Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕನ್ನಡ-ತಮಿಳು ಹೇಳಿಕೆಗಳ ವಿವಾದದ ನಡುವೆ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಕಮಲ್ ಹಾಸನ್ ಹೇಳಿದ್ದಾರೆ. ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವಂತ ನಟ ಕಮಲ್ ಹಾಸನ್, ಹೈಕೋರ್ಟ್ ಮೂಲಕ ಕರ್ನಾಟಕದಲ್ಲಿ ತಮ್ಮ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಮನವಿ ಮಾಡಿದ್ದರು. ಇಂದು ಹೈಕೋರ್ಟ್ ನ್ಯಾಯಪೀಠವು ಅವರನ್ನು ತರಾಟೆಗೆ ತೆಗೆದುಕೊಂಡು ಮೊದಲು ಕನ್ನಡಿಗರ ಕ್ಷಮೆ ಕೇಳುವಂತೆ ಹೇಳಿತ್ತು. ಅಲ್ಲದೇ ನೀವೇನು ಇತಿಹಾಸಜ್ಞರಲ್ಲ ಭಾಷೆಯ ಬಗ್ಗೆ ಹೇಳುವುದಕ್ಕೆ ಎಂಬುದಾಗಿಯೂ ಚಾಟಿ ಬೀಸಿತ್ತು. ಈ ಎಲ್ಲಾ ಬೆಳವಣಿಗೆಯ ನಡುವೆ ಕರ್ನಾಟಕ ಹೈಕೋರ್ಟ್ ಗೆ ನಟ ಕಮಲ್ ಹಾಸನ್ ಪರ ವಕೀಲರು ಮಾಹಿತಿ ನೀಡಿದ್ದು, ಕರ್ನಾಟಕದಲ್ಲಿ ಥಗ್ ಲೈಫ್ ಚಿತ್ರವನ್ನು ಬಿಡುಗಡೆ ಮಾಡುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಕನ್ನಡಿಗರ ತೀವ್ರ ವಿರೋಧದ ಕಾರಣ ನಟ ಕಮಲ್ ಹಾಸನ್ ನಟಿಸಿದ್ದಂತ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯಾಗುವುದಕ್ಕೆ ಬ್ರೇಕ್ ಬಿದ್ದಂತೆ ಆಗಿದೆ.
ಬೆಂಗಳೂರು: ನಟ ಕಮಲ್ ಹಾಸನ್ ತಮ್ಮ ನಟನೆಯ ಥಗ್ ಲೈಫ್ ಚಿತ್ರ ಬಿಡುಗಡೆಗೆ ಕೋರಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅವರಿಗೆ ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಇದರ ನಡುವೆಯೂ ನಟ ಕಮಲ್ ಹಾಸನ್ ಮೊಂಡಾಟ ಮುಂದುವರೆಸಿದ್ದಾರೆ. ಕ್ಷಮೆಯಾಚನೆ ಮಾಡಲು ಪರೋಕ್ಷವಾಗಿ ನಿರಾಕರಿಸಿದ್ದಾರೆ. ಕೋರ್ಟ್ ವಿಚಾರಣೆ ವೇಳೆಯಲ್ಲಿ ನಿರ್ಮಾಪಕರ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದ ಮಂಡಿಸುತ್ತಾ, ಕಮಲ್ ಹಾಸನ್ ಕ್ಷಮೆಯಾಚಿಸಿದರೇ ಎಲ್ಲವೂ ಸರಿಹೋಗಲಿದೆ ನಿಜ. ಆದರೇ ಕಮಲ್ ಹಾಸನ್ ಗೆ ಯಾವುದೇ ದುರುದ್ದೇಶವಿರಲಿಲ್ಲ. ಯಾವುದೇ ದುರುದ್ದೇಶವಿಲ್ಲದಿರುವುದರಿಂದ ಕ್ಷಮೆ ಕೇಳುತ್ತಿಲ್ಲ ಎಂದು ಹೇಳಿದರು. ಕನ್ನಡದ ಬಗ್ಗೆ ಅವರ ನಿಲುವನ್ನು ಪತ್ರದಲ್ಲಿ ತಿಳಿಸಿದ್ದಾರೆ. ತಮ್ಮ ಪತ್ರದ ಮೂಲಕ ಕನ್ನಡದ ಪ್ರೀತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಒಂದ ಸೇರಿಸುವ ಒತ್ತಾಯ ಇರಬಾರದು ಎಂಬುದಾಗಿ ಧ್ಯಾನ್ ಚಿನ್ನಪ್ಪ ವಾದಿಸಿದರು. ಈ ಮೂಲಕ ನಟ ಕಮಲ್ ಹಾಸನ್ ಪರೋಕ್ಷವಾಗಿ ಕ್ಷಮೆ ಕೇಳಲು ನಿರಾಕರಿಸಿರುವಂತ ವಿಚಾರವನ್ನು ಕೋರ್ಟ್ ಗಮನಕ್ಕೆ ತಂದರು. https://kannadanewsnow.com/kannada/an-open-air-museum-will-be-built-in-lakkoondi-cm-siddaramaiah/ https://kannadanewsnow.com/kannada/big-news-action-will-be-taken-if-the-public-is-disturbed-during-the-ipl-celebration-in-bangalore-ipl-2025-final/
ಲಕ್ಕುಂಡಿ: ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಲಕ್ಕುಂಡಿ ಚಾಲುಕ್ಯರ ರಾಜಧಾನಿ ಆಗಿತ್ತು. ಈಗ ಹೆಚ್.ಕೆ.ಪಾಟೀಲ ಆಸಕ್ತಿಯಿಂದಾಗಿ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ನಮ್ಮ ಸರ್ಕಾರದ ಅವಧಿಯಲ್ಲೇ ರಚನೆಯಾಗಿದೆ. ಚಾಲುಕ್ಯರ ಕಾಲದ ದೇವಸ್ಥಾನ, ಕೋಟೆ ಗಳನ್ನು ನಿರ್ಮಿಸಿದ್ದರು. ಇವುಗಳ ಅವಶೇಷಗಳ ಮೂಲಕ ಆ ಕಾಲದ ಶಿಲಾಶಾಸನಗಳ ಪರಿಚಯ ಮತ್ತು ರಾಜ್ಯಭಾರದ ಮಾಹಿತಿ ದೊರಕಿದೆ ಎಂದರು. ಇಲ್ಲಿ ದೊರೆತಿರುವ ಅವಶೇಷಗಳ ಪುನರುಜ್ಜೀವನಕ್ಕೆ ಸರ್ಕಾರದಿಂದ ಹಣ ಕೂಡ ಕೊಟ್ಟಿದ್ದೇವೆ. ಇದರಿಂದ ಐತಿಹಾಸಿಕ ಕುರುಹುಗಳನ್ನು ಸಂಗ್ರಹಿಸಲು, ರಕ್ಷಿಸಲು ಸಾಧ್ಯವಾಗಿದೆ ಎಂದರು. ಪ್ರಾಚ್ಯಾವಶೇಷಗಳು ದೊರೆತ ಸ್ಥಳದ ಜಾಗ ಮತ್ತು ಮನೆಗಳನ್ನು ಸರ್ಕಾರಕ್ಕೆ ಹಸ್ತಾಂತರಿಸಿದವರಿಗೆ ಧನ್ಯವಾದ ಅರ್ಪಿಸಿದರು. ಕಾನೂನು ಉಲ್ಲಂಘಿಸಿದವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ: ಕಾನೂನು ಉಲ್ಲಂಘಿಸಿ ಧರ್ಮದ ಹೆಸರು ಹೇಳಬಾರದು ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾರೇ ಆದರೂ, ಎಷ್ಟೇ ಪ್ರಭಾವಿ ಆದರೂ ಅವರ ವಿರುದ್ಧ…
ನವದೆಹಲಿ: ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಆರಂಭಿಸುವ ನಿರ್ಧಾರವನ್ನು ಮಂಗಳವಾರ ಸಮರ್ಥಿಸಿಕೊಂಡ ಭಾರತದ ರಕ್ಷಣಾ ಸಿಬ್ಬಂದಿ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್, “ರಾಜ್ಯ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಬೇಕು” ಎಂದು ಹೇಳಿದ್ದಾರೆ. ಉಭಯ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅವರ ಹೇಳಿಕೆಗಳು ಬಂದಿವೆ. ಪಾಕಿಸ್ತಾನವು ಗಡಿಯುದ್ದಕ್ಕೂ ಭಯೋತ್ಪಾದಕ ಚಟುವಟಿಕೆಗಳನ್ನು ಆಶ್ರಯಿಸುತ್ತಿದೆ ಮತ್ತು ಬೆಂಬಲಿಸುತ್ತಿದೆ ಎಂದು ಭಾರತ ಆರೋಪಿಸಿದೆ. https://kannadanewsnow.com/kannada/big-news-action-will-be-taken-if-the-public-is-disturbed-during-the-ipl-celebration-in-bangalore-ipl-2025-final/ https://kannadanewsnow.com/kannada/big-news-we-should-remain-within-limits-dcim-dk-shivakumars-statement-about-kamal-haasan/
ಶಿವಮೊಗ್ಗ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಗರ ಕರ್ನಾಟಕದಲ್ಲಿ 15ನೇ ಸ್ಥಾನ, ಶಿವಮೊಗ್ಗ ಜಿಲ್ಲೆಯಲ್ಲಿ 2ನೇ ಸ್ಥಾನವನ್ನು ಪಡೆಯುವಂತೆ ಫಲಿತಾಂಶ ಪಡೆದಿರುವುದು ನಿಜಕ್ಕೂ ದೊಡ್ಡ ಸಾಧನೆಯೇ ಸರಿ. ಸಾಗರ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡಿದೆ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಸಾಗರ ನಗರದ ನಗರಸಭೆ ಆವರಣದಲ್ಲಿನ ಗಾಂಧಿ ಮೈದಾನದಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪ್ರೌಢಶಾಲಾ ವಿದ್ಯಾರ್ಥಿಗಳು 2024-25ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರಿಗೆ ಹಾಗೂ 615ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಅಭಿನಂದಿಸಿದರು. ಪ್ರಾಸ್ತಾವಿಕ ನುಡಿ ಆಡಿದಂತ ಬಿಇಓ ಪರಮೇಶ್ವರಪ್ಪ ಅವರು, ಈ ವರ್ಷ ಇದೊಂದು ವಿನೂತನ ಕಾರ್ಯಕ್ರಮವಾಗಿದೆ. ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಶೇ.100% ಫಲಿತಾಂಶ ಪಡೆದು ಸಾಧನೆ ಮಾಡಿವೆ. ಕರ್ನಾಟಕದಲ್ಲಿ ಸಾಗರಕ್ಕೆ 15ನೇ ಸ್ತಾನ, ಹೊಸನಗರ 17ನೇ ಸ್ಥಾನವನ್ನು ಪಡೆದುಕೊಂಡಿದೆ. 56 ಶಾಲೆಗಳಲ್ಲಿ 21 ಶಾಲೆಗಳು…
ನವದೆಹಲಿ: ಸುಪ್ರೀಂ ಕೋರ್ಟ್ನ ನಿರ್ದೇಶನದ ಮೇರೆಗೆ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿ (NBEMS) ಸೋಮವಾರ NEET-PG 2025 ಅನ್ನು ಒಂದೇ ಪಾಳಿಯಲ್ಲಿ ನಡೆಸಲಾಗುವುದು ಎಂದು ಘೋಷಿಸಿದೆ. ಹೀಗಾಗಿ ಜೂನ್ 15 ರಂದು ನಡೆಯಬೇಕಿದ್ದ NEET-PG ಪರೀಕ್ಷೆಯನ್ನು ಹೆಚ್ಚಿನ ಪರೀಕ್ಷಾ ಕೇಂದ್ರಗಳು ಮತ್ತು ಅಗತ್ಯವಿರುವ ಮೂಲಸೌಕರ್ಯಗಳನ್ನು ವ್ಯವಸ್ಥೆ ಮಾಡಲು ಮುಂದೂಡಲಾಗಿದೆ. W.P. ಸಂಖ್ಯೆ 456/2025 ರಲ್ಲಿ (ಅದಿತಿ & ಅದರ್ಸ್ ವರ್ಸಸ್ ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ ಇನ್ ಮೆಡಿಕಲ್ ಸೈನ್ಸಸ್ & ಅದರ್ಸ್) ಗೌರವಾನ್ವಿತ ಭಾರತದ ಸುಪ್ರೀಂ ಕೋರ್ಟ್ ಈ ಕೆಳಗಿನಂತೆ ಆದೇಶಿಸಿದೆ: ಅದರ ಪ್ರಕಾರ, NEET-PG 2025 ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸಲು ಅಗತ್ಯವಾದ ವ್ಯವಸ್ಥೆಗಳನ್ನು ಮಾಡಲು ನಾವು ಪ್ರತಿವಾದಿಗಳಿಗೆ ನಿರ್ದೇಶಿಸುತ್ತೇವೆ, ಸಂಪೂರ್ಣ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲಾಗಿದೆ ಮತ್ತು ಸುರಕ್ಷಿತ ಕೇಂದ್ರಗಳನ್ನು ಗುರುತಿಸಲಾಗಿದೆ ಮತ್ತು ನಿಯೋಜಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ ಎಂದು NBEMS ಹೇಳಿಕೆ ತಿಳಿಸಿದೆ. ಅದರ ಪ್ರಕಾರ, NBEMS NEET-PG 2025 ಅನ್ನು ಒಂದೇ ಪಾಳಿಯಲ್ಲಿ ನಡೆಸಲಿದೆ. ಹೆಚ್ಚಿನ ಪರೀಕ್ಷಾ…
ಒಬ್ಬ ವ್ಯಕ್ತಿಯು ಜನಿಸಿದ ಸಮಯದಲ್ಲಿ ಗ್ರಹಗಳ ಸ್ಥಾನಗಳು ಮತ್ತು ನಕ್ಷತ್ರಪುಂಜಗಳ ಆಧಾರದ ಮೇಲೆ ಜನ್ಮ ಕುಂಡಲಿ ರಚನೆಯಾಗುತ್ತದೆ. ಈ ಜಾತಕವನ್ನು ಆಧರಿಸಿ, ಪ್ರಸ್ತುತ ಮತ್ತು ಭವಿಷ್ಯದ ಮಾಹಿತಿ ಸಿಗುತ್ತದೆ.ಜನ್ಮಕುಂಡಲಿ ಸಾಮಾನ್ಯವಾಗಿ ಚೌಕಾಕಾರದಲ್ಲಿ ಇರುತ್ತದೆ. ಜಾತಕ ಕುಂಡಲಿಯಲ್ಲಿ ಒಟ್ಟು 12 ಮನೆಗಳಿರುತ್ತವೆ. ಇದನ್ನು ನಾವು ಅರ್ಥ ಮಾಡಿಕೊಂಡು ಅದರಲ್ಲಿನ ವಿವರ ತಿಳಿದುಕೊಳ್ಳಲು ಸಾಧ್ಯವಿದೆ. ಜನ್ಮರಾಶಿಗಳು ಯಾವ ಮನೆಯಿಂದ ಪ್ರಾರಂಭವಾಗಿ ಎಲ್ಲಿಗೆ ಕೊನೆಯಾಗುತ್ತವೆ.ಅದರಲ್ಲಿ ಜನ್ಮರಾಶಿಗಳ ಸ್ಥಾನ ಬದಲಾಗುವುದೇ ಇಲ್ಲ. ಕುಂಡಲಿಯಲ್ಲಿ ಒಳಗೆ ಇರುವ ಗ್ರಹಗಳು ಮಾತ್ರ ಎಲ್ಲರಿಗೂ ವ್ಯತ್ಯಾಸ ಕಂಡುಬರುತ್ತದೆ.ಕುಟುಂಬದಲ್ಲಿ ನಮ್ಮ ನಮ್ಮಲ್ಲೇ ಹೇಗೆ ವಿಶ್ವಾಸಗಳು ಅಥವಾ ಮನಸ್ತಾಪಗಳು ಇರುತ್ತವೆಯೋ ಹಾಗೆ ಗ್ರಹಗಳಲ್ಲಿಯೂ ಮಿತ್ರತ್ವ , ಸ್ನೇಹತ್ವ ಅಥವಾ ತಟಸ್ಥ ಸ್ವಭಾವವು ಇರುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ.…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಮೂಲಕ ಆಡಳಿತ ಚಂದ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಐಎಎಂ ಸ್ಪೆಷಲ್ ಆಫೀಸರ್ ಆಗಿದ್ದಂತ ಅಮಲಾನ್ ಅದಿತ್ಯ ಬಿಸ್ವಾಸ್ ಅವರನ್ನು ಪಿಡಬ್ಲೂಯಡಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಿದೆ. ಇನ್ನೂ ನವೀನ್ ರಾಜ್ ಸಿಂಗ್ ಅವರನ್ನು ಯವನಿಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ್ದರೇ, ವಿ ಅನ್ಬುಕುಮಾರ್ ಅವರನ್ನು ಕೆ ಎಸ್ ಆರ್ ಟಿಸಿ ಎಂಡಿಯಿಂದ ವರ್ಗಾವಣೆ ಮಾಡಿ ಹೌಸಿಂಗ್ ಡಿಪಾರ್ಟಮೆಂಟ್ ಸೆಕ್ರೇಟರಿ ಹಾಗೂ ವೆಟರ್ನರಿ ಸೈನ್ಸ್ ಅಂಡ್ ಫಿಷರಿಂಗ್ ಇಲಾಖೆಯ ಸೆಕ್ರೇಟರಯಾಗಿ ನೇಮಕ ಮಾಡಲಾಗಿದೆ. ಸಮೀರ್ ಶುಕ್ಲ ಅವರನ್ನು ಎಂಎಸ್ಎಂಇ ಮತ್ತು ಮೈನಿಂಗ್ ಕಾರ್ಯದರ್ಶಿ ಹುದ್ದೆಗೆ ನೇಮಸಿದ್ದರೇ, ರಂದೀಪ್ ಚೌದರಿ ಅವರನ್ನು ಕೆಪಿಎಸ್ಸಿ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ, ಸೆಕ್ರೇಟರಿ ಪ್ಲಾನಿಂಗ್, ಪ್ರೋಗ್ರಾಂ ಮಾನಿಟರಿಂಗ್ ಮತ್ತು ಸ್ಟಾಟಿಟಿಕ್ಸ್ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.…
ಬೆಂಗಳೂರು: ಬಡ ಮಕ್ಕಳ ವ್ಯಾಸಂಗಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಹೆಜ್ಜೆ ಇರಿಸಿದ್ದಾರೆ. ಬರೋಬ್ಬರಿ 13,000 ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್, ಬ್ಯಾಗ್ ವಿತರಣೆ ಮಾಡಲಿದ್ದಾರೆ. ನಾಳೆ ಬೆಳಗ್ಗೆ 9.30ಕ್ಕೆ ಸಾಂಕೇತಿಕವಾಗಿ ಬೆಂಗಳೂರಿನ ಕೋರಮಂಗಲ ವಿಲೇಜ್ ನಲ್ಲಿರುವಂತ ಸರ್ಕಾರಿ ಪ್ರೈಮರಿ ಮಾಡಲ್ ಶಾಲೆಯ ಮಕ್ಕಳಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೋಟ್ ಬುಕ್, ಬ್ಡಾಗ್ ವಿತರಣೆ ಮಾಡಲಿದ್ದಾರೆ. ತಮ್ಮ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವಂತ 23 ಸರ್ಕಾರಿ ಶಾಲೆ, ಕಾಲೇಜುಗಳು, ಸರ್ಕಾರಿ ಅನುದಾನಿತ ಶಾಲೆ ಹಾಗೂ ಅತ್ಯಂತ ಬಡ ಜನರು ವಾಸಿರುವಂತ ಪ್ರದೇಶಗಳಲ್ಲಿನ ಕಾನ್ವೆಂಡ್ ಶಾಲೆಗಳಲ್ಲಿ ಓದುತ್ತಿರುವಂತ ಮಕ್ಕಳು ಸೇರಿದಂತೆ 13,000 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ನೋಟ್ ಬುಕ್, ಬ್ಯಾಗ್ ವಿತರಣೆ ಮಾಡಲಿದ್ದಾರೆ.
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಕಾನೂನು- ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಹದಗೆಡಿಸಿದೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರವು ಇಡೀ ರಾಜ್ಯದಲ್ಲಿ ಕೆಟ್ಟ ವಾತಾವರಣ ಸೃಷ್ಟಿಸುತ್ತಿದೆ. ರಾಜ್ಯದ ಕಾನೂನು- ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಹದಗೆಡಿಸಿದ್ದಾರೆ. ಅತ್ಯಾಚಾರಗಳು, ಕೊಲೆಗಳು ಇವತ್ತು ಬಹಳಷ್ಟು ಆಗುತ್ತಿದೆ. ಜೊತೆಗೇ ಬಿಜೆಪಿ ನಾಯಕರು, ಹಿಂದೂಪರ ನಾಯಕರನ್ನು ಟಾರ್ಗೆಟ್ ಮಾಡಿ ತೊಂದರೆ ಕೊಡುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಆಕ್ಷೇಪಿಸಿದರು. ಮಂಗಳೂರಿನಲ್ಲಿ ಕೆಲವು ಮುಸ್ಲಿಂ ಸಂಘಟನೆಗಳು, ಕಾಂಗ್ರೆಸ್ ಪಕ್ಷದಲ್ಲಿರುವ ಕೆಲವು ಮುಸಲ್ಮಾನ ನಾಯಕರು ರಾಜೀನಾಮೆಯ ಬ್ಲ್ಯಾಕ್ಮೇಲ್ ಪ್ರಾರಂಭಿಸಿದ್ದಾರೆ. ಬ್ಲ್ಯಾಕ್ಮೇಲ್ಗೆ ಹೆದರಿ ಹಿಂದುತ್ವ ಕಾರ್ಯಕರ್ತರು, ಬಿಜೆಪಿ ನಾಯಕರನ್ನು ಗಡೀಪಾರು ಮಾಡಲು ಆರಂಭಿಸಿದ್ದಾರೆ. ಮಂಗಳೂರು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗಗಳಲ್ಲಿ ಇದು ನಡೆದಿದೆ. ಸುಹಾಸ್ ಅವರು ಮೃತಪಟ್ಟಾಗ ಮೆರವಣಿಗೆಯಲ್ಲಿ ಹೋದವರನ್ನು ಗುರುತಿಸಿ ಕರೆದು ತನಿಖೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಸರಕಾರ…











