Author: kannadanewsnow09

ನವದೆಹಲಿ: ಇತ್ತೀಚಿನ ಅಧಿಕೃತ ಅಂಕಿಅಂಶಗಳ ಪ್ರಕಾರ, ಅಕ್ಟೋಬರ್ 2025 ರಲ್ಲಿ ಭಾರತದ ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವು ಶೇ. 4.6 ರಷ್ಟು ಹೆಚ್ಚಾಗಿ ರೂ. 1,95,936 ಕೋಟಿಗಳಿಗೆ ತಲುಪಿದೆ, ಇದು ಸೆಪ್ಟೆಂಬರ್‌ನಲ್ಲಿ ರೂ. 1,87,346 ಕೋಟಿಗಳಷ್ಟಿತ್ತು. https://kannadanewsnow.com/kannada/no-one-elses-words-are-worth-anything-except-mine-and-the-chief-ministers-dcm-d-k-shivakumar/ https://kannadanewsnow.com/kannada/big-news-priority-given-to-teaching-kannada-in-karnatakas-madrasas-cms-announcement/

Read More

ಬೆಂಗಳೂರು: “ಟನಲ್ ರಸ್ತೆ ವಿಚಾರವಾಗಿ ವಿಪಕ್ಷ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ನಾನು ತಯಾರಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್ ಬಾಗ್ ಬಳಿ ಪ್ರವೇಶ- ನಿರ್ಗಮನ ತಾಣ ರೂಪಿಸಲಾಗುವುದು.” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದ‌ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. “ಅಶೋಕ್ ಅವರು ಧರಣಿ ಕೂರುವ ಅವಶ್ಯಕತೆಯಿಲ್ಲ. ಏಕೆಂದರೆ ಅವರು ಬೆಂಗಳೂರಿನವರು. ಇಲ್ಲಿಂದ ಏಳೆಂಟು ಬಾರಿ ಗೆದ್ದಿದ್ದಾರೆ. ಅವರಿಗೂ ಜವಾಬ್ದಾರಿಯಿದೆ. ಅವರ ನೇತೃತ್ವದಲ್ಲಿ ರಚಿಸಿದ ಸಮಿತಿಯೇ ಸರ್ಕಾರಕ್ಕೆ ಸಲಹೆ, ನಿರ್ದೇಶನ ನೀಡಲಿ. ಟನಲ್ ಯೋಜನೆಯನ್ನು ಅವರೂ ಗಮನಿಸಲಿ. ಅಶ್ವಥ ನಾರಾಯಣ್ ಸೇರಿ ಬೇರೆ ಯಾರ ಹೆಸರನ್ನು ಸೂಚಿಸಿದರು ಅವರನ್ನು ಈ ಸಮಿತಿಗೆ ಸೇರ್ಪಡೆ ಮಾಡಲಾಗುವುದು.‌ ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡಬೇಕು, ಮಾಡೋಣ” ಎಂದರು. “ನಾನು ಶುಕ್ರವಾರ ರಾತ್ರಿ ಲಾಲ್ ಬಾಗ್ ಬಳಿ ತೆರಳಿ ಎಲ್ಲೆಲ್ಲಿ ಟನಲ್ ರಸ್ತೆಗೆ ಪ್ರವೇಶ ಕಲ್ಪಿಸಬಹುದು ಎಂದು ಪರಿಶೀಲನೆ ಮಾಡಿದ್ದೇನೆ. ಪರ್ಯಾಯ…

Read More

ಬೆಂಗಳೂರು: ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ  70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ‌ ಸಂದರ್ಭದಲ್ಲಿ ಸಮಸ್ತ ಅಧಿಕಾರಿ/ ಸಿಬ್ಬಂದಿಗಳು ಹಾಗೂ ಪ್ರಯಾಣಿಕರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ‌ ಪಾಷ‌ ಭಾಆಸೇ, ಅವರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರಾದಂತ ಅಕ್ರಂ ಪಾಷ ಅವರು, ನಮ್ಮ ಚಾಲನಾ ಸಿಬ್ಬಂದಿಗಳು ಬಹಳ ಸಂತೋಷದಿಂದ ರಾಜ್ಯೋತ್ಸವವನ್ನು ಆಚರಿಸುತ್ತಾರೆ. ಕರ್ನಾಟಕ ರಾಜ್ಯದ ಇತಿಹಾಸವನ್ನು ವಿವರಿಸುತ್ತಾ ಮಾತನಾಡಿದ ಅವರು ಮೈಸೂರು ರಾಜ್ಯದಿಂದ ಕರ್ನಾಟಕವಾಗಿ ಹೆಸರಿಸಲಾದ ನಾಡು ಕರ್ನಾಟಕ ಎಂದರು. ಶ್ರೀಯುತರುಗಳಾದ ಆಲೂರು ವೆಂಕಟರಾಯರು, ಕುವೆಂಪು, ಅನಕೃ, ಇತರೆ ಮಹನೀಯರುಗಳು ಕನ್ನಡ ನಾಡಿಗಾಗಿ ದುಡಿದಿದ್ದಾರೆ. ಕನ್ನಡ ನಾಡು ನುಡಿಯನ್ನು ಗೌರವಿಸಿ, ಉಳಿಸಿ, ಬೆಳೆಸುವ ಸಂಕಲ್ಪ ಪ್ರತಿಯೊಬ್ಬರಲ್ಲಿಯೂ ಮೂಡಬೇಕು. ಎಲ್ಲರನ್ನೂ ಪ್ರೋತ್ಸಾಹಿಸಿ ಭಾಷೆಯನ್ನು ಕಲಿಯುವಂತೆ ಮಾತನಾಡಬೇಕು. ಕನ್ನಡ ಭಾಷೆ, ಕಲೆ, ಸಂಸ್ಕೃತಿ ಮತ್ತು ನೆಲದ ಬಗ್ಗೆ ಹೆಮ್ಮೆ ಮತ್ತು ಗೌರವವಿರಲಿ ಎಂದು ತಿಳಿಸಿದರು. ಕೆ ಎಸ್ ಆರ್…

Read More

ನವದೆಹಲಿ: ಭಾರತೀಯ ಟೆನಿಸ್ ಐಕಾನ್ ರೋಹನ್ ಬೋಪಣ್ಣ ಅವರು ಕೇಂದ್ರಬಿಂದುವಾಗಿದ್ದು, ವೃತ್ತಿಪರ ಟೆನಿಸ್‌ನಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿದ್ದಾರೆ. ಹೊಸ ಆಟಗಾರರ ಪೀಳಿಗೆಗೆ ಸ್ಫೂರ್ತಿ ನೀಡುತ್ತಾ, ಎರಡು ದಶಕಗಳಿಗೂ ಹೆಚ್ಚು ಕಾಲದ ವೃತ್ತಿಜೀವನದ ನಂತರ ಬೋಪಣ್ಣ ನಿವೃತ್ತಿ ಹೊಂದುತ್ತಿದ್ದಾರೆ. ಭಾರತೀಯ ಟೆನಿಸ್‌ನ ಸಾರ್ವಕಾಲಿಕ ಶ್ರೇಷ್ಠರಲ್ಲಿ ಒಬ್ಬರಾದ ಬೋಪಣ್ಣ ತಮ್ಮ ನಿರ್ಧಾರವನ್ನು Instagram ನಲ್ಲಿ ಪ್ರಕಟಿಸಿದ್ದಾರೆ. ನಿಮ್ಮ ಜೀವನಕ್ಕೆ ಅರ್ಥವನ್ನು ನೀಡಿದ ಯಾವುದನ್ನಾದರೂ ನೀವು ಹೇಗೆ ವಿದಾಯ ಹೇಳುತ್ತೀರಿ? ಪ್ರವಾಸದಲ್ಲಿ 20 ಮರೆಯಲಾಗದ ವರ್ಷಗಳ ನಂತರ, ನಾನು ಅಧಿಕೃತವಾಗಿ ನನ್ನ ರಾಕೆಟ್ ಅನ್ನು ನೇತುಹಾಕುವ ಸಮಯ ಬಂದಿದೆ. ನನ್ನ ಸರ್ವ್ ಅನ್ನು ಬಲಪಡಿಸಲು ಕೂರ್ಗ್‌ನಲ್ಲಿ ಮರ ಕತ್ತರಿಸುವುದರಿಂದ ಹಿಡಿದು, ವಿಶ್ವದ ಅತಿದೊಡ್ಡ ಕ್ರೀಡಾಂಗಣಗಳ ದೀಪಗಳ ಕೆಳಗೆ ನಿಲ್ಲುವವರೆಗೆ – ಇದು ಅವಾಸ್ತವಿಕವೆನಿಸುತ್ತದೆ. ಭಾರತವನ್ನು ಪ್ರತಿನಿಧಿಸುವುದು ನನ್ನ ಜೀವನದ ಶ್ರೇಷ್ಠ ಗೌರವವಾಗಿದೆ ಎಂದಿದ್ದಾರೆ. ವರ್ಷಗಳಲ್ಲಿ, ಬೋಪಣ್ಣ ಭಾರತೀಯ ಟೆನಿಸ್‌ನ ಮೂಲಾಧಾರವಾದರು, ತಮ್ಮ ದೊಡ್ಡ ಸರ್ವ್, ನಿರ್ಭೀತ ನೆಟ್ ಆಟ ಮತ್ತು ವಯಸ್ಸನ್ನು ಮೀರುವ ದೀರ್ಘಾಯುಷ್ಯದಿಂದ ಡಬಲ್ಸ್…

Read More

ಭಾರತೀಯ ಟೆನಿಸ್ ದಂತಕಥೆ ರೋಹನ್ ಬೋಪಣ್ಣ ವೃತ್ತಿಪರ ಟೆನಿಸ್‌ನಿಂದ ನಿವೃತ್ತಿ ಘೋಷಿಸಿದ್ದಾರೆ, ಇದು ಎರಡು ದಶಕಗಳಿಗೂ ಹೆಚ್ಚು ಕಾಲ ನಡೆದ ಮತ್ತು ಭಾರತೀಯ ಕ್ರೀಡೆಯಲ್ಲಿ ಅಳಿಸಲಾಗದ ಗುರುತು ಬಿಟ್ಟ ಅವರ ಹೊಳೆಯುವ ವೃತ್ತಿಜೀವನದ ಅಂತ್ಯವನ್ನು ಸೂಚಿಸುತ್ತದೆ. ಅವರ ಅಂತಿಮ ಪ್ರದರ್ಶನವು ಪ್ಯಾರಿಸ್ ಮಾಸ್ಟರ್ಸ್ 1000 ನಲ್ಲಿ ಬಂದಿತು, ಅಲ್ಲಿ ಅವರು ಅಲೆಕ್ಸಾಂಡರ್ ಬುಬ್ಲಿಕ್ ಅವರೊಂದಿಗೆ ಪಾಲುದಾರರಾದರು, ಕೂರ್ಗ್‌ನ ಕಾಫಿ ಬೆಟ್ಟಗಳಲ್ಲಿ ಪ್ರಾರಂಭವಾದ ಮತ್ತು ವಿಶ್ವ ಟೆನಿಸ್‌ನ ಭವ್ಯ ಹಂತಗಳನ್ನು ತಲುಪಿದ ಪ್ರಯಾಣದ ಪರದೆಯನ್ನು ಮುಚ್ಚಿದರು. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ಭಾವನಾತ್ಮಕ ಟಿಪ್ಪಣಿಯಲ್ಲಿ, ಬೋಪಣ್ಣ ಹೀಗೆ ಬರೆದಿದ್ದಾರೆ: “ನಿಮ್ಮ ಜೀವನಕ್ಕೆ ಅರ್ಥವನ್ನು ನೀಡಿದ ಯಾವುದನ್ನಾದರೂ ನೀವು ಹೇಗೆ ವಿದಾಯ ಹೇಳುತ್ತೀರಿ? ಪ್ರವಾಸದಲ್ಲಿ 20 ಮರೆಯಲಾಗದ ವರ್ಷಗಳ ನಂತರ, ನಾನು ಅಧಿಕೃತವಾಗಿ ನನ್ನ ರಾಕೆಟ್ ಅನ್ನು ನೇತುಹಾಕುವ ಸಮಯ ಬಂದಿದೆ. ನನ್ನ ಸರ್ವ್ ಅನ್ನು ಬಲಪಡಿಸಲು ಕೂರ್ಗ್‌ನಲ್ಲಿ ಮರ ಕತ್ತರಿಸುವುದರಿಂದ ಹಿಡಿದು, ವಿಶ್ವದ ಅತಿದೊಡ್ಡ ಕ್ರೀಡಾಂಗಣಗಳ ದೀಪಗಳ ಕೆಳಗೆ ನಿಲ್ಲುವವರೆಗೆ – ಇದು ಅವಾಸ್ತವಿಕವೆನಿಸುತ್ತದೆ. ಭಾರತವನ್ನು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್ ನ್ಯೂಸ್ ನೀಡಿದೆ. ಅದೇ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿ ಕಟ್ಟಡ ಕಟ್ಟಿದ್ದರೂ ದಂಡವನ್ನು ಕಟ್ಟಿಸಿಕೊಂಡು ವಿನಾಯ್ತಿ ನೀಡುವುದಕ್ಕೆ ಅಸ್ತು ಎಂದಿದೆ. ಹೌದು.. ರಾಜ್ಯದ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿದ ಕಟ್ಟಡಗಳಿಗೆ ವಿನಾಯ್ತಿ ನೀಡಿ ದಂಡ ಕಟ್ಟಿ, ಪರಿಷ್ಕೃತ ನಕ್ಷೆ ಪಡೆಯಲು ಸರ್ಕಾರ ಅವಕಾಶವನ್ನು ನೀಡಿದೆ. ಆದರೇ ಅದಕ್ಕಾಗಿ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದಂತ ಮಾಲೀಕರು ಶೇ.15ರಷ್ಟು ಮಿತಿಯೊಳಗೆ ನಿಯಮ ಉಲ್ಲಂಘಿಸಿದ್ದರೇ ಮಾತ್ರ ಈ ಆದೇಶವು ಅನ್ವಯ ಆಗಲಿದೆ. ಯಾರು ನಿಯಮ ಉಲ್ಲಂಘಿಸಿ ಸೆಟ್ ಬ್ಯಾಕ್, ಕಾರ್ ಪಾರ್ಕಿಂಗ್ ಉಲ್ಲಂಘನೆ ಮಾಡಿ ಕಟ್ಟಡ ಕಟ್ಟಿರುತ್ತಾರೋ ಅವರಿಗೆಲ್ಲ ಅನುಕೂಲ ಆಗಲಿದೆ. ಈ ಪರವಾನಿಗೆ ಉಲ್ಲಂಘಿಸಿದ ಕಟ್ಟಡಗಳಿಗೆ ವಿನಾಯಿತಿ ನೀಡಲು ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ಕೆಳಕಿನಂತೆ ದಂಡ ನಿಗದಿಪಡಿಸಿದೆ. ಈ ಆದೇಶವು ಶೇ.15ರಷ್ಟು ಮಿತಿಯೊಳಗೆ…

Read More

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕೆಲ ವಿಶ್ವ ವಿದ್ಯಾಲಯಗಳಿಗೆ ಕೃಷ್ಣದೇವರಾಯ, ರಾಣಿ ಚನ್ನಮ್ಮ ಸೇರಿದಂತೆ ವಿವಿಧ ಗಣ್ಯರ ಹೆಸರಿಡಲಾಗಿದೆ. ಬಾಕಿ ಇರುವಂತ ವಿವಿಗಳಿಗೆ ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್, ದೇವರಾಜ ಅರಸು ಹೆಸರಿಡಲು ಅಗತ್ಯ ಕ್ರಮವಹಿಸುವಂತೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವಂತ ಸಿಎಂ ಸಿದ್ಧರಾಮಯ್ಯ ಅವರು,ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಆದಿಕವಿ ಮಹರ್ಷಿ ವಾಲ್ಮೀಕಿ, ಅಕ್ಕಮಹಾದೇವಿ, ರಾಣಿ ಚನ್ನಮ್ಮ ಕೃಷ್ಣದೇವರಾಯ, ಕುವೆಂಪು, ವಿಶ್ವೇಶ್ವರಯ್ಯ, ಗಂಗೂಬಾಯಿ ಹಾನಗಲ್, ರಾಜೀವ್ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರುಗಳ ಹೆಸರುಗಳನ್ನು ಈಗಾಗಲೇ ನಾಮಕರಣ ಮಾಡಲಾಗಿದೆ ಎಂದಿದ್ದಾರೆ. ಸಾಮಾಜಿಕ ನ್ಯಾಯದ ಹರಿಕಾರರೆಂದು ಹೆಸರಾಗಿರುವ ವಿಶ್ವಗುರು-ಸಾಂಸ್ಕೃತಿಕ ನಾಯಕ ಬಸವಣ್ಣನವರು, ಶೂದ್ರ ಸಿದ್ಧಾಂತದ ಹರಿಕಾರರಾದ ಕನಕದಾಸರು, ಹಿಂದುಳಿದ ಸಮುದಾಯಗಳಿಗೆ ಚೈತನ್ಯ ನೀಡಿದ ರಾಜ್ಯದ ಅಭಿವೃದ್ಧಿಗೆ ಚಲನಶೀಲತೆ ತಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದೇವರಾಜ ಅರಸು ಅವರ ಹೆಸರುಗಳನ್ನು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನಾಮಕರಣ ಮಾಡುವ ಅಗತ್ಯವಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿದ್ದಾರೆ. ಈ…

Read More

ಬೆಂಗಳೂರು: ಬೆಂಗಳೂರು ನಗರ ವಿಶ್ವ ವಿದ್ಯಾನಿಲಯಕ್ಕೆ ಸಿಂಡಿಕೇಟ್ ಪ್ರಾಧಿಕಾರದ ಸದಸ್ಯರನ್ನಾಗಿ ಡಾ.ಮಹಂತೇಶ್ ಪಾಟೀಲ್(ಡಾ.ಮಹಂತಗೌಡ) ಅವರನ್ನು ನೇಮಿಸಿ ಕುಲಸಚಿವರು ಆದೇಶಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ವಿಶ್ವ ವಿದ್ಯಾನಿಲಯದ ಕುಲಸಚಿವರು ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರಿನ ಬಾಪು ಕಾಲೇಜ್ ಆಫ್ ಎಜುಕೇಷನ್ ಪ್ರಾಂಶುಪಾಲರಾದಂತ ಡಾ.ಮಹಂತೇಶ್ ಪಾಟೀಲ್ ಅವರನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದಿದ್ದಾರೆ. ಅಂದಹಾಗೇ ಡಾ.ಮಹಂತೇಶ್ ಪಾಟೀಲ್ ಅವರು ಮದರ್ ಥೆರೇಸಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಉಪ್ಯಾಸಕರಾಗಿ, ಆ ಬಳಿಕ ಪ್ರಾಂಶುಪಾಲರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ಆ ಬಳಿ ಜಿಎಂ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದರು. ಇದೀಗ ಬೆಂಗಳೂರಿನ ಯಶವಂತಪುರದಲ್ಲಿರುವಂತ ಬಾಪು ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/these-documents-are-mandatory-to-be-submitted-along-with-the-nomination-paper-for-the-gram-panchayat-elections/ https://kannadanewsnow.com/kannada/cm-siddaramaiah-orders-naming-of-some-universities-in-the-state-after-basavanna-nalvadi-krishnaraja-wodeyar-and-urs/

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನವೆಂಬರ್ ವೇಳೆಗೆ ಕ್ರಾಂತಿಯಾಗುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಚರ್ಚೆಯ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತ್ಯಾಗದ ಮಾತನಾಡಿದ್ದು ಗಮನ ಸೆಳೆದಿದೆ. ಮಾಜಿ ಪ್ರಧಾನಿ ಇಂದಿರಾ ಸ್ಮರಣೆ ವೇಳೆ ಸೋನಿಯಾ ಗಾಂಧಿ ಬಗ್ಗೆ ಪ್ರಸ್ತಾಪಿಸಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ತ್ಯಾಗವನ್ನು ಉಲ್ಲೇಖಿಸಿದರು. ಅಲ್ಲದೇ ಪ್ರಧಾನಿಯಾಗಬೇಕಾಗಿದ್ದವರು ಪಕ್ಷಕ್ಕಾಗಿ ಅಧಿಕಾರ ತ್ಯಾಗ ಮಾಡಿದ್ರು ಎಂಬುದಾಗಿ ಹೇಳುವ ಮೂಲಕ ತ್ಯಾಗದ ಮಾತನಾಡಿದ್ದಾರೆ. https://kannadanewsnow.com/kannada/plastic-bottled-water-cannot-be-used-in-government-meetings-and-functions-across-the-state-cm-siddaramaiah-orders/ https://kannadanewsnow.com/kannada/these-documents-are-mandatory-to-be-submitted-along-with-the-nomination-paper-for-the-gram-panchayat-elections/

Read More

ಬೆಂಗಳೂರು: ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಸದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಖಡಕ್ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಆದೇಶ ಹೊರಡಿಸಿರುವಂತ ಅವರು, ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್‌ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಸೂಚಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ ಸಚಿವಾಲಯವೂ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳ ಸಭೆ/ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆ.ಎಂ.ಎಫ್. ನ ‘ನಂದಿನಿ’ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/shocking-act-in-bengaluru-transgenders-shave-head-of-transgender-woman-and-attack-her/ https://kannadanewsnow.com/kannada/these-documents-are-mandatory-to-be-submitted-along-with-the-nomination-paper-for-the-gram-panchayat-elections/

Read More