Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾನ್ಯ ರಾಜ್ಯಪಾಲರನ್ನು ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಬಿಜೆಪಿ- ಜೆಡಿಎಸ್ ನಿಯೋಗವು ಇಂದು ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿದೆ. ಗ್ಯಾರಂಟಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಿಸಿದ್ದು ಇದು ಸಂಪೂರ್ಣವಾಗಿ ರಾಜ್ಯದ ಕಾಂಗ್ರೆಸ್ ಸರಕಾರದ ಅಸಾಂವಿಧಾನಿಕ ನಡೆ ಎಂಬುದನ್ನು ಗೌರವಾನ್ವಿತ ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು. ರಾಜ್ಯದ ಜನರ ತೆರಿಗೆ ಹಣದ ದುರುಪಯೋಗ ಆಗಿದೆ ಎಂದು ಮನದಟ್ಟು ಮಾಡಲಾಗಿದೆ ಎಂದರು. ಈ ಸರಕಾರಕ್ಕೆ ತಿಳಿಹೇಳುವ ಕೆಲಸ ಮಾಡುವಂತೆ ಹಾಗೂ ಮಧ್ಯಸ್ಥಿಕೆ ವಹಿಸಲು ಮನವಿ ಮಾಡಿದ್ದಾಗಿ ತಿಳಿಸಿದರು. ನನ್ನ ವಿಧಾನಸಭಾ ಕ್ಷೇತ್ರದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರು, ಶಾಲೆ ಮತ್ತು ಕಾಲೇಜುಗಳ ಉಸ್ತುವಾರಿ ಸಮಿತಿಗಳಿಗೆ ಶಿಕಾರಿಪುರ ತಾಲ್ಲೂಕಿನ…

Read More

ಬೆಂಗಳೂರು : ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ ಸಾಲಿನಲ್ಲಿದ್ದು, ಇದಕ್ಕೆ ವೀರಶೈವ, ಲಿಂಗಾಯತ ಮಠ ಮಾನ್ಯಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಕೊಡುಗೆ ಅಪಾರವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದಗಂಗೆ ಮಠ, ಸುತ್ತೂರು ಸಂಸ್ಥಾನ, ಸಿರಿಗೆರೆ ಸೇರಿದಂತೆ ನಮ್ಮ ಸಮಾಜದ ಹಲವು ಮಠಗಳು ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ಸಾವಿರಾರು ಪ್ರತಿಭಾವಂತರು ಇಂದು ದೇಶ, ವಿದೇಶಗಳಲ್ಲಿ ನಾಡಿಗೆ ಕೀರ್ತಿ ತಂದಿದ್ದಾರೆ ಎಂದು ತಿಳಿಸಿದರು. ಶ್ರೀ ಜಗದ್ಗುರು ರೇಣುಕಾಚಾರ್ಯರು ತಮ್ಮ ಜೀವನವನ್ನು ಕೇವಲ ಧಾರ್ಮಿಕ, ಆಧ್ಯಾತ್ಮಿಕತೆಗಷ್ಟೇ ಸೀಮಿತಗೊಳಿಸದೆ, ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದವರು. ಅವರು ಧರ್ಮ ದಂಡಯಾತ್ರೆ ಕೈಗೊಂಡು ವೀರಶೈವಧರ್ಮ ಕೇಂದ್ರಗಳು, ಭೂರುದ್ರ ಭಕ್ತ ಸಂಘಗಳನ್ನು ಸ್ಥಾಪಿಸಿ ಮಹಿಳೆಯರಿಗೆ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಅಗ್ರೇಸರರೆಂದರು.…

Read More

ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್-ಧಾನಪತ್ರವನ್ನು ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ “ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007” ನೀಡಿದೆ ಎಂದು ಪರಿಷತ್ನಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು. ಬುಧವಾರ ವಿಧಾನ ಪರಿಷತ್ನಲ್ಲಿ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, “ಕೇಂದ್ರ ಸರ್ಕಾರದ “ಇತ್ತೀಚಿನ ದಿನಗಳಲ್ಲಿ ಮಕ್ಕಳು ತಮ್ಮ ತಂದೆ-ತಾಯಿಯನ್ನೇ ಆರೈಕೆ ಮಾಡದಂತಹ ಹಲವರು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದು ವೇಳೆ ಮಕ್ಕಳು ಅಥವಾ ಸಂಬಂಧಿಕರು ತಮ್ಮನ್ನು ಆರೈಕೆ ಮಾಡದಿದ್ದರೆ ಅವರ ಹೆಸರಿಗೆ ಮಾಡಿರುವ ವಿಲ್ ಅಥವಾ ಧಾನಪತ್ರವನ್ನು ರದ್ದು ಮಾಡುವ ಅಧಿಕಾರ ಹಿರಿಯ ನಾಗರೀಕರಿಗೆ ಇದೆ” ಎಂದು ಮಾಹಿತಿ ನೀಡಿದರು. ಮುಂದುವರೆದು, “ ಕೇಂದ್ರ ಸರ್ಕಾರ 2007 ರಲ್ಲೇ ʼಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆʼ ಯನ್ನು ಜಾರಿಗೆ ತಂದಿದೆ. ಆದರೆ,…

Read More

ಶಿವಮೊಗ್ಗ: ಸಾಗರದ ಆನಂದಪುರ ಹೋಬಳಿಯ ನಾಗರೀಕ ಸನ್ಮಾನ ಸಮಿತಿಯಿಂದ ಮಾರ್ಚ್.15ರಂದು ಕಾಗೋಡು ತಿಮ್ಮಪ್ಪ ಅವರಿಗೆ ನಾಗರೀಕ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಅಂತ ಕಾಂಗ್ರೆಸ್ ಮುಖಂಡ ಸೋಮಶೇಖರ್ ಲಾವಿಗ್ಗೆರೆ ತಿಳಿಸಿದ್ದಾರೆ. ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್.15ರಂದು ಆನಂದಪುರದಲ್ಲಿ ಕಾಗೋಡು ತಿಮ್ಮಪ್ಪ ಅವರಿಗೆ ನಾಗರೀಕ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಶಾಸಕ ಗೋಪಾಲಕೃಷ್ಣ ಬೇಳೂರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿನಂದನ ನುಡಿಯಾಡಲಿದ್ದಾರೆ. ಕಾಗೋಡು ತಿಮ್ಮಪ್ಪ ಅವರ ವಿಶೇಷ ಭಾವಚಿತ್ರವನ್ನು ಶಾಲಾ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೆರವೇರಿಸಲಿದ್ದಾರೆ ಎಂದರು. ಈ ಕಾರ್ಯಕ್ರಮದಲ್ಲಿ ಬಿಆರ್ ಜಯಂತ್ ಅವರು ಪ್ರಾಸ್ತಾವಿಕ ನುಡಿಗಳನ್ನು ಆಡಲಿದ್ದಾರೆ. ಸಿಗಂದೂರು ಧರ್ಮದರ್ಶಿ ಡಾ.ರಾಮಪ್ಪ, ವಕೀಲ ಮತ್ತು ಖ್ಯಾತ ವಾಗ್ಮಿ ಸುಧೀರ್ ಕುಮಾರ್ ಮುರೊಳ್ಳಿ ಘನ ಉಪಸ್ಥಿತರಿರಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಗರೀಕ ಸನ್ಮಾನ ಸಮಿತಿಯ ಅಧ್ಯಕ್ಷ ಬಿ.ಟಾಕಪ್ಪ ಕಣ್ಣೂರು…

Read More

ಬೆಂಗಳೂರು: ರಾಜ್ಯದ ಕಟ್ಟಡ ಕಾರ್ಮಿಕರಿರುವಂತ ಸ್ಥಳಕ್ಕೆ ತೆರಳಿ ಅವರ ಆರೋಗ್ಯ ತಪಾಸಣೆ, ಅನಾರೋಗ್ಯಕ್ಕೆ ಚಿಕಿತ್ಸೆ ನೀಡುವಂತ ಸಂಚಾರಿ ವಾಹನಗಳಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಕಟ್ಟಡ ಕಾರ್ಮಿಕರಿರುವಂತ ಸ್ಥಳದಲ್ಲೇ ಸಂಚಾರಿ ವಾಹನಗಳ ಮೂಲಕ ಆರೋಗ್ಯ ತಪಾಸಣೆ, ಚಿಕಿತ್ಸೆ ದೊರೆಯಲಿದೆ. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೇ ದೇಶ ನಿರ್ಮಾತೃಗಳು ಎಂದರು. ಇಡೀ ದೇಶ ಕಾರ್ಮಿಕರ ಶ್ರಮವನ್ನು ಅವಲಂಬಿಸಿದೆ‌. ಸಮಾಜದಲ್ಲಿ ಒಂದೇ ವರ್ಗದವರು ದುಡಿಯುತ್ತಿರಬಾರದು, ಎಲ್ಲಾ ವರ್ಗದವರೂ ದುಡಿಯಬೇಕು. ಆಗ ಮಾತ್ರ ಬುದ್ದ, ಬಸವ, ಅಂಬೇಡ್ಕರ್ ಆಶಯದ ಸಮ ಸಮಾಜ ನಿರ್ಮಾಣ ಸಾಧ್ಯ. ಸಚಿವ ಸಂತೋಷ್ ಲಾಡ್ ಅವರ ಕಾಳಜಿ ಮತ್ತು ಕರ್ತವ್ಯಪ್ರಜ್ಞೆಯಿಂದಾಗಿ ಉಚಿತ ಸಂಚಾರಿ ಆಸ್ಪತ್ರೆಗಳನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರ ಸೆಸ್ ಹಣದಿಂದ…

Read More

ಮಡಿಕೇರಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ ‘ಯುವನಿಧಿ’ ಯೋಜನೆಯನ್ನು 2023 ರ ಡಿಸೆಂಬರ್, 26 ರಂದು ಚಾಲನೆ ನೀಡಲಾಗಿದೆ. 2023-24 ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ ‘ಯುವನಿಧಿ’ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಪದವೀಧರರಿಗೆ ಪ್ರತಿ ತಿಂಗಳು ರೂ.3 ಸಾವಿರ ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ.1500 ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ. ಈಗಾಗಲೇ ನೋಂದಾಯಿಸಿಕೊಂಡು ಹಣ ಪಡೆಯುತ್ತಿರುವ ಫಲಾನುಭವಿಗಳು, ಪ್ರತಿ ಮೂರು ತಿಂಗಳಿಗೊಮ್ಮೆ ಸ್ವಯಂ ಘೋಷಣೆಯನ್ನು ಮಾಡಿಕೊಳ್ಳಬೇಕಾಗುತ್ತದೆ. ಮಾರ್ಚ್, ಏಪ್ರಿಲ್, ಮೇ ಮಾಹೆಯ ಸ್ವಯಂ ಘೋಷಣೆಯನ್ನು…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಉಪ ವಿಭಾಗಾಧಿಕಾರಿ ಯತೀಶ್ ಆರ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರ ಆರತಕ್ಷತೆ ಸಮಾರಂಭದಲ್ಲಿ ಭಾಗಿಯಾದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ದಂಪತಿಗಳಿಗೆ ಶುಭ ಕೋರಿದರು. ಇಂದು ಬೆಂಗಳೂರಿನ ಬನಶಂಕರಿ 3ನೇ ಹಂತದಲ್ಲಿರುವಂತ ಹೊಸಕೆರೆ ಹಳ್ಳಿಯ ವಿ.ಲೆಗೆಸಿ ಕನ್ವಂನ್ಷನ್ ಸೆಂಟರ್ ನಲ್ಲಿ ಸಾಗರ ಉಪ ವಿಭಾಗಾಧಿಕಾರಿ ಯತೀಶ್ ಆರ್ ಹಾಗೂ ಡಾ.ಪ್ರಿಯಾಂಕಾ.ಎಂ.ಎಸ್ ಅವರ ಆರತಕ್ಷತೆ ಸಮಾರಂಭ ನಡೆಯಿತು. ಇಂದಿನ ಸಾಗರ ಉಪ ವಿಭಾಗಾಧಿಕಾರಿ ಅವರ ಆರತಕ್ಷತೆ ಸಮಾರಂಭದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭಾಗಿಯಾಗಿ, ಯತೀಶ್ ಆರ್ ಹಾಗೂ ಡಾ.ಪ್ರಿಯಾಂಕಾ ಎಂ.ಎಸ್ ದಂಪತಿಗಳಿಗೆ ಶುಭ ಕೋರಿದರು. ಅಂದಹಾಗೇ ನಾಳೆ ಬೆಳಗ್ಗೆ 10.30ಕ್ಕೆ ಸಾಗರ ಉಪ ವಿಭಾಗಾಧಿಕಾರಿ ಯತೀಶ್ ಆರ್ ಹಾಗೂ ಡಾ.ಪ್ರಿಯಾಂಕಾ ಎಂ.ಎಸ್ ಅವರು ವಿವಾಹ ನೆರವೇರಲಿದೆ. ಅದಕ್ಕೂ ಪೂರ್ವಭಾವಿಯಾಗಿ ಇಂದು ರಿಸೆಪ್ಷನ್ ನಡೆಯಿತು. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/morarji-desai-residential-school-extends-last-date-for-admission-to-class-6/ https://kannadanewsnow.com/kannada/good-news-for-street-vendors-daily-toll-collection-stopped/

Read More

ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ವ್ಯಾಪ್ತಿ ಬೀದಿ ಬದಿ ವ್ಯಾಪಾರಿಗಳ ಹಿತದೃಷ್ಠಿಯಿಂದ 2025ರ ಮಾರ್ಚ್ 10 ರಿಂದ ಬೀದಿ ಬದಿ ವ್ಯಾಪಾರಸ್ಥರಿಂದ ದಿನ ವಹಿ ಸುಂಕ ವಸೂಲಿ ಮಾಡುವುದನ್ನು ರದ್ದುಪಡಿಸಲಾಗಿರುತ್ತದೆ. ಇನ್ನೂ ಮುಂದೆ ಗುತ್ತಿಗೆದಾರರು ಮತ್ತು ಅನಧಿಕೃತ ವ್ಯಕ್ತಿಗಳು ಬೀದಿ ಬದಿ ವ್ಯಾಪಾರಸ್ಥರ ಬಳಿ ಬಂದು ಸುಂಕ ಕೇಳಿದ್ದಲ್ಲಿ ಕೂಡಲೇ ನಗರಸಭೆಗೆ ದೂರು ನೀಡಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ. https://kannadanewsnow.com/kannada/morarji-desai-residential-school-extends-last-date-for-admission-to-class-6/ https://kannadanewsnow.com/kannada/applications-invited-for-yuvanidhi-scheme-for-degree-diploma-students/

Read More

ಬಳ್ಳಾರಿ: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸಿಇ) ಗಳ 2025-26 ನೇ ಶೈಕ್ಷಣಿಕ ಸಾಲಿಗೆ 6 ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾ.25 ರ ವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಆಸಕ್ತಿಯುಳ್ಳ ಐದನೇ ತರಗತಿ ಉತ್ತೀರ್ಣ ಹೊಂದಿದ ವಿದ್ಯಾರ್ಥಿಗಳು ಸೇವಾಸಿಂಧು ಆನ್‌ಲೈನ್ ಪೋರ್ಟಲ್ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಶಾಲೆಗಳ ವಿವರ: ಬಳ್ಳಾರಿ ತಾಲ್ಲೂಕಿನ ಕೊಳಗಲ್ಲಿನ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಸಿ)ಯ ಪ್ರಾಂಶುಪಾಲರ ಮೊ. 7353346069. ಸಂಡೂರು ತಾಲ್ಲೂಕಿನ ತೋರಣಗಲ್ಲು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.9480933730. ಕಂಪ್ಲಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.9113280239. ಕುರುಗೋಡು ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ…

Read More

ಧಾರವಾಡ : ಧಾರವಾಡ ಜಿಲ್ಲೆಯ ರೈತ ಮಕ್ಕಳಿಗಾಗಿ 2025-26 ನೇ ಸಾಲಿಗೆ 10 ತಿಂಗಳ (ಮೇ 02, 2025 ರಿಂದ ಫೆಬ್ರವರಿ 28, 2026 ರವರೆಗೆ) ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಮಹಿಳಾ-05 ಹಾಗೂ ಪುರುಷ–10, ಒಟ್ಟು–15 ಅಭ್ಯರ್ಥಿಗಳಿಗೆ ತೋಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಫಾರಂನ್ನು ಧಾರವಾಡ ತೋಟಗಾರಿಕೆ ಉಪನಿರ್ದೇಶಕರ ಕಛೇರಿಯಲ್ಲಿ ಅಥವಾ ಇಲಾಖಾ ವೆಬ್‍ಸೈಟ್ https://horticulturedir.karnataka.gov.in ನಲ್ಲಿ ಮಾರ್ಚ್ 31, 2025 ರೊಳಗಾಗಿ ಡೌನಲೋಡ್ ಮಾಡಿಕೊಂಡು, ಅರ್ಜಿ ಶುಲ್ಕದ ಬಾಬತ್ತು ಸಾಮಾನ್ಯ ಅಭ್ಯರ್ಥಿಗಳಗೆ ರೂ. 30 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ. 15 ಮೌಲ್ಯದ ಇಂಡಿಯನ್ ಪೆÇೀಸ್ಟಲ್ ಆರ್ಡರ್ (ಐಪಿಓ) ಅಥವಾ ಬ್ಯಾಂಕ್ ಡಿಮಾಂಡ್ ಡ್ರಾಫ್ಟ್‍ನ್ನು ತೋಟಗಾರಿಕೆ ಉಪನಿರ್ದೇಶಕರು (ಜಿಲ್ಲಾಪಂಚಾಯತ) ಧಾರವಾಡ ಅವರ ಹೆಸರಿನಲ್ಲಿ ಪಡೆದು, ಭರ್ತಿ ಮಾಡಿದ ಅಗತ್ಯ ದಾಖಲಾತಿಗಳೊಂದಿಗೆ ಏಪ್ರಿಲ್ 1, 2025 ರೊಳಗಾಗಿ ಧಾರವಾಡ ತೋಟಗಾರಿಕೆ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ…

Read More