Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಹಾಗೂ ಹಾಲಿ ಕೈಗಾರಿಕಾ ಪ್ರದೇಶಗಳಿಗೆ ನದಿ ಮೂಲದ ಪ್ರತ್ಯೇಕ ನೀರು ಸರಬರಾಜು ಸೇರಿದಂತೆ ಮೂಲಸೌಕರ್ಯ ಕಲ್ಪಿಸುವ ಸಲುವಾಗಿ ₹5,000 ಕೋಟಿ ಸಾಲ ಪಡೆಯುವ ಉದ್ದೇಶ ಇದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಗುರುವಾರ ಇಲ್ಲಿ ಹೇಳಿದರು. ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಇಲ್ಲಿ ಏರ್ಪಡಿಸಿರುವ ‘ಇನ್ನೋವರ್ಜ್’ ಸಮಾವೇಶದಲ್ಲಿ ಅವರು ಗುರುವಾರ ಮಾತನಾಡಿದರು. ರಾಜ್ಯದ ಬಹುತೇಕ ಕೈಗಾರಿಕಾ ಪ್ರದೇಶಗಳಲ್ಲಿ ನಿರೀಕ್ಷಿತ ಮೂಲಸೌಕರ್ಯ ಇಲ್ಲ. ಅದರಲ್ಲೂ ಪ್ರತ್ಯೇಕ ನೀರು ಸರಬರಾಜು ವ್ಯವಸ್ಥೆಯಂತೂ ಇಲ್ಲವೇ ಇಲ್ಲ. ಹೀಗಾಗಿ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ. ಈ ಸಂಬಂಧ ಹಣಕಾಸು ಇಲಾಖೆ ಜತೆಗೂ ಚರ್ಚಿಸಲಾಗುತ್ತಿದೆ ಎಂದು ಅವರು ಹೇಳಿದರು. ಉದ್ದೇಶಿತ ನೀರು ಸರಬರಾಜು ಯೋಜನೆಗೆ ಅಂದಾಜು ಎರಡು ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ. ಉಳಿದ ಮೂರು ಸಾವಿರ ಕೋಟಿಯನ್ನು ಹಳೇ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಸೌಕರ್ಯ ಕಲ್ಪಿಸುವುದಕ್ಜೆ ಹಾಗೂ ಹೊಸ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮತ್ತು ಭೂಸ್ವಾಧೀನಕ್ಕೆ ಬಳಸಲಾಗುವುದು ಎಂದು…

Read More

ಫ್ರೆಂಚ್: ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ಯುರೋಪಿಯನ್ ಒಕ್ಕೂಟದ ಮಾಜಿ ಬ್ರೆಕ್ಸಿಟ್ ಸಮಾಲೋಚಕ ಮೈಕೆಲ್ ಬಾರ್ನಿಯರ್ ಅವರನ್ನು ಗುರುವಾರ ತಮ್ಮ ಹೊಸ ಪ್ರಧಾನಿಯಾಗಿ ನೇಮಕ ಮಾಡಿದ್ದಾರೆ. 73 ವರ್ಷದ ಬಾರ್ನಿಯರ್ 2016-2021ರ ಅವಧಿಯಲ್ಲಿ ಬ್ರಿಟನ್ನಿಂದ ನಿರ್ಗಮಿಸುವ ಕುರಿತು ಐರೋಪ್ಯ ಒಕ್ಕೂಟದ ಮಾತುಕತೆಯ ನೇತೃತ್ವ ವಹಿಸಿದ್ದರು. ಅದಕ್ಕೂ ಮೊದಲು, ಸಂಪ್ರದಾಯವಾದಿ ರಾಜಕಾರಣಿ ವಿವಿಧ ಫ್ರೆಂಚ್ ಸರ್ಕಾರಗಳಲ್ಲಿ ಪಾತ್ರಗಳನ್ನು ಹೊಂದಿದ್ದರು ಮತ್ತು ಇಯು ಆಯುಕ್ತರಾಗಿದ್ದರು. ಮ್ಯಾಕ್ರನ್ ಇತ್ತೀಚಿನ ವಾರಗಳಲ್ಲಿ ಸಂಭಾವ್ಯ ಪ್ರಧಾನ ಮಂತ್ರಿಗಳ ಸರಮಾಲೆಯನ್ನು ಪರಿಗಣಿಸಿದ್ದರು, ಅವರಲ್ಲಿ ಯಾರೂ ಸ್ಥಿರ ಸರ್ಕಾರವನ್ನು ಖಾತರಿಪಡಿಸಲು ಸಾಕಷ್ಟು ಬೆಂಬಲವನ್ನು ಸಂಗ್ರಹಿಸಲಿಲ್ಲ, ಮತ್ತು ಬಾರ್ನಿಯರ್ ಅವರ ಸರ್ಕಾರವು ಅತಂತ್ರ ಸಂಸತ್ತಿನಿಂದ ಸುಧಾರಣೆಗಳನ್ನು ಅಳವಡಿಸಿಕೊಳ್ಳುವಲ್ಲಿ ಯಶಸ್ವಿಯಾಗುತ್ತದೆ ಎಂಬುದಕ್ಕೆ ಯಾವುದೇ ಖಾತರಿಯಿಲ್ಲ. ಆದರೆ ಜುಲೈ ಆರಂಭದ ಚುನಾವಣೆಯ ನಂತರ ಸಂಸತ್ತಿನಲ್ಲಿ ಅತಿದೊಡ್ಡ ಪಕ್ಷವಾಗಿರುವ ಬಲಪಂಥೀಯ ರಾಷ್ಟ್ರೀಯ ರ್ಯಾಲಿ (ಆರ್ಎನ್) ಗುರುವಾರ ಬಾರ್ನಿಯರ್ ಕೆಲವು ಷರತ್ತುಗಳನ್ನು ಪೂರೈಸಿದರೆ ತಕ್ಷಣವೇ ಅವರನ್ನು ತಿರಸ್ಕರಿಸುವುದಿಲ್ಲ ಎಂದು ಸಂಕೇತ ನೀಡಿತು. ಬಾರ್ನಿಯರ್ ಒಬ್ಬ ಕಟ್ಟಾ ಯುರೋಪಿಯನ್…

Read More

ಬೆಂಗಳೂರು: ನಗರದ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹೊಸದಾಗಿ ಬಿಎಂಟಿಸಿ ಬಸ್ ಸಂಚಾರದ ಸಾರಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಈ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣ ರಹಿತ ಸೇವೆಯಲ್ಲಿ ನೂತನ ಮಾರ್ಗವನ್ನು ದಿನಾಂಕ 09.09.2024 ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ: ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸು/ ಸುತ್ತುವಳಿಗಳ ಸಂಖ್ಯೆ 253ಸಿ ಯಶವಂತಪುರ ಕನಸವಾಡಿ ಜಾಲಹಳ್ಳಿ ಕ್ರಾಸ್‍, ಚಿಕ್ಕಬಾಣಾವರ, ಹೇಸರಘಟ್ಟ ಟಿ. ಬಿ. ಕ್ರಾಸ್‍, ಕುಕ್ಕನಹಳ್ಳಿ, ಮಧುರೆ 1 ಬಸ್ಸು 04 ಸುತ್ತುವಳಿಗಳು ಹೀಗಿದೆ ವೇಳಾಪಟ್ಟಿ  ಯಶವಂತಪುರ ಬಿಡುವ ವೇಳೆ 0830, 1205 ಕನಸವಾಡಿ ಬಿಡುವ ವೇಳೆ 1030, 1400 https://kannadanewsnow.com/kannada/cbse-issues-showcase-notice-to-27-schools-for-enrolling-dummy-students/ https://kannadanewsnow.com/kannada/when-i-went-to-the-house-for-the-first-time-i-felt-i-should-not-come-without-proper-education-dk-shivakumar/ https://kannadanewsnow.com/kannada/keralas-hema-committee-to-form-model-committee-actors-and-actresses-meet-cm-siddaramaiah/

Read More

ಬೆಂಗಳೂರು: ನಾನು ಸದನಕ್ಕೆ ಮೊದಲ ಬಾರಿಗೆ ಹೋದಾಗ ಬಂಗಾರಪ್ಪ, ರಾಮಕೃಷ್ಣ ಹೆಗಡೆ, ನಂಜೇಗೌಡರು ಸೇರಿದಂತೆ ಅನೇಕ ಮಹಾನುಭಾವರು ಇದ್ದರು. ಅವರ ಮಾತು, ವಿಚಾರ ನೋಡಿದಾಗ ಸರಿಯಾದ ಶಿಕ್ಷಣ ಇಲ್ಲದೆ ನಾವು ಸದನಕ್ಕೆ ಬರಬಾರದು ಎಂದು ನನಗೆ ಅನಿಸಿತು ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಿಕ್ಷಕರ ದಿನ, ರಾಜೀವ್ ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತನಾಡಿದರು. ಜನ ರಾಜಕಾರಣಿಗಳನ್ನು ಬೇಗ ಮರೆಯುತ್ತಾರೆ. ಆದರೆ ಗುರುಗಳನ್ನು ಬೇಗ ಮರೆಯುವುದಿಲ್ಲ. ಅವರಿಗೆ ನೀಡಬೇಕಾದ ಗೌರವ ನೀಡಲಾಗುವುದು. ನಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಶಿಕ್ಷಕರನ್ನು ಮರೆಯುವುದಿಲ್ಲ. ಶಿಕ್ಷಕರ ಮೇಲೆ ವಿಶೇಷ ನಂಬಿಕೆ ವಿಶ್ವಾಸ ಇರುತ್ತದೆ. ಮಕ್ಕಳು ಮನೆಯಲ್ಲಿ ತಂದೆ ತಾಯಿ ಮಾತು ಕೇಳದಿದ್ದರೂ ಶಿಕ್ಷಕರು ಹೇಳಿದ್ದನ್ನು ಕೇಳುತ್ತಾರೆ ಎಂದರು. ನಾನು ಹುಟ್ಟುತ್ತಾ ಕೃಷಿಕ, ವೃತ್ತಿಯಲ್ಲಿ ಉದ್ಯಮಿ, ಆಯ್ಕೆಯಲ್ಲಿ ಶಿಕ್ಷಣತಜ್ಞ, ಆಸಕ್ತಿಯಲ್ಲಿ ರಾಜಕಾರಣಿ ಎಂದು ಅನೇಕ ಬಾರಿ ಹೇಳಿದ್ದೇನೆ. ನಾನು…

Read More

ನವದೆಹಲಿ: ಮಾನ್ಯತೆ ನಿಯಮಗಳನ್ನು ಉಲ್ಲಂಘಿಸಿ ನಕಲಿ ವಿದ್ಯಾರ್ಥಿಗಳನ್ನು ದಾಖಲಿಸಿದ್ದಕ್ಕಾಗಿ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (Central Board of Secondary Education -CBSE) ರಾಜಸ್ಥಾನದ 27 ಶಾಲೆಗಳು ಮತ್ತು ದೆಹಲಿಯ ಎನ್ಸಿಟಿಗೆ ಶೋಕೇಸ್ ನೋಟಿಸ್ ನೀಡಿದೆ. ಸಿಬಿಎಸ್ಇ ಕಾರ್ಯದರ್ಶಿ ಈ ಮಾಹಿತಿಯನ್ನು ನೀಡಿದ್ದಾರೆ. ‘ನಕಲಿ ಶಾಲೆ’ ಭೀತಿಯನ್ನು ಪರಿಶೀಲಿಸಲು ಮಂಡಳಿಯು ಸೆಪ್ಟೆಂಬರ್ 3 ರಂದು ಈ ಶಾಲೆಗಳಲ್ಲಿ ಹಠಾತ್ ತಪಾಸಣೆ ನಡೆಸಿತು. ಈ ತಪಾಸಣೆಗಳು ಮಂಡಳಿಯ ಸಂಯೋಜನೆ ಬೈಲಾಗಳನ್ನು ಎತ್ತಿ ತೋರಿಸಿವೆ, ಶಿಕ್ಷಣ ವ್ಯವಸ್ಥೆಯ ಸಮಗ್ರತೆಗೆ ಬೆದರಿಕೆಯೊಡ್ಡುವ ಗಂಭೀರ ಅಕ್ರಮಗಳನ್ನು ಬಹಿರಂಗಪಡಿಸಿವೆ. ಈ ತಪಾಸಣೆಗಳು ಶಾಲೆಗಳು ಮಂಡಳಿಯ ಮಾನದಂಡಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸುತ್ತಿವೆಯೇ ಎಂದು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಲಾಗಿತ್ತು. ‘ಪರಿಶೀಲಿಸಲಾದ ಹೆಚ್ಚಿನ ಶಾಲೆಗಳು ತಮ್ಮ ನೈಜ ಹಾಜರಾತಿ ದಾಖಲೆಗಳನ್ನು ಮೀರಿ ವಿದ್ಯಾರ್ಥಿಗಳನ್ನು ದಾಖಲಿಸುವ ಮೂಲಕ ಮಂಡಳಿಯ ಸಂಯೋಜನೆಯ ಉಪ-ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ, ಪರಿಣಾಮಕಾರಿಯಾಗಿ ‘ನಕಲಿ’ ದಾಖಲಾತಿಗಳನ್ನು ರಚಿಸಿದೆ. ಹೆಚ್ಚುವರಿಯಾಗಿ, ಶಾಲೆಗಳು ಮಂಡಳಿಯ ಮೂಲಸೌಕರ್ಯ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿದೆ ಎಂದು ಸಿಬಿಎಸ್ಇ…

Read More

ಬೆಂಗಳೂರು: ರಾಯಚೂರಲ್ಲಿ ಶಾಲಾ ವಾಹನ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಉಂಟಾಗಿತ್ತು. ಈ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರೇ, ನಾಲ್ವರ ಕಾಲು ಕಟ್ ಆಗಿತ್ತು. ಅಲ್ಲದೇ ಹಲವರು ಗಾಯಗೊಂಡಿದ್ದರು. ಇಂತವರಿಗೆ ಸರ್ಕಾರದಿಂದಲೇ ಉಚಿತವಾಗಿ ಚಿಕಿತ್ಸಾ ವ್ಯವಸ್ಥೆ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡ ಸುದ್ದಿ ಕೇಳಿ ಸಂಕಟವಾಯಿತು. ಮೃತ ಕಂದಮ್ಮಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಉಚಿತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು, ಮೃತ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರವನ್ನು ನೀಡಲಾಗುವುದು. ಮಕ್ಕಳನ್ನು ಕಳೆದುಕೊಂಡ ಪೋಷಕರ ದುಃಖದಲ್ಲಿ ನಾನೂ ಭಾಗಿ ಎಂದು ಹೇಳಿದ್ದಾರೆ. https://twitter.com/CMofKarnataka/status/1831637786526396709 https://kannadanewsnow.com/kannada/ramesh-babu-writes-to-cm-seeking-sit-probe-into-irregularities-in-distribution-of-sarees-under-bhagyalakshmi-scheme/ https://kannadanewsnow.com/kannada/strict-action-will-be-taken-if-casting-couch-cases-are-found-in-kannada-film-industry-minister-laxmi-hebbalkar/ https://kannadanewsnow.com/kannada/keralas-hema-committee-to-form-model-committee-actors-and-actresses-meet-cm-siddaramaiah/

Read More

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ನಂಥ ಪ್ರಕರಣಗಳು ಕಂಡು ಬಂದರೆ, ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕನ್ನಡ ಚಿತ್ರರಂಗದಲ್ಲೂ ಕಾಸ್ಟಿಂಗ್ ಕೌಚ್ ಸದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆ ರೀತಿ ಏನಾದರೂ ಆಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆ ವಿಚಾರದ ಬಗ್ಗೆ ಭರವಸೆ ನೀಡಿದ್ದಾರೆ. ಮಹಿಳೆಯರ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ. ಕಾಸ್ಟಿಂಗ್ ಕೌಚ್ ನಂತ ಪ್ರಕರಣಗಳು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು. https://kannadanewsnow.com/kannada/good-news-for-anganwadi-workers-pending-salaries-to-be-paid-soon-minister-laxmi-hebbalkar/ https://kannadanewsnow.com/kannada/ramesh-babu-writes-to-cm-seeking-sit-probe-into-irregularities-in-distribution-of-sarees-under-bhagyalakshmi-scheme/

Read More

ಬೆಂಗಳೂರು: ನಾಲ್ಕು ತಿಂಗಳ ಗೌರವಧನ ಅಂಗನವಾಡಿ ಕಾರ್ಯಕರ್ತೆಯರಿಗೆ ಪಾವತಿ ಆಗಿರಲಿಲ್ಲ. ಹೀಗಾಗಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಸಂಕಷ್ಟಕ್ಕೆ ಸಿಲುಕಿದ್ದರು. ಶೀಘ್ರವೇ ಅಂಗನವಾಡಿ ಶಿಕ್ಷಕಿಯರಿಗೆ ವೇತನ ಪಾವತಿ ಮಾಡಲಾಗುತ್ತದೆ ಎಂಬುದಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಮೂಲಕ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯದ ಅಂಗನವಾಡಿ ಶಿಕ್ಷಕಿಯರಿಗೆ ಬಾಕಿ ಉಳಿದಿರುವ ವೇತನವನ್ನು ಶೀಘ್ರವೇ ಬಿಡುಗಡೆಗೊಳಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಎಲ್ಲಾ ವಿಚಾರವೂ ಅಂಗನವಾಡಿ ಶಿಕ್ಷಕಿಯರಿಗೆ‌ ಗೊತ್ತಿದೆ. ರಾಜ್ಯ ಸರ್ಕಾರದಿಂದ 7 ಸಾವಿರ ರೂ,‌ ಕೇಂದ್ರದಿಂದ 4 ಸಾವಿರ ರೂ ನೀಡಲಾಗುತ್ತಿದೆ. ಈಗಾಗಲೇ ಕೇಂದ್ರ ಸಚಿವರ ಜೊತೆ ಮಾತಾಡಿದ್ದೇನೆ. ಈ‌ ಹಿಂದೆಯೂ ಹಲವು ಬಾರಿ ವೇತನ ವಿಳಂಬ ಆಗಿತ್ತು. ಗೌರಿ ಗಣೇಶ ಹಬ್ಬದೊಳಗೆ ಹಣ ಬಿಡುಗಡೆಗೆ ಪ್ರಯತ್ನ ಮಾಡುತ್ತೇವೆ ಎಂದುಸಚಿವೆ ಲಕ್ಷ್ಮೀ ಹೆಬ್ಳಾಳ್ಕರ್ ಹೇಳಿದ್ದಾರೆ. https://kannadanewsnow.com/kannada/mlc-chalavadi-narayanaswamy-demands-immediate-payment-of-honorarium-to-anganwadi-workers/ https://kannadanewsnow.com/kannada/ramesh-babu-writes-to-cm-seeking-sit-probe-into-irregularities-in-distribution-of-sarees-under-bhagyalakshmi-scheme/

Read More

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ನಾಲ್ಕು ತಿಂಗಳಿನಿಂದ ಗೌರವಧನ ಪಾವತಿಯಾಗಿಲ್ಲ ಎಂಬುದಾಗಿ ಸುದ್ದಿ ಮಾಧ್ಯಮಗಳ ಮೂಲಕ ಗಮನಕ್ಕೆ ಬಂದಿದೆ. ಅವರಿಗೆ ಕೂಡಲೇ ಗೌರವಧನ ಪಾವತಿ ಮಾಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಪತ್ರ ಬರೆದು ಬಿಜೆಪಿಯ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಪತ್ರ ಬರೆದಿರುವಂತ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಕಳೆದ ನಾಲ್ಕು ತಿಂಗಳನಿಂದ ಗೌರವ ಧನ ಪಾವತಿಯಾಗದೇ ಇರುವ ವಿಷಯವು ವಾರ್ತಾ ಮತ್ತು ಪತ್ರಿಕಾ ಮಾಧ್ಯಮದಲ್ಲಿ ಪ್ರಸಾರವಾಗಿರುವುದು ನನ್ನ ಗಮನಕ್ಕೆ ಬಂದಿದ್ದು, ಇದೊಂದು ವಿಷಾದನೀಯ ಸಂಗತಿಯಾಗಿದೆ. ಪುಟ್ಟ ಮಕ್ಕಳನ್ನು ಪಾಲನೆ ಮಾಡುತ್ತಾ ಅವರಿಗೆ ವಿದ್ಯೆಯನ್ನು ಕಲಿಸುವ ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರು ಕೂಲಿ ಕೆಲಸ ಮಾಡಿಕೊಂಡು ಬದುಕು ದೂಡುವಂತಾಗಿರುವುದು ಮಾತ್ರ ವಿಪರ್ಯಾಸವೇ ಸರಿ ಎಂದಿದ್ದಾರೆ. ಗೌರವಧನವನ್ನೇ ನಂಬಿಕೊಂಡು ಜೀವನ ಮಾಡುತ್ತಾ ಬಂದಿರುವ…

Read More

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮತ್ತು ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ಮುಂದಿನ ವಾರ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ. ಎರಡೂ ಕಡೆಯ ವಾದವನ್ನು ಮುಕ್ತಾಯಗೊಳಿಸಿದ ನಂತರ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತು. ಕೇಜ್ರಿವಾಲ್ ಪರ ಹಾಜರಾದ ಎಎಸ್ಜಿ ರಾಜು ಸೋಮವಾರದವರೆಗೆ ಟಿಪ್ಪಣಿ ಸಲ್ಲಿಸಲು ಸಮಯ ಕೋರಿದರು. ನಂತರ ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕರಣದ ಬಗ್ಗೆ ಹಿಂತಿರುಗುವುದಾಗಿ ಹೇಳಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ನ್ಯಾಯಪೀಠವು ದೆಹಲಿ ಸಿಎಂ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಇಂದು ಪುನರಾರಂಭಿಸಿತು. ಸಿಎಂ ಕೇಜ್ರಿವಾಲ್ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಪ್ರಕರಣದ ಸುದೀರ್ಘ ವಿಚಾರಣೆಯ ಹೊರತಾಗಿಯೂ ದೆಹಲಿ ಹೈಕೋರ್ಟ್ ಅವರ ಜಾಮೀನು ಅರ್ಜಿಯ ಬಗ್ಗೆ ಆದೇಶವನ್ನು ಹೊರಡಿಸಿಲ್ಲ ಎಂದು ಸುಪ್ರೀಂ…

Read More