Subscribe to Updates
Get the latest creative news from FooBar about art, design and business.
Author: kannadanewsnow09
ಉಡುಪಿ : ಯಾವುದೇ ವ್ಯಕ್ತಿಯ ಬದುಕಲ್ಲೂ ಕನಸುಗಳು ಇರುತ್ತವೆ. ಆದರೆ ಅದನ್ನು ನಿಜ ಮಾಡಿಕೊಳ್ಳಲು ನಾನಾ ಸವಾಲು- ಅಡೆತಡೆಗಳು ಹೆಜ್ಜೆಹೆಜ್ಜೆಗೂ ಸಿಗುತ್ತವೆ. ಅಂಥದ್ದರಲ್ಲಿ ತಂತ್ರಜ್ಞಾನದ ಸಹಾಯದಿಂದ ದೊಡ್ಡ ಮಟ್ಟದಲ್ಲಿ ಸಹಾಯ ಆಗುವಂಥ ಕನಸುಗಳಿಗೆ ರೆಕ್ಕೆ ಕಟ್ಟುವ ಉದ್ದೇಶದಿಂದ ರಿಲಯನ್ಸ್ ಡಿಜಿಟಲ್ ನಿಂದ “ಹ್ಯಾಪಿನೆಸ್ ಪ್ರಾಜೆಕ್ಟ್” ಶುರು ಮಾಡಲಾಗಿದೆ. ಅದರ ಭಾಗವಾಗಿ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿರುವ ಅಜ್ಜ- ಅಜ್ಜಿ ಊಟ ಎಂಬ ಹೆಸರಿನ ಮೆಸ್ ಗೆ ಟೆಕ್ನಾಲಜಿಯ ನೆರವನ್ನು ನೀಡಲಾಗಿದೆ. ಇದಕ್ಕಾಗಿ ಕಾರ್ಯಕ್ರಮದ ಮುಖ್ಯ ನಿರೂಪಕಿ ಫರಾಹ್ ಖಾನ್ ಹಾಗೂ ಸಹ ನಿರೂಪಕರಾದ ಸಂಜೋತ್ ಕೀರ್ ಕರ್ನಾಟಕದಲ್ಲಿನ ಮಣಿಪಾಲಕ್ಕೆ ಬಂದು ಈ ಅಜ್ಜ- ಅಜ್ಜಿ ಊಟದ ಮೆಸ್ ಗೆ ಅಗತ್ಯ ಇರುವಂಥದ್ದನ್ನು ತಲುಪಿಸಿದ್ದಾರೆ. ಗೋಪಾಲಕೃಷ್ಣ ಪ್ರಭು ಹಾಗೂ ವಸಂತಿಪ್ರಭು ಅವರು ಮಣಿಪಾಲದಲ್ಲಿ ಮೆಸ್ ನಡೆಸುತ್ತಾರೆ. ಇಲ್ಲಿ ಸಿಗುವ ಅನ್ ಲಿಮಿಟೆಡ್ ಬಾಳೆ ಎಲೆ ಊಟಕ್ಕೆ ಅವರು ಪಡೆಯುವುದು ಅರವತ್ತು ರೂಪಾಯಿ ಮಾತ್ರ. ಈ ದಂಪತಿಗೆ ಬಹಳ ವಯಸ್ಸಾಗಿದೆ. ಅದರಲ್ಲಿ ಗೋಪಾಲಕೃಷ್ಣ ಅವರಿಗೆ ನಡು…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರಿಗೆ ಬೆನ್ನು ಮೂಳೆ ಜರುಗಿರುವುದಾಗಿ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಹೀಗಾಗಿ ಅವರಿಗೆ ತುರ್ತು ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇರೋದಾಗಿ ಹೇಳಲಾಗುತ್ತಿದೆ. ನಟ ದರ್ಶನ್ ಅವರು ಅನಾರೋಗ್ಯ ಸಂಬಂಧ ಮೈಸೂರಲ್ಲಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದಾರೆ. ಅವರನ್ನು ಪರೀಕ್ಷಿಸಿದಂತ ವೈದ್ಯರು, ಅವರ ಡಿಸ್ಕ್ ಜರುಗಿರೋದನ್ನು ಗುರುತಿಸಿದ್ದಾರೆ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ. ನಟ ದರ್ಶನ್ ಅವರಿಗೆ ಕಾಟೇರ ಚಲನಚಿತ್ರದ ಚಿತ್ರೀಕರಣದ ವೇಳೆಯಲ್ಲೇ ಈ ಸಮಸ್ಯೆ ಎದುರಾಗಿತ್ತಂತೆ. ಆ ನೋವಿನ ನಡುವೆಯೂ ಅವರು ಚಿತ್ರೀಕರಣದಲ್ಲಿ ಬಾಗಿಯಾಗಿದ್ದರು ಎಂಬುದಾಗಿ ತಿಳಿದು ಬಂದಿದೆ. ತುರ್ತು ಶಸ್ತ್ರ ಚಿಕಿತ್ಸೆ ನಡುವೆಯೂ ಫಿಜಿಯೋ ಥೆರಫಿ ಹಾಗೂ ಮಾತ್ರೆಗಳ ಮೂಲಕ ಸದ್ಯಕ್ಕೆ ಸಮಸ್ಯೆ ನಿವಾರಣೆಗೆ ಅವರು ಪ್ರಯತ್ನಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಆದರೆ ಇದು ತಾತ್ಕಾಲಿಕವಾಗಿದ್ದು, ಶಸ್ತ್ರ ಚಿಕಿತ್ಸೆಯ ಮೂಲಕವೇ ಸಮಸ್ಯೆ ನಿವಾರಿಸಲು ಸಾಧ್ಯ. ಶಸ್ತ್ರ ಚಿಕಿತ್ಸೆಗೆ ಒಳಗಾಗುವಂತೆ ವೈದ್ಯರು ಸೂಚಿಸಿರೋದಾಗಿ ಹೇಳಲಾಗುತ್ತಿದೆ. https://kannadanewsnow.com/kannada/pakistani-airstrikes-kill-46-including-children-taliban-vows-retaliation/ https://kannadanewsnow.com/kannada/ed-probe-into-over-200-canadian-colleges-in-canada-for-smuggling-indians-to-us/
ಒಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಸಂತೋಷದಿಂದ ಇರಲು ಸಂಪತ್ತು ಬಹಳ ಮುಖ್ಯ. ಇದರಲ್ಲಿ ಸಂಪತ್ತನ್ನು ನೋಡಿದಾಗ ಕೇವಲ ಹಣವಷ್ಟೇ ಅಲ್ಲ ನಮ್ಮ ಜೀವನಕ್ಕೆ ಬೇಕಾದ ಎಲ್ಲಾ ಸಂಪನ್ಮೂಲಗಳು. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಈ ಸಂಪತ್ತು ಮತ್ತು ಸಮೃದ್ಧಿಯನ್ನು ಪಡೆಯಲು ಪೆರುಮಾಳ್ ಅನ್ನು ಹೇಗೆ ಪೂಜಿಸಬೇಕು ಎಂಬುದನ್ನು ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ…
ನವದೆಹಲಿ: ಕ್ರಿಸ್ ಮಸ್ ಹಬ್ಬದ ನಂತರದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ತಿರುವನಂತಪುರಂ ನಾರ್ತ್ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ರೈಲು ಸಂಖ್ಯೆ 06569 ಎಸ್ಎಂವಿಟಿ ಬೆಂಗಳೂರು-ತಿರುವನಂತಪುರಂ ನಾರ್ತ್ ವಿಶೇಷ ಎಕ್ಸ್ ಪ್ರೆಸ್ ರೈಲು 27 ಡಿಸೆಂಬರ್ 2024 ರಂದು ಮಧ್ಯಾಹ್ನ 03.50 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 10.05ಕ್ಕೆ ತಿರುವನಂತಪುರಂ ನಾರ್ತ್ ತಲುಪಲಿದೆ. ರೈಲು ಸಂಖ್ಯೆ 06570 ತಿರುವನಂತಪುರಂ ನಾರ್ತ್ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಎಕ್ಸ್ ಪ್ರೆಸ್ ವಿಶೇಷ ರೈಲು 28 ಡಿಸೆಂಬರ್ 2024 ರಂದು ತಿರುವನಂತಪುರಂ ನಾರ್ತ್ ನಿಲ್ದಾಣದಿಂದ ಮಧ್ಯಾಹ್ನ 12.35 ಕ್ಕೆ ಹೊರಟು, ಮರುದಿನ ಬೆಳಿಗ್ಗೆ 03.55 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ. ಎರಡೂ ಮಾರ್ಗಗಳಲ್ಲಿ ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್,…
ಬೆಳಗಾವಿ : ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮನಸ್ಸಿನಲ್ಲೆ ಕೊಳೆ ಇಟ್ಟುಕೊಂಡಿದ್ದಾರೆ. ಅದನ್ನು ಎಷ್ಟು ಬಾರಿ ತೊಳೆದರೂ ಹೋಗೋದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಸಿ.ಟಿ.ರವಿ ಅವರೇ ನಿಮ್ಮ ನಾಲಿಗೆಯನ್ನು ಫಿನಾಯಿಲ್ ಹಾಕಿ ತೊಳೆಯಿರಿ. ಮೈಗೆ ಹಚ್ಚಿರೊ ಕೊಳಕನ್ನು ತೊಳೆಯಬಹುದು. ಮನಸ್ಸಿಗೆ ಹಚ್ಚಿರೋ ಕೊಳಕನ್ನು ತೊಳೆಯಲು ಸಾಧ್ಯವಿಲ್ಲ ಎಂದು ನನಗೂ ಹಿರಿಯರೊಬ್ಬರು ಹೇಳಿದ್ದಾರೆ ಎಂದು ಸಚಿವರು ತಿರುಗೇಟು ನೀಡಿದರು. ಸಿ.ಟಿ.ರವಿ ಅವರ ಮನಸ್ಸಿನಲ್ಲೇ ಕೊಳಕಿದೆ. ಅಂತಹ ಕೊಳಕನ್ನು ತೊಳೆಯಲು ಸಾಧ್ಯವಿಲ್ಲ. ನಾನು ಎರಡು ದಿನಗಳ ಕಾಲ ಸರಿಯಾಗಿ ನಿದ್ದೆ ಮಾಡಲಿಲ್ಲ ಎಂದು ಸಚಿವರು ಹೇಳಿದರು. ಅಂದು ಪರಿಷತ್ ಕಲಾಪದಲ್ಲಿ ಘಟನೆ ಆದ ಬಳಿಕ ನಾನು ಅಲ್ಲೆ ಕುಳಿತಿದ್ದೆ. ಅವರು ಊಸರವಳ್ಳಿ ಥರ ಓಡಿ ಹೋದರು. ತಕ್ಷಣವೇ ನಾನು ಹರಿಪ್ರಸಾದ್, ಬೋಸರಾಜು ಅವರಿಗೆ ಸಿ.ಟಿ.ರವಿ ಅವರು ಬಳಸಿದ ಭಾಷೆ ಬಗ್ಗೆ ವಿವರಿಸಿದೆ. ಡಾಕ್ಟರ್ ಯತೀಂದ್ರ, ಉಮಾಶ್ರೀ,…
ಬೆಂಗಳೂರು: ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟವಾಗಿದ್ದು, ಸಾರಿಗೆ ನೌಕರರು ಪ್ರತಿಭಟಿಸುತ್ತಿದ್ದಾರೆ. ನಾಮ ಹಾಕುವುದರಲ್ಲಿ ಕಾಂಗ್ರೆಸ್ಸಿಗರು ಪಳಗಿದವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆರ್ಥಿಕ ನಷ್ಟದಲ್ಲಿದೆ.* ಬಸವರಾಜ ರಾಯರೆಡ್ಡಿ ಅವರು ಹಲವು ಬಾರಿ ಹೇಳಿದರೂ ಸಿಎಂ ಸಿದ್ದರಾಮಯ್ಯ ಕೇಳಿಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟು ನಷ್ಟ ಉಂಟಾಗಿದೆ. ಸಾರಿಗೆ ನೌಕರರು ಧರಣಿ ಮಾಡುತ್ತಿದ್ದು, ಅವರಿಗೆ 4 ಸಾವಿರ ಕೋಟಿ ರೂ. ನೀಡಬೇಕು. ರೈತರಿಗೆ ಒಂದೂವರೆ ಸಾವಿರ ಕೋಟಿ ಸಬ್ಸಿಡಿ ನಾಮ ಹಾಕಿದ್ದಾರೆ ಎಂದರು. ನಾಮ ಹಾಕುವುದರಲ್ಲಿ ಕಾಂಗ್ರೆಸ್ ನವರು ಪಳಗಿದವರು. ಹಾಗಾಗಿ ಈ ವರ್ಷ ಒಂದೂವರೆ ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಮುಂದಿನ ವರ್ಷ ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿ 2 ಲಕ್ಷ ಕೋಟಿ ರೂ. ಸಾಲ ಮಾಡಿದರೆ ಕರ್ನಾಟಕ ಜನ್ಮದಲ್ಲಿ ಮುಂದೆ ಬರಲು ಸಾಧ್ಯವಿಲ್ಲ ಎಂದು ದೂರಿದರು. ರಸ್ತೆಗೆ ಹೆಸರು ಸರಿಯಲ್ಲ ಕರ್ನಾಟಕಕ್ಕೆ…
ನವದೆಹಲಿ: ಹೊಸ ಸಂಸತ್ ಭವನದ ಮುಂದೆ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಬೆಂಕಿಯನ್ನು ನಂದಿಸಿ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ತಲುಪಿದ್ದು, ಪ್ರದೇಶವನ್ನು ಸುತ್ತುವರೆದಿದ್ದಾರೆ. ಇದೀಗ ಆತ್ಮಹತ್ಯೆಗೆ ಯತ್ನಿಸಿದಂತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/bribe-demand-another-trouble-for-mla-munirathna-sit-writes-to-seeking-sanction-for-prosecution/ https://kannadanewsnow.com/kannada/pakistani-airstrikes-kill-46-including-children-taliban-vows-retaliation/
ಬೆಂಗಳೂರು: ಗುತ್ತೆಗಾದರರಿಂದ ಲಂಚಕ್ಕೆ ಬೇಡಿಕೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ತನಿಖೆ ನಡೆಸುತ್ತಿರುವಂತ ಎಸ್ಐಟಿಯಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸ್ಪೀಕರ್ ಗೆ ಮನವಿ ಮಾಡಲಾಗಿದೆ. ಕಸ ವಿಲೇವಾರಿ ಗುತ್ತಿಗೆ ನೀಡುವುದಕ್ಕೆ ಗುತ್ತಿಗೆದಾರ ಚಲುವರಾಜು ಬಳಿಯಲ್ಲಿ 30 ಲಕ್ಷ ವಂಚಕ್ಕೆ ಬೇಡಿಕೆ ಇಟ್ಟ ಸಂಬಂಧ ಭ್ರಷ್ಟಾಚಾರ ನಿಗ್ರಹದಡಿ ಕೇಸ್ ದಾಖಲಾಗಿತ್ತು. ಈ ಪ್ರಕಣವನ್ನು ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿತ್ತು. ಈ ಪ್ರಕರಣದಲ್ಲಿ ಈಗ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸಂಕಷ್ಟ ಶುರುವಾಗಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವಂತ ಎಸ್ಐಟಿ ಅಧಿಕಾರಿಗಳು ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ತನಿಖೆ ನಡೆಸಲು ಸ್ಪೀಕರ್ ಯು.ಟಿ ಖಾದರ್ ಅವರಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಪತ್ರ ಬರೆದಿದೆ. ಒಂದು ವೇಳೆ ಅನುಮತಿ ನೀಡಿದ್ರೇ, ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಲಿದೆ. https://kannadanewsnow.com/kannada/pakistani-airstrikes-kill-46-including-children-taliban-vows-retaliation/ https://kannadanewsnow.com/kannada/ed-probe-into-over-200-canadian-colleges-in-canada-for-smuggling-indians-to-us/
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಆದರೇ ಹೀಗೆ ಎಸೆದಿರೋದರಲ್ಲಿ ಆ್ಯಸಿಡ್ ಮಾದರಿಯ ದ್ರವ್ಯ ಇದೆ ಎಂಬುದಾಗಿ ಹೇಳಲಾಗುತ್ತಿದೆ. ಹೀಗಾಗಿ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಇಂದು ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಆದರೇ ಅದು ಮೊಟ್ಟೆಯಲ್ಲ ಆ್ಯಸಿಡ್ ಎಂಬುದಾಗಿ ಅವರೇ ಆರೋಪಿಸಿದ್ದರು. ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಂಸದ ಡಿ.ಕೆ ಸುರೇಶ್ ಅವರೇ ಹೀಗೆ ಮಾಡಿಸಿದ್ದಾರೆ ಎಂಬುದಾಗಿ ಆರೋಪಿಸಿದ್ದರು. ಈ ಬೆನ್ನಲ್ಲೇ ಶಾಸಕ ಮುನಿರತ್ನ ಮೇಲೆ ಎಸೆದಿರುವುದು ಮೊಟ್ಟೆಯಲ್ಲ. ಅದರಲ್ಲಿ ಆ್ಯಸಿಡ್ ಮಾದರಿಯ ದ್ರವ್ಯ ಇರೋದಾಗಿ ಹೇಳಲಾಗುತ್ತಿದೆ. ಹೀಗಾಗಿ ಕೆಸಿ ಜನರಲ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ 2 ಗಂಟೆಯಿಂದ ಚಿಕಿತ್ಸೆ ನೀಡಲಾಗುತ್ತಿದೆ. ಶಾಸಕ ಮುನಿರತ್ನಗೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮೇಲ್ನೋಟಕ್ಕೆ ಆಸಿಡ್ ಎಂಬುದಾಗಿ ಹೇಳಲಾಗುತ್ತಿರುವುದರಿಂದ ವೈದ್ಯೆ ಪಂಕಜಾ ಅವರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/pakistani-airstrikes-kill-46-including-children-taliban-vows-retaliation/ https://kannadanewsnow.com/kannada/ed-probe-into-over-200-canadian-colleges-in-canada-for-smuggling-indians-to-us/
ನವದೆಹಲಿ: ಉತ್ತರಾಖಂಡದ ಭೀಮ್ತಾಲ್ ಪಟ್ಟಣದ ಬಳಿ ಬುಧವಾರ ಬಸ್ ಕಮರಿಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಮತ್ತು 24 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಲ್ಮೋರಾದಿಂದ ಹಲ್ದ್ವಾನಿಗೆ ತೆರಳುತ್ತಿದ್ದ ಬಸ್ ನಿಯಂತ್ರಣ ಕಳೆದುಕೊಂಡು ಭೀಮ್ತಾಲ್ ಬಳಿ 1,500 ಅಡಿ ಆಳದ ಕಮರಿಗೆ ಬಿದ್ದಿದೆ. ಪರಿಣಾಮವಾಗಿ, ಅನೇಕ ಪ್ರಯಾಣಿಕರು ಬಸ್ಸಿನಿಂದ ಎಸೆಯಲ್ಪಟ್ಟರು. ಗಾಯಗೊಂಡವರನ್ನು ಭೀಮ್ತಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಹಗ್ಗಗಳನ್ನು ಬಳಸಿ ಜನರನ್ನು ಕಮರಿಯಿಂದ ಹೊರತೆಗೆಯಲಾಗುತ್ತಿದೆ. ಹಲ್ದ್ವಾನಿಯಿಂದ ಹದಿನೈದು ಆಂಬ್ಯುಲೆನ್ಸ್ ಗಳನ್ನು ಅಪಘಾತದ ಸ್ಥಳಕ್ಕೆ ಕಳುಹಿಸಲಾಗಿದೆ. https://kannadanewsnow.com/kannada/bjp-mla-munirathnas-egg-throwing-case-three-arrested/ https://kannadanewsnow.com/kannada/ed-probe-into-over-200-canadian-colleges-in-canada-for-smuggling-indians-to-us/ https://kannadanewsnow.com/kannada/pakistani-airstrikes-kill-46-including-children-taliban-vows-retaliation/