Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ..? ಕೋರ್ಟ್ನಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಅಂದ್ರೆ ಎಲೆಕ್ಷನ್ ಕೆಲಸ ಇತ್ತು ಅಂತ ಸಾಬೂಬು ಹೇಳ್ತೀರ ಎಂದು ಉಪ ವಿಭಾಗಾಧಿಕಾರಿಗಳನ್ನು (ಎಸಿ) ಸಚಿವ ಕೃಷ್ಣ ಬೈರೇಗೌಡ ಅವರು ತರಾಟೆಗೆ ತೆಗೆದುಕೊಂಡರು. ಎಸಿ ನ್ಯಾಯಾಲಯಗಳಲ್ಲಿ ಹೆಚ್ಚು ಸಂಖ್ಯೆಯಲ್ಲಿ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸದೆ ಬಾಕಿ ಉಳಿಸಿಕೊಂಡಿರುವ ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಕೊಪ್ಪಳ, ಮೈಸೂರು, ಮಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳ ಆಯ್ದ 30 ಉಪ-ವಿಭಾಧಿಕಾರಿಗಳು ಹಾಗೂ ವಲಯ ಆಯುಕ್ತರ ಜೊತೆ ಇಂದು ವಿಕಾಸಸೌಧದಲ್ಲಿ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು. ಈ ವೇಳೆ ಉಪ-ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳ ಇತ್ಯರ್ಥಕ್ಕೆ ಮುಂದಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ ಅವರು, “ಹಲವು ವರ್ಷಗಳಿಂದ ಎಸಿ ನ್ಯಾಯಾಲಯಗಳಿಗೆ ಅಲೆದಾಡಿ ಜನ ಬಸವಳಿಸಿದ್ದಾರೆ. ಹೀಗಾಗಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು…
ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ)ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆ.26 ರ ಬೆಳಿಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಕೃಷ್ಣ ಜಯಂತಿಯನ್ನು ಏರ್ಪಡಿಸಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ಇವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ, ತಾಲ್ಲೂಕು ಗೊಲ್ಲರ ಸಂಘದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಪಾಲಿಕೆ ಆಯುಕ್ತರು, ಅಧಿಕಾರಿಗಳು, ವಿವಿಧ ಸಂಘಟನೆ ಮುಖಂಡರು ಪಾಲ್ಗೊಳ್ಳುವರು. ಅಜ್ಜಂಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆ ಎಸ್ ಆರ್ ಟಿ ಸಿ ಉಪಾಧ್ಯಕ್ಷರನ್ನಾಗಿ ಮಹಮ್ಮದ್ ರಿಜ್ವಾನ್ ನವಾಬ್ ಅವರನ್ನು ನೇಮಿಸಿ ಆದೇಶಿಸಿತ್ತು. ಇಂತಹ ಅವರು ಇಂದು ಕೆ ಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ಬಿಬಿಎಂಪಿಯ ಮಾಜಿ ಸದಸ್ಯರಾದಂತ ಮಹಮ್ಮದ್ ರಿಜ್ವಾನ್ ನವಾಬ್ ಅವರು, ಇಂದು ಕೆ ಎಸ್ ಆರ್ ಟಿಸಿ ಉಪಾಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಂಡರು ಅಂತ ತಿಳಿಸಿದೆ. ಈ ವೇಳೆ ನಿಗಮದ ವ್ಯವಸ್ಥಾಪಕ ನಿರ್ದೇಶಕರವರಾದ ವಿ. ಅನ್ಬುಕುಮಾರ್,ಭಾ.ಆ.ಸೇ ಅವರು ಮಾನ್ಯರಿಗೆ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಡಾ. ಕೆ ನಂದಿನಿ ದೇವಿ,ಭಾ.ಆ.ಸೇ , ನಿರ್ದೇಶಕರು ,(ಸಿ ಮತ್ತು ಜಾ), ಇತರೆ ಅಧಿಕಾರಿಗಳು ಹಾಜರಿದ್ದರು. https://kannadanewsnow.com/kannada/7-year-old-boy-dies-of-dengue-in-chitradurga/ https://kannadanewsnow.com/kannada/governor-sent-back-15-bills-after-listening-to-bjp-dk-shivakumar/ https://kannadanewsnow.com/kannada/50-beds-reserved-in-victoria-as-a-precautionary-measure-against-monkeypox-sharan-prakash-patil/
ಚಿತ್ರದುರ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಡೆಂಗ್ಯೂಗೆ ಮತ್ತೊಂದು ಬಲಿ ಎನ್ನುವಂತೆ 7 ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಇದೀಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಗ್ರಾಮದ ಹನುಮಂತಪ್ಪ ಹಾಗೂ ಕವಿತಾ ಎಂಬುವರ ದಂಪತಿಯ 7 ವರ್ಷದ ಮಗ ಜಗನ್ನಾಥನಿಗೆ ಜ್ವರ ಕಾಣಿಸಿಕೊಂಡಿತ್ತು. ಆತನನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ಒಂದಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೇ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಾಧ್ಯಂತ ದಿನೇ ದಿನೇ ಡೆಂಗ್ಯೂ ಕೇಸ್ ಹೆಚ್ಚಾಗುತ್ತಿವೆ. ಸೊಳ್ಳೆಗಳ ಕಾಟ ಮೇಟಿಕುರ್ಕೆ ಗ್ರಾಮದಲ್ಲಿ ಹೆಚ್ಚಿರುವುದೇ ಡೆಂಗ್ಯೂವಿನಿಂದ ಬಾಲಕನ ಸಾವಿಗೆ ಕಾರಣವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಜೊತೆಗೆ ಸೊಳ್ಳೆಗಳ ನಿಯಂತ್ರಣಕ್ಕೆ ಗ್ರಾಮ ಪಂಚಾಯ್ತಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ರಮವಹಿಸುವಂತೆ ಆಗ್ರಹಿಸಿದ್ದಾರೆ. https://kannadanewsnow.com/kannada/jindal-land-as-per-law-m-b-patil/ https://kannadanewsnow.com/kannada/governor-sent-back-15-bills-after-listening-to-bjp-dk-shivakumar/ https://kannadanewsnow.com/kannada/50-beds-reserved-in-victoria-as-a-precautionary-measure-against-monkeypox-sharan-prakash-patil/
ಬೆಂಗಳೂರು: ಮುಡಾ ಹಗರಣದ ವಿಚಾರದಲ್ಲಿ ರಾಜ್ಯಪಾಲರು ಸ್ವಂತ ವಿವೇಚನೆಯಿಂದ ನಡೆದುಕೊಂಡಿಲ್ಲ. ರಾಜಭವನ ಈಗ ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ತಪ್ಪೇನೂ ಇಲ್ಲ ಎಂದು ಎಂ ಬಿ ಪಾಟೀಲ ಹೇಳಿದ್ದಾರೆ. ಸದಾಶಿವನಗರದ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮುಡಾ ಹಗರಣದ ನೆಪದಲ್ಲಿ ಸರಕಾರವನ್ನು ಉರುಳಿಸಲು ಬಿಜೆಪಿ ಮತ್ತು ಜೆಡಿಎಸ್ ನೋಡುತ್ತಿವೆ. ಆದರೆ ಅವರು ತಲೆ ಕೆಳಗೆ ಮಾಡಿಕೊಂಡು ನಿಂತರೂ ಅದು ಸಾಧ್ಯವಿಲ್ಲ. ನಮ್ಮ ಪಕ್ಷದ ಹೈಕಮಾಂಡ್ ಈ ವಿಚಾರದಲ್ಲಿ ಕೆಲವು ಸಲಹೆ ಸೂಚನೆ ನೀಡಲಿದೆ ಎಂದು ಅವರು ನುಡಿದಿದ್ದಾರೆ. ಟಿ ಜೆ ಅಬ್ರಹಾಂ ನೀಡಿದ ದೂರಿನ ಮೇರೆಗೆ ತರಾತುರಿಯಲ್ಲಿ ಕ್ರಮ ಕೈಗೊಂಡ ರಾಜ್ಯಪಾಲರು, ಶಶಿಕಲಾ ಜೊಲ್ಲೆ, ಮುರುಗೇಶ ನಿರಾಣಿ, ಜನಾರ್ದನ ರೆಡ್ಡಿ ಮತ್ತು ಎಚ್ ಡಿ ಕುಮಾರಸ್ವಾಮಿ ವಿಚಾರದಲ್ಲಿ ವರ್ಷಗಳೇ ಉರುಳಿದರೂ ಏಕೆ ಸುಮ್ಮನಿದ್ದಾರೆ ಎಂದು ಅವರು ಪ್ರಶ್ನಿಸಿದರು. https://kannadanewsnow.com/kannada/jindal-land-as-per-law-m-b-patil/ https://kannadanewsnow.com/kannada/guidelines-for-medical-colleges-to-be-issued-soon-minister-sharan-prakash-patil/
ಬೆಂಗಳೂರು: ಜಿಂದಾಲ್ ಉಕ್ಕು ಕಂಪನಿಗೆ ಕೋರ್ಟ್ ನಿರ್ದೇಶನ ಮತ್ತು ಅದನ್ನು ಅನುಸರಿಸಿ ಹೊರಡಿಸಿದ ಸರಕಾರಿ ಆದೇಶ ಹಾಗೂ ಸಂಪುಟ ಸಭೆಯ ನಿರ್ಣಯದಂತೆಯೇ ಕಾನೂನಿಗೆ ಅನುಸಾರವಾಗಿ 3,677 ಎಕರೆ ಭೂಮಿಯನ್ನು ಗುತ್ತಿಗೆ ಮಾರಾಟ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಸರಕಾರದ್ದು ಎಳ್ಳಷ್ಟೂ ತಪ್ಪಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಶುಕ್ರವಾರ ಇಲ್ಲಿ ಸಮರ್ಥಿಸಿಕೊಂಡಿದ್ದಾರೆ. ಸದಾಶಿವನಗರದ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಖಾನೆ ಹೊಂದಿರುವ ಜಿಂದಾಲ್ ಕಂಪನಿಗೆ ನಾವೇನೂ ರಿಯಾಯಿತಿ ಕೊಟ್ಟಿಲ್ಲ. ಮಾರುಕಟ್ಟೆ ಬೆಲೆ ಹಿಂದೆ ಏನಿದೆಯೋ ಅದನ್ನು ನಿಗದಿಪಡಿಸಿದ್ದೇವೆ. ಕಂಪನಿ ಕೂಡ ಸರಕಾರದ ಷರತ್ತುಗಳನ್ನು ಪಾಲಿಸಿದೆ. ರಾಜ್ಯದಲ್ಲಿ ಇರುವ ಒಂದು ಲಕ್ಷ ಕೈಗಾರಿಕೆಗಳಿಗೆ ಯಾವ ನಿಯಮ ಹೇಳಿದ್ದೇವೋ ಅದನ್ನೇ ಜಿಂದಾಲ್ ಗೂ ಅನ್ವಯಿಸಲಾಗಿದೆ. ವಾಸ್ತವವಾಗಿ ಒಂಬತ್ತು ವರ್ಷಗಳ ಕಾಲ ಇದನ್ನು ವೃಥಾ ಎಳೆದಾಡಿದ್ದೇವೆ’ ಎಂದಿದ್ದಾರೆ. ಇನ್ನು ಆರು ತಿಂಗಳಲ್ಲಿ ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಜಿಂದಾಲ್…
ಬೆಂಗಳೂರು: ಕೋಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಕೊಲೆ ಪ್ರಕರಣ ಬೆನ್ನಲ್ಲೇ, ರಾಜ್ಯದಲ್ಲಿ ಮುನ್ನೆಚ್ಚರಿಕೆಯ ನಡೆಯನ್ನು ಸರ್ಕಾರ ಅನುಸರಿಸುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಶೀಘ್ರವೇ ಮಾರ್ಗಸೂಚಿ ಪ್ರಕಟಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಶುಕ್ರವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಎಲ್ಲಾ ವೈದ್ಯಕೀಯ ಕಾಲೇಜುಗಳ ನಿರ್ದೇಶಕರಿಗೆ ಶೀಘ್ರವೇ ಹೊಸ ಮಾರ್ಗಸೂಚಿ ಪ್ರಕಟ ಮಾಡುವ ಕುರಿತಂತೆ ಮಾಹಿತಿ ನೀಡಲಾಗುತ್ತದೆ. ಮೆಡಿಕಲ್ ಕಾಲೇಜುಗಳ ಅಸೋಸಿಯೇಷನ್ ಜೊತೆಗೆ ಸಭೆ ನಡೆಸಿ, ತೆಗೆದುಕೊಳ್ಳಬಹುದಾದಂತ ಕ್ರಮಗಳ ಬಗ್ಗೆಯೂ ವರದಿಯನ್ನು ನೀಡುವಂತೆ ಸೂಚಿಸಲಾಗುವುದು ಎಂದರು. ಈ ಸಭೆಯ ಬಳಿಕ ಮೆಟಿಕಲ್ ಕಾಲೇಜುಗಳಿಂದ ನೀಡುವಂತ ಸೂಚನೆಗಳನ್ನು, ರಾಜ್ಯ ಸರ್ಕಾರದಿಂದ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಸಭೆ ನಡೆಸಿ, ಚರ್ಚಿಸಿ, ಸರ್ಕಾರವು ಖಾಸಗಿ ಮೆಡಿಕಲ್ ಕಾಲೇಜುಗಳಿಗೂ ಅನ್ವಯವಾಗುವಂತೆ ಮಾರ್ಗಸೂಚಿಯನ್ನು ಶೀಘ್ರವೇ ಹೊರಡಿಸಲಾಗುತ್ತದೆ ಎಂದು ಹೇಳಿದರು. https://kannadanewsnow.com/kannada/50-beds-reserved-in-victoria-as-a-precautionary-measure-against-monkeypox-sharan-prakash-patil/ https://kannadanewsnow.com/kannada/bengaluru-power-outages-in-these-areas-on-august-25/ https://kannadanewsnow.com/kannada/governor-sent-back-15-bills-after-listening-to-bjp-dk-shivakumar/
ಬೆಂಗಳೂರು : ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಯಾರೊಬ್ಬರು ಆತಂಕಕ್ಕೆ ಒಳಗಾಗಬಾರದೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟಿಲ್ ರಾಜ್ಯದ ಜನತೆಗೆ ಅಭಯ ನೀಡಿದ್ದಾರೆ. ಶುಕ್ರವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು ಕಳೆದ ಆ.14ರಂದು ವಿಶ್ವ ಆರೋಗ್ಯ ಸಂಸ್ಥೆ ಮಂಕಿಫಾಕ್ಸ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಘೋಷಿಸಿದೆ. ಆಫ್ರಿಕಾದಲ್ಲಿ ಹರಡಿರುವ ಸೋಂಕು ಕಾಣಿಸಿಕೊಂಡಿರುವ ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು. ಈ ಸೋಂಕು ಇಲ್ಲಿಯವರೆಗೆ ಭಾರತದಲ್ಲಿ ಕಂಡು ಬಂದಿಲ್ಲ. ಈ ಹಿನ್ನೆಲೆ ಯಾವುದೇ ಆತಂಕ ಬೇಡ. ಎನ್ಸಿಡಿಸಿ ಜಂಟಿ ನಿರ್ವಹಣೆ ಸಂಸ್ಥೆ ಇದರ ಹರಡುವಿಕೆ ಅಪಾಯದ ಮೌಲ್ಯಮಾಪನ ನಡೆಸುತ್ತಿದೆ.…
ಬೆಂಗಳೂರು: ನಗರದಲ್ಲಿನ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೊಸದಾಗಿ 52 ಇಂದಿರಾ ಕ್ಯಾಂಟೀನ್ ಗಳನ್ನು ವಿವಿಧೆಡೆ ಆರಂಭಿಸಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸದಾಗಿ 52 ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸಲು ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರತಿ ಕ್ಯಾಂಟೀನ್ಗೆ ₹40 ಲಕ್ಷದಂತೆ ಒಟ್ಟು ₹20 ಕೋಟಿ ವ್ಯಯಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಅಂದಹಾಗೇ ಈಗಾಗಲೇ ಬೆಂಗಳೂರಲ್ಲಿ ಹಲವು ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿದೆ. ಹೊಸ ಮೆನ್ಯೂ ರೂಪದಲ್ಲಿ ತಿಂಡಿ, ಊಟವನ್ನು ನೀಡಲಾಗುತ್ತಿದೆ. ಈಗ ಹೊಸದಾಗಿ ನಗರದಲ್ಲಿ 52 ಇಂದಿರಾ ಕ್ಯಾಂಟೀನ್ ಆರಂಭಿಸಲಾಗುತ್ತಿದ್ದು, ಮತ್ತಷ್ಟು ಜನತೆಯ ಹಸಿವನ್ನು ನೀಗಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದಂತೆ ಆಗಿದೆ. https://twitter.com/KarnatakaVarthe/status/1826909107988632052 https://kannadanewsnow.com/kannada/special-courses-needed-for-health-of-poor-bommai/ https://kannadanewsnow.com/kannada/bengaluru-power-outages-in-these-areas-on-august-25/ https://kannadanewsnow.com/kannada/governor-sent-back-15-bills-after-listening-to-bjp-dk-shivakumar/
ಹುಬ್ಬಳ್ಳಿ: ವೈದ್ಯಕೀಯ ಶಿಕ್ಷಣದಲ್ಲಿ ಸಾರ್ವಜನಿಕರ ಆರೋಗ್ಯದ ಸಲುವಾಗಿ ವಿಶೇಷ ಕೋರ್ಸ್ಗಳು ಹಾಗೂ ವಿಶೇಷ ಕೇಡರ್ಗಳನ್ನು ನಿರ್ಮಾಣ ಮಾಡಿ, ಬಡವರಿಗೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗದೇ ಚಿಕಿತ್ಸೆ ನೀಡುವ ವ್ಯವಸ್ಥೆ ಬಂದರೆ ಆರೋಗ್ಯಕರವಾಗಿರುವ ಸಮಾಜ ನಿರ್ಮಾಣವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಅವರು ಇಂದು ಹುಬ್ಬಳ್ಳಿಯಲ್ಲಿ ಸಂಯುಕ್ತ ಕರ್ನಾಟಕ ದಿನಪತ್ರಿಕೆ ವತಿಯಿಂದ ಏರ್ಪಡಿಸಿದ್ದ ಆರೋಗ್ಯ ಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಭಾರತ ದೇಶದಲ್ಲಿ ಬಡತನದ ವ್ಯವಸ್ಥೆ ಬೇರೆ ಬೇರೆ ಸ್ಥರದಲ್ಲಿದೆ. ಅತ್ಯಂತ ಬಡವರು, ಬಡವರು, ಕೆಳ ಮಧ್ಯಮ ವರ್ಗ, ಮಧ್ಯಮ ವರ್ಗ ಹೀಗಿದೆ. ಬಡತನ ಮತ್ತು ಆರೋಗ್ಯದ ನಡುವೆ ಸಂಬಂಧ ಇದೆ. ಇದನ್ನು ಕಾನೂನು ರೂಪಿಸುವವರು ಅರ್ಥ ಮಾಡಿಕೊಳ್ಳಬೇಕು. ಬಡತನ ಎಲ್ಲಿದೆ. ಅಲ್ಲಿ ಸ್ವಚ್ಛತೆ ಹಾಗೂ ಪೌಷ್ಟಿಕ ಆಹಾರದ ಸಮಸ್ಯೆ ಇರುತ್ತದೆ. ಹಲವಾರು ರೋಗಗಳ ಉಲ್ಬಣ, ಮಕ್ಕಳು ಚಿಕ್ಕವರಿದ್ದಾಗ ರೋಗಗಳಿಗೆ ತುತ್ತಾಗಿ ಮುಂದೆ ಅವರು ಸದೃಢ ಆರೋಗ್ಯವಂತ ನಾಗರಿಕರಾಗುವುದಿಲ್ಲ. ನಮ್ಮ ಗಮನ ಬಡವರ ಆರೋಗ್ಯದ ಕಡೆಗೆ…