Author: kannadanewsnow09

ಬೆಂಗಳೂರು: ಹೈಕಮಾಂಡಿನಿಂದ ನೇಮಿಸಲ್ಪಟ್ಟ ರಾಜ್ಯಾಧ್ಯಕ್ಷರನ್ನು ಪ್ರಶ್ನಿಸುವುದು ಎಂದರೆ ಹೈಕಮಾಂಡನ್ನೇ ಪ್ರಶ್ನಿಸಿದಂತೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ಆಕ್ಷೇಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಹಿರಿಯರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಮ್ಮ ರಾಜ್ಯಾಧ್ಯಕ್ಷ ವಿಜಯೇಂದ್ರರ ಬಗ್ಗೆ ಪ್ರಸ್ತಾಪ ಮಾಡುತ್ತಾರೆ. ಅನಗತ್ಯವಾಗಿ ಚರ್ಚೆಗಳನ್ನು ಮಾಡುತ್ತಿದ್ದಾರೆ. ಅವರಿಗೆ ಅನುಭವ ಇಲ್ಲ; ಚಿಕ್ಕವರು ಎಂದೆಲ್ಲ ಮಾತನಾಡುತ್ತಾರೆ ಎಂದು ಟೀಕಿಸಿದರು. ಯಡಿಯೂರಪ್ಪ ಅವರ ಮಗ ಎಂಬ ಕಾರಣಕ್ಕೆ ಒಪ್ಪುವುದಿಲ್ಲ ಎನ್ನುತ್ತಾರೆ. ಯತ್ನಾಳ್‍ರಲ್ಲೇ ಒಂದಷ್ಟು ಗೊಂದಲಗಳಿವೆ. ವಿಜಯೇಂದ್ರರನ್ನು ರಾಜ್ಯದ ಅಧ್ಯಕ್ಷರನ್ನಾಗಿ ಮಾಡುವ ಸಂದರ್ಭದಲ್ಲಿ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ನರೇಂದ್ರ ಮೋದಿಯವರ ಸಲಹೆ ಪಡೆದು ನೇಮಕ ಮಾಡಿದ್ದಾರೆ ಎಂದು ವಿವರಿಸಿದರು. ನೇಮಕ ಮಾಡುವಾಗ ರಾಜ್ಯ ಬಿಜೆಪಿ ಹಿರಿಯ ಮುಖಂಡರು, ಕಾರ್ಯಕರ್ತರನ್ನು ಅವರದೇ ಆದ ರೀತಿಯಲ್ಲಿ ಸರ್ವೇ ಮಾಡಿಸಿ ಅಭಿಪ್ರಾಯ ಪಡೆದಿದ್ದಾರೆ. ಸ್ವಲ್ಪ…

Read More

ಶಿವಮೊಗ್ಗ: ಮೆಸ್ಕಾಂನಿಂದ ವಾಹಕಗಳ ಮಾರ್ಗ ಬದಲಾವಣೆ, ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ದಿನಾಂಕ 05-10-2024ರಂದು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಶಿವಮೊಗ್ಗ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ವಾಹಕ ಬದಲಾವಣೆ ಮತ್ತು ಹೊಸದಾಗಿ ಜಿ.ಒ.ಎಸ್ ಮದ್ಯಂತರ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ. 05 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಸೋಗಾನೆ, ರೆಡ್ಡಿಕ್ಯಾಂಪ್, ಆಚಾರಿಕ್ಯಾಂಪ್, ಭೋಜಪ್ಪಕ್ಯಾಂಪ್, ದುಮ್ಮಳ್ಳಿ, ಓತಿಘಟ್ಟ, ಮಾಚೇನಹಳ್ಳಿ ಕರೆಂಟ್ ಇರೋದಿಲ್ಲ. ಬಿದರೆ, ನಿದಿಗೆ, ಜಯಂತಿಗ್ರಾಮ, ಹೊನ್ನವಿಲೆ, ನವಿಲೆಬಸವಾಪುರ, ಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮಾಳೇನಹಳ್ಳಿ, ರಾಮಮೂರ್ತಿ ಮಿನರಲ್ಸ್ & ಮೆಟಲ್ಸ್, ಅಮರಾವತಿ ಕ್ಯಾಂಪ್, ಹಳೆಶೆಟ್ಟಿಹಳ್ಳಿ, ಹಾತಿಘಟ್ಟ, ಮತ್ತಿಘಟ್ಟ, ಹಸೂಡಿ, ಐ.ಪಿ. ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. https://kannadanewsnow.com/kannada/after-cm-siddaramaiah-complaint-filed-against-yathindra-for-causing-trouble-to-his-son/ https://kannadanewsnow.com/kannada/bescom-online-service-to-be-disrupted-tomorrow/

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ತನಿಖೆ ನಡೆಯುತ್ತಿದೆ. ಸಿಎಂ ಸಿದ್ಧರಾಮಯ್ಯ ಮುಡಾ ಸಂಕಷ್ಟ ಎದುರಿಸುತ್ತಿದ್ದಾರೆ. ಸಿಎಂ ಸಿದ್ಧರಾಮಯ್ಯ ಬೆನ್ನಲ್ಲೇ ಅವರ ಪುತ್ರನಿಗೂ ಸಂಕಷ್ಟ ಎದುರಾಗಿದೆ. ಸಾಕ್ಷ್ಯ ತಿರುಚಿದ್ದಾರೆ ಎಂಬುದಾಗಿ ವ್ಯಕ್ತಿಯೊಬ್ಬರು ಯತೀಂದ್ರ ಸಿದ್ಧರಾಮಯ್ಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಇಂದು ಪ್ರದೀಪ್ ಕುಮಾರ್ ಎಂಬುವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ಧರಾಮಯ್ಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ ಮುಡಾದ 14 ನಿವೇಶನಗಳಿಗೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ತಿರುಚಿದ್ದಾರೆ. ಅವರ ವಿರುದ್ಧ ಸೂಕ್ತ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಯತೀಂದ್ರ ಸಿದ್ಧರಾಮಯ್ಯ ಅವರು ನಿರ್ಣಾಯಕ ಪುರಾವೆಗಳನ್ನೇ ತಿರುಚಿ, ನಾಶ ಪಡಿಸಿದ್ದಾರೆ. ಇದು ಮುಡಾಗೆ ಸಂಬಂಧಿಸಿದಂತ ಭೂ ಹಗರಣದ ಮೇಲೇ ಪರಿಣಾಮ ಬೀರಲಿದೆ. ಈ ಸಂಬಂಧ ತನಿಖೆ ನಡೆಸಿ, ಇದರಲ್ಲಿ ಭಾಗಿಯಾಗಿರಿರುವಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. https://kannadanewsnow.com/kannada/bescom-online-service-to-be-disrupted-tomorrow/ https://kannadanewsnow.com/kannada/breaking-jailed-actor-darshan-has-swelling-in-the-back-of-his-back-doctors-instruct-him-to-undergo-a-scan/

Read More

ಬೆಂಗಳೂರು: ನನ್ನನ್ನು ಭೂ ಕಬಳಿಕೆದಾರ ಎಂದು ಕರೆದಿರುವ ಕಾಂಗ್ರೆಸ್‌ನ ನಾಲ್ಕು ಸಚಿವರು ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಆದರೆ ಇದೇ ಕಾಂಗ್ರೆಸ್‌ನ ಕೇಂದ್ರ ಸರ್ಕಾರ ಅಂದು ನೇಮಿಸಿದ್ದ ರಾಜ್ಯಪಾಲರು ಮತ್ತು ಘನ ನ್ಯಾಯಾಲಯ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದರೂ ಕಾಂಗ್ರೆಸ್‌ ಪಕ್ಷ ನ್ಯಾಯಾಲಯಕ್ಕಿಂತ ದೊಡ್ಡದಾಗಲು ಯತ್ನಿಸಿ ತೀರ್ಪು ನೀಡಲು ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ತಮ್ಮ ಮೇಲಿನ ಆರೋಪ ಕುರಿತು ಆರ್‌.ಅಶೋಕ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು. ಕಾಂಗ್ರೆಸ್‌ ಸರ್ಕಾರದ ನಾಲ್ವರು ಸಚಿವರು ನನ್ನ ಬಗ್ಗೆ ಕಳಂಕ ಸೃಷ್ಟಿಸಲು ಹಳೆಯ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದಲ್ಲಿ ಅರಿಶಿನ-ಕುಂಕುಮದ ಮೂಲಕ ಭೂಮಿ ಬಂದಿದೆ. ಆದರೆ ನಾನು ಹಣ ಕೊಟ್ಟು ಭೂಮಿ ಖರೀದಿ ಮಾಡಿದ್ದೇನೆ. ಈ ಪ್ರಕರಣದ ಬಗ್ಗೆ ಆರೋಪ ಬಂದಾಗ ರಾಜ್ಯದಲ್ಲಿ ಕಾಂಗ್ರೆಸ್‌ನ ಕೇಂದ್ರ ಸರ್ಕಾರವೇ ನೇಮಿಸಿದ ರಾಜ್ಯಪಾಲ ಹಂಸರಾಜ್‌ ಭಾರಧ್ವಾಜ್‌ ಇದ್ದರು. ಅವರು ಕೂಡ ಈ ಪ್ರಕರಣವನ್ನು ತನಿಖೆಗೆ ವಹಿಸಿಲ್ಲ.…

Read More

ಮೈಸೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾನು ಕೂಡ ಅಂತರ ಕಾಯ್ದುಕೊಂಡಿಲ್ಲ ಎಂಬುದಾಗಿ ಶಾಸಕ ಜಿ ಟಿ ದೇವೇಗೌಡ ಅವರು ಸ್ಪಷ್ಟ ಪಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅವರು ಜೆಡಿಎಸ್ ಬಿಟ್ಟುಬಿಡುವ ವಿಚಾರವಾಗಿ ಮಾತನಾಡಿ, ಈಗ ಬಿಟ್ಟು ಹೋದರೆ ಯಾರು ತಾನೆ ಸೇರಿಸಿಕೊಳ್ಳುತ್ತಾರೆ. ಈಗ ಅದಕ್ಕೆ ಸೂಕ್ತವಾದ ಸಮಯವಲ್ಲ. ಚುನಾವಣೆ ಬಂದಾಗ ನೋಡಿಕೊಳ್ಳೋಣ ಎಂದರು. ನಾನು ಕುಮಾರಸ್ವಾಮಿ ರಾಜೀನಾಮೆ ಬಗ್ಗೆ ಮಾತ್ರ ಮಾತನಾಡಿಲ್ಲ. ಎಫ್ಐಆರ್ ಆಗಿರುವ ಎಲ್ಲರೂ ರಾಜೀನಾಮೆ ಕೊಡ್ತೀರಾ ಎಂದು ಮಾತನಾಡಿರೋದು. ಪಕ್ಷದಲ್ಲಿ ನನ್ನನ್ನು ಕೋರ್ ಕಮಿಟಿ ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ಇದಕ್ಕಿಂತ ಬೇರೆ ಇನ್ನೇನು ಬೇಕು. ಹಿಂದೆಯೂ ಕಾಂಗ್ರೆಸ್ ನವರು ಬಂದು ಪಕ್ಷಕ್ಕೆ ಕರೆದಿದ್ದರು. ಆಗ ದೇವೇಗೌಡರು ಮನೆಗೆ ಬಂದು ಸಮಾಧಾನ ಮಾಡಿದರು. ಹಿರಿಯರ ಮಾತಿಗೆ ಬೆಲೆ ಕೊಟ್ಟು ಜೆಡಿಎಸ್ ಪಕ್ಷದಲ್ಲೇ ಉಳಿದುಕೊಂಡಿದ್ದೇನೆ. ಪಕ್ಷ ಅಧಿಕಾರದಲ್ಲಿದ್ದಾಗ ನನಗೇನು ಕೊಟ್ಟಿದ್ದರು. ಆಗಲೇ ನಾನು ಪಕ್ಷ ಬಿಟ್ಟು ಹೋಗಲಿಲ್ಲ.…

Read More

ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ಧರಾಯಮ್ಯ ವಿರುದ್ಧ ಈಗಾಗಲೇ ದೂರುದಾರ ಸ್ನೇಹಮಯಿ ಕೃಷ್ಣ ಅವರು ಇಡಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಕೇಸ್ ಕೂಡ ದಾಖಲಾಗಿದೆ. ಈಗ ಮುಡಾ ಕೇಸಲ್ಲಿ ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಕಂಟಕ ಎನ್ನುವಂತೆ ಇಡಿಗೆ ಮತ್ತೊಂದು ದೂರು ನೀಡಲಾಗಿದೆ. ಇಂದು ಜಾರಿ ನಿರ್ದೇಶನಾಲಯಕ್ಕೆ ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರು 14 ಮುಡಾ ಸೈಟ್ ವಾಪಾಸ್ ನೀಡಿದ್ದಾರೆ. ಇದಕ್ಕೆ ಅವಕಾಶ ನೀಡಕೂಡದು. ಸೈಟ್ ವಾಪಾಸ್ಸು ನೀಡುವ ಮೂಲಕ ಸಾಕ್ಷ್ಯ ನಾಶದ ಅವಕಾಶ ಇರುತ್ತದೆ. ಕೂಡಲೇ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂಬುದಾಗಿ ದೂರು ನೀಡಿದ್ದಾರೆ. ಇನ್ನೂ ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಇಡಿಯಲ್ಲಿ ದೂರು ದಾಖಲಾಗಿ, ಆ ಬಳಿಕ ಇಸಿಐಆರ್ ದಾಖಲಾದ ನಂತ್ರ ಮುಡಾ 14 ನಿವೇಶನಗಳನ್ನು ವಾಪಾಸ್ಸು ನೀಡಿದ್ದಾರೆ. ಇದು ಹಲವು ಅನುಮಾನಗಳಿಗೂ ಕಾರಣವಾಗಿದೆ. ಈ ನಿಟ್ಟಿನಲ್ಲಿಯೂ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಇಡಿಗೆ ಸಲ್ಲಿಸಿರುವಂತ ದೂರಿನಲ್ಲಿ ಪ್ರದೀಪ್ ಕುಮಾರ್…

Read More

ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಜೈಲುಪಾಲಾಗಿದ್ದಂತ ಜಾನಿ ಮಾಸ್ಟರ್ ಅವರಿಗೆ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಐದು ದಿನಗಳ ಕಾಲ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ತಮಿಳಿನ ತಿರುಚಿತ್ರಬಲಂ ಸಿನಿಮಾದ ಕೋರಿಯೋಗ್ರಫಿಗಾಗಿ ಜಾನಿ ಮಾಸ್ಟರ್ ಅವರಿಗೆ ರಾಷ್ಟ್ರ ಪ್ರಶಸ್ತಿ ಬಂದಿತ್ತು. ಈ ರಾಷ್ಟ್ರಪ್ರಶಸ್ತಿ ಸಮಾರಂಭ ಅಕ್ಟೋಬರ್.6ರಿಂದ 10ರವರೆಗೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಸಮಾರಂಭದಲ್ಲಿ ಭಾಗಿಯಾಗಲು ಜಾನಿ ಮಾಸ್ಟರ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಲಾಗಿದೆ. ಅಂದಹಾಗೇ ಮಹಿಳೆಯೊಬ್ಬರು ಜಾನಿ ಮಾಸ್ಟರ್ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಕೇಸ್ ದಾಖಲಿಸಿದ್ದರು. ಅವರ ವಿರುದ್ಧ ಐಪಿಸಿ ಸೆಕ್ಷನ್ 376, 506, 323ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತೆಲುಗಿನ ಖ್ತಾಯ ನೃತ್ಯ ಸಂಯೋಜಕರಾಗಿರುವಂತ ಜಾನಿ ಮಾಸ್ಟರ್, ಕನ್ನಡ ಸಿನಿಮಾಗಳಲ್ಲಿಯೂ ಕೋರಿಯೋಗ್ರಾಫಿ ಮಾಡುತ್ತಿದ್ದಾರೆ. https://kannadanewsnow.com/kannada/big-update-i-have-not-received-any-notice-from-ed-minister-byrathi-suresh/ https://kannadanewsnow.com/kannada/breaking-jailed-actor-darshan-has-swelling-in-the-back-of-his-back-doctors-instruct-him-to-undergo-a-scan/

Read More

ಬೆಂಗಳೂರು : ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಆನ್‌ಲೈನ್‌ ಸೇವೆಗಳು ಅಕ್ಟೋಬರ್ 5, 6 ರಂದು ಲಭ್ಯ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಐಟಿ ಅಪ್ಲಿಕೇಶನ್‌ಗಳ ಉನ್ನತೀಕರಣಕ್ಕೆ ಸಮಯ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಅಪ್ಲಿಕೇಶನ್‌ ಸೇವೆಗಳು ಅಕ್ಟೋಬರ್ 5, 6 ರಂದು ಲಭ್ಯ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಐಪಿಡಿಎಸ್ ಐಟಿ ಹಂತ-2ರ ಯೋಜನೆಯ ಭಾಗವಾಗಿ ಆರ್‌ಎಪಿಡಿಆರ್‌ಪಿ ಅಪ್ಲಿಕೇಷನ್‌ ಸೇವೆ ಲಭ್ಯ ಇರುವುದಿಲ್ಲ. ಸಿಸ್ಟಂ ಡೌನ್‌ಟೈಮ್ ಅಕ್ಟೋಬರ್ 4ರ ರಾತ್ರಿ 9ರಿಂದ ಆರಂಭವಾಗಿ 7ರ ಬೆಳಗ್ಗೆ 6ಕ್ಕೆ ಕೊನೆಗೊಳ್ಳುತ್ತದೆ. ಐಟಿ ಮೂಲಸೌಕರ್ಯ ವರ್ಧನೆ ಮತ್ತು ಕಾರ್ಯಾಚರಣೆ ಪ್ರದೇಶಗಳಲ್ಲಿ ಸೇವೆಯ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಬೆಸ್ಕಾಂ ಈ ಕಾರ್ಯ ಕೈಗೊಂಡಿದೆ. 2024ರ ಮಾರ್ಚ್ 20 ರಂದು ಬಿಐಪಿ ಮತ್ತು ಡಬ್ಲ್ಯುಎಸ್‌ಎಸ್‌ಗೆ ನವೀಕರಣಗಳೊಂದಿಗೆ ಒರಾಕಲ್ ಸಿಸಿಬಿಯನ್ನು ಆವೃತ್ತಿ 2.3 ರಿಂದ 2.8 ಕ್ಕೆ ಯಶಸ್ವಿಯಾಗಿ ಅಪ್‌ಗ್ರೇಡ್ ಮಾಡುವುದರೊಂದಿಗೆ ಹಂತ-1 ಅನ್ನು…

Read More

ಡಮಾಸ್ಕಸ್: ಭದ್ರತಾ ಪ್ರಧಾನ ಕಚೇರಿ ಮತ್ತು ರಾಯಭಾರ ಕಚೇರಿಗಳ ನೆಲೆಯಾಗಿರುವ ನೆರೆಹೊರೆಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಬುಧವಾರ ಮೂವರು ಸಾವನ್ನಪ್ಪಿದ್ದಾರೆ ಎಂದು ಮೇಲ್ವಿಚಾರಕರು ತಿಳಿಸಿದ್ದಾರೆ. “ಹಿಜ್ಬುಲ್ಲಾ ನಾಯಕರು ಮತ್ತು ಇರಾನಿನ ರೆವಲ್ಯೂಷನರಿ ಗಾರ್ಡ್ಸ್ ಆಗಾಗ್ಗೆ ಭೇಟಿ ನೀಡುವ ಮಝೆಹ್ ನೆರೆಹೊರೆಯ ವಸತಿ ಕಟ್ಟಡದ ಫ್ಲ್ಯಾಟ್ ಅನ್ನು ಗುರಿಯಾಗಿಸಿಕೊಂಡು ಇಸ್ರೇಲ್ ವಾಯು ದಾಳಿ ನಡೆಸಿದೆ” ಎಂದು ಬ್ರಿಟನ್ ಮೂಲದ ಸಿರಿಯನ್ ಮಾನವ ಹಕ್ಕುಗಳ ವೀಕ್ಷಣಾಲಯ ತಿಳಿಸಿದೆ. ಇದು ಕನಿಷ್ಠ ಮೂರು ಜನರನ್ನು ಕೊಂದಿದೆ, ಅವರಲ್ಲಿ ಇಬ್ಬರು ವಿದೇಶಿಯರು ಎಂದು ಮಾನಿಟರ್ ತಿಳಿಸಿದೆ. ಇಸ್ರೇಲಿ ಶತ್ರುಗಳು ವಾಯುದಾಳಿ ನಡೆಸಿದ್ದಾರೆ ಎಂದು ಮಿಲಿಟರಿ ಮೂಲವನ್ನು ಉಲ್ಲೇಖಿಸಿ ಸರ್ಕಾರಿ ಸುದ್ದಿ ಸಂಸ್ಥೆ ಸನಾ ಹೇಳಿದೆ. ಮಝೆಹ್ ನೆರೆಹೊರೆಯ ವಸತಿ ಕಟ್ಟಡಗಳಲ್ಲಿ ಒಂದನ್ನು ಗುರಿಯಾಗಿಸಿಕೊಂಡಿದೆ “. ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರದ ಮುಷ್ಕರವು ಮಂಗಳವಾರದ ಮುಷ್ಕರದಿಂದ ಸುಮಾರು 500 ಮೀಟರ್ (ಗಜಗಳು) ದೂರದಲ್ಲಿದೆ. ಈ ಹಿಂದಿನ ದಾಳಿಯಲ್ಲಿ…

Read More

ಬೆಂಗಳೂರು: ಕುಮಾರಸ್ವಾಮಿರವರು ರಾಜ್ಯದಲ್ಲಿ ಪ್ರತೀ ದಿನ ತಮ್ಮ ಮೇಲೆ ತನಿಖೆ ಮಾಡುವ ಅಧಿಕಾರಿಗಳನ್ನು ತೇಜೋವದೆ ಮಾಡುವ ಕೆಲಸಕ್ಕೆ ಮುಂದಾಗಿರುತ್ತಾರೆ. ಇವರ ಸುಳ್ಳಿನ ಆರೋಪಕ್ಕೆ ಲೋಕಾಯುಕ್ತದ ಹಿರಿಯ ಪೊಲೀಸ್ ಅಧಿಕಾರಿಗಳು ಈಗಾಗಲೇ ಉತ್ತರ ನೀಡಿರುತ್ತಾರೆ. ಮಾನ್ಯ ಕುಮಾರಸ್ವಾಮಿರವರು ಪದೇ ಪದೇ ತನಿಖಾ ಸಂಸ್ಥೆಗಳ ಮೇಲೆ, ಸರ್ಕಾರಿ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಮತ್ತು ಬೆದರಿಕೆ ಹಾಕುವ ಪ್ರಯತ್ನವನ್ನು ಕೈಬಿಡಲಿ ಎಂಬುದಾಗಿ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರು ಹಾಗೂ ಮಾಜಿ ಪರಿಷತ್ ಸದಸ್ಯರಾದಂತ ರಮೇಶ್ ಬಾಬು ತಿಳಿಸಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕೇಂದ್ರ ಸಚಿವರಾದ ಹೆಚ್. ಡಿ ಕುಮಾರಸ್ವಾಮಿರವರು ಮೂಡ ಹಗರಣದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪತ್ನಿ ನಿವೇಶನಗಳನ್ನು ವಾಪಸ್ಸು ನೀಡಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳನ್ನು ಮತ್ತು ಮೂಡ ಆಯುಕ್ತರನ್ನು ರಾಜಕೀಯವಾಗಿ ಟೀಕಿಸಿರುವುದು ಅವರ ಹತಾಶವದದ ಸಂಕೇತವಾಗಿರುತ್ತದೆ ಎಂದಿದ್ದಾರೆ. ತನಿಖಾ ಸಂಸ್ಥೆಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ತಮ್ಮ ಮೂಗಿನ ನೇರಕ್ಕೆ ವರ್ತಿಸುವ ರೀತಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.…

Read More