Author: kannadanewsnow09

ಬೆಂಗಳೂರು : ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಇದೇ ವರ್ಷ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಭರವಸೆ ನೀಡಿದರು. ಶ್ರೀ ರಾಘವೇಂದ್ರ ಚಿತ್ರವಾಣಿಯ 49ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಿನಿಮಾ ಕ್ಷೇತ್ರದ ಸಾಧಕರಿಗೆ 24ನೇ ವರ್ಷದ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.‌ “ಸೊಸೆ ತಂದ ಸೌಭಾಗ್ಯ” ಸಿನಿಮಾದಿಂದ ಪಿಆರ್ ಒ ಕ್ಷೇತ್ರಕ್ಕೆ ಆಗಮಿಸಿದ ರಾಘವೇಂದ್ರ ಚಿತ್ರವಾಣಿ ಈಗ ಕನ್ನಡ ಚಿತ್ರರಂಗದ ಸೌಭಾಗ್ಯ ಆಗಿದೆ ಎಂದು ಮೆಚ್ಚುಗೆ ಸೂಚಿಸಿದರು. ಈ ವಾರ ಸಿನಿಮಾ ಜಗತ್ತಿಗೆ ಸಂಭ್ರಮದ ವಾರ. 2019 ನೇ ಸಾಲಿನ ರಾಜ್ಯ ಸಿನಿಮಾ ಪ್ರಶಸ್ತಿಗಳು ಹಾಗೂ ನೆನ್ನೆ ಅನಂತನಾಗ್ ಅವರೂ ಸೇರಿ ಸಿನಿಮಾ ಕ್ಷೇತ್ರದ ದಿಗ್ಗಜರಿಗೆ ಪದ್ಮ‌ ಪ್ರಶಸ್ತಿಗಳು ಲಭಿಸಿವೆ. ಇದು ಸಂಭ್ರಮದ ವಾರ ಎಂದರು. ಐದು ವರ್ಷಗಳಿಂದ ರಾಜ್ಯ ಸಿನಿಮಾ ಪ್ರಶಸ್ತಿಗಳು ಸ್ಥಗಿತಗೊಂಡಿದ್ದವು. ನಾವು ಈಗಗಲೇ 2019 ರ ಪ್ರಶಸ್ತಿ ಘೋಷಣೆಯಾಗಿದ್ದು ಬಾಕಿ ಇರುವ ಐದೂ ವರ್ಷಗಳ ಪ್ರಶಸ್ತಿಯನ್ನೂ ಇದೇ ವರ್ಷ…

Read More

ಭಾರತದಲ್ಲಿ ವಾಸಿಸುವ ಲಕ್ಷಾಂತರ ಜನರು ಈಗಾಗಲೇ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಗೃಹ ನಿರ್ಮಾಣ ಮಾಡಿಕೊಂಡಿದ್ದಾರೆ. ಗೃಹ ನಿರ್ಮಾಣ ಮಾಡುವ ಕನಸು ಕಂಡ ಫಲಾನುಭವಿಗಳಿಗೆ ಈಗಲು ಅವಕಾಶವಿದ್ದು, ಅರ್ಜಿ ಸಲ್ಲಿಸಿ ಸಹಾಯ ಪಡೆದುಕೊಳ್ಳಬಹುದು. ಸರ್ಕಾರದಿಂದ ವಸತಿ ನಿರ್ಮಾಣಕ್ಕೆ ಅನುದಾನ ಸಿಗುವುದರ ಜೊತೆಗೆ ರಾಜ್ಯದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯ ಮೂಲಕ ಸಾಕಷ್ಟು ಜನರಿಗೆ ಮನೆ ನಿರ್ಮಾಣ ಮಾಡಿಕೊಡಲಾಗುತ್ತಿದೆ. ಅದರಲ್ಲೂ ಬೆಂಗಳೂರು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ವಸತಿ ಯೋಜನೆ ಅಡಿಯಲ್ಲಿ 7.5 ಲಕ್ಷ ರೂಪಾಯಿಗಳ ಸಾಲ ಸೌಲಭ್ಯ ನೀಡಲಾಗುತ್ತಿದೆ. ಮಹಿಳಾ ಅಭ್ಯರ್ಥಿಯ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಅರ್ಜಿದಾರರು ಮಾಜಿ ಅಥವಾ ವಿಶೇಷ ಚೇತನರಾಗಿದ್ದರೆ ಸರಕಾರದಿಂದ ದೃಢೀಕರಣ ಪ್ರಮಾಣ ಪತ್ರ ನೀಡಬೇಕು. ಕೇಂದ್ರದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಪ್ರತಿಯೊಬ್ಬರಿಗೆ ಮನೆ ನಿರ್ಮಾಣ ಮಾಡಿಕೊಡುವ ಕನಸು ಕಳೆದ ಎರಡು ವರ್ಷಗಳಿಂದ ಆರ್ಥಿಕ ಸಮಸ್ಯೆಯಿಂದ ಪೂರ್ಣವಾಗಿರಲಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ…

Read More

ಬೆಂಗಳೂರು: ಮೂಲೆಯಲ್ಲಿದ್ದ ನಿಜವಾದ ಸಾಧಕÀರನ್ನು ಹುಡುಕಿ ಗುರುತಿಸಿ ಪದ್ಮ ಪ್ರಶಸ್ತಿಗಳನ್ನು ಕೊಡುವ ಕೆಲಸವನ್ನು ಇಂದಿನ ಕೇಂದ್ರ ಸರಕಾರ ಮಾಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಿಂದಿನ ಆಡಳಿತಗಳು ತನಗೆ ಬೇಕಾದವರಿಗೆ, ತಮ್ಮ ಪಕ್ಷಕ್ಕೆ ದೇಣಿಗೆ ಕೊಡುವವರಿಗೆ ಮಾತ್ರ ಪ್ರಶಸ್ತಿ ಕೊಡುತ್ತಿದ್ದವು ಎಂದು ಆರೋಪಿಸಿದರು. ಬಾಬಾಸಾಹೇಬ ಅಂಬೇಡ್ಕರರು ಕೂಡ ಇದಕ್ಕೆ ಸಾಕ್ಷಿ. ಅವರನ್ನು ಚುನಾವಣೆಯಲ್ಲಿ ಸೋಲಿಸಿದವರಿಗೆ ಪದ್ಮ ಪ್ರಶಸ್ತಿ ಕೊಡಲಾಗಿತ್ತು. ಆದರೆ, ಅಂಬೇಡ್ಕರರಿಗೆ ಭಾರತ ರತ್ನ ಕೊಡಲಿಲ್ಲ ಎಂದು ಟೀಕಿಸಿದರು. ನಿಜವಾದ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸ ಇಂದಿನ ನರೇಂದ್ರ ಮೋದಿಜೀ ಅವರ ಸರಕಾರದಿಂದ ಆಗುತ್ತಿದೆ ಎಂದು ವಿವರಿಸಿದರು. ಈ ಮೂಲಕ ರಾಜಕೀಯ ವ್ಯವಸ್ಥೆಯಲ್ಲಿ ಬದಲಾದ ದಿನಗಳನ್ನು ನಾವು ಕಾಣುವಂತಾಗಿದೆ ಎಂದು ವಿಶ್ಲೇಷಿಸಿದರು. ಸ್ವಾತಂತ್ರ್ಯಕ್ಕಾಗಿ ರಕ್ತ ಹರಿಸಿದವರು, ಪ್ರಾಣತ್ಯಾಗ ಮಾಡಿದವರನ್ನು ನೆನಪಿಸಿಕೊಳ್ಳುತ್ತಿಲ್ಲ. ಯಾರು ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದರೋ, ಜೈಲುಗಳಲ್ಲಿ ಜೀವನ ಕಳೆದರೋ ಅಂಥವರಿಗೆ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಚಳಿಗಾಯದಲ್ಲಿ ಅನೇಕ ಕಾಲೆಯೆಗಳು ಕಾಡುತ್ತವೆ. ಅದರಲ್ಲೂ ನೆಗಡಿ, ಕೆಮ್ಮು, ಕಫದಂತಹ ಸಮಸ್ಯೆಗಳು ಕಾಡಲು ಆರಂಭಿಸುತ್ತವೆ. ಕೆಲವರಿಗೆ ಕಫ ಬೇಗನೆ ವಾಸಿ ಆಗುವುದಿಲ್ಲ, ಇಂತಹ ಸಮಯದಲ್ಲಿ ಕೆಲವು ಮನೆಮದ್ದುಗಳು ಸಹಕಾರಿಯಾಗಿವೆ. ಈ ಮನೆಮದ್ದುಗಳು ನೈಸರ್ಗಿಕವಾಗಿ ಕಫದ ಸಮಸ್ಯೆಯನ್ನು ನಿವಾರಿಸುತ್ತದೆ. ಈ ಮನೆಮದ್ದುಗಳನ್ನು ಮಾಡುವುದರಿಂದ ರೋಗನಿರೋಧಕ ಶಕ್ತಿಯೂ ಬಲಗೊಳ್ಳುತ್ತದೆ. ಇಲ್ಲಿದೆ ಹೆಚ್ಚಿನ ಮಾಹಿತಿ. ಉಪ್ಪು ನೀರಿನಿಂದ ಬಾಯಿ ಮುಕ್ಕಳಿಸುವುದು ಕಫದ ಸಮಸ್ಯೆಯನ್ನು ಹೋಗಲಾಡಿಸಲು, ಒಂದು ಲೋಟ ಉಗುರುಬೆಚ್ಚನೆಯ ನೀರನ್ನು ತೆಗೆದುಕೊಳ್ಳಿ. ಅದರಲ್ಲಿ ಅರ್ಧ ಟೀಚಮಚ ಉಪ್ಪಿನೊಂದಿಗೆ ಗಾರ್ಗ್ಲ್ ಮಾಡಿ. ದಿನಕ್ಕೆ 2 ರಿಂದ 3 ಬಾರಿ ಬಾಯಿ ಮುಕ್ಕಳಿಸುವುದರಿಂದ ಕಫ ದೂರವಾಗುತ್ತದೆ. ಕೆಮ್ಮಿನ ಸಮಸ್ಯೆಯೂ ದೂರವಾಗುತ್ತದೆ. ಬೆಚ್ಚಗಿನ ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ಬಾಯಿಯ ಸೋಂಕು ನಿವಾರಣೆಯಾಗುತ್ತದೆ. ಜೇನು ತುಪ್ಪ ಜೇನುತುಪ್ಪದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿವೈರಲ್ ಗುಣಲಕ್ಷಣಗಳು ಕಂಡುಬರುತ್ತವೆ. ಇದು ಕಫ ಮತ್ತು ಸೋಂಕನ್ನು ಗುಣಪಡಿಸುತ್ತದೆ. ಕಫ ಇರುವಾಗ ಜೇನುತುಪ್ಪವನ್ನು ಸೇವಿಸಬಹುದು. ಬಿಸಿ ನೀರು ಮತ್ತು ನಿಂಬೆ ಬೆಚ್ಚಗಿನ…

Read More

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಕನ್ನಡದ ಬಿಗ್ ಬಾಸ್ ಸೀಸನ್ 11ರ ವಿನ್ನರ್ ಘೋಷಣೆಗೆ ಮುನ್ನವೇ ಮಾಹಿತಿ ಸೋರಿಕೆಯಾಗಿದೆ. ಸೋರಿಕೆಯಾದಂತ ಮಾಹಿತಿಯಂತೆ ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಹನುಮಂತು ಗೆಲುವು ಸಾಧಿಸಿದ್ದಾರೆ. ಹೌದು. ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿಗಳ ಗೆಲುವಿನ ವಿಚಾರ ಘೋಷಣೆಗೆ ಮುನ್ನವೇ ವೈರಲ್ ಆಗಿದೆ. ಇದಕ್ಕಾಗಿ ಕ್ರಿಯೆಟ್ ಆಗಿರುವಂತ ಪೇಜ್ ನಲ್ಲಿ ಮೊದಲ ದಿನದಿಂದ ಹಿಡಿದು, ಇಲ್ಲಿಯವರೆಗೆ ಯಾರು ಎಲಿಮಿನೇಟ್ ಆದರು, ಯಾರೆಲ್ಲ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ರು ಎನ್ನುವ ಮಾಹಿತಿಯನ್ನು ದಾಖಲಿಸಲಾಗಿದೆ. ಇನ್ನೂ ಬಿಗ್ ಬಾಸ್ ಕನ್ನಡ 11ರ ಸ್ಪರ್ಧಿಗಳಲ್ಲಿ ವಿನ್ನರ್ ಯಾರು ಅಂತ ಘೋಷಿಸೋ ಕೆಲವೇ ಗಂಟೆಗಳ ಮೊದಲೇ ವಿಕಿಪೀಡಿಯಾದಲ್ಲಿ ವಿನ್ನರ್ ಯಾರು ಎನ್ನುವುದನ್ನು ಅಪ್ ಡೇಟ್ ಮಾಡಲಾಗಿದೆ. ಅದರ ಮಾಹಿತಿ ಅನುಸಾರ ಹನುಮಂತು ಅವರು ಬಿಗ್ ಬಾಸ್ ಕನ್ನಡ 11ರ ವಿನ್ನರ್ ಎನ್ನುವಂತ ಮಾಹಿತಿಯನ್ನು ಬರೆಯಲಾಗಿದೆ. ಜೊತೆಗೆ ಮೋಕ್ಷಿತಾ ರನ್ನರ್ ಅಪ್, ನಾಲ್ಕನೇ ರನ್ನರ್ ಅಪ್ ಮಂಜು ಎಂಬುದಾಗಿ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಕೆಲವೊಮ್ಮೆ ಕೈ ಜಾರಿ ಫೋನ್ ಗಳು ನೀರಿನಲ್ಲಿ ಬೀಳುತ್ತವೆ. ಇದರಿಂದ ಪೋನ್ ಹಾಳಾಗಬಹುದು, ಇಲ್ಲಿವೆ ಸಣ್ಣ-ಪುಣ್ಣ ಡ್ಯಾಮೇಜ್ ಆಗುವ ಸಾಧ್ಯತೆ ಇರುತ್ತದೆ. ಆದರೆ ನೀರಿನಲ್ಲಿ ಫೋನ್ ಬಿದ್ದಾಗ ಕೆಲವೊಂದು ಕೆಲಸಗಳನ್ನು ಮಾಡಬಾರದು. ಅವುಗಳ ಕುರಿತ ಮಾಹಿತಿ ಇಲ್ಲಿದೆ. ಫೋನ್ ಒದ್ದೆಯಾದಾಗ ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ ಫೋನ್‌ನಲ್ಲಿ ಹೇರ್ ಡ್ರೈಯರ್ ಅನ್ನು ಬಳಸಬೇಡಿ ಅನೇಕ ಜನರು ತಮ್ಮ ಫೋನ್ ಒದ್ದೆಯಾದಾಗ ಹೇರ್ ಡ್ರೈಯರ್‌ನಿಂದ ಒಣಗಿಸಲು ಪ್ರಾರಂಭಿಸುತ್ತಾರೆ. ಆದರೆ ಹೇರ್ ಡ್ರೈಯರ್‌ನಿಂದ ಹೊರಬರುವ ಗಾಳಿಯು ತುಂಬಾ ಬಿಸಿಯಾಗಿರುತ್ತದೆ, ಇದು ಫೋನ್‌ ಸೂಕ್ಷ್ಮ ಎಲೆಕ್ಟ್ರಾನಿಕ್ ಭಾಗವನ್ನು ಸುಲಭವಾಗಿ ಹಾನಿಗೊಳಿಸುತ್ತದೆ. ಫೋನ್ ಬಿದ್ದ ನಂತರ ಅದನ್ನು ಚಾರ್ಜ್ ಮಾಡಬೇಡಿ ನೀರಿನಲ್ಲಿ ಬೀಳುವ ಕಾರಣ ನಿಮ್ಮ ಫೋನ್ ಆಫ್ ಆಗಿರುವಾಗ ಮತ್ತು ಆನ್ ಮಾಡಲು ಸಾಧ್ಯವಾಗದಿದ್ದರೆ, ನಂತರ ಚಾರ್ಜರ್ ಅನ್ನು ಬಳಸಬೇಡಿ. ಫೋನ್‌ ಎಲ್ಲಾ ಭಾಗಗಳು ಒದ್ದೆಯಾಗಿದ್ದು, ಅಂತಹ ಪರಿಸ್ಥಿತಿಯಲ್ಲಿ ಚಾರ್ಜ್ ಆಗುವುದರಿಂದ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಒದ್ದೆಯಾದ…

Read More

ಬೆಂಗಳೂರು: ನಿರ್ದೇಶಕರೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ, ಮದುವೆಯಾಗಿ ಕಿರುಕುಳ ನೀಡುತ್ತಿರುವ ಆರೋಪದಡಿ ಕನ್ನಡದ ಖ್ಯಾತ ಕಿರುತೆರೆ ಹಿರಿಯ ನಟಿ ಶಶಿಕಲಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಜಾರಾಜ್ಯ ಚಿತ್ರದ ನಿರ್ದೇಶಕ ಹರ್ಷವರ್ಧನ್ ಅವರು ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ತೆರಳಿ ಬ್ಲಾಕ್ ಮೇಲ್ ಮಾಡಿ ಮದುವೆಯಾಗಿದ್ದು, ದೂರವಿದ್ದರೂ ಕೂಡ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂಬುದಾಗಿ ನಟಿ ಶಶಿಕಲಾ ವಿರುದ್ಧ ದೂರು ನೀಡಿದ್ದಾರೆ. ನನ್ನನ್ನು ಸಿನಿಮಾಗೆ ಹಣ ಹೂಡಿಕೆ ಮಾಡೋದಾಗಿ ನಂಬಿಸಿ ಮದುವೆಯಾದರು. ಆ ಬಳಿಕ ಯಾವುದಾದರೂ ವಿಚಾರಕ್ಕೆ ಪ್ರಶ್ನೆ ಮಾಡಿದ್ರೇ ನನಗೆ ಕಿರುಕುಳ ನೀಡುತ್ತಿದ್ದರು ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಿರ್ದೇಶಕರ ಹರ್ಷವರ್ಧನ್ ದೂರಿನ ಅನ್ವಯ ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಕನ್ನಡದ ಕಿರುತೆರೆ ಹಿರಿಯ ನಟಿ ಶಶಿಕಲಾ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. https://kannadanewsnow.com/kannada/my-candidature-for-bjp-state-presidents-post-is-certain-victory-is-certain-mla-basanagouda-patil-yatnal/ https://kannadanewsnow.com/kannada/appeal-for-help-of-journalist-hospitalised-due-to-illness/

Read More

ವಿಜಯಪುರ: ನಾನು ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಸ್ಪರ್ಧಿಸಲು ಸಿದ್ಧನಿದ್ದೇನೆ. ನನ್ನ ಸ್ಪರ್ಧೆ ಖಚಿತವಾಗಿದ್ದು, ಗೆಲುವು ಕೂಡ ಅಷ್ಟೇ ನಿಶ್ಚಿತವಾಗಿದೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನನ್ನ ಹೆಸರು ಬಿಜೆಪಿ ನಿಷ್ಠಾವಂತರ ಗುಂಪಿನ ಕೋರ್ ಕಮಿಟಿಯಲ್ಲಿ ಅಂತಿಮ ಆದ್ರೆ ಸ್ಪರ್ಧಿಸೋದು ಖಚಿತವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾನು ರೆಡಿ ಎಂಬುದಾಗಿ ತಿಳಿಸಿದರು. ನಾನು ಬಿಜೆಪಿ ಉಸ್ತುವಾರಿ ಸಭೆಗೆ ಹೋಗಿಲ್ಲ. ಅಲ್ಲಿ 600 ಶಾಸಕರ ಬೆಂಬಲ ಇದೆ. ಅಲ್ಲಿಗೆ ನಮಗೇನು ಕೆಲಸ. 600 ಶಾಸಕರು, 1,500 ಸಂಸದರು, 2000 ಎಂಎಲ್ಸಿಗಳ ಬೆಂಬಲ ಇದೆ ಎಂಬುದಾಗಿ ವ್ಯಂಗ್ಯವಾಡಿದರು. ನಾನು ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಸ್ಪರ್ಧಿಸೋದು ಖಚಿತ. ಅಷ್ಟೇ ಅಲ್ಲದೇ ನಾನು ಸ್ಪರ್ಧಿಸಿ ಗೆಲುವು ಕೂಡ ಸಾಧಿಸಲಿದ್ದೇನೆ ಎಂಬುದಾಗಿ ವಿಶ್ವಾಸ ವ್ಯಕ್ತ ಪಡಿಸಿದರು. https://kannadanewsnow.com/kannada/five-injured-in-another-fatal-accident-in-kerala/ https://kannadanewsnow.com/kannada/appeal-for-help-of-journalist-hospitalised-due-to-illness/

Read More

ಚಿಕ್ಕಮಗಳೂರು: ಬಸ್ಸಿನ ಸ್ಟೇರಿಂಗ್ ಕಟ್ ಆಗಿ ಉಂಟಾದಂತ ಪಲ್ಟಿಯಲ್ಲಿ ಐವರು ಗಂಭೀರವಾಗಿ ಗಾಯಗೊಂಡು, ಇತರರಿಗೆ ಸಣ್ಣಪುಟ್ಟ ಗಾಯವಾಗಿರುವಂತ ಘಟನೆ ಚಿಕ್ಕಮಗಳೂರಿನ ಬಿದರಹಳ್ಳಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಿದರಹಳ್ಳಿಯಲ್ಲಿ ಮೈಸೂರಿನ ಅಪೊಲೋ ಆಸ್ಪತ್ರೆಯ ಸಿಬ್ಬಂದಿ ಧರ್ಮಸ್ಥಳಕ್ಕೆ ಬಸ್ಸಿನಲ್ಲಿ ಪ್ರವಾಸಕ್ಕೆ ತೆರಳಿದ್ದಾಗ, ಬಸ್ ಸ್ಟೇರಿಂಗ್ ಕಟ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಐವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಇನ್ನೂ ಸಣ್ಣಪುಟ್ಟ ಗಾಯವಾಗಿದ್ದಂತ ಇತರರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/housewives-beware-do-not-put-these-ingredients-in-a-mixer-and-grind-them/ https://kannadanewsnow.com/kannada/appeal-for-help-of-journalist-hospitalised-due-to-illness/

Read More

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ :  ಮಿಕ್ಸಿಯು ಮನೆಯ ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಉಪಕರಣವಾಗಿದೆ. ಈ ಉಪಕರಣವಿಲ್ಲದೆ ಯಾವುದೇ ಕೆಲಸ ಮಾಡಲಾಗುವುದಿಲ್ಲ. ಅಷ್ಟರಮಟ್ಟಿಗೆ, ಮಿಕ್ಸಿಯು ಅಡುಗೆಮನೆಯಲ್ಲಿ ಬಹಳ ಪ್ರಮುಖ ಸ್ಥಾನವನ್ನು ಹೊಂದಿದೆ. ಈ ಮಿಕ್ಸಿ ಅನೇಕ ಕಾರ್ಯಗಳನ್ನು ಬಹಳ ಸುಲಭವಾಗಿ ಪೂರ್ಣಗೊಳಿಸುತ್ತದೆ.  ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಮನೆಯ ಅಡುಗೆಮನೆಯಲ್ಲಿ ಸ್ಥಾನವನ್ನು ಕಂಡುಕೊಂಡಿದೆ. ಪ್ರಾಚೀನ ಕಾಲದಲ್ಲಿ, ಈ ರೀತಿಯ ಯಾವುದೇ ವಿಷಯವಿರಲಿಲ್ಲ. ಏಕೆಂದರೆ ಆ ದಿನಗಳಲ್ಲಿ ಎಲ್ಲಾ ಪದಾರ್ಥಗಳನ್ನು ರುಬ್ಬಲು ಅರೆಯುವ ಕಲ್ಲಿನಲ್ಲಿ ಬಳಸಲಾಗುತ್ತಿತ್ತು. ಕಲ್ಲಿನಲ್ಲಿ ಅರೆದ ಎಲ್ಲಾ ಆಹಾರಗಳು ತುಂಬಾ ರುಚಿಕರವಾಗಿವೆ. ಅಲ್ಲದೆ, ಇದು ಆರೋಗ್ಯಕರವೂ ಹೌದು. ಇದನ್ನು ಅರೆಯಲು ಸ್ವಲ್ಪ ಹೆಚ್ಚು ಸಮಯವಿದೆ. ಆದರೆ ಇಂದಿನ ಪೀಳಿಗೆಯೂ ಮಿಕ್ಸಿ ಬಹುಬೇಗನೆ ಕೆಲಸ  ಮಾಡೋದಕ್ಕೆ ಸಾಧ್ಯವೆಂದು ಕೊಂಡು ಹೆಚ್ಚಿನ ಜನರು ಬಳಸುತ್ತಾರೆ ಎಲ್ಲಾ ದೇಶಗಳಲ್ಲಿ ಮಿಕ್ಸಿಯ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಿಕ್ಸಿ ಅಡುಗೆಮನೆಯ ಪ್ರಮುಖ ಭಾಗವಾಗಿದೆ. ಆದಾಗ್ಯೂ, ಕೆಲವು ಪದಾರ್ಥಗಳನ್ನು ಮಾತ್ರ ಮಿಕ್ಸರ್ ನಲ್ಲಿ ಹಾಕಿ ರುಬ್ಬಬಾರದು ಎಂಬುವುದನ್ನು ಗೃಹಿಣಿಯರು ಎಚ್ಚರವಹಿಸಬೇಕಾಗಿದೆ…

Read More