Author: kannadanewsnow09

ಬೆಂಗಳೂರು: ಕೆಲವು ನಾಯಕರು ನನ್ನ ಮುಗಿಸುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಅವರ ಪ್ರಯತ್ನ ಅವರು ಮಾಡಲಿ. ನನ್ನ ಮೇಲೆ ಯಾವುದಾದರೂ ಕೇಸ್ ಇದೆಯಾ ಎಂದು ಹುಡುಕುತ್ತಿದ್ದಾರೆ. ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಪ್ರಯತ್ನ ನಡೆಯುತ್ತಿದೆ. ಯಾವುದೋ ಹಳೇ ಕೇಸ್ ಹುಡುಕುತ್ತಿದ್ದಾರೆ. ಅವರಿಗೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ. ಕುಮಾರಸ್ವಾಮಿಯನ್ನು ಹೇಗೆ ಮುಗಿಸಿಬೇಕು ಎಂಬುದು ಪ್ಲಾನ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯಪಾಲರನ್ನು ಭೇಟಿಯಾದ ರಾಜಭವನದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ದೇವೆಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಿದ್ದು ಆಯಿತು. ಈಗ ಯಡಿಯೂರಪ್ಪ ಅವರನ್ನು ಮುಗಿಸಲು ಹೊರಟಿದ್ದಾರೆ. ಅದಾದ ಮೇಲೆ ನನ್ನನ್ನು ಗುರಿ ಮಾಡಿದ್ದಾರೆ ಎಂದು ದೂರಿದರು. ಯಡಿಯೂರಪ್ಪ ಅವರ ವಿಚಾರದಲ್ಲಿ ರಾಜ್ಯ ಸರ್ಕಾರ ಬಹಳ ಸಂಶಯಾಸ್ಪದವಾಗಿ ನಡೆದುಕೊಳ್ಳುತ್ತಿದೆ. ನನಗೆ ಈ ಸರ್ಕಾರದ ನಾಲ್ಕು ತಿಂಗಳ ನಡುವಳಿಕೆ ಮೇಲೆ ರಾಜ್ಯವೇ ಅನುಮಾನ ಪಡುವಂತೆ ಕಾಣುತ್ತಿದೆ. ಈ ಸರ್ಕಾರದಲ್ಲಿ ಕಾನೂನು ಪಂಡಿತರು ಬಹಳ ಜನ…

Read More

ಬೆಂಗಳೂರು: ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡು, ಜನಪರ ಕೆಲಸದಲ್ಲಿ ತೊಡಗಿರುವಂತ ಹೆಚ್.ಡಿ ಕುಮಾರಸ್ವಾಮಿ ಅವರು, ನಾಳೆ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಗೆದ್ದು ಈಗ ಹೆಚ್.ಡಿ ಕುಮಾರಸ್ವಾಮಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿದ್ದಾರೆ. ಈ ಹಿನ್ನಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಕಡ್ಡಾಯವಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೇಂದ್ರ ಸಚಿವರಾದ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿರುವ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ ಸಾದಹಳ್ಳಿ ಗೇಟ್ ಟೋಲ್ ಬಳಿಗೆ ಆಗಮಿಸಿದ ಕೇಂದ್ರ ಸಚಿವರನ್ನು ಬೃಹತ್ ಸೇಬಿನ ಹಾರ, ಹೂವಿನ ಹಾರ ಹಾಕಿ ಸ್ವಾಗತ ಮಾಡಿದರು ಕಾರ್ಯಕರ್ತರು. ಪಕ್ಷದ ಕಚೇರಿಯಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ…

Read More

ಬೆಂಗಳೂರು: ನಾನು ಕೇಂದ್ರ ಸಚಿವನಾಗಿದ್ದು ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರಕ್ಕೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದಕ್ಕೆ ನನ್ನ ವಿರುದ್ಧ ಒಳಸಂಚು ನಡೆಸುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ರಾಜ್ಯಪಾಲರನ್ನು ಭೇಟಿಯಾದ ರಾಜಭವನದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ದೇವೆಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಿದ್ದು ಆಯಿತು. ಈಗ ಯಡಿಯೂರಪ್ಪ ಅವರನ್ನು ಮುಗಿಸಲು ಹೊರಟಿದ್ದಾರೆ. ಅದಾದ ಮೇಲೆ ನನ್ನನ್ನು ಗುರಿ ಮಾಡಿದ್ದಾರೆ ಎಂದು ದೂರಿದರು. ಯಡಿಯೂರಪ್ಪ ಅವರ ವಿಚಾರದಲ್ಲಿ ರಾಜ್ಯ ಸರ್ಕಾರ ಬಹಳ ಸಂಶಯಾಸ್ಪದವಾಗಿ ನಡೆದುಕೊಳ್ಳುತ್ತಿದೆ. ನನಗೆ ಈ ಸರ್ಕಾರದ ನಾಲ್ಕು ತಿಂಗಳ ನಡುವಳಿಕೆ ಮೇಲೆ ರಾಜ್ಯವೇ ಅನುಮಾನ ಪಡುವಂತೆ ಕಾಣುತ್ತಿದೆ. ಈ ಸರ್ಕಾರದಲ್ಲಿ ಕಾನೂನು ಪಂಡಿತರು ಬಹಳ ಜನ ಇದ್ದಾರೆ. ಅವರಿಗೆ ಹೇಳಿ, ಕುಮಾರಸ್ವಾಮಿಯದ್ದು ಏನಾದರೂ ಸಿಗುತ್ತದೆಯಾ ನೋಡಿ ಎಂದು ಕೆದಕಲು ಹೇಳಿದ್ದಾರೆ. ಅಂತಹ ಸಿಎಂ ಸಿದ್ದರಾಮಯ್ಯ ಅವರು ಈಗ ನಾಲ್ಕು ತಿಂಗಳ ನಂತರ ಯಡಿಯೂರಪ್ಪ ಅವರ ಕೇಸ್ ಕೆದಕ್ಕಿದ್ದಾರೆ. ನನ್ನ ಮುಗಿಸಲು ಪ್ರಯತ್ನ ಮಾಡ್ತಿದ್ದಾರೆ…

Read More

ಶಿವಮೊಗ್ಗ: ವನ್ಯಜೀವಿಗಳು ಮತ್ತು ಪ್ರಾಣಿಸಂಕುಲದ ಬಗ್ಗೆ ಅರಿವು ಮೂಡಿಸಲು ಪರಿಸರ ಪ್ರವಾಸೋದ್ಯಮವು ಅತ್ಯವಶ್ಯವಾಗಿದೆ. ಇದನ್ನು ಉತ್ತೇಜಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಹೆಚ್ಚುವರಿ ಮುಖ್ಯ ಸಂರಕ್ಷಣಾಧಿಕಾರಿ ಹಾಗು ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್ ಪುಷ್ಕರ್ ಅಭಿಪ್ರಾಯಪಟ್ಟರು. ಭದ್ರಾ ಹುಲಿ ಸಂರಕ್ಷಿತ ಅರಣ್ಯ 25ನೇ ವರ್ಷದ ವಿಶೇಷ ಸಂದರ್ಭದಲ್ಲಿ ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ, ಭದ್ರಾ ಹುಲಿ ಸಂರಕ್ಷಿತ ಅರಣ್ಯ ಮಂಡಳಿ ಹಾಗು ಕುವೆಂಪು ವಿ ವಿ ಸಂಸ್ಥೆಗಳು ಜಂಟಿಯಾಗಿ 11ನೇ ಹಕ್ಕಿ ಹಬ್ಬವನ್ನು ಭದ್ರಾ ಹುಲಿ ಸಂರಕ್ಷಿತ ಅರಣ್ಯ ಚಿಕ್ಕಮಗಳೂರಿನಲ್ಲಿ ಜೂ. 14-16 ರ ವರೆಗೆ 3 ದಿನಗಳ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿವಿಯ ಬಸವ ಸಭಾ ಭವನದಲ್ಲಿ ಶುಕ್ರವಾರ ಹಕ್ಕಿ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು. ಪರಿಸರ ಪ್ರವಾಸೋದ್ಯಮ ನೀತಿಯನ್ನು ರೂಪಿಸಿದ್ದು ಸದ್ಯದಲ್ಲೇ ಅನುಮೋದನೆ ಪಡೆಯಲಾಗುವುದು ಜೊತೆಗೆ ಪರಿಸರ ಪ್ರವಾಸೋದ್ಯಮದ ಕುರಿತು ಸಂಶೋಧನೆಗಳನ್ನು ನಡೆಸಲಾಗುತ್ತಿದೆ.…

Read More

ಬೆಂಗಳೂರು: “ಪಕ್ಷದ ಮೂಲ ಸಿದ್ಧಾಂತವನ್ನು ಯಾವ ಕಾರಣಕ್ಕೂ ಕೈ ಬಿಡಬಾರದು ಎಂದು ಹಿರಿಯ ನಾಯಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಪಕ್ಷದ ಹಿರಿಯ ನಾಯಕರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್ ಅವರು ಹೇಳಿದ್ಧಿಷ್ಟು; “ಕಾಂಗ್ರೆಸ್ ಅನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಲು ಹಾಗೂ ತಳಮಟ್ಟದಿಂದ ಪಕ್ಷ ಬಲಪಡಿಸುವ ಬಗ್ಗೆ ನಮ್ಮ ನಾಯಕರು ಸಲಹೆ ನೀಡಿದ್ದಾರೆ. ಪಕ್ಷ ಸಂಘಟನೆ ಬಗ್ಗೆಯೂ ಮಾರ್ಗದರ್ಶನಗಳನ್ನು ನೀಡಿದ್ದಾರೆ. ಕೆಲವೊಬ್ಬರು ಟ್ರ್ಯಾಪ್ ಮಾಡಲು ಪ್ರಯತ್ನ ಪಡುತ್ತಾರೆ ನಿಗಮ ಮಂಡಳಿಗಳ ಅಧ್ಯಕ್ಷರುಗಳ ಸಭೆ ಕರೆದಿದ್ದು. ಜನರ ಭಾವನೆ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು. ಜನರ ಬಳಿ ವರ್ತನೆ ಹೇಗಿರಬೇಕು, ಕೆಲಸಗಳನ್ನು ಹೇಗೆ ಮುನ್ನಡೆಸಿಕೊಂಡು ಹೋಗಬೇಕು ಎಂದು ಸಲಹೆ ನೀಡಲಾಗುವುದು. ಕೆಲವೊಂದಷ್ಟು ಜನ ಟ್ರ್ಯಾಪ್ ಮಾಡಲು ಪ್ರಯತ್ನ ಮಾಡುತ್ತಿರುತ್ತಾರೆ. ಬಹಳ ಬುದ್ದಿವಂತಿಕೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಲಾಗುವುದು” ಎಂದರು. ಯಡಿಯೂರಪ್ಪ ಅವರ ವಿರುದ್ಧ ದ್ವೇಷ ರಾಜಕಾರಣ ಮಾಡಲಾಗುತ್ತಿದೆ…

Read More

ಬೆಂಗಳೂರು: “ಜಾಹೀರಾತು ವಿಚಾರದಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಕೇಸು ದಾಖಲಿಸಿರುವುದು ಯಾವ ರಾಜಕಾರಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಕಬ್ಬನ್ ಪಾರ್ಕಿನ ಬಾಲಭವನ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಯಡಿಯೂರಪ್ಪ ಅವರ ವಿರುದ್ಧ ಕಾನೂನು ಪ್ರಕ್ರಿಯೆ ದ್ವೇಷದ ರಾಜಕಾರಣ, ರಾಹುಲ್ ಗಾಂಧಿ ಅವರು ಬಂದ ನಂತರ ಈ ಬೆಳವಣಿಗೆ ನಡೆಯುತ್ತಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, ಅವರು ಉತ್ತರಿಸಿದ್ದು ಹೀಗೆ; “ನಾನು ಆ ಪ್ರಕರಣದ ಬಗ್ಗೆ ಹೆಚ್ಚು ಮಾಹಿತಿ ಪಡೆದಿಲ್ಲ. ಕಾಂಗ್ರೆಸ್ ಪಕ್ಷ ಯಾರ ಮೇಲೂ ದ್ವೇಷ ಮಾಡುವುದಿಲ್ಲ. ದ್ವೇಷ ರಾಜಕಾರಣದ ಬಗ್ಗೆ ನಾನು ಮಾತನಾಡಿದರೆ ವಿಚಾರ ಎಲ್ಲೆಲ್ಲೋ ಹೋಗುತ್ತದೆ. ಈ ವಿಚಾರದಲ್ಲಿ ನನಗೂ ಅಯ್ಯೋ ಎನಿಸುತ್ತದೆ. ಇಂತಹ ಕಠಿಣ ಪರಿಸ್ಥಿತಿಯನ್ನು ನಾವು ಅನುಭವಿಸಿದ್ದೇವೆ. ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಬಂದು ನ್ಯಾಯಾಲಯದ ಮುಂದೆ ಹಾಜರಾದರು. ಅವರ ವಿರುದ್ಧ ಕೇಸು ಹಾಕಿರುವುದು ಯಾವ ರಾಜಕಾರಣ? ಬಿಜೆಪಿಯ ವಿರುದ್ಧದ ಜಾಹೀರಾತಿಗೂ ರಾಹುಲ್…

Read More

ಬೆಂಗಳೂರು: 82 ವರ್ಷದ ಯಡಿಯೂರಪ್ಪ ಅವರ ಮೇಲೆ ಕಾಂಗ್ರೆಸ್‌ ಸೇಡಿನ ರಾಜಕಾರಣ ಮಾಡುತ್ತಿದೆ. ರಾಜ್ಯದ ರೈತ ನಾಯಕ ಯಡಿಯೂರಪ್ಪ ಅವರ ಮೇಲೆ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಅವರನ್ನು ಜೈಲಿಗೆ ಕಳಿಸಲೇಬೇಕು ಎಂಬಂತೆ ಕಾಂಗ್ರೆಸ್‌ ಕೆಲಸ ಮಾಡುತ್ತಿದೆ. ಯಡಿಯೂರಪ್ಪ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿ ಯುವ ಕೆಲಸ ಮಾಡಲಾಗುತ್ತಿದೆ. ಅವರ ಪ್ರಯತ್ನ ಫಲಪ್ರದ ಆಗುವುದಿಲ್ಲ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ಕೇಂದ್ರ ಸಚಿವರಾದ ಮೇಲೆ ರಾಜ್ಯಕ್ಕೆ ಮೊದಲ ಭೇಟಿ ಕೊಟ್ಟ ವೇಳೆ ಜಾತ್ಯತೀತ ಜನತಾದಳ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಬೇಕು ಎನ್ನುವ ಷಡ್ಯಂತ್ರ ಆಯಿತು ಈಗ ಯಡಿಯೂರಪ್ಪ ಅವರ ಕುಟುಂಬವನ್ನು ರಾಜಕೀಯವಾಗಿ ಮುಗಿಸುವ ಕುತಂತ್ರ ಆರಂಭವಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ನಾಲ್ಕು ತಿಂಗಳ ಹಿಂದಿನ ಪ್ರಕರಣ ಇದು. ಇವತ್ತು ಯಡಿಯೂರಪ್ಪ ಅವರ ಮೇಲೆ ಜಾಮೀನು ರಹಿತ ಕೇಸ್ ಹಾಕಲು ಹೊರಟಿದ್ದಾರೆ.…

Read More

ಬೆಂಗಳೂರು: ನಾನು ಕೇಂದ್ರ ಸಚಿವನಾದ ಮೇಲೆ ಕೆಲವರಿಗೆ ನಿದ್ದೆ ಬರುತ್ತಿಲ್ಲ, ಊಟ ಸೇರುತ್ತಿಲ್ಲ. ನಾನು ಯಾರ ಮೇಲೂ ದ್ವೇಷ ಸಾಧಿಸಲ್ಲ. ಆ ಜಾಯಮಾನ ನನ್ನದಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಕೇಂದ್ರ ಸಚಿವರಾದ ಮೇಲೆ ರಾಜ್ಯಕ್ಕೆ ಮೊದಲ ಭೇಟಿ ಕೊಟ್ಟ ವೇಳೆ ಜಾತ್ಯತೀತ ಜನತಾದಳ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ನಾನು ಕೇಂದ್ರ ಸರಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವನಾಗಿರಬಹುದು. ರಾಜ್ಯದ ಹಿತವನ್ನು ಎಂದಿಗೂ ಮರೆಯಲಾರೆ. ಬನ್ನಿ, ಯಾವುದೇ ಇಲಾಖೆಯ ಏನೇ ಕೆಲಸಗಳು ಇದ್ದರೂ ಮಾಡಿಕೊಡುತ್ತೇನೆ. ನನಗೆ ಸ್ವಲ್ಪ ಸಮಯ ಬೇಕು ಎಂದು ಹೇಳಿದರು. ರಾಜಕೀಯದಲ್ಲಿ ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ. ನೆರೆಯ ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಹಿಂದಿನ ಚುನಾವಣೆಯಲ್ಲಿ ಎಷ್ಟು ಸ್ಥಾನಗಳನ್ನು ಗೆದ್ದಿದ್ದರು? ಕಡೆಗೆ ಅನೇಕ ಶಾಸಕರು ಅವರನ್ನು ಬಿಟ್ಟು ಹೋದರು. ಅವರನ್ನು ಜೈಲಿಗೂ ಕಳಿಸಿದರು. ಈಗ ಮತ್ತೆ ಎಷ್ಟು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದರು ಎನ್ನುವುದನ್ನು ಗಮನಿಸಬೇಕು. ಕರ್ನಾಟಕದಲ್ಲಿಯೂ…

Read More

ಹಾವೇರಿ: ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೋರ್ಟ್ ಜಾಮೀನು ನೀಡಿರುವುದು ನ್ಯಾಯಸಮ್ಮತವಾಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಆ ತರಹದ ವಿಚಾರದಲ್ಲಿ ಭಾಗಿಯಾಗಿಲ್ಲ. ಅವರ ವಿರುದ್ದ ಷಡ್ಯಂತ್ರ ಮಾಡಿದ್ದು ಅಧಿಕಾರಿಗಳು ಕರೆದಾಗ ಹೋಗಿ ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ. ಯಡಿಯೂರಪ್ಪನವರಿಗೆ ಸನ್ನಡತೆಯಿದೆ. ಕೋರ್ಟ್ ಇದನ್ನು ಒಪ್ಪಿಕೊಂಡು ಸದ್ಯ ರಿಲೀಪ್ ಕೊಟ್ಟಿದ್ದು ನ್ಯಾಯಸಮ್ಮತವಾಗಿದೆ ನಾವು ಸ್ವಾಗತ ಮಾಡುತ್ತೇವೆ. ಮುಂದೆಯು ಕಾನೂನು ಹೋರಾಟದಲ್ಲಿ ಯಡಿಯೂರಪ್ಪ ನವರು ವಿಜಯಶಾಲಿಯಾಗುವ ವಿಶ್ವಾಸವಿದೆ ಎಂದು ಹೇಳಿದರು. ಇದಕ್ಕೂ ಮೊದಲು ಮಾತನಾಡಿದ ಅವರು, ಯಡಿಯೂರಪ್ಪ ಅವರ ವಿರುದ್ದದ ಪ್ರಕರಣ ನೋಡಿದರೆ ಇದೊಂದು ರಾಜಕೀಯ ಪಿತೂರಿ, ಖಂಡಿತವಾಗಿಯೂ ಷಂಡ್ಯಂತ್ರ. ಅದು ಸಂಪೂರ್ಣ ಕೇಸ್ ಪಾಲೋ ಮಾಡಿದರೆ, ಅದರ ಹಿನ್ನಲೆ ನೋಡಿದರೆ ಷಂಡ್ಯಂತ್ರ ಇದೆ. ಮೂರು ತಿಂಗಳ ಬಿಟ್ಟು, ಈಗ ಒಂದೇ ದಿನಕ್ಕೆ ಸಮಯ ಕೊಟ್ಟು, ವಾರೆಂಟ್ ನೀಡುವುದು ಬಹಳಷ್ಟು ಲ್ಯಾಪ್ಸ ಇದೆ. ಅವರ ವಿರುದ್ದ ಈ ಹಿಂದೆ…

Read More

ನವದೆಹಲಿ: ಲೇಖಕಿ ಅರುಂಧತಿ ರಾಯ್ ಮತ್ತು ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಶೇಖ್ ಶೌಕತ್ ಹುಸೇನ್ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಶುಕ್ರವಾರ ಅನುಮೋದನೆ ನೀಡಿದ್ದಾರೆ. 2010ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ ನಿವಾಸ್ ಅಧಿಕಾರಿಗಳು ಶುಕ್ರವಾರ ದೃಢಪಡಿಸಿದ್ದಾರೆ. ನವದೆಹಲಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನಿರ್ದೇಶನದ ಮೇರೆಗೆ ರಾಯ್ ಮತ್ತು ಹುಸೇನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪ್ರಸ್ತುತ, ಈ ಬೆಳವಣಿಗೆಗೆ ಸಂಬಂಧಿಸಿದಂತೆ ರಾಯ್ ಅಥವಾ ಹುಸೇನ್ ಅವರಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. https://twitter.com/ANI/status/1801611262196904130 ಕಾಶ್ಮೀರದ ಸಾಮಾಜಿಕ ಕಾರ್ಯಕರ್ತ ಸುಶೀಲ್ ಪಂಡಿತ್ ಅವರು 2010ರ ಅಕ್ಟೋಬರ್ 28ರಂದು ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ಅರುಂಧತಿ ರಾಯ್ ಮತ್ತು ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯದ ಅಂತರರಾಷ್ಟ್ರೀಯ ಕಾನೂನಿನ ಮಾಜಿ ಪ್ರಾಧ್ಯಾಪಕ ಡಾ.ಶೇಖ್ ಶೌಕತ್ ಹುಸೇನ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ…

Read More