Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನವನ್ನು ಇನ್ನೂ ₹1 ಸಾವಿರ ಹೆಚ್ಚಿಸಲಾಗುವುದು. ಈ ಮೊದಲು 2017ರಲ್ಲಿ ₹2 ಸಾವಿರ ಗೌರವಧನ ಏರಿಸಲಾಗಿತ್ತು. ಈ ಬಾರಿಯೂ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ₹1 ಸಾವಿರ ಹೆಚ್ಚಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ₹1 ಸಾವಿರ ಜಾಸ್ತಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. https://twitter.com/KarnatakaVarthe/status/1991145354797133858 ಪಂಚ ಗ್ಯಾರಂಟಿ ಯೋಜನೆ ಗಳನ್ನು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಾರಥ್ಯದ ನಮ್ಮ ಸರ್ಕಾರ ಗ್ಯಾರಂಟಿ ಸರ್ಕಾರ ಆಗಿದ್ದು, 2028ಕ್ಕೂ ನಮ್ಮದೆ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು. ನಮ್ಮ ಪಕ್ಷದ ಯೋಜನೆಗಳನ್ನು ಬಿಜೆಪಿ ಬೇರೆ ರಾಜ್ಯಗಳಲ್ಲಿ ನಕಲು ಮಾಡುತ್ತಿದೆ. ಮಹಾರಾಷ್ಟ್ರದಲ್ಲಿ ನಮ್ಮ ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಲಾಡ್ಲಿಬೆಹನ್ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಚುನಾವಣೆ ವೇಳೆ ತಿಂಗಳಿಗೆ 2,500 ರೂಪಾಯಿಯಂತೆ ಮೂರು ತಿಂಗಳ ಹಣ ಹಾಕಲಾಗಿತ್ತು. ಆದರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಯೋಜನೆಯನ್ನೆ ಪರಿಷ್ಕರಿಸಲಾಗಿದೆ. 2,500…
ಚಿಕ್ಕಮಗಳೂರು: ಕಾರ್ತಿಕ ಮಾಸಕ್ಕೂ ಮುನ್ನ ಶಬರಿ ಮಾಲೆ ಹಾಕೋದು ಹಲವರ ರೂಢಿಯಾಗಿದೆ. ಅದರಂತೆ ವಿದ್ಯಾರ್ಥಿಯೊಬ್ಬ ಶಬರಿ ಮಾಲೆ ಹಾಕಿ ಕಾಲೇಜಿಗೆ ತೆರಳಿದ್ದಕ್ಕೆ ಕಾಲೇಜಿನಿಂದ ಹೊರ ಹಾಕಿದಂತ ಘಟನೆ ಚಿಕ್ಕಮಗಳೂರಿನ ಎನ್ ಆರ್ ಪುರದ ಬಾಳೆಹೊನ್ನೂರಿನ ಕಡ್ಲೆಮಕ್ಕಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲ್ಲೂಕಿನ ಬಾಳೆಹೊನ್ನೂರಿನಲ್ಲಿರುವಂತ ಕಡ್ಲೆಮಕ್ಕಿ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಂತ ವಿದ್ಯಾರ್ಥಿಯೊಬ್ಬ ಶಬರಿ ಮಾಲೆ ಹಾಕಿ ಕಾಲೇಜಿಗೆ ತೆರಳಿದ್ದನು. ಈ ವೇಳೆ ಕಾಲೇಜು ಆಡಳಿತ ಮಂಡಳಿಯು ಮಾಲೆ ತೆಗೆದು ಒಳಗೆ ಬಾ. ಇಲ್ಲವೇ ಹೊರ ಹೋಗುವಂತೆ ತಿಳಿಸಿದ್ದಾರೆ. ಇದಷ್ಟೇ ಅಲ್ಲದೇ ಮಾಲೆ ಧರಿಸಿ ಬರುವುದರಿಂದ ಕಾಲೇಜಿನಲ್ಲಿ ಜಾತಿ ಬೇಧ ಮಾಡ್ತೀರ ಎಂಬುದಾಗಿಯೂ ತರಾಟೆಗೆ ತೆಗೆದುಕೊಳ್ಳಲಾಗಿದೆ. ಕಾಲೇಜಿಗೆ ಬರುವುದಾದರೇ ಮಾಲೆ ತೆಗೆದು ಬರುವಂತೆ ತಾಕೀತ ಮಾಡಲಾಗಿದೆ. ಆದರೇ ಮಾಲಾಧಾರಿ ವಿದ್ಯಾರ್ಥಿ ನಾನು ತೆಗೆಯುವುದಿಲ್ಲ ಎಂಬುದಾಗಿ ಹೇಳಿ, ವಾಗ್ವಾದಕ್ಕೆ ಇಳಿದಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಹೋದಂತ ಹಿರಿಯ…
ಬೆಂಗಳೂರು: ನಗರದಲ್ಲಿ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನಭಾರತಿ ಠಾಣೆಯ ಪೊಲೀಸರು ಆರೋಪಿ ವಿಘ್ನೇಶ್ ಎಂಬಾತನನ್ನು ಬಂಧಿಸಿದ್ದಾರೆ. ನವೆಂಬರ್.7ರಂದು ರಾತ್ರಿ 10.30ರ ವೇಳೆಗೆ ಸಾಕು ನಾಯಿ ಜೊತೆ ಮಹಿಳೆ ವಾಕಿಂಗ್ ತೆರಳಿದ್ದರು. ಈ ವೇಳೆ ನಾಯಿ ಮುದ್ದು ಮಾಡೋ ನೆಪದಲ್ಲಿ ಮಹಿಳೆಯ ಜೊತೆಗೆ ಅಸಭ್ಯವಾಗಿ ಆರೋಪಿ ವಿಘ್ನೇಶ್ ವರ್ತಿಸಿದ್ದಾನೆ. ಈ ವೇಳೆ ಗಾಬರಿಗೊಂಡು ಮೊಬೈಲ್ ಅನ್ನು ಮಹಿಳೆ ಕೆಳಗೆ ಬೀಳಿಸಿಕೊಂಡಿದ್ದಾರೆ. ಕೆಳಗೆ ಬಿದ್ದಂತ ಮಹಿಳೆಯ ಮೊಬೈಲ್ ಕೂಡ ಆರೋಪಿ ವಿಘ್ನೇಶ್ ಕದ್ದು ಪರಾರಿಯಾಗಿದ್ದನು. ಈ ಸಂಬಂಧ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಆರೋಪಿ ವಿಘ್ನೇಶ್ ಬಂಧಿಸಿ, ಮೊಬೈಲ್ ವಶಕ್ಕೆ ಪೊಲೀಸರು ಪಡೆದಿದ್ದಾರೆ. https://kannadanewsnow.com/kannada/cm-siddaramaiah-releases-rs-94000-for-senior-journalist-nadigs-treatment-kuwj-president-tagadur-thanks-him/ https://kannadanewsnow.com/kannada/breaking-no-cabinet-reshuffle-in-the-state-for-now-cm-siddaramaiah-clarifies/
ಹಿರಿಯ ಪತ್ರಕರ್ತ ನಾಡಿಗ್ ಚಿಕಿತ್ಸೆಗೆ 94,000 ಬಿಡುಗಡೆ ಮಾಡಿದ ಸಿಎಂ ಸಿದ್ಧರಾಮಯ್ಯ: KUWJ ಅಧ್ಯಕ್ಷ ತಗಡೂರು ಧನ್ಯವಾದ
ಬೆಂಗಳೂರು: ಸಂಯುಕ್ತ ಕರ್ನಾಟಕ, ಕನ್ನಡಪ್ರಭ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದ 93 ವಸಂತ ತುಂಬಿದ ಹಿರಿಯ ಪತ್ರಕರ್ತರಾದ ಸತ್ಯನಾರಾಯಣ ನಾಡಿಗ್ ಅವರ ಆಸ್ಪತ್ರೆ ಚಿಕಿತ್ಸೆ ಭಾಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 94 ಸಾವಿರ ರೂ ಪರಿಹಾರ ಬಿಡುಗಡೆ ಮಾಡಿದ್ದಾರೆ. ಸತ್ಯನಾರಾಯಣ ನಾಡಿಗ್ ಅವರು ಕ್ಯಾನ್ಸರ್ ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸರ್ಕಾರದ ಗಮನಕ್ಕೆ ತಂದಿದ್ದು ಚಿಕಿತ್ಸೆಗೆ ನೆರವು ಕೋರಿದ್ದರು. ಕೆಯುಡಬ್ಲ್ಯೂಜೆ ಮನವಿ ಮೇರೆಗೆ ಪರಿಹಾರ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯಅವರಿಗೆ, ಈ ನಿಟ್ಟಿನಲ್ಲಿ ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಧನ್ಯವಾದ ಸಲ್ಲಿಸಿದೆ. https://kannadanewsnow.com/kannada/alert-using-these-passwords-could-lead-to-your-data-leak-be-careful/ https://kannadanewsnow.com/kannada/breaking-no-cabinet-reshuffle-in-the-state-for-now-cm-siddaramaiah-clarifies/
ಮೈಸೂರು: ಸಾಂಸ್ಕೃತಿಕ ನಗರಿ ಎಂದೆನಿಸಿಕೊಂಡಿರುವ ಮೈಸೂರನಲ್ಲಿ ಕಳೆದ ಇಪ್ಪತ್ತೊಂಭತ್ತು ವರ್ಷಗಳಿಂದ ಒಡಿಸ್ಸಿ ನೃತ್ಯ ಕಲೆಯನ್ನು ಪರಿಚಯಿಸುತ್ತಾ, ನೃತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ರುದ್ರ ನೃತ್ಯಯೋಗ ಶಾಲೆಯ ನೃತ್ಯಗುರು ಸಿಂಧು ಕಿರಣ್ರವರು, ಈಗ ನಾಲ್ಕನೇ ಆವೃತ್ತಿಯ ಮೈಸೂರು ಒಡಿಸ್ಸಿ ಉತ್ಸವವನ್ನು ಸಂಘಟಿಸಿದ್ದಾರೆ ಎಂದು ಗುರು ಸಿಂಧು ಕಿರಣ್ರವರ ಶಿಷ್ಯೆ-ನೃತ್ಯ ಕಲಾವಿದೆ ಪೃಥೆ ಹವಾಲ್ದಾರ್ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನ.23, 2025 ರಂದು ಮೈಸೂರು ವಿಜಯ ನಗರದಲ್ಲಿನ ಪ್ರತಿಷ್ಟಿತ ಜಗನ್ನಾಥ್ ಸೆಂಟರ್ -ಫಾರ್ ಆರ್ಟ್ ಅಂಡ್ ಕಲ್ಚರ್ (ಜೆಸಿಎಸಿ), ವೇದಿಕೆಯಲ್ಲಿ ಸಂಜೆ 05.30ಕ್ಕೆ ಈ ಮೈಸೂರು ಒಡಿಸ್ಸಿ ಉತ್ಸವವನ್ನು ಆಯೋಜಿಸಲಾಗಿದ್ದು, ಈ ಉತ್ಸವದಲ್ಲಿ ನಾಡಿನ ಹೆಸರಾಂತ ಒಡಿಸ್ಸಿ ನೃತ್ಯ ಕಲಾವಿದರು ಪಾಲ್ಗೊಳ್ಳುತ್ತಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ, ಮೈಸೂರಿನ ಶ್ರೀ ಕೃಷ್ಣ ಗಾನ ಸಭಾದ ಅಧ್ಯಕ್ಷರಾದ ಶ್ರೀಧರ ರಾಜ್ ಅರಸ್, ಮೈಸೂರಿನ ಪುರಿ ಜಗನ್ನಾಥ ಸಾಂಸ್ಕೃತಿಕ ಮತ್ತು ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಘನಶ್ಯಾಮ್, ಮೈಸೂರು ಯೋಗ ಒಕ್ಕೂಟದ ಕಾರ್ಯಾಧ್ಯಕ್ಷ ಡಾ. ಬಿ. ಪಿ.…
ಬೆಂಗಳೂರು: ನಗರದಲ್ಲಿ ಲಾಲ್ ಬಾಗ್ ಫಲ ಪುಷ್ಪದ ಮಾದರಿಯಲ್ಲೇ ಕಬ್ಬನ್ ಪಾರ್ಕ್ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಇಲಾಖೆ ಸಿದ್ಧವಾಗಿದೆ. ನವೆಂಬರ್.27ರಿಂದ ಡಿಸೆಂಬರ್.7ರವರೆಗೆ ಕಬ್ಬನ್ ಪಾರ್ಕ್ ಪುಷ್ಪ ಪ್ರದರ್ಶವನ್ನು ಆಯೋಜಿಸಲಾಗಿದೆ. ಈ ಕುರಿತಂತೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿ ಮಾಹಿತಿ ಹಂಚಿಕೊಂಡಂತ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಾ.ಎಂ. ಜಗದೀಶ್ ಅವರು, ಕಬ್ಬನ್ ಪಾರ್ಕ್ ನಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಬೆಳಗ್ಗೆ 9ರಿಂದ ಸಂಜೆ 8 ಗಂಟೆಯವರೆಗೆ ವೀಕ್ಷಣೆಗೆ ಲಭ್ಯವಿರಲಿದೆ ಎಂದರು. ಮಕ್ಕಳ ದಿನಾಚರಣೆಯ ಸಲುವಾಗಿ ಮಕ್ಕಳ ಹಬ್ಬದ ರೀತಿಯಲ್ಲಿ ಕಬ್ಬನ್ ಪಾರ್ಕ್ ನಲ್ಲಿ ಪುಷ್ಪ ಪ್ರದರ್ಶನ ನಡೆಯಲಿದೆ. ಪ್ರತಿ ದಿನವೂ ಸಾಂಸ್ಕೃತಿಕ ಕಾರ್ಯಕ್ರಮವಿರುತ್ತದೆ. ಹಾಡು, ಸಂಗೀತಗಳನ್ನು ಆಯೋಜಿಸಲಾಗಿದೆ. ಮಕ್ಕಳನ್ನು ಆಕರ್ಷಿಸಲು ಎಲ್ಲಾ ವ್ಯವಸ್ಥೆ ಮಾಡಲಾಗಿದೆ. 100 ಮಳಿಗೆಗಳು ಕಬ್ಬನ್ ಪಾರ್ಕ್ ಪುಷ್ಪ ಪ್ರದರ್ಶನದಲ್ಲಿ ಇರಲಿವೆ. ಬೀಜ, ಸಸಿಗಳು ದೊರೆಯಲಿವೆ ಎಂದು ಹೇಳಿದರು. ವಿವಿಧ ಬಗೆಯ ಹೂವುಗಳಿಂದ ಹಂಪಿ ರಥ ನಿರ್ಮಿಸಲಾಗುತ್ತಿದೆ. ಪುಷ್ಪ…
ಶಿವಮೊಗ್ಗ: ಜಿಲ್ಲೆಯ ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು, ನವೆಂಬರ್.24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈ ಕುರಿತಂತೆ ಚುನಾವಣಾಧಿಕಾರಿ ನಾಗಭೂಷಣ ಚಂದ್ರಶೇಖರ ಕಲ್ಮನೆ ಅವರು ಚುನಾವಣಾ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಮುಂದಿನ ಮೂರು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಸಾಮಾನ್ಯ ಚುನಾವಣೆಯನ್ನು ಈ ಕೆಳಕಂಡಂತೆ ನಿಗದಿ ಪಡಿಸಿರುವುದಾಗಿ ತಿಳಿಸಿದ್ದಾರೆ. ಹೀಗಿದೆ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣಾ ವೇಳಾಪಟ್ಟಿ ದಿನಾಂಕ 19-11-2025ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಉಮೇದುವಾರಿಕೆ ಹಿಂಪಡೆಯಲು ದಿನಾಂಕ 24-11-2025 ಕೊನೆಯ ದಿನವಾಗಿದೆ. ದಿನಾಂಕ 25-11-2025ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ದಿನಾಂಕ 26-11-2025ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ದಿನಾಂಕ 26-11-2025ರಂದು ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಟ ದಿನಾಂಕ 26-11-2025ರಂದು ಸಂಜೆ 4 ಗಂಟೆಗೆ ಕ್ರಮಬದ್ಧ ಸ್ಪರ್ಧೆಯಲ್ಲಿರುವ ಅಭ್ಯರ್ಥಿಗಳ ಪಟ್ಟಿ ಪ್ರಕಟ ದಿನಾಂಕ…
ಮೂತ್ರಪಿಂಡಗಳು ನಮ್ಮ ದೇಹದ ಮೂಕ ಬಹುಕಾರ್ಯಕಗಳಾಗಿವೆ. ಅವು ಪ್ರಮುಖವಾದ, ತೆರೆಮರೆಯ ಕೆಲಸವನ್ನು ನಿರ್ವಹಿಸುತ್ತವೆ: ತ್ಯಾಜ್ಯವನ್ನು ಶೋಧಿಸುವುದು, ದ್ರವಗಳು ಮತ್ತು ಲವಣಗಳನ್ನು ಸಮತೋಲನಗೊಳಿಸುವುದು, ಹಾರ್ಮೋನುಗಳನ್ನು ಉತ್ಪಾದಿಸುವುದು ಮತ್ತು ನಮ್ಮ ದೇಹದ ರಸಾಯನಶಾಸ್ತ್ರವನ್ನು ಸಾಮರಸ್ಯದಲ್ಲಿಡುವುದು. ಆದರೂ ಅವು ಸದ್ದಿಲ್ಲದೆ ಶ್ರಮಿಸುವುದರಿಂದ, ಮೂತ್ರಪಿಂಡದ ಹಾನಿ ಸಾಮಾನ್ಯವಾಗಿ ಸ್ಪಷ್ಟ ಎಚ್ಚರಿಕೆ ಚಿಹ್ನೆಗಳಿಲ್ಲದೆ ಮುಂದುವರಿಯುತ್ತದೆ. ಸ್ಪಷ್ಟ ಲಕ್ಷಣಗಳು ಕಾಣಿಸಿಕೊಳ್ಳುವ ಹೊತ್ತಿಗೆ, ಗಣನೀಯ ಗಾಯವು ಈಗಾಗಲೇ ಸಂಭವಿಸಿರಬಹುದು. ‘ಮೂಕ ಕೊಲೆಗಾರ’ ಮೂತ್ರಪಿಂಡ ಕಾಯಿಲೆಯು ಜಾಗತಿಕವಾಗಿ ರೋಗನಿರ್ಣಯ ಮಾಡದ ಆರೋಗ್ಯ ಸ್ಥಿತಿಗಳಲ್ಲಿ ಒಂದಾಗಿದೆ, ಇದು ಅಪರೂಪ ಎಂಬ ಕಾರಣಕ್ಕಾಗಿ ಅಲ್ಲ, ಆದರೆ ಅದು ಸರಳ ದೃಷ್ಟಿಯಲ್ಲಿ ಮರೆಯಾಗಿರುವುದರಿಂದ. ವಾಸ್ತವವಾಗಿ, ಮೂತ್ರಪಿಂಡ ಕಾಯಿಲೆಯು ಜಾಗತಿಕವಾಗಿ 850 ಮಿಲಿಯನ್ಗಿಂತಲೂ ಹೆಚ್ಚು ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಇಂಟರ್ನ್ಯಾಷನಲ್ ಸೊಸೈಟಿ ಆಫ್ ನೆಫ್ರಾಲಜಿ ತಿಳಿಸಿದೆ. ಇದರಲ್ಲಿ ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (CKD) ಮತ್ತು ತೀವ್ರವಾದ ಮೂತ್ರಪಿಂಡದ ಗಾಯ (AKI) ಎರಡೂ ಸೇರಿವೆ. ರೋಗವು ಬಂದಾಗ, ಗಮನಾರ್ಹ ಲಕ್ಷಣಗಳನ್ನು ಅನುಭವಿಸುವ ಮೊದಲು ಒಬ್ಬರು ಮೂತ್ರಪಿಂಡದ ಕಾರ್ಯವನ್ನು…
BIG NEWS: ಇನ್ಮುಂದೆ ನಾಯಿ ಕಡಿತಕ್ಕೆ ಒಳಗಾದವರಿಗೆ ಆರ್ಥಿಕ ನೆರವು, ಮೃತಪಟ್ಟರೇ 5 ಲಕ್ಷ ಪರಿಹಾರ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದಲ್ಲಿ ನಾಯಿ ಕಡಿತಕ್ಕೆ ಒಳಗಾದವರಿಗೆ ಆರ್ಥಿಕ ನೆರವನ್ನು ನೀಡಲು ಸರ್ಕಾರ ನಿರ್ಧರಿಸಲಾಗಿದೆ. ಅಲ್ಲದೇ ಮೃತ ಪಟ್ಟವರಿಗೆ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ತಿದ್ದುಪಡಿ ಆದೇಶ ಹೊರಡಿಸಲಾಗಿದ್ದು, ನಾಯಿ ಕಡಿತಕ್ಕೆ ಒಳಗಾದಂತ ಸಂದರ್ಭದಲ್ಲಿ ಕೂಡಲೇ ಚಿಕಿತ್ಸೆ ನೀಡುವಂತೆ ಎಲ್ಲಾ ಆಸ್ಪತ್ರೆಗಳಿಗೆ ತಿಳಿಸಲಾಗಿದೆ. ಜೊತೆಗೆ ನಾಯಿ ಕಡಿತಕ್ಕೆ ಒಳಗಾದಂತ ಸಂತ್ರಸ್ತರಿಗೆ 3,500 ಆರ್ಥಿಕ ನೆರವು ಹಾಗೂ 1,500 ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗೆ ಸಂದಾಯಿಸೋದಕ್ಕೆ ಆದೇಶಿಸಿದೆ. ಇನ್ನೂ ರಾಜ್ಯದಲ್ಲಿ ನಾಯಿ ಕಡಿತಕ್ಕೆ ಒಳಗಾಗಿ ಮೃತಪಟ್ಟರೇ, ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ನೀಡುವುದಾಗಿಯೂ ಆದೇಶದಲ್ಲಿ ತಿಳಿಸಲಾಗಿದೆ. ನಾಯಿ ಕಡಿತಕ್ಕೆ ಒಳಗಾಗುವ ನಾಗರೀಕರು ಸಂಬಂಧಿಸಿದಂತೆ ಪರಿಶೀಲನಾ ಮತ್ತು ಪರಿಹಾರಧನ ವಿತರಿಸುವ ಸಮಿತಿಯನ್ನು ರಚಿಸುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ. https://kannadanewsnow.com/kannada/15-wildlife-doctors-to-be-appointed-soon-minister-ishwar-khandre/ https://kannadanewsnow.com/kannada/alert-those-who-use-unwashed-pillows-beware-they-contain-more-dangerous-bacteria-than-toilet-seats/
ಬೆಂಗಳೂರು: ರಾಜ್ಯದಲ್ಲಿ ಹಾವು ಕಡಿತಕ್ಕೆ ಒಳಗಾದಂತವರಿಗೆ ಆಯುಷ್ಮಾನ್ ಆರೋಗ್ಯ ಯೋಜನೆಯ ಅಡಿಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರಿ ಆಸ್ಪತ್ರೆ ಹೊರತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತ ಕಡಿತಕ್ಕೆ ಒಳಗಾದವರಿಗೆ ಆಯುಷ್ಮಾನ್ ಆರೋಗ್ಯ ಯೋಜನೆಯ ಅಡಿಯಲ್ಲಿ ಚಿಕಿತ್ಸೆ ನೀಡಲು ಸರ್ಕಾರವು ದರ ನಿಗದಿ ಪಡಿಸಿ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಹಾವು ಕಡಿತಕ್ಕೆ ಒಳಗಾದಂತ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಅಸ್ತಿತ್ವದಲ್ಲಿರುವ ಆರೋಗ್ಯ ಯೋಜನೆ “ಆರೋಗ್ಯ ಕರ್ನಾಟಕ” ಮತ್ತು ಭಾರತ ಸರ್ಕಾರದ ಆರೋಗ್ಯ ಯೋಜನೆ “ಆಯುಷ್ಮಾನ್ ಭಾರತ್” ಅನ್ನು ಸಂಯೋಜಿಸುವ ಮೂಲಕ ಕರ್ನಾಟಕದ ಎಲ್ಲಾ ನಿವಾಸಿಗಳಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಒದಗಿಸಲು ಅನುಮೋದನೆಯನ್ನು ನೀಡುತ್ತದೆ ಎಂದಿದೆ. ಹಾವು ಕಡಿತ ವಿಷವು ಮಾರಣಾಂತಿಕ ವೈದ್ಯಕೀಯ ತುರ್ತುಸ್ಥಿತಿಯಾಗಿದ್ದು, ತಕ್ಷಣ ಚಿಕಿತ್ಸೆ ನೀಡದಿದ್ದರೆ ಸಾವು ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ಕಾರಣವಾಗಬಹುದು. ಹಾವಿನ ವಿರೋಧಿ ವಿಷ (ASV), ಆರಂಭಿಕ ಸ್ಥಿರೀಕರಣ, ಚಿಕಿತ್ಸೆ ಮತ್ತು ಆರಂಭಿಕ ಉಲ್ಲೇಖಕ್ಕೆ ಸಕಾಲಿಕ ಪ್ರವೇಶದೊಂದಿಗೆ ಹೆಚ್ಚಿನ…














