Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಭ್ರಷ್ಟಾಚಾರದ ಹಗರಣಗಳ ಕುರಿತು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರು ಬಾಯಿ ಬಿಡುತ್ತಿಲ್ಲವೇಕೆ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನೆಯನ್ನು ಮುಂದಿಟ್ಟರು. ವಿಧಾನಸೌಧದ 1ನೇ ಮಹಡಿಯ ಕೊಠಡಿ ಸಂಖ್ಯೆ 155ರಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆ (ಝೀರೊ ಟಾಲರೆನ್ಸ್ ಫಾರ್ ಕರಪ್ಶನ್) ಎಂದು ಹೇಳಿಕೆ ಕೊಟ್ಟ ರಾಹುಲ್ ಗಾಂಧಿಯವರು ಎಲ್ಲಿ ಹೋಗಿದ್ದಾರೆ? ಯಾಕೆ ಕರ್ನಾಟಕದ ಬಗ್ಗೆ ಅವರು ಬಾಯಿ ಬಿಚ್ಚಿಲ್ಲ? ಭ್ರಷ್ಟಾಚಾರಕ್ಕೆ ಅವರ ಅನುಮತಿ ಇದೆಯೇ? ಅಥವಾ ಇಲ್ಲಿನ ವಿಚಾರಗಳು ಅವರ ಗಮನಕ್ಕೆ ಬಂದಿಲ್ಲವೇ ಎಂದು ಕೇಳಿದರು. ಇದೇ ರಾಜ್ಯದವರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಬಿಜೆಪಿ ದಲಿತ ಸಮಸ್ಯೆಗಳನ್ನು ಬಿಚ್ಚಿಟ್ಟು ಹಾಗೂ ಹಗರಣಗಳನ್ನು ಮುಂದಿಟ್ಟು ಹೋರಾಡಿದಾಗ ಏನೂ ಅನಿಸಿಲ್ಲವೇ? ಅವರು ಬಾಯಿ ಮುಚ್ಚಿ ಕುಳಿತಿದ್ದೇಕೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಸಂಪೂರ್ಣ ಭ್ರಷ್ಟಾಚಾರದಲ್ಲಿ ನಿರತವಾಗಿದೆ. ಅದರ ವಿರುದ್ಧ ಬಿಜೆಪಿ ನಿರಂತರ ಹೋರಾಟಗಳನ್ನು…
ಕೇರಳ: ‘ಆಮೆನ್’ ಚಿತ್ರದಲ್ಲಿನ ಪಾತ್ರಕ್ಕಾಗಿ ಹೆಸರುವಾಸಿಯಾದ ಮಲಯಾಳಿ ನಟ ನಿರ್ಮಲ್ ಬೆನ್ನಿ ಅವರು ಆಗಸ್ಟ್ 23, 2024 ರಂದು ತಮ್ಮ 37 ನೇ ವಯಸ್ಸಿನಲ್ಲಿ ದುರಂತವಾಗಿ ನಿಧನರಾದರು. ಈ ಹೃದಯ ವಿದ್ರಾವಕ ಸುದ್ದಿಯನ್ನು ಅವರ ಆಪ್ತ ಸ್ನೇಹಿತ ಮತ್ತು ನಿರ್ಮಾಪಕ ಸಂಜಯ್ ಪಡಿಯೂರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ತಿರುವನಂತಪುರಂನಲ್ಲಿ ನಿರ್ಮಲ್ ಹೃದಯಾಘಾತದಿಂದ ನಿಧನರಾದರು ಎಂದು ಸಂಜಯ್ ಫೇಸ್ಬುಕ್ ಪೋಸ್ಟ್ನಲ್ಲಿ ಬಹಿರಂಗಪಡಿಸಿದ್ದಾರೆ. ನನ್ನ ಆತ್ಮೀಯ ಸ್ನೇಹಿತನಿಗೆ ವಿದಾಯ ಹೇಳುತ್ತಿದ್ದೇನೆ… ‘ಆಮೆನ್’ ನ ಕೊಚಚನ್ ಪಾತ್ರ ಮತ್ತು ನನ್ನ ‘ದೂರಂ’ ನಲ್ಲಿ ಅವರು ನಿರ್ವಹಿಸಿದ ಕೇಂದ್ರ ಪಾತ್ರ. ಹೃದಯಾಘಾತದಿಂದ ಅವರು ಇಂದು ಮುಂಜಾನೆ ನಿಧನರಾದರು. ನನ್ನ ಆತ್ಮೀಯ ಸ್ನೇಹಿತನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಪ್ರತಿಭಾನ್ವಿತ ನಟ ನಿರ್ಮಲ್ ಬೆನ್ನಿ, ಲಿಜೋ ಜೋಸ್ ಪೆಲ್ಲಿಸ್ಸೆರಿ ಅವರ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಚಿತ್ರ *ಆಮೆನ್ * ನಲ್ಲಿ ಕೊಚಾಚನ್ (ಕಿರಿಯ ಪುರೋಹಿತ) ಪಾತ್ರದ ಸ್ಮರಣೀಯ ಪಾತ್ರಕ್ಕಾಗಿ ಖ್ಯಾತಿಯನ್ನು ಪಡೆದರು. ಚಲನಚಿತ್ರೋದ್ಯಮದಲ್ಲಿ ಅವರ…
ಶಿವಮೊಗ್ಗ: ಶಿವಮೊಗ್ಗ ಮೆಸ್ಕಾಂ ನಗರ ಉಪ ವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ 11 ಕೆವಿ ಮಾಗ್ ಬದಲಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 25/08/2024 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಊರಗಡೂರು, ಸೂಳೆಬೈಲು, ಮದಾರಿಪಾಳ್ಯ, ಮಳಲಿಕೊಪ್ಪ, ಬೈಪಾಸ್ ರಸ್ತೆ, ವಾದಿ-ಎ-ಹುದಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಭದ್ರಾವತಿ: ದೀಕ್ಷಾ ಭೂಮಿ ಭೇಟಿಗೆ ಅರ್ಜಿ ಆಹ್ವಾನ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಬಸ್ಗಳ ವ್ಯವಸ್ಥೆಯನ್ನು ಕಲ್ಪಿಸುವ ಸಂಬxಧ ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ ಲಿಂಕ್ https://swdservices.karnataka.gov.in ಮೂಲಕ ಅರ್ಜಿಯನ್ನು ಆ.31 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಭದ್ರಾವತಿ, ದೂ.ಸಂ. : 08282-263761 ನ್ನು ಸಂಪರ್ಕಿಸುವುದು. ಲಿಡ್ಕರ್ ಸಾರ್ವಜನಿಕ ಕುಂದುಕೊರತೆ ಸಭೆ ಡಾ.ಬಾಬು ಜಗಜೀವನ ರಾಮ ಚರ್ಮ ಕೈಗಾರಿಕಾ ಅಭಿವೃದ್ಧಿ…
ಮಂಡ್ಯ : 12 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಪೋಕ್ಸೊ ಕಾಯ್ದೆಯಡಿ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ದಂಡವನ್ನು ಮಂಡ್ಯ ನಗರದ (ಪೋಕ್ಸೊ ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ತೀರ್ಪು ನೀಡಿದ್ದಾರೆ. ಮದ್ದೂರು ಪಟ್ಟಣದ ಸೋಮೇಗೌಡರ ಬೀದಿಯ ನಿವಾಸಿ ಸುನಿಲ್ಕುಮಾರ್ (28) ಬಿನ್ ಬಸಪ್ಪ ಎಂಬಾತ 12 ವರ್ಷದ ಬಾಲಕಿಯನ್ನು ಪುಸಲಾಯಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು. ಆರೋಪಿ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಇನ್ಸ್ಪೆಕ್ಟರ್ ಸಂತೋಷ್ ಅವರು ಸಮಗ್ರ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನೊಂದ ಬಾಲಕಿಗೆ 10.50 ಲಕ್ಷ ಪರಿಹಾರ ನೀಡುವಂತೆ ಆದೇಶಿಸಲಾಗಿದ್ದು, ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ.ಜೆ.ಪೂರ್ಣಿಮಾ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ವರದಿ : ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/traffic-jams-on-this-road-in-bengaluru-construction-of-underground-vehicle-tunnel/ https://kannadanewsnow.com/kannada/bengaluru-power-outages-in-these-areas-on-august-25/
ಬೆಂಗಳೂರು: ಬಿಜೆಪಿಯ ಶಾಸಕರುಗಳ ಮಾತುಕೇಳಿ 15 ಬಿಲ್ ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿಯವರ ಮಾತನ್ನೇ ಕೇಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಏಕಿರಬೇಕು. ಏನಾದರು ಸ್ಪಷ್ಟನೆ ಕೇಳಿದರೆ ನೀಡೋಣ. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ದಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ” ಎಂದರು. ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆಯೇ ಎಂದು ಕೇಳಿದಾಗ “ಸರ್ಕಾರ ಬೀಳಿಸಲು ಯಾವ ಪ್ರಯತ್ನ ಮಾಡಿದರೂ ಏನು ಆಗುವುದಿಲ್ಲ. ನಾವೂ ಸಹ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತೇವೆ” ಎಂದು ಖಾರವಾಗಿ ಉತ್ತರಿಸಿದರು. ಜಿಂದಾಲ್ ಗೆ ಭೂಮಿ ಮಾರಾಟ ಮಾಡಿದ್ದನ್ನು ಈ ಹಿಂದೆ ವಿರೋಧಿಸಿದ್ದ ಕಾಂಗ್ರೆಸ್ ಅದೇ ಜಿಂದಾಲ್ ಗೆ ಭೂಮಿ ಮಾರಾಟ ಮಾಡಿದೆ ಎಂದು ಕೇಳಿದಾಗ “ಉದ್ಯೋಗ ಸೃಷ್ಟಿಯಾಗಬೇಕು. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು. ಕರ್ನಾಟಕದಲ್ಲಿ ಇರುವ ಕೈಗಾರಿಕಾ ಕಾನೂನಿಗೆ ತಕ್ಕಂತೆ ಅವರಿಗೆ ಭೂಮಿ…
ಬೆಂಗಳೂರು: ನಗರದ ಪ್ರಮುಖ ರಸ್ತೆಯಾಗಿರುವಂತ ಹೆಬ್ಬಾಳ ಮೇಲ್ಸೇತುವೆ ಬಳಿಯಲ್ಲಿ ಸದಾ ಟ್ರಾಫಿಕ್ ಜಾಮ್ ಕಿರಿಕಿರಿ. ವಾಹನ ಸವಾರರು ಯಾವಾಗ್ಲೂ ಇದನ್ನು ಅನುಭವಿಸಿಯೇ ಇರುತ್ತಾರೆ. ಶೀಘ್ರವೇ ಈ ಟ್ರಾಫಿಕ್ ಜಾಮ್ ಕಿರಿಕಿರಿಗೆ ಮುಕ್ತಿ ದೊರೆಯಲಿದೆ. ಇದಕ್ಕಾಗಿ ಭೂಗತ ವಾಹನ ಸುರಂಗ ಮಾರ್ಗವನ್ನು ನಿರ್ಮಾಣ ಮಾಡಲಾಗುತ್ತಿದೆ. ಬೆಂಗಳೂರು ನಗರದ ಹೆಬ್ಬಾಳ ಮೇಲ್ಸೇತುವೆ ಪ್ರದೇಶದಿಂದ ಹೊಸೂರು ರಸ್ತೆಯ ಸಿಲ್ಕ್ ಬೋರ್ಡ್ ಜಂಕ್ಷನ್ನ ಮೇಲ್ಸೇತುವೆಯವರೆಗೆ ಭೂಗತ ವಾಹನ ಸುರಂಗ ಮಾರ್ಗವನ್ನು ನಿರ್ಮಿಸುವ ಯೋಜನೆಗೆ ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಯ ಅಂದಾಜು ವೆಚ್ಚ ₹12,690 ಕೋಟಿ. ಈ ಬಗ್ಗೆ ಮಾಹಿತಿ ನೀಡಿರುವ ಕಾನೂನು ಸಚಿವ ಎಚ್.ಕೆ.ಪಾಟೀಲ್, “ಬೆಂಗಳೂರು ನಗರದ ವಾಹನ ದಟ್ಟಣೆ ನಿವಾರಿಸಲು ಇದೊಂದು ಉತ್ತಮ ಯೋಜನೆ. ಸುಮಾರು 190 ಕಿ.ಮೀ ಉದ್ದದ ವಾಹನ ದಟ್ಟಣೆಯ 11 ಕಾರಿಡಾರ್ಗಳನ್ನು ಆಯ್ಕೆ ಮಾಡಿ, ಭೂಗತ ವಾಹನ ಸುರಂಗ ಮಾರ್ಗ ಸೂಕ್ತವೆಂದು ಅಭಿಪ್ರಾಯಪಡಲಾಗಿದೆ. ಅಲ್ಲದೇ ಬೆಂಗಳೂರು ಹೃದಯ ಭಾಗದಲ್ಲಿ ಒಟ್ಟು ಸುಮಾರು 99.50 ಕಿ.ಮೀ. ಉದ್ದದ 17…
ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ಅತ್ಯಾಚಾರ ಮತ್ತು ಕೊಲೆ ಆರೋಪಿ ಸಂಜೋಯ್ ರಾಯ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಘೋರ ಅಪರಾಧಕ್ಕೆ ಸಂಬಂಧಿಸಿದಂತೆ ಅವರ ಬಂಧನದ ನಂತರ ನ್ಯಾಯಾಲಯದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೋಲ್ಕತ್ತಾ ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಜಿ ಕಾರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಇತರ ನಾಲ್ವರು ವೈದ್ಯರಿಗೆ ಕೇಂದ್ರ ತನಿಖಾ ದಳ (ಸಿಬಿಐ) ಪಾಲಿಗ್ರಾಫ್ ಪರೀಕ್ಷೆ ನಡೆಸಲಿದೆ. ಸುಳ್ಳು ಪತ್ತೆ ಪರೀಕ್ಷೆಗೆ ಅನುಮತಿ ಪಡೆಯಲು ಸಿಬಿಐ ಆಗಸ್ಟ್ 9 ರಂದು ಕರ್ತವ್ಯದಲ್ಲಿದ್ದ ಘೋಷ್ ಮತ್ತು ನಾಲ್ವರು ವೈದ್ಯರನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿತು. ಅಂತಹ ಪರೀಕ್ಷೆಗಳಿಗೆ ನ್ಯಾಯಾಲಯದ ಅನುಮೋದನೆ ಮತ್ತು ಶಂಕಿತರ ಒಪ್ಪಿಗೆ ಎರಡೂ ಬೇಕಾಗುತ್ತವೆ. ಸಿಬಿಐ ಮನವಿಯನ್ನು ವಿಶೇಷ ನ್ಯಾಯಾಲಯ ಗುರುವಾರ ಪುರಸ್ಕರಿಸಿದೆ. ಏತನ್ಮಧ್ಯೆ, ಕೆಲಸವನ್ನು ಪುನರಾರಂಭಿಸುವಂತೆ ಸುಪ್ರೀಂ ಕೋರ್ಟ್ ಮನವಿ ಮಾಡಿದ ನಂತರ ಪ್ರಮುಖ ವೈದ್ಯರ ಸಂಘಗಳು ತಮ್ಮ 11 ದಿನಗಳ ಮುಷ್ಕರವನ್ನು ಹಿಂತೆಗೆದುಕೊಂಡಿದ್ದರಿಂದ…
ಬೆಂಗಳೂರು: ಮೂಡಾ ಹಗರಣದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ದಾಖಲೆ ಸಮೇತವೇ ಉತ್ತರ ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು; ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವ ಮೂಡಾ ಪ್ರಸ್ತಾವನೆಯನ್ನು ನಿರಾಕರಿಸಿ ಬದಲಿ ಜಮೀನನ್ನೇ ನೀಡುವಂತೆ ಒತ್ತಾಯ ಮಾಡಿರುವ ದಾಖಲೆಯನ್ನು ಕೇಂದ್ರ ಸಚಿವರು ಬಿಡುಗಡೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ.. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ ಎಂದು ದಾಖಲೆಯನ್ನು ಎಕ್ಸ್ ಖಾತೆಯಲ್ಲಿ ಟ್ಯಾಗ್ ಮಾಡಿದ್ದಾರೆ. https://twitter.com/hd_kumaraswamy/status/1826845737134547334 “50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ!!”…
ಮೈಸೂರು: ಮೈಸೂರು ಹಾಗೂ ಕೊಡಗು ಗಡಿ ಭಾಗದಲ್ಲಿ ಇಂದು ಮುಂಜಾಗನೆ ಭೂಕಂಪನದ ಅನುಭವ ಜನರಿಗೆ ಉಂಟಾಗಿದೆ. ಇದಲ್ಲದೇ ವಿಚಿತ್ರ ಶಬ್ದ ಕೂಡ ಭೂ ಕಂಪನದೊಂದಿಗೆ ಕೇಳಿ ಬಂದಿದ್ದು, ಜನರು ಭಯಭೀತಿಗೊಂಡಿರುವುದಾಗಿ ಹೇಳಲಾಗುತ್ತಿದೆ. ಇಂದು ಬೆಳಿಗ್ಗೆ 6.30ರ ವೇಳೆಗೆ ಕೊಡಗು, ಮೈಸೂರು ಗಡಿ ಭಾಗದಲ್ಲಿ ಎರಡರಿಂದ ಮೂರು ಸೆಕೆಂಡುಗಳ ಕಾಲ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದೆ. ಇದಲ್ಲದೇ ಭಾರೀ ಶಬ್ದ ಕೂಡ ಕೇಳಿ ಬಂದಿದೆ ಅಂತ ತಿಳಿದು ಬಂದಿದೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಬಸವನತ್ತೂರು, ಮುಳ್ಳುಸೋಗೆ ಸೇರಿ ಹಲವೆಡೆ ಭೂಮಿ ಕಂಪಿಸಿದಂತ ಅನುಭವ ಉಂಟಾಗಿರುವುದಾಗಿ ಜನರು ತಿಳಿಸಿದ್ದಾರೆ. ಭೂಮಿ ಕಂಪಿಸಿದ್ದರ ಜೊತೆಗೆ ಭಾರಿ ಶಬ್ದ, ಕೇಳಿ ಬಂದಿದೆಯಂತೆ. ವಿಚಿತ್ರ ಶಬ್ದವನ್ನು ಕೇಳಿದಂತ ಜನರು ಮನೆಯಿಂದ ಹೊರ ಓಡಿ ಬಂದು ಕೆಲ ಕಾಲ ಆತಂಕದಲ್ಲಿ ಬಯಲಲ್ಲೇ ಕಳೆಯುವಂತೆ ಆಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ, ಖಚಿತ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/majaa-rao-swimming-pool-minister-dinesh-gundu-rao-wake-up-jds/ https://kannadanewsnow.com/kannada/bengaluru-power-outages-in-these-areas-on-august-25/
ಬೆಂಗಳೂರು: ‘ಮಜಾ’ರಾವ್ ಸ್ವಿಮ್ಮಿಂಗ್ ‘ಪೂಲ್ ಮಿನಿಸ್ಟರ್’ ದಿನೇಶ್ ಗುಂಡೂರಾವ್ ಎದ್ದೇಳಿ… ಗಾಂಧಿನಗರವನ್ನು ‘ಗುಂಡಿ ನಗರ’ ಮಾಡಿರುವ ಮಿಸ್ಟರ್ ‘ಗುಂಡಿ’ರಾವ್; ನೀವು ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಾಡುತ್ತಾ ಆರೋಗ್ಯ ಇಲಾಖೆಯನ್ನೇ ಐಸಿಯುನಲ್ಲಿಟ್ಟಿದ್ದೀರಲ್ಲವೇ ಈ ಸಾಧನೆಗೆ ಯಾವ ಪ್ರಶಸ್ತಿ, ಕಿರೀಟ ಕೊಡಬೇಕು? ಎಂಬುದಾಗಿ ಜೆಡಿಎಸ್ ಪ್ರಶ್ನಿಸಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಹದಗೆಟ್ಟ ಆರೋಗ್ಯ ಇಲಾಖೆಯ ಸಚಿವರೇ.. ಜನರಿಗೆ ಉತ್ತಮ ಆರೋಗ್ಯ, ಚಿಕಿತ್ಸೆ ಸೌಲಭ್ಯ ಕಲ್ಪಿಸಲು ಕೈಲಾಗದೇ ಬೆಂಗಳೂರನ್ನು ‘ಡೆಂಘೀಯೂರು’ ಮಾಡಿದ ಭ್ರಷ್ಟ ಸರ್ಕಾರ ನಿಮ್ಮದು ಎಂದು ವಾಗ್ಧಾಳಿ ನಡೆಸಿದೆ. ಭ್ರಷ್ಟಚಾರದ ಆರೋಪದಲ್ಲಿ ಪ್ರಾಸಿಕ್ಯೂಷನ್ ಎದುರಿಸುತ್ತಿರುವ ಮೂಡರಾಮಯ್ಯನ ಪರವಾಗಿ ಊಳಿಡುತ್ತಾ ನಿಮ್ಮ ನರಿಬುದ್ಧಿ ಪ್ರದರ್ಶನ ಮಾಡುತ್ತಿದ್ದೀರಿ ಎಂದು ಕಿಡಿಕಾರಿದೆ. ಮುಖ್ಯಮಂತ್ರಿಗಳಿಗೆ “ವೈಟ್ನರ್” ಸಪ್ಲೈ ಮಾಡುವುದನ್ನು ಬಿಟ್ಟು ನಿಮ್ಮ ಆರೋಗ್ಯ ಇಲಾಖೆ ಬಗ್ಗೆ ಇನ್ನಾದರೂ ಗಮನ ಹರಿಸಿ.. ನಿಮ್ಮನ್ನು ಆಯ್ಕೆ ಮಾಡಿದ ಜನರ ಪ್ರಾಣ ಉಳಿಸಿ.. ಅವರ ಋಣ ತೀರಿಸಿ ಅಂತ ಆಗ್ರಹಿಸಿದೆ. https://twitter.com/JanataDal_S/status/1826885584037507200 https://kannadanewsnow.com/kannada/dgca-imposes-rs-1-crore-penalties-on-air-india/ https://kannadanewsnow.com/kannada/bengaluru-power-outages-in-these-areas-on-august-25/