Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಚಾಮರಾಜಪೇಟೆ ಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು. ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅಮುದಾ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆ ಎಂದು ಹೇಳಿದರು. ಈ ಮೂಲಕ ನುಡಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ನಡೆದಿದ್ದಾರೆ. ಆ ಮೂಲಕ ಸಂತ್ರಸ್ತರಿಗೆ ಮೂರು ಹಸುವನ್ನು ಕೊಡಿಸುವ ಮೂಲಕ ಮಾನವೀಯತೆಯನ್ನು ಮರೆದಿದ್ದಾರೆ. https://kannadanewsnow.com/kannada/big-relief-for-pooja-khedkar-in-upsc-fraud-case-sc-orders-no-coercive-action/ https://kannadanewsnow.com/kannada/breaking-sc-stays-arrest-of-former-ias-officer-pooja-khedkar-puja-khedkar/
ನವದೆಹಲಿ: ನಾಗರಿಕ ಸೇವಾ ಪರೀಕ್ಷೆಯಲ್ಲಿ ಒಬಿಸಿ ಮತ್ತು ಅಂಗವೈಕಲ್ಯ ಕೋಟಾ ಪ್ರಯೋಜನಗಳನ್ನು ವಂಚಿಸಿದ ಮತ್ತು ತಪ್ಪಾಗಿ ಪಡೆದ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೇಷನರಿ ಪೂಜಾ ಖೇಡ್ಕರ್ ಅವರನ್ನು ಫೆಬ್ರವರಿ 14 ರವರೆಗೆ ಬಂಧನದಿಂದ ಸುಪ್ರೀಂ ಕೋರ್ಟ್ ಬುಧವಾರ (ಜನವರಿ 15) ರಕ್ಷಿಸಿದೆ. ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ನಿರೀಕ್ಷಣಾ ಜಾಮೀನು ಕೋರಿ ಖೇಡ್ಕರ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರ ನ್ಯಾಯಪೀಠವು ದೆಹಲಿ ಸರ್ಕಾರ ಮತ್ತು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಗೆ ನೋಟಿಸ್ ನೀಡಿದೆ. ಈ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 14ಕ್ಕೆ (ಶುಕ್ರವಾರ) ಮುಂದೂಡಲಾಗಿದೆ. ಬಂಧನಪೂರ್ವ ಜಾಮೀನು ಕೋರಿ ಸುಪ್ರೀಂ ಮೆಟ್ಟಿಲೇರಿದ ಪೂಜಾ ಖೇಡ್ಕರ್ ಹೊಸದಿಲ್ಲಿ, ಜ.14: ನಾಗರಿಕ ಸೇವಾ ಪರೀಕ್ಷೆಯಲ್ಲಿ ಒಬಿಸಿ ಮತ್ತು ಅಂಗವೈಕಲ್ಯ ಕೋಟಾ ಪ್ರಯೋಜನಗಳನ್ನು ತಪ್ಪಾಗಿ ಪಡೆದ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೇಷನರಿ ಪೂಜಾ ಖೇಡ್ಕರ್ ಅವರು ನಿರೀಕ್ಷಣಾ ಜಾಮೀನಿಗಾಗಿ…
ನವದೆಹಲಿ: ನಾಳೆ ನಡೆಯುತ್ತಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಮಂಡಿಸುತ್ತಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಾಳಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆಯಾಗಲಿದೆ ಎಂಬುದಾಗಿಯೇ ಹೇಳಲಾಗುತ್ತಿತ್ತು. ಅಲ್ಲದೇ ಸಿಎಂ ಸಿದ್ಧರಾಮಯ್ಯ ಕೂಡ ನಾಳಿನ ಸಂಪುಟ ಸಭೆಯಲ್ಲಿ ಮಂಡಿಸುವುದಾಗಿಯೂ ತಿಳಿಸಿದ್ದರು. ಆದರೇ ಇಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸುತ್ತಿಲ್ಲ. ಮುಂದಿನ ವಾರ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ನಡೆಯಲಿದೆ ಎಂದರು. ಜಾತಿ ಗಣತಿ ವರದಿಯಲ್ಲಿ ಏನಿದೆ ಅಂತ ನನಗೆ ಗೊತ್ತಿಲ್ಲ. ಇದುವರೆಗೂ ವರದಿ ಓಪನ್ ಕೂಡ ಮಾಡಿಲ್ಲ ಎಂಬುದಾಗಿ ತಿಳಿಸಿದರು. https://kannadanewsnow.com/kannada/big-news-kpsc-group-b-recruitment-exam-to-be-held-on-january-19-25-this-rule-is-mandatory-for-the-candidates/ https://kannadanewsnow.com/kannada/breaking-sc-stays-arrest-of-former-ias-officer-pooja-khedkar-puja-khedkar/
ಬೆಂಗಳೂರು: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಎನ್ನುವ ವಾಟ್ಸ್ಆಪ್ ಮೆಸೇಜ್ಗಳು ಸುಳ್ಳಾಗಿದ್ದು, ಸಾರ್ವಜನಿಕರು ಈ ರೀತಿಯ ಪ್ರಕಟಣೆಗಳನ್ನು ನಂಬಿ ಮೋಸಹೋಗದಂತೆ ಎಚ್ಚರವಹಿಸುವಂತೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ತಗೆದುಕೊಂಡ ನಿರ್ಣಯದ ಹಿನ್ನಲೆಯಲ್ಲಿ ಸಣ್ಣ ನೀರಾವರಿ ಇಲಾಖೆಗೆ ಪ್ರತ್ಯೇಕವಾಗಿ ಸರ್ಕಾರದ ಅಧಿಸೂಚನೆ ಮೂಲಕ ಕರಡು “ಕರ್ನಾಟಕ ಸಣ್ಣ ನೀರಾವರಿ ಇಲಾಖೆ ಸೇವೆಗಳ (ವೃಂದ ಮತ್ತು ನೇಮಕಾತಿ) ನಿಯಮಗಳು 2025” ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಈ ನಿಯಮಾವಳಿಗಳಲ್ಲಿ ಇಲಾಖೆಗೆ ಅಗತ್ಯವಿರುವ ಸಿಬ್ಬಂದಿಗಳ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ ಎಂದಿದೆ. ಈ ಕರಡು ನಿಯಮಾವಳಿಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸ್ವೀಕರಿಸುವ ಉದ್ದೇಶದಿಂದ 15 ದಿನಗಳ ಕಾಲ ಕಾಲಾವಕಾಶ ನೀಡಲಾಗಿರುತ್ತದೆ. ಆದರೆ, ಇದೇ ಅಧಿಸೂಚನೆಯನ್ನು ಮುಂದಿಟ್ಟುಕೊಂಡು ನೇಮಕಾತಿ ಪ್ರಕ್ರಿಯೆ ಎನ್ನುವಂತೆ ಬಿಂಬಿಸಲಾಗುತ್ತಿರುವ ಹಲವಾರು ಮೇಸೇಜ್ಗಳು ಹರಿದಾಡುತ್ತಿವೆ. ಈ ಮೆಸೇಜ್ಗಳು ಸುಳ್ಳಾಗಿದ್ದು ಯಾವುದೇ ನೇಮಕಾತಿಯನ್ನು ನಡೆಸಲು ಅರ್ಜಿಯನ್ನು ಆಹ್ವಾನಿಸಲಾಗಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಸಾರ್ವಜನಿಕರು…
ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿಗಳ ನೋಂದಣಿಗೆ ಕಂದಾಯ ಇಲಾಖೆಯು ಇ-ಸ್ವತ್ತು ಕಡ್ಡಾಯಗೊಳಿಸಿರುವುದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಸುಮಾರು 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು ವಿತರಣೆ ಮಾಡಿ, ಆಸ್ತಿ ತೆರಿಗೆ ಸಂಗ್ರಹ ಅಭಿಯಾನವನ್ನು ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂಚಾಯತ್ ರಾಜ್) ಉಮಾ ಮಹದೇವನ್ ಹಾಗೂ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿ ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಾಣಕ್ಕೆ ಅವಕಾಶ ನೀಡದಿರಲು ಸೂಚಿಸಿದರಲ್ಲದೆ, ಹೊಸ ಬಡಾವಣೆಗಳ ನಿರ್ಮಾಣವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದೂ ಹೇಳಿದರು. ಖಾತಾ ಇಲ್ಲದ ಬಹಳಷ್ಟು ಆಸ್ತಿಗಳ ಸಂಬಂಧ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನ ಹಾಗೂ ಮನೆಗಳನ್ನು ನೋಂದಣಿ ಮಾಡುವ ಬಗ್ಗೆ ವರದಿಗಳು ಬರುತ್ತಿದ್ದು, ಇಂತಹ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು ಎಂದೂ ಸಚಿವರು ತಮ್ಮ ತಿಳಿಸಿದರು. ಸ್ಥಳೀಯ ಸಂಸ್ಥೆಗಳಾದ ಗ್ರಾಮ…
ಬೆಂಗಳೂರು : ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನೂ ಮುಂದಿನ ಆರು ತಿಂಗಳೊಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಅಧಿಕಾರಿಗಳಿಗೆ ಸಮಯದ ಗಡುವನ್ನು ನಿಗದಿಗೊಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆಗೆ ಏಕ ಕಾಲದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಎಸಿ ನ್ಯಾಯಾಲಯಗಳಲ್ಲಿ ಯಾವ ಪ್ರಕರಣಗಳನ್ನೂ ಆರು ತಿಂಗಳ ಅವಧಿಗಿಂತ ಹೆಚ್ಚಿನ ಕಾಲ ಇಟ್ಟುಕೊಳ್ಳುವಂತಿಲ್ಲ ಎಂಬ ಕಾನೂನಿದೆ. ಆದರೆ, ಕಳೆದ ವರ್ಷ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿದ ವೇಳೆ ಎಸಿ ನ್ಯಾಯಾಲಯಗಳಲ್ಲಿ ಅವಧಿ ಮೀರಿದ 60 ಸಾವಿರಕ್ಕೂ ಅಧಿಕ ಪ್ರಕರಣಗಳಿದ್ದವು. ಈ ಎಲ್ಲಾ ಪ್ರಕರಣಗಳನ್ನೂ ಮುಂದಿನ ಒಂದು ವರ್ಷದಲ್ಲಿ ಇತ್ಯರ್ಥಗೊಳಿಸಿ, ಸರ್ಕಾರಿ ಕಚೇರಿಗಳಿಗೆ ಜನರ ಅನಗತ್ಯ ಅಲೆದಾಟಕ್ಕೆ ಬ್ರೇಕ್ ಹಾಕಬೇಕು ಎಂಬುದು ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಉದ್ದೇಶವಾಗಿತ್ತು” ಎಂದು ನೆನೆದರು. ಆದರೆ, “ಒಂದೂವರೆ ವರ್ಷ ಕಳೆದರೂ ನಮ್ಮ…
ಉತ್ತರ ಕನ್ನಡ: ಜಿಲ್ಲೆಯಲ್ಲಿ ಸಂಕ್ರಾಂತಿಯ ದಿನವಾದಂತ ಇಂದು ಭೀಕರ ದುರ್ಘಟನೆ ಸಂಭವಿಸಿದೆ. ಜಾತ್ರೆಯ ವೇಳೆಯಲ್ಲಿ ಜನರ ಮೇಲೆಯೇ ಕಾರು ನುಗ್ಗಿಸಲಾಗಿದ್ದು, ಓರ್ವ ಯುವತಿ ಸಾವನ್ನಪ್ಪಿ 6 ಭಕ್ತರು ಗಾಯಗೊಂಡಿರುವಂತ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿನ ಅಯ್ಯಪ್ಪ ದೇವಸ್ಥಾನದ ಬಳಿಯಲ್ಲಿ ಭೀಕರ ದುರಂತ ಸಂಭವಿಸಿದೆ. ಜಾತ್ರೆಗಾಗಿ ನೆರಿದಿದ್ದಂತ ಜನರ ಮೇಲೆಯೇ ರೋಷನ್ ಎಂಬಾತ ಕಾರು ನುಗ್ಗಿಸಿದ್ದಾನೆ. ಈ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಂತ ಯುವತಿಯೊಬ್ಬಳು ಚಿಕಿತ್ಸೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಪೊಲೀಸರು ಹಾಕಿದ್ದಂತ ಬ್ಯಾರಿಕೇಡ್ ಗೆ ಗುದ್ದಿದಂತ ಕಾರು ಚಾಲಕ ರೋಷನ್, ಜಾತ್ರೆಗೆ ಸೇರಿದ್ದಂತ ಅಯ್ಯಪ್ಪ ಸ್ವಾಮಿ ಭಕ್ತರ ಮೇಲೆಯೇ ಹರಿಸಿದ್ದಾನೆ. ಇದರಿಂದಾಗಿ 6 ಭಕ್ತರಿಗೆ ಗಾಯವಾಗಿದೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. https://kannadanewsnow.com/kannada/education-and-organisation-can-help-the-community-uplift-minister-shivaraj-thangadagi/ https://kannadanewsnow.com/kannada/fir-lodged-against-bjp-district-yuva-morcha-general-secretary-arun-kugve-in-shivamogga/
ಶಿವಮೊಗ್ಗ: ಪ್ರಚೋದನಕಾರಿ ಭಾಷಣೆ ಮಾಡಿದ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ವಿರುದ್ಧ ಸಾಗರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಿನ್ನೆ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿಯ ಮುಂದೆ ಚಾಮರಾಜಪೇಟೆಯಲ್ಲಿ ನಡೆದಿದ್ದಂತ ಹುಸುವಿನ ಕೆಚ್ಚಲು ಕೊಯ್ದಂತ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಹಾಗೂ ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ತಾಲ್ಲೂಕು ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ ಉಪವಿಭಾಗಾಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಸಾಗರ ತಾಲ್ಲೂಕು ಬಿಜೆಪಿ ಘಟಕದಿಂದ ಮನವಿ ಮಾಡಲಾಗಿತ್ತು. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಂತ ಶಿವಮೊಗ್ಗ ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಅವರು, ಒಂದು ಸಮುದಾಯವನ್ನು ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. https://youtu.be/-xQ7c4qOgtA?si=hUowDyBEcL89xV1h ಈ ಹಿನ್ನಲೆಯಲ್ಲಿ ಇಂದು ಮುಸ್ಲೀಂ ಮುಖಂಡ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಅಜೀಂ ಎಂಬುವರು ಸಾಗರ ನಗರ ಠಾಣೆಗೆ ತೆರಳಿ, ಅರುಣ್ ಕುಗ್ವೆ ವಿರುದ್ಧ…
ಬೆಂಗಳೂರು: ಶಿಕ್ಷಣ, ಸಂಘಟನೆಯಿಂದ ಸಮುದಾಯಗಳ ಏಳ್ಗೆ ಸಾಧ್ಯ. ಬೋವಿ ಸಮುದಾಯದಲ್ಲಿ ಹೋರಾಟದ ಶಕ್ತಿ ಇದ್ದು, ಎಲ್ಲರೂ ಒಗ್ಗಟ್ಟಾಗಿ ಸಮಾಜದ ಏಳ್ಗೆಗೆ ಹೋರಾಟ ನಡೆಸುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ಸಂಜೆ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯಲ್ಲಿ ಸಾಣೆಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರಿಗೆ ‘ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ’ ಪ್ರಶಸ್ತಿ ಪ್ರಧಾನ ಮಾಡಿ ಅವರು ಮಾತನಾಡಿದರು. ಸಮಾಜದ ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು, ಸಂಘಟಿತರಾಗಬೇಕು. ಈ ಮೂಲಕ ಸಂಘಟಿತ ಹೋರಾಟ ಮಾಡಬೇಕು. ಸಮಾಜದ ಸಂಘಟನೆಯ ಜವಾಬ್ದಾರಿ ಇದ್ದರೆ, ನಮ್ಮ ಕಡೆ ಎಲ್ಲರೂ ತಿರುಗಿ ನೋಡುತ್ತಾರೆ. ಸಮಾಜದ ಸಂಘಟನೆ ಅಗತ್ಯವಿದೆ ಎಂದು ಕಿವಿಮಾತು ಹೇಳಿದರು. ಹಿಂದಿನ ಸರ್ಕಾರದಲ್ಲಿ ನಮ್ಮ ಸಮುದಾಯಕ್ಕೆ ಯಾವುದೇ ಪ್ರಾತಿನಿಧ್ಯ ದೊರಕಿರಲಿಲ್ಲ. ಈ ಹಿಂದೆ ಸಿದ್ದರಾಮಯ್ಯ ಅವರಿಗೆ ಮೂರು ಬೇಡಿಕೆಗಳನ್ನು ಇಟ್ಟಿದ್ದೆವು. ಅದರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಬೋವಿ…
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ತುಮಕೂರಿನಲ್ಲಿ ಜನವರಿ 18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರ ಇಂತಿದೆ. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ) ಚಂದ್ರಶೇಖರ ಮುಕ್ಕುಂದಿ, ವಿಜಯ ಕರ್ನಾಟಕ, ಗಂಗಾವತಿ ದಿಗಂಬರ ಮುರುಳೀಧರ ಪೂಜಾರ್, ಸಂಯುಕ್ತ ಕರ್ನಾಟಕ, ಗದಗ ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿಗೆ) ಪ್ರಸನ್ನ ಮನೋಹರ ಕುಲಕರ್ಣಿ, ಡೆಕ್ಕನ್ ಹೆರಾಲ್ಡ್, ಖಾನಾಪುರ. ರವಿರಾಜ್ ಆರ್ ಗಲಗಲಿ, ವಿಜಯ ಕರ್ನಾಟಕ, ಬಾಗಲಕೋಟೆ ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿಗೆ) ಮಂಜುನಾಥ್.ಕೆ., ವಿಜಯವಾಣಿ, ಬೆಂಗಳೂರು ಶಕೀಲ ಚೌದರಿ, ಅ್ಜಲಪುರ, ಕಲಬುರಗಿ ಬಿ. ಎಸ್. ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿಗೆ) ಕೆ.ಓಂಕಾರಮೂರ್ತಿ, ಪ್ರಜಾವಾಣಿ, ಕೋಲಾರ ಸಿದ್ದು ಆರ್ ಜಿ ಹಳ್ಳಿ, ಪ್ರಜಾವಾಣಿ, ಮಂಡ್ಯ ಕೆ. ಎ.…













