Author: kannadanewsnow09

ದಾವಣಗೆರೆ : ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ಹಾಗೂ ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವುದು ಸರ್ಕಾರದ ನೀತಿಯಾಗಿದ್ದು, ಇದಕ್ಕೆ ಬದ್ದವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷ ವಿದ್ಯುತ್ ಕೊರತೆ ಇಲ್ಲ. ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವು ಪ್ರದೇಗಳಲ್ಲಿ ನಿರ್ವಹಣಾ ಕಾರ್ಯಗಳಿಗಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆಯೇ ಹೊರತು ಲೋಡ್ ಶೆಡ್ಡಿಂಗ್ ಇಲ್ಲ. ಸರ್ಕಾರದ ಬದ್ದತೆಯಂತೆ ಸಮರ್ಪಕ ವಿದ್ಯುತ್ ಪೂರೈಕೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು. ರಾಜ್ಯದಲ್ಲಿ ಪ್ರತಿನಿತ್ಯ 18,500 ಮೆಗಾವ್ಯಾಟ್ ಬೇಡಿಕೆ ಇದ್ದು, ಬೇಸಿಗೆ ಆರಂಭವಾಗಿರುವುದರಿಂದ ಸರಾಸರಿಗಿಂತ ಶೇ. 10 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಮತ್ತು ಉತ್ತರ ಪ್ರದೇಶಗಳಿಂದ ವಿನಿಮಯ…

Read More

ಬೆಂಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ತೊಡೆತಟ್ಟಿ ಹೇಳಿಕೆ ನೀಡಿದ್ದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕಮಾಂಟ್ ಶೋಕಾಸ್ ನೋಟಿಸ್ ನೀಡಿ ಶಾಕ್ ನೀಡಿತ್ತು. ಈ ನೋಟಿಸ್ ಗೆ 9 ಪುಟಗಳ ಉತ್ತರವನ್ನು ನೀಡಿರುವಂತ ಶಾಸಕ ಯತ್ನಾಳ್, ಅದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧವೇ ದೂರು ನೀಡಿದ್ದಾರೆ. ಬಿಜೆಪಿ ಹೈಕಮಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಪಕ್ಷ ವಿರೋಧಿ ಹೇಳಿಕೆಯಿಂದಾಗಿ ಶೋಕಾಸ್ ನೋಟಿಸ್ ನೀಡಲಾಗಿತ್ತು. ಕೆಲ ದಿನಗಳ ಹಿಂದೆ ನೀಡಿದ್ದಂತ ನೋಟಿಸ್ ಗೆ 72 ಗಂಟೆಗಳ ಒಳಗಾಗಿ ಉತ್ತಿರಿಸುವಂತೆ ಸೂಚಿಸಲಾಗಿತ್ತು. ಈ ಮೊದಲು ನೀಡಿದ್ದಂತ ನೋಟಿಸ್ ಗೆ ನೀಡಿದ್ದಂತ ಉತ್ತರಕ್ಕೆ ಬಿಜೆಪಿ ಹೈಕಮಾಂಡ್ ತೃಪ್ತಿಯಾಗಿಲ್ಲ ಎನ್ನಲಾಗಿತ್ತು. ಇನ್ನೂ ಬಿಜೆಪಿ ಹೈಕಮಾಂಡ್ ನೀಡಿದ್ದಂತ 2ನೇ ನೋಟಿಸ್ ಗೆ ಶಾಸಕ ಯತ್ನಾಳ್ ಬರೋಬ್ಬರಿ 9 ಪುಟಗಳ ಪ್ರತ್ಯುತ್ತರ ನೀಡಿದ್ದಾರೆ ಎನ್ನಲಾಗಿದೆ. ಈ ಉತ್ತರವು ಈ ಹಿಂದೆ ನೀಡಿದ್ದಂತ ಉತ್ತರವನ್ನೇ ಕಾಪಿ ಪೇಸ್ಟ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಗಿರುವಂತ ನಟ ದರ್ಶನ್ ಗೆ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಫೆಬ್ರವರಿ 20ರವರೆಗೆ ಮೈಸೂರಿನಲ್ಲಿ ಇರಲು ಅನುಮತಿ ನೀಡಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿ ಜಾಮೀನು ಪಡೆದು ನಟ ದರ್ಶನ್ ಬಿಡುಗಡೆಯಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿರುವಂತ ಅವರು ವೈದ್ಯರನ್ನು ಭೇಟಿಯಾಗುವ ಸಂಬಂಧ ಮೈಸೂರಿಗೆ ತೆರಳಬೇಕಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಾಲಯವು ಫೆಬ್ರವರಿ 20ರವರೆಗೆ ಮೈಸೂರಿಗೆ ತೆರಳಲು, ವೈದ್ಯರನ್ನು ಭೇಟಿಯಾಗಲು ಅನುಮತಿ ನೀಡಿದೆ. ಈ ಮೂಲಕ ನಟ ದರ್ಶನ್ ಗೆ ತಾತ್ಕಾಲಿಕ ರಿಲೀಫ್ ನೀಡಿದೆ. https://kannadanewsnow.com/kannada/good-news-for-the-people-of-the-state-puneeth-rajkumar-hridaya-jyothi-yojana-extended-to-all-taluks-2/ https://kannadanewsnow.com/kannada/breaking-good-news-for-state-government-employees-casual-leave-granted-on-feb-20/

Read More

ಬೆಳಗಾವಿ: ಇಲ್ಲಿನ ದರ್ಗಾ ಬಳಿಯೇ ಜಿಲೆಟಿನ್ ಕಟ್ಟಿಗಳು ಸ್ಪೋಟಗೊಂಡ ಪರಿಣಾಮ ಜನರು ಬೆಚ್ಚಿ ಬಿದ್ದಿರುವಂತ ಘಟನೆ ನಡೆದಿದೆ. ಕಲ್ಲು ಗಣಿಗಾರಿಕೆಯ ಕ್ರಷರ್ ನಲ್ಲಿದ್ದಂತ ಜಿಲೆಟಿನ್ ಕಟ್ಟಿ ಸ್ಪೋಟದಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಬಳಿಯಲ್ಲಿ ದರ್ಗಾ ಬಳಿಯಲ್ಲೇ ಜಿಲೆಟಿನ್ ಕಟ್ಟಿಗಳು ಸ್ಪೋಟಗೊಂಡಿದ್ದಾವೆ. ಉದಯ್ ಶಿವಕುಮಾರ್ ಎಂಬುವರು ದರ್ಗಾ ಬಳಿಯೇ ಕ್ರಷರ್ ನಡೆಸುತ್ತಿದ್ದರು ಎನ್ನಲಾಗಿದೆ. ಕ್ರಷರ್ ನಡೆಸುತ್ತಿದ್ದಂತ ಗುಡ್ಡಕ್ಕೆ ಸ್ಥಳೀಯರು ಬೆಂಕಿ ಹಚ್ಚಿದ್ದಾರೆ. ಈ ಬೆಂಕಿಯ ಕಿಡಿ ಕ್ರಷರ್ ನಲ್ಲಿದ್ದಂತ ಶೆಡ್ಡಿಗೆ ತಾಗಿದೆ. ಇದರಿಂದಾಗಿ ಶೆಡ್ಡಿನಲ್ಲಿದ್ದಂತ ಜಿಲೆಟಿನ್ ಕಟ್ಟಿಗಳು ಸ್ಪೋಟಗೊಂಡಿವೆ ಎನ್ನಲಾಗಿದೆ. ಜಿಲೆಟಿನ್ ಕಟ್ಟಿಗಳು ಸ್ಪೋಟಗೊಂಡ ಹಿನ್ನಲೆಯಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ನಡುಕ ಕೂಡ ಆಗಿದೆ. ಹೀಗಾಗಿ ಅಕ್ಕಪಕ್ಕದ ಜನರು ಬೆಚ್ಚಿ ಬಿದ್ದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. https://kannadanewsnow.com/kannada/social-exclusion-still-alive-in-the-state-village-administration-to-remove-meenamesh/ https://kannadanewsnow.com/kannada/good-news-for-the-people-of-the-state-puneeth-rajkumar-hridaya-jyothi-yojana-extended-to-all-taluks-2/

Read More

ಮಂಡ್ಯ : ಸದಸ್ಯರಲ್ಲದವರಿಗೆ ಪ್ರವೇಶ ನೀಡಿ ಅಕ್ರಮವಾಗಿ ಜೂಜಾಟ ಆಡಿಸುತ್ತಿದ್ದ ಮದ್ದೂರು ಪೋಲೀಸ್ ಠಾಣಾ ವ್ಯಾಪ್ತಿಯ ಕ್ಲಬ್‌ ಮೇಲೆ ಮಳವಳ್ಳಿ ಗ್ರಾಮಾಂತರ ಪೊಲೀಸರು ದಾಳಿ ಮಾಡಿದ್ದು, 71 ಮಂದಿಯನ್ನು ವಶಕ್ಕೆ ಪಡೆದು 99.970 ರೂಪಾಯಿ ಹಣವನ್ನು ಜಪ್ತಿ ಮಾಡಿದ್ದಾರೆ. ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಶ್ರೀ ವರದರಾಜ ರೀ ಕ್ರಿಯೇಷನ್ ಕ್ಲಬ್‌ ( ಕುಳ್ಳರಾಜ ಕ್ಲಬ್ ) ಮೇಲೆ ಭಾನುವಾರ ದಾಳಿ ಮಾಡಿರುವ ಮಳವಳ್ಳಿ ಗ್ರಾಮಾಂತರ ವೃತ್ತ ನಿರೀಕ್ಷಕ ಪಿ.ಜಿ.ಮಹೇಶ್ ಹಾಗೂ ಸಿಬ್ಬಂದಿಗಳು ರಾಮನಗರ, ತುಮಕೂರು ಹಾಗೂ ಮಂಡ್ಯ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿ ಕ್ಲಬ್ ಸದಸ್ಯರಲ್ಲದವರು ಜೂಜಾಟದಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಅವರಿಂದ 99 ಸಾವಿರದ 970 ರೂಪಾಯಿ ಹಣವನ್ನು ಜಪ್ತಿ ಮಾಡಲಾಗಿದೆ. ಜೂಜಾಟದಲ್ಲಿ ತೊಡಗಿದ್ದ 71 ಮಂದಿಯನ್ನು ವಶಕ್ಕೆ ಪಡೆದು, ಅವರಿಂದ 99.970 ರೂಪಾಯಿ ಹಣವನ್ನು ಜಪ್ತಿ ಮಾಡಲಾಗಿದೆ. ಬಹುತೇಕರು, ಕ್ಲಬ್‌ ಸದಸ್ಯರಲ್ಲ. ಅಕ್ರಮವಾಗಿ ಕ್ಲಬ್‌ಗೆ ಬಂದು ಜೂಜಾಟದಲ್ಲಿ ತೊಡಗಿದ್ದರು. ಕ್ಲಬ್‌ ಆಡಳಿತ ಮಂಡಳಿ…

Read More

ಬೆಂಗಳೂರು : ಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ನೀಡಲು ಬಿ ಖಾತಾ ಅಭಿಯಾನ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಯೋಜನಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಬಿ ಖಾತಾ ಅಭಿಯಾನಕ್ಕೆ ಸೂಚನೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು. ಅರಣ್ಯ ಸಚಿವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯ ವರದಿಯಾಧರಿಸಿ ಕಾನೂನು ರೂಪಿಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಬರುವ ಅನಧಿಕೃತ, ರೆವಿನ್ಯೂ ಬಡಾವಣೆಗಳು ಹಾಗೂ ಆಸ್ತಿಗಳಿಗೆ ನಾಗರೀಕ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಸರ್ಕಾರದಕ್ಕೆ ತೆರಿಗೆ ಸಂದಾಯವಾಗಬೇಕು. ಈ ದಿಸೆಯಲ್ಲಿ ಅನಧಿಕೃತ, ರೆವಿನ್ಯೂ ಬಡಾವಣೆಗಳಲ್ಲಿ ಮೂರು ತಿಂಗಳಲ್ಲಿ ಬಿ ಖಾತಾ ಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದರು. ಪಕ್ಷದ ಹೈಕಮಾಂಡ್ ನ ತೀರ್ಮಾನವೇ ಅಂತಿಮ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಕೆ.ಎನ್.ರಾಜಣ್ಣರವರ ನಡುವೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವ ಬಗ್ಗೆ…

Read More

ಶಿವಮೊಗ್ಗ: ರಾಜ್ಯದಲ್ಲಿ ಸಾಮಾಜಿಕ ಬಹಿಷ್ಕಾರ ಪದ್ದತಿ ಇನ್ನೂ ಜೀವಂತವಾಗಿದೆ. ಮೂರು ವರ್ಷಗಳಿಂದ ಒಂದು ಇಡೀ ಕುಟುಂಬಕ್ಕೆ ಗ್ರಾಮದ ಜನರು ಬಹಿಷ್ಕಾರ ಹಾಕಿರುವುದರಿಂದ ನೊಂದು ಹೋಗಿರುವಂತ ಘಟನೆ ಸಾಗರ ತಾಲ್ಲೂಕಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಮುಳಕೆರೆ ಗ್ರಾಮದಲ್ಲೇ ಇಂತದ್ದೊಂದು ಸಾಮಾಜಿಕ ಬಹಿಷ್ಕಾರ ಪದ್ದತಿ ಜೀವಂತವಾಗಿರೋದಾಗಿದೆ. ರಮೇಶ್ ಬಿನ್ ಬಂಗಾರಪ್ಪ ಎಂಬಂತ ಕುಟುಂಬವನ್ನು ಮುಳುಕೆರೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರವನ್ನು ಹಾಕಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ. ಈ ಸಂಬಂಧ ರಮೇಶ್ ಅವರು ಸಾಗರ ತಹಶೀಲ್ದಾರರಿಗೆ ಈ ಅಮಾನುಷ ಬಹಿಷ್ಕಾರದ ಪದ್ದತಿಯನ್ನು ನಿವಾರಿಸುವಂತೆ ಮನವಿ ಮಾಡಿದ್ದಾರೆ. ತಹಶೀಲ್ದಾರ್ ಇಓಗೆ, ಇಓ ಅವರು ಆನಂದಪುರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅವರಿಗೆ ಪತ್ರವನ್ನು ವರ್ಗಾಯಿಸಿ ಕೈತೊಳೆದು ಕೊಂಡಿದ್ದಾರೆ. ಪೊಲೀಸರು ಶಾಂತಿ ಸಭೆ ನಡೆಸುವಂತೆ ಬರೂರು ಪಿಡಿಓಗೆ ಸೂಚಿಸಿದ್ದಾರೆ. ರಮೇಶ್ ಅವರ ಇಡೀ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರೋದನ್ನು ನಿವಾರಣೆ ಸಂಬಂಧ ಬರೂರು ಗ್ರಾಮ ಪಂಚಾಯ್ತಿಯ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ದಿನಾಂಕ 22-01-2025ರಂದು ಶಾಂತಿ ಸಭೆ…

Read More

ಗದಗ : ದೇಶದ ಪರಿಸ್ಥಿತಿ ಈ ಪ್ರಧಾನಿ ಹುದ್ದೆಯಲ್ಲಿರೋ ಮೋದಿಯವರಿಂದ ದಿವಾಳಿ ಎದ್ದು‌ ಹೋಗಿದ್ದು, ನಿತೀನ್ ಗಡ್ಕರಿಯಂತಹ ಸೂಕ್ತರೂ ಪ್ರಧಾನಿ ಹುದ್ದೆಗೆ ಇದ್ದಾರೆ ದೇಶದ ಹಿತದೃಷ್ಟಿಯಿಂದ ಬೇರೆಯವರಿಗೆ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಡುವಂತೆ ಬಿಜೆಪಿ‌ ಕಾರ್ಯಕರ್ತರಾದಿಯಾಗಿ ಮುಖಂಡರು ಧ್ವನಿಯೆತ್ತಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮನವಿ ಮಾಡಿದರು. ಗದಗ ಜಿಲ್ಲಾಧಿಕಾರಿಗಳ ಸಮ್ಮೇಳನ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬಳಿಕ‌ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಇಲ್ಲಿವರೆಗೆ ಸುಮಾರು 20ಕ್ಕೂ ಹೆಚ್ಚಿನ‌‌ ಜಿಲ್ಲೆಗಳಿಗೆ ತಾವು ಪ್ರವಾಸ ಮಾಡಿದ್ದು, ಕಾರ್ಮಿಕ‌ ಇಲಾಖೆಯ ಅಭಿವೃದ್ಧಿ ಬಗ್ಗೆ ಚರ್ಚಿಸಲು‌ ಪ್ರಗತಿಪರಿಶೀಲನಾ ಸಭೆ ನಡೆಸಿದ್ದೇನೆ. ಅದರಂತೆ ಗದಗಿಗೂ ಬಂದು‌ ಸಭೆ ನಡೆಸಲಾಗಿದೆ. ರಾಜ್ಯದ ದೇಶದ ಸಮಸ್ಯೆಗಳ ವಿಷಯಗಳಿಗೆ ಹೆಚ್ಚು ಆದ್ಯತೆ ಕೊಡಬೇಕೇ‌ ವಿನಃ ಸಚಿವ ಸಂಪುಟ‌ ಸರ್ಜರಿ‌ ಅದು-ಇದು ಎನ್ನುವ ವಿಷಯಕ್ಕೆ ಮಹತ್ವ ನೀಡಬಾರದು.ಜನರ ಸಮಸ್ಯೆಗಳಿಗಿಂತ‌‌ ಅಭಿವೃದ್ಧಿಗಿಂತ ಸಚಿವ ಸಂಪುಟದ ವಿಷಯವೇನಷ್ಟೂ ಮಹತ್ವದ್ದಲ್ಲ.ಮಹತ್ವದ ಜನರ ವಿಚಾರಗಳಿಗೆ ಗಮನ‌ ನೀಡಬೇಕು ಎಂದರು. ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಜಣ್ಣ ವಿಚಾರ…

Read More

ವಿಜಯಪುರ: ಜಿಲ್ಲೆಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದಂತ 10 ಕಂಟ್ರಿ ಪಿಸ್ತೂಲ್, 24 ಸಜೀವ ಗುಂಡುಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ಈ ಸಂಬಂಧ 10 ಆರೋಪಿಗಳನ್ನು ಬಂಧಿಸಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ತಮ್ಮ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದಂತ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದಂತ ಆರೋಪಿ ನೀಡಿದಂತ ಮಾಹಿತಿ ಆಧರಿಸಿ ಮತ್ತಷ್ಟು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಅಕ್ರಮವಾಗಿ ಅಕ್ರಮವಾಗಿ ಸಂಗ್ರಹಿಸಿದ್ದಂತ 10 ಕಂಟ್ರಿ ಪಿಸ್ತೂಲ್, 24 ಸಜೀವ ಗುಂಡುಗಳನ್ನು ಸೀಜ್ ಮಾಡಿದ್ದಾರೆ. ಜೊತೆಗೆ ಅಶೋಕ್, ಪ್ರಕಾಶ್, ಸುಜಿತ್ ರಾಠೋಡ್, ಸಾಗರ್ ರಾಥೋಡ್, ಜನಾರ್ಧನ್ ಪವಾರ್, ಪ್ರಕಾಶ್ ಭೀಮಸಿಂಗ್, ಸಂತೋಷ್ ಕಿಶನ್ ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. https://kannadanewsnow.com/kannada/breaking-bengaluru-6-injured-in-massive-fire-due-to-cooking-gas-leak/ https://kannadanewsnow.com/kannada/breaking-good-news-for-state-government-employees-casual-leave-granted-on-feb-20/ https://kannadanewsnow.com/kannada/good-news-for-the-people-of-the-state-puneeth-rajkumar-hridaya-jyothi-yojana-extended-to-all-taluks-2/

Read More

ಮಂಗಳೂರು: ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಿಢೀರ್ ದಾಳಿ ಮಾಡಿದ ಪರಿಣಾಮ, 10ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಇವರಲ್ಲಿ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯವಾಗಿರುವಂತ ಘಟನೆ ನಡೆದಿದೆ. ಮಂಗಳೂರಿನ ಬೆಳ್ತಂಗಡಿ ತಾಲ್ಲೂಕಿನ ಕಕ್ಕಿಂಜೆ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಪ್ರಾರ್ಥನೆ ಮುಗಿಸಿ ಶಾಲೆ ಒಳಗೆ ಹೋಗುವಾಗ ಹೆಜ್ಜೇನು ದಾಳಿ ನಡೆಸಿವೆ. ಈ ದಾಳಿಯಲ್ಲಿ 15 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇವರಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿರೋದಾಗಿ ತಿಳಇದು ಬಂದಿದೆ. ಹೆಜ್ಜೇನು ದಾಳಿಗೆ ಒಳಗಾದಂತ ವಿದ್ಯಾರ್ಥಿಗಳನ್ನು ಕಕ್ಕಿಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ರಜೆಯನ್ನು ಇಂದು ಘೋಷಣೆ ಮಾಡಲಾಗಿದೆ. https://kannadanewsnow.com/kannada/dks-urges-centre-to-grant-pending-clearances-grants-for-irrigation-projects-in-karnataka/ https://kannadanewsnow.com/kannada/breaking-bengaluru-6-injured-in-massive-fire-due-to-cooking-gas-leak/

Read More