Author: kannadanewsnow09

ಬೆಂಗಳೂರು: ಬಾಬ್ರಿ ಮಸೀದಿಯಂತೆ ಚಿನ್ನದಪಲ್ಲಿ ಮಸೀದಿ ನಿರ್ನಾಮ ಆಗೋದು ಗ್ಯಾರಂಟಿ. ಇದು ಬೆದರಿಕೆ ಬೇಕಾದ್ರೂ ಅಂತ ಅಂದುಕೊಂಡ್ರೂ ಪರವಾಗಿಲ್ಲ ಅಂತ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಭಟ್ಕಳದಲ್ಲಿ ಇರುವಂತ ಚಿನ್ನದಪಲ್ಲಿ ಮಸೀದಿ ಕೂಡ ಬಾಬ್ರಿ ಮಸೀದಿಯಂತೆ ನಿರ್ನಾಮವಾಗಲಿದೆ. ಅದರಲ್ಲಿ ಎರಡು ಮಾತಿಲ್ಲ. ಇದನ್ನ ಬೇಕಾದ್ರೆ ಬೆದರಿಕೆ ಅಂತ ಬೇಕಾದ್ರೂ ತಿಳಿಯಿರಿ ಎಂಬುದಾಗಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೊಸ ಬಾಂಬ್ ಸಿಡಿಸಿದ್ದಾರೆ. ಅಂದಹಾಗೇ ಭಟ್ಕಳದ ಚಿನ್ನಪಲ್ಲಿಯಲ್ಲಿರುವಂತ ಮಸೀದಿಯ ಗೋಪುರ ಚಿನ್ನದ ಲೇಪಿತದಂತೆ ಇದೆ. ಇದು ಹಿಂದೂ ದೇವಾಲಯದ ಮಾದರಿಯಲ್ಲಿ ಇದೆ ಎನ್ನಲಾಗುತ್ತಿದೆ. ಇಂತಹ ಮಸೀದಿ ಕೂಡ ಬಾಬ್ರಿ ಮಸೀದಿ ಥರ ನಿರ್ನಾಮ ಆಗಲಿದೆ ಅಂತ ಈಗ ಸಂಸದ ಅನಂತ್ ಕುಮಾರ್ ಹೆಗ್ಡೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/lok-sabha-elections-2019-it-would-be-good-if-yathindra-siddaramaiah-is-my-opponent-says-pratap-simha/ https://kannadanewsnow.com/kannada/congress-leader-mallikarjun-kharge-appointed-india-bloc-chief/

Read More

ಬೆಂಗಳೂರು: ಹಾವೇರಿ ಸೇರಿ ವಿವಿಧ ಜಿಲ್ಲೆಗಳ ಪೊಲೀಸರಿಂದ ಸ್ಥಳೀಯ ಅತ್ಯಾಚಾರ ಸಂತ್ರಸ್ತರಿಗೆ ನ್ಯಾಯ ಸಿಗಲು ಅಸಾಧ್ಯ. ಆದ್ದರಿಂದ, ವಿವಿಧ ಜಿಲ್ಲೆಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ (ಗ್ಯಾಂಗ್ ರೇಪ್) ತನಿಖೆಗೆ ಉನ್ನತ ಮಟ್ಟದ ವಿಶೇಷ ತನಿಖಾ ತಂಡ (ಎಸ್‍ಐಟಿ) ರಚಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ಮಾಡಿಸಿ; ನಿಗದಿತ ಕಾಲಾವಧಿಯಲ್ಲಿ ತನಿಖೆ ಮಾಡಿ ಚಾರ್ಜ್ ಶೀಟ್ ಹಾಕಿ ಉಗ್ರವಾದ ಶಿಕ್ಷೆ ಆಗುವಂತೆ ನೋಡಿಕೊಳ್ಳಿ ಎಂದು ಒತ್ತಾಯಿಸಿದರು. 3 ಜನರ ಬಂಧನವಷ್ಟೇ ಆಗಿದೆ. ಎಲ್ಲರನ್ನೂ ಬಂಧಿಸಿಲ್ಲವೇಕೆ ಎಂದು ಕೇಳಿದರು. ನಾಳೆ ನಮ್ಮ ಮಹಿಳಾ ನಿಯೋಗ ಹಾವೇರಿಗೆ ಭೇಟಿ ಕೊಡಲಿದೆ. ಸೂಕ್ತ ನಿರ್ದೇಶನ ಕೋರಿ ನ್ಯಾಯಾಂಗದ ಮೊರೆ ಹೋಗಲಿದ್ದೇವೆ ಎಂದು ಪ್ರಕಟಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಾಮಾನ್ಯ ಜನರು ಅದರಲ್ಲೂ ಹೆಣ್ಮಕ್ಕಳು ನಿರ್ಭೀತಿಯಿಂದ ಓಡಾಡಲು…

Read More

ಬೆಂಗಳೂರು: ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು ರೂ 2 ಕೋಟಿ ಬೆಲೆಯ ಮಾಲು ಪತ್ತೆಯಾಗಿದೆ. ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ಮಾಲಕಪೇಟೆ ಪೊಲೀಸರಿಗೆ ದೂರು ನೀಡಿದ್ದು ತನಿಖೆ ನಡೆದಿದೆ. ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಕೆ ಎಸ್ ಡಿ ಎಲ್ ಅಧ್ಯಕ್ಷರೂ ಆದ ಸಚಿವ ಎಂ.ಬಿ ಪಾಟೀಲ ಅವರಿಗೆ‌ ಅನಾಮಧೇಯ ಕರೆ ಬಂದಿತ್ತು. ಬಳಿಕೆ ಸಚಿವರು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಅವರಿಗೆ ನಿಗಾ ವಹಿಸಲು ಸೂಚಿಸಿದ್ದರು. ಅದರಂತೆ, ಸಿಕಂದರಾಬಾದಿನಲ್ಲಿರುವ ಸಂಸ್ಥೆಯ ಅಧಿಕೃತ ಮಾರಾಟ ಕಚೇರಿಯ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಜಾಡು ಹಿಡಿದು ಕಾರ್ಯಪ್ರವೃತ್ತರಾಗಿದ್ದರು. ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ…

Read More

ನವದೆಹಲಿ: ಖ್ಯಾತ ಶಾಸ್ತ್ರೀಯ ಗಾಯಕಿ ಮತ್ತು ಪದ್ಮ ವಿಭೂಷಣ ಪುರಸ್ಕೃತ ಡಾ.ಪ್ರಭಾ ಅತ್ರೆ ಅವರು ಜನವರಿ 13 ರಂದು ಪುಣೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಕಿರಾಣಾ ಘರಾನಾದ ಜ್ಯೋತಿಯನ್ನು ಹೊತ್ತ ಅತ್ರೆ ಅವರಿಗೆ ಭಾರತ ಸರ್ಕಾರವು ಎಲ್ಲಾ ಮೂರು ಪದ್ಮ ಪ್ರಶಸ್ತಿಗಳನ್ನು ನೀಡಿ ಗೌರವಿಸಿತ್ತು. ಅತ್ರೆ ತನ್ನ ನಿವಾಸದಲ್ಲಿ ನಿದ್ರೆಯಲ್ಲಿದ್ದಾಗ ಹೃದಯ ಸ್ತಂಭನಕ್ಕೆ ಒಳಗಾದರು. ಅವರನ್ನು ದೀನನಾಥ್ ಮಂಗೇಶ್ಕರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಬೆಳಿಗ್ಗೆ 5: 30ಕ್ಕೆ ನಿಧನರಾದರು ಎಂದು ಘೋಷಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಅತ್ರೆ ಅವರ ಕೆಲವು ಆಪ್ತ ಕುಟುಂಬ ಸದಸ್ಯರು ವಿದೇಶದಲ್ಲಿ ವಾಸಿಸುತ್ತಿರುವುದರಿಂದ, ಅವರು ಬಂದ ನಂತರ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ. ‘ಸ್ವರಪ್ರಭಾ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಜನವರಿ 13ರ ಇಂದು ಮುಂಬೈಗೆ ತೆರಳಬೇಕಿತ್ತು. ಸೆಪ್ಟೆಂಬರ್ 13, 1932 ರಂದು ಜನಿಸಿದ ಅತ್ರೆ ಅವರು ಬಹುಮುಖಿ ವ್ಯಕ್ತಿತ್ವಕ್ಕೆ ಹೆಸರುವಾಸಿಯಾಗಿದ್ದರು.…

Read More

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ( Bihar Chief Minister Nitish Kumar ) ಅವರು ಈ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಕಾಂಗ್ರೆಸ್ ಹಾಲಿ ಮಲ್ಲಿಕಾರ್ಜುನ ಖರ್ಗೆ ( Congress present Mallikarjun Kharge ) ಅವರನ್ನು ಶನಿವಾರ ಐಎನ್ಡಿಐಎ ಬ್ಲಾಕ್ ಮುಖ್ಯಸ್ಥರನ್ನಾಗಿ ( I.N.D.I.A bloc chief ) ನೇಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. https://twitter.com/ANI/status/1746086212258152826 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಮತ್ತು ಸೋಲಿಸಲು 28 ವಿರೋಧ ಪಕ್ಷಗಳು ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (ಇಂಡಿಯಾ) ಬ್ಯಾನರ್ ಅಡಿಯಲ್ಲಿ ಒಗ್ಗೂಡಿವೆ. ಆದಾಗ್ಯೂ, ಸಂಚಾಲಕರನ್ನು ನೇಮಿಸುವುದು ಸೇರಿದಂತೆ ಮೈತ್ರಿಯೊಳಗೆ ಇನ್ನೂ ಪರಿಹರಿಸಬೇಕಾದ ಅನೇಕ ಸಮಸ್ಯೆಗಳಿವೆ. ಪಶ್ಚಿಮ ಬಂಗಾಳ ಮತ್ತು ಪಂಜಾಬ್ನಲ್ಲಿ ಎಎಪಿ ರಾಜ್ಯದ ಎಲ್ಲಾ 13 ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಭಗವಂತ್ ಮಾನ್ ಇತ್ತೀಚೆಗೆ ಹೇಳಿಕೊಂಡಿದ್ದರಿಂದ ವಿರೋಧ ಬಣದ ಸದಸ್ಯರೊಂದಿಗಿನ ಸೀಟು ಹಂಚಿಕೆ ಮಾತುಕತೆಗಳು ಇಲ್ಲಿಯವರೆಗೆ ಫಲಪ್ರದವಾಗಿಲ್ಲ. ಸಭೆಯಲ್ಲಿ ಉಪಸ್ಥಿತರಿಲ್ಲದ ಸಮಾಜವಾದಿ ಪಕ್ಷದ ಮುಖ್ಯಸ್ಥ…

Read More

ನವದೆಹಲಿ: ಇಂದು ನಡೆದಂತ ಇಂಡಿಯಾ ಮೈತ್ರಿಕೂಟದ ವರ್ಚುಯಲ್ ಸಭೆಯಲ್ಲಿ, ಇಂಡಿಯಾ ಬ್ಲಾಕ್ ಅಧ್ಯಕ್ಷರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ( Congress president Mallikarjun Kharge ) ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ( Bihar chief minister Nitish Kumar ) ಅವರಿಗೆ ಪ್ರಮುಖ ಸಂಚಾಲಕ ಹುದ್ದೆ ಸಿಕ್ಕಿದೆ. ಶನಿವಾರ ನಡೆದ ಭಾರತದ ಉನ್ನತ ನಾಯಕರ ( INDIA leaders ) ವರ್ಚುವಲ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದ್ರೇ ಜೆಡಿಯು ಮುಖ್ಯಸ್ಥ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತ್ರ ಇಂಡಿಯಾ ಮೈತ್ರಿಕೂಟದಿಂದ ನೀಡಲಾಗಿದ್ದಂತ ಜವಾಬ್ದಾರಿಯನ್ನು ತಿರಸ್ಕರಿಸಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. https://twitter.com/ANI/status/1746086212258152826 ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂಡಿಯಾ ಬ್ಲಾಕ್ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ. 28 ವಿರೋಧ ಪಕ್ಷಗಳ ಭಾರತ ಮೈತ್ರಿಕೂಟವು ಶನಿವಾರ ವರ್ಚುವಲ್ ಸಭೆಯಲ್ಲಿ ಚರ್ಚೆ ನಡೆಸಿದ ನಂತರ ಈ ಬೆಳವಣಿಗೆ ನಡೆದಿದೆ.…

Read More

ಶಿವಮೊಗ್ಗ: ಜಿಲ್ಲೆಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಡಾ.ಜಿ.ಕೆ ಪ್ರೇಮಾ ಅವರಿಗೆ ಡೆಕ್ಕನ್ ಹೆರಾಲ್ಡ್ ಪತ್ರಿಕೆಯಿಂದ ಪ್ರತಿ ವರ್ಷ ಕೊಡುವಂತ ಡಿಹೆಚ್ ಚಾಲೆಂಜರ್ಸ್-2024ರ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಶಿವಮೊಗ್ಗ ನಗರದಲ್ಲಿರುವಂತ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಡಾ.ಜಿ ಕೆ ಪ್ರೇಮಾ, ಕಾಡುಗೊಲ್ಲ ಸಮುದಾಯದ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿದವರು. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿತ್ತಯ್ಯನಹಟ್ಟಿಯಲ್ಲಿ ಕಲ್ಲಪ್ಪ.ಜಿ ಹಾಗೂ ಯಶೋಧಮ್ಮ ದಂಪತಿಯ ಮೊದಲ ಪುತ್ರಿಯಾಗಿ ಜನಿಸಿದಂತ ಇವರ ಸಾಧನೆ ಎಲೆಯ ಮರೆಯ ಕಾಯಿಯಂತೆ. ಕಾಡುಗೊಲ್ಲ ಸಮುದಾಯದಲ್ಲಿನ ಮುಟ್ಟು, ಹೆರಿಗೆಯಾದ ನಂತ್ರ ಬಾಣಂತಿಯರನ್ನು ಹಟ್ಟಿಯಿಂದ ಹೊರಗಿಡೋದೋ ಸೇರಿದಂತೆ ವಿವಿಧ ಸಂಪ್ರದಾಯಗಳನ್ನು ತ್ಯಜಿಸಿ, ಸ್ವಚ್ಛತೆಯ ಕಡೆಗೆ ಗಮನಕೊಟ್ಟು, ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ. ಕಾಡುಗೊಲ್ಲ ಮಹಿಳೆಯರ ಬಗ್ಗೆ ಇವರ ಮಹಾ ಪ್ರಬಂಧಕ್ಕೆ ಕುವೆಂಪು ವಿವಿಯಿಂದ ಡಾಕ್ಟರೇಟ್ ಪದವಿಯನ್ನು ನೀಡಲಾಗಿದೆ. ಇಂತಹ ಎಲೆಮರೆಯ ಕಾಯಿಯಂತೆ ತನ್ನ ಸಮುದಾಯದ ವಿವಿಧ ಜನಪರ ಕೆಲಸಗಳಲ್ಲಿ ತೊಡಗಿರುವಂತ ಡಾ.ಜಿಕೆ ಪ್ರೇಮಾ ಅವರ ಸಾಧನೆಯನ್ನು ಗುರುತಿಸಿ ಡೆಕ್ಕನ್…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಬಿಸಿಸಿಐನ ಪುರುಷರ ಆಯ್ಕೆ ಸಮಿತಿಯು ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಿದೆ. ಭಾರತವು 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲು ಸಜ್ಜಾಗಿದೆ, ಅದರಲ್ಲಿ ಮೊದಲನೆಯದು 2024 ರ ಜನವರಿ 25 ರಿಂದ ಹೈದರಾಬಾದ್ನಲ್ಲಿ ನಡೆಯಲಿದೆ. ಇಂಗ್ಲೆಂಡ್ ವಿರುದ್ಧದ ಮೊದಲ 2 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ ಪ್ರಕಟ ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್ ಇಂಗ್ಲೆಂಡ್ ತಂಡದ ಭಾರತ ಪ್ರವಾಸ, 2023-24 – ಟೆಸ್ಟ್ ಸರಣಿ ಜನವರಿ 25 ರಿಂದ 29 – ಮೊದಲ ಟೆಸ್ಟ್ – ಹೈದರಾಬಾದ್ ಫೆಬ್ರವರಿ…

Read More

ಮಂಡ್ಯ: ಅಪೂರ್ಣವಾದ ಕಟ್ಟಡವನ್ನ ಯಾರು ಉದ್ಘಾಟನೆ ಮಾಡಲ್ಲ ಎಂಬುದಾಗಿ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ಕಿಡಿದ್ದಾರೆ. ಈ ಕುರಿತಂತೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನರೇಂದ್ರ ಮೋದಿ ಒಬ್ಬರು ಚಾಣಾಕ್ಷರು. ಪ್ರತಿ ಚುನಾವಣೆ ಸಂದರ್ಭ ಒಂದೊಂದು ವಿಚಾರ ತಂದು ಮುಗ್ದರನ್ನ ಡೈವರ್ಟ್ ಮಾಡ್ತಾರೆ. ಮನೆಯಾದ್ರೂ ಸರಿ, ದೇವಸ್ಥಾನ ಆದ್ರೂ ಸರಿ ಅಪೂರ್ಣವಾದದ್ದನ್ನ ಉದ್ಘಾಟನೆ ಮಾಡಲ್ಲ. ಶಂಕರಾಚಾರ್ಯರ 4 ಪೀಠಗಳಲ್ಲಿ 2 ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ರಾಮಮಂದಿರ ಕಟ್ಟೋದು ತಪ್ಪಲ್ಲಾ ಆದ್ರೆ ಅವರು ಅದನ್ನ ಚುನಾವಣೆಗೆ ಬಳಸಿಕೊಳ್ತಿರೋದು ತಪ್ಪು ಎಂದರು. ಇನ್ನೂ ಕಾಂಗ್ರೆಸ್ ನಲ್ಲಿ ಫೈವ್ ಡಿಸಿಎಂ ಚೆರ್ಚೆ ವಿಚಾರವಾಗಿ ಮಾತನಾಡಿದಂತ ಅವರು, ಕಾಂಗ್ರೆಸ್ ಹೈಕಮಾಂಡ್ ನಿಂದ ಖಡಕ್ ಎಚ್ಚರಿಕೆ ನೀಡಿದೆ. ಚುನಾವಣೆ ವೇಳೆ ಯಾರು ಕೂಡ ಡಿಸಿಎಂ ವಿಚಾರ ಚೆರ್ಚಿಸದಂತೆ ಸೂಚನೆ ನೀಡಲಾಗಿದೆ ಎಂದರು. ನಮ್ಮ ಎಐಸಿಸಿ ಅಧ್ಯಕ್ಷರು ಖಡಕ್ಕಾಗಿ ಹೇಳಿದ್ದಾರೆ ಯಾರು ಕೂಡ ಡಿಸಿಎಂ ವಿಚಾರ ಚೆರ್ಚೆ ಮಾಡದಂತೆ ತಿಳಿಸಿದ್ದಾರೆ. ಡಿಸಿಎಂ ವಿಚಾರ ಕೂಡ ಅನವಶ್ಯಕ…

Read More

ಶಿವಮೊಗ್ಗ: ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 16-12-2023 ರ ಮಂಗಳವಾರದಂದು ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಸಂತೇಕಡೂರು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಮಾರ್ಗಗಳಲ್ಲಿ ಹೆಚ್ಚುವರಿ ಹೊಸ 11 ಕೆವಿ ವಿದ್ಯುತ್ ಮಾರ್ಗ ರಚಿಸುವ ಕಾಮಗಾರಿ ಇರುವುದರಿಂದ ಜ. 16 ರಿಂದ 18 ರವರೆಗೆ ಬೆಳಗ್ಗೆ 10.30 ರಿಂದ ಸಂಜೆ 6.00 ರವರೆಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಿಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ. https://kannadanewsnow.com/kannada/73-industrial-projects-with-an-investment-of-rs-3935-crore-approved-in-the-state-14497-jobs-created/ https://kannadanewsnow.com/kannada/163-people-test-positive-for-covid-19-in-the-state-today-162-recovered/

Read More