Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದ ಹೆಸರಘಟ್ಟದ ಎಚ್ಎಸ್ಎಲ್ಎನ್ ಗ್ಲೋಬಲ್ ಸ್ಮಾರ್ಟ್ ಶಾಲೆಯು ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಶೇ.100ರಷ್ಟು ಸಾಧನೆ ಮಾಡಿದೆ. ಪರೀಕ್ಷೆಗೆ ಹಾಜರಾದ 10 ವಿದ್ಯಾರ್ಥಿಗಳ ಪೈಕಿ ಎಂ. ಸಂಜನಾ (ಶೇ.95), ಚಂದನಾ ಎಸ್ ಶೇ. ( 91. 2)ರಫಿಯಾ ಖಾನ್ (ಶೇ.84.64), ಧೃವೀತಾ ನವೀನ್ (ಶೇ.83.68), ರೇವತಿ (ಶೇ.79.68), ನಿತ್ಯಶ್ರೀ (ಶೇ.79.2), ದೀಶಾ (ಶೇ.71.68), ಗಗನ್ ಎಂ. (ಶೇ.67.5), ಚೇತನ್ ಆರ್. (ಶೇ.64.4), ಭುವನ್ ಜಿ. (ಶೇ.64) ಅಂಕಗಳನ್ನು ಪಡೆದಿದ್ದಾರೆ. ಈ ಬಾರಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಪೈಕಿ ಎಲ್ಲರೂ ಡಿಸ್ಟಿಂಕ್ಷನ್ ಮತ್ತು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರಾದ ಲಿಖಿತಾ ಗೌಡ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. https://kannadanewsnow.com/kannada/minister-ishwar-khandre-instructs-officials-to-protect-sheebi-forest-land-from-land-grabbers/ https://kannadanewsnow.com/kannada/breaking-another-suicide-in-bengaluru-car-driver-commits-suicide-after-unable-to-repay-loan/
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದಂತ ಆರು ಉಗ್ರರು ಚೈನ್ನೈ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿ, ಅಲ್ಲಿಂದ ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಿರುವಂತ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಪಹಲ್ಗಾಮ್ ಉಗ್ರರನ್ನು ಬಂಧಿಸೋ ನಿಟ್ಟಿನಲ್ಲಿ ಶ್ರೀಲಂಕಾ ವಿಮಾನ ನಿಲ್ದಾಣವನ್ನು ಲಾಕ್ ಡೌನ್ ಮಾಡಲಾಗಿದೆ. ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಕೊಂದಿದ್ದಂತ ಆರು ಉಗ್ರರು ಚೈನ್ನೈನಲ್ಲಿ ಪತ್ತೆಯಾಗಿದ್ದರು. ಅಲ್ಲಿಂದ ಶ್ರೀಲಂಕಾಗೆ ವಿಮಾನದಲ್ಲಿ ತೆರಳುತ್ತಿರುವಂತ ಖಚಿತ ಮಾಹಿತಿ ಭಾರತಕ್ಕೆ ಸಿಕ್ಕಿತ್ತು. ಈ ಮಾಹಿತಿಯನ್ನು ಶ್ರೀಲಂಕಾ ಸರ್ಕಾರಕ್ಕೆ ಭಾರತ ಸರ್ಕಾರ ನೀಡಿದೆ. ಈ ಹಿನ್ನಲೆಯಲ್ಲಿ ಪಹಲ್ಗಾಮ್ ಉಗ್ರರನ್ನು ಬಂಧಿಸೋ ನಿಟ್ಟಿನಲ್ಲಿ ಶ್ರೀಲಂಕಾ ವಿಮಾನ ನಿಲ್ದಾಣವನ್ನು ಲಾಕ್ ಡೌನ್ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/sagar-secures-2nd-position-for-shivamogga-district-in-sslc-exam-results-beo-congratulates-government-employees-association/ https://kannadanewsnow.com/kannada/breaking-another-suicide-in-bengaluru-car-driver-commits-suicide-after-unable-to-repay-loan/
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲೇ ಸಾಗರ ತಾಲ್ಲೂಕು ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ-2ರಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಇಂತಹ ಸಾಧನೆಗೆ ಕಾರಣವಾದಂತ ಸಾಗರ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಅಭಿನಂದಿಸಲಾಯಿತು. ಇಂದು ಸಾಗರ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ತೆರಳಿದಂತ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಅಣ್ಣಪ್ಪ, ರಾಜ್ಯ ಪರಿಷತ್ ಸದಸ್ಯ ದೇವೇಂದ್ರಪ್ಪ.ಕೆ ಅವರು ಬಿಇಓ ಪರಶುರಾಮಪ್ಪ.ಇ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಸಾಗರ ತಾಲ್ಲೂಕಿನ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ-1ರಲ್ಲಿ ಉತ್ತಮ ಸಾಧನೆಗೆ ನಿಮ್ಮ ಮಾರ್ಗದರ್ಶನ, ಸಲಹೆ-ಸೂಚನೆಗಳು, ಪಾಠ-ಪ್ರವಚನ ಕಾರಣವಾಗಿದೆ. ಈ ಕಾರಣದಿಂದಲೇ ಶಿವಮೊಗ್ಗ ಜಿಲ್ಲೆಯಲ್ಲೇ ಸಾಗರ ತಾಲ್ಲೂಕು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ ಎಂಬುದಾಗಿ ಕೊಂಡಾಡಿದರು. ಈ ಸಂದರ್ಭದಲ್ಲಿ ನೌಕರರ ಸಂಘದ ನಿರ್ದೇಶಕರಾದಂತ ಪ್ರಕಾಶ್, ನಾಗರಾಜ್, ಮಂಜುನಾಥ್, ದೇವೇಂದ್ರಪ್ಪ, ಅನಸೂಯ ತಳವಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ವರದಿ: ವಸಂತ ಬಿ…
ನವದೆಹಲಿ: ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ (ಡಿಜಿಎಫ್ಟಿ) ಪಾಕಿಸ್ತಾನದಿಂದ ಭಾರತಕ್ಕೆ ಬರುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿದೆ. ಇದು ಪಾಕಿಸ್ತಾನದಿಂದ ನೇರವಾಗಿ ಅಥವಾ ಇತರ ಯಾವುದೇ ವ್ಯಾಪಾರ ಮಾರ್ಗದ ಮೂಲಕ ಸರಕುಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸುತ್ತದೆ. ಅಧಿಸೂಚನೆ ಸಂಖ್ಯೆ 06/2025-26 ದಿನಾಂಕ 2 ಮೇ 2025 ರ ಮೂಲಕ ಹೊರಡಿಸಲಾದ ನಿರ್ದೇಶನವು ತಕ್ಷಣದಿಂದ ಜಾರಿಗೆ ಬಂದಿದೆ. ಎಫ್ಟಿಪಿ 2023 ರಲ್ಲಿ ಪ್ಯಾರಾ 2.20 ಎ ಎಂಬ ಹೊಸ ಪ್ಯಾರಾಗ್ರಾಫ್ ಅನ್ನು ಸೇರಿಸಲಾಗಿದೆ. ಪಾಕಿಸ್ತಾನದಿಂದ ಕಳುಹಿಸುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು, ಮುಕ್ತವಾಗಿ ಆಮದು ಮಾಡಿಕೊಳ್ಳಬಹುದಾದ ಅಥವಾ ಬೇರೆ ರೀತಿಯಲ್ಲಿ ಅನುಮತಿಸಲಾಗಿದ್ದರೂ, ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಬಂಧವನ್ನು ವಿಧಿಸಲಾಗಿದೆ. https://kannadanewsnow.com/kannada/manipal-group-of-institutions-celebrates-127th-birth-anniversary-of-dr-tma-pai/ https://kannadanewsnow.com/kannada/breaking-another-suicide-in-bengaluru-car-driver-commits-suicide-after-unable-to-repay-loan/
ಮಣಿಪಾಲ: ಮಣಿಪಾಲ್ ಸಮೂಹ ಸಂಸ್ಥೆಗಳು ತಮ್ಮ ಸಂಸ್ಥಾಪಕರಾದ ಡಾ ಟಿಎಂಎ ಪೈ ಅವರ 127ನೇ ಜನ್ಮದಿನವನ್ನು ಕಳೆದ ಬುಧವಾರದಂದು( ಏಪ್ರಿಲ್ 30, 2025) ಶ್ರದ್ಧಾ ಪೂರ್ವಕವಾಗಿ ಆಚರಿಸಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಆಂಧ್ರಪ್ರದೇಶದ ಘನತೆವೆತ್ತ ರಾಜ್ಯಪಾಲರು, ನಿವೃತ್ತ ನ್ಯಾಯಮೂರ್ತಿ ಶ್ರೀ ಎಸ್ ಅಬ್ದುಲ್ ನಜೀರ್ ಅವರು ಡಾ ಟಿಎಂಎ ಪೈ ಅವರಿಗೆ ಗೌರಪರ್ಪಣೆ ಸಲ್ಲಿಸಿ ಮಾತನಾಡಿ, ‘ಡಾ. ಪೈ ಅವರದ್ದು ಬಹುಮುಖ ವ್ಯಕ್ತಿತ್ವ , ಶಿಕ್ಷಣ ತಜ್ಞ, ಬ್ಯಾಂಕರ್, ಲೋಕೋಪಕಾರಿ ಮತ್ತು ನಿಜವಾದ ರಾಷ್ಟ್ರ ನಿರ್ಮಾತೃ ಆಗಿದ್ದರು. “ಅನಕ್ಷರತೆ ಮತ್ತು ಅನಾರೋಗ್ಯವನ್ನು ನಿರ್ಮೂಲನೆ ಮಾಡುವ ಮೂಲಕ ಬಡತನವನ್ನು ನಿರ್ಮೂಲನೆ ಮಾಡಬಹುದು ಎಂಬುದು ಅವರ ಬಲವಾದ ನಂಬಿಕೆಯಾಗಿತ್ತು. ಡಾ. ಪೈ ಅವರು ನಿಜವಾದ ಕರ್ಮಾ ಯೋಗಿಯಾಗಿದ್ದರು. ವಿದ್ಯಾವಂತ ಮಕ್ಕಳು ಕೇವಲ ಕುಟುಂಬದ ಆಸ್ತಿ ಅಷ್ಟೇ ಅಲ್ಲದೆ ಅವರು ಪ್ರಗತಿಶೀಲ ರಾಷ್ಟ್ರದ ನಿರ್ಮಾತೃರೂ ಹೌದು’ ಎಂದರು. “ಡಾ. ಟಿ.ಎಂ.ಎ. ಪೈ ಅವರು ಸ್ಥಾಪಿಸಿದ ಮೂಡುಬಿದಿರೆಯ ಮಹಾವೀರ ಕಾಲೇಜಿನ ಹೆಮ್ಮೆಯ ಹಳೆಯ ವಿದ್ಯಾರ್ಥಿ ನಾನು.…
ಬೆಂಗಳೂರು : ಕೇಂದ್ರದ ಜಲಶಕ್ತಿ ಸಚಿವರು ಮೇ 7 ರಂದು ಕೃಷ್ಣಾ ಕಣಿವೆಯ ಸಭೆಯನ್ನು ಕರೆದಿದ್ದು, ಸಭೆಯಲ್ಲಿ ಕೂಡಲೇ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಸಭೆಗೆ ಪೂರಕವಾಗಿ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು, ಕಾನೂನು ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯದ ನಿಲುವು ಏನಿರಬೇಕೆಂದು ಚರ್ಚಿಸಲಾಗಿದೆ ಎಂದರು. ಕೃಷ್ಣಾ ಜಲವಿವಾದ ನ್ಯಾಯಮಂಡಳಿ -2 ದಿನಾಂಕ 30-12- 2010 ರಲ್ಲಿ ತೀರ್ಪು ನೀಡಿದ ನಂತರ 2013 ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ತದನಂತರ ಈವರೆಗೆ ಕೇಂದ್ರ ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರದ ನೀರಾವರಿ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಿದ ನಂತರ ಸಭೆಯನ್ನು ಕರೆಯಲಾಗಿದೆ. ಎರಡನೇ ನ್ಯಾಯಾಧಿಕರಣದ ಆದೇಶದಲ್ಲಿ 173 ಟಿ.ಎಂ.ಸಿ ನೀರನ್ನು ಬಳಸಿಕೊಳ್ಳಲು ಸೂಚಿಸಿದೆ. 519 ಮೀಟರ್ ಗಳಿಂದ 524 ಮೀಟರ್ ಗಳಿಗೆ ಅಣೆಕಟ್ಟಿನ ಎತ್ತರವನ್ನು…
ಬೆಂಗಳೂರು : ಸಂಗೀತ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ನೀಡಿದ ದೂರಿನ ಮೇರೆಗೆ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ಸೆಕ್ಷನ್ 352 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಸೋನು ನಿಗಮ್ ಅವರು ಕನ್ನಡ ಮತ್ತು ಕನ್ನಡಿಗರ ಭಾಷಾ ಹೋರಾಟವನ್ನು ಭಯೋತ್ಪಾದನೆಗೆ ಹೋಲಿಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕೆಆರ್ವಿ) ಬೆಂಗಳೂರು ಪೊಲೀಸರಿಗೆ ಔಪಚಾರಿಕ ದೂರು ನೀಡಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ. ಲಭ್ಯವಾದ ಪತ್ರದಲ್ಲಿ ನಿಗಮ್ “ವಿವಿಧ ಭಾಷಾ ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಲಾಗಿದೆ. https://kannadanewsnow.com/kannada/india-suspends-all-postal-services-with-pakistan/ https://kannadanewsnow.com/kannada/breaking-another-suicide-in-bengaluru-car-driver-commits-suicide-after-unable-to-repay-loan/ https://kannadanewsnow.com/kannada/minister-ishwar-khandre-instructs-officials-to-protect-sheebi-forest-land-from-land-grabbers/
ನವದೆಹಲಿ: ಪಹಲ್ಗಾಮ್ ದಾಳಿಗೆ ಬೆಂಬಲಿಸಿದಂತ ಪಾಪಿ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ಭಾರತ ಸರ್ಕಾರ ದಿಟ್ಟ ನಿರ್ಧಾರಗಳನ್ನು ಕೈಗೊಂಡಿದೆ. ಭಾರತದ ಬಂದರು ಬಳಕೆ ನಿಷೇಧಿಸಿದ ಬೆನ್ನಲ್ಲೇ, ಪಾಕಿಸ್ತಾನಕ್ಕೆ ಅಂಚೆ ಸೇವೆಯನ್ನು ಸ್ಥಗಿತಗೊಳಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಭಾರತೀಯ ಸಂವಹನ ಸಚಿವಾಲಯವು ಪಾಕಿಸ್ತಾನದಿಂದ ವಾಯು ಮತ್ತು ಮೇಲ್ಮೈ ಮಾರ್ಗಗಳ ಮೂಲಕ ಎಲ್ಲಾ ರೀತಿಯ ಒಳಬರುವ ಮೇಲ್ ಮತ್ತು ಪಾರ್ಸೆಲ್ಗಳ ವಿನಿಮಯವನ್ನು ಸ್ಥಗಿತಗೊಳಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದೆ. https://twitter.com/ANI/status/1918599779866525838 ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ (ಡಿಜಿಎಫ್ಟಿ) ಪಾಕಿಸ್ತಾನದಿಂದ ಭಾರತಕ್ಕೆ ಬರುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿದೆ. ಇದು ಪಾಕಿಸ್ತಾನದಿಂದ ನೇರವಾಗಿ ಅಥವಾ ಇತರ ಯಾವುದೇ ವ್ಯಾಪಾರ ಮಾರ್ಗದ ಮೂಲಕ ಸರಕುಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸುತ್ತದೆ. ಅಧಿಸೂಚನೆ ಸಂಖ್ಯೆ 06/2025-26 ದಿನಾಂಕ 2 ಮೇ 2025 ರ ಮೂಲಕ ಹೊರಡಿಸಲಾದ ನಿರ್ದೇಶನವು ತಕ್ಷಣದಿಂದ ಜಾರಿಗೆ ಬಂದಿದೆ. ಎಫ್ಟಿಪಿ…
ರಾಮನಗರ: ರೌಡಿ ಶೀಟರ್ ಒಬ್ಬನನ್ನು ಸಿನಿಮಾ ಸ್ಟೈಲಿನಲ್ಲಿ ರಾಮನಗರದಲ್ಲಿ ಬೈಕ್ ಗೆ ಕಾರು ಗುದ್ದಿಸಿ ಆ ಬಳಿಕ ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ರಾಮನಗರ: ರೌಡಿ ಶೀಟರ್ ಒಬ್ಬನನ್ನು ಸಿನಿಮಾ ಸ್ಟೈಲಿನಲ್ಲಿ ರಾಮನಗರದಲ್ಲಿ ಬೈಕ್ ಗೆ ಕಾರು ಗುದ್ದಿಸಿ ಆ ಬಳಿಕ ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ರಾಮನಗರದ ಹಾರೋಹಳ್ಳಿ ಕೆ ಎಸ್ ಆರ್ ಟಿ ಸಿ ಬಸ್ ಡಿಪೋ ಬಳಿಯಲ್ಲಿ ಇಂದು ಮಂಗಳೂರು ಬಳಿಕ, ರಾಮನಗರದಲ್ಲಿ ರೌಡಿ ಶೀಟರ್ ಬರ್ಬರವಾಗಿ ಹತ್ಯೆ ಮಾಡಿದಂತ ಘಟನೆ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿದ್ದಂತ ರೌಡಿ ಶೀಟರ್ ಸಂತೋಷ್ ಆಲಿಯಾಸ್ ಕರಡಿಯನ್ನು ಕಾರು ಗುದ್ದಿಸಿ, ಕೆಳಗೆ ಬೀಳಿಸಿ ಅಟ್ಟಾಡಿಸಿಕೊಂಡು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ಎದುರಿನಿಂದ ಕಾರಿನಲ್ಲಿ ಬಂದಂತ ದುಷ್ಕರ್ಮಿಗಳು ಸಂತೋಷ್ ಗೆ ಗುದ್ದಿದ್ದಾರೆ. ಆ ಬಳಿಕ ಅಟ್ಟಾಡಿಸಿಕೊಂಡು ಹೋಗಿ ಮಾರಕಾಸ್ಟ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. https://kannadanewsnow.com/kannada/here-are-the-highlights-of-the-krishna-tribunal-ii-meeting-chaired-by-cm-siddaramaiah/ https://kannadanewsnow.com/kannada/breaking-another-suicide-in-bengaluru-car-driver-commits-suicide-after-unable-to-repay-loan/
ಬೆಂಗಳೂರು:ಕೃಷ್ಣಾ ನ್ಯಾಯಾಧೀಕರಣ-2 ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಇಂದು ಕಾವೇರಿಯಲ್ಲಿ ನಡೆದ ಸಭೆಯ ಮುಖ್ಯಾಂಶಗಳನ್ನು ಮುಂದಿದೆ ಓದಿ. • ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಧ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು. • ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗಜೆಟ್ ಅಧಿಸೂಚನೆ ಪ್ರಕಟಿಸಲು ಮತ್ತು ಈ ಕುರಿತಾಗಿ ದಿನಾಂಕ 16-09-2011ರ ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಡಿಸಲು ಕೋರಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲು ನಿರ್ಧರಿಸಲಾಯಿತು. • ನ್ಯಾಯಾಧೀಕರಣದ ಅಂತಿಮ ತೀರ್ಪು ಕೇಂದ್ರ ಸರ್ಕಾರದ ಗಜೆಟ್ ಅಧಿಸೂಚನೆಗೆ…











