Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಮತಾಂಧ ನಾಥೂರಾಮ್ ಗೋಡ್ಸೆ ಮಹಾತ್ಮಾ ಗಾಂಧಿಯವರನ್ನು ಗುಂಡಿಟ್ಟು ಕೊಂದು, ಅವರು ಇಹಲೋಕ ತ್ಯಜಿಸಿರಬಹುದು. ಆದರೆ ಮಹಾತ್ಮಾ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಗೋಡ್ಸೆಯಾಗಲಿ ಅಥವಾ ಇನ್ಯಾರಿಂದಾಗಲಿ ಕೊಲ್ಲಲು ಸಾಧ್ಯವಿಲ್ಲ. ಇಂದಿಗೂ ಅವರ ವಿಚಾರಧಾರೆಗಳು , ಮೌಲ್ಯಗಳು ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿಯೇ ಪ್ರಸ್ತುತವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುತಾತ್ಮರ ದಿನಾಚರಣೆ ಅಂಗವಾಗಿ ವಿಧಾನಸೌಧದ ಮಹಾತ್ಮಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಜನವರಿ 30, 1948 ರಂದು ಮಹಾತ್ಮಾ ಗಾಂಧೀಜಿಯವರನ್ನು ಹತ್ಯೆ ಮಾಡಿದ ದಿನ. ಗಾಂಧೀಜಿಯವರು ನನ್ನ ಜೀವನವೇ ನನ್ನ ಸಂದೇಶ ಎಂದು ಹೇಳಿದ್ದರು. ಅವರ ಹೋರಾಟಡ ಬದುಕು, ಅಹಿಂಸೆ, ಸತ್ಯಾಗ್ರಹ, ಇವು ನಮಗೆ ಪ್ರೇರಣೆ. ಜಗತ್ತಿನಲ್ಲಿ ಸತ್ಯ, ಅಹಿಂಸೆ, ಸತ್ಯಾಗೃಹದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ದೇಶದಲ್ಲಿ ಬಹಳ ದೀರ್ಘ ಕಾಲ ನಡೆದ ಹೋರಾಟದ ನಾಯಕತ್ವವನ್ನು ಗಾಂಧೀಜಿ ವಹಿಸಿದ್ದರು. 1915 ರಲ್ಲಿ ದಕ್ಷಿಣ ಆಫ್ರಿಕಾ ದಿಂದ…
ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗಿರುವಂತ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಂಪುಟ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಫೈನಾನ್ಸ್ ಗಳ ಕಡಿವಾಣಕ್ಕೆ ತರಲಿರುವ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಯ ಸುಗ್ರೀವಾಜ್ಞೆ ಕುರಿತಂತೆ ಬಿಸಿ ಬಿಸಿ ಚರ್ಚೆ ನಡೆಸಲಾಯಿತು. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ಸಂಬಂಧ ಮಂಡಿಸಲಾದಂತ ಸುಗ್ರೀವಾಜ್ಞೆ ತರುವಂತ ಮಸೂದೆಗೆ ಅನುಮೋದನೆ ನೀಡಲಾಗಿದೆ. ಇನ್ನೂ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿದ ಬಳಿಕ, ಅವರು ಒಪ್ಪಿಗೆ ಸೂಚಿಸಿದ್ರೇ, ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಬೀಳಿದೆ. https://kannadanewsnow.com/kannada/congress-mp-rakesh-rathod-arrested-on-rape-charges/ https://kannadanewsnow.com/kannada/breaking-msc-student-brutally-murdered-with-slit-throat-in-raichur/
ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ಸೀತಾಪುರದ ಲೋಕಸಭಾ ಸಂಸದ ರಾಥೋಡ್ ಅವರನ್ನು ಶರಣಾಗತರಾದ ನಂತರ ಬಂಧಿಸಿ ಭಾರಿ ಪೊಲೀಸ್ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು. ಮಹಿಳೆಯೊಬ್ಬಳು ನೀಡಿದ ದೂರಿನ ಮೇರೆಗೆ ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ರಾಥೋಡ್ ವಿರುದ್ಧ ಜನವರಿ 17 ರಂದು ಪೊಲೀಸರು ಪ್ರಕರಣ ದಾಖಲಿಸಿದ್ದರು. ಕಳೆದ ನಾಲ್ಕು ವರ್ಷಗಳಿಂದ ಅವನು ತನ್ನನ್ನು ಲೈಂಗಿಕವಾಗಿ ಶೋಷಿಸುತ್ತಿದ್ದಾನೆ ಎಂದು ಅವಳು ಆರೋಪಿಸಿದಳು ಮತ್ತು ಅವನು ಅವಳನ್ನು ಮದುವೆಯಾಗಿ ರಾಜಕೀಯ ವೃತ್ತಿಜೀವನವನ್ನು ಮಾಡುವುದಾಗಿ ಭರವಸೆ ನೀಡಿದ್ದಾನೆ ಎಂದು ಹೇಳಿದರು. ಅವರು ಕರೆ ವಿವರಗಳು ಮತ್ತು ಕರೆ ರೆಕಾರ್ಡಿಂಗ್ ಗಳನ್ನು ಪೊಲೀಸರೊಂದಿಗೆ ಹಂಚಿಕೊಂಡಿದ್ದಾರೆ. ಇದಕ್ಕೂ ಮುನ್ನ ಬುಧವಾರ, ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು ಮತ್ತು ಶರಣಾಗುವಂತೆ ಕೇಳಿಕೊಂಡಿತು. ಹೈಕೋರ್ಟ್ಗೆ ಮುಂಚಿತವಾಗಿ, ಸೀತಾಪುರದ ಎಂಪಿ-ಎಂಎಲ್ಎ ನ್ಯಾಯಾಲಯವು ಜನವರಿ 23 ರಂದು ಅವರ…
ಬೆಂಗಳೂರು : “ಬಿಜೆಪಿಯವರು ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು ಪ್ರತಿಭಟನೆ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಹುತಾತ್ಮ ದಿನಾಚರಣೆ ಅಂಗವಾಗಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಗುರುವಾರ ಮಾತನಾಡಿದರು. “ಬಿಜೆಪಿಯವರು ಗಾಂಧಿ ಅವರ ತತ್ವಗಳನ್ನು ಬಾಯಲ್ಲಿ ಹೇಳದೇ ಇರಬಹುದು ಆದರೆ ಆಡಳಿತ ಪಕ್ಷವನ್ನು ವಿರೋಧಿಸಲು ಗಾಂಧಿ ಅವರ ಪ್ರತಿಮೆಯನ್ನೇ ಆಶ್ರಯಿಸಬೇಕು. ಧರಣಿ ಮಾಡಬೇಕು ಎಂದು ಹೇಳಿಕೊಟ್ಟವರೇ ಗಾಂಧಿ. ಗಾಂಧಿ ಅವರ ಮೌನ, ಧ್ಯಾನದ ಹಿಂದೆ ದೊಡ್ಡ ಸಂದೇಶವಿದೆ. ಸ್ವದೇಶಿ ಆಲೋಚನೆ ಹೇಳಿಕೊಟ್ಟವರು ಗಾಂಧಿ. ಪ್ರಧಾನಿ ಅವರು ಇದನ್ನೇ ಮೇಕ್ ಇನ್ ಇಂಡಿಯಾ ಎಂದು ಹೇಳುತ್ತಿದ್ದಾರೆ” ಎಂದರು. “ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದವರು. ಪಕ್ಷದ ಅಧ್ಯಕ್ಷರಾಗಿ ಸ್ವಾತಂತ್ರ್ಯ ತಂದುಕೊಟ್ಟರಲ್ಲ ಎನ್ನುವ ಅಸಹನೆ ಬಿಜೆಪಿಯವರಿಗಿದೆ. ಈ…
ಬೆಂಗಳೂರು: ಬಿಎಡ್ ವಿದ್ಯಾರ್ಥಿಗಳಿಗೆ ಡಿಸೆಂಬರ್, ಜನವರಿಯಲ್ಲಿ ಹಾಸ್ಟೆಲ್ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸೂರ್ಯ ಮುಕುಂದರಾಜ್.ಎಲ್ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ವಕೀಲರು ಮತ್ತು ವಿದ್ಯಾ ವಿಷಯಕ ಪರಿಷತ್ ಸದಸ್ಯರಾದಂತ ಸೂರ್ಯ ಮುಕುಂದರಾಜ್.ಎಲ್ ಅವರು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಬಿಎಡ್ ಕಾಲೇಜುಗಳು, ಕೋರ್ಸುಗಳಿಗೆ ಅಡಿಶನ್ ತೆಗೆದುಕೊಳ್ಳುವುದು ಡಿಸೆಂಬರ್ ಜನವರಿ ತಿಂಗಳಲ್ಲಿ. ಆದ್ದರಿಂದ ಬಿಎಡ್ ವಿದ್ಯಾರ್ಥಿಗಳಿಗೆ ಸರ್ಕಾರಿ ಹಾಸ್ಟೆಲ್ಗಳಲ್ಲಿ ಪ್ರವೇಶಾತಿ ಸಿಗುವುದಿಲ್ಲ. ಜನವರಿ ತಿಂಗಳಲ್ಲಿ ಹಾಸ್ಟೆಲ್ ಅರ್ಜಿಗಳನ್ನು ನಿಲ್ಲಿಸಿರುತ್ತಾರೆ. ಆದ್ದರಿಯಿದ ಬಿಎಡ್ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಸಿಗದೇ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗಿರುತ್ತದೆ. ಆದರಿಂದ ಬಿಎಡ್ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕೆಂದು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ. https://kannadanewsnow.com/kannada/rs-8-lakh-offer-to-make-a-woman-pregnant-innocent-youth-are-her-target/ https://kannadanewsnow.com/kannada/karnataka-bjp-appoints-new-presidents-for-23-districts/
ಮಂಡ್ಯ : ಮನ್ಮುಲ್ ನಿರ್ದೆಶಕ, ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ವಿರುದ್ಧ ಮುಂದಿನ ದಿನಗಳಲ್ಲಿ ಪಕ್ಷದಿಂದ ಶಿಸ್ತು ಕ್ರಮ ಆಗಬಹುದು ಎಂದು ಬಿಜೆಪಿ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಎಚ್ಚರಿಕೆ ನೀಡಿದರು. ಮದ್ದೂರು ಪಟ್ಟಣದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನಿವಾಸದಲ್ಲಿ ಬುಧವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮೈತ್ರಿ ಧರ್ಮ ಪರಿಪಾಲನೆ ಮಾಡಬೇಕಿರುವುದು ನಾಯಕನಾದವನಲ್ಲಿರಬೇಕಾದ ಗುಣ ಅದನ್ನು ಬಿಟ್ಟು ನಾಮಪತ್ರವನ್ನು ಹಿಂಪಡೆಯದೇ ಚುನಾವಣಾ ಕಣದಲ್ಲಿ ಉಳಿಯುವ ಮೂಲಕ ಎಸ್.ಪಿ.ಸ್ವಾಮಿ ಪಕ್ಷಕ್ಕೆ ಮುಜುಗರ ತಂದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಮಾಜಿ ಶಾಸಕರಾದ ರಾಮ್ ದಾಸ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಹಲವಾರು ನಾಯಕರುಗಳಿಗೆ ಕೆಲವೊಂದು ಸಂದರ್ಭಗಳಲ್ಲಿ ಪಕ್ಷ ಟಿಕೆಟ್ ನೀಡಿಲ್ಲ ಎಂಬುದನ್ನು ಅರಿಯಬೇಕು ಎಂದು ಮನ್ ಮುಲ್ ಚುನಾವಣೆಯ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಸ್.ಪಿ.ಸ್ವಾಮಿ ರವರ ವಿರುದ್ಧ ಕಿಡಿಕಾರಿದರು. ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಮಾತನಾಡಿ, ಮೈತ್ರಿ ಧರ್ಮದ ಪ್ರಕಾರ ನಾವು ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಮಹೇಶ್ ಅವರನ್ನು…
ಬೆಂಗಳೂರು: ಮಂಡ್ಯ ಜಿಲ್ಲೆ, ವಿ.ಸಿ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪನೆಗೆ ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದು, ಮಂಡ್ಯ ಜಿಲ್ಲೆ ಸೇರಿದಂತೆ ಮೈಸೂರು ವಿಭಾಗದ ಜನರ ಬಹುದಿನಗಳ ಕನಸು ಈಡೇರಿದೆ. 2024-25ನೇ ಸಾಲಿನ ಬಜೆಟ್ ಭಾಷಣದ ಕಂಡಿಕೆ-42ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಸಾಧ್ಯತೆ ಕುರಿತು ಪರಿಶೀಲನೆಗೆ ಸಮಿತಿ ರಚಿಸುವುದಾಗಿ ಘೋಷಣೆ ಮಾಡಿದ ಒಂದು ವರ್ಷದೊಳಗೆ ವಿವಿ ಪ್ರಾರಂಭಕ್ಕೆ ಆದೇಶ ಹೊರಬಿದ್ದಿದೆ. ಕೃಷಿ ಸಚಿವರ ವಿಶೇಷ ಕಾಳಜಿ, ನಿರಂತರ ಪರಿಶ್ರಮ ಶೀಘ್ರವೇ ಫಲ ನೀಡಿದೆ. ಇದಕ್ಕಾಗಿ ಚಲುವರಾಯಸ್ವಾಮಿರವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ನೂತನ ಬಜೆಟ್ ಘೋಷಣೆಯಂತೆ ಬೆಂಗಳೂರು ಕೃಷಿ ವಿ.ವಿಯ ವಿಶ್ರಾಂತಿ ಕುಲಪತಿ ಡಾ||ರಾಜೇಂದ್ರಪ್ರಸಾದ್ರವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. ಈ ತಂಡವು ಹಲವು ಭಾರಿ ಸ್ಥಳ ಪರಿಶೀಲಿಸಿ, ಸಭೆಗಳನ್ನು ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಈ ಸಮಿತಿಯು ನೂತನ…
ಮಂಡ್ಯ: ಮೈಕ್ರೋ ಫೈನಾನ್ಸ್ ಗಳು ಸಾಲ ವಸೂಲಾತಿ ಸಂದರ್ಭದಲ್ಲಿ ಕಿರುಕುಳ ನೀಡಿದರೆ 08232- 224655 ಸಹಾಯವಾಣಿಗೆ ಕರೆ ಮಾಡಿ ದೂರು ಸಲ್ಲಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್ ಕಂಪನಿಗಳ ಸಭೆ ನಡೆಸಿ ಮಾತನಾಡಿದರು. ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಸಮಾಜದಲ್ಲಿ ಅವಕಾಶವಿಲ್ಲ. ಸಾಲ ಮರುಪಾವತಿ ಮಾಡದೆ ಇರುವವರನ್ನು ಅವಾಚ್ಯ ಪದಗಳಿಂದ ನಿಂದಿಸುವುದು, ಮನೆಯ ಮೇಲೆ ಅವಮಾನವಾಗುವ ರೀತಿ ಮನೆ ಅಡಮಾನ ಮಾಡಿಕೊಳ್ಳಲಾಗಿದೆ ಎಂದು ಬರೆಯುವ ಪ್ರಕರಣಗಳು ಕಂಡು ಬಂದಲ್ಲಿ ಪೊಲೀಸ್ ಇಲಾಖೆ ಅವರು ನೇರವಾಗಿ ಸ್ವಯಂ ಹಿತಶಕ್ತಿಯಿಂದ ಎಫ್.ಐ.ಆರ್ ದಾಖಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು. ಮೈಕ್ರೋ ಫೈನಾನ್ಸ್ ಬಗ್ಗೆ ಬರುವ ದೂರುಗಳನ್ನು ಪರಿಶೀಲಿಸಲು ಜಿಲ್ಲಾ ಮಟ್ಟದಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ತಾಲ್ಲೂಕು ಮಟ್ಟದಲ್ಲಿ ಸಹ ತಾಲ್ಲೂಕು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದರು. ಸಾಲ ವಸೂಲಾತಿ ಮಾಡಲು ಆರ್.ಬಿ.ಐ ನಿಯಮಗಳಿವೆ. ನಿಯಮ…
ನವದೆಹಲಿ: ಭಾರತದಲ್ಲಿ ಕೈಯಿಂದ ಮಲ ಹೊರುವ ಪದ್ಧತಿಯನ್ನು ನಿರ್ಮೂಲನೆ ಮಾಡುವಂತೆ ಕೋರಿ ಸಲ್ಲಿಸಲಾದ ರಿಟ್ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ಇಂದು (ಜನವರಿ 29) ಆರು ಮೆಟ್ರೋಪಾಲಿಟನ್ ನಗರಗಳಲ್ಲಿ ಕೈಯಿಂದ ಮಲ ಹೊರುವ ಮತ್ತು ಕೈಯಿಂದ ಒಳಚರಂಡಿ ಸ್ವಚ್ಛಗೊಳಿಸುವುದನ್ನು ನಿಷೇಧಿಸುವ ನಿರ್ದೇಶನಗಳನ್ನು ನೀಡಿದೆ. ಕೇಂದ್ರವು ಸಲ್ಲಿಸಿದ ಸಮಗ್ರ ಅಫಿಡವಿಟ್ನಲ್ಲಿ, ಕೈಯಿಂದ ಮಲ ಹೊರುವ ಮತ್ತು ಒಳಚರಂಡಿ ಸ್ವಚ್ಛಗೊಳಿಸುವಿಕೆಯನ್ನು ನಿರ್ಮೂಲನೆ ಮಾಡುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಅದು ತನ್ನ ಆದೇಶದಲ್ಲಿ ತಿಳಿಸಿದೆ. “ಆದ್ದರಿಂದ, ದೆಹಲಿ, ಮುಂಬೈ, ಚೆನ್ನೈ, ಕೋಲ್ಕತಾ, ಬೆಂಗಳೂರು ಮತ್ತು ಹೈದರಾಬಾದ್ನ ಮೆಟ್ರೋಪಾಲಿಟನ್ ನಗರಗಳಲ್ಲಿ ಹಸ್ತಚಾಲಿತ ಒಳಚರಂಡಿ ಶುಚಿಗೊಳಿಸುವಿಕೆ ಮತ್ತು ಕೈಯಿಂದ ಮಲ ಹೊರುವ ಕೆಲಸವನ್ನು ನಿಲ್ಲಿಸುವಂತೆ ನಾವು ಈ ಮೂಲಕ ಆದೇಶಿಸುತ್ತೇವೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹೊರಡಿಸಿದ ಆದೇಶದ ಜೊತೆಗೆ, ಪ್ರತಿ ಮೆಟ್ರೋಪಾಲಿಟನ್ ನಗರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ (ಆಯಾ ನಗರಗಳಲ್ಲಿ ಅವರನ್ನು ಯಾವುದೇ ಹೆಸರಿನಿಂದ ಕರೆಯಲಾಗುತ್ತದೆ) ನಗರದಲ್ಲಿ ಕೈಯಿಂದ ಮಲ ಹೊರುವ ಮತ್ತು ಒಳಚರಂಡಿ ಸ್ವಚ್ಛಗೊಳಿಸುವುದನ್ನು ಹೇಗೆ…
ಬೆಂಗಳೂರು: ಪ್ರತಿಯೊಬ್ಬ ನಾಗರಿಕನು ತನ್ನ ಬಿಬಿಎಂಪಿ ಇ-ಖಾತೆ ಯನ್ನು ಸರಾಗವಾಗಿ, ಉಚಿತವಾಗಿ ತಾನೇ ಸ್ವಂತವಾಗಿ ಪಡೆಯುವುದನ್ನು ಸಕ್ರಿಯಗೊಳಿಸಲು ಈ ಕೆಳಗಿನಂತೆ ಸ್ಪಷ್ಟೀಕರಿಸಿದೆ. 1. ಅಂತಿಮ ಇ-ಖಾತೆ ಪಡೆಯಲು ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರದ ಅಗತ್ಯವಿಲ್ಲ. 2. ಕೇವಲ ಸಬ್ ರಿಜಿಸ್ಟ್ರಾರ್ ಕಛೇರಿಯಲ್ಲಿ ತಕ್ಷಣದ ಮಾರಾಟ ಅಥವಾ ವಹಿವಾಟಿಗೆ ಮಾಡುವವರು ಮಾತ್ರ ಬಿಬಿಎಂಪಿ ಇ-ಖಾತೆ ವ್ಯವಸ್ಥೆಯಲ್ಲಿ ಒಂದು ಬಾರಿಗೆ ಮಾತ್ರ ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರ (EC) ಅನ್ನು ನೀಡಬೇಕಾಗುತ್ತದೆ. ಇದು ಒಟ್ಟು ಆಸ್ತಿಯಲ್ಲಿ ಕೇವಲ 5% ಆಗಿರುತ್ತದೆ. 3. ಮೇಲಿನ ವಿಶೇಷ ಪ್ರಕರಣದಲ್ಲಿ ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರವನ್ನು(EC), I. “ಯಾವ ದಿನಾಂಕದಿಂದ”- ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರವು(EC) ಹಾಲಿ ಹಕ್ಕು ಹೊಂದಿರುವ ಮಾಲೀಕನು ಕ್ರಯ/ನೋಂದಾಯಿತ ಪತ್ರದ ಮೂಲಕ ಪಡೆದ ದಿನಾಂಕದ ಕನಿಷ್ಟ ಒಂದು ದಿನದ ಹಿಂದಿನ ದಿನಾಂಕದಿಂದ ಮತ್ತು II. “ಯಾವ ದಿನಾಂಕದವರೆಗೆ”- ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರವು(EC) ದಿನಾಂಕ: 31.10.2024 ರ ವರೆಗೆ ಇರಬೇಕು 4. ಆಸ್ತಿ ಋಣಭಾರ ರಾಹಿತ್ಯ…







