Author: kannadanewsnow09

ಬೆಂಗಳೂರು: ನಗರದಲ್ಲಿ ಎರಡು ಅಂತಸ್ತಿನ ಕಟ್ಟಡವೊಂದು ಕುಸಿತಗೊಂಡಿದೆ. ಈ ಪರಿಣಾಮ ಮನೆಯ ಅವಶೇಷಗಳಡಿ ಹಲವರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬೆಂಗಳೂರಿನ ಜೀವನ್ ಭೀಮಾನಗರದ ತಿಪ್ಪಸಂದ್ರದಲ್ಲಿ ಪಕ್ಕದ ಮನೆಯ ಕಟ್ಟಡದ ಪಾಯ ತೆಗೆಯುವಾಗ, ಎರಡು ಅಂತಸ್ತಿನ ಕಟ್ಟಡವೊಂದು ಕುಸಿತಗೊಂಡಿದೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಆಗಮಿಸಿದ್ದಾರೆ. ಕುಸಿತಗೊಂಡ ಎರಡು ಅಂತಸ್ತಿನ ಕಟ್ಟಡದಲ್ಲಿ ಸಿಲುಕಿದ್ದವರನ್ನು ಹೊರ ಕಳಿಸಿದ್ದಾರೆ. ಇನ್ನೂ ಅವಶೇಷಗಳ ಅಡಿಯಲ್ಲಿ ಯಾರಾದರೂ ಸಿಲುಕಿದ್ದಾರಾ ಅಂತ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಅವರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. https://kannadanewsnow.com/kannada/important-information-for-railway-passengers-change-in-this-train-service-reschedule/ https://kannadanewsnow.com/kannada/breaking-news-state-govt-decides-to-give-rice-instead-of-annabhagya-rice/

Read More

ಬೆಂಗಳೂರು: ಸುರಕ್ಷತಾ ಕ್ರಮಗಳು ಮತ್ತು ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನಡುವೆ ನಡೆಯುತ್ತಿರುವ ರಸ್ತೆ ಕೆಳಸೇತುವೆ ಕಾಮಗಾರಿಗಳ ಹಿನ್ನೆಲೆಯಲ್ಲಿ, ಕೆಳಗಿನ ರೈಲು ಸೇವೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ: ರೈಲುಗಳ ಸಂಚಾರ ಭಾಗಶಃ ರದ್ದು: 1. ಫೆಬ್ರವರಿ 24 ಮತ್ತು 27, 2025 ರಂದು ರೈಲು ಸಂಖ್ಯೆ 16521 ಬಂಗಾರಪೇಟೆ-ಕೆಎಸ್ಆರ್ ಬೆಂಗಳೂರು ಮೆಮು ರೈಲು ಬೈಯ್ಯಪ್ಪನಹಳ್ಳಿ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಿದೆ. ಇದು ಬೈಯ್ಯಪ್ಪನಹಳ್ಳಿಯಲ್ಲಿ ಕೊನೆಗೊಳ್ಳುತ್ತದೆ. 2. ಫೆಬ್ರವರಿ 24 ಮತ್ತು 27, 2025 ರಂದು ರೈಲು ಸಂಖ್ಯೆ 56520 ಹೊಸಪೇಟೆ-ಕೆಎಸ್ಆರ್ ಬೆಂಗಳೂರು ಡೈಲಿ ಪ್ಯಾಸೆಂಜರ್ ರೈಲು ಯಶವಂತಪುರ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಿದೆ. ಇದು ಯಶವಂತಪುರದಲ್ಲಿ ಕೊನೆಗೊಳ್ಳುತ್ತದೆ. 3. ಫೆಬ್ರವರಿ 25 ಮತ್ತು 28 ರಂದು ರೈಲು ಸಂಖ್ಯೆ 17391 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು ಮತ್ತು ಯಶವಂತಪುರ ನಡುವೆ ಭಾಗಶಃ ರದ್ದಾಗಿದೆ. ಈ ರೈಲು ಕೆಎಸ್ಆರ್ ಬೆಂಗಳೂರಿನ…

Read More

ಮುಂಬೈ : ಸ್ಮಾರ್ಟ್ ಟಿವಿಗಳಿಗಾಗಿ ಭಾರತದ ಮೊದಲ ಆಪರೇಟಿಂಗ್ ಸಿಸ್ಟಮ್ ‘ಜಿಯೋಟೆಲಿ ಒಎಸ್’ ಅನ್ನು ರಿಲಯನ್ಸ್ ಜಿಯೋ ಘೋಷಣೆ ಮಾಡಿದೆ. ಇದು ನೆಕ್ಸ್ಟ್ ಜನರೇಷನ್ ಸ್ಮಾರ್ಟ್ ಟಿವಿ ಆಪರೇಟಿಂಗ್ ಸಿಸ್ಟಮ್ ಆಗಿದ್ದು, ಭಾರತೀಯ ಪ್ರೇಕ್ಷಕರ ವಿಶಿಷ್ಟ ಅಗತ್ಯಗಳನ್ನು ಪೂರೈಸುವುದಕ್ಕಾಗಿ ಇದನ್ನು ಸಿದ್ಧಪಡಿಸಲಾಗಿದೆ. ಭಾರತದಲ್ಲಿ ಅಂದಾಜು ಮೂರೂವರೆ ಕೋಟಿ ಮನರಂಜನೆಗೆ ಸಂಪರ್ಕ ಹೊಂದಿದ ಟಿವಿ ಕುಟುಂಬಗಳಿದ್ದು, ಡಿಜಿಟಲ್ ಮನರಂಜನೆಗೆ ಬೇಡಿಕೆ ನಿರಂತರವಾಗಿ ಹೆಚ್ಚಾಗುತ್ತಿದೆ. ಆದರೆ ಹಲವು ಗ್ರಾಹಕರಿಗೆ ಸವಾಲುಗಳು ಎದುರಾಗಿವೆ. ಏಕೆಂದರೆ ಅವರ ಟಿವಿಗಳ ಸೀಮಿತ ಸಾಮರ್ಥ್ಯದಿಂದಾಗಿ ಕಸ್ಟಮೈಸೇಷನ್ ಗೆ ನಿರ್ಬಂಧ, ಹೆಚ್ಚಿನ ಗುಣಮಟ್ಟದ ಪ್ರಾದೇಶಿಕ ಕಂಟೆಂಟ್ ಗೆ ಸೀಮಿತ ಸಂಪರ್ಕ, ಇವೆಲ್ಲದರ ಜೊತೆಗೆ ತಡೆರಹಿತ, ಪ್ರೀಮಿಯಂ ಬಳಕೆದಾರರ ಅನುಭವ ನೀಡುವಂಥದ್ದರ ಅನುಪಸ್ಥಿತಿ ತೊಡಕಾಗಿದೆ. ಭಾರತದಲ್ಲಿ ಹೀಗೆ ಮನರಂಜನೆಗೆ ಸಂಪರ್ಕ ಹೊಂದಿದ ಟೀವಿ ಕ್ಷೇತ್ರದಲ್ಲಿ ಕ್ರಾಂತಿಯಾಗಿದೆ. ಅದರಲ್ಲಿ ಡಿಜಿಟಲ್ ಸಂಪರ್ಕ ಮತ್ತು ಮನರಂಜನೆಯಲ್ಲಿ ಜಿಯೋ ನಾಯಕತ್ವದ ಸ್ಥಾನ ವಹಿಸಿದೆ. ವಿಶ್ವಾಸಾರ್ಹವಾದ ಕನೆಕ್ಟಿವಿಟಿ, ವೈವಿಧ್ಯಮಯವಾದ ಕಂಟೆಂಟ್ ಸಹಯೋಗಗಳು ಇವುಗಳಿಂದ ದೃಢವಾದ ಎಕೋಸಿಸ್ಟಮ್ ರೂಪಿಸಿರುವುದಕ್ಕೆ ಜಿಯೋಗೆ…

Read More

ಬೆಂಗಳೂರು: ಫ್ಯಾಸಿಟಿಸ್ ಎಂಬ ಮಾಂಸ ತಿನ್ನುವ ಸೋಂಕಿನಿಂದ ಕಾಲನ್ನೇ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದ್ದ 50 ವರ್ಷದ ಪೊಲೀಸ್ ಅಧಿಕಾರಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಫೋರ್ಟಿಸ್ ಆಸ್ಪತ್ರೆಯಲ್ಲಿ , ಸರ್ಜಿಕಲ್‌ ಗ್ಯಾಸ್ಟ್ರೋಲಾಜಿ ಹಿರಿಯ ಸಲಹೆಗಾರ ಡಾ. ಸಂತೋಷ್ ಎಂ.ಪಿ, ಅವರ ತಂಡ ಈ ಯಶಸ್ವಿ ಚಿಕಿತ್ಸೆಯನ್ನು ನಡೆಸಿದೆ. ಈ ಕುರಿತು ಮಾತನಾಡಿದ ಡಾ. ಸಂತೋಷ್‌, 50 ವರ್ಷದ ರವಿ (ಹೆಸರು ಬದಲಾಗಿದೆ) ಎಂಬ ಪೊಲೀಸ್‌ ಅಧಿಕಾರಿಯು ತೀವ್ರ ಕಾಲಿನ ಊತದಿಂದ ಬಳಲುತ್ತಿದ್ದರು, ಇದರ ಜೊತೆಗೆ, ಅತಿಯಾದ ನೋವು ಜ್ವರವನ್ನು ಹೊಂದಿದ್ದರು. ಈ ಹಿಂದೆಯೇ ಅವರು ಹೃದಯ ಸಮಸ್ಯೆ ಹೊಂದಿದ್ದ ಇವರಿಗೆ ಮಧಮೇಹದ ಇತಿಹಾಸವೂ ಇತ್ತು. ಹೃದಯ ಕಾಯಿಲೆಗಾಗಿ ಅನೇಕ ಚಿಕಿತ್ಸೆಗೆ ಒಳಗಾಗಿದ್ದ ಅವರ ಸ್ಥಿತಿ, ಈ ಕಾಲಿನ ಊತ ಹಾಗೂ ಸೋಂಕಿನಿಂದ ಹದಗೆಡುತ್ತಾ ಬರುತ್ತಿತ್ತು. ಅವರ ಕೀಲುಗಳು ಮತ್ತು ಮೂಳೆಗಳಿಗೂ ಈ ಸೋಂಕು ಹರಡಿತು. ಅವರ ಪೊಲೀಸ್‌ ವೃತ್ತಿಯಲ್ಲಿ ಕಾಲು ಅತಿ ಅವಶ್ಯಕವಾದ್ದರಿಂದ ಎಚ್ಚತ್ತೆಕೊಂಡ ಅವರು, ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ರವಿ…

Read More

ಬೆಂಗಳೂರು: ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿ ತಮ್ಮ ಜಮೀನು ಸರ್ವೆ ಸೇಡಿನ ರಾಜಕೀಯದ ಸೇಡಿನ ಭಾಗ ಎಂದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಇಷ್ಟು ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡುತ್ತಿದ್ದರು. ಈಗ ಐಎಎಸ್ ಅಧಿಕಾರಿಗಳ ಎಸ್ ಐಟಿಯನ್ನೂ ರಚನೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಬೆಂಗಳೂರಿನಲ್ಲಿ ಬುಧವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಆ ಭೂಮಿಯನ್ನು ನಾನು ಖರೀದಿಸಿ 40 ವರ್ಷವಾಗಿದೆ. ಅಷ್ಟೂ ವರ್ಷಗಳಿಂದ ಈ ವಿಷಯವನ್ನು ಜೀವಂತವಾಗಿಟ್ಟು ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ದೂರಿದರು. 1984ರಲ್ಲಿ ನಾನು ಈ ಭೂಮಿಯನ್ನು ಖರೀದಿ ಮಾಡಿದ್ದು. ಸಿನಿಮಾ ಹಂಚಿಕೆದಾರನಾಗಿ ದುಡಿದ ಹಣದಲ್ಲಿ ನಾನು ಈ ಭೂಮಿಯನ್ನು ಖರೀದಿ ಮಾಡಿದ್ದೇನೆ. ಅಂದಿನಿಂದಲೂ ಈ ಭೂಮಿಯ ಮೇಲೆ ಕೆಲವರ ಕಣ್ಣು ಬಿದ್ದಿದೆ. ನನ್ನನ್ನು ರಾಜಕೀಯವಾಗಿ ಎದುರಿಸಲಾಗದ ಅಸಹಾಯಕತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವೇ ಮೂಲಕ ನನ್ನನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಅವರು ಆರೋಪ ಮಾಡಿದರು. 2012ರಿಂದಲೂ ನನ್ನ…

Read More

ಕೇರಳ: ಕಾರವಾರದ ನೌಕಾಪಡೆಯ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ಹಂಚಿಕೆ ಮಾಡುತ್ತಿದ್ದಂತ ಮತ್ತೋರ್ವ ವ್ಯಕ್ತಿಯನ್ನು ಎನ್ಐಎ ಬಂಧಿಸಿದೆ. ನಿನ್ನೆಯಷ್ಟೇ ಎನ್ಐಎ ಅಧಿಕಾರಿಗಳು ಈ ಸಂಬಂಧ ಕಾರವಾರದ ನೌಕಾನೆಲೆಗೆ ಭೇಟಿ ನೀಡಿದ್ದರು. ಈ ಸಂಬಂಧ ತನಿಖೆಯನ್ನು ನಡೆಸಿದ್ದರು. ಇದೀಗ ಕೇರಳದ ಕೊಚ್ಚಿಯಲ್ಲಿ ಕಾರವಾರದ ನೌಕಾಪಡೆಯ ಸೂಕ್ಷ್ಮ ಮಾಹಿತಿ ಪಾಕ್ ಗೆ ಹಂಚಿಕೆ ಮಾಡುತ್ತಿದ್ದಂತ ಅಭಿಲಾಷ್ ಎಂಬಾತನನ್ನು ಬಂಧಿಸಿದೆ. ನಿನ್ನೆಯಷ್ಟೇ ಎನ್ಐಎ ಐಎಸ್ಐ ಸಂಬಂಧಿಸಿತ ವಿಶಾಖಪಟ್ಟಣಂ ಬೇಹುಗಾರಿಕೆ ಪ್ರಕರಣದಲ್ಲಿ ಕಾರವಾರದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಇಂದು ಮತ್ತೋರ್ವನನ್ನು ಬಂಧಿಸಿದೆ. ಹೀಗಾಗಿ ಕಾರವಾರ ನೌಕಾಪಡೆಯ ಸೂಕ್ಷ್ಮ ಮಾಹಿತಿ ಪಾಕ್ ಗೆ ನೀಡುತ್ತಿದ್ದಂತ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಎಂಟಕ್ಕೆ ಏರಿಕೆಯಾದಂತೆ ಆಗಿದೆ. https://kannadanewsnow.com/kannada/big-relief-for-siddaramaiah-in-muda-case-lokayukta-police-to-submit-b-report/ https://kannadanewsnow.com/kannada/delhi-cm-announcement-will-parvesh-verma-be-next-delhi-cm-who-could-be-bjp-frontrunners/ https://kannadanewsnow.com/kannada/breaking-news-state-govt-decides-to-give-rice-instead-of-annabhagya-rice/

Read More

ಬೆಂಗಳೂರು: ಹೈಕೋರ್ಟ್ ನಲ್ಲಿ ಮುಡಾ ಪ್ರಕರಣದ ವಿಚಾರಣೆ ಬಾಕಿ ಇದೆ. ಇದರ ನಡುವೆ ಲೋಕಾಯುಕ್ತ ಪೊಲೀಸರು ಮಧ್ಯಂತರ ವರದಿಯಾಗಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಸ್ವತಹ ದೂರುದಾರ ಸ್ನೇಹಮಯಿ ಕೃಷ್ಣ ಅವರೇ ಆರೋಪಿಸಿದ್ದೂ, ಮುಡಾ ಕೇಸ್ ಸಂಬಂಧ ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸರು ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ-ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಈ ವರದಿಯನ್ನು ನ್ಯಾಯಾಲಯದಲ್ಲಿ ನೀವು ಪ್ರಶ್ನಿಸಬಹುದು ಅಂತನೂ ತಿಳಿಸಿದ್ದಾರೆ ಎಂಬುದಾಗಿ ಹೇಳಿದರು. ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಮುಡಾ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯ ಕಾರಣದಿಂದ ಬಿ-ರಿಪೋರ್ಟ್ ಸಲ್ಲಿಸುವುದಾಗಿ ಲೋಕಾಯುಕ್ತ ಪೊಲೀಸರು ಹೇಳಿದ್ದಾರೆ. ಈ ಬಗ್ಗೆ ತಮಗೆ ನೋಟಿಸ್ ಕೂಡ ನೀಡಿದ್ದಾರೆ. ಆದರೇ ತನಿಖೆ ಇನ್ನೂ ಬಾಕಿ ಇದೆ. ಹೀಗಿರುವಾಗಲೇ ಮಧ್ಯಂತರ ವರದಿ ಸಲ್ಲಿಸುತ್ತಿದ್ದಾರೆ ಎಂಬುದಾಗಿ ತಿಳಿಸಿದರು. ತನಿಖೆ ಇನ್ನೂ ಬಾಕಿ ಇರುವಾಗಲೇ ಮಧ್ಯಂತರ ವರದಿಯನ್ನು ಸಲ್ಲಿಸಲು…

Read More

ನವದೆಹಲಿ: ಇಂದು ಸಂಜೆ ದೆಹಲಿಯ ನೂತನ ಸಿಎಂ ಆಯ್ಕೆಗಾಗಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಕೇಂದ್ರ ವೀಕ್ಷಕರಾಗಿ ಇಬ್ಬರನ್ನು ನೇಮಿಸಿ ಬಿಜೆಪಿ ಆದೇಶಿಸಿದೆ. ಈ ಸಂಬಂಧ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದು, ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿಯು ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಶ್ರೀ ರವಿಶಂಕರ್ ಪ್ರಸಾದ್ ಮತ್ತು ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಓಂ ಪ್ರಕಾಶ್ ಧನ್ಕರ್ ಅವರನ್ನು ದೆಹಲಿಯಲ್ಲಿ ಪಕ್ಷದ ಶಾಸಕಾಂಗ ಸಭೆಯ ನಾಯಕನ ಆಯ್ಕೆಗೆ ಕೇಂದ್ರ ವೀಕ್ಷಕರಾಗಿ ನೇಮಿಸಿದ್ದಾರೆ. https://kannadanewsnow.com/kannada/muda-case-cm-siddaramaiah-files-b-report-due-to-lack-of-evidence/ https://kannadanewsnow.com/kannada/delhi-cm-announcement-will-parvesh-verma-be-next-delhi-cm-who-could-be-bjp-frontrunners/

Read More

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಕೇಸ್ ಗೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿಗೆ, ಅದೇ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ ಎನ್ನುವಂತೆ ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣದ ಬಗ್ಗೆ ಬಿ-ರಿಪೋರ್ಟ್ ಸಲ್ಲಿಸಲಿದ್ದಾರೆ ಎಂಬುದಾಗಿದೆ. ಈ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಮಾಹಿತಿ ಹಂಚಿಕೊಂಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್ ಸಲ್ಲಿಸುವುದಾಗಿ ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ. ಬಿ ರಿಪೋರ್ಟ್ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಅಂತ ಹೇಳಿದ್ದಾರೆ ಎಂದರು. ತನಿಖೆ ಇನ್ನೂ ಬಾಕಿ ಇರುವಾಗಲೇ ಬಿ ರಿಪೋಸ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಬಿ ರಿಪೋಸ್ಟ್ ಸಲ್ಲಿಸೋ ಮಾಹಿತಿ ಇದೆ. ಮಧ್ಯಂತರ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/delhi-cm-announcement-will-parvesh-verma-be-next-delhi-cm-who-could-be-bjp-frontrunners/ https://kannadanewsnow.com/kannada/breaking-news-state-govt-decides-to-give-rice-instead-of-annabhagya-rice/

Read More

ಚಿಕ್ಕಬಳ್ಳಾಪುರ: ಗಾಂಜಾ ಸಾಗಿಸುತ್ತಿದ್ದಂತ ತಂದೆ, ಮಗಳು ಹಾಗೂ ಮೊಮ್ಮಗ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರದ ಚಿಂತಾಮಣಿಯ ಕುರಟಹಳ್ಳಿ ಕ್ರಾಸ್ ನಲ್ಲಿ ಗಾಂಜಾ ಸಾಗಿಸುತ್ತಿದ್ದಂತ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರೊಂದನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆಯಲ್ಲಿ 17.50 ಲಕ್ಷ ಮೌಲ್ಯದ 35 ಕೆಜಿ ಗಾಂಜಾ ಪತ್ತೆಯಾಗಿದೆ. ಪತ್ತೆಯಾದಂತ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನೂ ಕಾರಿನಲ್ಲಿ ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದಂತ ತಂದೆ, ಮಗಳು, ಮೊಮ್ಮಗ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂದಿತ ಆರೋಪಿಗಳನ್ನು ಬಾಗೇಪಲ್ಲಿಯ ಗರಿಗರೆಡ್ಡಿ ಪಾಳ್ಯದ ತಾಯಿ ದೇವಮ್ಮ, ಮಗ ಆಂಜಿ ಹಾಗೂ ಪಲ್ಲಿಕುಂಟೆ ನಿವಾಸಿ ತಂದೆ ಮಾರಪ್ಪ, ವೆಂಕಟರಮಣ, ಆದಿನಾರಾಯಣ ಎಂಬುದಾಗಿ ಗುರುತಿಸಲಾಗಿದೆ. ಕೃತ್ಯಕ್ಕೆ ಬಳಸಿದಂತ ಕಾರು ಸೀಜ್ ಮಾಡಿದ್ದು, ಈ ಸಂಬಂಧ ಚಿಕ್ಕಬಳ್ಳಾಪುರ ಸೆನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. https://kannadanewsnow.com/kannada/good-news-for-annabhagya-beneficiaries-in-the-state-three-months-extra-rice-to-be-credited-to-their-accounts-soon/ https://kannadanewsnow.com/kannada/delhi-cm-announcement-will-parvesh-verma-be-next-delhi-cm-who-could-be-bjp-frontrunners/ https://kannadanewsnow.com/kannada/breaking-news-state-govt-decides-to-give-rice-instead-of-annabhagya-rice/

Read More