Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ದೆಹಲಿ ಪೊಲೀಸರು ಅಲ್-ಖೈದಾ ಸಂಬಂಧಿತ ಭಯೋತ್ಪಾದಕ ಜಾಲವನ್ನು ಬೇಧಿಸಿದ್ದಾರೆ. ಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳ 14 ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಪಿಟಿಐ ಗುರುವಾರ (ಆಗಸ್ಟ್ 22) ವರದಿ ಮಾಡಿದೆ. ಪಡೆದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ದೆಹಲಿ ಪೊಲೀಸರು, ಸ್ಥಳೀಯ ಕಾನೂನು ಜಾರಿ ಸಂಸ್ಥೆಗಳ ಸಹಭಾಗಿತ್ವದಲ್ಲಿ, ಈ ಪ್ರದೇಶಗಳಲ್ಲಿ ಉತ್ತಮ ಸಂಘಟಿತ ಕಾರ್ಯಾಚರಣೆಯನ್ನು ನಡೆಸಿದರು. ಪ್ರಸ್ತುತ ಕಾರ್ಯಾಚರಣೆಯ ಸ್ಥಿತಿಯ ಪ್ರಕಾರ, ಈ ಮಾಡ್ಯೂಲ್ ಅನ್ನು ರಾಂಚಿ (ಜಾರ್ಖಂಡ್) ನ ಡಾ.ಇಶ್ತಿಯಾಕ್ ಮುನ್ನಡೆಸುತ್ತಿದ್ದರು ಮತ್ತು ಇದು ‘ಖಿಲಾಫತ್’ ಘೋಷಿಸಲು ಮತ್ತು ದೇಶದೊಳಗೆ ಗಂಭೀರ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಬಯಸುತ್ತಿತ್ತು ಎಂದು ದೆಹಲಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳು ವಿವಿಧ ಸ್ಥಳಗಳಲ್ಲಿ ತೀವ್ರ ಶಸ್ತ್ರಾಸ್ತ್ರ ತರಬೇತಿ ಪಡೆಯುತ್ತಿದ್ದಾರೆ ಎಂದು ಶಂಕಿಸಲಾಗಿದೆ. ಶಸ್ತ್ರಾಸ್ತ್ರ ತರಬೇತಿಯಲ್ಲಿ ತೊಡಗಿದ್ದ ಆರು ಶಂಕಿತರನ್ನು ರಾಜಸ್ಥಾನದ ಭಿವಾಡಿಯಲ್ಲಿ ಬಂಧಿಸಲಾಗಿದೆ. ಏತನ್ಮಧ್ಯೆ, ಹೆಚ್ಚಿನ ವಿಚಾರಣೆಗಾಗಿ ಜಾರ್ಖಂಡ್ ಮತ್ತು ಉತ್ತರ ಪ್ರದೇಶದಲ್ಲಿ ಇತರ ಎಂಟು ಜನರನ್ನು ವಶಕ್ಕೆ…
ಬೆಂಗಳೂರು : “ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ, ಮುಖ್ಯಮಂತ್ರಿಗಳ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವ ರಾಜ್ಯಪಾಲರ ತೀರ್ಮಾನವನ್ನು ಖಂಡಿಸಲಾಯಿತು ಹಾಗೂ ಎಲ್ಲಾ ಶಾಸಕರು ಸರ್ವಾನುಮತದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲಕ್ಕೆ ನಿಲ್ಲುವ ನಿರ್ಣಯ ತೆಗೆದುಕೊಳ್ಳಲಾಯಿತು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಸಭೆ ನಂತರ ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಯಾವುದೇ ಪ್ರಾಥಮಿಕ ತನಿಖೆ ನಡೆಯದೇ ಮುಖ್ಯಮಂತ್ರಿಗಳ ವಿರುದ್ಧ ಸೆಕ್ಷನ್ 17 (ಎ) ಅಡಿಯಲ್ಲಿ ವಿಚಾರಣೆ ನಡೆಸಲು ಅನುಮತಿ ನೀಡಿರುವ ರಾಜ್ಯಪಾಲರ ತೀರ್ಮಾನವನ್ನು ಖಂಡಿಸುವ ಬಗ್ಗೆ ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ ಅವರು ನಿರ್ಣಯಗಳನ್ನು ಸೂಚಿಸಿದರು. ತನ್ವೀರ್ ಸೇಠ್ ಅವರು ಇವುಗಳಿಗೆ ಅನುಮೋದನೆ ನೀಡಿದರು” ಎಂದು ತಿಳಿಸಿದರು. “ಪಕ್ಷದ ಎಲ್ಲಾ ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದೇವೆ. ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಭಾಗವಹಿಸಿದ್ದರು. ಸ್ಪೀಕರ್ ಆದೇಶದಂತೆ ಆರು ಶಾಸಕರು ದೆಹಲಿಯಲ್ಲಿ ನಡೆಯುತ್ತಿರುವ ತರಬೇತಿಗೆ ತೆರಳಿದ್ದು, ಉಳಿದ ಎಲ್ಲಾ ಶಾಸಕರು ಈ…
ಬೆಂಗಳೂರು: ಸಾಮಾನ್ಯ ಜ್ಞಾನವೇ ಇಲ್ಲದವರೊಂದಿಗೆ ಪ್ರತಿದಿನ ಅವರು ಮಾಡುವ ಟ್ಟೀಟ್ ಗಳಿಗೆ ಉತ್ತರ ಕೊಡಬೇಕಾಗಿದೆಯಲ್ಲ ಎಂಬುದು ದುರಂತವೆನಿಸಿದರೂ, ನಮ್ಮ ಜವಾಬ್ದಾರಿಯಿಂದ ನಾವು ನುಳುಚಿಕೊಳ್ಳುವುದಿಲ್ಲ ಎಂಬುದಕ್ಕಾಗಿ ಈ ಪ್ರತಿಕ್ರಿಯೆ ನೀಡುತ್ತಿದ್ದೇನೆ ಎಂಬುದಾಗಿ ಸಚಿವ ರಾಮಲಿಂಗಾರೆಡ್ಡಿ ಅಂಕಿ ಅಂಶ ಸಹಿತ ಈ ಕೆಳಕಂಡ ಉತ್ತರ ನೀಡಿದ್ದಾರೆ. ಕರ್ನಾಟಕ ಸರ್ಕಾರವು ದಿನಾಂಕ 30.09.2000ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಹೆಚ್ಟಿಡಿ/85/ಟಿಆರ್ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್ ತೈಲದ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು ನೌಕರರಿಗೆ ನೀಡುವ ತುಟ್ಟಿಭತ್ಯೆ ದರಗಳಲ್ಲಿ ಹೆಚ್ಚಳವಾದಾಗ ಪ್ರಯಾಣ ದರಗಳನ್ನು ಸ್ವಯಂಚಾಲಿತ ದರ ಹೊಂದಾಣಿಕೆ ನೀತಿಯಂತೆ ಪರಿಷ್ಕರಿಸಲು ಅನುಮತಿ ನೀಡಿರುತ್ತದೆ ಎಂಬ ಅರಿವು ಕೂಡ ಇವರಿಗೆ ಇಲ್ಲವಲ್ಲ ??? ಸಾರಿಗೆ ಸಂಸ್ಥೆಗಳ ಅಭಿವೃದ್ಧಿಯ ಎರಡು ಪ್ರಮುಖ ಅಂಗಗಳು ಕಾರ್ಮಿಕರು ಹಾಗೂ ಬಸ್ಸುಗಳು. # ದುರಾದೃಷ್ಟವೆಂದರೆ, ಕಳೆದ 5 ವರ್ಷಗಳಲ್ಲಿ ಬಿ.ಜೆ.ಪಿ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ 13888 ಹುದ್ದೆಗಳು ಖಾಲಿ ಇದ್ದರೂ ( ನಿವೃತ್ತಿ…
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564 ಆ ಸಮಸ್ಯೆಯ ಬಗ್ಗೆ ಹೊರಗೆ ಯಾರಿಗೂ ಹೇಳಲೂ ಆಗದ ಹಾಗೆ…
ನವದೆಹಲಿ: ಇಂದು ದೆಹಲಿಯ CWMA ಕಚೇರಿಯಲ್ಲಿ ಕಾವೇರಿ ನದಿ ನೀರು ಹರಿವಿನ ವಿಚಾರವಾಗಿ ಮಹತ್ವದ 33ನೇ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ ಸಿಡಬ್ಲ್ಯೂ ಎಂಎ ಎರಡೂ ರಾಜ್ಯಗಳಿಗೆ ಜಲಾಶಯಗಳಲ್ಲಿ ನೀರನ್ನು ಸಂಗ್ರಹಿಸಿ ಇಟ್ಟುಕೊಳ್ಳಿ ಎಂಬುದಾಗಿ ಸಲಹೆ ಮಾಡಿದೆ. ಹೀಗಿದೆ ದಿನಾಂಕ: 22.08.2024 ರಂದು ಜರುಗಿದ CWMA 33ನೇ ಸಭೆಯ ಚರ್ಚೆಯ ಸಾರಾಂಶ 1. ಕರ್ನಾಟಕವು CWMA ಮುಂದೆ ಈ ಕೆಳಕಂಡ ಅಂಶಗಳನ್ನು ಸಲ್ಲಿಸಿತು: i) ದಿನಾಂಕ 21.08.2024 ರಂತೆ ನಿಗದಿಪಡಿಸಿದ ನೀರಿನ ಹರಿವಾದ 71.56 ಟಿಎಂಸಿ ಗೆ ಬದಲಾಗಿ ಬಿಳಿಗುಂಡ್ಲುವಿನಲ್ಲಿ 170.851 ಟಿಎಂಸಿ ನೀರು ಹರಿದಿರುತ್ತದೆ. ii) ಬಿಳಿಗುಂಡ್ಲುವಿನಲ್ಲಿ ಹರಿದ ಹೆಚ್ಚುವರಿ ನೀರಿನ ಪ್ರಮಾಣವನ್ನು ಮುಂಬರುವ ತಿಂಗಳುಗಳಲ್ಲಿ ಕರ್ನಾಟಕ ರಾಜ್ಯವು ಹರಿಸಬೇಕಾದ ನೀರಿನ ಮೊತ್ತಕ್ಕೆ ಜಮೆ ಮಾಡಿಕೊಳ್ಳತಕ್ಕದ್ದು. 2. ತಮಿಳುನಾಡು ರಾಜ್ಯವು ಈ ಕೆಳಕಂಡ ಅಂಶಗಳನ್ನು ಸಲ್ಲಿಸಿತು: i) ಬಿಳಿಗುಂಡ್ಲುವಿನಲ್ಲಿ ನಿಗದಿತ ಪ್ರಮಾಣಕ್ಕಿಂತ ವಾಸ್ತವವಾಗಿ ಹರಿದ ಹೆಚ್ಚುವರಿ ನೀರಿನ ಪ್ರಮಾಣವು, ಕರ್ನಾಟಕದ ಜಲಾಶಯಗಳಿಗೆ ಹರಿದು ಬಂದ ಹೆಚ್ಚುವರಿ ಒಳಹರಿವಿನ ಪ್ರಮಾಣದ…
ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತ್ತು. ಆದರೆ ಸಿಬಿಐನವರು ತನಿಖೆಯನ್ನು ನಿಲ್ಲಿಸದೆ ಮುಂದುವರೆಸಿದ್ದಾರೆ. ನೂರಕ್ಕೂ ಹೆಚ್ಚು ನನ್ನ ಸ್ನೇಹಿತರು, ಕುಟುಂಬಸ್ಥರಿಗೆ ತುಂಬಾ ಕಿರುಕುಳ ನೀಡುತ್ತಿದ್ದಾರೆ. ಇದೇ ಕೆಲಸವನ್ನು ಲೋಕಾಯುಕ್ತ ಕೂಡ ಮುಂದುವರೆಸಿದೆ, ಅವರಿಂದಲೂ ಕಿರುಕುಳ ಆಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಲೋಕಾಯುಕ್ತ ವಿಚಾರಣೆ ನಂತರ ಲೋಕಾಯುಕ್ತ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು “ಲೋಕಾಯುಕ್ತ ಕಳೆದ ಆರು ತಿಂಗಳಿನಿಂದ ತನಿಖೆ ಮಾಡುತ್ತಿದೆ. ಎರಡು ಗಂಟೆಗಳಿಗೂ ಹೆಚ್ಚು ಕಾಲ ನನ್ನನ್ನು ವಿಚಾರಣೆ ಮಾಡಿದರು. ಇವರಿಗಿಂತ ಸಿಬಿಐನವರೇ ಪರವಾಗಿಲ್ಲ. ಲೋಕಾಯುಕ್ತದವರು ವಿಚಿತ್ರ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸಿಬಿಐನವರೇ ಇನ್ನು ನನಗೆ ಪ್ರಶ್ನೆಗಳನ್ನೇ ಕೇಳಿಲ್ಲ, ಒಂದು ದಿನವೂ ವಿಚಾರಣೆಗೆ ಕರೆಯಲಿಲ್ಲ. ಆದರೆ ಲೋಕಾಯುಕ್ತದವರು ಸಹ ಹಿಂಸೆ ಕೊಡುತ್ತಿದ್ದಾರೆ” ಎಂದರು. “ಲೋಕಾಯುಕ್ತದ ಪ್ರಶ್ನೆಗಳಿಗೆ ಉತ್ತರಗಳನ್ನು ಕೊಟ್ಟಿದ್ದೇನೆ. ಒಂದಷ್ಟು ವಿಚಾರಗಳಲ್ಲಿ ಸ್ಪಷ್ಟನೆ ಪಡೆದುಕೊಳ್ಳಲು ಪ್ರಶ್ನೆಗಳನ್ನು ಕೇಳಿದ್ದು,ಇದಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಇರುವ ಪೂರಕವಾದ ದಾಖಲೆಗಳನ್ನು…
ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯಪಾಲರಿಗೆ ಬಾಕಿ ಇರುವಂತ ಪ್ರಾಸಿಕ್ಯೂಷನ್ ಗಳಿಗೆ ಅನುಮತಿ ನೀಡುವ ಬಗ್ಗೆ ಸಲಹೆ ನೀಡುವಂತ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಯಿತು. ಇದಲ್ಲದೇ ಇನ್ನುಳಿದ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್ ಮುಂದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು, ಆಗಸ್ಟ್.1 ರಂದು ಕ್ಯಾಬಿನೆಟ್ ಸಭೆ ನಡೆದಿತ್ತು. ಆ ಸಭೆಯಲ್ಲಿ ಖಂಡನಾ ನಿರ್ಣಯ ತೆಗೆದುಕೊಳ್ಳಲಾಗಿತ್ತು. ರಾಜ್ಯಪಾಲರಿಗೆ ಖಂಡನಾ ನಿರ್ಣಯ ಕಳಿಸಿದ್ದೆವು. ಅಂದು ತೆಗೆದುಕೊಂಡಿದ್ದ ನಿರ್ಣಯ ದೃಢೀಕರಿಸಲಾಗಿದೆ. ಇಂದಿನ ಕ್ಯಾಬಿನೆಟ್ ನಲ್ಲಿ ದೃಡೀಕರಣ ಮಾಡಿದ್ದೇವೆ. ಇಂದು 35 ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ ಎಂದರು. ರಾಜ್ಯಪಾಲರ ಎದುರು ಹಲವು ಪ್ರಕರಣಗಳಿವೆ. ಪ್ರಾಸಿಕ್ಯೂಶನ್ಗಾಗಿ ಅಲ್ಲಿ ಪೆಂಡಿಂಗ್ ಇವೆ. ಲೋಕಾಯುಕ್ತ ವರದಿಗಳು ಅಲ್ಲಿವೆ. ಮಾಧ್ಯಮದ ಮೂಲಕ ಹಲವು ಮಾಹಿತಿ ಲಭ್ಯವಾಗಿವೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಲ್ಲಿಸಿದ ಅರ್ಜಿ…
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಗಿಂಕ ಕಿರುಕುಳ ನೀಡಿದ ಸಂಬಂಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಕೇಸಲ್ಲಿ ಅವರನ್ನು ಬಂಧಿಸದಂತೆ ಹೈಕೋರ್ಟ್ ಈ ಹಿಂದೆ ತಡೆಯಾಜ್ಞೆ ನೀಡಿತ್ತು. ಇಂದು ಮತ್ತೆ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿದೆ. ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್ ನೀಡಲಾಗಿದೆ. ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣದ ಬಂಧಿಸದಂತೆ ನೀಡಲಾಗಿದ್ದಂತ ತಡೆಯಾಜ್ಞೆಯನ್ನು ರದ್ದುಗೊಳಿಸುವ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನು ಒಳಗೊಂಡಂತ ನ್ಯಾಯಪೀಠವು ವಿಚಾರಣೆ ಕೈಗೆತ್ತಿಕೊಂಡಿತು. ಇಂತಹ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್.30ಕ್ಕೆ ವಿಸ್ತರಿಸಿ, ಮಧ್ಯಂತರ ತಡೆಯಾಜ್ಞೆಯನ್ನು ಬಂಧಿಸದಂತೆ ವಿಸ್ತರಿಸಿ ಆದೇಶಿಸಿದರು. ಅಂದಹಾಗೇ ಬಿಎಸ್ ವೈ ವಿರುದ್ಧದ ಪೋಕ್ಸೋ ಕೇಸ್ ಸಂಬಂಧ ಸಿಐಡಿ ತನಿಖೆ ನಡೆಸಿ, ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿತ್ತು. ಈ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಂಧನದ ಭೀತಿ ಎದುರಾಗಿತ್ತು. ಈ…
ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಎನ್ನುವಂತೆ ಸುರಂಗ ಮಾರ್ಗವನ್ನು ನಿರ್ಮಿಸುವಂತ ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು, 250 ಅಡಿ ಸ್ಕೈಡೆಕ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. 500 ಕೋಟಿ ಅಂದಾಜು ಮೊತ್ತಕ್ಕೆ ಒಪ್ಪಿಗೆ ನೀಡಲಾಗಿದೆ ಎಂದರು. ಬೆಂಗಳೂರಿನಲ್ಲಿ ಎಲ್ ಇಡಿ ದೀಪಗಳ ಅಳವಡಿಕೆಗೆ ಒಪ್ಪಿಗೆ ನೀಡಲಾಗಿದೆ. 684 ಕೋಟಿ ವೆಚ್ಚಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರು ಟನಲ್ ರಸ್ತೆ ನಿರ್ಮಾಣಕ್ಕೆ ಸಮ್ಮತಿ ನೀಡಲಾಗಿದೆ. ಎಸ್ಟೀಮ್ ಮಾಲ್ ನಿಂದ ಸಿಲ್ಕ್ ಬೋರ್ಡ್ ವರೆಗೆ ಟನಲ್ ನಿರ್ಮಾಣವಾಗಲಿದೆ. ಇದನ್ನು 12690 ಕೋಟಿ ವೆಚ್ಚದಲ್ಲಿ ಸುರಂಗ ನಿರ್ಮಾಣ ಮಾಡಲಾಗುತ್ತಿದೆ ಎಂದರು. https://kannadanewsnow.com/kannada/breaking-another-victim-of-bike-wheeling-madness-in-the-state-priest-dies-without-treatment/ https://kannadanewsnow.com/kannada/we-will-not-rest-till-siddaramaiah-resigns-bjp-mlc-chalavadi-narayanasamy/
ಬೆಂಗಳೂರು: ರಾಜನನ್ನು ರಾಜನ ರೀತಿ ನೋಡೋಕೆ ಇಷ್ಟ. ಆದರೇ ಎನ್ನುತ್ತಲೇ ನಟಿ ರಚಿತಾ ರಾಮ್ ಅವರು ಜೈಲಲ್ಲಿ ನಟ ದರ್ಶನ್ ಸ್ಥಿತಿ ಕಂಡು ಕಣ್ಣೀರಿಟ್ಟರು. ಈ ಮೂಲಕ ಭಾವುಕರಾದರು. ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ನಟಿ ರಚಿತಾ ರಾಮ್ ತೆರಳಿ, ನಟ ದರ್ಶನ್ ಭೇಟಿಯಾದರು. ಅವರ ಆರೋಗ್ಯ ವಿಚಾರಿಸಿ, ಮಾತನಾಡಿಕೊಂಡ ಬಂತ ನಂದ್ರ, ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ನಟಿ ರಚಿತಾ ರಾಮ್ ಎಂಬುದಾಗಿ ಗುರುತಿಸಿಕೊಳ್ಳಲು ನಟ ದರ್ಶನ್ ಕಾರಣ. ಅವರು ಅಂದು ಅವರ ಬ್ಯಾನರ್ ಅಡಿಯಲ್ಲಿ ನನಗೆ ಅವಕಾಶ ನೀಡದೇ ಇದ್ದಿದ್ದರೇ, ಒಂದು ಮಾತು ನೋ ಎಂದಿದ್ದರೇ ನಾನು ಹೀಗೆ ನಟಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದರು. ನಾನು ದರ್ಶನ್ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದೆ. ಅವರು ಆರೋಗ್ಯವಾಗಿದ್ದಾರೆ. ನಾನು ಅವರ ಸ್ಥಿತಿಯನ್ನು ಕಂಡು ಭಾವುಕರಾದಂತ ವೇಳೆಯಲ್ಲಿ ನಟ ದರ್ಶನ್ ಅವರೇ ನನ್ನನ್ನು ಸಮಾಧಾನಿಸಿದರು. ನನಗೆ ಕಾನೂನಿನ ಮೇಲೆ ನಂಬಿಕೆ ಇದೆ. ನಟ ದರ್ಶನ್ ಆದಷ್ಟು ಬೇಗ ಹೊರಗೆ ಬರ್ತಾರೆ ಅಂತ…