Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ನೆರವು ಪಡೆಯುವ ಸಹಕಾರಿ ಸಂಘಗಳ ನೌಕರರೂ ಲೋಕಾಯುಕ್ತ ವ್ಯಾಪ್ತಿಗೆ ಬರುತ್ತವೆ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹಣಕಾಸು ನೆರವು ಪಡೆದುಕೊಳ್ಳುವ ಸಹಕಾರ ಸಂಘದ ಸಿಬ್ಬಂದಿ ಸಹ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ವ್ಯಾಪ್ತಿಗೆ ಬರಲಿದ್ದಾರೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ, ಹಾಸನ ಜಿಲ್ಲೆಯ ಹಿರೇಕಡಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಸಿ.ಎ.ಕೀರ್ತಿಕುಮಾರ್ ವಿರುದ್ಧ ದಾಖಲಾಗಿರುವ ಆದಾಯ ಮೀರಿ ಆಸ್ತಿ ಪ್ರಕರಣ ಕುರಿತು ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಅನುಮತಿ ನೀಡುವಂತೆ ಸಂಘಕ್ಕೆ ಇದೇ ವೇಳೆ ನ್ಯಾಯಾಲಯ ಸೂಚಿಸಿದೆ. ಭ್ರಷ್ಟಾಚಾರದ ಆರೋಪದಲ್ಲಿ ಸಂಘದ ಕಾರ್ಯದರ್ಶಿ ಸಿ.ಎ.ಕೀರ್ತಿಕುಮಾರ್ ವಿರುದ್ಧ ತನಿಖೆಗೆ ಅನುಮತಿ ನಿರಾಕರಿಸಿ ನಿರ್ಣಯ ಕೈಗೊಂಡಿದ್ದ ಸಂಘದ ಕ್ರಮ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಹೈಕೋಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ನಟರಾಜ್ ಅವರು, ತಾನು ಸರ್ಕಾರಿ ಸಂಸ್ಥೆಯಲ್ಲ ಎಂದು ಹಿರೇಕಡಲೂರು ಪ್ರಾಥಮಿಕ ಕೃಷಿ ಪತ್ತಿನ…
ಹುಬ್ಬಳ್ಳಿ: ಅಖಿಲ ಭಾರತ ಸ್ಟೇಷನ್ ಮಾಸ್ಟರ್ ಅಸೋಸಿಯೇಷನ್ (AISMA), ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು ತನ್ನ ವಾರ್ಷಿಕ ಸಾಮಾನ್ಯ ಸಭೆ ಯಶಸ್ವಿಯಾಗಿ ನೆರವೇರಿತು. ಇಲ್ಲಿನ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸಭಾಂಗಣದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ವಿಭಾಗದಾದ್ಯಂತದ ಸ್ಟೇಷನ್ ಮಾಸ್ಟರ್ಗಳು ಉತ್ಸಾಹದಿಂದ ಭಾಗವಹಿಸಿದ್ದರು. ಸಂಘದ ಹಿಂದಿನ ಅವಧಿಯ ಸಾಧನೆಗಳ ವಿಮರ್ಶೆ, ಭವಿಷ್ಯದ ಕಾರ್ಯತಂತ್ರಗಳ ರೂಪರೇಷೆ, ಹಾಗೂ ನೂತನ ಪದಾಧಿಕಾರಿಗಳ ನೇಮಕವು ಸಭೆಯ ಪ್ರಮುಖಾಂಶಗಳಾಗಿದ್ದವು. ಹಿಂದಿನ ಕಾರ್ಯಕಾರಿ ಸಮಿತಿಯ ಅಧಿಕಾರಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ, ಈ ಸಂದರ್ಭದಲ್ಲಿ ಹೊಸ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ನೂತನವಾಗಿ ನೇಮಕಗೊಂಡ ಪ್ರಮುಖ ಪದಾಧಿಕಾರಿಗಳ ವಿವರ ಇಂತಿದೆ: ವಿಭಾಗೀಯ ಅಧ್ಯಕ್ಷರು: ಮಾನವೇಂದ್ರ ಓಜಾ ಕಾರ್ಯಕಾರಿ ಅಧ್ಯಕ್ಷರು: ನೂರಪ್ಪ ಸಿ. ಲಮಾಣಿ ವಿಭಾಗೀಯ ಕಾರ್ಯದರ್ಶಿ: ರಂಜನ್ ಕುಮಾರ್ ಝಾ ವಿಭಾಗೀಯ ಹಣಕಾಸು ಕಾರ್ಯದರ್ಶಿ: ಪ್ರಕಾಶ್ ಕುಮಾರ್ ರಜಾಕ್ ಉಪಾಧ್ಯಕ್ಷರು: ಲೋಕೇಶ್ ಕುಮಾರ ಜಾಟವ ಮತ್ತು ಅಶೋಕ್ ಕುಮಾರ್ ಸಿಂಗ್ ಸಂಯುಕ್ತ ವಿಭಾಗೀಯ ಕಾರ್ಯದರ್ಶಿ: ಹೇಮೇಶ್ ಕುಮಾರ್ ಸಂಘಟನಾ ಕಾರ್ಯದರ್ಶಿ: ಬರುಣ್ ಕುಮಾರ್…
ಬೆಂಗಳೂರು: ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಎಂಸಿಸಿ ಭರ್ಜರಿ ಸಿಹಿಸುದ್ದಿ ನೀಡಿದೆ. ಅದೇ ಹೆಚ್ಚುವರಿಯಾಗಿ ಸೀಟುಗಳನ್ನು ಮಂಜೂರು ಮಾಡಿದೆ. ಈ ಮೂಲಕ ವೈದ್ಯಕೀಯ ವ್ಯಾಸಂಗದ ಆಕಾಂಕ್ಷಿಗಳಿಗೆ ಅವಕಾಶ ಮಾಡಿಕೊಟ್ಟಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, UGNEET-25: ರಾಜ್ಯದ ನಾಲ್ಕು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ MCC ತಲಾ 50 ಸೀಟುಗಳಂತೆ ಒಟ್ಟು 200 ಸೀಟು ಹೆಚ್ಚುವರಿಯಾಗಿ ಮಂಜೂರು ಮಾಡಿರುವ ಕಾರಣ 3ನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅ.15ರಂದು ಬೆಳಿಗ್ಗೆ 8 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದಿದ್ದಾರೆ. ಶಿವಮೊಗ್ಗದ ಸುಬ್ಬಯ್ಯ, ಬೆಂಗಳೂರು ನಾಗರೂರಿನ ಬಿಜಿಎಸ್, ತುಮಕೂರಿನ ಶ್ರೀದೇವಿ, ಮಂಗಳೂರಿನ ಎ.ಜೆ. ವೈದ್ಯಕೀಯ ಕಾಲೇಜುಗಳಿಗೆ ಹೆಚ್ಚುವರಿ ಸೀಟು ಹಂಚಿಕೆ ಮಾಡಿದ್ದು, ಅವುಗಳ ಪ್ರವೇಶಕ್ಕೆ ಹೊಸದಾಗಿ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಈ ಕಾಲೇಜುಗಳ ಶುಲ್ಕವನ್ನು ಗಮನಿಸಿ ಆಪ್ಷನ್ಸ್ ದಾಖಲಿಸಬೇಕು ಎಂದು ತಿಳಿಸಿದ್ದಾರೆ. https://twitter.com/KEA_karnataka/status/1977662290163044640?t=BirTUyxdh8PfRDYIelnnrQ&s=08 ಈಗಾಗಲೇ…
ಮಂಡ್ಯ : ಪೌತಿ ಖಾತೆ ಮಾಡಲು ಲಂಚಕ್ಕೆ ಬೇಡಿಕೆಯನ್ನು ಪಿಡಿಒ ಇಟ್ಟಿದ್ದರು. ಈ ಸಂಬಂಧ ಲೋಕಾಯುಕ್ತಕ್ಕೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಇಂದು 5,000 ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ಪಿಡಿಓ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವಂತ ಘಟನೆ ಮಂಡ್ಯದ ಮದ್ದೂರಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಬೆಕ್ಕಳಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದ್ದೂರಿನ ತಗಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಸಚಿನ್ ಎಂಬುವರು ಪೌತಿ ಖಾತೆ ಮಾಡಿಕೊಡಲು ಚಿಕ್ಕೋನಹಳ್ಳಿ ಗ್ರಾಮದ ಶಿವಲಿಂಗಯ್ಯ ಬಳಿ ಲಂಚಕ್ಕೆ ಬೇಡಿ ಇಟ್ಟಿದ್ದರು. ಈ ಸಂಬಂಧ ಶಿವಲಿಂಗಯ್ಯ ಎಂಬುವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಮಂಡ್ಯದ ಮದ್ದೂರಿನ ಬೆಕ್ಕಳಲೆ ಗ್ರಾಮದಲ್ಲಿ 5,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪಿಡಿಓ ಸಚಿನ್ ವಶಕ್ಕೆ ಪಡೆದಿದ್ದಾರೆ. ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು, ಕುಮಾರ್ ಹಾಗೂ ಬ್ಯಾಟರಾಯನಗೌಡರಿಂದ ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಮೂಲಕ ಲಂಚ ಪಡೆಯುತ್ತಿದ್ದಾಗಲೇ ಮದ್ದೂರಿನ ತಗಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಸಚಿನ್ ರೆಡ್…
ಶಿವಮೊಗ್ಗ : ಜಿಲ್ಲೆಯಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಅಕ್ಟೋಬರ್.14ರ ನಾಳೆ, ಅಕ್ಟೋಬರ್.15ರ ನಾಡಿದ್ದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಮಾಹಿತಿ ನೀಡಿದ್ದು, 66/11 ಕೆವಿ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಾಹಣಾ ಕೆಲಸವಿರುವುದರಿಂದ ನಗರದಲ್ಲಿ ಅ.14 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದಿದೆ. ಅಕ್ಟೋಬರ್.14ರಂದು ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಕುವೆಂಪು ನಗರ, ಮ್ಯಾಕ್ಸ್ ಪೂರ್ಣೋದಯ, ಎನ್ಇಎಸ್ ಬಡಾವಣೆ, ಡಿವಿಎಸ್ ಕಾಲೋನಿ, ಜ್ಯೋತಿ ನಗರ, ನವುಲೆ ಕೆರೆ ಹೊಸುರು, ಇಂದಿರಾಗಾAಧಿ ಬಡಾವಣೆ, ಶಿವಬಸವ ನಗರ, ವೀರಭದ್ರೇಶ್ವರ ಲೇಔಟ್, ಪಿಡಬ್ಲ್ಯೂಡಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನವುಲೆ, ಎಲ್ಬಿಎಸ್ ನಗರ, ಆಶ್ವಥ್ ನಗರ, ಕೀರ್ತಿ ನಗರ, ಸವಳಂಗ ರಸ್ತೆ, ಬಸವೇಶ್ವರ ನಗರ, ಕೃಷಿ ನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೋನಿ, ವೆಂಕಟಾಪುರ,…
ಬೆಂಗಳೂರು: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಅಂದಹಾಗೇ ಇಂದು ಸಿಎಂ ಸಿದ್ಧರಾಮಯ್ಯ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಔತಣ ಕೂಟ ಏರ್ಪಡಿಸಿದ್ದಾರೆ. ಇದರ ಹಿಂದೆ ಬಿಹಾರ ವಿಧಾನಸಭಾ ಚುನಾವಣೆ ಬಳಿಕ ಕರ್ನಾಟಕ ಕ್ಯಾಬಿನೇಟ್ ಪುನಾರಚನೆ ಆಗೋದು ಎನ್ನಲಾಗಿತ್ತು.
ಉತ್ತರ ಕನ್ನಡ: ರಾಜ್ಯದಲ್ಲಿ ಹೊರ ರಾಜ್ಯಗಳಿಗೆ ತೆರಳಿದಾಗ ಬಹಳನೇ ಎಚ್ಚರಿಕೆ ವಹಿಸಬೇಕಾಗುತ್ತದೆ. ಕಾರಣ ಸ್ಥಳ, ಭಾಷೆ ಬೇರೆ ಬೇರೆಯಾಗಿದ್ದರೇ, ಮತ್ತೊಂದೆಡೆ ಆ ಪ್ರದೇಶಗಳಲ್ಲಿ ಯಾವೆಲ್ಲ ಕೃತ್ಯಗಳು ನಡೆಯುತ್ತದೆ ಎಂದು ಪ್ರವಾಸಿಗರಾದಂತ ನಿಮಗೆ ತಿಳಿದಿರೋದಿಲ್ಲ. ಹೀಗಾಗಿ ನೀವು ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಹೋಗ್ತಾ ಇದ್ದೀರಿ ಅಂದರೆ ಅದಕ್ಕಿಂತ ಮೊದಲು ಮುಂದೆ ಸುದ್ದಿ ಓದಿ. ತೀರ್ಥಯಾತ್ರೆಗೆ ತೆರಳಿ, ದೇವರ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ಕುಮಟಾ ಕತಗಾಲ ಮಾಸ್ತಿಹಳ್ಳ ಮೂಲದ ಕುಟುಂಬವೊಂದು ಭಯಾನಕ ಅನುಭವದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ದರೋಡೆಕೋರರು ಲೂಟಿಗೆ ಯತ್ನಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕುಟುಂಬವೊಂದು, ಸ್ಥಳೀಯ ಗಜಾನನ ಟ್ರಾವೆಲ್ಸ್ನ ಟಿಟಿ ವಾಹನದಲ್ಲಿ ಶಿರಡಿ ಹಾಗೂ ಅಯೋಧ್ಯೆ ಪ್ರವಾಸಕ್ಕೆ ತೆರಳಿತ್ತು. ಪ್ರವಾಸ ಮುಗಿಸಿ ಊರಿಗೆ ಮರಳುತ್ತಿದ್ದಾಗ, ಶುಕ್ರವಾರ ರಾತ್ರಿ ಸೊಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಘಟನೆ ನಡೆದಿದೆ. ಆ ಬೆಚ್ಚಿ ಬೀಳಿಸೋ ವೀಡಿಯೋ ಈ…
ಅಜ್ಮೀರ್: ಶುಕ್ರವಾರ ಬೆಳಿಗ್ಗೆ ಅಜ್ಮೀರ್ನ ಜೆಎಲ್ಎನ್ ಆಸ್ಪತ್ರೆಯಲ್ಲಿ ಮಹಿಳಾ ಇಂಟರ್ನ್ ವೈದ್ಯರೊಬ್ಬರು ವೃದ್ಧ ರೋಗಿಯನ್ನು ಪದೇ ಪದೇ ಕಪಾಳಮೋಕ್ಷ ಮಾಡಿ ಒದ್ದ ಘಟನೆ ನಡೆದಿದ್ದು, ಆತಂಕಕಾರಿ ಘಟನೆ ನಡೆದಿದೆ. ಬೆಳಿಗ್ಗೆ 11:09 ಕ್ಕೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ಈ ಹಲ್ಲೆ ಘಟನೆ ಶನಿವಾರ ಬೆಳಕಿಗೆ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೀಡಿಯೋ ನೋಡಿದಂತ ಬಳಕೆದಾರರಲ್ಲಿ ಇಂಟರ್ನ್ ವೈದ್ಯೆಯ ನಡೆಗೆ ಭಾರೀ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. https://twitter.com/royalswaroop13/status/1976927971312386365?ref_src=twsrc%5Etfw%7Ctwcamp%5Etweetembed%7Ctwterm%5E1976927971312386365%7Ctwgr%5E832b1a6508acdfa9e2d23fbaaa03bcc812ffb4ac%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fthefreepressjournal-epaper-dhecf5ddffe11b4f36b496f4bee6e60122%2Foncamerainterndoctorslapselderlypatientrepeatedlyfor10minutesatajmerhospitaloverallegedmisbehaviour-newsid-n684768795 ಕಣ್ಣಿನ OPDಯಿಂದ ಹೊರಬರುವಾಗ ವೃದ್ಧ ವ್ಯಕ್ತಿಯ ಭುಜ ಆಕಸ್ಮಿಕವಾಗಿ ಇಂಟರ್ನ್ ವೈದ್ಯರ ಮೇಲೆ ತಗುಲಿ ಘರ್ಷಣೆ ಆರಂಭವಾಯಿತು. ಕಾರಿಡಾರ್ನಲ್ಲಿ ತ್ವರಿತ ಚಲನೆಯಿಂದಾಗಿ ಸಂಪರ್ಕ ಆಕಸ್ಮಿಕವಾಗಿ ಸಂಭವಿಸಿದೆ ಎಂದು ಸಿಸಿಟಿವಿ ದೃಶ್ಯಾವಳಿಗಳು ಸೂಚಿಸುತ್ತವೆ. ಘಟನೆಯ ಸಣ್ಣ ಸ್ವರೂಪದ ಹೊರತಾಗಿಯೂ, ಇಂಟರ್ನ್ ವೈದ್ಯರು OPD ಗೇಟ್ ಬಳಿ ವೃದ್ಧ ವ್ಯಕ್ತಿಯ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸಿದರು. ನಂತರ ಹಲ್ಲೆ ಮುಂದುವರಿಸುವಾಗ ಅವರ ಶರ್ಟ್ ಹಿಡಿದು ಸಭಾಂಗಣಕ್ಕೆ ಎಳೆದೊಯ್ದರು. ಭದ್ರತಾ ಸಿಬ್ಬಂದಿ ಮತ್ತು ಆಸ್ಪತ್ರೆ ಸಿಬ್ಬಂದಿ…
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ದೂಗೂರಲ್ಲಿ ಅರಣ್ಯ ಪ್ರದೇಶದಲ್ಲಿ ಬೆಳೆದಿದ್ದಂತ ನೀಲಗಿರಿ ಮರಗಳನ್ನು ಕಡಿತಲೆ ಮಾಡಿದಂತ ಇಬ್ಬರ ವಿರುದ್ಧ ಅರಣ್ಯಾಧಿಕಾರಿಗಳು ಕೇಸ್ ದಾಖಲಿಸಿದ್ದಾರೆ. ಅಲ್ಲದೇ ಕಡಿತಲೆ ಮಾಡಿದಂತ ಮರಗಳನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ವಲಯ ಅರಣ್ಯಾಧಿಕಾರಿ ಶ್ರೀಪಾದ್ ನಾಯ್ಕ್ ಅವರು ಮಾಹಿತಿ ನೀಡಿದ್ದು, ಸೊರಬದ ದೂಗೂರು ಬಳಿಯ ಸರ್ವೆ ನಂಬರ್ 100ರಲ್ಲಿ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿದ್ದಂತ ನೀಲಗಿರಿ ಮರಗಳನ್ನು ಕಡಿತಲೆ ಮಾಡಿದ್ದಂತ ಖಚಿತ ಮಾಹಿತಿ ದೊರೆತಿತ್ತು. ಈ ಮಾಹಿತಿ ಆಧರಿಸಿ ಉಳವಿಯ ಉಪ ವಲಯ ಅರಣ್ಯಾಧಿಕಾರಿ ಯೋಗರಾಜ.ಕೆ.ಈ, ಗಸ್ತು ಅರಣ್ಯ ಪಾಲಕಿ ಸುಮಿತಾ.ಆರ್, ಮೈಸಾವಿ ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್ ಹಾಗೂ ವಾಚರ್ ಶ್ರೀಕಾಂತ್ ದಾಳಿ ನಡೆಸಿದ್ದರು ಎಂದು ತಿಳಿಸಿದ್ದಾರೆ. ಈ ದಾಳಿಯ ಸಂದರ್ಭದಲ್ಲಿ ಸೊರಬ ತಾಲ್ಲೂಕಿನ ದೂಗೂರು ಗ್ರಾಮದ ಸರ್ವೆ ನಂಬರ್.100ರಲ್ಲಿ ನೀಲಗಿರಿ ಕಡಿತಲೆ ಮಾಡಿದ್ದು ಕಂಡು ಬಂದಿದೆ. ದೂಗೂರು ಎಂ ಎಫ್ ಅರಣ್ಯದಲ್ಲಿ ಅಕ್ರಮವಾಗಿ ನೀಲಗಿರಿ ಮರಗಳನ್ನು ಕಡಿದು ಬೀಳಿಸಿದನ್ನು…
ಬೆಂಗಳೂರು: ನಗರದ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿಯನ್ನು ಎನ್ ಸಿ ಬಿ ಅಧಿಕಾರಿಗಳು ಮಾಡಿದ್ದಾರೆ. ಬೆಂಗಳೂರಿನ ಕೆಐಎಬಿಯಲ್ಲಿ ಬರೋಬ್ಬರಿ 50 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಬೆಂಗಳೂರು ವಲಯದ ಎನ್ ಸಿ ಬಿ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಿ, ಒಟ್ಟು 45 ಕೆಜಿ ಹೈಡ್ರೋಗಾಂಜಾ, 6 ಕೆಜಿ ಸೈಲೋಸಿಬಿನ್ ಅಣಬೆ ಸೀಜ್ ಮಾಡಿದ್ದಾರೆ. ಈ ಪ್ರಕರಣ ಸಂಬಂಧ ಎನ್ ಸಿ ಬಿ ಅಧಿಕಾರಿಗಳಿಂದ ಮೂವರು ಆರೋಪಿಗಳನ್ನು ಬಂಧಿಸಿದ್ದು, ಜಪ್ತಿ ಮಾಡಲಾಗಿರುವಂತ ಡ್ರಗ್ಸ್ ಮೌಲ್ಯವು 50 ಕೋಟಿ ಮೌಲ್ಯದ್ದು ಎನ್ನಲಾಗಿದೆ. ಥೈಲ್ಯಾಂಡ್ ನಿಂದ ಡ್ರಗ್ಸ್ ಸಾಗಾಟದ ಬಗ್ಗೆ ಮಾಹಿತಿ ಸಂಗ್ರಹಿಸಿ ಎನ್ ಸಿ ಬಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಕ್ಟೋಬರ್.9ರಂದು ಕೊಲಂಬೋದಿಂದ ಬರುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಇಬ್ಬರಿಂದ 31 ಕೆಜಿ ಹೈಡ್ರೋಗಾಂಜಾ, 4 ಕೆಜಿ ಸೈಲೋಸಿಬಿನ್ ಅಣಬೆ ಸೀಜ್ ಮಾಡಿದ್ದರು. ಇಬ್ಬರನ್ನು ವಿಚಾರಣೆ ನಡೆಸಿದಾಗ ಹ್ಯಾಂಡ್ಲರ್ ಶ್ರೀಲಂಕಾದಿಂದ ಬರುವ…














