Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ : ಲಿಡ್ಕರ್ ವತಿಯಿಂದ ನಗರದ ಬುಡಾ ಕಾಂಪ್ಲೆಕ್ಸ್ ನ ಶಾಪ್ ನಂ.24 ರ ಲಿಡ್ಕರ್ ಲೆದರ್ ಎಂಪೋರಿಯಮ್ ಮಳಿಗೆಯಲ್ಲಿ ಲಿಡ್ಕರ್ ನ ಎಲ್ಲಾ ಚರ್ಮವಸ್ತುಗಳನ್ನು ಶೇ.20 ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಲಿಡ್ಕರ್ ನ ಜಿಲ್ಲಾ ವ್ಯವಸ್ಥಾಪಕ ಟಿ.ಸಂಜೀವಪ್ಪ ಅವರು ತಿಳಿಸಿದ್ದಾರೆ. ಮಾ.03 ರಿಂದ 23 ರವರೆಗೆ (21 ದಿನ) ಎಲ್ಲಾ ಚರ್ಮವಸ್ತುಗಳಿಗೂ ಶೇ.20 ರಷ್ಟು ರಿಯಾಯಿತಿ ನೀಡಲಾಗುವುದು. ಸಾರ್ವಜನಿಕರು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರ ವರೆಗೆ ಮತ್ತು ಸಂಜೆ 4 ರಿಂದ 8 ಗಂಟೆಯವರೆಗೆ ಭೇಟಿ ನೀಡಬಹುದು. ಮಾಹಿತಿಗಾಗಿ ದೂ.08392271741, ಮೊ.7676591259 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/no-case-of-chicken-flu-reported-in-dharwad-district-dr-ravi-saligowda/ https://kannadanewsnow.com/kannada/good-news-for-cancer-patients-vaccine-research-to-cure-the-disease/
ಹಾಂಗ್ ಕಾಂಗ್ ವಿಜ್ಞಾನಿಗಳು ಕ್ಯಾನ್ಸರ್ ಗುಣಪಡಿಸುವ ಕಾರ್-ಟಿ ಚುಚ್ಚುಮದ್ದಿನ ಬಗ್ಗೆ ಬಹಿರಂಗಪಡಿಸಿದ್ದಾರೆ. ನವೆಂಬರ್ 2024 ರಲ್ಲಿ, ಐದು ಕ್ಯಾನ್ಸರ್ ರೋಗಿಗಳಿಗೆ ಸಿಎಆರ್-ಟಿ ಚುಚ್ಚುಮದ್ದನ್ನು ನೀಡಲಾಯಿತು. ಈ ಚಿಕಿತ್ಸೆಯನ್ನು ಪಡೆದ ಈ ಎಲ್ಲಾ ರೋಗಿಗಳು ಕ್ರಮೇಣ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹಾಂಗ್ ಕಾಂಗ್ ವಿಜ್ಞಾನಿಗಳು ಹೇಳುತ್ತಾರೆ. ಈ ಚುಚ್ಚುಮದ್ದನ್ನು ತೆಗೆದುಕೊಂಡ ಬಲಿಪಶುಗಳ ಪ್ರತಿಕ್ರಿಯೆಗಳು ಬಹಿರಂಗಗೊಂಡವು. ಇದಲ್ಲದೆ, ಈ ರೋಗಿಗಳು ಚೇತರಿಸಿಕೊಂಡ ರೀತಿಯನ್ನು ನೋಡಿದ ನಂತರ, ಈ ಸಿಎಆರ್-ಟಿ ಚುಚ್ಚುಮದ್ದಿನ ಬೇಡಿಕೆ ಜಾಗತಿಕವಾಗಿ ಹೆಚ್ಚಾಗುವ ಸಾಧ್ಯತೆಯಿದೆ. ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಪ್ರಕಾರ, ಅಕ್ಟೋಬರ್ 2024 ರಲ್ಲಿ ಹಾಂಗ್ ಕಾಂಗ್ನ ಚೀನೀ ವಿಶ್ವವಿದ್ಯಾಲಯದಲ್ಲಿ ಐದು ಕ್ಯಾನ್ಸರ್ ರೋಗಿಗಳಿಗೆ ಚುಚ್ಚುಮದ್ದನ್ನು ನೀಡಲಾಯಿತು. ಈ ಚುಚ್ಚುಮದ್ದನ್ನು ಪಡೆದ ರೋಗಿಗಳಲ್ಲಿ ಒಬ್ಬರಿಗೆ 73 ವರ್ಷ, ಇನ್ನೊಬ್ಬರಿಗೆ 71 ವರ್ಷ, ಮೂರನೆಯವರಿಗೆ 67 ವರ್ಷ ಮತ್ತು ನಾಲ್ಕನೆಯವರಿಗೆ 15 ವರ್ಷ ವಯಸ್ಸಾಗಿತ್ತು. ಐದನೇ ವ್ಯಕ್ತಿಗೆ 5 ವರ್ಷ. ಫೆಬ್ರವರಿ ವೇಳೆಗೆ ಈ ರೋಗಿಗಳು ಕ್ಯಾನ್ಸರ್ ನಿಂದ ಸಾಕಷ್ಟು ಪರಿಹಾರವನ್ನು ಪಡೆದಿದ್ದಾರೆ ಎಂದು…
ಧಾರವಾಡ : ಜಿಲ್ಲೆಯಲ್ಲಿ ಕೋಳಿ ಶೀತ ಜ್ವರದ ಬಗ್ಗೆ ಯಾವುದೇ ಪ್ರಕರಣಗಳು ವರದಿ ಆಗಿರುವದಿಲ್ಲ. ಕೋಳಿಗಳಲ್ಲಿ ಮತ್ತು ಇತರೆ ಪಕ್ಷಿಗಳಲ್ಲಿ ಅಸಹಜ ಸಾವು ಕಂಡು ಬಂದಲ್ಲಿ ತಕ್ಷಣ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕೆಂದು ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ.ರವಿ ಸಾಲಿಗೌಡರ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಈಗಾಗಲೇ ಕೋಳಿ ಶೀತ ಜ್ವರ ಕಂಡುಬಂದಿರುತ್ತದೆ. ಇದು ಪಕ್ಷಿಗಳಲ್ಲಿನ ಮಾರಣಾಂತಿಕ ಕಾಯಿಲೆಯಾಗಿದ್ದು, ಶೇ.50ರಷ್ಟು ಕೋಳಿಗಳು ಸಾಯುವ ಸಂಭವ ಇರುತ್ತದೆ. ಇದು ಇನ್ಫ್ಲೂಯನ್ಸ ವೈರಸ್ (ಹೆಚ್ 5 ಎನ್ 1) ಸೋಂಕು. ಕೋಳಿಗಳಿಂದ ಮನುಷ್ಯರಿಗೆ ಈ ವೈರಸ್ ಹರಡುವ ಸಂಭವ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಕೋಳಿ ಮತ್ತು ಮೊಟ್ಟೆಯನ್ನು ಸೇವಿಸಲು ಯಾವುದೇ ನಿಬರ್ಂಧ ಇರುವುದಿಲ್ಲ. ಆದರೆ ಮೊಟ್ಟೆ ಮತ್ತು ಕೋಳಿ ಮಾಂಸವನ್ನು ಚೆನ್ನಾಗಿ ಬೇಯಿಸಿ ಆಹಾರವಾಗಿ ಉಪಯೋಗಿಸಬಹುದು ಎಂದಿದ್ದಾರೆ. ನಮ್ಮ ಭಾರತೀಯ ಅಡಿಗೆ ಪದ್ಧತಿಯಲ್ಲಿ ಈ ವೈರಸ್…
ಧಾರವಾಡ : ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ, ವೇತನ ಪತ್ರ, ಬ್ಯಾಂಕ್ ಸ್ಟೇಟ್ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು. ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು. ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು…
ಬೆಂಗಳೂರು: ಜಯನಗರ ಕ್ಷೇತ್ರದ ಕಾಂಗ್ರೆಸ್ ಮಾಜಿ ಸಚಿವೆ ಸೌಮ್ಯ ರೆಡ್ಡಿ ಅವರ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನೀಡಿದ್ದಂತ ತೀರ್ಪು ಪ್ರಶ್ನಿಸಿ ಶಾಸಕ ಸಿ.ಕೆ ರಾಮಮೂರ್ತಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ, ಬಿಗ್ ಶಾಕ್ ನೀಡಿದೆ. ಹೀಗಾಗಿ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿಗೆ ಸಂಕಷ್ಟ ಎದುರಾದಂತೆ ಆಗಿದೆ. ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಅವರ ಶಾಸಕ ಸ್ಥಾನ ಅಸಿಂಧುಗೊಳಿಸುವಂತ ಕೋರಿ ಮಾಜಿ ಶಾಸಕಿ ಸೌಮ್ಯಾರೆಡ್ಡಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್ ನ್ಯಾಯಪೀಠವು ಡಿವಿಡಿ ಸೇರಿದಂತೆ 10 ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚಿಸಿತ್ತು. ಫೆಬ್ರವರಿ.14ರವರೆಗೆ ಡಿವಿಡಿ ಸೇರಿದಂತೆ ಇತರೆ ದಾಖಲೆ ಸಲ್ಲಿಸಲು ಸೌಮ್ಯಾರೆಡ್ಡಿ ಅವರಿಗೆ ಹೈಕೋರ್ಟ್ ಅವಕಾಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಶಾಸಕ ಸಿ.ಕೆ ರಾಮಮೂರ್ತಿ ಸುಪ್ರೀಂ ಕೋರ್ಟ್ ಗೆ…
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿದೆ. ಈ ಸಮಯದಲ್ಲಿ ನೀವು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಸ್ವಲ್ಪ ಎಚ್ಚರ ತಪ್ಪಿದರೂ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಲು ಶುರುಮಾಡುತ್ತದೆ. ಈ ಕಾರಣಕ್ಕಾಗಿ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿ ಇರುವುದು ಒಳ್ಳೆಯದು. ಕಾರ್ಮಿಕ ವರ್ಗಕ್ಕೆ ಸಲಹೆಗಳು ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಲೋಟ ಅಥವಾ ಅಧಕ್ಕಿಂತ ಹೆಚ್ಚು ನೀರು ಕುಡಿಯಬೇಕು. ನೆರಳಿನಲ್ಲಿ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ ತಾತ್ಕಾಲಿಕ ಶೆಡ್ ಗಳನ್ನು ನಿರ್ಮಿಸಿರಬೇಕು. ಹೊರಾಂಗಣ ಚಟುವಟಿಕೆಗಳಲ್ಲಿ ಕೆಲಸಗಾರರಿಗೆ ಪ್ರತಿ ಗಂಟೆಗೆ 5 ನಿಮಿಷಗಳ ಬಿಡುವು ನೀಡಬೇಕು. ಸೂರ್ಯನ ಕಿರಣಗಳು ನೇರವಾಗಿ ಮೈಮೇಲೆ ಬೀಳದಂತೆ ಕೆಲಸಾಗರರು ಎಚ್ಚರವಹಿಸಬೇಕು. ಶ್ರಮದಾಯಕ, ಹೊರಾಂಗಣ ಚಟುವಟಿಕೆಗಳನ್ನು ಬೆಳಿಗ್ಗೆ ಅಥವಾ ಸಂಜೆಯ ಸಮಯದಲ್ಲಿ ನಿರ್ವಹಿಸುವಂತೆ ವೇಳಾಪಟ್ಟಿಯನ್ನು ಸಿದ್ಧಗೊಳಿಸಬೇಕು. ಗರ್ಭಿಣಿಯರು, ನಿಗದಿತ ಅನಾರೋಗ್ಯ ಸಮಸ್ಯೆಗೆ ಔಷಧೋಪಚಾರ ಪಡೆಯುತ್ತಿರುವವರು ಬಿಸಿಲಿನಲ್ಲಿ ಕಾರ್ಯನಿರ್ವಹಿಸುವ ಮೊದಲು ವೈದ್ಯರ ಸಲಹೆ ಪಡೆಯಬೇಕು. https://twitter.com/KarnatakaVarthe/status/1896547816555848124 ಬಿಸಿಲ ಬೇಗೆಗೆ ದೇಹದ…
ಬೆಂಗಳೂರು: ಮಹಿಳೆಯರು ತಮ್ಮ ಆರೋಗ್ಯ ಬಗ್ಗೆ ಕಾಳಜಿ ವಹಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಲ್ಟಿಯಸ್ ಆಸ್ಪತ್ರೆಯ ನೇತೃತ್ವದಲ್ಲಿ “ಮಹಿಳಾ ದಿನಾಚರಣೆ” ಪ್ರಯುಕ್ತವಾಗಿ 3ನೇ ಆವೃತ್ತಿಯ “ಮಹಿಳಾ ವಾಕಥಾನ್”ನನ್ನು ಆಯೋಜಿಸಲಾಗಿತ್ತು. ಬೆಂಗಳೂರಿನ ಕಲ್ಯಾಣ ನಗರದ ಕೆಬಿಸಿ ಬ್ಯಾಸ್ಕೆಟ್ ಬಾಲ್ ಕೋರ್ಟ್ನಿಂದ ಬೆಳಗ್ಗೆ 6 ಗಂಟೆಗೆ ಪ್ರಾರಂಭಗೊಂಡ ವಾಕಥಾನ್ನನ್ನು ಆಲ್ಟಿಯಸ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಪ್ರಿಯಾ ಎಸ್. ಪಿ. ಪಾಟೀಲ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕುಟುಂಬ ನಿರ್ವಹಣೆಯ ಜವಾಬ್ದಾರಿ ನಿಭಾಯಿಸುವ ಭರದಲ್ಲಿ ತಮ್ಮ ಆರೋಗ್ಯದ ಬಗ್ಗೆಯೇ ಮಹಿಳೆಯರು ನಿರ್ಲಕ್ಷಿಸುತ್ತಿದ್ದಾರೆ. ಶೇ.70 ರಷ್ಟು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಅನೇಕ ಅಧ್ಯಯನಗಳು ತಿಳಿಸಿವೆ. ಇದರಿಂದ ಮಹಿಳೆಯರು ಅನೇಕ ಆರೋಗ್ಯ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಮಹಿಳೆಯರೂ ಸಹ ಕುಟುಂಬ ನಿರ್ಹಣೆಯ ಜೊತೆ ಜೊತೆಗೆ ತಮ್ಮ ಆರೋಗ್ಯ ನಿಭಾಯಿಸಲು ಸಮಯ ಮೀಸಲಿಡಬೇಕು. ನಿತ್ಯ ದೈಹಿಕ ವ್ಯಾಯಾಮ ಮಾಡುವುದು, ಪೌಷ್ಠಿಕಾಂಶಯುಕ್ತ ಆಹಾರ ಸೇವಿಸುವುದರ ಬಗ್ಗೆ ಗಮನವಹಿಸಬೇಕು ಎಂದರು.…
ಮಂಡ್ಯ: ಜಿಲ್ಲೆಯ ದೇವರ ಪ್ರಸಾದ ಸೇವಿಸಿದಂತ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನರಹಳ್ಳಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ನರಹಳ್ಳಿಯಲ್ಲಿ ನಿನ್ನೆ ಗ್ರಾಮದ ಚನ್ನಬೀರೇಶ್ವರ ಹಬ್ಬವನ್ನು ನಡೆಸಲಾಗಿತ್ತು. ಈ ಹಬ್ಬದ ಸಂದರ್ಭದಲ್ಲಿ ಪ್ರಸಾದವನ್ನು ಜನರಿಗೆ ವಿತರಿಸಲಾಗಿತ್ತು. ಇಂತಹ ಪ್ರಾಸದ ತಿಂದಂತ 50ಕ್ಕೂ ಹೆಚ್ಚು ಜನರಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥರಾಗಿದ್ದಾರೆ. ಅವರನ್ನು ಪಾಂಡವಪುರ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದೀಗ ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಜನರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. https://kannadanewsnow.com/kannada/in-a-shocking-incident-in-the-state-a-couple-was-brutally-murdered-in-a-farmhouse/ https://kannadanewsnow.com/kannada/jds-to-stage-protest-near-gandhi-statue-in-vidhana-soudha-demanding-release-of-grihalakshmi-funds-tomorrow/
ಮೈಸೂರು: ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತ ಘಟನೆ ಎನ್ನುವಂತೆ ತೋಟದ ಮನೆಯಲ್ಲಿದ್ದಂತ ದಂಪತಿಗಳನ್ನು ಒಳಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕಗ್ಗೊಲೆ ಮಾಡಿರುವಂತ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ನಾಡಪನಳ್ಳಿಯಲ್ಲಿ ತೋಟದ ಮನೆಯಲ್ಲಿ ರಂಗಸ್ವಾಮಿ ಗೌಡ(65) ಹಾಗೂ ಶಾಂತಮ್ಮ ಎಂಬುವರು ವಾಸವಾಗಿದ್ದರು. ಅವರನ್ನು ಒಳಕಲ್ಲಿನಿಂದ ಜಜ್ಜಿ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ದುಷ್ಕರ್ಮಿಗಳ ಈ ಕಗ್ಗೊಲೆಯಿಂದಾಗಿ ಮೈಸೂರು ಜಿಲ್ಲೆಯ ತೋಟದ ಮನೆಯ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಿಳಿಕೆರೆ ಠಆಣೆಯ ಪೊಲೀಸರು ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದಾರೆ. ದಂಪತಿಗಳ ಕೊಲೆಯ ಹಿಂದಿನ ಕಾರಣ ತನಿಖೆಯ ನಂತ್ರವೇ ತಿಳಿಯಬೇಕಿದೆ. https://kannadanewsnow.com/kannada/jds-to-stage-protest-near-gandhi-statue-in-vidhana-soudha-demanding-release-of-grihalakshmi-funds-tomorrow/ https://kannadanewsnow.com/kannada/dont-shut-down-9-universities-in-karnataka-bjp-delegation-to-governor/
ಬೆಂಗಳೂರು : ಈ ಪ್ರತಿಭಟನೆ ಇವತ್ತು ಬೆಂಗಳೂರು ನಗರದಲ್ಲಿ ಪ್ರಾರಂಭ ಮಾಡಿದ್ದೀವಿ. ಇದು ಇಡೀ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ನಮ್ಮ ಹೋರಾಟ ಮುದುವರೆಯುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಗೃಹಲಕ್ಷ್ಮಿ ಹಣ ಬಿಡುಗಡೆ ಆಗ್ರಹಿಸಿ ನಾಳೆ (ಮಂಗಳವಾರ ) ನಮ್ಮ ಪಕ್ಷದ ಶಾಸಕರು, ವಿಧಾನಪರಿಷತ್ ಸದ್ಯಸರು ಎಲ್ಲರೂ ಸೇರಿ ವಿಧಾನಸೌಧದ ಮುಂಭಾಗ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದ್ದಾರೆ. ಗೃಹಲಕ್ಷ್ಮೀ ಹಣ ಬಿಡುಗಡೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಂತರ ಮಾಧ್ಯಮಗಳ ಜತೆ ಮಾತನಾಡಿದ ನಿಖಿಲ್ ಅವರು ; ನಮ್ಮ ಹೋರಾಟ ಮುದುವರೆಯುತ್ತೆ ಇಲ್ಲಿಗೆ ನಿಲ್ಲುವುದಿಲ್ಲ, ಇಡೀ ರಾಜ್ಯಾದ್ಯಂತ ನಮ್ಮ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟದ ಕರೆ ಕೊಟ್ಟರು. ನಾಡಿನ ಜನತೆಯ ಪರವಾಗಿ ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡ್ತೀನಿ ಗೃಹಲಕ್ಷ್ಮಿ ಯಾವ ದಿನಾಂಕಕ್ಕೆ ಕೊಡ್ತೀರಾ.? ಕ್ಯಾಲೆಂಡರ್ ನಲ್ಲಿ ಯಾವ ದಿನಾಂಕಕ್ಕೆ ಜಮೆ ಮಾಡ್ತೀರಾ ಎಂದು ಉತ್ತರ ಕೊಡಬೇಕು ಎಂದು ನಿಖಿಲ್…














