Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬ್ರೇಕ್ ಹಾಕುವ ಸಂಬಂಧ ಹೊಸ ಮಸೂದೆಯನ್ನು ಸರ್ಕಾರ ಜಾರಿಗೆ ತರುತ್ತಿದೆ. ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತರುವಂತ ಮಸೂದೆಯನ್ನು ಸಿಎಂ ಸಿದ್ಧರಾಮಯ್ಯಗೆ ಸಮಿತಿ ಸಲ್ಲಿಸಿದೆ. ಈ ವರದಿಗೆ ಸಿಎಂ ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಹಾಗಾದ್ರೇ ಸುಗ್ರೀವಾಜ್ಞೆಯ ಕರಡಿನಲ್ಲಿ ಏನಿದೆ ಅಂತ ಮುಂದೆ ಓದಿ. ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸಂಬಂಧ ಸುಗ್ರೀವಾಜ್ಞೆ ರಚನೆಗಾಗಿ ಅಧಿಕಾರಿಗಳ ವಿಶೇಷ ತಂಡವನ್ನು ರಾಜ್ಯ ಸರ್ಕಾರ ರಚಿಸಿತ್ತು. ಇದೀಗ ಅಧ್ಯಯನ ಮಾಡಿರುವಂತ ತಂಡವು ಸಿಎಂ ಸಿದ್ಧರಾಮಯ್ಯ ಅವರಿಗೆ 10 ಪುಟಗಳ ಕರಡನ್ನ ಸಲ್ಲಿಸಿದೆ. ಅಧಿಕಾರಿಗಳ ವರದಿ ಪರಿಶೀಲಿಸಿದ ನಂತರ ರವಾನೆ ಮಾಡಲಾಗಿದೆ. ಆ ಬಳಿಕ ರಾಜ್ಯಪಾಲರಿಗೆ ಸುಗ್ರೀವಾಜ್ಞೆಯನ್ನು ಸಿಎಂ ಸಿದ್ಧರಾಮಯ್ಯ ರವಾನಿಸಲಿದ್ದಾರೆ. ವರದಿಯಂತೆ ಕಿರುಕುಳ ಕೊಟ್ಟರೆ ಮೈಕ್ರೋ ಫೈನಾನ್ಸ್ ಪರವಾನಗಿ ರದ್ದತಿ. ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲಗಾರರಿಗೆ ಕಿರುಕುಳ ನೀಡಿದರೆ ಗರಿಷ್ಠ 3 ವರ್ಷಗಳ ಜೈಲು ಶಿಕ್ಷೆ. 5 ಲಕ್ಷ ರೂ ವರೆಗೆ ದಂಡ. ಲೈಸೆನ್ಸ್ ರದ್ದುಗೊಳಿಸುವುದು. ಸಾಲ ನೀಡುವಾಗ ಅಡಮಾನ ಪಡೆಯಬಾರದು. ಕಿರುಕುಳ ನೀಡಿದರೆ ಜಾಮೀನುರಹಿತ ಪ್ರಕರಣ ಎಂದು…
ಬೆಂಗಳೂರು: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ಹಾಸ್ಟೆಲ್ಗಳಿಗೆ ಭೇಟಿ ನೀಡದಿರುವುದು ನನ್ನ ಗಮನಕ್ಕೆ ಬಂದಿದೆ. ಕೇವಲ ಕಚೇರಿಯಲ್ಲಿ ಕುಳಿತು ಕಾಲಹರಣ ಮಾಡುವುದನ್ನು ನಾನು ಸಹಿಸುವುದಿಲ್ಲ. ಇನ್ನು ಮುಂದೆ ಕಡ್ಡಾಯವಾಗಿ ಆಯಾ ಜಿಲ್ಲೆಯ ಪ್ರತಿಯೊಂದು ಹಾಸ್ಟೆಲ್ಗಳಿಗೆ ಭೇಟಿ ನೀಡಿ, ಆಹಾರ ಗುಣಮಟ್ಟ ಹಾಗೂ ಶುಚಿತ್ವಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಈ ಕೆಲಸ ನಿರಂತರವಾಗಿ ನಡೆಯಬೇಕು. ಜಿಲ್ಲಾ ಕಲ್ಯಾಣಾಧಿಕಾರಿಗಳು ಹಾಸ್ಟೆಲ್ಗಳಿಗೆ ಭೇಟಿ ನೀಡಿದ ವೇಳೆ ಅಲ್ಲಿಯೇ ಊಟ ಸೇವಿಸಬೇಕು. ಇದರಿಂದ ಅಲ್ಲಿನ ಆಹಾರದ ಗುಣಮಟ್ಟ ಸೇರಿದಂತೆ ಇನ್ನಿತರ ವಿಚಾರಗಳು ಗಮನಕ್ಕೆ ಬರಲಿವೆ ಎಂಬುದಾಗಿ ಸಚಿವ ಶಿವರಾಜ್ ತಂಡರಗಿ ಹೇಳಿದರು. ಸೋಮವಾರ ದೇವರಾಜ ಅರಸು ಭವನದಲ್ಲಿ ಒಕ್ಕಲಿಗರ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ, ವೀರಶೈವ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದ ಅವರು, ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ನಿಗಮಗಳಿಗೆ ಈಗಾಗಲೇ ಆರ್ಥಿಕ ಇಲಾಖೆ, 1600 ಕೋಟಿ ಅನುದಾನವನ್ನು ಒದಗಿಸಿದೆ. ಕೂಡಲೇ ಎಲ್ಲಾ ನಿಗಮಗಳ ವ್ಯವಸ್ಥಾಪಕ…
ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಯುವ ಕಾರ್ಯ ವಿಳಂಬವಾಗುತ್ತಿರುವುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಸೋಮವಾರ ದೇವರಾಜ ಅರಸು ಭವನದಲ್ಲಿ ಒಕ್ಕಲಿಗರ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ, ವೀರಶೈವ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದ ಸಚಿವರು, ಆರ್ಥಿಕ ವರ್ಷ ಪೂರ್ಣಗೊಳ್ಳುವಷ್ಟರಲ್ಲಿ ನಿಗದಿತ ಗುರಿ ಮುಟ್ಟದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ದೇವರಾಜ ಅರಸು ಅಭಿವೃದ್ಧಿ ನಿಗಮದಲ್ಲಿ ಶೇಕಡ 85ರಷ್ಟು ಹಣ ಖರ್ಚು ಮಾಡಲಾಗಿದ್ದು, ಉಳಿದ ಕೊಳವೆಬಾವಿ ಕೊರೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇನ್ನು ಒಂದು ತಿಂಗಳಲ್ಲಿ ಬಾಕಿ ಕೊಳವೆ ಬಾವಿ, ಸ್ವಾವಲಂಬಿ ಸಾರಥಿ, ಅರಿವು ಶೈಕ್ಷಣಿಕ ಸಾಲ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆಗಳನ್ನ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ನಿರ್ದೇಶನ…
ಪ್ರತಿದಿನ ಹಣದ ಹರಿವು ಎಷ್ಟು ಮುಖ್ಯ ಎಂದು ಎಲ್ಲರಿಗೂ ತಿಳಿದಿದೆ. ಆ ಹಣದ ಹರಿವನ್ನು ಹೆಚ್ಚಿಸಲು ನಾವು ಹಗಲಿರುಳು ಶ್ರಮಿಸುತ್ತಿದ್ದೇವೆ. ಆದರೆ ಹಲವರಿಗೆ ಹಣ ಕೈಗೆ ಬರುವ ಮುನ್ನವೇ ಖರ್ಚು ಬರುತ್ತದೆ. ಕೆಲವು ಜನರು ಆದಾಯದ ಅವಕಾಶವಿಲ್ಲದೆ ಉಳಿದಿದ್ದಾರೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ನೀವು ಹಣದ ಅಡೆತಡೆಗಳನ್ನು ಸರಿಪಡಿಸುವ ಮತ್ತು ನಗದು ಹರಿವನ್ನು ಹೆಚ್ಚಿಸುವ ಅದ್ಭುತ ಪರಿಹಾರವನ್ನು ಕಾಣಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ…
ಸ್ಮಾರ್ಟ್ಫೋನ್ ಬಳಕೆದಾರರಿಗೆ ದೊಡ್ಡ ಸಮಸ್ಯೆಯೆಂದರೆ ಬ್ಯಾಟರಿ ಬೇಗನೆ ಖಾಲಿಯಾಗುವುದು. ಆದಾಗ್ಯೂ, ದುರ್ಬಲ ಬ್ಯಾಟರಿ ಯಾವಾಗಲೂ ಅಪರಾಧಿಯಲ್ಲ. ಫಿಟ್ನೆಸ್ ಟ್ರ್ಯಾಕಿಂಗ್, ಸಾಮಾಜಿಕ ಮಾಧ್ಯಮ ಅಥವಾ ಡೇಟಿಂಗ್ಗಾಗಿ ಹೆಚ್ಚಾಗಿ ಬಳಸಲಾಗುವ ಅಸಂಖ್ಯಾತ ಅಪ್ಲಿಕೇಶನ್ಗಳು ಗಮನಾರ್ಹ ಶಕ್ತಿಯನ್ನು ಬಳಸುತ್ತವೆ. ಸ್ವೀಡಿಷ್ ಆನ್ಲೈನ್ ಪತ್ರಿಕೆ ನೈಹೆಡರ್ 24 ಸಂಗ್ರಹಿಸಿದ ಪಟ್ಟಿಯ ಪ್ರಕಾರ, ಫಿಟ್ಬಿಟ್ ಮತ್ತು ಉಬರ್ ಅಂತಹ ಬ್ಯಾಟರಿ ಒಣಗಿಸುವ ಅಪ್ಲಿಕೇಶನ್ಗಳಲ್ಲಿ ಸೇರಿವೆ. ವರದಿಯ ಪ್ರಕಾರ, ಫಿಟ್ಬಿಟ್ ಅತ್ಯಂತ ಶಕ್ತಿ-ಕೇಂದ್ರಿತವಾಗಿದೆ, ನಂತರ ಉಬರ್ ಮತ್ತು ಅಂತಹುದೇ ಅಪ್ಲಿಕೇಶನ್ಗಳು. ಆಶ್ಚರ್ಯಕರವಾಗಿ, ಈ ಅಪ್ಲಿಕೇಶನ್ಗಳು ಸಕ್ರಿಯವಾಗಿ ಬಳಕೆಯಲ್ಲಿಲ್ಲದಿದ್ದರೂ ಸಹ ನಿಮ್ಮ ಬ್ಯಾಟರಿಯನ್ನು ಖಾಲಿ ಮಾಡಬಹುದು. ಟಾಪ್ 10 ಬ್ಯಾಟರಿ ಬಳಕೆ ಅಪ್ಲಿಗಳು: ಫಿಟ್ಬಿಟ್ ಉಬರ್ Skype ಫೇಸ್ ಬುಕ್ Airbnb Instagram Tinder ಬಂಬಲ್ SnapChat WhatsApp ಬ್ಯಾಟರಿಯನ್ನು ಹೇಗೆ ನಿರ್ವಹಿಸುವುದು? ನಿಮ್ಮ ಬ್ಯಾಟರಿಯನ್ನು ಉಳಿಸಲು, ನೀವು ಈ ಅಪ್ಲಿಕೇಶನ್ ಗಳನ್ನು ಹಸ್ತಚಾಲಿತವಾಗಿ ಮುಚ್ಚಬಹುದು ಅಥವಾ ಅವುಗಳ ವಿದ್ಯುತ್ ಬಳಕೆಯನ್ನು ಉತ್ತಮಗೊಳಿಸಬಹುದು. ಆಂಡ್ರಾಯ್ಡ್ ಸಾಧನಗಳಲ್ಲಿ ಇದು ವಿಶೇಷವಾಗಿ ಸುಲಭ: ನಿಮ್ಮ…
ಬೆಂಗಳೂರು: ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಈ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದು ಬೆಂಗಳೂರಿನ “ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ” (D.S.E.R.T) ಕಚೇರಿಯಲ್ಲಿ “ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ಮಾರ್ಗದರ್ಶನ ಮತ್ತು ಫಲಿತಾಂಶ ಸುಧಾರಣೆ ಕುರಿತು ಸಂವಾದ ಕಾರ್ಯಕ್ರಮ ನಡೆಸಲಾಯಿತು. ♦️ವಿವಿಧ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಜಿಲ್ಲಾ ಉಪನಿರ್ದೇಶಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶೈಕ್ಷಣಿಕ ಕಾರ್ಯಕ್ರಮಗಳ ಪ್ರಗತಿ ಕುರಿತು ಮಾಹಿತಿ ಪಡೆದು ಸಮಗ್ರವಾಗಿ ಚರ್ಚಿಸಲಾಯಿತು. ♦️ಮಕ್ಕಳು ಶೈಕ್ಷಣಿಕವಾಗಿ ಹಿಂದುಳಿಯದಂತೆ ಅವರಿಗೆ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡುವುದು ನಮ್ಮ ಆದ್ಯ ಕರ್ತವ್ಯವಾಗಿದ್ದು, ಮಕ್ಕಳಿಗೆ ಆತ್ಮವಿಶ್ವಾಸ ತುಂಬುವ ಅನೇಕ ವಿನೂತನ ಪ್ರಯತ್ನಗಳನ್ನು ನಮ್ಮ ಶಿಕ್ಷಣ ಇಲಾಖೆ ಹಾಗೂ ಸರ್ಕಾರ ಮಾಡುತ್ತಿದೆ. ♦️SSLC ಮತ್ತು PUC ಫಲಿತಾಂಶ ವೃದ್ಧಿಗೆ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲೆಂದು 20 ಅಂಶಗಳ ಕಾರ್ಯಕ್ರಮ ಅನುಷ್ಠಾನ ಮಾಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಪರೀಕ್ಷಾ…
ಬೆಂಗಳೂರು : ಜನಸಾಮಾನ್ಯರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರ್ಪೊರೆಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಅನುದಾನವನ್ನು ಪರಿಣಾಮಕಾರಿಯಾಗಿ ಹಾಗೂ ಸದ್ಬಳಕೆಯಾಗುವ ರೀತಿಯಲ್ಲಿ ಬಳಸಿಕೊಳ್ಳಲು ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನವೀಕರಿಸುವ ಮೂಲಕ ಆರೋಗ್ಯ ಸೇವೆಗಳನ್ನು ಬಲಪಡಿಸುವ ಯೋಜನೆಗೆ ಚಾಲನೆ ನೀಡಿದ ನಂತರ ಸಚಿವರು ಮಾತನಾಡಿದರು. ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ರಾಯಚೂರು ಜಿಲ್ಲೆಯಲ್ಲಿ ಒಟ್ಟು 13 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು (ಪಿಎಚ್ಸಿ) ಉನ್ನತೀಕರಿಸಲಾಗಿದೆ. ಈ ಪೈಕಿ 10ಪಿಎಚ್ ಪೂರ್ಣಗೊಂಡಿವೆ. ಇವುಗಳನ್ನು ನಾವು ಲೋಕಾರ್ಪಣೆ ಮಾಡಿದ್ದೇವೆ. ಉಳಿದ ಮೂರು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿವೆ ಎಂದರು. ಆರೋಗ್ಯ ಮತ್ತು ಶಿಕ್ಷಣ ಜನರಿಗೆ ಅತ್ಯಂತ ಅಗತ್ಯವಿರುವ ಕ್ಷೇತ್ರಗಳಾಗಿವೆ. ಈ ನಿಟ್ಟಿನಲ್ಲಿ ಜನರಿಗೆ ಉತ್ತಮ ಆರೋಗ್ಯ ಸೇವಾ ಸೌಲಭ್ಯಗಳನ್ನು ಒದಗಿಸಲು ನಮ್ಮ ಇಲಾಖೆ ಸಿಎಸ್ಆರ್ ಯೋಜನೆಯಡಿ ಹಲವಾರು ಕಾರ್ಯಕ್ರಮ…
ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ವಿಚಾರವಾಗಿ ಸುಗ್ರೀವಾಜ್ಞೆ ಮೂಲಕ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿತ್ತು. ಅದರಂತೆ ಅದರ ಕರಡು ಪ್ರತಿಯನ್ನು ಸಿಎಂ ಸಿದ್ಧರಾಮಯ್ಯಗೆ ಸಲ್ಲಿಕೆ ಮಾಡಲಾಗಿದೆ. ಹೌದು ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸಂಬಂಧ ಸುಗ್ರೀವಾಜ್ಞೆ ರಚನೆಗಾಗಿ ಅಧಿಕಾರಿಗಳ ವಿಶೇಷ ತಂಡವನ್ನು ರಾಜ್ಯ ಸರ್ಕಾರ ರಚಿಸಿತ್ತು. ಇದೀಗ ಅಧ್ಯಯನ ಮಾಡಿರುವಂತ ತಂಡವು ಸಿಎಂ ಸಿದ್ಧರಾಮಯ್ಯ ಅವರಿಗೆ 10 ಪುಟಗಳ ಕರಡನ್ನ ಸಲ್ಲಿಸಿದೆ. ಅಧಿಕಾರಿಗಳ ವರದಿ ಪರಿಶೀಲಿಸಿದ ನಂತರ ರವಾನೆ ಮಾಡಲಾಗಿದೆ. ಆ ಬಳಿಕ ರಾಜ್ಯಪಾಲರಿಗೆ ಸುಗ್ರೀವಾಜ್ಞೆಯನ್ನು ಸಿಎಂ ಸಿದ್ಧರಾಮಯ್ಯ ರವಾನಿಸಲಿದ್ದಾರೆ. ವರದಿಯಂತೆ ಕಿರುಕುಳ ಕೊಟ್ಟರೆ ಮೈಕ್ರೋ ಫೈನಾನ್ಸ್ ಪರವಾನಗಿ ರದ್ದತಿ. ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲಗಾರರಿಗೆ ಕಿರುಕುಳ ನೀಡಿದರೆ ಗರಿಷ್ಠ 3 ವರ್ಷಗಳ ಜೈಲು ಶಿಕ್ಷೆ. 5 ಲಕ್ಷ ರೂ ವರೆಗೆ ದಂಡ. ಲೈಸೆನ್ಸ್ ರದ್ದುಗೊಳಿಸುವುದು. ಸಾಲ ನೀಡುವಾಗ ಅಡಮಾನ ಪಡೆಯಬಾರದು. ಕಿರುಕುಳ ನೀಡಿದರೆ ಜಾಮೀನುರಹಿತ ಪ್ರಕರಣ ಎಂದು ಪರಿಗಣಿಸಲು ಕರಡು ಮಸೂದೆಯಲ್ಲಿ ಅವಕಾಶವಿದೆ. ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಕರಡು ಸುಗ್ರೀವಾಜ್ಞೆಯಲ್ಲಿ ಏನೇನಿದೆ? * ಸಾಲ ವಸೂಲಿ ವೇಳೆ ಸಾಲಗಾರರಿಗೆ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆನೆ ಮೂಲಕ ಮಸೂದೆ ತರಲು ಒಪ್ಪಿಗೆ ಸೂಚಿಸಲಾಗಿತ್ತು. ಈ ಸುಗ್ರೀವಾಜ್ಞೆಯಲ್ಲಿ ಕೆಲ ಬದಲಾವಣೆ ಮಾಡಿದ ನಂತ್ರ ರಾಜ್ಯ ಸರ್ಕಾರ ಡ್ರಾಫ್ಟ್ ರಾಜ್ಯಪಾಲರಿಗೆ ಸಲ್ಲಿಸಲಾಗಿದೆ. ಇನ್ನೇನಿದ್ದರೂ ಅಂಕಿತ ಮಾತ್ರ ಬಾಕಿ ಉಳಿದಂತೆ ಆಗಿದೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡುವುದನ್ನು ತಪ್ಪಿಸಲು ಸುಗ್ರೀವಾಜ್ಞೆಯನ್ನು ಜಾರಿಗೆ ತರುವಂತ ನಿರ್ಧಾರವನ್ನು ಸರ್ಕಾರ ಮಾಡಿತ್ತು. ಅದರಂತೆ ಸಂಪುಟ ಸಭಎಯಲ್ಲೂ ಒಪ್ಪಿಗೆಯನ್ನು ಸೂಚಿಸಲಾಗಿತ್ತು. ಆ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದು, ಶಿಕ್ಷೆಯ ಪ್ರಮಾಣದಲ್ಲಿ ಕೆಲ ಬದಲಾವಣೆ ಮಾಡಲಾಗಿತ್ತು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣವನ್ನು 3 ವರ್ಷದಿಂದ 10 ವರ್ಷ ಜೈಲು ಶಿಕ್ಷೆಗೆ ಬದಲಾವಣೆ ಮಾಡಿದಂತ ಡ್ರಾಫ್ಟ್ ಅನ್ನು ರಾಜ್ಯಪಾಲರಿಗೆ ಸರ್ಕಾರ ಕಳುಹಿಸಿಕೊಟ್ಟಿದೆ. ಇನ್ನೂ ರಾಜ್ಯಪಾಲರು ಸುಗ್ರೀವಾಜ್ಞೆಗೆ ಅಂಕಿತ ನೀಡಿದ್ದೇ ಆದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕರ್ನಾಟಕದಲ್ಲಿ ಬ್ರೇಕ್ ಬೀಳಲಿದೆ. https://kannadanewsnow.com/kannada/another-trouble-for-cm-siddaramaiah-complaint-lodged-with-lokayukta-over-benami-properties/ https://kannadanewsnow.com/kannada/big-news-minister-ishwar-khandre-asks-hd-kumaraswamy-whether-hmt-should-be-allowed-to-sell-forest-land-for-real-estate/
ಮೈಸೂರು: ಮುಡಾ ಕೇಸ್ ನಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಸಂಕಷ್ಟ ಎದುರಾಗಲಿದೆ ಎಂಬುದಾಗಿ ಹಲವರ ಮಾತು. ಈ ನಡುವೆ ಈಗ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೊಂದು ಸಂಕಷಅಟ ಎದುರಾಗಿದೆ. ಅದೇ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಇಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿಂದ ಸ್ನೇಹಮಯಿ ಕೃಷ್ಣ ಅವರು, ಮುಖ್ಯಮಂತ್ರಿ ಸಿದ್ಧರಾಮಯಯ್ ಹಾಗೂ ಅವರ ಕುಟುಂಬಸ್ಥರು ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ. ಸಿದ್ಧರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಖರೀದಿಸಿದೆ ಎಂಬುದಾಗಿ ಆರೋಪಿಸಿ ದೂರು ನೀಡಿದ್ದಾರೆ. ಮೈಸೂರು ತಾಲ್ಲೂಕಿನ ಆಲನಹಳ್ಳಿಯಲ್ಲಿ ಸರ್ವೆ ನಂ.113/4ರಲ್ಲಿ 1 ಎಕರೆ ಭೂಮಿಯನ್ನು ಖರೀದಿಸಿದ್ದಾರೆ. ಇದು ಬೇನಾಮಿ ಆಸ್ತಿಯಾಗಿದೆ. ಈ ಕುರಿತಂತೆ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಲಾಗಿದೆ. https://kannadanewsnow.com/kannada/no-10-grace-marks-for-sslc-students-this-year-madhu-bangarappa/ https://kannadanewsnow.com/kannada/big-news-minister-ishwar-khandre-asks-hd-kumaraswamy-whether-hmt-should-be-allowed-to-sell-forest-land-for-real-estate/













