Author: kannadanewsnow09

ಮುಂಬೈ : ಮೊಟ್ಟಮೊದಲ ಬಾರಿಗೆ ಒಲಿಂಪಿಕ್ಸ್ ಪ್ರಸಾರ ಮಾಡಿದ ವಯೋಕಾಮ್18, ಪ್ಯಾರಿಸ್ ಒಲಿಂಪಿಕ್ಸ್-2024ರನ್ನು ಭಾರತದಲ್ಲಿ ಇದುವರೆಗಿನ ಅತ್ಯಂತ ಸಮಗ್ರವಾದ ಒಲಿಂಪಿಕ್ ಪ್ರಸ್ತುತಿಯನ್ನು ಒದಗಿಸಿದೆ. ಇದು ಲೀನಿಯರ್ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಭಾರತದಲ್ಲಿ ಒಲಿಂಪಿಕ್ಸ್‌ಗೆ ಇದುವರೆಗೆ ಅತಿ ಹೆಚ್ಚು ವೀಕ್ಷಕರನ್ನು ತಲುಪಿಸಿದೆ. 17 ಕೋಟಿಗೂ ಹೆಚ್ಚು ವೀಕ್ಷಕರು ಜಿಯೋಸಿನಿಮಾ ಮತ್ತು ಸ್ಪೋರ್ಟ್ಸ್18 ನೆಟ್‌ವರ್ಕ್‌ನಲ್ಲಿ 1,500 ಕೋಟಿ ನಿಮಿಷಗಳಷ್ಟು ಅಭೂತಪೂರ್ವ ವೀಕ್ಷಣೆ ಸಮಯವನ್ನು ಕಂಡರು. ಇದರೊಂದಿಗೆ ಭಾರತದಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಜನರು ಒಲಿಂಪಿಕ್ಸ್ ಸ್ಪರ್ಧೆಗಳನ್ನು ವೀಕ್ಷಿಸಿದಂತಾಗಿದೆ. ಮೊದಲ ಬಾರಿಗೆ ಭಾರತದಲ್ಲಿ ಒಲಿಂಪಿಕ್ಸ್ ಕವರೇಜ್ಅನ್ನು ಜಿಯೋಸಿನಿಮಾದಲ್ಲಿ ಉಚಿತವಾಗಿ 20 ಏಕಕಾಲೀನ ಫೀಡ್‌ಗಳಲ್ಲಿ ಪ್ರಸ್ತುತಪಡಿಸಲಾಯಿತು. ಇದರೊಂದಿಗೆ ಕ್ರೀಡಾ ಅಭಿಮಾನಿಗಳು ತಮ್ಮ ಆದ್ಯತೆಯ ಸ್ಪರ್ಧೆಗಳು ಮತ್ತು ಭಾರತೀಯ ಕ್ರೀಡಾಪಟುಗಳ ಪ್ರದರ್ಶನಗಳನ್ನು ಯಾವುದೇ ಸಮಯದಲ್ಲಿ, ಎಲ್ಲಿಯಾದರೂ ತಮ್ಮ ಆದ್ಯತೆಯ ಸಾಧನದಲ್ಲಿ ವೀಕ್ಷಿಸಿದರು. ಇದು ಇದುವರೆಗೆ ಅತಿ ಹೆಚ್ಚು ಜನರು ವೀಕ್ಷಿಸಿದ ಒಲಿಂಪಿಕ್ಸ್ ಆಗಿದೆ. 17 ಕ್ರೀಡಾವಾರು ಫೀಡ್‌ಗಳು ಮತ್ತು ಮೂರು ಕ್ಯುರೇಟೆಡ್ ಫೀಡ್‌ಗಳು, 4ಕೆನಲ್ಲಿ ಲಭ್ಯವಿರುವ ಎಲ್ಲಾ ವೀಕ್ಷಕರಿಗೆ ಪ್ಯಾರಿಸ್…

Read More

ನವದೆಹಲಿ: ಒಡಿಶಾದ ದಿಯೋಘರ್ ಜಿಲ್ಲೆಯ ಅಡಾಸ್ ರಾಂಪಲ್ಲಿ ಪ್ರದೇಶದಲ್ಲಿ ಚಿನ್ನದ ನಿಕ್ಷೇಪವನ್ನು ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್ಐ) ಪತ್ತೆ ಮಾಡಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ರಾಜ್ಯ ಸರ್ಕಾರವು ಸೈಟ್ನ ಗಣಿಗಾರಿಕೆ ಹಕ್ಕುಗಳನ್ನು ಹರಾಜು ಮಾಡಲು ನಿರ್ಧರಿಸಿದೆ. ಒಡಿಶಾ ಸರ್ಕಾರವು ಮೊದಲ ಬಾರಿಗೆ ಚಿನ್ನದ ಗಣಿಯನ್ನು ಹರಾಜು ಹಾಕಲಿದೆ ಎಂದು ರಾಜ್ಯ ಉಕ್ಕು ಮತ್ತು ಗಣಿ ಸಚಿವ ಬಿಭೂತಿ ಜೆನಾ ಗುರುವಾರ ವಿಧಾನಸಭೆಯಲ್ಲಿ ಘೋಷಿಸಿದರು. ತಾಮ್ರದ ಸಾಮಾನ್ಯ ಪರಿಶೋಧನೆ ನಡೆಸುವಾಗ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್ಐ) ಅಡಾಸ್ ರಾಂಪಲ್ಲಿಯಲ್ಲಿ ಚಿನ್ನದ ನಿಕ್ಷೇಪವನ್ನು ಕಂಡುಹಿಡಿದಿದೆ ಎಂದು ಜೆನಾ ಬಹಿರಂಗಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಕಾಂಗ್ರೆಸ್ ಶಾಸಕ ತಾರಾ ಪ್ರಸಾದ್ ಬಹಿನಿಪತಿ ಅವರ ಪ್ರಶ್ನೆಗೆ ಉತ್ತರಿಸಿದ ಜೆನಾ, ಜಿಎಸ್ಐ ಈ ಹಿಂದೆ 1981-83 ಮತ್ತು 1989-96 ರ ನಡುವೆ ನಡೆಸಿದ ಪ್ರಾಥಮಿಕ ಸಮೀಕ್ಷೆಗಳಲ್ಲಿ ಕಿಯೋಂಜಾರ್ ಜಿಲ್ಲೆಯ ಗೋಪೌರ್ ಮತ್ತು ಗಾಜಿಪುರ ಪ್ರದೇಶಗಳಲ್ಲಿ ಚಿನ್ನವನ್ನು ಗುರುತಿಸಿದೆ ಎಂದು ಗಮನಿಸಿದರು. “ಭೂವೈಜ್ಞಾನಿಕ ಸಮೀಕ್ಷೆಯು ಚಿನ್ನದ ನಿಕ್ಷೇಪಗಳ…

Read More

ಬೆಂಗಳೂರು: ನಗರದ ಹೆಮ್ಮಿಗೆಪುರದಲ್ಲಿ 500 ಕೋಟಿ ವೆಚ್ಚದಲ್ಲಿ ಬೆಂಗಳೂರು ಸಂಸ್ಕೃತಿ, ಪರಂಪರೆಯನ್ನು ಅನಾವರಣಗೊಳಿಸುವ ಸಲುವಾಗಿ 250 ಅಡಿ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಆಕರ್ಷಣೆಯ ಕೇಂದ್ರವನ್ನಾಗಿಸಲು, ಪ್ರವಾಸೋದ್ಯಮವನ್ನು ಉತ್ತೇಜಿಸಲು ಬೆಂಗಳೂರು ಸಂಸ್ಕೃತಿ, ಪರಂಪರೆಯನ್ನು ಅನಾವರಣಗೊಳಿಸುವ 250 ಅಡಿ ಎತ್ತರದ ಸ್ಕೈಡೆಕ್‌ (ವೀಕ್ಷಣಾ ಗೋಪುರ) ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಹೆಮ್ಮಿಗೆಪುರದಲ್ಲಿ ₹500 ಕೋಟಿ ಅಂದಾಜು ವೆಚ್ಚದಲ್ಲಿ ಸ್ಕೈಡೆಕ್‌ ನಿರ್ಮಾಣಗೊಳ್ಳಲಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ. https://twitter.com/KarnatakaVarthe/status/1826921778809028949 https://kannadanewsnow.com/kannada/committee-formed-to-prevent-attacks-on-women-health-workers-in-the-state/ https://kannadanewsnow.com/kannada/governor-sent-back-15-bills-after-listening-to-bjp-dk-shivakumar/ https://kannadanewsnow.com/kannada/50-beds-reserved-in-victoria-as-a-precautionary-measure-against-monkeypox-sharan-prakash-patil/

Read More

ಬೆಂಗಳೂರು: ಕೋಲ್ಕತ್ತಾದಲ್ಲಿನ ಆಸ್ಪತ್ರೆಯೊಂದರ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತ್ರ ಕರ್ನಾಟಕದಲ್ಲಿ ಮಹಿಳಾ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ತಡೆಗೆ ಸಮಿತಿಯನ್ನು ರಚಿಸಲಾಗಿದೆ. ರಾಜ್ಯದ ವೈದ್ಯರ ಸುರಕ್ಷತೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ನೀಡಲು ಕಾರ್ಯಪಡೆ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೊಲ್ಕತ್ತಾ ಟ್ರೈನಿ ವೈದ್ಯಯ ಮೇಲೆ ಅತ್ಯಾಚಾರ ನಡೆದ ಘಟನೆಯ ಹಿನ್ನೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ವೈದ್ಯಕೀಯ ಸಂಘಟನಗಳ ಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದು, ಅವರ ಸುರಕ್ಷೆಗೆ ಅಗತ್ಯ ಕ್ರಮಗಳನ್ನ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದರು.‌ ವಿವಿಧ ವೈದ್ಯ ಸಂಘಟನೆಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಸಚಿವರು, ಈ ಕಾರ್ಯಪಡೆ ವೈದ್ಯರ ಸುರಕ್ಷತೆ ಬಗ್ಗೆ ಕೈಗೊಳ್ಳಬೇಕಾದ ಕ್ರಮ, ಕಾನೂನುಗಳ ಅನುಷ್ಠಾನ ಸೇರಿ ಎಲ್ಲಾ ಆಯಾನಗಳಲ್ಲಿ ವೈದ್ಯರ ಭದ್ರತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಒಂದು ತಿಂಗಳಲ್ಲಿ ವರದಿ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ವಿರುದ್ಧ ಮುಡಾ ಹಗರಣ ಸಂಬಂಧ ರಾಜ್ಯಪಾಲರಿಗೆ ದೂರು ನೀಡಲಾಗಿತ್ತು. ದೂರಿನ ಬಳಿಕ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೂ ಅನುಮತಿ ನೀಡಿದ್ದಾರೆ. ಈಗ ಸಿದ್ದರಾಮಯ್ಯ ಬೆನ್ನಲ್ಲೇ, ಸಚಿವ ಎಂ.ಬಿ ಪಾಟೀಲ್ ( Minister MB Patil ) ವಿರುದ್ಧವೂ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ಕೆಐಡಿಬಿ ಭೂಮಿಯನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ. ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರಿಗೆ ಸಲ್ಲಿಸಿರುವಂತ ದೂರಿನಲ್ಲಿ ಕೆಐಡಿಬಿ ಭೂಮಿಯನ್ನು ಕಾನೂನು ಬಾಹಿರವಾಗಿ ಸಚಿವ ಎಂ.ಬಿ ಪಾಟೀಲ್ ಹಂಚಿಕೆ ಮಾಡಿದ್ದಾರೆ. ಈ ಪ್ರಕ್ರಿಯೆ ಕಾನೂನಿನ ಪ್ರಕಾರ ಆನ್ ಲೈನ್ ನಲ್ಲಿ ನಡೆಯಬೇಕಿತ್ತು. ಇದನ್ನು ಮೀರಿ ಕೈಗಾರಿಕೆ ನಡೆಸದ ಕಂಪನಿಗಳಿಗೆ ಎಂ.ಬಿ ಪಾಟೀಲ್ ಹಂಚಿಕೆ ಮಾಡಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ. ವಸಂತನರಸಾಪುರ,…

Read More

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಕೇಸಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಇಂತಹ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸಿಗೆ ಸಂಬಂಧಿಸಿದಂತೆ 2,144 ಪುಟಗಳ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಎಸ್ಐಟಿ ಸಲ್ಲಿಸಿದೆ. ಹಾಸನದ ಹೊಳೇನರಸೀಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರವು ಎಸ್ಐಟಿ ತನಿಖೆಗೆ ವಹಿಸಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ಪ್ರಜ್ವಲ್ ರೇವಣ್ಣ ಅವರು ಜೈಲುಪಾಲಾಗಿದ್ದಾರೆ. ಇಂತಹ ಅವರ ವಿರುದ್ಧ ನ್ಯಾಯಾಲಯಕ್ಕೆ ಎಸ್ಐಟಿಯಿಂದ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಎಸ್ಐಟಿಯ ತನಿಖಾಧಿಕಾರಿ ಸುಮರಾಣಿಯವರು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ 2,144 ಪುಟಗಳ ಚಾರ್ಜ್ ಶೀಟ್ ಅನ್ನು ಸಲ್ಲಿಸಿದ್ದಾರೆ. ಇದರಲ್ಲಿ ಒಟ್ಟು 123 ಸಾಕ್ಷ್ಯಗಳನ್ನು ಸಂಗ್ರಹಿಸಿದಂತ ವರದಿಯಾಗಿದೆ ಎಂಬುದಾಗಿ ತಿಳಿದು ಬಂದಿದೆ. ಇದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸಲ್ಲಿ ಸಲ್ಲಿಸಿದಂತ…

Read More

ಬೆಂಗಳೂರು: ನಗರದಲ್ಲಿ ವಿದ್ಯುತ್ ವೆಚ್ಚ ಉಳಿತಾಯಕ್ಕೆ ರಾಜ್ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಈಗ ಅಳವಡಿಸಿರುವಂತ ಸಾಂಪ್ರದಾಯಿಕ ಬೀದಿ ದೀಪಗಳನ್ನು ತೆರೆವುಗೊಳಿಸಿ, ಎಲ್ಇಡಿ ದೀಪಗಳನ್ನು ಅಳವಡಿಸುವಂತ ಮಹತ್ವದ ಯೋಜನೆ ಕೈಗೊಂಡಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 684 ಕೋಟಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ. 684 ಕೋಟಿ ವೆಚ್ಚದಲ್ಲಿ ಬೆಂಗಳೂರಲ್ಲಿ ಎಲ್ಇಡಿ ಬೀದಿ ದೀಪಗಳನ್ನು ಅಳವಡಿಕೆಗೆ ಅನುಮತಿಸಲಾಗಿದೆ. ʼಇಂಧನ ಉಳಿತಾಯ – ಇಎಂಐ/ವಾರ್ಷಿಕ ಪಾವತಿ ಮಾದರಿʼ ಕೇಂದ್ರೀಕೃತ ನಿಯಂತ್ರಣ ಮತ್ತು ಮೇಲ್ವಿಚಾರಣಾ ವ್ಯವಸ್ಥೆ ಯೋಜನೆಯಡಿ ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಸುವ ಹಾಗೂ 7 ವರ್ಷಗಳ ನಿರ್ವಹಣಾ ವೆಚ್ಚಕ್ಕೆ ₹684.34 ಕೋಟಿ ಒದಗಿಸುವ ಪ್ರಸ್ತಾವಕ್ಕೆ ಸಂಪುಟ ಅನುಮೋದನೆ ನೀಡಿದೆ. https://twitter.com/KarnatakaVarthe/status/1826944071136366863 https://kannadanewsnow.com/kannada/elections-dont-come-in-the-way-of-making-money-but-will-you-come-to-do-peoples-work/ https://kannadanewsnow.com/kannada/shivamogga-sri-krishna-jayanthi-programme-to-be-held-in-shivamogga-on-august-26/ https://kannadanewsnow.com/kannada/governor-sent-back-15-bills-after-listening-to-bjp-dk-shivakumar/

Read More

ಬೆಂಗಳೂರು : ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ..? ಕೋರ್ಟ್‌ನಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಅಂದ್ರೆ ಎಲೆಕ್ಷನ್‌ ಕೆಲಸ ಇತ್ತು ಅಂತ ಸಾಬೂಬು ಹೇಳ್ತೀರ ಎಂದು ಉಪ ವಿಭಾಗಾಧಿಕಾರಿಗಳನ್ನು (ಎಸಿ) ಸಚಿವ ಕೃಷ್ಣ ಬೈರೇಗೌಡ ಅವರು ತರಾಟೆಗೆ ತೆಗೆದುಕೊಂಡರು. ಎಸಿ ನ್ಯಾಯಾಲಯಗಳಲ್ಲಿ ಹೆಚ್ಚು ಸಂಖ್ಯೆಯಲ್ಲಿ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸದೆ ಬಾಕಿ ಉಳಿಸಿಕೊಂಡಿರುವ ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಕೊಪ್ಪಳ, ಮೈಸೂರು, ಮಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳ ಆಯ್ದ 30 ಉಪ-ವಿಭಾಧಿಕಾರಿಗಳು ಹಾಗೂ ವಲಯ ಆಯುಕ್ತರ ಜೊತೆ ಇಂದು ವಿಕಾಸಸೌಧದಲ್ಲಿ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು. ಈ ವೇಳೆ ಉಪ-ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳ ಇತ್ಯರ್ಥಕ್ಕೆ ಮುಂದಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ ಅವರು, “ಹಲವು ವರ್ಷಗಳಿಂದ ಎಸಿ ನ್ಯಾಯಾಲಯಗಳಿಗೆ ಅಲೆದಾಡಿ ಜನ ಬಸವಳಿಸಿದ್ದಾರೆ. ಹೀಗಾಗಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು…

Read More

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ)ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆ.26 ರ ಬೆಳಿಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಕೃಷ್ಣ ಜಯಂತಿಯನ್ನು ಏರ್ಪಡಿಸಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ಇವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ, ತಾಲ್ಲೂಕು ಗೊಲ್ಲರ ಸಂಘದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಪಾಲಿಕೆ ಆಯುಕ್ತರು, ಅಧಿಕಾರಿಗಳು, ವಿವಿಧ ಸಂಘಟನೆ ಮುಖಂಡರು ಪಾಲ್ಗೊಳ್ಳುವರು. ಅಜ್ಜಂಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆ ಎಸ್ ಆರ್ ಟಿ ಸಿ ಉಪಾಧ್ಯಕ್ಷರನ್ನಾಗಿ ಮಹಮ್ಮದ್ ರಿಜ್ವಾನ್ ನವಾಬ್ ಅವರನ್ನು ನೇಮಿಸಿ ಆದೇಶಿಸಿತ್ತು. ಇಂತಹ ಅವರು ಇಂದು ಕೆ ಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ಬಿಬಿಎಂಪಿಯ ಮಾಜಿ ಸದಸ್ಯರಾದಂತ ಮಹಮ್ಮದ್ ರಿಜ್ವಾನ್ ನವಾಬ್ ಅವರು, ಇಂದು ಕೆ ಎಸ್ ಆರ್ ಟಿಸಿ ಉಪಾಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಂಡರು ಅಂತ ತಿಳಿಸಿದೆ. ಈ ವೇಳೆ ನಿಗಮದ ವ್ಯವಸ್ಥಾಪಕ ನಿರ್ದೇಶಕರವರಾದ ವಿ. ಅನ್ಬುಕುಮಾರ್,ಭಾ.ಆ.ಸೇ ಅವರು ಮಾನ್ಯರಿಗೆ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಡಾ. ಕೆ ನಂದಿನಿ ದೇವಿ,ಭಾ.ಆ.ಸೇ , ನಿರ್ದೇಶಕರು ,(ಸಿ ಮತ್ತು ಜಾ), ಇತರೆ ಅಧಿಕಾರಿಗಳು ಹಾಜರಿದ್ದರು. https://kannadanewsnow.com/kannada/7-year-old-boy-dies-of-dengue-in-chitradurga/ https://kannadanewsnow.com/kannada/governor-sent-back-15-bills-after-listening-to-bjp-dk-shivakumar/ https://kannadanewsnow.com/kannada/50-beds-reserved-in-victoria-as-a-precautionary-measure-against-monkeypox-sharan-prakash-patil/

Read More