Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಬೇಸಿಗೆಗೆ ಮುನ್ನವೇ ಬೆಂಗಳೂರಲ್ಲಿ ನೀರಿನ ಅಭಾವ ತಪ್ಪಿಸೋ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿರುವಂತ ಆರ್ ಓ ಕೇಂದ್ರಗಳ ನಿರ್ವಹಣೆಯನ್ನು ಬಿಬಿಎಂಯಿಂದ ಬೆಂಗಳೂರು ಜಲಮಂಡಳಿಗೆ ಹಸ್ತಾಂತರಿಸುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿದ್ದಾರೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿಬೆಂಗಳೂರು ನಗರದ ನಾಗರೀಕರಿಗೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವ ಜವಾಬ್ದಾರಿಯನ್ನು ಬೆಂಗಳೂರು ಜಲಮಂಡಳಿಯು ನಿರ್ವಹಿಸುತ್ತಿದೆ. ಪ್ರಸ್ತುತ ಶುದ್ದ ಕುಡಿಯುವ ನೀರಿನ ಘಟಕ (ಆರ್.ಓ. ಪ್ಲಾಂಟ್ಗಳ) ನಿರ್ವಹಣೆಯನ್ನು ಬಿ.ಬಿ.ಎಂ.ಪಿಯು ನಿರ್ವಹಿಸುತ್ತಿದ್ದು, ಒಂದು ವೇಳೆ ಕೊಳವೆಬಾವಿಗಳು ಬತ್ತು ಹೋದಲ್ಲಿ ಆರ್.ಓ ಘಟಕಕ್ಕೆ ಬೇಕಾಗುವ ನೀರನ್ನು ಬೆಂಗಳೂರು ಜಲಮಂಡಳಿಯ ಮುಖಾಂತರವೇ ಪೂರೈಸಬೇಕಾಗುತ್ತದೆ. ಈ ಸಮಯದಲ್ಲಿ ಸಮನ್ವಯದ ಕೊರತೆ ಉಂಟಾಗಿ ನಾಗರೀಕರಿಗೆ ತೊಂದರೆ ಆಗುವುದನ್ನು ತಪ್ಪಿಸುವ ದೃಷ್ಟಿಯಿಂದ ಹಾಗೂ ಬೆಂಗಳೂರು ನಗರದ ನೀರು ಸರಬರಾಜಿನ ನಿರ್ವಹಣೆಯನ್ನು ಮಾಡುತ್ತಿರುವ ಬೆಂಗಳೂರು ಜಲಮಂಡಳಿಯವರೇ ಆರ್.ಓ. ಪ್ಲಾಂಟ್ಗಳ ನಿರ್ವಹಣೆಯನ್ನು ಮಾಡುವುದು ಸೂಕ್ತವಾಗಿರುತ್ತದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ, ಕೂಡಲೇ ಆರ್.ಓ ಪ್ಲಾಂಟ್ಗಳ…
ಶಿವಮೊಗ್ಗ: ಸಾಗರ ತಾಲ್ಲೂಕು ಆಡಳಿತದಿಂದ ರೈತರ ಜೊತೆಗೆ ಚೆಲ್ಲಾಟ ಎನ್ನುವಂತೆ ಪದೇ ಪದೇ ಭೂ ನ್ಯಾಯ ಮಂಡಳಿ ಸಭೆ ಮುಂದೂಡಿಕೆ ಮಾಡಲಾಗುತ್ತಿದೆ. ಕೂಡಲೇ ಸಭೆ ನಡೆಸಿ ರೈತರ ಸಮಸ್ಯೆ ಪರಿಹರಿಸುವ ಕೆಲಸ ಮಾಡುವಂತೆ ಸಾಗರ ತಾಲ್ಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ.ಇ ಒತ್ತಾಯಿಸಿದರು. ಇಂದು ಸಾಗರದ ಉಪ ವಿಭಾಗೀಯ ಅಧಿಕಾರಿಗಳ ಕಚೇರಿ ಬಳಿ ಸಾಗರ ತಾಲ್ಲೂಕು ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ ಎಸಿಗೆ ಮನವಿ ಪತ್ರವನ್ನು ನೀಡಲಾಯಿತು. ಈ ವೇಳೆ ಮಾತನಾಡಿದಂತ ಅವರು, ಭೂ ನ್ಯಾಯ ಮಂಡಳಿ ಸ್ಥಾಪನೆಯಾಗಿ 4 ತಿಂಗಳು ಕಳೆಯುತ್ತಿದೆ. ರೈತರ ಸಮಸ್ಯೆ ಇತ್ಯರ್ಥ ಪಡಿಸಲು ನಾಲ್ಕು ಬಾರಿ ಸಭೆ ಕರೆಯಲಾಗಿತ್ತು. ಆದರೆ ಒಂದು ಸಭೆ ನಡೆಸದೇ ಪದೇ ಪದೇ ಮುಂದೂಡಿಕೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಜನವರಿಯಿಂದ ಫೆಬ್ರವರಿ ವರೆಗೆ ನಾಲ್ಕು ಸಭೆ ನಿಗದಿ ಮಾಡಲಾಗಿತ್ತು. ಸಂಬಂಧಪಟ್ಟ ರೈತರಿಗೂ ನೋಟಿಸ್ ನೀಡಲಾಗಿತ್ತು. ತಮ್ಮ ಸಮಸ್ಯೆ ಇತ್ಯರ್ಥಕ್ಕೆ ಸಭೆಗೆ ಬರುವಂತೆ ನೋಟಿಸ್ ನಲ್ಲಿ ತಿಳಿಸಲಾಗಿತ್ತು.…
ಪ್ರತಿದಿನ ಮಲಗುವ ಮುನ್ನ ಈ 1 ಪದವನ್ನು ಯಾರಿಗೂ ತಿಳಿಯದಂತೆ ಹೇಳಿ ಮತ್ತು ಮನೆಯೊಳಗೆ ಈ ಒಂದು ವಸ್ತುವನ್ನು ಬಾಗಿಲಲ್ಲಿ ನಿಂತು ಊದಿ. ಹಣ ನಿಮ್ಮ ಮನೆಗೆ ಕಂತುಗಳಲ್ಲಿ ಮಾತ್ರ ಬರುತ್ತದೆ. ಹಣದ ಕಾಗುಣಿತ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ…
ಹುಬ್ಬಳ್ಳಿ: ಮಕ್ಕಳನ್ನು ಪಡೆಯಬೇಕು ಎಂಬುದು ಅನೇಕರ ಕನಸು. ಇದಕ್ಕಾಗಿ ಖಾಸಗಿ ಐವಿಎಫ್ ಕೇಂದ್ರಗಳ ಮೊರೆ ಹೋಗೋರ ಸಂಖ್ಯೆಯೂ ಹೆಚ್ಚಿದೆ. ಇಂತಹ ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ರಾಜ್ಯದಲ್ಲಿ ಸರ್ಕಾರಿ ಸ್ವಾಮ್ಯದ ಪ್ರಥಮ ಐವಿಎಫ್ ಕೇಂದ್ರ ಹುಬ್ಬಳ್ಳಿಯ ಕೆಎಂಸಿ-ಆರ್ ಐ ನಲ್ಲಿ ಆರಂಭಗೊಳ್ಳಲಿದೆ. ಹೌದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ ( ಕೆಎಂಸಿ-ಆರ್ ಐ)ನಲ್ಲಿ ಕೃತಕ ಗರ್ಭಧಾರಣಾ ಕೇಂದ್ರ ಶೀಘ್ರವೇ ಆರಂಭವಾಗಲಿದೆ. ಇದು ರಾಜ್ಯದಲ್ಲಿಯೇ ಸರ್ಕಾರಿ ಸ್ವಾಮ್ಯದ ಪ್ರಥಮ ಐವಿಎಫ್ ಕೇಂದ್ರ ಆಗಿದೆ. ಈಗಾಗಲೇ ಎಲ್ಲಾ ಕೆಲಸ ಮುಕ್ತಾಯಗೊಂಡಿದ್ದು, ಉದ್ಘಾಟನೆಗೆ ಮಾತ್ರ ಬಾಕಿ ಇದೆ. ಹುಬ್ಬಳ್ಳಿಯ ಕೆ ಎಂ ಸಿ ಆರ್ ಐನ ಸ್ತ್ರೀ ರೋಗ ಹಾಗೂ ಪ್ರಸೂತಿ ವಿಭಾಗದ 2ನೇ ಮಹಡಿಯಲ್ಲಿ ಐವಿಎಫ್ ಕೇಂದ್ರದ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದೆ. ಸಿವಿಲ್ ಕಾಮಗಾರಿ ನಡೆಸಲಾಗುತ್ತಿದ್ದು, ಶೀಘ್ರವೇ ಮುಕ್ತಾಯಗೊಂಡು ಉದ್ಘಾಟನೆಯಾಗಲಿದೆ. ಅಂದಹಾಗೇ ರಾಜ್ಯ ಸರ್ಕಾರಕ್ಕೆ ಕೆಎಂಸಿ-ಆರ್ ಐ ನಲ್ಲಿ 2021-22ನೇ ಸಾಲಿನಲ್ಲಿ ಐವಿಎಫ್ ಕೇಂದ್ರ ಆರಂಭಕ್ಕೆ…
ಅಮೇರಿಕಾ: ನೀವು ನಾಸಾಗೆ ಸೇರಲು ಆಸಕ್ತಿ ಹೊಂದಿದ್ದೀರಾ? ನಿಮ್ಮ ಆಕಾಂಕ್ಷೆಗಳನ್ನು ನನಸಾಗಿಸಲು ಇಲ್ಲಿದೆ ನಿಮ್ಮ ಅವಕಾಶ! ನಾಸಾದ ಸ್ಟೆಮ್ ಎಂಗೇಜ್ಮೆಂಟ್ ಕಚೇರಿ ಪ್ರಸ್ತುತ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಎಂಜಿನಿಯರಿಂಗ್ ಅಲ್ಲದ ಪಾತ್ರಗಳು ಸೇರಿದಂತೆ ಸ್ಟೆಮ್ ವಿಭಾಗಗಳಲ್ಲಿ ಅನುಭವವನ್ನು ಪಡೆಯಲು ಕಾಲೇಜು ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 2025 ರಲ್ಲಿ ಪಾವತಿಸಿದ ಇಂಟರ್ನ್ಶಿಪ್ಗಾಗಿ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ಅರ್ಜಿ ಸಲ್ಲಿಕೆ ಗಡುವು ಮತ್ತು ವಿವರಗಳು ನಾಸಾದ ಒಎಸ್ಟಿಇಎಂ ಇಂಟರ್ನ್ಶಿಪ್ಗಳು 10 ವಾರಗಳ ಅವಧಿಯದ್ದಾಗಿದ್ದು, ನಾಸಾ ಕೇಂದ್ರದಲ್ಲಿ ವೈಯಕ್ತಿಕವಾಗಿ ಅಥವಾ ದೂರದಿಂದಲೇ ನಡೆಯುತ್ತವೆ. 2025 ರಲ್ಲಿ ಮೂರು ಸೆಷನ್ಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಗಳು: ಬೇಸಿಗೆ ಅಧಿವೇಶನ: ಫೆಬ್ರವರಿ 28, 2025. ಫಾಲ್ ಸೆಷನ್: ಮೇ 16, 2025 ಇಂಟರ್ನ್ ಗಳು ನಾಸಾ ಎಂಜಿನಿಯರ್ ಗಳು, ವಿಜ್ಞಾನಿಗಳು ಮತ್ತು ಉದ್ಯಮ ತಜ್ಞರೊಂದಿಗೆ ಅತ್ಯಾಧುನಿಕ ಯೋಜನೆಗಳಲ್ಲಿ ಸಹಕರಿಸುತ್ತಾರೆ. ಇದು ಅವರ ವೃತ್ತಿಜೀವನದಲ್ಲಿ ಅನುಕೂಲವನ್ನು ಒದಗಿಸುವ ಮೌಲ್ಯಯುತ ಅನುಭವಕ್ಕೆ ಅವರನ್ನು ಒಡ್ಡುತ್ತದೆ. ಯಾರು ಅರ್ಜಿ ಸಲ್ಲಿಸಬಹುದು? ನಾಸಾ ಒಎಸ್ಟಿಇಎಂ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ದುಬೈನಲ್ಲಿ ನಡೆಯುತ್ತಿರುವಂತ ಐಸಿಸಿ ಚಾಂಪಿಯನ್ ಟ್ರೋಫಿ 2025ರ ಇಂದಿನ ಭಾರತ ಮತ್ತು ಪಾಕಿಸ್ತಾನ ವಿರುದ್ಧದ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾಗೆ 6 ವಿಕೆಟ್ ಗಳ ಭರ್ಜರಿ ಗೆಲುವು ಸಿಕ್ಕಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ವಿರಾಟ್ ಕೊಹ್ಲಿ ತಮ್ಮ 51ನೇ ಏಕದಿನ ಶತಕವನ್ನು ಗಳಿಸುವ ಮೂಲಕ ಪಾಕಿಸ್ತಾನವನ್ನು ಆರು ವಿಕೆಟ್ ಗಳಿಂದ ಸೋಲಿಸಲು ಸಹಾಯ ಮಾಡಿದರು. ದುಬೈನಲ್ಲಿ ನಡೆದ ಪಂದ್ಯದಲ್ಲಿ ಮೆನ್ ಇನ್ ಬ್ಲೂ ತಂಡವು ಎಲ್ಲಾ ರಂಗಗಳಲ್ಲಿ ಪ್ರಾಬಲ್ಯ ಸಾಧಿಸಿತು ಮತ್ತು ಕೊಹ್ಲಿ ತಮ್ಮ ಸಾಂಪ್ರದಾಯಿಕ ಎದುರಾಳಿಗಳ ವಿರುದ್ಧ ಗೆಲುವು ಸಾಧಿಸಲು ಭಾರತಕ್ಕೆ ಸಹಾಯ ಮಾಡಿದರು. ಹಾರ್ದಿಕ್ ಪಾಂಡ್ಯ 8 ಓವರ್ಗಳಲ್ಲಿ 31 ರನ್ ನೀಡಿ 2 ವಿಕೆಟ್ ಪಡೆದರು. ಭಾರತದ ಪರ ಹರ್ಷಿತ್ ರಾಣಾ, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ತಲಾ 1 ವಿಕೆಟ್ ಪಡೆದರು. ಇದಕ್ಕೂ ಮುನ್ನ ದುಬೈನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತನ್ನ ಆರಂಭಿಕ ಆಟಗಾರರಾದ ಬಾಬರ್ ಅಜಮ್…
ಹಾವೇರಿ: ಮಕ್ಕಳಿಗೆ ಯಾವುದೇ ಜಾತಿ-ಭೇದ-ಭಾವವಿಲ್ಲದೇ ಶಿಕ್ಷಣ ನೀಡುವುದೇ ನಮ್ಮ ಸರ್ಕಾರದ ಗುರಿಯಾಗಿದೆ ಅಂತ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಹೇಳಿದ್ದಾರೆ. ಇಂದು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಳಲಕೊಂಡ ಗ್ರಾಮದ ಎಸ್.ವಿ.ಪಿ ಶಾಲೆಯ ಆವರಣದಲ್ಲಿ ಮೇಕ್ ವೆಲ್ಫೇರ್ ಫೌಂಡೇಶನ್ (MAKE WELFARE FOUNDATION) ವತಿಯಿಂದ ಆಯೋಜಿಸಲಾಗಿದ್ದ “ಅಕ್ಷರೋತ್ಸವ ಸಮಾವೇಶ” ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಕಾರ್ಯಕ್ರಮಕ್ಕೂ ಮೊದಲು ವಿದ್ಯಾರ್ಥಿಗಳು ತಯಾರಿಸಿದ್ದ ವಿಜ್ಞಾನ ಮಾದರಿ ವಸ್ತು ಪ್ರದರ್ಶನವನ್ನು ವೀಕ್ಷಿಸಿ, ಆವರಿಂದ ಮಾಹಿತಿ ಪಡೆದರು. ನಂತರ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ್ ಹಾಗೂ ಉಪಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ ಅವರೊಂದಿಗೆ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಜಾತಿ- ಧರ್ಮ- ಮತಗಳನ್ನು ನೋಡದೇ ಮಕ್ಕಳ ಉಜ್ವಲ ಭವಿಷ್ಯಕ್ಕೆ ಒಳ್ಳೆಯದಾಗುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲು ಬದ್ಧವಾಗಿದೆ ಎಂದರು. ಪ್ರತಿಯೊಬ್ಬ ಮಗುವನ್ನು ಮಖ್ಯವಾಹಿನಿಗೆ ಕರೆತರಲು ಶಿಕ್ಷಣದಿಂದ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರನ್ನು ಶಿಕ್ಷಣವಂತರನ್ನಾಗಿ ಮಾಡಬೇಕೆಂಬ ಉದ್ದೇಶದಿಂದ ಆರಂಭಗೊಂಡಿರುವ “ಮೇಕ್ ವೇಲ್ಫೇರ್…
ಹಾವೇರಿ: ಬಹಿರ್ದೆಸೆ ಮುಗಿಸಿದ ಬಳಿಕ ಕೆರೆಗೆ ತೆರಳಿ ಕೈಕಾಲು ತೊಳೆಯುತ್ತಿದ್ದ ವೇಳೆಯಲ್ಲಿ ಕಾಲು ಜಾರಿ ಬಿದ್ದು ಬಾಲಕರಿಬ್ಬರು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಜಗದೀಶ್ ನಾಗೋಜಿ ಎಂಬುವರ ಪುತ್ರ ನಿಖಿಲ್ ನಾಗೋಜಿ(11) ಮತ್ತು ಪ್ರಕಾಶ್ ಚೋಳಪ್ಪನವರ್ ಎಂಬುವರ ಪುತ್ರ ಧನುಷ್ ಚೋಳಪ್ಪನವರ್ (13) ಎಂಬುವರೇ ಮೃತ ಬಾಲಕರಾಗಿದ್ದಾರೆ. ಈ ಇಬ್ಬರು ಗ್ರಾಮದ ಕಾರ್ಯಕ್ರಮವೊಂದಕ್ಕೆ ತೆರಳಿ, ಬಹಿರ್ದೆಸೆ ಮುಗಿಸಿ, ಕೆರೆಗೆ ಕೈಕಾಲು ತೊಳೆಯಲು ದೊಡ್ಡಕೆರೆಗೆ ಹೋಗಿದ್ದರು. ಈ ವೇಳೆಯಲ್ಲಿ ಕಾಲುಜಾರಿ ಕೆರೆಗೆ ಬಿದ್ದ ಒಬ್ಬನನ್ನು ರಕ್ಷಣೆ ಮಾಡಲು ಹೋಗಿ, ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/bengaluru-112-people-booked-for-wasting-drinking-water-fined-rs-5-60-lakh/ https://kannadanewsnow.com/kannada/tumakuru-people-notice-power-outages-in-these-areas-tomorrow/
ಬೆಂಗಳೂರು: ನಗರದಲ್ಲಿ ಕುಡಿಯುವ ನೀರು ಪೋಲು ಮಾಡದಂತೆ ಜಲಮಂಡಳಿ ಖಡಕ್ ಆದೇಶ ಮಾಡಿತ್ತು. ಹೀಗಿದ್ದರೂ ವ್ಯರ್ಥ ಮಾಡಿದಂತ 112 ಮಂದಿಯ ವಿರುದ್ಧ ಕೇಸ್ ದಾಖಲಿಸಲಾಗಿದೆ. ಅಲ್ಲದೇ 5.60 ಲಕ್ಷ ದಂಡವನ್ನು ಒಂದೇ ವಾರದಲ್ಲಿ ವಸೂಲಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷರಾದಂತ ಡಾ.ರಾಮ್ ಪ್ರಸಾದ್ ಮನೋಹರ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಬೆಂಗಳೂರಲ್ಲಿ ಫೆ.17ರಂದು ಅನಗತ್ಯವಾಗಿ ನೀರು ಪೋಲು ಮಾಡದಂತೆ ಆದೇಶ ಮಾಡಲಾಗಿತ್ತು. ಈ ಮೂಲಕ ನೀರಿನ ಕೊರತೆ ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿತ್ತು ಎಂದಿದ್ದಾರೆ. ಅನಗತ್ಯವಾಗಿ ನೀರು ಪೋಲು ಮಾಡುವುದನ್ನು ತಡೆಗಟ್ಟುವುದು ನಮ್ಮ ಉದ್ದೇಶವಾಗಿದೆ. ಈ ಆದೇಶವನ್ನು ಮೀರಿ ನಗರದಲ್ಲಿ ವಾಹನ ಸ್ವಚ್ಛಗೊಳಿಸೋದಕ್ಕೆ, ಕೈತೋಟಕ್ಕೆ, ಕಟ್ಟಡ ನಿರ್ಮಾಣ ಸೇರಿ ಇತರೆ ಕಾರಣಕ್ಕೆ ಕುಡಿಯುವ ನೀರು ಪೋಲು ಮಾಡಿರುವುದು ಕಂಡು ಬಂದಿದೆ. ಅಂತವರ ವಿರುದ್ಧ 112 ಕೇಸ್ ದಾಖಲಿಸಲಾಗಿದೆ. 5.60 ಲಕ್ಷ ದಂಡವನ್ನು ವಸೂಲಿ ಮಾಡಲಾಗಿದೆ ಎಂಬುದಾಗಿ ತಿಳಇಸಿದ್ದಾರೆ. https://kannadanewsnow.com/kannada/tumakuru-people-notice-power-outages-in-these-areas-tomorrow/ https://kannadanewsnow.com/kannada/rohit-sharma-became-the-third-indian-opener-to-score-9000-runs-in-odi-cricket/
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ ಫೀಡರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಈ ಕೆಳಗಿನ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಪೂರೈಕೆಯಲ್ಲಿ ಇನ್ನಷ್ಟು ಸುಧಾರಣೆ ತರುವ ಉದ್ದೇಶದಿಂದ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಪ್ರಸ್ತುತ ನಗರ ಫೀಡರ್ ಮೂಲಕವೇ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲಾಗುತ್ತಿದೆ. ವಿದ್ಯುತ್ ನಿರ್ಹವಣೆ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯ ತುಮಕೂರು ಹೊರ ವಲಯದಲ್ಲಿ ಬರುವ ಕೆಲವು ಹಳ್ಳಿಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ ಈ ಕೆಳಗಿನ ಪ್ರದೇಶಗಳಲ್ಲಿ ದಿನ ಬಿಟ್ಟು ದಿನ ವಿದ್ಯುತ್ ವ್ಯತ್ಯಯ ಆಗಲಿದೆ. ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್ ಕುಂಟಮ್ಮನತೋಟ, ದಿಬ್ಬೂರು, ಬಿ.ಎಚ್. ಪಾಳ್ಯ, ಹಾರೋನಹಳ್ಳಿ ಹಾಗೂ ಹೊನ್ನೆನಹಳ್ಳಿಯಲ್ಲಿ ಫೆಬ್ರವರಿ 24 ಹಾಗೂ 27 ರಂದು ವಿದ್ಯುತ್…













