Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ನಂಥ ಪ್ರಕರಣಗಳು ಕಂಡು ಬಂದರೆ, ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕನ್ನಡ ಚಿತ್ರರಂಗದಲ್ಲೂ ಕಾಸ್ಟಿಂಗ್ ಕೌಚ್ ಸದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆ ರೀತಿ ಏನಾದರೂ ಆಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆ ವಿಚಾರದ ಬಗ್ಗೆ ಭರವಸೆ ನೀಡಿದ್ದಾರೆ. ಮಹಿಳೆಯರ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ. ಕಾಸ್ಟಿಂಗ್ ಕೌಚ್ ನಂತ ಪ್ರಕರಣಗಳು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು. https://kannadanewsnow.com/kannada/good-news-for-anganwadi-workers-pending-salaries-to-be-paid-soon-minister-laxmi-hebbalkar/ https://kannadanewsnow.com/kannada/ramesh-babu-writes-to-cm-seeking-sit-probe-into-irregularities-in-distribution-of-sarees-under-bhagyalakshmi-scheme/
ಬೆಂಗಳೂರು: ನಾಲ್ಕು ತಿಂಗಳ ಗೌರವಧನ ಅಂಗನವಾಡಿ ಕಾರ್ಯಕರ್ತೆಯರಿಗೆ ಪಾವತಿ ಆಗಿರಲಿಲ್ಲ. ಹೀಗಾಗಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಸಂಕಷ್ಟಕ್ಕೆ ಸಿಲುಕಿದ್ದರು. ಶೀಘ್ರವೇ ಅಂಗನವಾಡಿ ಶಿಕ್ಷಕಿಯರಿಗೆ ವೇತನ ಪಾವತಿ ಮಾಡಲಾಗುತ್ತದೆ ಎಂಬುದಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಮೂಲಕ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯದ ಅಂಗನವಾಡಿ ಶಿಕ್ಷಕಿಯರಿಗೆ ಬಾಕಿ ಉಳಿದಿರುವ ವೇತನವನ್ನು ಶೀಘ್ರವೇ ಬಿಡುಗಡೆಗೊಳಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಎಲ್ಲಾ ವಿಚಾರವೂ ಅಂಗನವಾಡಿ ಶಿಕ್ಷಕಿಯರಿಗೆ ಗೊತ್ತಿದೆ. ರಾಜ್ಯ ಸರ್ಕಾರದಿಂದ 7 ಸಾವಿರ ರೂ, ಕೇಂದ್ರದಿಂದ 4 ಸಾವಿರ ರೂ ನೀಡಲಾಗುತ್ತಿದೆ. ಈಗಾಗಲೇ ಕೇಂದ್ರ ಸಚಿವರ ಜೊತೆ ಮಾತಾಡಿದ್ದೇನೆ. ಈ ಹಿಂದೆಯೂ ಹಲವು ಬಾರಿ ವೇತನ ವಿಳಂಬ ಆಗಿತ್ತು. ಗೌರಿ ಗಣೇಶ ಹಬ್ಬದೊಳಗೆ ಹಣ ಬಿಡುಗಡೆಗೆ ಪ್ರಯತ್ನ ಮಾಡುತ್ತೇವೆ ಎಂದುಸಚಿವೆ ಲಕ್ಷ್ಮೀ ಹೆಬ್ಳಾಳ್ಕರ್ ಹೇಳಿದ್ದಾರೆ. https://kannadanewsnow.com/kannada/mlc-chalavadi-narayanaswamy-demands-immediate-payment-of-honorarium-to-anganwadi-workers/ https://kannadanewsnow.com/kannada/ramesh-babu-writes-to-cm-seeking-sit-probe-into-irregularities-in-distribution-of-sarees-under-bhagyalakshmi-scheme/
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ನಾಲ್ಕು ತಿಂಗಳಿನಿಂದ ಗೌರವಧನ ಪಾವತಿಯಾಗಿಲ್ಲ ಎಂಬುದಾಗಿ ಸುದ್ದಿ ಮಾಧ್ಯಮಗಳ ಮೂಲಕ ಗಮನಕ್ಕೆ ಬಂದಿದೆ. ಅವರಿಗೆ ಕೂಡಲೇ ಗೌರವಧನ ಪಾವತಿ ಮಾಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಪತ್ರ ಬರೆದು ಬಿಜೆಪಿಯ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಪತ್ರ ಬರೆದಿರುವಂತ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಕಳೆದ ನಾಲ್ಕು ತಿಂಗಳನಿಂದ ಗೌರವ ಧನ ಪಾವತಿಯಾಗದೇ ಇರುವ ವಿಷಯವು ವಾರ್ತಾ ಮತ್ತು ಪತ್ರಿಕಾ ಮಾಧ್ಯಮದಲ್ಲಿ ಪ್ರಸಾರವಾಗಿರುವುದು ನನ್ನ ಗಮನಕ್ಕೆ ಬಂದಿದ್ದು, ಇದೊಂದು ವಿಷಾದನೀಯ ಸಂಗತಿಯಾಗಿದೆ. ಪುಟ್ಟ ಮಕ್ಕಳನ್ನು ಪಾಲನೆ ಮಾಡುತ್ತಾ ಅವರಿಗೆ ವಿದ್ಯೆಯನ್ನು ಕಲಿಸುವ ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರು ಕೂಲಿ ಕೆಲಸ ಮಾಡಿಕೊಂಡು ಬದುಕು ದೂಡುವಂತಾಗಿರುವುದು ಮಾತ್ರ ವಿಪರ್ಯಾಸವೇ ಸರಿ ಎಂದಿದ್ದಾರೆ. ಗೌರವಧನವನ್ನೇ ನಂಬಿಕೊಂಡು ಜೀವನ ಮಾಡುತ್ತಾ ಬಂದಿರುವ…
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮತ್ತು ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ಮುಂದಿನ ವಾರ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ. ಎರಡೂ ಕಡೆಯ ವಾದವನ್ನು ಮುಕ್ತಾಯಗೊಳಿಸಿದ ನಂತರ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತು. ಕೇಜ್ರಿವಾಲ್ ಪರ ಹಾಜರಾದ ಎಎಸ್ಜಿ ರಾಜು ಸೋಮವಾರದವರೆಗೆ ಟಿಪ್ಪಣಿ ಸಲ್ಲಿಸಲು ಸಮಯ ಕೋರಿದರು. ನಂತರ ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕರಣದ ಬಗ್ಗೆ ಹಿಂತಿರುಗುವುದಾಗಿ ಹೇಳಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ನ್ಯಾಯಪೀಠವು ದೆಹಲಿ ಸಿಎಂ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಇಂದು ಪುನರಾರಂಭಿಸಿತು. ಸಿಎಂ ಕೇಜ್ರಿವಾಲ್ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಪ್ರಕರಣದ ಸುದೀರ್ಘ ವಿಚಾರಣೆಯ ಹೊರತಾಗಿಯೂ ದೆಹಲಿ ಹೈಕೋರ್ಟ್ ಅವರ ಜಾಮೀನು ಅರ್ಜಿಯ ಬಗ್ಗೆ ಆದೇಶವನ್ನು ಹೊರಡಿಸಿಲ್ಲ ಎಂದು ಸುಪ್ರೀಂ…
ಶಿವಮೊಗ್ಗ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25 ನೇ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅಲ್ಪಸಂಖ್ಯಾತ ಸಮೂದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ 1 ರಿಂದ 8 ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಶೈಕ್ಷಣಿಕ ವರ್ಷದಲ್ಲಿ 1 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು. ಕಳೆದ ವರ್ಷದಲ್ಲಿ ವಿದ್ಯಾರ್ಥಿ ವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಯನ್ನು ಅಟೋ ರಿನಿವಲ್ ಎಂದು ಪರಿಗಣಿಸಲಾಗುವುದರಿಂದ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹಿಂದಿನ ವರ್ಷ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾಗದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಸಲ್ಲಿಸಕ್ಕದ್ದು. ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು ಎನ್ಪಿಸಿಐ ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳ ಪಾಲಕರ/ಪೋಷಕರ ವಾರ್ಷಿಕ ಆದಾಯ 1 ಲಕ್ಷ ಮೀರಿರಬಾರದು. ಆಸಕ್ತ…
ಸಿಕ್ಕಂ: ಸಿಕ್ಕಿಂನಲ್ಲಿ ವಾಹನವೊಂದು ರಸ್ತೆಯಿಂದ ಜಾರಿ ಸುಮಾರು 700 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ ನಾಲ್ವರು ಯೋಧರು ಸಾವನ್ನಪ್ಪಿದ್ದಾರೆ. ಸಿಕ್ಕಿಂನ ಪಕ್ಯೋಂಗ್ ಜಿಲ್ಲೆಯ ಸಿಲ್ಕ್ ಮಾರ್ಗದಲ್ಲಿ ಪಶ್ಚಿಮ ಬಂಗಾಳದ ಪೆಡಾಂಗ್ನಿಂದ ಜುಲುಕ್ಗೆ ಈ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಸಿಕ್ಕಿಂನ ರೆನಾಕ್ ರೊಂಗ್ಲಿ ರಾಜ್ಯ ಹೆದ್ದಾರಿಯ ದಲೋಪ್ಚಂದ್ ದಾರಾ ಬಳಿ ಈ ಘಟನೆ ನಡೆದಿದೆ. ಎಲ್ಲಾ ಸಿಬ್ಬಂದಿ ಪಶ್ಚಿಮ ಬಂಗಾಳದ ಬಿನಾಗುರಿಯ ಎನ್ರೂಟ್ ಮಿಷನ್ ಕಮಾಂಡ್ ಘಟಕಕ್ಕೆ ಸೇರಿದವರು. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/applications-invited-for-online-counselling-of-guest-lecturers/ https://kannadanewsnow.com/kannada/ramesh-babu-writes-to-cm-seeking-sit-probe-into-irregularities-in-distribution-of-sarees-under-bhagyalakshmi-scheme/
ಶಿವಮೊಗ್ಗ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2024-25ನೇ ಶೈಕ್ಷಣಿಕ ಸಾಲಿಗೆ ಡಿಪ್ಲೋಮಾ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಕೌನ್ಸಲಿಂಗ್ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆ.6ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರನ್ನು ದೂ.ಸಂ.: 08182-950365/ 950366 ಗಳನ್ನು ಸಂಪರ್ಕಿಸುವುದು. https://kannadanewsnow.com/kannada/hc-arrested-for-trying-to-sell-stolen-gold-jewellery/ https://kannadanewsnow.com/kannada/ramesh-babu-writes-to-cm-seeking-sit-probe-into-irregularities-in-distribution-of-sarees-under-bhagyalakshmi-scheme/ https://kannadanewsnow.com/kannada/keralas-hema-committee-to-form-model-committee-actors-and-actresses-meet-cm-siddaramaiah/
ಮೈಸೂರು: ಕಳ್ಳರು ಮನೆಗಳ್ಳತನ ಮಾಡಿ, ಕದ್ದಿದ್ದಂತ ಚಿನ್ನಾಭರಣದಲ್ಲಿ ಪಾಲು ಪಡೆದಿದ್ದಂತ ಹೆಡ್ ಕಾನ್ಸ್ ಸ್ಟೇಬಲ್ ಒಬ್ಬರು, ಮಾರಾಟ ಮಾಡಲು ಯತ್ನಿಸಿ ಪೊಲೀಸರಿಗೆ ಸಿಕ್ಕಿಬಿದ್ದು, ಬಂಧನಕ್ಕೆ ಒಳಗಾಗಿರುವಂತ ಘಟನೆ ಮೈಸೂರಿನ ಮಂಡಿ ಠಾಣೆಯಲ್ಲಿ ನಡೆದಿದೆ. ಮೈಸೂರಿನ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಿಧ ಮನೆಗಳ್ಳತನ ಪ್ರಕರಣಗಳು ನಡೆದಿದ್ದವು. ಈ ಕಳ್ಳತನ ಪ್ರಕರಣದಲ್ಲಿ ಕಳ್ಳರಾದಂತ ನಜರುಲ್ಲಾ ಬಾಬು, ಆಲಿ ಎಂಬುವರು ಭಾಗಿಯಾಗಿದ್ದಂತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಅವರನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರು ಬಂಧಿಸಿದ್ದಂತ ಮನೆಗಳ್ಳರಾದಂತ ನಜರುಲ್ಲಾ ಬಾಬು ಹಾಗೂ ಆಲಿ ತಾವು ಕದ್ದಿದ್ದಂತ 400 ಗ್ರಾಂ ಚಿನ್ನಾಭರಣದಲ್ಲಿ 300 ಗ್ರಾಂ ಅನ್ನು ಅಶೋಕಪುರಂ ಠಾಣೆಯ ಹೆಡ್ ಕಾನ್ ಸ್ಟೇಬಲ್ ರಾಜು ಎಂಬುವರಿಗೆ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಅಶೋಕಪುರಂ ಹೆಡ್ ಕಾನ್ ಸ್ಟೇಬಲ್ ರಾಜು ಅವರ ಮೇಲೆ ಮಂಡಿ ಠಾಣೆಯ ಪೊಲೀಸರು ಕಣ್ಣಿಟ್ಟಿದ್ದರು. ಇಂದು ಮನೆಗಳ್ಳರಿಂದ ಪಡೆದಿದ್ದಂತ 100 ಗ್ರಾಂ ಚಿನ್ನಾಭರಣ ಮಾರಾಟಕ್ಕೆ ಯತ್ನಿಸಿದಂತ ವೇಳೆಯಲ್ಲಿ ಹೆಡ್ ಕಾನ್ ಸ್ಟೇಬಲ್ ರಾಜುನನ್ನು…
ಬೆಂಗಳೂರು: ಉತ್ತಮ ಶಿಕ್ಷಕರ ಆಯ್ಕೆ ವಿಚಾರದಲ್ಲಿ ಸರಕಾರಕ್ಕೆ ದೂರು ಕೊಟ್ಟದ್ದು ಯಾರು? ಎಸ್ಡಿಪಿಐ ನವರು ದೂರು ಕೊಟ್ಟಿದ್ದಾರೆ. ಎಸ್ಡಿಪಿಐ ಕೇಳಿ ಈ ಸರಕಾರ ನಡೆಯುತ್ತದೆಯೇ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ಯಾರನ್ನೋ ಓಲೈಕೆ ಮಾಡುವ ಕಾರಣಕ್ಕೆ ಇವತ್ತು ಪ್ರಶಸ್ತಿ ತಡೆಹಿಡಿಯುವ ಕ್ರಮ ಕೈಗೊಂಡಿದ್ದು ಸರಿಯಲ್ಲ. ಶಾಲೆಗಳು ಪವಿತ್ರ ಸ್ಥಳಗಳು. ಮಕ್ಕಳ ಮನಸ್ಸಿನಲ್ಲಿ ಇಂಥ ಕುಚೋದ್ಯತನ ಹುಟ್ಟುಹಾಕುವ ಕೆಲಸ ಮಾಡಬಾರದು ಎಂದು ತಿಳಿಸಿದರು. ಹನುಮಾನ್ ವಿಚಾರದಲ್ಲೂ ಎಸ್ಡಿಪಿಐ ದೂರು ನೀಡಿತ್ತು. ನೀವು ಆದೇಶ ಮಾಡಿಬಿಟ್ಟಿರಿ. ಆದೇಶ ಮಾಡಲು ನಿಮಗೆ ಅಧಿಕಾರ ಕೊಟ್ಟಿದ್ದು ಯಾರು ಎಂದು ಕೇಳಿದರು. ಒಬ್ಬ ತಹಶೀಲ್ದಾರರಿಗೆ ಅದನ್ನು ಮಾಡಲು ಅಧಿಕಾರ ಇದೆಯೇ ಎಂದು ಪ್ರಶ್ನೆ ಮುಂದಿಟ್ಟರು. ಮತ್ತೆ ಆದೇಶ ವಾಪಸ್ ಪಡೆದಿರಿ. ಯಾಕೆ ಎಂದರಲ್ಲದೆ, ಅಲ್ಲಿ ಶಾಂತಿ ಕದಡುವ ವಾತಾವರಣ ಸೃಷ್ಟಿ ಆಗುತ್ತಿತ್ತು.…
ಬೆಂಗಳೂರು: ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಡೀಫ್ ಪೇಕ್ ವೀಡಿಯೋ, ಪೋಟೋಗಳನ್ನು ಎಡಿಟ್ ಮಾಡಿ ಅವಹೇಳನಕಾರಿ ಟ್ರೋಲ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರ ಅಭಿಮಾನಿಗಳ ಸಂಘದಿಂದ ಫಿಲ್ಮಂ ಚೇಂಬರ್ ಅಧ್ಯಕ್ಷರಿಗೆ ದೂರು ನೀಡಲಾಗಿದೆ. ಇಂದು ಫಿಲ್ಮಂ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್ ಅವರನ್ನು ಭೇಟಿಯಾಗಿರುವಂತ ರಾಜವಂಶ ಅಭಿಮಾನಿಗಳ ಸಂಘದ ಅಧ್ಯಕ್ಷರು, ಸದಸ್ಯರು ಕಿಡಿಗೇಡಿಗಳು ನಕಲಿ ಖಾತೆಯ ಮೂಲಕ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೇಕ್ ವೀಡಿಯೋ ಹರಿ ಬಿಟ್ಟಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ನಕಲಿ ಫೇಸ್ ಬುಕ್ ಖಾತೆಯಿಂದ ವೀಡಿಯೋ ವೈರಲ್ ಆಗಿದೆ. ರಾಜ್ ಕುಟುಂಬ, ನಟ ನಟಿಯರ ಪೋಟೋ, ವೀಡಿಯೋ ವೈರಲ್ ಮಾಡಲಾಗುತ್ತಿದೆ. ಕೂಡಲೇ ಕ್ರಮವಹಿಸಿ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ. ಇದೇ ಸಂದರ್ಭದಲ್ಲಿ ಸೋಷಿಯಲ್ ಮೀಡಿಯಾಗಳಿಗೆ ಆಧಾರ್ ಲಿಂಕ್ ಕಡ್ಡಾಯ ಮಾಡುವಂತೆಯೂ ಕೇಂದ್ರ ಸರ್ಕಾರಕ್ಕೆ ರಾಜವಂಶ ಅಭಿಮಾನಿಗಳ ಸಂಘದಿಂದ ಒತ್ತಾಯಿಸಲಾಯಿತು. https://kannadanewsnow.com/kannada/two-students-killed-in-road-accident-between-school-and-government-bus-in-raichur/ https://kannadanewsnow.com/kannada/ramesh-babu-writes-to-cm-seeking-sit-probe-into-irregularities-in-distribution-of-sarees-under-bhagyalakshmi-scheme/ https://kannadanewsnow.com/kannada/keralas-hema-committee-to-form-model-committee-actors-and-actresses-meet-cm-siddaramaiah/