Author: kannadanewsnow09

ದಕ್ಷಿಣ ಕನ್ನಡ: ಕರ್ನಾಟಕದಲ್ಲಿ ಭಾರತ್‌ ಮಾತಾ ಕೀ ಜೈ, ಜೈ ಶ್ರೀರಾಮ್‌ ಎಂದರೆ ತಪ್ಪು. ಕಾಂಗ್ರೆಸ್‌ ಸರ್ಕಾರ ಗೂಂಡಾಗಳ ಕೈಗೆ ರಾಜ್ಯವನ್ನು ಕೊಟ್ಟಿದ್ದು, ಇಂತಹ ಘೋಷಣೆ ಕೂಗಿದರೆ ಚೂರಿ ಹಾಕುತ್ತಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬೊಳಿಯಾರಿನಲ್ಲಿ ಭಾರತ ಮಾತೆಗೆ ಜೈಕಾರ ಕೂಗಿದ್ದಕ್ಕಾಗಿ ಮತಾಂಧರಿಂದ ಹಲ್ಲೆಗೊಳಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿಯ ಗಾಯಾಳು ಕಾರ್ಯಕರ್ತರನ್ನು ಆರ್‌.ಅಶೋಕ ಭೇಟಿ ಮಾಡಿ ಧೈರ್ಯ ಹೇಳಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಘಟನೆಗಳು ನಡೆಯದಂತೆ ಬಿಜೆಪಿ ಎಚ್ಚರ ವಹಿಸಲಿದೆ. ಕಾರ್ಯಕರ್ತರ ಜೊತೆಗೆ ನಾವೆಲ್ಲರೂ ಸದಾ ನಿಲ್ಲುತ್ತೇವೆ. ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ಮಾಡಬೇಕು. ಹಾಗೆಯೇ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ಭಾರತ್‌ ಮಾತಾ ಕೀ ಜೈ ಎಂಬ ಘೋಷಣೆ ಕೂಗಿದ್ದಕ್ಕೆ ಬಿಜೆಪಿ ಕಾರ್ಯಕರ್ತರಾದ ಹರೀಶ್‌ ಮತ್ತು ನಂದಕುಮಾರ್‌ ಅವರಿಗೆ ಚೂರಿ ಇರಿಯಲಾಗಿದೆ. ಈ ತಾಲಿಬಾನ್‌ ಸರ್ಕಾರದಿಂದ ಪಾಕಿಸ್ತಾನಕ್ಕೆ ಜೈಕಾರದ ಘೋಷಣೆ ಕೇಳಿಬರುತ್ತಿದೆ. ಈ…

Read More

ನವದೆಹಲಿ: ಮೋದಿ 3.0 ಸಂಪುಟ ಸೇರಿರುವಂತ ಹೆಚ್.ಡಿ ಕುಮಾರಸ್ವಾಮಿಯವರಿಗೆ ಉಕ್ಕು ಮತ್ತು ಕೈಗಾರಿಕೆ ಸಚಿವರಾಗಿ ಖಾತೆ ಹಂಚಿಕೆ ಮಾಡಲಾಗಿತ್ತು. ನಿನ್ನೆ ಅಧಿಕಾರ ಸ್ವೀಕರಿಸಿ, ಇಂದು ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತ್ರ, ಕರ್ನಾಟಕದ ಬಗ್ಗೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕೇಂದ್ರದ ಉಕ್ಕು ಮತ್ತು ಕೈಗಾರಿಕಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಕಡತಕ್ಕೆ ಸಹಿ ಹಾಕಿದೆ. ಅದು ಕರ್ನಾಟಕಕ್ಕೆ ಸಂಬಂಧಿಸಿದ ಕಡತ ಎನ್ನುವುದು ವಿಶೇಷ ಎಂದು ತಿಳಿಸಿದ್ದಾರೆ. ಮುಂದುವರೆದು ದೇವದಾರಿ ಕಬ್ಬಿಣದ ಅದಿರು ಗಣಿಯ ಕಾರ್ಯಾಚರಣೆಗಾಗಿ ಕೆಐಒಸಿಎಲ್ ಲಿಮಿಟೆಡ್ ನ ಮೊದಲ ಕಡತಕ್ಕೆ ಸಹಿ ಹಾಕಲಾಯಿತು ಎಂಬುದಾಗಿ ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರ ನಾಥ್ ಸಿನ್ಹಾ ಉಪಸ್ಥಿತರಿದ್ದರು ಅಂತ ತಿಳಿಸಿದ್ದಾರೆ. https://twitter.com/hd_kumaraswamy/status/1800888223100776782 https://kannadanewsnow.com/kannada/action-will-be-taken-within-legal-framework-in-actor-darshans-case-minister-laxmi-hebbalkar/ https://kannadanewsnow.com/kannada/bjp-leader-mohan-charan-majhi-takes-oath-as-the-chief-minister-of-odisha/

Read More

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ, ಈಗ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲೂ ಸಂಕಷ್ಟ ಎದುರಾಗಿದೆ. ಅವರು ಕೆ.ಆರ್ ನಗರ ಸಂತ್ರಸ್ತೆ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಎರಡು ಪ್ರಕರಣಗಳಲ್ಲಿ ಎಸ್ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈಗ ಮೂರನೇ ಪ್ರಕರಣದಲ್ಲೂ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಈ ಪ್ರಕರಣದಲ್ಲೂ ಎಸ್ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸೋ ಸಾಧ್ಯತೆ ಇದೆ. ಮತ್ತೊಂದೆಡೆ  ಲೈಂಗಿಕ ಕಿರುಕುಳ‌ ಪ್ರಕರಣದಲ್ಲಿ 42ನೇ ಎಸಿಎಂಎಂ ನ್ಯಾಯಾಲಯವು ಪ್ರಜ್ವಲ್‌ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಇಂದು ಸೈಬರ್ ಅಪರಾಧ ಠಾಣೆ FIR ಸಂಖ್ಯೆ.2/2024 ರಲ್ಲಿ ವಶಕ್ಕೆ ಪಡೆದಿದ್ದ ಎಸ್‌ಐಟಿ ಕೋರ್ಟ್ ಮುಂದೆ ಹಾಜರುಪಡಿಸಿತ್ತು. ಈ ವೇಳೆ ಜನಪ್ರತಿನಿಧಿಗಳ ವಿಶೇಷ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಎರಡು ಅಕಾಡೆಮಿಗಳಿಗೆ, ಒಂದು ಪ್ರಾಧಿಕಾರಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಇದೇ ಸಂದರ್ಭದಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರ ಸ್ಥಾನಕ್ಕೆ ಡಾ.ಕೃಪಾ ಫಡಕೆ, ಮೈಸೂರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯ ಸ್ಥಾನಕ್ಕೆ ವಿಜಯಲಕ್ಷ್ಮಿ ಕೌಟಗಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಮಾಲೂರು ವಿಜಿ ನಾಮನಿರ್ದೇಶನವನ್ನು ರದ್ದುಗೊಳಿಸಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ ಅಧಿಸೂಚನೆ ಹೊರಡಿಸಿದ್ದಾರೆ. 2024ರಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರ ಸ್ಥಾನಕ್ಕೆ ಡಾ.ಕೃಪಾ ಫಡಕೆ, ಮೈಸೂರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯ ಸ್ಥಾನಕ್ಕೆ ವಿಜಯಲಕ್ಷ್ಮಿ ಕೌಟಗಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಮಾಲೂರು ವಿಜಿ ಇವರ ನಾಮ ನಿರ್ದೇಶನಗೊಳಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಿದ್ದಾರೆ. ಇನ್ನೂ ಈ ತಕ್ಷಣದಿಂದ ಜಾರಿಗೆ ಬರುವಂತೆ…

Read More

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆನ್ನಲ್ಲೇ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅಲರ್ಟ್ ಆಗಿದ್ದಾರೆ. ಸಾಗರ ತಾಲೂಕು ಆಡಳಿತದ ಸರಣಿ ಸಭೆ ನಡೆಸಿ, PDO, ಮೆಸ್ಕಾಂ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದರು. ಇಂದು ಸಾಗರ ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಸಾಗರ ತಾಲೂಕಿನ ಪಿಡಿಓ, ಮೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಳೆಗಾಲದಲ್ಲಿ ಸೂಕ್ತ ಕ್ರಮ ವಹಿಸುವಂತೆ ಖಡಕ್ ಸೂಚನೆ ನೀಡಿದರು. ಮಳೆಯಿಂದ ಮನೆ ಹಾಳಾದ್ರೇ 10,000 ತಕ್ಷಣ ಕೊಡಬೇಕು ಮುಂಗಾರು ಮಳೆ ತಾಲೂಕಿನಲ್ಲಿ ಚುರುಕು ಪಡೆದಿದೆ. ಮಳೆಯಿಂದ ಹಲವೆಡೆ ಹಾನಿಗಳು ಘಟಿಸುತ್ತಿದ್ದಾವೆ. ಮಳೆಯಿಂದ ಮನೆ ಬಿದ್ದು ಹೋದರೇ ಕೂಡಲೇ ಅಂತಹ ಕುಟುಂಬಕ್ಕೆ ನೆರವಾಗೋದಕ್ಕಾಗಿ 10,000 ರೂ.ಗಳನ್ನು ಕೊಡಬೇಕು ಎಂಬುದಾಗಿ ಗ್ರಾಮ ಪಂಚಾಯ್ತಿ ಪಿಡಿಓಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚಿಸಿದರು. ಅಲ್ಲದೇ ಕೊಟ್ಟಿಗೆ ಮನೆ ಬಿದ್ದಾಗ ಎನ್ ಆರ್ ಜಿ ಅನುದಾನದ ಅಡಿಯಲ್ಲಿ ಹಣ ನೀಡುವಂತೆ ಸೂಚಿಸಿದರು. ಮಳೆಯಿಂದ ಮನೆ ಹಾಳಾದ ಬಗ್ಗೆ ಪಿಡಿಓ, ವಿಎ ಕೂಡಲೇ ಸ್ಥಳಕ್ಕೆ ತೆರಳಿ…

Read More

ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದವರ ವಿರುದ್ಧ ಬಿಬಿಎಂಪಿ ಸಮರವನ್ನೇ ಸಾರಿದೆ. ಇದೀಗ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದಕ್ಕೆ 12 ಎಫ್ಐಆರ್ ದಾಖಲಿಸಿದೆ. ನಗರದಾದ್ಯಂತ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಈ ಸಂಬಂಧ ಉಪ ಮುಖ್ಯಮಂತ್ರಿಗಳು ಹಾಗೂ ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಕೂಡಾ ನಗರದಲ್ಲಿ ಯಾವುದೇ ಅನಧಿಕೃತ ಜಾಹೀರಾತುಗಳು ಅಳವಡಿಸಿದಂತೆ ಸೂಕ್ತ ಕ್ರಮ ವಹಿಸಲು ಸೂಚನೆ ನೀಡಿರುತ್ತಾರೆ. ಅದರಂತೆ, ದಿನಾಂಕ: 01-06-2024 ರಿಂದ ಇದುವರೆಗೆ 1259 ಫ್ಲೆಕ್ಸ್, ಬ್ಯಾನರ್, ಎಲ್.ಇ.ಡಿ ಹಾಗೂ ಹೋರ್ಡಿಂಗ್ಸ್ ಗಳನ್ನು ತೆರವುಗೊಳಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ 27 ದೂರುಗಳನ್ನು ದಾಖಲಿಸಿದ್ದು, ಅದರಲ್ಲಿ 12 ಎಫ್.ಐ.ಆರ್ ಗಳನ್ನು ದಾಖಲಿಸಲಾಗಿದೆ. ಅನಧಿಕೃತ ಜಾಹೀರಾತುಗಳ ಮಾಹಿತಿ ನೀಡಿ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು-2018″ ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದಿಸೋದಕ್ಕೆ ವಿಶೇಷ ಅಭಿಯೋಜಕರಾಗಿ ಅಶೋಕ್ ಎನ್ ನಾಯಕ್ ನೇಮಕ ಮಾಡಿ ಆದೇಶಿಸಿದೆ. ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್‌ ನೀಡಲಾಗಿದೆ. ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪಗೆ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಆದರೆ ಯಡಿಯೂರಪ್ಪ ದೆಹಲಿ ಇರುವ ಕಾರಣ ಇಂದು ವಿಚಾರಣೆಗೆ ಹಾಜರಾಗಿಲ್ಲ. ಯಡಿಯೂರಪ್ಪನವರ ಬಳಿ ಸಹಾಯ ಕೋರಿ ಹೋಗಿದ್ದಾಗ ತಮ್ಮ ಪುತ್ರಿಯ ಜೊತೆಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಮಾರ್ಚ್ 14ರಂದು ದೂರು ದಾಖಲಿಸಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ನಿವಾಸದಲ್ಲಿ ಈ ಘಟನೆ ನಡೆದಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಳು. ಯಡಿಯೂರಪ್ಪನವರ ವಿರುದ್ಧ ಈ ಮಹಿಳೆ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಳು. ಅದರ ಮರುದಿನ,…

Read More

ನವದೆಹಲಿ: ಖ್ಯಾತ ಫುಟ್ಬಾಲ್ ತರಬೇತುದಾರ ಮತ್ತು ಭಾರತದ ಮಾಜಿ ಆಟಗಾರ ಟಿ.ಕೆ.ಚತುನ್ನಿ ತಮ್ಮ 79 ನೇ ವಯಸ್ಸಿನಲ್ಲಿ ನಿಧನರಾದರು. ಕ್ಯಾನ್ಸರ್ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಬುಧವಾರ ಬೆಳಿಗ್ಗೆ ಕೊಚ್ಚಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 1990ರಲ್ಲಿ ಕೇರಳ ಪೊಲೀಸ್ ತಂಡ ಮೊದಲ ಬಾರಿಗೆ ಫೆಡರೇಷನ್ ಕಪ್ ಜಯಿಸಿತ್ತು. ಅವರು ಭಾರತೀಯ ದಂತಕಥೆ ಐ ಎಂ ವಿಜಯನ್ ಮತ್ತು ಮಾಜಿ ರಾಷ್ಟ್ರೀಯ ಆಟಗಾರ ಜೋ ಪಾಲ್ ಅಂಚೇರಿ ಅವರನ್ನು ತಮ್ಮ ರಚನಾತ್ಮಕ ವರ್ಷಗಳಲ್ಲಿ ಪೋಷಿಸಿದರು. ಮೋಹನ್ ಬಗಾನ್, ಸಾಲ್ಗೋಕರ್ ಎಫ್ ಸಿ, ಡೆಂಪೊ ಎಸ್ ಸಿ, ಚರ್ಚಿಲ್ ಬ್ರದರ್ಸ್ ಮತ್ತು ಎಫ್ ಸಿ ಕೊಚ್ಚಿನ್ ನಂತಹ ಅಗ್ರ ಭಾರತೀಯ ಕ್ಲಬ್ ಗಳನ್ನು ಚತುನ್ನಿ ನಿರ್ವಹಿಸಿದ್ದಾರೆ. ಅವರು ನಾಲ್ಕು ದಶಕಗಳ ನಿರ್ವಹಣಾ ವೃತ್ತಿಜೀವನದಲ್ಲಿ ಚಿರಾಗ್ ಯುನೈಟೆಡ್ ಮತ್ತು ಜೋಸ್ಕೊ ಎಫ್ ಸಿಯ ಉಸ್ತುವಾರಿ ವಹಿಸಿದ್ದರು. ಚಲಕುಡಿ ಮೂಲದ ಚತುನ್ನಿ ಹಿರಿಯರ ಮಟ್ಟದಲ್ಲಿ ಕೇರಳ, ಗೋವಾ, ಸರ್ವಿಸಸ್ ಮತ್ತು ಮಹಾರಾಷ್ಟ್ರ ಪರ ಆಡಿದ್ದಾರೆ. ಅವರು ಇಎಂಇ (ಸಿಕಂದರಾಬಾದ್),…

Read More

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ. ಬುಧವಾರ ಕರ್ನಾಟಕ ಖಾಸಗಿ ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ ವತಿಯಿಂದ ಡಾ.ಬಿಆರ್‌.ಅಂಬೇಡ್ಕರ್‌ ಭವನದಲ್ಲಿ ಹಮಿಕೊಂಡಿದ್ದ ವಿಶ್ವ ಹೋಮಿಯೋಪತಿ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಹಾವಳಿ ವ್ಯಾಪಕವಾಗಿ ಕೇಳಿಬರುತ್ತಿದೆ. ಯಾವುದೇ ವೈದ್ಯಕೀಯ ಕೋರ್ಸ್‌ ಮುಗಿಸದೆ ಇರುವವರು ಎಲ್ಲೆಂದರಲ್ಲಿ ಕ್ಲಿನಿಕ್‌ಗಳನ್ನು ತೆರೆದು ಚಿಕಿತ್ಸೆ ನೀಡುತ್ತಾರೆ. ಇದರ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ದೂರುಗಳು ಬಂದಿವೆ ಎಂದು ಹೇಳಿದರು. ಗ್ರಾಮೀಣ ಭಾಗದ ಜನರ ಅಮಾಯಕತೆಯನ್ನು ಕೆಲವರು ದುರುಪಯೋಗಪಡಿಸಿಕೊಂಡು ನಕಲಿ ಚಿಕಿತ್ಸೆ ನೀಡುತ್ತಾರೆ. ಇದು ಕಾನೂನು ಬಾಹಿರ ಎಂದು ಗೊತ್ತಿದ್ದರೂ ಕೆಲವರು ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಮುಂದೆ ಇದಕ್ಕೆ ಶಾಶ್ವತವಾದ ಕಡಿವಾಣ ಬೀಳಲಿದೆ ಎಂದರು. ಕೇವಲ ಸರ್ಕಾರದಿಂದ…

Read More

ಬೆಂಗಳೂರು :ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಕೈಗೊಂಡಿರುವ ವಸತಿ ಯೋಜನೆಗಳು ತ್ವರಿತ ಗತಿಯಲ್ಲಿ ಪೂರ್ಣ ಗೊಳಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನಗರ ಅವಾಸ್ ಯೋಜನೆ ಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿ ಕೊಡುವ ಕಾಮಗಾರಿ ಗೆ ವೇಗ ನೀಡಬೇಕು ಎಂದು ನಿರ್ದೇಶನ ನೀಡಿದರು. ರಾಜ್ಯದಲ್ಲಿ ಈ ಯೋಜನೆಯಡಿ ಚಾಲ್ತಿಯಲ್ಲಿರುವ 52 ಸಾವಿರ ಮನೆಗಳ ಪೈಕಿ 11400 ಮನೆ ಆದಷ್ಟು ಶೀಘ್ರ ಹಂಚಿಕೆ ಮಾಡಬೇಕಿದ್ದು, ವಸತಿ ಸಮುಚ್ಚಯ ಹಾಗೂ ಮೂಲ ಸೌಕರ್ಯ ಕಾಮಗಾರಿ ಕಾಲ ಮಿತಿಯಲ್ಲಿ ಪೂರ್ಣ ಗೊಳಿಸಿ ಎಂದು ಹೇಳಿದರು. ಬಸವ, ಅಂಬೇಡ್ಕರ್, ದೇವರಾಜ ಅರಸು, ವಾಜಪೇಯಿ ನಗರ ಹಾಗೂ ಪ್ರಧಾನ ಮಂತ್ರಿ ಅವಾಸ್ ಗ್ರಾಮೀಣ ಮನೆಗಳ ವಿಚಾರದಲ್ಲಿ ಫಲಾನುಭ ವಿಗಳ ಆಯ್ಕೆ ವಿಳಂಬದ ಬಗ್ಗೆ ದೂರುಗಳಿದ್ದು, ಶಾಸಕರ ಜತೆ ಪತ್ರ ವ್ಯವಹಾರ ನಡೆಸಿ ಸಮಸ್ಯೆ ಬಗೆಹರಿಸಿ ಕೊಳ್ಳಿ.…

Read More