Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರವು ನಡೆಸುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿ ರೈತರಿಗೆ ಮುಖ್ಯ ಮಾಹಿತಿ, ಶೀಘ್ರವೇ 20ನೇ ಕಂತಿನ ಹಣ ಬಿಡುಗಡೆಯಾಗಲಿದ್ದು, ರೈತರು ತಪ್ಪದೇ ಈ 3 ಕೆಲಸಗಳನ್ನು ಮಾಡುವುದು ಕಡ್ಡಾಯವಾಗಿದೆ. ಈ ಯೋಜನೆಯಡಿ ಹಣವನ್ನು ತಲಾ 2 ಸಾವಿರ ರೂಪಾಯಿಗಳ ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಉದಾಹರಣೆಗೆ, ಈ ಬಾರಿ ಯೋಜನೆಯ 20 ನೇ ಕಂತು ಬಿಡುಗಡೆಯಾಗಲಿದೆ. ನೀವು ಈ ಯೋಜನೆಗೆ ಅರ್ಹರಾಗಿದ್ದರೆ, ನೀವು ಈ ಕಂತಿನ ಪ್ರಯೋಜನವನ್ನು ಪಡೆಯಬಹುದು. ಯೋಜನೆಯಡಿಯಲ್ಲಿ ಅಗತ್ಯ ಕೆಲಸವನ್ನು ಎಚ್ಚರಿಕೆಯಿಂದ ಮಾಡಿ, ಅದರ ಬಗ್ಗೆ ನೀವು ಮತ್ತಷ್ಟು ತಿಳಿದುಕೊಳ್ಳಬಹುದು. ಆದ್ದರಿಂದ ರೈತರು ಮಾಡಬೇಕಾದ ಈ ಕೆಲಸಗಳು ಯಾವುವು ಎಂದು ತಿಳಿಯೋಣ. 20 ನೇ ಕಂತು ಯಾವಾಗ ಬಿಡುಗಡೆ ಮಾಡಬಹುದು? ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ಬಿಡುಗಡೆಯಾಗಲಿರುವ 20 ನೇ ಕಂತು ಜುಲೈ 9 ರ ನಂತರವೇ ಬಿಡುಗಡೆಯಾಗಲಿದೆ ಎಂದು ನಂಬಲಾಗಿದೆ. ಏಕೆಂದರೆ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸದಲ್ಲಿದ್ದಾರೆ ಮತ್ತು ಅವರು…

Read More

ಮಾಗಡಿ: “ಬಮುಲ್ ರೈತರ ಸಂಸ್ಥೆ ಇದನ್ನು ಬೆಳೆಸುವುದು ನಮ್ಮ ಕರ್ತವ್ಯ. ‌ಈ ಕೆಲಸವನ್ನು ನಾನು ಮಾಡುತ್ತೇನೆ. ಇದಕ್ಕೆ ಎಲ್ಲಾ ನಾಯಕರ ಬೆಂಬಲ ಬೇಕು. ಎಲ್ಲರ ಜೊತೆಯೂ ನಾನು ಚರ್ಚೆ ನಡೆಸುತ್ತೇನೆ” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ತಿಳಿಸಿದರು. ಮಾಗಡಿಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸುರೇಶ್ ಅವರು ಭಾನುವಾರ ಮಾತನಾಡಿದರು. “ನನಗೆ ಡೈರಿಯ ಸಂಬಳ, ಡೈರಿಯ ಅನುಕೂಲಗಳು ಬೇಡ. ನಾನು ಇರುವ ತನಕ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ನನ್ನ ಮನವಿ ಎಂದರೆ ನಂದಿನಿ ಉಳಿಸಿ, ಬೆಳೆಸಿ,‌ಉತ್ಪನ್ನಗಳನ್ನು ಬಳಸಿ” ಎಂದರು. “ನಂದಿನಿ ಉತ್ಪನ್ನಗಳ ಬೇಡಿಕೆಗೆ ತಕ್ಕಂತೆ ಪೂರೈಕೆ ಸಾಧ್ಯವಾಗುತ್ತಿಲ್ಲ.‌ ಉದಾಹರಣೆಗೆ ಪನ್ನೀರಿನ ಬೇಡಿಕೆಗೆ ಶೇ 5 ರಷ್ಟು ಮಾತ್ರ ನಾವು ಪೂರೈಕೆ ಮಾಡುತ್ತಿದ್ದೇವೆ. ಇದನ್ನು ಹೆಚ್ಚು ಮಾಡಬೇಕು ಎನ್ನುವುದು ನಮ್ಮ ಉದ್ದೇಶ. ಜನರೇ ನಂದಿನಿ ಉತ್ಪನ್ನಗಳನ್ನು ಹೆಚ್ಚು ಬಳಸುವ ಮೂಲಕ ಮಾರುಕಟ್ಟೆ ಹೆಚ್ಚು ಮಾಡಿಕೊಡಬೇಕು” ಎಂದು ಹೇಳಿದರು. “ಹೊಸಕೋಟೆಯಲ್ಲಿ 22 ಎಕರೆ ಜಮೀನು,…

Read More

ಹಾಸನ: ಜಿಲ್ಲೆಯ ಕತ್ತರಿಘಟ್ಟ ರೈಲ್ವೆ ಟ್ರ್ಯಾಕ್ ಬಳಿಯಲ್ಲಿ ಎರಡು ಚಿರತೆಗಳ ಕಳೇಬರ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕತ್ತರಿಘಟ್ಟ ಗ್ರಾಮದ ಬಳಿಯ ರೈಲ್ವೆ ಹಳಿಯ ಮೇಲೆ ಎರಡು ಚಿರತೆಗಳ ಕಳೇಬರ ಪತ್ತೆಯಾಗಿದೆ. ಒಂದೂವರೆ ವರ್ಷದ ಗಂಡು, 3-4 ವರ್ಷದ ಹೆಣ್ಣು ಚಿರತೆ ಕಳೇಬರ ಇದಾಗಿದೆ. ರೈಲು ಡಿಕ್ಕಿಯಾಗಿ ಗಂಡು ಹಾಗೂ ಹೆಣ್ಣು ಚಿರತೆ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಡಿಸಿಎಫ್ ಸೌರಭ್ ಕುಮಾರ್ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಚಿರತೆ ಸಾವಿಗೆ ಕಾರಣ ತಿಳಿಯಲು ಎಲ್ಲಾ ಪರೀಕ್ಷೆಯನ್ನು ವನ್ಯಜೀವಿ ವೈದ್ಯರು ನಡೆಸುತ್ತಿದ್ದಾರೆ. https://kannadanewsnow.com/kannada/business-jet-crash-at-london-airport/ https://kannadanewsnow.com/kannada/mla-gopalakrishna-belurs-letter-to-yediyurappa-for-sigandur-bridge-goes-viral/

Read More

ಲಂಡನ್: ಎಸೆಕ್ಸ್‌ನ ಸೌತೆಂಡ್ ವಿಮಾನ ನಿಲ್ದಾಣದಲ್ಲಿ ಬಿಸಿನೆಸ್ ಚೆಟ್ ವಿಮಾನವೊಂದು ಪತನಗೊಂಡಿದೆ. ಈ ವಿಮಾನ ಅಪಘಾತದ ನಂತ್ರ ಎಷ್ಟು ಜನರು ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇಂದು ಮಧ್ಯಾಹ್ನ 4 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆಯಿಂದ “ದೊಡ್ಡ ಬೆಂಕಿಯ ಉಂಡೆ” ಮತ್ತು ಕಪ್ಪು ಹೊಗೆ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ವಿಮಾನದಲ್ಲಿ ಎಷ್ಟು ಜನರಿದ್ದರು ಎಂಬುದು ಸ್ಪಷ್ಟವಾಗಿಲ್ಲ. ವರದಿಗಳ ಪ್ರಕಾರ, ವಿಮಾನವು ಟೇಕ್ ಆಫ್ ಆಗುವಾಗ ಅಪಘಾತಕ್ಕೀಡಾಗಿದ್ದು, ಸಣ್ಣ ಜೆಟ್ ವಿಮಾನವು ನೆದರ್‌ಲ್ಯಾಂಡ್ಸ್‌ಗೆ ಪ್ರಯಾಣಿಸುತ್ತಿತ್ತು ಎಂದು ನಂಬಲಾಗಿದೆ. https://kannadanewsnow.com/kannada/good-news-for-milk-producers-in-the-state-d-k-suresh-announces-loan-facility-up-to-2-lakhs-for-purchasing-2-cows/ https://kannadanewsnow.com/kannada/mla-gopalakrishna-belurs-letter-to-yediyurappa-for-sigandur-bridge-goes-viral/

Read More

ರಾತ್ರಿ ಮಲಗಿರುವಾಗ ದುಃಸ್ವಪ್ನಗಳು ಬರುವುದು ಸಾಮಾನ್ಯ. ಕೆಲವೊಮ್ಮೆ ಯಾರೋ ನಿಮ್ಮ ಎದೆಯ ಮೇಲೆ ಕುಳಿತಂತೆ ಭಾಸವಾಗುತ್ತದೆ. ಈ ರೀತಿಯ ಅನುಭವ ಅನೇಕ ಮಂದಿಗೆ ಸಹಜವಾಗಿ ಆಗಿರುತ್ತದೆ. ಇನ್ನು ನಿದ್ರೆಯ ಸಮಯದಲ್ಲಿ ದೆವ್ವ ನನ್ನ ಎದೆಯ ಮೇಲೆ ಕುಳಿತಿತ್ತು ಮತ್ತು ನನ್ನ ಬಾಯಿಂದ ಯಾವುದೇ ಮಾತುಗಳು ಬರುತ್ತಿರಲಿಲ್ಲ ಹಾಗೂ ಅಲುಗಾಡಲು ಸಹ ಆಗುತ್ತಿರಲಿಲ್ಲ ಎಂದು ಕೆಲವರು ಹೇಳಿರುವುದನ್ನು ನೀವು ಕೇಳಿರುತ್ತೀರಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ…

Read More

ಶಿವಮೊಗ್ಗ: ನಾಳೆ ಶಿವಮೊಗ್ಗ ಜಿಲ್ಲೆಯ ಸಾಗರ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆಯಾಗುತ್ತಿರುವುದು ಹಿನ್ನೀರಿನ ಜನರ ತ್ಯಾಗದ ಪ್ರತೀಕವಾಗಿ ಲೋಕಾರ್ಪಣೆಯಾಗುತ್ತಿದೆ. ಇದು ನನಗೆ ಸಂತಸ ತಂದಿದೆ ಎಂಬುದಾಗಿ ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಂಬಾರಗೋಡ್ಲು- ಕಳಸವಳ್ಳಿ ಸೇತುವೆಗಾಗಿ ಹೋರಾಟ ಮಾಡಿದವರನ್ನು ಹತ್ತಿಕ್ಕುವ ಕೆಲಸ ನಡೆದಿದೆ. ಮುಂಬರುವಂತ ದಿನಗಳಲ್ಲಿ ಅವರ ಸೇವೆಸ್ಮರಿಸಿ ಗೌರವಿಸುವ  ಚಿಂತನೆ ಮಾಡಲಾಗುವುದು. ಸೇತುವೆ ನಿರ್ಮಾಣಕ್ಕೆ ಎಲ್ಲ ಹಂತದಲ್ಲೂ ಪ್ರಯತ್ನ ನಡೆದಿದ್ದು ಅಂತಿಮವಾಗಿ ಹಿನ್ನೀರ ಜನರ ಸೇವೆಗೆ ಸೋಮವಾರದಿಂದ ಸೇತುವೆ ಲಭ್ಯವಾಗಲಿದೆ ಎಂದರು. ನಾಳೆ ಅಂಬಾರಗೋಡ್ಲು- ಕಳಸವಳ್ಳಿ ಸೇತುವೆ ಲೋಕಾರ್ಪಣೆಗೆಗಾಗಿ ಆಗಮಿಸುತ್ತಿರುವ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸರ್ಕಾರದ ನಮ್ಮ ಸಚಿವರಾದ ಸತೀಶ್ ಜಾರಕಿಹೊಳಿ, ಮಧು ಬಂಗಾರಪ್ಪ ಅವರನ್ನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು. ಅರಗ ಜ್ಞಾನೇಂದ್ರ ಕೇಂದ್ರ ಸರ್ಕಾರದಿಂದ ಸೇತುವೆ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.…

Read More

ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಪುರಾಣ ಪ್ರಸಿದ್ಧ ಶ್ರೀ ಮುತ್ತತ್ತಿ ಮುತ್ತುರಾಯಸ್ವಾಮಿ ದೇವಾಲಯದ ಬಳಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಬೆಳಕವಾಡಿ ಪೋಲೀಸರು ದಾಳಿ ಮಾಡಿ 24 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಶನಿವಾರ ರಾತ್ರಿ ಮುತ್ತತ್ತಿಯಲ್ಲಿ ಹಲವಾರು ಮಂದಿ ಲಕ್ಷಾಂತರ ರೂಪಾಯಿಯೊಂದಿಗೆ ಜೂಜಾಟದಲ್ಲಿ ತೊಡಗಿದ್ದಾರೆ. ಎಂದು ಖಚಿತ ಮಾಹಿತಿ ಮೇರೆಗೆ ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ ಹಾಗೂ ಹಲಗೂರು ವೃತ್ತ ನಿರೀಕ್ಷಕ ಬಿ.ಎಸ್. ಶ್ರೀಧರ್ ರವರ ಸೂಚನೆ ಮೇರೆಗೆ ದಾಳಿ ನಡೆಸಿದ ಬೆಳಕವಾಡಿ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಿ.ವಿ.ಪ್ರಕಾಶ್ ಹಾಗೂ ಸಿಬ್ಬಂದಿಗಳು ಭಾನುವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ದಾಳಿ ಮಾಡಿ ಸುಮಾರು 4 ಲಕ್ಷದ 38 ಸಾವಿರದ 770 ರೂ ನಗದು ಹಾಗೂ 13 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಹಲಗೂರು ಪೋಲೀಸ್ ಠಾಣೆಯಲ್ಲಿ 24 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/english-teacher-minister-dr-sharanprakash-patil-video-goes-viral/ https://kannadanewsnow.com/kannada/mla-gopalakrishna-belurs-letter-to-yediyurappa-for-sigandur-bridge-goes-viral/

Read More

ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿಯ ನೂತನ ಶರಾವತಿ ಹಿನ್ನೀರಿನ ಸೇತುವೆಯನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಸೇತುವೆ, ಕಾರ್ಯಕ್ರಮದ ವೇದಿಕೆಯಾದಂತ ನೆಹರು ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಕುರಿತಂತೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಮಾಹಿತಿ ನೀಡಿದ್ದು, ನಾಳೆ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಸಾಗರದಾಧ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು. ನಾಳೆ ಇಬ್ಬರು ಎಎಸ್ಪಿ, 6 ಡಿವೈಎಸ್ಪಿ, 22 ಸಿಪಿಐ ಹಾಗೂ ಇನ್ಸ್ ಪೆಕ್ಟರ್, 35 ಪಿಎಸ್ಐ, 60 ಎಎಸ್ಐ, 276 ಹೆಚ್ ಸಿ ಪಿಸಿ, 300 ಹೋಂ ಗಾರ್ಡ್ ಸೇರಿದಂತೆ 699 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಇದಲ್ಲದೇ 3 ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ. ಈ ಮೂಲಕ ನಾಳೆಯ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿರುವುದಾಗಿ ಹೇಳಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು…

Read More

ಬೆಂಗಳೂರು/ಶಿವಮೊಗ್ಗ: ನಾಳೆ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆಯಾದಂತ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಉದ್ಘಾಟನೆಯಾಗುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ನಾಳೆ ಲೋಕಾರ್ಪಣೆ ಮಾಡಲಿದ್ದಾರೆ. ಇಂತಹ ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹಾಜರಾದರೇ, ಸಾಗರದಲ್ಲಿ ನಡೆಯುವಂತ ವೇದಿಕೆ ಕಾರ್ಯಕ್ರಮದಿಂದ ದೂರವೇ ಉಳಿಯಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನಾಳೆಯ ಕಾರ್ಯಕ್ರಮದ ಅಧಿಕೃತ ಪಟ್ಟಿ ನಿಮ್ಮ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದೆ. ಅದರಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪ್ರವಾಸ ಕಾರ್ಯಕ್ರಮ ಪಟ್ಟಿಯಂತೆ ನಾಳೆ ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಭೇಟಿಯನ್ನು ಮಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಶರಾವತಿ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಿಸಿರುವ ಸೇತುವೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿ ಎಂದಿದೆ. ಮಧ್ಯಾಹ್ನ 1.30ರಿಂದ 2.15ರವರೆಗಿನ ಕಾರ್ಯಕ್ರಮಗಳನ್ನು ಕಾಯ್ದಿರಿಸಲಾಗಿದೆ ಎಂಬುದಾಗಿ ತಿಳಿಸಲಾಗಿದೆ. ಇನ್ನೂ ಸಾಗರ ಶಾಸಕ…

Read More

ಬೆಂಗಳೂರು: ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಈಗಾಗಲೇ ಪ್ರಾಣಿಗಳನ್ನು ಸಾಗಿಸಲು ಅವಕಾಶ ನೀಡಲಾಗಿದೆ. ಈಗ ಪ್ರಾಣಿಗಳಲ್ಲದೇ ಫ್ರಿಡ್ಜ್, ವಾಷಿಂಗ್ ಮೆಷಿನ್ ಸೇರಿದಂತೆ ಇತರೆ ವಸ್ತುಗಳನ್ನು ಸಾಗಿಸಲು ಅವಕಾಶ ನೀಡಲಾಗಿದೆ. ಈ ಮೂಲಕ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ವ್ಯಕ್ತಿಯೊಬ್ಬರು ಕೇಳಿದಂತ ಮಾಹಿತಿ ಹಕ್ಕು ಅಧಿನಿಯಮ 2005ರ ಅರ್ಜಿಗೆ ಮಾಹಿತಿ ನೀಡಿದ್ದಾರೆ. ಅದರಲ್ಲಿ ವಾಷಿಂಗ್ ಮೆಷಿನ್, ಫ್ರಿಡ್ಜ್, ಟ್ರಕ್ ಟಯರ್, ಅನ್ಯೂಮಿನಿಯಂ ಪೈಪ್, ಪಾತ್ರೆ, ಕಬ್ಬಿಣದ ಪೈಪ್, ಬೆಕ್ಕು, ನಾಯಿ, ಮೊಲವನ್ನು ಸಾಗಿಸಬಹುದಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಎಷ್ಟು ದರ ನಿಗದಿ? ಟ್ರಕ್ ಟೈರ್ ಮೂರು ಯೂನಿಟ್ ಗಳೆಂದು ಪರಿಗಣಿಸಲಾಗುತ್ತದೆ. 60 ಕೆಜಿ ವರೆಗಿನವುಗಳು ಕೊಂಡೊಯ್ಯಬಹುದು. ರೆಫ್ರಿಜರೇಟರ್, ಬೈಸಿಕಲ್, ವಾಶಿಂಗ್ ಮೆಷಿನ್, ವೀಣೆ, ಕಾರ್ ಟೈರ್ ಗಳನ್ನು 2 ಯೂನಿಟ್ ಎಂಬುದಾಗಿ ಪರಿಗಣಿಸಲಾಗುತ್ತದೆ. ಟೇಬಲ್ ಫ್ಯಾನ್, ಹಾರ್ಮೋನಿಯಂ, ಟಿವಿ, ಕಂಪ್ಯೂಟರ್ ಮಾನಿಟರ್, ಸಿಪಿಯು, ಬ್ಯಾಟರಿ, 25 ಲೀಟರ್ ಖಾಲಿ ಕಂಟೈನರ್ ಗಳನ್ನು…

Read More