Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ OBC ಸಮಿತಿಯ ಸಭೆಯಲ್ಲಿ ಹಿಂದುಳಿದವರು ದಲಿತರು ಅಲ್ಪಸಂಖ್ಯಾತರ ಅಭಿವೃದ್ಧಿಯಾಗಿಲ್ಲ ಎಂದರೆ ದೇಶದ ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆ ಸಭೆಯಲ್ಲಿ ಹೇಳಿದ್ದಾರೆ. ಬಿಜೆಪಿ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ವಿರೋಧಿ, ಎಂದೂ ಮೀಸಲಾತಿಯ ಪರ ಬಿಜೆಪಿ ಇರಲಿಲ್ಲ ಎಂಬ ಆರೋಪವನ್ನು ಮಾಡಿದ್ದಾರೆ ಎಂದಿದ್ದಾರೆ. ಸಿದ್ದರಾಮಯ್ಯನವರು ತಮ್ಮನ್ನು ತಾವು ಅಹಿಂದ ಚಾಂಪಿಯನ್ ಎಂದು ಕರೆದುಕೊಳ್ಳುತ್ತಾರೆ, ಇತ್ತೀಚೆಗೆ ಕಾಂತರಾಜು ವರದಿಯನ್ನು ಕ್ಯಾಬಿನೆಟ್ ಸಭೆಯಲ್ಲಿ ಮಂಡಿಸುವುದಾಗಿ ಬೊಗಳೆ ಹೊಡೆಯತ್ತಿದ್ದವರು ದೆಹಲಿಯಿಂದ ದೂರವಾಣಿ ಕರೆ ಬಂದ ನಂತರ, ರಾಹುಲ್ ಗಾಂಧಿಯವರು ಆದೇಶ ಮಾಡಿದ್ದಾರೆಂದು 165 ಕೋಟಿ ಖರ್ಚು ಮಾಡಿ ಸಿದ್ಧಪಡಿಸಿದ್ದ ಕಾಂತರಾಜು ವರದಿಯನ್ನು ಕಸದ ಬುಟ್ಟಿಗೆ ಹಾಕಿದ್ದೀರಲ್ಲವೇ? ಆಗ ನಿಮ್ಮ ಹಿಂದುಳಿದವರ ಕಾಳಜಿ ಎಲ್ಲಿ ಹೋಗಿತ್ತು ? ಎಂದು…

Read More

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಢಾಂಗದ ಬಳಿಯಲ್ಲಿ ಆರ್ ಸಿ ಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದರು. ಈ ಘಟನೆ ಸಂಬಂಧ ಆರ್ ಸಿ ಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಸಮಿತಿಯಿಂದ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗಿತ್ತು. ಈ ವರದಿಯ ಕುರಿತಂತೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗಿದೆ. ಸಂಪುಟ ಸಭೆಯಲ್ಲಿ ಆರ್ ಸಿ ಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅಲ್ಲದೇ ರಾಜ್ಯ ಕ್ರಿಕೆಟ್ ಸಂಸ್ಥೆಯ ವಿರುದ್ಧವೂ ಕ್ರಿಮಿನಲ್ ಕೇಸ್ ಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇನ್ನೂ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯ ವರದಿ ದೃಢೀಕರಿಸಲಾಗಿದೆ. ಅಲ್ಲದೇ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ. ಹೀಗಾಗಿ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಸಾಧ್ಯತೆ…

Read More

ಬೆಂಗಳೂರ : ದೇಶದಲ್ಲಿ ವೈದ್ಯಕೀಯ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ಅತ್ಯುತ್ತಮ ಕಾಲೇಜುಗಳಿಗೆ ನೆಲೆಯಾಗಿದೆ. ದೇಶದ ಪ್ರತಿಷ್ಠಿತ ಸಂಸ್ಥೆಗಳು ನಡೆಸಿರುವ ಸಮೀಕ್ಷೆಯಲ್ಲೂ ಇದು ಶ್ರುತಪಟ್ಟಿದೆ. ದೇಶದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಇಂಡಿಯಾ ಟುಡೇ 2024-25 ಸಾಲಿನಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಹತ್ತು ಶ್ರೇಷ್ಠ ಕಾಲೇಜುಗಳ ಪಟ್ಟಿಯನ್ನು ನೀಡಲಾಗಿದೆ. ಈ ಪಟ್ಟಿಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ ಬೆಂಗಳೂರು ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯು ಎರಡನೇ ಸ್ಥಾನ‌ ಪಡೆದಿದೆ. ಈ ಕುರಿತು ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ‌ ಮೊಹಮ್ಮದ್ ಮೊಸಿನ್, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ. ಬಿ.ಎಲ್. ಸುಜಾತಾ ರಾಠೋಡ್ ಮತ್ತು ಬಿಎಂಸಿಆರ್‌ಐನ ಡೀನ್ ಹಾಗೂ ನಿರ್ದೇಶಕ ಡಾ. ರಾಮೇಶ್ ಕೃಷ್ಣ ಇದು ಬಿಎಂಸಿಆರ್ ಐಗೆ ಸಿಕ್ಕಿದ ಮನ್ನಣೆಯಾಗಿದೆ ಎಂದರು. ಮೆಡಿಕಲ್ ಕಾಲೇಜುಗಳಲ್ಲಿ ನೀಡುತ್ತಿರುವ ಉತ್ತಮ ಶಿಕ್ಷಣ, ಆಧುನಿಕ ಸೌಲಭ್ಯಗಳು ಹಾಗೂ ಅತ್ಯಾಧುನಿಕ ಮೂಲ ಸೌಕರ್ಯ ಬಗ್ಗೆ ಅಧ್ಯಯನ ನಡೆಸಿ ಈ ಸಮೀಕ್ಷೆ ನಡೆಸಲಾಗಿದೆ. ಈ…

Read More

‘ಸ್ಟುಪಿಡ್ ಕ್ಯುಪಿಡ್’, ‘ಪ್ರೆಟಿ ಲಿಟಲ್ ಬೇಬಿ’ ಮತ್ತು ‘ಮಾಮಾ’ ನಂತಹ ಹಾಡುಗಳನ್ನು ಹಾಡುವ ಮೂಲಕ ಹೆಸರುವಾಸಿಯಾದ ಗಾಯಕಿ ಕೋನಿ ಫ್ರಾನ್ಸಿಸ್ “ತೀವ್ರ ನೋವಿಗೆ” ಚಿಕಿತ್ಸೆ ನೀಡಲು ಆಸ್ಪತ್ರೆಗೆ ದಾಖಲಾದ ಕೆಲವೇ ದಿನಗಳ ನಂತರ 87 ನೇ ವಯಸ್ಸಿನಲ್ಲಿ ನಿಧನರಾದರು. ಹಿರಿಯ ಸಂಗೀತಗಾರ್ತಿ ಜುಲೈ 16 ರಂದು 87 ನೇ ವಯಸ್ಸಿನಲ್ಲಿ ನಿಧನರಾದರು ಮತ್ತು ದುಃಖದ ಸುದ್ದಿಯನ್ನು ಅವರ ಸ್ನೇಹಿತ ರಾನ್ ರಾಬರ್ಟ್ಸ್ ಅವರು ಫೇಸ್‌ಬುಕ್‌ನಲ್ಲಿ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ ಎಂದು ದೃಢಪಡಿಸಿದರು. ನಿನ್ನೆ ರಾತ್ರಿ ನನ್ನ ಆತ್ಮೀಯ ಸ್ನೇಹಿತೆ ಕೋನಿ ಫ್ರಾನ್ಸಿಸ್ ಅವರ ನಿಧನದ ಬಗ್ಗೆ ನಾನು ಭಾರವಾದ ಹೃದಯ ಮತ್ತು ತೀವ್ರ ದುಃಖದಿಂದ ನಿಮಗೆ ತಿಳಿಸುತ್ತೇನೆ. ಈ ದುಃಖದ ಸುದ್ದಿಯನ್ನು ತಿಳಿದ ಮೊದಲಿಗರಲ್ಲಿ ಅವರ ಅಭಿಮಾನಿಗಳು ಕೋನಿ ಇದ್ದಾರೆ ಎಂದು ನನಗೆ ತಿಳಿದಿದೆ ಎಂಬುದಾಗಿ ಸ್ನೇಹಿತರು ತಿಳಿಸಿದ್ದಾರೆ. ‘ಪ್ರೆಟಿ ಲಿಟಲ್ ಬೇಬಿ’ ಹಿಟ್‌ಮೇಕರ್ ಜುಲೈ 2 ರಂದು “ತೀವ್ರ ನೋವು” ಅನುಭವಿಸಿದ ನಂತರ ಆಸ್ಪತ್ರೆಗೆ ದಾಖಲಾಗಿದ್ದೇನೆ ಮತ್ತು ಸ್ವಾತಂತ್ರ್ಯ ದಿನಾಚರಣೆಯ…

Read More

ಬೆಂಗಳೂರು: ಸಿಗಂದೂರು ಸೇತುವೆ ಉದ್ಘಾಟನೆ ವೇಳೆ ಶಿಷ್ಟಾಚಾರದ ಗಲಾಟೆ ಬರೀ ನಾಟಕವಾಗಿದೆ. ತಕರಾರು ತೆಗೆಯಿರಿ ಅಂತ ಸಿದ್ಧರಾಮಯ್ಯಗೆ ಯಡಿಯೂರಪ್ಪ ಹೇಳಿದ್ದರು. ಸೇತುವೆ ಉದ್ಘಾಟನೆಗೆ ಬರಬೇಡಿ ತಕರಾರು ತೆಗೆಯಿರಿ ಅಂತಾ ಹೇಳಿದ್ದರು. ನೀವು ಬಂದರೆ ವಿಜಯೇಂದ್ರ ಕುರ್ಚಿ ಹೋಗುತ್ತೆ ಬರಬೇಡಿ ಎಂದಿದ್ದರು ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,  ರಾಜಕೀಯವಾಗಿ ಕುಮಾರ್ ಬಂಗಾರಪ್ಪ ಅವರನ್ನು ಮುಗಿಸಲು ಬಿಎಸ್ ಯಡಿಯೂರಪ್ಪ ಯತ್ನಿಸಿದ್ದಾರೆ ಎಂಬುದಾಗಿ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಸಿದ್ಧರಾಮಯ್ಯ ಹೇಳಿರುವುದರಲ್ಲಿ ಏನೂ ತಪ್ಪಿಲ್ಲ. ಶಿವಮೊಗ್ಗದಲ್ಲಿ ಬಿಎಸ್ ಯಡಿಯೂರಪ್ಪ ಮಕ್ಕಳು ಬಿಟ್ಟರೆ ಬೇರೆ ಯಾರೂ ಬೆಳೆಯಬಾರದು. ಕುಮಾರ್ ಬಂಗಾರಪ್ಪ, ಹರತಾಳು ಹಾಲಪ್ಪ ಯಾರೂ ಬೆಳೆಯಬಾರದು. ಕುಮಾರ್ ಬಂಗಾರಪ್ಪ ಸ್ವಲ್ಪ ಹೋರಾಟ ಮಾಡಿದ್ದಕ್ಕೆ ರಾಘವೇಂದ್ರ ಗೆದ್ರು. ಇಲ್ಲದಿದ್ದರೇ ಈ ಸಲ ಬಿವೈ ರಾಘವೇಂದ್ರ ಸೋಲುತ್ತಿದ್ದರು ಎಂದರು. ಸಿದ್ಧರಾಮಯ್ಯ, ಯಡಿಯೂರಪ್ಪ ನಡುವೆ ದೊಡ್ಡ ಅಡ್ಜೆಸ್ಟ್ ಮೆಂಟ್ ಇದೆ. ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಪರ ಬಿಎಸ್…

Read More

ಬೆಂಗಳೂರು: ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗದ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಬಡ್ಡಿ ರಹಿತ 50 ಲಕ್ಷದವರೆಗೆ ಸಾಲಸೌಲಭ್ಯಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,  ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೋಸ್ಟ್ ಡಾಕ್ಟಲ್ & ಮಾಸ್ಟರ್ ಡಿಗ್ರಿ (ಇಂಜಿನಿಯರಿಂಗ್ & ಟೆಕ್ನಾಲಜಿ, ಮ್ಯಾನೇಜ್ ಮೆಂಟ್ & ಕಾಮರ್ಸ್, ಸೈನ್ಸ್ & ಟೆಕ್ನಾಲಜಿ, ಅಗ್ರಿಕಲ್ಟರ್ & ಅಲೈಡ್ ಸೈನ್ಸಸ್/ ಟೆಕ್ನಾಲಜಿ, ಮೆಡಿಸಿನ್, ಹುಮ್ಯಾನಿಟೀಸ್ & ಸೋಸಿಯಲ್ ಸೈನ್ಸಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ & 3ಬಿ ಸ ಸೇರಿದವರಿಗೆ ಸಾಲ ಸೌಲಭ್ಯ ಒದಗಿಸಲಾಗುವುದು ಎಂದಿದೆ. ಸಾಲ ಸೌಲಭ್ಯ ಪಡೆಯಲು ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 15.00 ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೇಯಲ್ಲಿ ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು.…

Read More

ದೆಹಲಿ: ಹೆಂಡತಿಯ ನಡೆಯಿಂದ ಬೇಸತ್ತು ಗಂಡನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ದೆಹಲಿಯ ನಿಹಾಲ್ ವಿಹಾರ್ ಪ್ರದೇಶದಲ್ಲಿ ನಡೆದಿದೆ. ದೆಹಲಿಯ ನಿಹಾಲ್ ವಿಹಾರ್ ಪ್ರದೇಶದಲ್ಲಿ ಪತ್ನಿಯ ನಡೆ ಬಗ್ಗೆ ವೀಡಿಯೋ ಆನ್ ಮಾಡಿಟ್ಟು ವಿಕಾಸ್ ನೇಣಿಗೆ ಶರಣಾಗಿದ್ದಾನೆ. ಪತಿ ನಾಲ್ಕು ವರ್ಷದ ಮಗು ಬಿಟ್ಟು ಶಕೀಬ್ ಜೊತೆ ಹೋಗಿದ್ದಾಳೆ. ಶಕೀಬ್ ಜೊತೆ ಊರೆಲ್ಲ ಸುತ್ತಿದ್ದಾಳೆ ಎಂಬುದಾಗಿ ಆರೋಪಿಸಿ, ಮೊಬೈಲ್ ನಲ್ಲಿ ವೀಡಿಯೋ ಆನ್ ಮಾಡಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. https://kannadanewsnow.com/kannada/yulia-svyrydanko-appointed-as-the-new-prime-minister-of-ukraine/ https://kannadanewsnow.com/kannada/life-style-are-you-not-getting-pregnant-then-these-could-also-be-the-reason/

Read More

ಉಕ್ರೇನ್: ಉಕ್ರೇನ್‌ನ ಮಾಜಿ ಆರ್ಥಿಕ ಸಚಿವೆ ಯುಲಿಯಾ ಸ್ವೈರಿಡೆಂಕೊ ಅವರನ್ನು ಹೊಸ ಪ್ರಧಾನಿಯಾಗಿ ನೇಮಿಸಲಾಗಿದೆ. ಹಾಲಿ ಪ್ರಧಾನಿ ಡೆನಿಸ್ ಶ್ಮಿಹಾಲ್ ಅವರು ಈ ಹುದ್ದೆಯಿಂದ ಕೆಳಗಿಳಿದಿದ್ದಾರೆ. ಉಕ್ರೇನ್‌ನ ಆರ್ಥಿಕ ಸಚಿವೆ ಮತ್ತು ಯುನೈಟೆಡ್ ಸ್ಟೇಟ್ಸ್‌ನೊಂದಿಗಿನ ಖನಿಜ ಒಪ್ಪಂದದ ಮುಖ್ಯ ಸಮಾಲೋಚಕಿ ಯುಲಿಯಾ ಸ್ವೈರಿಡೆಂಕೊ ಅವರನ್ನು ಉಕ್ರೇನ್‌ನ ಹೊಸ ಪ್ರಧಾನ ಮಂತ್ರಿಯಾಗಿ ನೇಮಿಸಲಾಗಿದೆ. 2022 ರಲ್ಲಿ ರಷ್ಯಾ ತನ್ನ ಪೂರ್ಣ ಪ್ರಮಾಣದ ಆಕ್ರಮಣವನ್ನು ಪ್ರಾರಂಭಿಸಿದ ನಂತರ ಅವರು ಈ ಪಾತ್ರವನ್ನು ವಹಿಸಿಕೊಂಡ ಮೊದಲಿಗರು. ಸ್ವೈರಿಡೆಂಕೊ ಉಕ್ರೇನ್ ಸರ್ಕಾರದಲ್ಲಿ ಮಹತ್ವದ ಪಾತ್ರಗಳನ್ನು ವಹಿಸಿಕೊಂಡಿರುವ ಅಧಿಕಾರಿಗಳ ಹೊಸ ಪಡೆಗಳ ಭಾಗವಾಗಿದ್ದಾರೆ. ನಡೆಯುತ್ತಿರುವ ಯುದ್ಧದಿಂದ ದಣಿದ ರಾಷ್ಟ್ರವನ್ನು ಉತ್ತೇಜಿಸುವ ಮತ್ತು ರಷ್ಯಾದ ನಿರಂತರ ದಾಳಿಯ ನಡುವೆ ದೇಶೀಯ ಶಸ್ತ್ರಾಸ್ತ್ರಗಳ ಉತ್ಪಾದನೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಕ್ಯಾಬಿನೆಟ್ ಪುನರ್ರಚನೆಯನ್ನು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಕೈಗೊಂಡಿರುವುದರಿಂದ ಈ ಬದಲಾವಣೆ ಬಂದಿದೆ. ದೇಶೀಯವಾಗಿ, ಕ್ಯಾಬಿನೆಟ್‌ನಲ್ಲಿನ ಬದಲಾವಣೆಗಳನ್ನು ಕ್ರಾಂತಿಕಾರಿ ಎಂದು ಪರಿಗಣಿಸಲಾಗುವುದಿಲ್ಲ, ಏಕೆಂದರೆ ಅಧ್ಯಕ್ಷ ಝೆಲೆನ್ಸ್ಕಿ ಸಂಘರ್ಷದ ನಾಲ್ಕು ವರ್ಷಗಳ ಅವಧಿಯಲ್ಲಿ ತಮ್ಮ…

Read More

ಬೆಳಗಾವಿ: ಧಾರವಾಡ ಹೆಚ್ಚುವರಿ ಎಎಸ್ಪಿಯಾಗಿದ್ದಂತ ನಾರಾಯಣ ಭರಮನಿ, ಸಿಎಂ ಸಿದ್ಧರಾಮಯ್ಯ ಕಪಾಳಮೋಕ್ಷಕ್ಕೆ ಕೈ ಎತ್ತಿದ್ದರಿಂದ ಬೇಸರಿಸಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದರು. ಅವರನ್ನು ಮನವೊಲಿಸಲು ಸರ್ಕಾರ ಯಶಸ್ಸಾಗಿತ್ತು. ಇಂತಹ ನಾರಾಯಣ ಭರಮನಿ ಅವರನ್ನು ಇದೀಗ ಬೆಳಗಾವಿಯ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ಸಿಎಂ ಅವರಿಂದ ಅಪಮಾನಕ್ಕೆ ಒಳಗಾಗಿದ್ದಂತ ನಾರಾಯಣ ಭರಮನಿಗೆ ಸಿದ್ಧರಾಮಯ್ಯ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಅವರನ್ನು ಎಎಸ್ಪಿಯಿಂದ ಬೆಳಗಾವಿಯ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. ಅಂದಹಾಗೇ ಏಪ್ರಿಲ್.28ರಂದು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದರಿಂದ ಸಿಟ್ಟಾಗಿದ್ದಂತ ಸಿಎಂ ಸಿದ್ಧರಾಮಯ್ಯ ಏಯ್ ಯಾರಿಲ್ಲಿ ಪೊಲೀಸ್ ಅಧಿಕಾರಿ ಎಂದಾಗ ಧಾರವಾಡ ಹೆಚ್ಚುವರಿ ಎಎಸ್ಪಿ ನಾರಾಯಣ ಭರಮನಿ ಅವರ ಮುಂದೆ ಹೋಗಿ ನಿಂತಿದ್ದರು. ಈ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ನಾರಾಯಣ ಭರಮನಿಗೆ ಕಪಾಳ ಮೋಕ್ಷ ಮಾಡಲು ಕೈ ಎತ್ತಿ ಕೆಳಗಿಳಿಸಿದ್ದರು. ಈ ಘಟನೆಯಿಂದಾಗಿ ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿ…

Read More

ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯಲ್ಲಿನ ಕಠಿಣ ಷರತ್ತಗಳನ್ನು ಸಡಿಲಿಸಿ, ಸರಳೀಕರಣ ಮಾಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಲ್ಲಿ ಮನವಿ ಮಾಡಿದೆ. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ವಿಧಾನಸೌಧದಲ್ಲಿ ಭೇಟಿ ಮಾಡಿದ ನಿಯೋಗ, ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ಈ ಯೋಜನೆಯನ್ನು ಸೀಮಿತ ಮಾಡಿರುವುದರಿಂದ ಹೆಚ್ಚು ಪತ್ರಕರ್ತರು ಯೋಜನೆಯಿಂದ ವಂಚಿತರಾಗುತ್ತಾರೆ ಎನ್ನುವ ವಿಷಯವನ್ನು ಅವರ ಗಮನಕ್ಕೆ ತಂದಿತು. ವಾರ್ತಾ ಇಲಾಖೆಯಲ್ಲಿ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಮತ್ತು ಸುದ್ದಿಮಾಧ್ಯಮಗಳಲ್ಲಿ ಕೆಲಸ ಮಾಡುವ ಎಲ್ಲಾ ಪತ್ರಕರ್ತರಿಗೂ ಯೋಜನೆಯನ್ನು ವಿಸ್ತಾರ ಮಾಡಬೇಕು ಎನ್ನುವ ಕೆಯುಡಬ್ಲೂೃಜೆ ಮನವಿಗೆ ಕೆ.ವಿ.ಪ್ರಭಾಕರ್ ಅವರು ಸಕಾರತ್ಮಕವಾಗಿ ಸ್ಪಂದಿಸಿದ್ದು, ಪರಿಶೀಲಿಸುವ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿಯೇ ಜಾರಿಗೆ ನೀಡಿರುವುದು ಸ್ವಾಗತಾರ್ಹವಾಗಿದ್ದು, ಅದಕ್ಕಾಗಿ ಪ್ರಭಾಕರ್ ಅವರಿಗೆ ನಿಯೋಗ ಅಭಿನಂದನೆಗಳನ್ನು ಸಲ್ಲಿಸಿತು. ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪತ್ರಕರ್ತರಿಗೆ ಉಚಿತ…

Read More