Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರಕಾರವು ಬಸವಣ್ಣನನ್ನು `ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಸೆಪ್ಟೆಂಬರ್ 1ರಿಂದ ಅಕ್ಟೋಬರ್ 1ರವರೆಗೆ ಒಂದು ತಿಂಗಳು ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ `ಬಸವ ಸಂಸ್ಕೃತಿ ಅಭಿಯಾನ’ ನಡೆಸಲು ತೀರ್ಮಾನಿಸಿದೆ. ಈ ಸಂಬಂಧವಾಗಿ ಒಕ್ಕೂಟದಲ್ಲಿರುವ ಸ್ವಾಮೀಜಿಗಳು ಶನಿವಾರ ಲಿಂಗಾಯತ ಮುಖಂಡ ಮತ್ತು ಸಚಿವ ಎಂ ಬಿ ಪಾಟೀಲ ಅವರೊಂದಿಗೆ ಅವರ ಸದಾಶಿವನಗರದ ಮನೆಯಲ್ಲಿ ಚರ್ಚೆ ನಡೆಸಿದ್ದಾರೆ. ಒಕ್ಕೂಟದ ಪರವಾಗಿ ಭಾಲ್ಕಿ ಮಠದ ಶ್ರೀ ಬಸವಲಿಂಗ ಪಟ್ಟದ್ದೇವರು, ಅಥಣಿಯ ಶ್ರೀ ಚೆನ್ನಬಸವ ಸ್ವಾಮೀಜಿ, ನೆಲಮಂಗಲದ ಪವಾಡ ಶ್ರೀಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಗೊರವಣ್ಣ ದೇವರ ಮಠದ ನಂಜುಂಡ ಸ್ವಾಮೀಜಿ, ನಿಜಗುಣ ಮಠದ ಇಮ್ಮಡಿ ನಿಜಗುಣ ಶ್ರೀಗಳು, ಬಸವ ಧರ್ಮಪೀಠದ ಬಸವಯೋಗಿ ಸ್ವಾಮೀಜಿ, ಚನ್ನಪಟ್ಟಣದ ಬೇಗೂರು ಮಠದ ಮೃತ್ಯುಂಜಯ ಸ್ವಾಮೀಜಿ ಸಚಿವರ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದರು. ಬಳಿಕ ಮಾತನಾಡಿದ ಸಚಿವರು, ಈ ಅಭಿಯಾನವು ಬಸವಣ್ಣನ ಜನ್ಮಸ್ಥಳವಾದ ಬಸವನ ಬಾಗೇವಾಡಿಯಲ್ಲಿ ಸೆ.1ರಂದು ಚಾಲನೆ ಕಾಣಲಿದೆ.…
ದಾವಣಗೆರೆ: ಮಹಾರಾಷ್ಟ್ರದಲ್ಲಿ 843 ಮಹಿಳೆಯರು ಕೂಲಿ ಸಿಗುವುದಿಲ್ಲ ಎಂಬ ಕಾರಣಕ್ಕೆ ತಮ್ಮ ಗರ್ಭಕೋಶವನ್ನೇ ತೆಗೆಸಿದ್ದಾರೆ. ಇದು ದೇಶದ ದುರ್ದೈವ ಎಂಬುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದೇಶದಲ್ಲಿ ಬಡತನ ಹೆಚ್ಚಳವಾಗುತ್ತಿದೆ ಎಂದು ಗಡ್ಕರಿ ಹೇಳುತ್ತಾರೆ. ಬಡತನ ನಿರ್ಮೂಲನೆ ಆಗಿದೆ ಎಂದು ಪ್ರಧಾನಿ ಹೇಳುತ್ತಾರೆ. ಇಬ್ಬರಲ್ಲಿ ಯಾರ ಹೇಳಿಕೆ ಸರಿ ಎಂದು ಪ್ರಶ್ನಿಸಿದರು. ಕೇಂದ್ರ ಬಿಜೆಪಿ ಸರ್ಕಾರ ಇದುವರೆಗೂ ವಿಶೇಷ ಚೇತನರು, ವೃದ್ಧರು, ವಿಧವೆಯರ ಮಾಸಾಶನದಲ್ಲಿ ಒಂದು ರೂಪಾಯಿಯನ್ನೂ ಹೆಚ್ಚಿಸಿಲ್ಲ. ಬಿಜೆಪಿಗರಿಗೆ ಉದ್ಯಮಿಗಳ ಮೇಲಿರುವ ಪ್ರೀತಿ ಬಡವರ ಮೇಲಿಲ್ಲ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದರು. https://kannadanewsnow.com/kannada/lets-wait-and-see-what-happens-in-november-the-revolution-the-great-revolution-by-vijayendra/ https://kannadanewsnow.com/kannada/did-you-score-more-than-95-in-sslc-exam-apply-for-scholarship-now/
ಬೆಂಗಳೂರು: ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹೈಕಮಾಂಡ್ ಮಧ್ಯೆ ಸಂಬಂಧ ಹಳಸಿಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಮೊನ್ನೆ ದೆಹಲಿಯಲ್ಲಿದ್ದರು. ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಅಥವಾ ರಾಹುಲ್ ಗಾಂಧಿಯವರ ಭೇಟಿಗೆ ಅವಕಾಶ ಸಿಗದೇ ವಾಪಸ್ ಕರ್ನಾಟಕಕ್ಕೆ ಬಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮಧ್ಯೆ ಸಂಬಂಧಗಳು ಹಳಸಿಹೋಗಿದೆ ಎಂಬುದೇ ಇದರ ಅರ್ಥ ಎಂದು ನುಡಿದರು. ರಾಜ್ಯ ಸರಕಾರದ ಮೇಲೆ ಒಂದು ರೀತಿ ಮೋಡ ಕವಿದ ವಾತಾವರಣವಿದೆ. ಯಾವತ್ತು ಗುಡುಗು, ಸಿಡಿಲಿನ ಮಳೆ ಪ್ರಾರಂಭವಾಗುತ್ತದೋ ಕಾದು ನೋಡಬೇಕಿದೆ. ಕಾಂಗ್ರೆಸ್ ಪಕ್ಷ ಮತ್ತು ಸರಕಾರದಲ್ಲಿ ಎಲ್ಲವೂ ಕೂಡ ಸರಿಯಿಲ್ಲ ಎಂಬುದಂತೂ ಸತ್ಯ. ಮುಖ್ಯಮಂತ್ರಿಗಳು- ಉಪ ಮುಖ್ಯಮಂತ್ರಿಗಳ ಹಗ್ಗಜಗ್ಗಾಟ ಮತ್ತು ಕುರ್ಚಿಗಾಗಿ ಪೈಪೋಟಿ ನಡೆದಿದೆ. ಯಾರು ಮುಖ್ಯಮಂತ್ರಿ? ಇವರೇ ಇರುತ್ತಾರೋ, ಬದಲಾವಣೆ ಆಗುತ್ತಾರೋ ಎಂಬುದರಿಂದ ಜನರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ತಿಳಿಸಿದರು. ರಾಹುಲ್…
ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದು ಜನರಲ್ಲಿ ಆತಂಕ ಮೂಡುವಂತೆ ಮಾಡಿದೆ.ವೇಗವಾಗಿ ಬೆಳೆಯುತ್ತಿರುವ ಆಧುನಿಕ ಬದುಕಿಗೆ ಹೊಂದಿಕೊಳ್ಳುತ್ತಾ, ಎಲ್ಲರ ಜೀವನಶೈಲಿ ಹಾಗೂ ಆಹಾರ ಪದ್ಧತಿ ಬದಲಾಗಿರುವ ಪರಿಣಾಮ ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಸದ್ದಿಲ್ಲದೆ ದುಷ್ಪರಿಣಾಮಿಸುತ್ತಿದೆ. ಹೆಚ್ಚುತ್ತಿರುವ ಹೃದಯಘಾತಕ್ಕೆ ಕಾರಣಗಳನ್ನು ಗಮನಿಸಿದಾಗ ಬಹು ಮುಖ್ಯವಾಗಿ ಮಾದಕ ವಸ್ತುಗಳ ಸೇವನೆಯು( ಸಿಗರೇಟ್,ಗುಟಕ ಇತ್ಯಾದಿ) ಎದ್ದು ತೋರುತ್ತಿದ್ದರು,ಆಧುನಿಕ ಜೀವನ ಶೈಲಿ ಮತ್ತು ಆಹಾರ ಪದ್ಧತಿ ತೆರೆಮರೆಯಲ್ಲಿ ಇರುವ ಕಾರಣಗಳು. ಆಹಾರ ಪದ್ಧತಿ : “ಆಹಾರ ಸಂಭವೋ ದೇಹಃ” ಅಂದರೆ ದೇಹವು ಆಹಾರದಿಂದ ರಚನೆಯಾಗಿದೆ. ಹೀಗಿದ್ದಲ್ಲಿ ಪಾಶ್ಚಿಮಾತ್ಯ ಜೀವನಶೈಲಿಯ ಅನುಕರಣೆಯಿಂದ ಅತಿಯಾದ ಜಂಕ್ ಫುಡ್ಗ / ಫಾಸ್ಟಪುಡ್ ಗಳ ಸೇವನೆಯಿಂದ, ಅಪರೂಪವಾಗಿದ್ದಂತಹ ಸಕ್ಕರೆ ಕಾಯಿಲೆ,ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಕೇವಲ ಆಕರ್ಷಣೆ ಮತ್ತು ರುಚಿಕರವಾದಂತಹ ಈ ಪದಾರ್ಥಗಳು ಕಡಿಮೆ ಪೌಷ್ಟಿಕತೆ, ಅತಿಯಾದ ಕ್ಯಾಲೋರಿಗಳಿಂದ ಕೂಡಿವೆ.ಹಲವಾರು ಸಂಶೋಧನೆಗಳ ಪ್ರಕಾರ ಇಂತಹ ಪದಾರ್ಥಗಳ ಸೇವನೆಯಿಂದ ಅತಿಯಾದ…
ಮಂಡ್ಯ: ಚಾಕೊಲೇಟ್ ಕೊಡಿಸುವುದಾಗಿ ಆಸೆ ತೋರಿಸಿದಂತ ವ್ಯಕ್ತಿಯೊಬ್ಬ 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸದಿರುವಂತ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದಲ್ಲಿ 4 ವರ್ಷದ ಮಗುವಿನ ಮೇಲೆ ಕಾಮುಕನೊಬ್ಬ ಚಾಕೋಲೇಟ್ ಆಸೆ ತೋರಿಸಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಈ ಸಂಬಂಧ 21 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯ ಪೋಷಕರು ಬಿಹಾರ ಮೂಲದವರಾಗಿದ್ದು, ಫ್ಲೈವುಡ್ ಫ್ಯಾಕ್ಟರಿಯಲ್ಲಿ ಕಳೆದ ಒಂದು ವರ್ಷದಿಂದ ಕೆಲಸ ಮಾಡುತ್ತಿದ್ದರು. ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/an-elderly-woman-from-dharwad-falls-victim-to-a-heart-attack-abroad/ https://kannadanewsnow.com/kannada/did-you-score-more-than-95-in-sslc-exam-apply-for-scholarship-now/
ರಾತ್ರಿ ಮಲಗುವಾಗ ಯಾವ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಬೇಕು ?. ಶಾಸ್ತ್ರಾನುಸಾರ ಪ್ರಾಕ್ ಶಿರಾ ಶಯನೇ ವಿಂದ್ಯಾತ್ ಧನಮಾಯುಶ್ಚ ದಕ್ಷಿಣೇ| ಪಶ್ಚಿಮೇ ಪ್ರಬಲಾ ಚಿಂತಾ ಹಾನಿಮೃತ್ಯುರಥೋತ್ತರೇ || ಪೂರ್ವಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಧನ ಪ್ರಾಪ್ತಿಯಾಗುವುದು.ಲೌಕಿಕ ಐಶ್ವರ್ಯ ಬಯಸಿದರೆ ಆ ಪ್ರಕಾರ ಸಂಕಲ್ಪ ಮಾಡಿಕೊಂಡು ಪೂರ್ವಕ್ಕೆ ನಿತ್ಯ ರಾತ್ರಿಯಲ್ಲಿ ಮಲಗುವಾಗ ತಲೆಯನ್ನು ಹಾಕಬಹುದು. ದಕ್ಷಿಣಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಆಯುಸ್ಸು, ಮಾನಸಿಕ ನೆಮ್ಮದಿ, ಶಾಂತಿ ಹೆಚ್ಚುತ್ತದೆ. ಪಶ್ಚಿಮಕ್ಕೆ ತಲೆ ಮಾಡಿ ಮಲಗಿದರೆ,ಪ್ರಬಲವಾದ ಚಿಂತೆಗಳು ಯಾವಾಗಲೂ ಎಲ್ಲಾ ವಿಭಾಗಗಳಲ್ಲಿಯೂ ಬರುತ್ತಲೇ ಇರುತ್ತವೆ. ಉತ್ತರಕ್ಕೆ ತಲೆ ಇಟ್ಟು ಮಲಗಿದರೆ,ಧನ ನಷ್ಟ ಮತ್ತು ಮರಣ ಸಂಭವಿಸುತ್ತದೆ, ಅಂದರೆ ಆಯುಷ್ಯ ಹಾನಿಯಾಗುತ್ತದೆ. ಪೂರ್ವ ದಿಕ್ಕು ಸೂರ್ಯೋದಯದ ದಿಕ್ಕು. ಆರೋಗ್ಯಂ ಭಾಸ್ಕರಾದಿಚ್ಛೇತ್, ಸೂರ್ಯನಿಂದ ಆರೊಗ್ಯವನ್ನು ಬಯಸಿ, ಎಂಬುದು ಸ್ಮೃತಿ ವಾಕ್ಯ. ಸೂರ್ಯನು ಐಶ್ವರ್ಯಕ್ಕೆ, ಆರೋಗ್ಯಕ್ಕೆ ಪ್ರಧಾನ ದೇವತೆ. ಪೂರ್ವಕ್ಕೆ ತಲೆ ಮಾಡಿ ಮಲಗಿದರೆ, ಐಶ್ವರ್ಯ ಮತ್ತು ಆರೋಗ್ಯ ಸಿದ್ಧಿಸುತ್ತದೆ. ದಕ್ಷಿಣವು ಪಿತೃದೇವತೆಗಳು ಮತ್ತು ಯಮನ ದಿಕ್ಕು. ದಕ್ಷಿಣಕ್ಕೆ ತಲೆಮಾಡಿ…
ಧಾರವಾಡ: ವಿದೇಶಕ್ಕೆ ತೆರಳಿದ್ದಂತ ಧಾರವಾಡದ ವೃದ್ಧೆಯೊಬ್ಬರು ಹೃದಯಾಘಾತದಿಂದ ಅಲ್ಲಿಯೆ ಸಾವನ್ನಪ್ಪಿರುವಂತ ಘಟನೆ ಓಮನ್ ದೇಶದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ ನಿವಾಸಿ ಮಲ್ಲವ್ವ ಸಂಗಟ(74) ಎಂಬ ವೃದ್ಧೆ ಓಮನ್ ದೇಶದ ಮಸ್ಕತ್ ಗೆ ತೆರಳಿದ್ದರು. ಪುತ್ರ ಮಸ್ಕತ್ ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರಿಂದ ಆತನ ಬಳಿಗೆ ಕಳೆದ ಬುಧವಾರದಂದು ತೆರಳಿದ್ದರು. ಪುತ್ರಿ, ಸೊಸೆಯೊಂದಿಗೆ ಮಸ್ಕತ್ ಗೆ ಮಲ್ಲವ್ವ ತೆರಳಿದ್ದರು. ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ಮಲ್ಲವ್ವ ಮಸ್ಕತ್ ನಲ್ಲಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹವು ನಾಳೆ ಬೆಳಗ್ಗೆ ಕುಸುಗಲ್ ಗೆ ಆಗಮಿಸಲಿದೆ. https://kannadanewsnow.com/kannada/court-order-for-the-formation-of-a-new-committee-in-3-months-sagar-marikamba-protection-committee-director-anand/ https://kannadanewsnow.com/kannada/did-you-score-more-than-95-in-sslc-exam-apply-for-scholarship-now/
ಶಿವಮೊಗ್ಗ : ಮೂರು ತಿಂಗಳಿನೊಳಗೆ ಹೊಸ ಸಮಿತಿ ರಚಿಸಿ ನ್ಯಾಯಾಲಯಕ್ಕೆ ಮಾಹಿತಿ ನೀಡಲು ಸಾಗರದ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಜಿಲ್ಲಾ ನ್ಯಾಯಾಲಯ ಸ್ಪಷ್ಟ ಸೂಚನೆ ನೀಡಿದೆ ಎಂದು ಮಾರಿಕಾಂಬಾ ಹಿತರಕ್ಷಣಾ ಸಮಿತಿ ಸಂಚಾಲಕ ಎಂ.ಡಿ.ಆನಂದ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಹಾಲಿ ವ್ಯವಸ್ಥಾಪಕ ಸಮಿತಿ ಟ್ರಸ್ಟ್ ರಚನೆ ನೆಪದಲ್ಲಿ ತಾವೇ ಖಾಯಂ ಆಗಿ ಉಳಿಯುವ ಬೈಲಾವನ್ನು ಸಿದ್ದಪಡಿಸಿ ಸದಸ್ಯರ ಒಪ್ಪಿಗೆಯನ್ನು ಸಹ ಪಡೆಯದೆ ವಂಚಿಸುವ ಪ್ರಯತ್ನ ನಡೆಸಿತ್ತು. ಸಮಿತಿಯ ಈ ಧೋರಣೆಗೆ ನ್ಯಾಯಾಲಯದ ತೀರ್ಪು ತೀವೃ ಮುಖಭಂಗ ಉಂಟು ಮಾಡಿದೆ ಎಂದರು. 1968 ರಿಂದ ಈತನಕ ಟ್ರಸ್ಟ್ ರಚನೆಗೆ ಸಾಕಷ್ಟು ಹೋರಾಟ ನಡೆದಿದೆ. ಕಳೆದ 10 ವರ್ಷದಿಂದ ನಮ್ಮ ಹಿತರಕ್ಷಣಾ ಸಮಿತಿ ಟ್ರಸ್ಟ್ ರಚನೆ ಜೊತೆಗೆ ಸಮಿತಿಯಲ್ಲಿ ಖಾಯಂ ಪದಾಧಿಕಾರಿಗಳಾಗಿ ಕುಳಿತವರನ್ನು ಇಳಿಸಲು ಹೋರಾಟ ನಡೆಸಿತ್ತು. ಇದೀಗ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ನನ್ನನ್ನು ತಟಸ್ಥಗೊಳಿಸಲು ಸಾಕಷ್ಟು ಪ್ರಯತ್ನ…
ಶಿವಮೊಗ್ಗ: ಐತಿಹಾಸಿಕ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ಈಗಾಗಲೆ ಸಿಗಂದೂರು ಚೌಡೇಶ್ವರಿ ಕೇಬಲ್ ಸೇತುವೆ ಎಂದು ನಾಮಕರಣ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯದಿಂದ ಹೆಸರು ಅಂತಿಮಗೊಳಿಸಿ ಕೇಂದ್ರಕ್ಕೆ ಸಲ್ಲಿಸಿದರೆ ನಾನು ಇದನ್ನು ಅನುಮೋದಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ. ಸೇತುವೆಗೆ ರಾಣಿ ಚನ್ನಬೈರಾದೇವಿ, ಕೆಳದಿ ರಾಣಿ ಚೆನ್ನಮ್ಮಾಜಿ, ಶರಾವತಿ ಸೇತುವೆ, ಅಂಬಾರಗೋಡ್ಲು ಕಳಸವಳ್ಳಿ ಸೇರಿದಂತೆ ಬೇರೆಬೇರೆ ಹೆಸರಿನ ಚರ್ಚೆ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೆಸರು ಇರಿಸಲು ನ್ಯಾಯಾಲಯಕ್ಕೂ ಹೋಗಿದ್ದಾರೆ ಸಂಸದ ಬಿವೈ ರಾಘವೇಂದ್ರ ತಿಳಿಸಿದ್ದಾರೆ. ಇಂದು ಶಿವಮೊಗ್ಗದ ಸಾಗರ ನಗರದ ನೆಹರೂ ಮೈದಾನದಲ್ಲಿ ಶನಿವಾರ ಕಳಸವಳ್ಳಿ-ಅಂಬಾರಗೋಡ್ಲು ಸೇತುವೆ ಲೋಕಾರ್ಪಣೆ ಸಭಾ ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ನೀಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಎಂತಹ ಮಳೆ ಬಂದರೂ ಸೇತುವೆ ಲೋಕಾರ್ಪಣೆ ಕಾರ್ಯ ನಿರ್ವಿಘ್ನವಾಗಿ ನಡೆಯುತ್ತದೆ. ಅಂಬಾರಗೋಡ್ಲು ಕಳಸವಳ್ಳಿ ಸೇತುವೆ ಲೋಕಾರ್ಪಣೆಗೆ ದೇವಿಗೆ ಸಮರ್ಪಣೆ ಮಾಡುವ ಶ್ರೇಷ್ಟ ಕಾರ್ಯವಾಗಿದೆ. ಇಂತಹ ಕಾರ್ಯಕ್ಕೆ ಅಪಚಾರ ಎಸಗಿ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದರು. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಸೇತುವೆ ಲೋಕಾರ್ಪಣೆ…
ಶಿವಮೊಗ್ಗ: ಕಳೆದ ಕೆಲವು ದಿನಗಳ ಹಿಂದೆ ಸಾಗರದಲ್ಲಿ ಪತ್ರಕರ್ತರೊಬ್ಬರಿಗೆ ಕೆಲವರು ಅವಾಚ್ಯ ನಿಂದನೆ ಹಾಗೂ ಬೆದರಿಕೆ ಹಾಕಿರುವ ಘಟನೆ ಅತ್ಯಂತ ಖಂಡನೀಯವಾಗಿದೆ. ಪತ್ರಕರ್ತರನ್ನು ಬೆದರಿಸುವ ಯಾರೇ ಆಗಿರಲಿ ಅಂತಹವರ ವಿರುದ್ಧ ಕಠಿಣ ಕ್ರಮಕ್ಕೆ ಒಳಪಡಿಸುತ್ತೇವೆ. ನನ್ನ ಅಧಿಕಾರದ ಅವಧಿಯಲ್ಲಿ ಬೆದರಿಕೆ ಹಲ್ಲೆಯಂತಹ ಘಟನೆಗೆ ಅವಕಾಶ ನೀಡುವುದಿಲ್ಲ ಎಂಬುದಾಗಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪತ್ರಿಕಾ ಭವನದಲ್ಲಿ ಪ್ರೆಸ್ ಟ್ರಸ್ಟ್ ಆಫ್ ಸಾಗರ್ ಮತ್ತು ಕಾರ್ಯನಿರತ ಪತ್ರಕರ್ತರ ಸಂಘ,ಸಾಗರ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಪತ್ರಕರ್ತರುಗಳಿಗೆ ಗುರುತಿನ ಚೀಟಿ ಹಾಗೂ ಪತ್ರಕರ್ತರು, ಪತ್ರಿಕಾ ವಿತರಕರುಗಳಿಗೆ 15 ಲಕ್ಷ ರೂಗಳ ವಿಮಾ ಬಾಂಡ್ಗಳ ವಿತರಿಸಿ, ಹಿರಿಯ ಪತ್ರಕರ್ತರನ್ನು ಸನ್ಮಾನಿಸಿ ಮಾತನಾಡಿದರು. ಪ್ರೆಸ್ ಟ್ರಸ್ಟ್ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ವರ್ಷ ಪತ್ರಿಕಾ ವಿತರಕರುಗಳಿಗೆ ಸೈಕಲ್ಗಳು ಮತ್ತು ರಿಪ್ಲೆಕ್ಟ್ ಆಗುವಂತಹ ಸುರಕ್ಷತೆಯ ಉದ್ದೇಶಿತ ಜಾಕೇಟ್ಗಳ…