Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಶಿವಮೊಗ್ಗ: ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ; ರಾಜ್ಯದ ಜನರಿಗೂ ವಿಶ್ವಾಸ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜಕೀಯ ವಿದ್ಯಮಾನಗಳು ಯಾವ ರೀತಿ ಆಗಲಿದೆ. ಸ್ಥಾನಪಲ್ಲಟ ಯಾವ ರೀತಿ ಆಗಲಿದೆ ಎಂಬುದನ್ನು ನಾವು ಕಾದು ನೋಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಸ್ಥಾನಪಲ್ಲಟ ಆದರೆ ನಮಗೇನೂ ವ್ಯತ್ಯಾಸ ಆಗುವುದಿಲ್ಲ; ರಾಜ್ಯದ ಜನರಿಗೂ ವ್ಯತ್ಯಾಸ ಆಗುವುದಿಲ್ಲ; 15 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಹಣಕಾಸು ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಯಾರೇ ಮುಖ್ಯಮಂತ್ರಿ ಆದರೂ ರಾಜ್ಯವು ಅಭಿವೃದ್ಧಿ ಕಾಣಲು ಸಾಧ್ಯವಾಗದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ಕಾಡುತ್ತಿದೆ. ಸುರ್ಜೇವಾಲಾ ಅವರು ಪದೇಪದೇ ಬೆಂಗಳೂರಿಗೆ ಬರುತ್ತಿದ್ದಾರೆ. ಶಾಸಕರ ಅಭಿಪ್ರಾಯ ಪಡೆದುಕೊಳ್ಳುತ್ತಿದ್ದಾರೆ. ಇವತ್ತು ಮತ್ತೆ ಬಂದಿದ್ದಾರೆ. 3 ದಿನಗಳ ಕಾಲ ಇರುತ್ತಾರೆ. ಡಿ.ಕೆ.ಶಿವಕುಮಾರ್ ಜೊತೆ 100…
ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ಕೋರ್ಟ್ ಆವರಣದಲ್ಲೇ ವಕೀಲನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವಂತ ಘಟನೆ ನಡೆದಿದೆ. ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿತ್ತು. ಈ ವಿಚಾರವಾಗಿ ವಕೀಲ ಜಹೀರ್ ಅಬ್ಬಾಸ್ ಹುಕ್ಕೇರಿ ಎಂಬುವರು ಪ್ರಶ್ನಿಸಿದ್ದರು. ಹೀಗೆ ಪ್ರಶ್ನಿಸಿದ್ದಕ್ಕೆ ಸೋಹಿಲ್ ಇನಾಮದಾರ್ ಸೇರಿದಂತೆ ಇಬ್ಬರು ಹಲ್ಲೆ ಮಾಡಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ. ಬೆಳಗಾವಿಯ ಕೋರ್ಟ್ ಆವರಣದಲ್ಲೇ ವಕೀಲ ಜಹೀರ್ ಅಬ್ಬಾಸ್ ಹುಕ್ಕೇರಿಯ ಮೇಲೆ ಇಬ್ಬರು ಆರೋಪಿಗಳುಕಲ್ಲು, ರಾಡ್ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ದುಷ್ಕರ್ಮಿಗಳ ಹಲ್ಲೆಯಿಂದಾಗಿ ವಕೀಲ ಜಹೀರ್ ತಲೆ, ಕಿವಿ, ಮೂಗು, ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದ್ದಾವೆ. ಜಮೀನು ವ್ಯಾಜ್ಯದ ಕೇಸ್ ವಿಚಾರಣೆ ಮುಗಿಸಿ ಕೋರ್ಟ್ ನಿಂದ ಹೊರಬರುತ್ತಿದ್ದಂತ ವೇಳೆಯಲ್ಲಿ ಅವರ ಮೇಲೆ ಏಕಾಏಕಿ ಹಲ್ಲೆಯಾಗಿದೆ. ಹಲ್ಲೆ ನಡೆಸಿದಂತ ನಂತ್ರ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಾಳು ವಕೀಲ ಜಹೀರ್ ಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/opposition-party-leaders-gain-confidence-to-present-the-greater-bangalore-authority-report-in-the-cabinet-meeting-dks/ https://kannadanewsnow.com/kannada/breaking-tahawwur-rana-reveals-pakistan-army-link-to-26-11-terror/
ಬೆಂಗಳೂರು: “ವಿರೋಧ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ಪಡೆದ ನಂತರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕುರಿತು ವಿಧಾನಸೌಧದಲ್ಲಿ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಎಂಬುದರ ಬಗ್ಗೆ ಸಮಿತಿಯವರು ಅಂತಿಮ ವರದಿ ನೀಡಿದ್ದಾರೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ ಅವರನ್ನು ವಿಶ್ವಾಸಕ್ಕೆ ಪಡೆಯಬೇಕು ಎಂದು ಸಮಿತಿ ಅಧ್ಯಕ್ಷರಿಗೆ ಸೂಚಿಸಿದ್ದೇನೆ. ಇದಾದ ಬಳಿಕ ಸಚಿವ ಸಂಪುಟ ಸಭೆಯ ಮುಂದೆ ವರದಿ ಬಗ್ಗೆ ಪ್ರಸ್ತಾಪ ಮಾಡುತ್ತೇನೆ. ಈಗ ಹಾಲಿ ಇರುವ ಪಾಲಿಕೆ ವ್ಯಾಪ್ತಿಯಲ್ಲೇ ಇದನ್ನು ಜಾರಿಗೊಳಿಸುತ್ತೇವೆ. ಮುಂದಿನ ದಿನಗಳಲ್ಲಿ ಇದನ್ನು ವಿಸ್ತರಣೆ ಮಾಡಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ಇದನ್ನು ಪ್ರಸ್ತಾಪಿಸಿ, ಆದಷ್ಟು ಬೇಗ…
ಬೆಂಗಳೂರು: ನಗರದಲ್ಲಿ ಪತ್ನಿಗೆ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಐಎಸ್ ಡಿ ಡಿವೈಎಸ್ಪಿ ಶಂಕ್ರಪ್ಪ ವಿರುದ್ಧ ಎಫ್ಐಆರ್ ಆಗಿದೆ. ಕಾಲೇಜಿಗೆ ಹೋಗುತ್ತಿರುವ ಮಗನಿದ್ದರೂ ಬೇರೊಬ್ಬ ಹೆಣ್ಣಿನ ಸಂಪರ್ಕ ಮಾಡಿದ್ದಂತ ಐಎಸ್ ಡಿ ಡಿವೈಎಸ್ಪಿ ಶಂಕ್ರಪ್ಪ, ಪತ್ನಿಗೆ ಹಲ್ಲೆ, ಕಿರುಕುಳ ನೀಡುತ್ತಿದ್ದರು. ಅಲ್ಲದೇ ಮಾನಸಿಕ ಕಿರುಕುಳ ನೀಡಿದ್ದಾರೆ. ವರದಕ್ಷಿಣೆ ಹಣಕ್ಕಾಗಿ ಪೀಡಿಸುತ್ತಿದ್ದಾರೆ. ಅಕ್ರಮವಾಗಿ ಬೇರೊಂದು ಹೆಣ್ಣಿನ ಜೊತೆಗೆ ಮದುವೆಯಾಗಿದ್ದಾರೆ. ನನಗೆ ನ್ಯಾಯ ಕೊಡಿಸಿ ಎಂಬುದಾಗಿ ಅವರ ಪತ್ನಿ ಡಿಜಿ ಮತ್ತು ಐಜಿಪಿಗೆ ದೂರು ನೀಡಿದ್ದಾರೆ. ನನ್ನ ಸಂಸಾರ ಹಾಳು ಮಾಡಬೇಡಿ ಎಂಬುದಾಗಿಯೂ ಡಿವೈಎಸ್ಪಿ ಪತ್ನಿ ಪರಿ ಪರಿಯಾಗಿ ಬೇಡಿದರೂ ಕೇಳದೇ ಬೆದರಿಕೆ ಹಾಕಿದ್ದಾರೆ ಎಂಬುದಾಗಿಯೂ ಆರೋಪಿಸಿದ್ದಾರೆ. ಈ ದೂರು ಆಧರಿಸಿ ಬೆಂಗಳೂರಿನ ಈಶಾನ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಐಎಸ್ ಡಿ ಡಿವೈಎಸ್ಪಿ ಶಂಕ್ರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/two-people-fell-victim-to-a-heart-attack-in-tumakuru-city/ https://kannadanewsnow.com/kannada/breaking-icc-ceo/
ತುಮಕೂರು: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ ಮುಂದುವರೆದಿದೆ. ತುಮಕೂರು ನಗರದಲ್ಲಿ ಹೃದಯಾಘಾತದಿಂದ ಜಯಂತ್(31) ಮತ್ತು ಶ್ರೀಧರ್(52) ಎಂಬುವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತುಮಕೂರು ನಗರದ ಹನುಮಂತಪುರದ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಮುಂದುವರೆದಿದೆ. https://kannadanewsnow.com/kannada/what-does-the-report-submitted-by-the-technical-advisory-committee-to-the-government-say-about-the-series-of-deaths-due-to-heart-attacks/ https://kannadanewsnow.com/kannada/breaking-tahawwur-rana-reveals-pakistan-army-link-to-26-11-terror/
ಬೆಂಗಳೂರು: ರಾಜ್ಯದಲ್ಲಿ ಹೃಯಾಘಾತದಿಂದ ಸರಣಿ ಸಾವಿನ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ಅಧ್ಯಯನಕ್ಕಾಗಿ ತಾಂತ್ರಿಕ ಸಲಹಾ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಹಠಾತ್ ಹೃದಯಾಘಾತ ಹೆಚ್ಚಳಕ್ಕೆ ಕಾರಣವೇನು ಎಂಬುದರ ಬಗ್ಗೆ ಅಧ್ಯಯನ ನಡೆಸಿದೆ. ಹೃದ್ರೋಗಿಗಳನ್ನು ಅಧ್ಯಯಕ್ಕೆ ಒಳಪಡಿಸಿ ವರದಿ ತಯಾರಿಸಿ, ಇದೀಗ ಆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿಯಲ್ಲಿ ಏನಿದೆ ಎನ್ನುವ ಬಗ್ಗೆ ಮುಂದೆ ಓದಿ. ಜಯದೇವ ಆಸ್ಪತ್ರೆ ನಿರ್ದೇಶಕ ರವೀಂದ್ರನಾಥ್ ನೇತೃತ್ವದ ಸಮಿತಿ, 251 ರೋಗಿಗಳನ್ನು ಅಧ್ಯಯನಕ್ಕೆ ಒಳಪಡಿಸಿತ್ತು. ಅದರಲ್ಲೂ ಮೂರು ವಯೋವರ್ಗಗಳನ್ನು ಗುರುತಿಸಿ ಅಧ್ಯಯನ ನಡೆಸಿದ್ದರು. 30 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಹೃದ್ರೋಗಿಗಳ ಬಗ್ಗೆ ಅಧ್ಯಯನ ನಡೆಸಲಾಗಿತ್ತು. 31 ರಿಂದ 40 ವಯಸ್ಸಿನ 66 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು. ಜೊತೆಗೆ 41 ರಿಂದ 45 ವಯಸ್ಸಿನ 172 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು. ತಜ್ಞರ ವರದಿಯ ಪ್ರಕಾರ, ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ.…
ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 200ಕ್ಕು ಹೆಚ್ಚು ಅಕ್ರಮ ವಲಸಿಗರನ್ನು ಗಡಿಪಾಡು ಮಾಡಲಾಗಿದೆ. ಎಫ್ಆರ್ಆರ್ಒ ಅಧಿಕಾರಿಗಳು ಅಕ್ರಮ ವಲಸಿಗರನ್ನು ಗುರುತಿಸಿ ನಮಗೆ ಮಾಹಿತಿ ನೀಡುತ್ತಾರೆ. ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ. ಒಂದು ದಿನ ಮಾಡಿ ನಿಲ್ಲಿಸುವುದಿಲ್ಲ ಎಂದು ಅವರು ಹೇಳಿದರು. ಕಟ್ಟಡ ಕಾರ್ಮಿಕರಾಗಿ ಹೆಚ್ಚಿನ ಜನ ಇದ್ದಾರೆ ಎಂದು ಯಾರೋ ಹೇಳುತ್ತಾರೆ. ಅದನ್ನು ಪರಿಶೀಲಿಸಿ, ಅಂತವರು ಕಂಡುಬಂದರೆ ಕಸ್ಟಡಿಗೆ ತೆಗೆದುಕೊಂಡು ಗಡಿಪಾರು ಮಾಡುತ್ತೇವೆ ಎಂದರು. ಅಕ್ರಮ ನುಸುಳುಕೋರರ ಬಗ್ಗೆ ಮೃದು ದೋರಣೆ ತೋರಲು ಏನು ಉಪಯೋಗ ಇದೆ. ಬಾಂಗ್ಲಾ ದೇಶದವರನ್ನು ಕರೆಸಿಕೊಂಡು ಓಟ್ ಹಾಕಿಸಿಕೊಳ್ಳುವಂತ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಕಳೆದ ವಾರ ನನ್ನನ್ನು…
ಬಳ್ಳಾರಿ : ನಮ್ಮ ಸಂವಿಧಾನ ಪ್ರತ್ಯೇಕವಾಗಿ “ಪತ್ರಿಕಾ ಸ್ವಾತಂತ್ರ್ಯ” ಕೊಟ್ಟಿಲ್ಲ. ವಾಕ್ ಸ್ವಾತಂತ್ರ್ಯವೇ ಪತ್ರಿಕಾ ಸ್ವಾತಂತ್ರ್ಯವಾಗಿದೆ. ಹೀಗಾಗಿ ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ರಾಜ್ಯ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾವು ಪತ್ರಿಕಾ ದಿನವನ್ನು ಸಂಭ್ರಮದಿಂದ ಆಚರಿಸುತ್ತಿರುವ ಹೊತ್ತಿನಲ್ಲೇ ನಮ್ಮ ಮಾಧ್ಯಮಗಳ ನೆತ್ತಿ ಮೇಲೆ ತೂಗುತ್ತಿರುವ ಕತ್ತಿಯ ಬಗ್ಗೆಯೂ ನಾವು ಗಂಭೀರವಾಗಿ ಯೋಚಿಸಬೇಕಿದೆ. ಮಾಧ್ಯಮಗಳ ಅಸ್ತಿತ್ವ ಉಳಿದಿರುವುದೇ ಪತ್ರಿಕಾ ಸ್ವಾತಂತ್ರ್ಯದಿಂದ. ಈಗ ಪತ್ರಿಕಾ ಸ್ವಾತಂತ್ರ್ಯ ಬಹಳ ಅಪಾಯದಲ್ಲಿದೆ. 2024ರ ಪತ್ರಿಕಾ ಸ್ವಾತಂತ್ರ್ಯದ ಸೂಚ್ಯಂಕದಲ್ಲಿ ಭಾರತ 181 ದೇಶಗಳ ಪೈಕಿ 151 ನೇ ಸ್ಥಾನದಲ್ಲಿದೆ ಎಂದು ನೆನ್ನೆಯೇ ಹೇಳಿದ್ದೆ. ಆದರೆ, ನಾವು ಗಮನಿಸಬೇಕಾದ ಮತ್ತೊಂದು ಸಂಗತಿ ಎಂದರೆ ಪತ್ರಿಕಾ ಸ್ವಾತಂತ್ರ್ಯದ ಕುಸಿತದ ಜೊತೆಗೇ ವಾಕ್ ಸ್ವಾತಂತ್ರ್ಯದ ಸೂಚ್ಯಂಕದಲ್ಲೂ ಭಾರತ 109ನೇ ಸ್ಥಾನಕ್ಕೆ ಕುಸಿದಿದೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ…
ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಈ ಯೋಜನೆ ಎರಡೂವರೆ ವರ್ಷ ಪೂರೈಸಿದೆ. ಇಂತಹ ಶಕ್ತಿ ಯೋಜನೆಯನ್ನು ಆರ್ಥಿಕ ಯೋಜನೆ ಸುಧಾರಣೆಯಾದ್ರೆ ಗಂಡಸರಿಗೂ ಸಾರಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿದೆ ಎಂಬುದಾಗಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಾವು ಗ್ಯಾರಂಟಿಗೆ ವಿರೋಧ ಮಾಡ್ತಿಲ್ಲ. ಅಭಿವೃದ್ಧಿ ಬಗ್ಗೆ ಮಾತನಾಡಿದರೇ ಏನೇನೋ ಹೇಳ್ತಾರೆ. ಹಣ ಕಡಿಮೆ ಇದೆ ಎಂದು ಯಾರು ಹೇಳಿದರು? ಹೆಣ್ಣುಮಕ್ಕಳಿಗೆ 2 ಸಾವಿರ ಕೊಡ್ತೀರಿ. ನಮಗ್ಯಾಕೆ ಇಲ್ಲ ಅಂದ್ರು ಎಂದರು. ನಮ್ಮ ಸರ್ಕಾರದಲ್ಲಿ ಅನುದಾನದ ಕೊರತೆಯಿಲ್ಲ. ನಾನು ತಮಾಷೆಯಾಗಿ ಮಾತನಾಡಿದೆ. ನಾನು ಹಣಕಾಸು ಮಂತ್ರಿಯಾದ್ರೆ ಹೆಚ್ಚಿನ ಗ್ಯಾರಂಟಿ ನೀಡುತ್ತೇನೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/in-kalaburagi-a-murder-in-the-style-of-renukasaami-the-brutal-killing-of-raghavendra-nayak/ https://kannadanewsnow.com/kannada/breaking-tahawwur-rana-reveals-pakistan-army-link-to-26-11-terror/
ಕಲಬುರ್ಗಿ: ಜಿಲ್ಲೆಯಲ್ಲಿ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿಯನ್ನು ಡಿ ಬಾಸ್ ಅಂಡ್ ಗ್ಯಾಂಗ್ ಹತ್ಯೆ ಮಾಡಿದ ರೀತಿಯಲ್ಲೇ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವಂತ ಘಟನೆ ನಡೆದಿದೆ. ಕಲಬುರ್ಗಿಯಲ್ಲಿ ರೇಣುಕಾಸ್ವಾಮಿ ರೀತಿಯಲ್ಲೇ 39 ವರ್ಷದ ರಾಘವೇಂದ್ರ ನಾಯಕ್ ಎಂಬಾತನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮಾರ್ಚ್ 12ರಂದು ನಡೆದಿದ್ದಂತ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಅಶ್ವಿನಿ ಎಂಬಾಕೆಗೆ ರಾಘವೇಂದ್ರ ಎಂಬಾತ ಕಿರುಕುಳ ನೀಡುತ್ತಿದ್ದನು. ರಾಘವೇಂದ್ರ ಕಿರುಕುಳ ನೀಡುತ್ತಿರುವ ಬಗ್ಗೆ ಪ್ರಿಯಕರ ಗುರುರಾಜ್ ಗೆ ಅಶ್ವಿನಿ ತಿಳಿಸಿದ್ದರು. ಹೀಗಾಗಿ ರಾಘವೇಂದ್ರನನ್ನು ಗುರುರಾಜ್ ಮತ್ತು ಗ್ಯಾಂಗ್ ಕಿಡ್ನಾಪ್ ಮಾಡಿದೆ. ರಾಘವೇಂದ್ರನನ್ನು ಕಿಡ್ನಪ್ ಮಾಡಿಕೊಂಡು ಸ್ಮಶಾನಕ್ಕೆ ಕರೆದೊಯ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದಾಗಿ ರಾಘವೇಂದ್ರ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಇದೀಗ ಕಲಬುರ್ಗಿಯಲ್ಲಿ ರೇಣುಕಾಸ್ವಾಮಿ ಮಾದರಿಯಲ್ಲೇ ಬರ್ಬರವಾಗಿ ವ್ಯಕ್ತಿಯನ್ನು ಹತ್ಯೆ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ. https://kannadanewsnow.com/kannada/breaking-icc-ceo/ https://kannadanewsnow.com/kannada/breaking-tahawwur-rana-reveals-pakistan-army-link-to-26-11-terror/














