Author: kannadanewsnow09

ದಾವಣಗೆರೆ : ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನೇರ ರೈಲು ಮಾರ್ಗವು ನಿಧಾನಗತಿಯಲ್ಲಿ ಸಾಗುತ್ತಿದ್ದು ಕಳೆದ ಎರಡೂವರೆಗೆ ತಿಂಗಳಿಂದ ಇದರ ಪ್ರಗತಿ ವೇಗ ಹೆಚ್ಚಿಸಲಾಗಿದೆ. ಒಟ್ಟು ಈ ಯೋಜನೆಗೆ 2406.73 ಎಕರೆ ಭೂಮಿ ಬೇಕಾಗಿದ್ದು ಈಗಾಗಲೇ 2119.16 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. 287.54 ಎಕರೆ ಸ್ವಾಧೀನ ಮಾಡಿಕೊಳ್ಳಬೇಕಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಹಾದುಹೋಗುವ 263.78 ಎಕರೆ ಜಮೀನಿನಲ್ಲಿ 246.20 ಎಕರೆ ಸ್ವಾಧೀನ ಪಡಿಸಿಕೊಂಡಿದ್ದು 17.58 ಎಕರೆಯ ಸ್ವಾಧೀನ ಪ್ರಕ್ರಿಯೆ ವಿವಿಧ ಹಂತದಲ್ಲಿದ್ದು ಕೆಲವೇ ದಿನಗಳಲ್ಲಿ ಪೂರ್ಣವಾಗಲಿದೆ ಎಂದರು. ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ…

Read More

ಜೆರುಸಲೇಂ: ಲೆಬನಾನ್ನಲ್ಲಿ ಬುಧವಾರ ನಡೆದ ಯುದ್ಧ ಕಾರ್ಯಾಚರಣೆಯಲ್ಲಿ ಎಂಟು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಮಿಲಿಟರಿ ತಿಳಿಸಿದೆ. ಇದು ಹಿಜ್ಬುಲ್ಲಾವನ್ನು ಗುರಿಯಾಗಿಸಲು ತನ್ನ ಪಡೆಗಳು ಗಡಿಯನ್ನು ದಾಟಿದ ನಂತರ ಮೊದಲ ನಷ್ಟವಾಗಿದೆ. ಇದಕ್ಕೂ ಮುನ್ನ, ಇಸ್ರೇಲಿ ಸೇನಾ ಕ್ಯಾಪ್ಟನ್ ಈಟಾನ್ ಇಟ್ಜಾಕ್ ಅವರು ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟರು, ಇದು ಲೆಬನಾನ್ನಲ್ಲಿ ತನ್ನ ನೆಲದ ಕಾರ್ಯಾಚರಣೆಯಲ್ಲಿ ಮೊದಲ ಇಸ್ರೇಲಿ ಯುದ್ಧ ಸೋಲನ್ನು ಸೂಚಿಸುತ್ತದೆ. “ಇನ್ನೂ ಏಳು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಐಡಿಎಫ್ (ಇಸ್ರೇಲಿ ಸೇನೆ) ಘೋಷಿಸಿದೆ” ಎಂದು ಲೆಬನಾನ್ನಲ್ಲಿ ಮೊದಲ ಸೈನಿಕನ ಮರಣವನ್ನು ಘೋಷಿಸಿದ ನಂತರ ಅದು ಹೇಳಿಕೆಯಲ್ಲಿ ತಿಳಿಸಿದೆ. “ಕ್ಯಾಪ್ಟನ್ ಈಟನ್ ಇಟ್ಜಾಕ್ ಓಸ್ಟರ್, ವಯಸ್ಸು 22 … ಲೆಬನಾನ್ ನಲ್ಲಿ ನಡೆದ ಯುದ್ಧದ ವೇಳೆ ಪತನಗೊಂಡಿದೆ’ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಹೆಚ್ಚಿನ ವಿವರಗಳನ್ನು ನೀಡದೆ ಓಸ್ಟರ್ ಅವರನ್ನು ಬುಧವಾರ ಕೊಲ್ಲಲಾಗಿದೆ ಎಂದು ಮಿಲಿಟರಿ ವೆಬ್ಸೈಟ್ ತಿಳಿಸಿದೆ. ದಕ್ಷಿಣ ಗಡಿ ಗ್ರಾಮದೊಳಗೆ ನುಸುಳಿದ್ದ ಇಸ್ರೇಲಿ ಪಡೆಗಳೊಂದಿಗೆ ತನ್ನ ಹೋರಾಟಗಾರರು ಘರ್ಷಣೆ ನಡೆಸುತ್ತಿದ್ದಾರೆ…

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದೂ ಒತ್ತಾಯಿಸುತ್ತಾರೆ. ಮಾನ್ಯ ಆರ್ ಅಶೋಕ್ ಅವರೇ ಸ್ವತಃ ಅಕ್ರಮ ಭೂ ವಂಚನೆ ಕೇಸಿಗೆ ಫಿಟ್ಟಾಗಿ ಹೈಕೋರ್ಟ್ ಮೆಟ್ಚಿಲೇರಿ ಕಾನೂನು ಕುಣಿಕೆಯಿಂದ ತಪ್ಪಿಸಿಕೊಂಡ ಮಾನ್ಯ ಸತ್ಯವಂತ ನೀತಿವಂತ ಅಶೋಕ್ ಅವರೇ… ನೀವು ಮೊದಲು ರಾಜೀನಾಮೆ ಕೊಡಿ ಎಂಬುದಾಗಿ ಸಚಿವ ಕೃಷ್ಣಬೈರೇಗೌಡ ಆಗ್ರಹಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಬಿಜೆಪಿಯ ಆಷಾಢಭೂತಿತನಕ್ಕೆ ಮತ್ತೊಂದು ಉದಾಹರಣೆ ಸಂಪೂರ್ಣ ಸರ್ಕಾರೀ ಒಡೆತನದಲ್ಲಿದ್ದ ಲೊಟ್ಟೆಗೊಲ್ಲಹಳ್ಳಿ (ಡಾಲರ್ಸ್‌ ಕಾಲೋನಿ ಪಕ್ಕ) ಜಮೀನನ್ನು ಅಕ್ರಮವಾಗಿ ಬಿಡಿಗಾಸಿಗೆ ಖರೀದಿಸಿ, ಅಕ್ರಮವಾಗಿ ಸಂಬಂಧಪಡದ ವ್ಯಕ್ತಿಯಿಂದ ಅರ್ಜಿ ಕೊಡಿಸಿ, ಯಡಿಯೂರಪ್ಪನವರಿಂದ ಡೀನೋಟಿಫಿಕೇಷನ್‌ ಮೂಲ ಮಾಲೀಕರಿಗೆ ಮಾಡಿಸಿ, ಅಕ್ರಮವಾಗಿ ಖಾತೆ ಮಾಡಿಸಿಕೊಂಡ ಆರ್‌.ಅಶೋಕ್‌, ಸಿಕ್ಕಿ ಹಾಕಿಕೊಂಡು ಎಫ್‌ಐಆರ್‌ ಆದಾಗ ಯಾವ ರಾಜೀನಾಮೆಯನ್ನೂ ನೀಡಲಿಲ್ಲ ಎಂದಿದ್ದಾರೆ. ಹೈಕೋರ್ಟ್‌ ಮೆಟ್ಟಿಲೇರಿದಾಗ ಇದ್ದಕ್ಕಿದ್ದಂತೆ ತನ್ನದಲ್ಲದ ಸರ್ಕಾರಿ ಜಮೀನನ್ನೇ ಬಿಡಿಎಗೆ ದಾನಪತ್ರ ಮಾಡಿ ಕೊಟ್ಟರು. ಈಗ ಸ್ವಂತ ಜಮೀನಿಗೆ ಕಾನೂನು ಪ್ರಕಾರ ಸೈಟು ಪರಿಹಾರ ಪಡೆದುಕೊಂಡಿದ್ದ ಪಾರ್ವತಮ್ಮನವರು, ಕ್ಷುಲ್ಲಕ…

Read More

ಬೆಂಗಳೂರು : ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಆನ್‌ಲೈನ್‌ ಸೇವೆಗಳು ಅಕ್ಟೋಬರ್ 5, 6 ರಂದು ಲಭ್ಯ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಐಟಿ ಅಪ್ಲಿಕೇಶನ್‌ಗಳ ಉನ್ನತೀಕರಣಕ್ಕೆ ಸಮಯ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಅಪ್ಲಿಕೇಶನ್‌ ಸೇವೆಗಳು ಅಕ್ಟೋಬರ್ 5, 6 ರಂದು ಲಭ್ಯ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಐಪಿಡಿಎಸ್ ಐಟಿ ಹಂತ-2ರ ಯೋಜನೆಯ ಭಾಗವಾಗಿ ಆರ್‌ಎಪಿಡಿಆರ್‌ಪಿ ಅಪ್ಲಿಕೇಷನ್‌ ಸೇವೆ ಲಭ್ಯ ಇರುವುದಿಲ್ಲ. ಸಿಸ್ಟಂ ಡೌನ್‌ಟೈಮ್ ಅಕ್ಟೋಬರ್ 4ರ ರಾತ್ರಿ 9ರಿಂದ ಆರಂಭವಾಗಿ 7ರ ಬೆಳಗ್ಗೆ 6ಕ್ಕೆ ಕೊನೆಗೊಳ್ಳುತ್ತದೆ. ಐಟಿ ಮೂಲಸೌಕರ್ಯ ವರ್ಧನೆ ಮತ್ತು ಕಾರ್ಯಾಚರಣೆ ಪ್ರದೇಶಗಳಲ್ಲಿ ಸೇವೆಯ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಬೆಸ್ಕಾಂ ಈ ಕಾರ್ಯ ಕೈಗೊಂಡಿದೆ. 2024ರ ಮಾರ್ಚ್ 20 ರಂದು ಬಿಐಪಿ ಮತ್ತು ಡಬ್ಲ್ಯುಎಸ್‌ಎಸ್‌ಗೆ ನವೀಕರಣಗಳೊಂದಿಗೆ ಒರಾಕಲ್ ಸಿಸಿಬಿಯನ್ನು ಆವೃತ್ತಿ 2.3 ರಿಂದ 2.8 ಕ್ಕೆ ಯಶಸ್ವಿಯಾಗಿ ಅಪ್‌ಗ್ರೇಡ್ ಮಾಡುವುದರೊಂದಿಗೆ ಹಂತ-1 ಅನ್ನು…

Read More

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಗೆ ಈಗಾಗಲೇ ಬಿಜೆಪಿಯಿಂದ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿತ್ತು. ಈಗ ಕಾಂಗ್ರೆಸ್ ಕೂಡ ರಾಜು ಪೂಜಾರಿಯವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈ ಸಂಬಂಧ ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆಯ ಮೇರೆಗೆ ರಾಜು ಪೂಜಾರಿ ಅವರನ್ನು ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ ಎಂದಿದ್ದಾರೆ. https://kannadanewsnow.com/kannada/hundreds-of-crores-of-land-scam-bombs-against-r-ashoka-minister-parameshwara-releases-documents/ https://kannadanewsnow.com/kannada/note-how-many-times-can-the-address-be-changed-in-the-aadhaar-card-heres-the-information/

Read More

ಬೆಂಗಳೂರು: ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ನೂರಾರು ಕೋಟಿ ಭೂ ಹಗರಣದ ಹೊಸ ಬಾಂಬ್ ಅನ್ನು ಸಚಿವ ಡಾ.ಜಿ ಪರಮೇಶ್ವರ್ ಸಿಡಿಸಿದ್ದಾರೆ. ಅಲ್ಲದೇ ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕೂಡ ಬಿಡುಗಡೆ ಮಾಡಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದಂತ ಅವರು, ಮುಖ್ಯಮಂತ್ರಿಯವರ ಧರ್ಮಪತ್ನಿಯವರು ತಾವು ಕಳೆದುಕೊಂಡ ಜಮೀನಿಗೆ ಪರಿಹಾರ ರೂಪದಲ್ಲಿ ಬಂದಂತಹ ನಿವೇಶನಗಳನ್ನು ಮೂಡಾಗ ವಾಪಸ್ಸು ಕೊಟ್ಟಾಗ ಈ ವಿಷಯವನ್ನು ದೊಡ್ಡ ಅಪರಾಧವೆಂದು ಅಬ್ಬರಿಸುತ್ತಾ ವಿಪಕ್ಷ ನಾಯಕರಾದ ದಾನವೀರ ಸಾಮ್ರಾಟ ಶ್ರೀ ಆರ್. ಅಶೋಕ್ ಅವರ ಹಾಗೂ ಬಿಜೆಪಿಯ ಸಂಸದೀಯ ಮಂಡಳಿಯ ಸದಸ್ಯರಾದ ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪನವರ ಒಂದು ರೋಚಕ ರಿರ್ಟನ್ ಗಿಫ್ಟ್ ಕಥೆ ಇಲ್ಲಿದೆ ಎಂದರು. ನೂರಾರು ಕೋಟಿ ರೂ.ಗಳ ಲೊಟ್ಟೆಗೊಲ್ಲಹಳ್ಳಿ ಭೂ ಹಗರಣವನ್ನು ಮುಚ್ಚಿ ಹಾಕಿ ಅದರ ಮೇಲೆ ವಿಜೃಂಭಿಸುತ್ತಿರುವ ಬಿಜೆಪಿ ನಾಯಕರು. ಸರ್ಕಾರದ ಜಾಗವನ್ನೇ ಕಬಳಿಸಿ, ಸಿಕ್ಕಿ ಬೀಳುವ ಹಂತದಲ್ಲಿ ಕಬಳಿಸಿದ ಭೂಮಿಯನ್ನು ಸರ್ಕಾರಕ್ಕೆಗಿಫ್ಟ್ ಡೀಡ್ ಕೊಟ್ಟ ದಾನ ಶೂರ ಕರ್ಣ…

Read More

ಬೆಂಗಳೂರು : ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ: ಸಿ.ಎಂ.ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ವಾರ್ತಾ ಮತ್ತು ಸಾರ್ವಜನಿಕ‌ ಸಂಪರ್ಕ‌ ಇಲಾಖೆ ವಾರ್ತಾ ಸೌಧದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ, ಟೀಯೆಸ್ಸಾರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಈಗ ಊಹಾ ಪತ್ರಿಕೋದ್ಯಮದ ಪಿಡುಗು ಹೆಚ್ಚಾಗಿದೆ. ಈ ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ ಎಂದು ಪ್ರಶ್ನಿಸಿದರು. “ಅವರು ಹಿಂಗೆ ಹೇಳಿದ್ರು, ನೀವೇನು ಹೇಳ್ತೀರಾ?” ಅಂತ ಮುಖಕ್ಕೆ ಮೈ ಹಿಡಿಯೋದೇ ಇವತ್ತಿನ ಪತ್ರಿಕೋದ್ಯಮ ಆಗಿಬಿಟ್ಟಿದೆ. ಇದು ಯಾವ ರೀತಿ ಪತ್ರಿಕೋದ್ಯಮ‌ ನನಗಂತೂ ಅರ್ಥ ಆಗ್ತಾ ಇಲ್ಲ ಎಂದರು. ಹಿಂದೆಲ್ಲಾ ಪತ್ರಕರ್ತರಿಗೆ ತುಂಬಾ ಘನತೆ ಗೌರವ ಇತ್ತು. ಈಗ ಇದೆಯಾ ಗೊತ್ತಿಲ್ಲ. ಈ ಬಗ್ಗೆ ವಿಶ್ಲೇಷಣೆ ಮಾಡಿದರೆ ಅದನ್ನೇ ದೊಡ್ಡ ವಿವಾದ ಮಾಡಿಬಿಡ್ತಾರೆ. ಹೀಗಾಗಿ ಈ ಊಹಾ ಪತ್ರಿಕೋದ್ಯಮದ ಬಗ್ಗೆ ಹೆಚ್ಚೇನೂ ಹೇಳಲ್ಲ ಎಂದರು. ಗೋಡ್ಸೆಗಳನ್ನು ನಾವು ಸಹಿಸಬಾರದು.…

Read More

ಬೆಂಗಳೂರು: ಬಿಜೆಪಿ ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ಹಗರಣಗಳ ದಾಖಲೆಯನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್, ಕೃಷ್ಣಬೈರೇಗೌಡ ಹಾಗೂ ಸಚಿವ ಹೆಚ್.ಕೆ ಪಾಟೀಲ್ ಅವರು ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಸಚಿವರ ಜಂಟಿ ಮಾಧ್ಯಮಗೋಷ್ಠಿಯ ಮಾತನಾಡಿದಂತ ಗೃಹ ಸಚಿವ ಪರಮೇಶ್ವರ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರವಾಗಿ ಬಂದಿದ್ದ 14 ನಿವೇಶನಗಳನ್ನು ವಾಪಸ್ ನೀಡಲಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕರು ಬೇರೆ ಅರ್ಥ ಕಲ್ಪಿಸಿ, ತಪ್ಪು ಮಾಡಿರುವ ಕಾರಣ ವಾಪಸ್ ನೀಡಿದ್ದೀರಿ ಎಂದು ಆರೋಪ ಮಾಡಿದ್ದಾರೆ ಎಂದರು. ಲೊಟ್ಟೆ ಗೊಲ್ಲಹಳ್ಳಿ ಯಲ್ಲಿ ನೂರಾರು ಕೋಟಿ ಭೂ ಹಗರಣದ ಬಗ್ಗೆ ಇಂದು ದಾಖಲೆ ಸಮೇತ ಮುಂದೆ ಇಡುತ್ತೇವೆ. ಸರ್ವೇ ನಂಬರ್ 10/1, 10/11 F1 ಹಾಗೂ 10/11 F2 ಜಾಗದಲ್ಲಿ 32 ಗುಂಟೆ ಜಮೀನನ್ನು ಬಿಡಿಎ 24-02-1977 ರಲ್ಲಿ ಬಿಡಿಎ ನೋಟಿಫಿಕೇಶನ್ ಮಾಡುತ್ತದೆ. ದಿನಾಂಕ 27-2-1977 ರಲ್ಲಿ ಮತ್ತೊಂದು ಪ್ರಾಥಮಿಕ ಅಧಿಸೂಚನೆ…

Read More

ಹುಬ್ಬಳ್ಳಿ: ನೈಋತ್ಯ ರೈಲ್ವೆ ಮತ್ತು ಹುಬ್ಬಳ್ಳಿ ವಿಭಾಗ ಇಂದು ಎಸ್‌.ಎಸ್‌.ಎಸ್‌. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸಿತು. ಇಂದು ನೈಋತ್ಯ ರೈಲ್ವೆ ವಲಯದಾದ್ಯಂತ 17 ಸೆಪ್ಟೆಂಬರ್‌ 2024 ರಿಂದ ಆರಂಭಿಸಲಾಗಿದ್ದ ಸ್ವಚ್ಛತಾ ಪಾಕ್ಷಿಕ ಅಭಿಯಾನದ ಕೊನೆಯ ದಿನವಾಗಿದ್ದು ಸ್ವಚ್ಛತಾ ಹಿ ಸೇವಾ ದಿನವಾಗಿಯೂ ಆಚರಿಸಲಾಯಿತು. ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಅರವಿಂದ್ ಶ್ರೀವಾಸ್ತವ, ನೈಋತ್ಯ ರೈಲ್ವೆಯ ಅಪರ ಪ್ರಧಾನ ವ್ಯವಸ್ಥಾಪಕರಾದ ಕೆ.ಎಸ್. ಜೈನ್, ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಹರ್ಷ್ ಖರೆ ಹಾಗು ವಿಭಾಗದ ಪ್ರಧಾನ ಮುಖ್ಯಸ್ಥರು, ಎಸ್.ಎಸ್.ಎಸ್. ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಜನರಲ್ ಮ್ಯಾನೇಜರ್ ಅರವಿಂದ ಶ್ರೀವಾಸ್ತವ ಮಾತನಾಡಿ, ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ನಡೆಸಲಾದ ಸ್ವಚ್ಛತಾ ಹಿ ಸೇವಾ (SHS) 2024 ಅಭಿಯಾನವು ದೇಶಾದ್ಯಂತ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಉತ್ತೇಜಿಸುತ್ತದೆ. ಅದರ 10 ನೇ ವಾರ್ಷಿಕೋತ್ಸವವನ್ನು ಆಚರಿಸುವ “ಸ್ವಚ್ಛ ಭಾರತ ಅಭಿಯಾನ” ಹೊಸ…

Read More

ಮೇಷಾದಿ ರಾಶಿಗಳ ಅಧಿಪತಿ ಸ್ವಭಾವ ತತ್ವ ಮತ್ತು ರತ್ನಗಳ ಸಂಕ್ಷಿಪ್ತ ಪರಿಚಯ ಮೇಷ: ಕುಜಗ್ರಹ ಅಧಿಪತಿ. ಕ್ರೂರ ಗ್ರಹ. ಅಗ್ನಿ ತತ್ವ ರತ್ನ- ಹವಳ ವೃಷಭ : ಈ ರಾಶಿಗೆ ಶುಕ್ರಗ್ರಹ ಅಧಿಪತಿ. ಸೌಮ್ಯ ಗ್ರಹ ಭೂತತ್ವ ರತ್ನ -ವಜ್ರ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಮಿಥುನ: ಈ ರಾಶಿಗೆ ಬುಧ ಗ್ರಹ ಅಧಿಪತಿ. ಸೌಮ್ಯ ಗ್ರಹ. ವಾಯುತತ್ವ ರತ್ನ -ಪಚ್ಚೆ ಕರ್ಕಾಟಕ: ಈ ರಾಶಿಗೆ ಚಂದ್ರ ಗ್ರಹ ಅಧಿಪತಿ. ಸೌಮ್ಯಗ್ರಹ. ಜಲತತ್ವ ರತ್ನ- ಮುತ್ತು ಸಿಂಹ ಈ ರಾಶಿಗೆ ರವಿಗ್ರಹ ಅಧಿಪತಿ.…

Read More