್ರತಿಯೊಂದು ರೀತಿಯ ಪೂಜೆಯು ವಿಭಿನ್ನ ಪ್ರಯೋಜನಗಳನ್ನು ಹೊಂದಿದೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಯಶಸ್ಸನ್ನು ಸಾಧಿಸಲು ಮತ್ತು ಅಡೆತಡೆಗಳನ್ನು ಕಡಿಮೆ ಮಾಡಲು ಕುಲದೈವವನ್ನು ಯೋಚಿಸಿ ಬೆಳಗಬೇಕಾದ ದೀಪದ ಬಗ್ಗೆ ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಅಡೆತಡೆಗಳನ್ನು…

Read More